ಇತಿಹಾಸದ ಅಚ್ಚರಿಗಳಲ್ಲಿ ಒಂದು ಇಣುಕು: ‘ಕರ್ನಾಟಕದ ಅಂದಿನ ಶ್ರೇಷ್ಟರ ಇಂದಿನ ವಂಶಸ್ಥರು ಮತ್ತು ಕುರುಹುಗಳು’
– ರಾಘವೇಂದ್ರ ಅಡಿಗ ಹೆಚ್.ಎನ್
ಕಳೆದ ವಾರ ಕನ್ನಡದ ಒಂದು ಅಪೂರ್ವ ಮತ್ತು ನೂತನ ಸ್ವರೂಪದ ಕೃತಿಯೊಂದರ ಬಿಡುಗಡೆ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನೆರವೇರಿತು.( ಆ ಸಂದರ್ಭದಲ್ಲಿ ನಾನೂ ಸಹ ಅಲ್ಲಿ ಇದ್ದೆ ಎನ್ನುವ ವಿಚಾರವೇ ನನಗೊಂದು ಖುಷಿಯ ಸಂಗತಿ.) ಕನ್ನಡ ಸಾಹಿತ್ಯ ಹಾಗೂ ಸಾಂಸ್ಕೃತಿಕ ಲೋಕದ ಅಗ್ರರಲ್ಲಿ ಒಬ್ಬರಾದ ಡಾ. ಎಮ್. ಚಿದಾನಂದಮೂರ್ತಿಯವರ ‘ಕರ್ನಾಟದ ಅಂದಿನ ಶ್ರೇಷ್ಟರ ಇಂದಿನ ವಂಶಸ್ಥರು ಮತ್ತು ಕುರುಗಳು’ ಎನ್ನುವ ಹೆಸರಿನ ಕೃತಿಯು ಗಾತ್ರದಲ್ಲಿ ಚಿಕ್ಕದಾಗಿದ್ದರೂ ಅದರಲ್ಲಿರುವ ವಿಷಯದ ದೃಷ್ಟಿಯಿಂದ ತೀರಾ ವಿನೂತನವಾದುದ ಅಷ್ಟೇ ಅಲ್ಲ ಬಹು ಮೌಲ್ಯಯುತವಾದುದು ಕೂಡ. ಲೇಖಕರೇ ಹೇಳುವಂತೆ ‘ಇಂತಹಾ ಒಂದು ಪುಸ್ತಕ ಕನ್ನಡದಲ್ಲಿ ಬರುತ್ತಿರುವುದು ಇದೇ ಮೊದಲು,ಇತರೆ ಭಾರತೀಯ ಭಾಷೇಗಳಲ್ಲಿಯೂ ಬಂದಂತಿಲ್ಲ’. ಈ ಒಂದು ಪುಸ್ತಕದಿಂದ ನಾವು-ನೀವು ಓದಿರುವ ಕನ್ನಡದ ಪ್ರಾಚೀನ ಕವಿಗಳು, ನಮ್ಮನ್ನಾಳಿದ ರಾಜ ಮಹಾರಾಜರ ವಂಶಸ್ಥರ ಕುರಿತಾಗಿ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳಬಹುದು.
ಕನ್ನಡದ ಶ್ರೇಷ್ಠ ಸಂಶೋಧಕರೂ, ಚಿಂತಕರೂ, ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ ಪುರಸ್ಕೃತರೂ ಆಗಿರುವ ಡಾ. ಎಮ್. ಚಿದಾನಂದಮೂರ್ತಿಗಳ ಈ ಕಿರುಹೊತ್ತಿಗೆ ಅವರ ಹಲವು ವರ್ಷಗಳ ಪರಿಶ್ರಮದ ಫಲ. ಶತ ಶತಮಾನಗಳ ಹಿಂದೆ ಆಳಿಹೋದ ರಾಜವಂಶಸ್ಥರ, ನೂರಾರು-ಸಾವಿರಾರು ವರ್ಷಗಳ ಹಿಂದೆ ಬದುಕಿ ಕಾವ್ಯಗಳನ್ನು ರಚಿಸಿದ ಪ್ರಾಚೀನ ಕವಿಮಹೋದಯರ ಈಗಿನ ವಂಶಸ್ಥರು ಯಾರೆನ್ನುವುದನ್ನು ಪತ್ತೆ ಮಾಡಿ ಅವರನ್ನು ಸಂದರ್ಶಿಸಿ, ಅವರ ಬಳಿ ಇದ್ದ ಅಂದಿನ ಕಾಲದ ಕುರುಹುಗಳನ್ನು ನೋಡಿ ಅದರ ಬಗ್ಗೆ ಲೇಖನ ಅಥವಾ ಪುಸ್ತಕ ಬರೆಯುವುದು ಅಷ್ಟೇನೂ ಸುಲಭವಲ್ಲ. ಉದಾಹರಣೆಗೆ ಕನ್ನಡದ ಆದಿಕವಿ ಪಂಪನನ್ನು ತೆಗೆದುಕೊಂಡರೆ ಅವನ ಕಾಲ ಕ್ರಿ.ಶ.೯೦೨. ಅವನು ‘ವಿಕ್ರಮಾರ್ಜುನ ವಿಜಯ’ ಕಾವ್ಯವನ್ನು ಪೂರ್ಣಗೊಳಿಸಿದ್ದು ಕ್ರಿ.ಶ.೯೪೨ ರಲ್ಲಿ. ಅಂದರೆ ಇಂದಿಗೆ ಸುಮಾರು ಸಾವಿರದ ನೂರು ವರ್ಷಗಳಾದವು. ಹೀಗೆ ಸಾವಿರ ವರ್ಷಗಳ ಹಿಂದೆ ಬದುಕಿದ್ದ ಪಂಪನ ತಂದೆ ಹಾಗೂ ತಾಯಿಯ ವಂಶಸ್ಥರ ವಿವರಗಳಾನ್ನು ಪತ್ತೆ ಮಾಡುವುದು ಮತ್ತು ಅವರನ್ನು ಸ್ವತಃ ಸಂದರ್ಶಿಸಿ ಮತ್ತಷ್ಟು ಮಾಹಿತಿಯನ್ನು ಕಲೆಹಾಕಿ ಪುಸ್ತಕ ಪ್ರಕಟಿಸುವುದು ಬಲು ಅಪರೂಪದ ಸಂಗತಿ. ಹೀಗಾಗೆ ಇಂತಹಾ ಪುಸ್ತಕವು ಕನ್ನಡದಲ್ಲಿ ತೀರಾ ನೂತನವಾಗಿರುವುದು ಸಾಧ್ಯ.
