ವಿಷಯದ ವಿವರಗಳಿಗೆ ದಾಟಿರಿ

Posts tagged ‘ಕರ್ನಾಟಕ’

21
ಜನ

ಭಗವಾನ್ ರಮಣ ಮಹರ್ಷಿಗಳ ಸಂದೇಶ – 2

ಪ್ರಕಾಶ್ ನರಸಿಂಹಯ್ಯ

ತನ್ನ ತಾನು ಅರಿಯಲು ಬ್ರಹ್ಮಜ್ಞಾನ ಪ್ರಾಪ್ತಿಯಾಗಬೇಕೆ?. ಈ ಬ್ರಹ್ಮಜ್ಞಾನ ಪಡೆಯಲು ಸಾಮಾನ್ಯರಿಗೆ ಸಾಧ್ಯವೇ? ಈ ಪ್ರಶ್ನೆಯನ್ನು ಭಗವಾನ್ ರಮಣ ಮಹರ್ಷಿಗಳಲ್ಲಿ ಒಬ್ಬ ವಿದೇಶಿ ಭಕ್ತ ನಿವೇದಿಸಿಕೊಂಡ.

ಆಗ ಮಹಷಿಗಳು ಕೊಟ್ಟ ಸ್ಪಷ್ಟ ಉತ್ತರ ಏನೆಂದರೆ  “ಬ್ರಹ್ಮಜ್ಞಾನವೆಂಬುದು ಸಂಪಾದಿಸುವ ವಿದ್ಯೆಯಲ್ಲ;        ಬ್ರಹ್ಮಜ್ಞಾನ ಪಡೆಯುವುದರಿಂದ ಸಂತೋಷ ವಾಗಿರಬಹುದೆಂದು  ಆಶಿಸಿದರೆ ಇದೊಂದು ತಪ್ಪು ಗ್ರಹಿಕೆ. ನಿಮ್ಮೊಳಗಿರಬಹುದಾದ ಈ ತಪ್ಪುಗ್ರಹಿಕೆ  ಹೇಗಿದೆಯೆಂದರೆ ಹತ್ತು ಜನ ಧಡ್ಡರು ನದಿದಾಟಿದಂತಿದೆ.”   ಎಂದು  ಒಂದು ಕಥೆಯನ್ನು ಹೇಳಲು ಪ್ರಾರಂಭಿಸಿದರು. ” ಹತ್ತು ಜನ  ಧಡ್ಡರು ನದಿ ದಾಟಲು ಸಿದ್ದರಾದರು. ಎಲ್ಲರೂ ಈಜಿ  ದಡವನ್ನು ಸೇರಿದರು. ದಡ ಸೇರಿದ ನಂತರ ಎಲ್ಲರೂ ಬಂದು ತಲುಪಿರವರೆ, ಎಂಬುದನ್ನು ಖಾತ್ರಿ ಮಾಡಿಕೊಳ್ಳಬೇಕೆಂದು ತಂಡದ ನಾಯಕನು ಎಲ್ಲರ ತಲೆಯನ್ನು ಎಣಿಸಿದ.    ಒಂಬತ್ತು ಜನ ಮಾತ್ರ ಲೆಕ್ಕಕ್ಕೆ ಸಿಕ್ಕಿದರು. ಪುನಃ ಎಣಿಸಿದ, ಆಗಲು ಅಷ್ಟೇ!  ಮತ್ತೊಬ್ಬನನ್ನು ಕರೆದು ಎಲ್ಲರನ್ನು ಸಾಲಾಗಿ  ನಿಲ್ಲಿಸಿ ಎಣಿಸಲು ಹೇಳಿದ. ಆಗಲೂ ಒಂಬತ್ತು ಜನರೇ!  ನಾಯಕನಿಗೆ ಗಾಭರಿ ಆಯ್ತು.  ಏನೂ ತೋಚದೆ ಎಲ್ಲರು ಅಳಲು ಪ್ರಾರಂಭಿಸಿದರು.  ಇವರ ಅಳುವನ್ನು ಕೇಳಿ ದಾರಿಯಲ್ಲಿ ಬರುತ್ತಿದ್ದ ದಾರಿಹೋಕ ಏನೆಂದು ವಿಚಾರಿಸಿದ.  ನಾಯಕ ಎಲ್ಲವನ್ನು ವಿಸ್ತಾರವಾಗಿ ವಿವರಿಸಿದ.  ದಾರಿಹೋಕ ಸುಮ್ಮನೆ ಎಣಿಸಿನೋಡುವಾಗ ಸರಿಯಾಗಿ ಹತ್ತು ಜನರಿದ್ದರು.  ಆಗ ಎಲ್ಲರನ್ನು ಸಾಲಾಗಿ ನಿಲ್ಲಿಸಿ ಎಲ್ಲರ ಬೆನ್ನು ಮೇಲೆ ಒಂದೊಂದು ಪೆಟ್ಟು ಕೊಡುತ್ತ ಎಣಿಸಿದ. ಎಲ್ಲರು ಸೇರಿ ಹತ್ತು ಜನರಾದರೆಂದು ತಿಳಿದಮೇಲೆ ಸಂತೋಷಗೊಂಡ ದಡ್ಡರು ದಾರಿಹೋಕನನ್ನು ಕೊಂಡಾಡಿದರು.  ಹತ್ತೂ ಜನರು ತಮ್ಮ ಪ್ರಯಾಣವನ್ನು ಮುದುವರೆಸಿದರು.”  ಕಥೆಯನ್ನು ಮುಗಿಸಿ ಒಂದು ಕ್ಷಣ ಸುಮ್ಮನಾದರು.

