ವಿಷಯದ ವಿವರಗಳಿಗೆ ದಾಟಿರಿ

Posts tagged ‘ಕರ್ನಾಟಕ ದರ್ಶನ’

29
ನವೆಂ

ತೀರಾ ತುಘಲಕ್ ದರ್ಬಾರ್ ಬೇಡ್ರೀ ಸಿಧ್ಧರಾಮಣ್ಣ…

 – ಕೆ.ಎಸ್ ರಾಘವೇಂದ್ರ ನಾವಡ

Sidduತೀರಾ ಬೇಸರಗೊ೦ಡು ರಾಜ್ಯದ ಮುಖ್ಯ ಮ೦ತ್ರಿಗಳಿಗೆ ಈ ಮಾತನ್ನು ಹೇಳಿತಿದ್ದೇನೆ ! ಸಮಾಜವಾದಿ ಹಿನ್ನೆಲೆ.. ಹೋರಾಟದ ಹಿನ್ನೆಲೆ..  ಎಲ್ಲದ್ದಕ್ಕಿ೦ತಲೂ ಕರ್ನಾಟಕದ ಗ್ರಾಮೀಣ ಸೊಗಡಿನಿ೦ದ ಮೇಲೆದ್ದು ಬ೦ದವರು ಸಿಧ್ಧರಾಮಯ್ಯ. ಆದರೆ ಹಿ೦ದಿನ ಸಮಾಜವಾದಿ ಹಿನ್ನೆಲೆಗಳಿ೦ದ ಬ೦ದ ಮುಖ್ಯಮ೦ತ್ರಿಗಳಿಗೂ (ಮಾನ್ಯ ಹೆಗಡೇಜಿ, ಬ೦ಗಾರಪ್ಪನವರು, ಜೆ.ಹೆಚ್ ಪಟೇಲರು)ನಮ್ಮ ಸಿಧ್ಧರಾಮಯ್ಯನವರಿಗೂ ಅಜಗಜಾ೦ತರ ವ್ಯತ್ಯಾಸ…ಇವರು ಇದೇ ಥರ ಮು೦ದುವರಿದಲ್ಲಿ ಮು೦ಬರುವ ಲೋಕಸಭಾ ಚುನಾವಣೆಯಲ್ಲಿ ಕಾ೦ಗ್ರೆಸ್ ಕರ್ನಾಟಕದಲ್ಲಿ ನೆಲಕಚ್ಚುವುದ೦ತೂ ಖಚಿತ!

ಪಾಪ.. ಏನೂ ಮಾಡೋದಕ್ಕಾಗೋದಿಲ್ಲ.. ನಮಗೆ ಸಿಧ್ಧರಾಮಯ್ಯನವರ ಅಸಹಾಯಕತೆಯ ಅರಿವು ಇದೆ.ಆದರೆ ಕೈಯಲ್ಲಿ ಆಗದಿದ್ದವರ ಪರಿಸ್ಥಿತಿ ಏನೂ ಸಿಧ್ಧರಾಮಯ್ಯನವರದಲ್ಲ! ಹಾಗ೦ತ ತೀರಾ ಸಾರಾಸಗಟಾಗಿ ತಳ್ಳಿ ಹಾಕುವ೦ತಹ ವ್ಯಕ್ತಿತ್ವವೂ ಸಿಧ್ಧರಾಮಯ್ಯನವರದಲ್ಲ.ಆದರೆ ಒ೦ದ೦ತೂ ಖಚಿತ! ಏನೋ ಆಗಿದೆ… ಒ೦ದರ ಮೇಲೊ೦ದು ಎಡವಟ್ಟುಗಳನ್ನೇ ಸೃಷ್ಟಿಸಿಕೊಳ್ಳುತ್ತಿರುವ ಸಿಧ್ಧರಾಮಯ್ಯನವರು ಕೊನೇ ಪಕ್ಷ ತಮ್ಮ ನಿರ್ಧಾರಗಳಿಗೆ ಜೋತು ಬೀಳುವ೦ತಹ ಯಡಿಯೂರಪ್ಪನವರ ಛಾತಿಯನ್ನೂ ತೋರಿಸುತ್ತಿಲ್ಲ!

ಆರ೦ಭದಲ್ಲೇನೋ ಶೂರತನ ಮೆರೆದ ಅಶ್ವವೀರ.. ಕುದುರೆಗೆ ಸುಸ್ತಾದ೦ತೆ ತಾನೂ ನಡೆಯುತ್ತ ಸಾಗಿದ.. ಎನ್ನುವ ಹಳೇ ಮಾತೀಗ ಸಿಧ್ಧರಾಮಯ್ಯನವರ ವಿಚಾರದಲ್ಲಿ ಖಚಿತವಾಗುತ್ತಿದೆ! ಚುನಾವಣಾ ಪ್ರಣಾಳಿಕೆಯ ಅರ್ಧದಷ್ಟು ಅ೦ಶಗಳನ್ನು ಅನುಷ್ಠಾನಕ್ಕೆ ತರುವುದು ಹೆಚ್ಚುಗಾರಿಕೆಯೇ ಆದರೂ ಕೊಟ್ಟ ಮಾತುಗಳಾದರೂ ಎ೦ಥಾದ್ದಾಗಿದ್ದವು ಎನ್ನುವುದು ಬಹಳ ಮುಖ್ಯ!

ಮತ್ತಷ್ಟು ಓದು »