CSLC ಯ ಸಂಶೋಧನೆ ಮತ್ತು ಪ್ರಗತಿಪರರ ಫ್ಯಾಸಿಸ್ಟ್ ಧೋರಣೆ
ಅಲ್ಲಿಯವರೆಗೂ ಸುಖಾ ಸುಮ್ಮನೆ ಭೂಮಿಯ ಸುತ್ತ ಗಿರಕಿ ಹೊಡೆಯುತಿದ್ದ ಸೂರ್ಯನಿಗೆ ಸುತ್ತುವುದರಿಂದ ಮುಕ್ತಿ ಕೊಡಿಸಿ,’ಭೂಮಿಯೇ ಸೂರ್ಯನ ಸುತ್ತ ಸುತ್ತುತ್ತಿದೆ’ ಅಂದವನು ಕೋಪರ್ನಿಕಸ್. ಅವನ ಕೆಲಸವನ್ನ ಮುಂದುವರಿಸಿದವರು ಗೆಲಿಲಿಯೋ ಮತ್ತು ಬ್ರುನೋ.ಈ ಮೂವರು ಬರುವವರೆಗೂ ಸೂರ್ಯನೇ ಭೂಮಿಯ ಸುತ್ತ ಸುತ್ತುತ್ತಾನೆ ಅಂತಲೇ ಜನರು ನಂಬಿದ್ದರು.ಅದೇ ಜನರ ಮಧ್ಯದಿಂದ ಎದ್ದು ಬಂದು,’ಇಲ್ಲ ಸ್ವಾಮಿ ಭೂಮಿಯೇ ಸುತ್ತೋದು’ ಅಂದಿದ್ದ ಕೋಪರ್ನಿಕಸ್ ಅದೇ ಜನರಿಂದ ಹುಚ್ಚ ಅನ್ನಿಸಿಕೊಂಡಿದ್ದ.ಅವನ ನಂತರ ಬಂದ ಗೆಲಿಲಿಯೋ ಮತ್ತು ಬ್ರುನೋ ಸಹ ಕೋಪರ್ನಿಕಸ್ ವಾದಕ್ಕೆ ಸೈ ಅಂದರು.
ಸಮಾಜದ ನಂಬಿಕೆಯ ಬುಡವನ್ನು ಅಲುಗಾಡಿಸುವ ಯಾವುದೇ ಪ್ರಯತ್ನಕ್ಕೆ ದೊಡ್ಡ ಮಟ್ಟದಲ್ಲೇ ಅಡೆ-ತಡೆಗಳು ಎದುರಾಗಬೇಕಲ್ಲವೇ? ಗೆಲಿಲಿಯೋ,ಬ್ರೂನೋಗು ಅದೇ ಆಯಿತು. ಇವರ ಸಂಶೋಧನೆಯಿಂದ ಕನಲಿ ಕೆಂಡವಾದ ಪೋಪ್ ಎಂಟನೇ ಅರ್ಬನ್,“Heliocentric System” ಅನ್ನುವುದೇ ಸುಳ್ಳು ಎಂದು ಸಾರ್ವಜನಿಕವಾಗಿ ಗೆಲಿಲಿಯೋ ಮತ್ತು ಬ್ರೂನೋನನ್ನು ಖಂಡಿಸಿ, ಅವರಿಬ್ಬರ ಸಂಶೋಧನೆಗೂ ನಿರ್ಬಂಧವನ್ನೂ ಹೇರಿದರು.
ಗೆಲಿಲಿಯೋನನ್ನು ಜೈಲಿಗೂ ತಳ್ಳಲಾಯಿತು, ಸಾಯುವವರೆಗೂ ಗೃಹ ಬಂಧನದಲ್ಲಿರಿಸಲಾಯಿತು.1642ರಲ್ಲಿ ಗೆಲಿಲಿಯೋ ಮರಣವನ್ನಪ್ಪಿದಾಗ ಆತನನ್ನು ಕ್ರೈಸ್ತರ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ಮಾಡುವುದಕ್ಕೂ ಬಿಡಲಿಲ್ಲ.ಇನ್ನು ಬಾಹ್ಯಾಕಾಶವೆಂಬುದು Finite ಅಲ್ಲ, Infinite. ಅದಕ್ಕೆ ಕೊನೆಯೇ ಇಲ್ಲ ಎಂದು ವಾದಿಸುವ ಧೈರ್ಯ ತೋರಿದ ಬ್ರೂನೋನನ್ನಂತೂ,೧೫೯೨ರಲ್ಲಿ ಬಂಧಿಸಿ ರೋಮನ್ ಕ್ಯಾಥೋಲಿಕ್ ಚರ್ಚ್ನ ನ್ಯಾಯಾಲಯದ(The Inquisition) ಮುಂದೆ 7 ವರ್ಷಗಳ ಕಾಲ ವಿಚಾರಣೆ ಗೊಳಪಡಿಸಿ, ಕೊನೆಗೆ ಉರಿವ ಜ್ವಾಲೆಯಲ್ಲಿ ಸುಡುವ ಮರಣದಂಡನೆಯನ್ನು ವಿಧಿಸಿದರು.