ಮತ್ತಷ್ಟು ಓದು »

19
ಜನ

ಕನ್ನಡ ಮತ್ತು ತಂತ್ರಜ್ಞಾನದ ಬೆಳವಣಿಗೆಯಲ್ಲಿ ಪಾಲ್ಗೊಳ್ಳುವ ಆಸೆಯೇ?

ಓಂ ಶಿವಪ್ರಕಾಶ್

ಪ್ರತಿಯೊಬ್ಬ ಕನ್ನಡಿಗನಲ್ಲೂ ಕನ್ನಡಕ್ಕೆ ದುಡಿಯುವ ಬಲವಾದ ಆಸೆಯಿರುತ್ತದೆ. ಅಕ್ಷರ ಕಲಿಯುವ ದೆಸೆಯಿಂದ ಹಿಡಿದು, ದುಡಿದು ದೊಡ್ಡವನಾಗುವವರೆಗೂ ಹೇಗೆ ತನ್ನ ಆಸೆಯನ್ನು ಈಡೇರಿಸಿಕೊಳ್ಳುವುದೆಂಬ ಪ್ರಶ್ನೆ ಮನಸ್ಸಿನಲ್ಲಿ ಸುಳಿಯುತ್ತಲೇ ಇರುತ್ತದೆ. ಮಾಹಿತಿ ತಂತ್ರಜ್ಞಾನದ ಕ್ಷೇತ್ರದಲ್ಲಂತೂ, ಅದನ್ನು ಬಳಸುವ ಸಾಮಾನ್ಯನಿಂದ ಹಿಡಿದು, ತಂತ್ರಜ್ಞಾನದ ಜೊತೆಗೇ ದಿನದೂಡುವ ತಂತ್ರಜ್ಞನವರೆಗೂ ಎಲ್ಲರಿಗೂ ಕನ್ನಡ ಬಳಸುವ ಮತ್ತು ಬೆಳೆಸುವ ಆಸೆ ಖಂಡಿತ ಇರುತ್ತದೆ. ಅಂತಹ ಆಸೆಗಳನ್ನು ಮತ್ತೆ ಚಿಗುರಿಸಿ, ಮಾಹಿತಿ ತಂತ್ರಜ್ಞಾನದ ಬಳಕೆದಾರನ ದಿನನಿತ್ಯದ ಪ್ರಶ್ನೆಗಳನ್ನು ಉತ್ತರಿಸುತ್ತಾ, ಕನ್ನಡದ ತಾಂತ್ರಿಕ ಬೆಳವಣಿಗೆಗೆ ನಾಂದಿಯಾಗಲು ನಾವು ಇಡಬೇಕಾದ ‘ಹೆಜ್ಜೆಗಳು” ಅನೇಕ.