ಕನ್ನಡ/ಇಂಗ್ಲೀಷ್ ಮಾಧ್ಯಮದ ಜೊತೆಗೆ ಏಕರೂಪ ಶಿಕ್ಷಣದ ಬಗ್ಗೆಯೂ ಚರ್ಚೆ ಆಗಬೇಕಲ್ಲವೇ?
– ರಾಕೇಶ್ ಶೆಟ್ಟಿ
ಕಡೆಗೂ ‘ಸರ್ಕಾರ ಏಕರೂಪ ಶಿಕ್ಷಣ ನೀತಿ ಜಾರಿಗೆ ತರುವ ನಿಟ್ಟಿನಲ್ಲಿ ಚಿಂತಿಸಬೇಕು’ ಅನ್ನುವ ಮಾತುಗಳನ್ನು ಕಸಪಾ ಅಧ್ಯಕ್ಷ ಪುಂಡಲೀಕ ಹಾಲಂಬಿ ಹೇಳಿದ್ದಾರೆ.ಕಳೆದ ಹಲವು ದಿನಗಳಿಂದ ಇಂಗ್ಲೀಷ್ ಮಾಧ್ಯಮದ ಸುತ್ತ ನಡೆಯುತ್ತಲಿರುವ ಚರ್ಚೆಯಲ್ಲಿ ನಾನು ನಿರೀಕ್ಷಿಸುತಿದ್ದ ಮಾತು “ಏಕರೂಪ ಶಿಕ್ಷಣ”ದ ಬಗ್ಗೆ.ಪೇಟೆಯ/ಉಳ್ಳವರ ಮಕ್ಕಳಿಗೊಂದು ಶಿಕ್ಷಣ,ಹಳ್ಳಿಯ/ಬಡವರ ಮಕ್ಕಳಿಗೊಂದು ಶಿಕ್ಷಣ ಕೊಟ್ಟು ಕಡೆಗೆ ಸಮಾನತೆ,ಸಾಮಾಜಿಕ ನ್ಯಾಯ,ಭಾಷೆ,ನಾಡು-ನುಡಿಯ ಅಳಿವು ಉಳಿವು ಅಂತ ಮಾತನಾಡುವುದೆಷ್ಟು ಸರಿ?
೧೦ನೆ ತರಗತಿಯವರೆಗೆ ಕನ್ನಡ ಮಾಧ್ಯಮದಲ್ಲೇ ಓದಿದ ನನಗೆ ಮಾತೃ ಭಾಷೆಯಲ್ಲಿ ಕಲಿಯುವುದೆಷ್ಟು ಸುಲಭ,ಆನಂದದ ವಿಷಯ ಅನ್ನುವುದರ ಅರಿವಿದೆ ಹಾಗೆಯೇ ೧೦ರ ನಂತರ ಇಂಗ್ಲೀಷ್ ಮಾದ್ಯಮಕ್ಕೆ (ಪಿಯುಸಿಯಲ್ಲಿ ಆಯ್ದುಕೊಂಡಿದ್ದು ವಿಜ್ಞಾನ ವಿಷಯ) ಕಾಲಿಟ್ಟಾಗ ಅನುಭವಿಸಿದ ಕಷ್ಟ,ಕೀಳರಿಮೆಯ ಅನುಭವಗಳು ಇವೆ.ಹಾಗಾಗಿ ಈ ಚರ್ಚೆಯಲ್ಲಿ ಮತ್ತು ಈಗಿನ ನಮ್ಮ ಶೈಕ್ಷಣಿಕ ಪರಿಸ್ಥಿತಿಯಲ್ಲಿ ನಾನು ಇಂಗ್ಲೀಷ್ ಮೀಡಿಯಂ ಬೇಕು ಅನ್ನುವುದರ ಪರವೇ ನಿಲ್ಲುತ್ತೇನೆ.
ಒಂದು ವೇಳೆ ಸಾಹಿತಿಗಳು ಒತ್ತಾಯಿಸುತ್ತಿರುವಂತೆ ಪ್ರಾಥಮಿಕ ಶಿಕ್ಷಣ ಮಾತೃ ಭಾಷೆಯಲ್ಲೇ ಆಗಬೇಕು ಅನ್ನುವುದಾದರೆ ಅದು ಈ ರಾಜ್ಯದಲ್ಲಿರುವ ಸರ್ಕಾರಿ/ಅನುದಾನಿತ/ಕೇಂದ್ರೀಯ/ಖಾಸಗಿ ಶಾಲೆಗಳಿಗೂ ಏಕರೂಪವಾಗಿ ಅನ್ವಯವಾಗಲಿ. ಅದನ್ನು ಬಿಟ್ಟು ಸರ್ಕಾರಿ ಶಾಲೆಗಳಲ್ಲಿ ಮಾತ್ರ ಕನ್ನಡ ಕಡ್ಡಾಯವಾಗಲಿ ಆ ಮೂಲಕ ಬಡವರ ಮಕ್ಕಳು ಮಾತ್ರ ಕನ್ನಡದಲ್ಲಿ ಕಲಿತು ಮುಂದೆ ಇಂಗ್ಲೀಷ್ ಲೋಕಕ್ಕೆ ಕಾಲಿಟ್ಟು ಅರ್ಧಕರ್ಧ ಜನ ಕೀಳರಿಮೆ,ಹೆದರಿಕೆಯಿಂದಾಗಿ ಹಿಂದೆ ಬೀಳಲಿ ಅನ್ನುವುದು ಇಬ್ಬಗೆಯ ನೀತಿಯಾಗುತ್ತದೆ.
ಏಕರೂಪ ಶಿಕ್ಷಣ ಅನ್ನುವಾಗ ಇನ್ನೊಂದು ಅಂಶವನ್ನ ನಾವು ಗಮನಕ್ಕೆ ತೆಗೆದುಕೊಳ್ಳಬೇಕು.ಮಕ್ಕಳನ್ನು ಶಾಲೆಗೇ ಸೇರಿಸುವಾಗ ಅದು ಇಂಗ್ಲೀಷ್ ಮೀಡಿಯಂ ಶಾಲೆಯೇ ಅಂತ ಮಾತ್ರ ಈಗಿನ ಪೋಷಕರು ನೋಡುತ್ತಿಲ್ಲ,ಅದರ ಜೊತೆಗೆ ಅವರು ಅಲ್ಲಿರುವುದು ಸೆಂಟ್ರಲ್ ಸಿಲ್ಲಬಸ್ಸೋ,ಐ.ಸಿ.ಎಸ್.ಈ ಸಿಲ್ಲಬಸ್ಸೋ (ಅಥವಾ ಇನ್ಯಾವುದೋ) ಅನ್ನುವುದನ್ನು ನೋಡುತಿದ್ದಾರೆ.ನಮ್ಮ ಮಕ್ಕಳು ಇಂತ ಸಿಲಬಸ್ಸ್ ಇರೋ ಶಾಲೆಯಲ್ಲಿ ಓದುತಿದ್ದಾರೆ ಅಂತ ಹೇಳಿಕೊಳ್ಳುವುದು ಈಗಿನ ಪೋಷಕರಿಗೆ ಗರ್ವದ ವಿಷಯವಾಗಿದೆ. ಅಸಲಿಗೆ ಈ ರೀತಿ ಬೇರೆ,ಬೇರೆ ಸಿಲ್ಲಬಸ್ಸಿನ ಅಗತ್ಯ ಶಾಲಾ ಮಟ್ಟದಲ್ಲಿ ಏನು ಅನ್ನುವುದು ಸಹ ಚರ್ಚೆಯಾಗಬೇಕಲ್ಲವೇ?
ಕನ್ನಡದಲ್ಲೂ ಮಾಹಿತಿ ಮುದ್ರಿತವಾಗಲಿ
– ರವಿ ಸಾವ್ಕರ್
ಇತ್ತೀಚಿಗೆ ಪೆಪ್ಸಿಕೋ ರವರ ಲೇಸ್ , ಮ್ಯಾಕ್ ಡೋನಾಲ್ದ್ ರವರ ಬರ್ಗರ್ ಗಳಲ್ಲಿ ಆರೋಗ್ಯಕ್ಕೆ ಹಾನಿಕಾರವಾಗುವಂಥಹ ಕೊಬ್ಬಿನಂಶ ಹೆಚ್ಚಾಗಿ ಇದೆ ಅನ್ನೋದರ ಬಗ್ಗೆ ಸುದ್ದಿ ಪ್ರಚಾರದಲ್ಲಿದೆ. ತಯಾರಕರು ತಮ್ಮ ಉತ್ಪಾದನೆಗಳಲ್ಲಿ ಯಾವ ಸಾಮಗ್ರಿ ಎಷ್ಟು ಪ್ರಮಾಣದಲ್ಲಿದೆ ಎಂದು ಗ್ರಾಹಕನಿಗೆ ಸರಿಯಾಗಿ ತಿಳಿಸುವುದು ಅವರ ಕರ್ತವ್ಯ. ಹಾಗೆಯೇ ಅದನ್ನು ಕೇಳಿ ಪಡೆಯುವುದೂ ಸಹ ಒಬ್ಬ ಗ್ರಾಹಕನಹಕ್ಕು ಆಗಿದೆ. Centre for Science and Environment (CSE) ಈ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವುದು ಶ್ಲಾಘನೀಯ.ಆದರೆ ಇಂಥಹ ಚರ್ಚೆಗಳಲ್ಲಿ ಈ ಮಾಹಿತಿಯನ್ನು ಜನರು ಅರಿಯಬೇಕಾದರೆ ಅದು ಜನರ ಭಾಷೆಯಲ್ಲಿ ಇರಬೇಕು ಅನ್ನೋ ಅತಿ ಮುಖ್ಯವಾದ ಅಂಶವನ್ನು ಮರೆತ ಹಾಗಿದೆ. ಒಂದು ವರದಿಯ ಪ್ರಕಾರ ನಮ್ಮ ದೇಶದಲ್ಲಿ ೭% ಜನರಿಗೆ ಮಾತ್ರ ಇಂಗ್ಲಿಷ್ ನಲ್ಲಿ ಇರುವುದನ್ನು ಅರ್ಥಮಾಡಿಕೊಳ್ಳಬಲ್ಲರು. ಮಿಕ್ಕ ೯೩% ಜನರಿಗೆ ಇಂಗ್ಲಿಷ್ ನಲ್ಲಿ ಮಾಹಿತಿ ತಲುಪಿಸಲಾಗದ ಪರಿಸ್ಥಿತಿ ಇರುವಾಗ , ಕೇವಲ ಇಂಗ್ಲಿಷ್ನಲ್ಲಿ ಮಾಹಿತಿಯನ್ನು ನಮೂದಿಸಿದರೆ ನಮ್ಮ ಜನರಿಗೆ ಹೇಗೆ ಅರ್ಥವಾದೀತು? ಒಬ್ಬ ಕನ್ನಡ ಮಾತ್ರ ಬರುವ ಗ್ರಾಹಕನೂ ಸಹ ಅಷ್ಟೇ ದುಡ್ಡು ಕೊಟ್ಟು ಖರೀದಿ ಮಾಡಿರುತ್ತಾನೆ. ಅವನಿಗೆ ಆ ಸಾಮಗ್ರಿಯ ಬಗೆಗೆ ಮಾಹಿತಿಯನ್ನು ತಿಳಿಸದಿರುವುದು ಯಾವ ನ್ಯಾಯ ?
ಬೆಳೆ ಬೆಳೆಸಿದರಷ್ಟೆ ನೆಲದ ಒಡೆತನ
– ಟಿ.ಎಂ.ಕೃಷ್ಣ
ಆಹಾರ ಧಾನ್ಯಗಳ ಬೆಲೆ ಒಂದೇ ಸಮನೆ ಗಗನಕ್ಕೇರುತ್ತಲೇ ಇದೆ. ಜನಸಾಮಾನ್ಯರೇನು- ಅಷ್ಟೋ ಇಷ್ಟೋ ಸ್ಥಿತಿವಂತರೇ ಜೀವನ ನಿರ್ವಹಿಸಲು ಸಾಧ್ಯವಾಗದಂತಾಗಿದೆ. ಕೆಳ, ಮದ್ಯಮ ವರ್ಗದವರು ತರಗೆಲೆಗಳಂತೆ ತತ್ತರಿಸತೊಡಗಿದ್ದಾರೆ. ಮುಂದುವರಿದ(?) ಮನುಷ್ಯನ ಅಗತ್ಯಗಳು ಅಗಣಿತವಾಗಿರಬಹುದಾದರೂ, ಮೂಲಭೂತ ಅಗತ್ಯವಾದ ಅನ್ನಾಹಾರಗಳ ಲಭ್ಯತೆ ಕಠಿಣವಾದರೆ ಏನಿದ್ದರೂ, ಯಾವುದೇ ತಂತ್ರಜ್ಞಾನವಿದ್ದರೂ ಅವೆಲ್ಲಾ ಅಪ್ರಸ್ತುತವಾಗಿಬಿಡುತ್ತವೆ. (ಚಿನ್ನದ ಕತ್ತಿ ಇದೆಯೆಂದು ಕುತ್ತಿಗೆ ಕೊಯ್ದುಕೊಳ್ಳಲಾದೀತೆ?)
ಅಗತ್ಯವಸ್ತುಗಳು ಕೈಗೆಟುಕದಂತಾಗಿರುವ ಈ ಸಂದರ್ಭದಲ್ಲಿ ಸರ್ಕಾರದ ಕಡೆ ಕೈ ತೋರಿಸುವುದು ಅನಿವಾರ್ಯವಾದರೂ, ಆಯಕಟ್ಟಿನ ಜಾಗಕ್ಕೆ ಕೈತೋರಿಸದಿರುವುದು ನಮ್ಮಲ್ಲಿನ ಪ್ರಜ್ಞಾವಂತರ ಪ್ರಜ್ಞೆಯ ಅವನತಿಯನ್ನು ಸೂಚಿಸುತ್ತದೆ. ಕುರಿಗಳು ಹಳ್ಳಕ್ಕೆ ಬಿದ್ದಂತೆ ಪ್ರತಿಯೊಬ್ಬರೂ ಪ್ರಸ್ತಾಪಿಸುತ್ತಿರುವುದು ಮಳೆ ಅಭಾವ, ಬೆಳೆನಷ್ಟ, ವ್ಯಾಪಾರಿಗಳು ಸೃಷ್ಟಿಸುತ್ತಿರುವ ಕೃತಕ ಅಭಾವ, ಸರ್ಕಾರ ಸರಿಯಾಗಿ ನಿರ್ವಹಿಸುತ್ತಿಲ್ಲ, ಜನಸಂಖ್ಯೆಯ ಹೆಚ್ಚಳ ಇತ್ಯಾದಿ…ಈ ಎಲ್ಲ ಕಾರಣಗಳಿಗೆ ನಿದರ್ಶನಗಳಿದ್ದರೂ, ಅವೆಲ್ಲಾ ತಾತ್ಕಾಲಿಕ ಅವ್ಯವಸ್ಥೆಗಳೇ ಹೊರತು ಮೂಲಭೂತ ಸತ್ಯಗಳಲ್ಲವೇ ಅಲ್ಲ.
ಕೇಸರಿಕರಣ ಅಂದರೆ ಕೇಸರಿ ಬಣ್ಣದ ಪುಸ್ತಕವೇ?
– ಅಶ್ವಿನ್ ಅಮೀನ್
ದ್ವಾರಕನಾಥ್ ಅವರೇ, ನೀವು ಇತ್ತೀಚಿಗೆ ಪ್ರಜಾವಾಣಿಯಲ್ಲಿ ಬರೆದ ‘ಪ್ರಾಥಮಿಕ ಪಠ್ಯದಲ್ಲಿ ಕೇಸರೀಕರಣದ ಸ್ಯಾಂಪಲ್’ ಎಂಬ ಲೇಖನದ ಬಗ್ಗೆ ಹಲವು ಸಂದೇಹಗಳಿರುವುದರಿಂದ ಈ ಪ್ರತಿಕ್ರಿಯೆಯನ್ನು ನೀಡಲಿಚ್ಚಿಸುತ್ತೇನೆ.
ಮೊದಲನೆಯದಾಗಿ ನೀವು ಅರ್ಥೈಸಿಕೊಂಡಂತೆ ‘ಕೇಸರೀಕರಣ’ ಎಂದರೇನು ಎಂದು ತಿಳಿಯಬಯಸುತ್ತೇನೆ. ಭಾರತದ ಮೂಲ ಇತಿಹಾಸವನ್ನು, ಸಂಸ್ಕೃತಿಯನ್ನು, ಪರಂಪರೆಯನ್ನು, ಪ್ರಾಚೀನ ಭಾರತದ ಜನರ ಜೀವನ ವಿಧಾನಗಳನ್ನು, ಅವರು ಆಚರಿಸಿಕೊಂಡು ಬರುತ್ತಿದ್ದ ವಿವಿಧ ಆಚರಣೆಗಳನ್ನು ಯಥಾವತ್ತಾಗಿ ತಿಳಿಸಿಕೊಡುವುದು ಕೇಸರೀಕರಣವಾಗುತ್ತದೆಯೇ?.. ಇಷ್ಟಕ್ಕೂ ನಿಮಗೆ ಈ ‘ಕೇಸರಿ’ ಎಂಬ ಕಲರ್ ಕೋಡ್ ಕೊಟ್ಟವರು ಯಾರು?… ಹಾಗಿದ್ದಲ್ಲಿ ಹಿಂದಿನ ಪಠ್ಯಪುಸ್ತಕಗಳಲ್ಲಿ ಇದ್ದಂತೆ ಭಾರತದ ಮೇಲೆ ಹಲವು ಬಾರಿ ಧಾಳಿ ಮಾಡಿ ಇಲ್ಲಿನ ಹಲವು ವೈಭವೋಪೇತ ದೇಗುಲಗಳನ್ನು ನಾಶ ಮಾಡಿ, ಸಂಪತ್ತನ್ನು ಲೂಟಿಗೈದ ಮಹಮ್ಮದ್ ಗಜಿನಿ, ಮಹಮ್ಮದ್ ಘೋರಿ ಮುಂತಾದ ಲೂಟಿಕೋರರ ವರ್ಣನೆ.. ಭಾರತದ ಮೇಲೆ ದಂಡೆತ್ತಿ ಬಂದ ಅಲೆಕ್ಸಾಂಡರನನ್ನು ಸೋಲಿಸಿ ಓಡಿಸಿದ ‘ಭಾರತೀಯ’ ದೊರೆ ‘ಪೌರವ’ನನ್ನು ವರ್ಣಿಸದೇ ಅಲೆಕ್ಸಾಂಡರನನ್ನು ವರ್ಣಿಸಿರುವುದು.. ಸ್ವಾತಂತ್ರ ಹೋರಾಟದ ಪಾಠಗಳಲ್ಲಿ ಆಜಾದ್, ಸಾವರ್ಕರ್, ನೇತಾಜಿ, ಭಗತ್ ಸಿಂಗ್, ಲಾಲ ಲಜಪತ್ ರಾಯ್ ಯಂತವರನ್ನು ನಾಲ್ಕೈದು ಸಾಲುಗಳಿಗೆ ಸೀಮಿತಗೊಳಿಸಿ ಗಾಂಧೀ-ನೆಹರೂ ಮುಂತಾದ ಕಾಂಗ್ರೆಸ್ಸ್ ನಾಯಕರುಗಳ ಬಗ್ಗೆ ಪುಟಗಟ್ಟಲೆ ಬರೆಯುವುದು.. ಮೌಲಾನ ಅಬ್ದುಲ್ ಕಲಾಮ್ ಅಜಾದರಂತಹ ಗಾಂಧಿಯ ಹಿಂಬಾಲಕರ ಬಗ್ಗೆ ಪಾಠಗಳನ್ನು ಸೃಷ್ಟಿಸಿ, ಅಶ್ಫಾಕುಲ್ಲ ಖಾನ್ ನಂತಹ ಕ್ರಾಂತಿಕಾರಿ ದೇಶಪ್ರೇಮಿಯನ್ನು ಕಡೆಗಣಿಸಿರುವುದು.. ಶಿವಾಜಿ ರಾಜ್ಯ ಕಟ್ಟಿದ ರೀತಿ, ಭಾರತೀಯ ಸಂಸ್ಕೃತಿಯ ಉಳಿವಿಗಾಗಿ ಅವನು ಪಟ್ಟ ಶ್ರಮದ ಬಗ್ಗೆ ಪಾಠಗಳನ್ನು ರಚಿಸದೇ ಔರಂಗಜೇಬನನ್ನು ಪಠ್ಯದಲ್ಲಿ ವರ್ಣಿಸಿ ಸೇರಿಸಿರುವುದು .. ಇವೆಲ್ಲ ನಿಮಗೆ ಸರಿ ಕಂಡು ಬರುವುದೇ.. ಒಂದರ್ಥದಲ್ಲಿ ಇವೆಲ್ಲ ‘ಹಸಿರೀಕರಣ’ವಾಗದೆ?!!!! ಅದಕ್ಕೇಕೆ ನೀವು ‘ಹಸಿರು’ ಎಂಬ ಕಲರ್ ಕೋಡ್ ಕೊಡುವುದಿಲ್ಲ.? ಸುಳ್ಳು ಇತಿಹಾಸವನ್ನು ಸೃಷ್ಟಿಸಿ ಬರೆದರೆ ಅದು ನಿಮಗೆ ಒಪ್ಪಿಗೆಯಾಗುತ್ತದೆ. ಅದೇ ಭಾರತದ ನಿಜವಾದ ಇತಿಹಾಸವನ್ನು ಮಕ್ಕಳಿಗೆ ತೆರೆದಿಟ್ಟರೆ ಅದು ಹೇಗೆ ಕೇಸರೀಕರಣವಾಗುತ್ತದೆ?
ಪ್ರೇಮ, ಯುದ್ಧ ಮತ್ತು ಚುನಾವಣೆಯಲ್ಲಿ ಎಲ್ಲವೂ ನ್ಯಾಯವೇ
-ಚಾಮರಾಜ ಸವಡಿ
ಕೆಲವೊಬ್ಬರು ಏನು ಮಾಡಿದರೂ ವಿವಾದವಾಗುತ್ತದೆ. ಅವರು ಸೃಜನಶೀಲ ಕ್ಷೇತ್ರದಲ್ಲಿದ್ದರಂತೂ ವಿವಾದ ಇನ್ನಷ್ಟು ತೀವ್ರ. ಕನ್ನಡದ ಮಟ್ಟಿಗೆ ಆ ಕೀರ್ತಿ ಎಸ್.ಎಲ್. ಭೈರಪ್ಪ ಅವರದಾದರೆ, ಭಾರತೀಯ ಇಂಗ್ಲಿಷ್ ಬರಹಗಾರರ ಪೈಕಿ ಆ ಪಟ್ಟ ಸಲ್ಮಾನ್ ರಶ್ದಿಗೆ.ಪ್ರಜಾಪ್ರಭುತ್ವದ ಶಿಕ್ಷಣ
-ರಾವ್ ಎವಿಜಿ
ಪ್ರಜಾಪ್ರಭುತ್ವ ಒಂದು ಸುಂದರ ಪರಿಕಲ್ಪನೆ ಎಂಬುದರ ಕುರಿತಾಗಲಿ, ನಮಗೆ ತಿಳಿದಿರುವ ಪ್ರಭುತ್ವದ ನಮೂನೆಗಳ ಪೈಕಿ ಅತ್ಯಂತ ಶ್ರೇಷ್ಠವಾದದ್ದು ಎಂಬುದರ ಕುರಿತಾಗಲಿ ಯಾವ ಸಂಶಯವೂ ನನಗಿಲ್ಲವಾದರೂ ನಮಗೆ, ಅರ್ಥಾತ್ ಈ ಕರ್ಮಭೂಮಿಯ ಪ್ರಜೆಗಳಿಗೆ ಪ್ರಜಾಪ್ರಭುತ್ವ ಪದ್ಧತಿಯನ್ನು ಅಳವಡಿಸಿಕೊಳ್ಳಲು ಅಗತ್ಯವಾದ ಅರ್ಹತೆ ಇದೆಯೇ ಎಂಬುದರ ಕುರಿತು ಸಂಶಯ ಇದೆ. ನನಗೆ ತಿಳಿದ ಮಟ್ಟಿಗೆ ಪ್ರಜಾಪ್ರಭುತ್ವದ ಯಶಸ್ಸು ಪ್ರಜೆಗಳ, ಅರ್ಥಾತ್ ಮತದಾರನ ವಿವೇಕವನ್ನು ಆಧರಿಸಿರುತ್ತದೆ.
- ಹಣ, ಹೆಂಡ. ಸೀರೆ ಮೊದಲಾದವನ್ನು ಧಾರಾಳವಾಗಿ ಕೊಡುವವರನ್ನೇ ಆಗಲಿ ಚುನಾವಾಣೆಯಲ್ಲಿ ಗೆದ್ದು ಬಂದರೆ ಉಚಿತವಾಗಿ ‘ಕಲರ್’ಟಿವಿ,’ಮಿಕ್ಸಿ’ ನಗಣ್ಯ ಅನ್ನಬಹುದಾದಷ್ಟು ಕಡಿಮೆ ಬಡ್ಡಿಯ ಸಾಲ ಮುಂತಾದವನ್ನು ಕೊಡುವುದಾಗಿ ಭರವಸೆ ನೀಡುವ ಮಂದಿಯನ್ನು ಆಯ್ಕೆ ಮಾಡುವ ನಾವು ವಿವೇಕಿಗಳೇ?
- ನಮ್ಮ ಮತದವ, ನಮ್ಮ ಜಾತಿಯವ, ನಮ್ಮ ಊರಿನವ ಎಂಬ ಕಾರಣಕ್ಕಾಗಿ ನಾಯಕನನ್ನು ಆಯ್ಕೆ ಮಾಡುವ ನಾವು ವಿವೇಕಿಗಳೇ ? ಮತ್ತಷ್ಟು ಓದು

ಶ್ರಾದ್ಧ … ಆಚರಣೆ
-ಪ್ರಕಾಶ್ ನರಸಿಂಹಯ್ಯ
ಹುಟ್ಟು ಅಂದಮೇಲೆ ಸಾವು ನಿಶ್ಚಿತ. ಹುಟ್ಟಿನೊಂದಿಗೆ ಪ್ರಾರಂಭವಾಗುವ ಜೀವನ ಯಾತ್ರೆ ಮರಣದೊಂದಿಗೆ ಮುಗಿಯುತ್ತವೆ. ಅಂತ್ಯಸಂಸ್ಕಾರ ನಡೆಯುತ್ತವೆ . ನಂತರದಲ್ಲಿ ಮೃತ ವ್ಯಕ್ತಿಗೆ ಹಲವಾರು ಸಂಸ್ಕಾರಗಳು ನಡೆಯುತ್ತವೆ. ಸತ್ತ ದಿನದಿಂದ ಹದಿನಾಲ್ಕು ದಿನಗಳವರೆಗೆ ಹಲವಾರು ರೀತಿಯ ಕರ್ಮಗಳನ್ನು ಅವರವರ ಪದ್ದತಿಗನುಸಾರವಾಗಿ ಮತ್ತು ಸಂಪ್ರದಾಯದಂತೆ ಮಾಡುತ್ತಾರೆ. ಮೃತ ವ್ಯಕ್ತಿಯ ಮಕ್ಕಳು ಸಾಮಾನ್ಯವಾಗಿ ಈ ಕರ್ಮವನ್ನು ಮಾಡುತ್ತಾರೆ.ನಂತರದಲ್ಲಿ ಪ್ರತಿ ವರ್ಷ ಮೃತರ ನೆನಪಿನಲ್ಲಿ ಶ್ರಾದ್ಧ ಕರ್ಮಅಥವಾ ತಿಥಿ ಎಂಬ ಹೆಸರಿನಲ್ಲಿ ಆಚರಣೆ ಮಾಡುವುದು ರೂಡಿಯಲ್ಲಿದೆ.
ಸಂಸ್ಕೃತಿ ಸಂಕಥನ – 19 – ವಿಚಾರಕ್ಕೂ ಆಚಾರಕ್ಕೂ ಏನು ಸಂಬಂಧ ?
-ರಮಾನಂದ ಐನಕೈ
ನಮ್ಮೂರಿನಲ್ಲಿ ಒಬ್ಬರು ವಿಚಾರವಂತರಿದ್ದಾರೆ. ನಿಜವಾಗಲೂ ಅವರು ಚಿಂತಕರೆ, ನಾವೆಲ್ಲ ತಮಾಷೆಗಾಗಿ ಅವರನ್ನು ಸೆಕ್ಯುಲರ್ ಚಿಂತಕರು ಎಂದು ಕರೆಯುತ್ತೇವೆ. ಯಾವತ್ತೂ ವೇದಿಕೆಯ ಮೇಲೆ ಅವರು ನಾಸ್ತಿಕತೆಯ ಕುರಿತಾಗಿ ಮಾತನಾಡುತ್ತಾರೆ. ದೇವರುಗಳನ್ನು ಟೀಕಿಸುತ್ತಾರೆ. ಗ್ರಾಮೀಣ ಜನರ ಆಚಾರಗಳು ಮೌಢ್ಯವೆಂದು ಗುರುತಿಸುತ್ತಾರೆ. ಹೊರಗೆ ಬಂದಾಗ ಹೆಂಡ, ಸಿಗರೇಟುಗಳೆಲ್ಲ ಅವರ ಆಪ್ತ ಸಂಗಾತಿಗಳು. ಆದರೆ ಆ ವ್ಯಕ್ತಿ ಅವರ ಊರಿನಲ್ಲಿ ಒಬ್ಬ ಪೂಜಾರಿ. ಮನೆಯಲ್ಲಿ ಕರ್ಮಠ ಆಸ್ತಿಕರು. ಜಪ-ತಪ, ಮಡಿ-ಮೈಲಿಗೆ ಮುಂತಾದವುಗೆಳೆಲ್ಲವೂ ಅವರ ನಿತ್ಯಕರ್ಮಗಳು. ಜ್ಯೋತಿಷ್ಯ, ಶಕುನ ಮುಂತಾದವುಗಳೆಲ್ಲದರಲ್ಲೂ ಪ್ರವೀಣರು. ಶನಿವಾರ ಅವರ ಮನೆ ಮುಂದೆ ಜನರ ಸರದಿ ಇರುತ್ತದೆ. ಈ ವ್ಯಕ್ತಿಯನ್ನು ನಾವು ಯಾವ ರೀತಿ ಅರ್ಥೈಸೋಣ? ಸಾರ್ವಜನಿಕವಾಗಿ ಅವರು ವ್ಯಕ್ತಪಡಿಸುವ ವಿಚಾರಗಳು ನಿಜವೇ ಇರುತ್ತದೆ. ವೈಯಕ್ತಿಕವಾಗಿ ಅವರು ವ್ಯಕ್ತಪಡಿಸುವ ವಿಚಾರಗಳು ನಿಜವೇ ಇರುತ್ತದೆ. ವೈಯಕ್ತಿಕವಾದ ಅವರ ಆಚರಣೆಯೂ ಶುದ್ಧವಾಗಿರುತ್ತದೆ. ಇವೆರಡರಲ್ಲಿ ಯಾವುದು ತಪ್ಪು ಅನ್ನಲು ಸಾಧ್ಯ? ಇದೇ ಭಾರತದ ಆಧುನಿಕ ವಿಚಾರವಾದಿಗಳ ಸಮಸ್ಯೆ.
ವಿಜ್ಞಾನಿಯೊಬ್ಬರು ದೇವರ ಫೋಟೋ ಪೂಜಿಸುವುದು, ದೇವಸ್ಥಾನಕ್ಕೆ ಹೋಗುವುದು ಹಾಸ್ಯಾಸ್ಪದ ಅನಿಸುತ್ತದೆ. ಲಕ್ಷ್ಮೀ ಪೂಜೆಯ ದಿನ ಕಂಪ್ಯೂಟರಿಗೆ ಬಿಳಿಪಟ್ಟೆ ಎಳೆದು ಪೂಜಿಸಿದರೆ ನಗು ಬರುತ್ತದೆ. ಸೂರ್ಯ, ಚಂದ್ರ ಭೂಮಿಯ ಪರ್ಯಟನದಿಂದಾಗಿ ಗ್ರಹಣವಾಗುತ್ತದೆ ಎಂಬ ವೈಜ್ಞಾನಿಕ ಸತ್ಯ ನಮಗೆ ಗೊತ್ತಿದೆ. ಆದರೂ ಉಪವಾಸ ಇರುತ್ತೇವೆ. ದೇವರನ್ನು ಮುಳುಗಿಸಿಬಿಡುತ್ತೇವೆ. ಮನೆಯ ಬಿಟ್ಟು ರಸ್ತೆಗೇ ಬರುವುದಿಲ್ಲ. ಗ್ರಹಣದ ನಂತರ ಸ್ನಾನ ಮಾಡುತ್ತೇವೆ. ಯಾಕೆ? ತಿಳಿದಿರುವುದೊಂದು ಮಾಡುವುದೊಂದು, ಹೇಳುವುದೊಂದು ಮಾಡುವುದೊಂದು. ಇದನ್ನೇ ಸೋಗಲಾಡಿತನ ಎಂದು ಟೀಕಿಸುತ್ತೇವೆ.