ದೈನಂದಿನ ಬದುಕಿನಲ್ಲಿ ತಂತ್ರಜ್ಞಾನದ ಮುಖೇನ ಕನ್ನಡದಲ್ಲೇ ವ್ಯವಹರಿಸಬಹುದೇ? ಕನ್ನಡದ ತಾಂತ್ರಿಕ ಬೆಳವಣಿಗೆ ಹೇಗೆ ಸಾಧ್ಯ? ಅದರಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಬಗೆ ಹೇಗೆ? ಕನ್ನಡ ಭಾಷಾ ತಂತ್ರಜ್ಞಾನ ಬೆಳವಣಿಗೆಯ ತೊಡಕುಗಳ ನಿವಾರಣೆ ಸಾಧ್ಯವೇ? ತಂತ್ರಾಂಶಗಳು ನಡೆಯಬೇಕಿರುವ ಹಾದಿಯ ಕಿರು ಪರಿಚಯ ಎಲ್ಲಿ ಸಿಗಬಹುದು? ಇದಕ್ಕೊಂದು ಸಮುದಾಯವಿದೆಯೇ? ಈ ಸಮುದಾಯ ಅಭಿವೃದ್ದಿಯ ಪರಿಕಲ್ಪನೆ ಏನು? ಇತ್ಯಾದಿ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳುವ ಸಲುವಾಗಿ ‘ಹೆಜ್ಜೆ’ ರೂಪಿತಗೊಂಡಿದೆ.

ಮಾಹಿತಿ ತಂತ್ರಜ್ಞಾನದ ವಿವಿಧ ಸ್ತರಗಳಲ್ಲಿ ಕನ್ನಡದ ಬೆಳವಣಿಗೆಗೆ ಬೇಕಾದ ವಿಷಯಗಳ ಬಗ್ಗೆ ಅನುಭವಿ ತಜ್ಞರು, ತಂತ್ರಜ್ಞರು ತಮ್ಮ ಅನುಭವವನ್ನು ಹಂಚಿಕೊಳ್ಳುವುದರ ಮೂಲಕ ಪ್ರಾರಂಭವಾಗುವ ಈ ಕಾರ್ಯಕ್ರಮ, ಮೇಲೆ ಹೇಳಿದ ಅನೇಕ ಪ್ರಶ್ನೆಗಳಿಗೆ ಉತ್ತರವನ್ನು ಪಡೆದುಕೊಳ್ಳುವ ‘ಹೆಜ್ಜೆ’ಗಳ ಹಾದಿಯನ್ನು ನಿಮ್ಮ ಮುಂದೆ ತೆರೆಯಲಿದೆ.

ಬನ್ನಿ ನಮ್ಮೊಡನೆ ಜೊತೆಜೊತೆಯಾಗಿ ಹೆಜ್ಜೆ ಹಾಕಿ, ನಿಮ್ಮ ಬರುವಿಕೆಯನ್ನು ಇಂದೇ ಕಾಯ್ದಿರಿಸಿ

* * * * * *

ಚಿತ್ರಕೃಪೆ : hejje.sanchaya.net

18
ಜನ

ಭಾಷಾ ಆಯಾಮದಲ್ಲಿ “Consumer Protection Act”

ರವಿ ಸಾವ್ಕರ್
ಒಬ್ಬ ಗ್ರಾಹಕನಿಗೆ ಮಾರುಕಟ್ಟೆಯಲ್ಲಿ ಮೋಸವಾಗದಂತೆ ರಕ್ಷಣೆ ಕೊಡಲು “Consumer Protection Act” ಮಸೂದೆಯನ್ನು 1986 ನಲ್ಲಿ ಅಂಗೀಕರಿಸಲಾಯಿತು. ಒಬ್ಬ ಕನ್ನಡಿಗನಿಗೆ ಗ್ರಾಹಕ ಸೇವೆಗಳನ್ನು ಕನ್ನಡದಲ್ಲೇ ಪಡೆಯಲು ಈ ಮಸೂದೆ ಹೇಗೆ ಸಹಕಾರಿಯಾಗಿದೆ ಎಂದು ನೋಡೋಣ.
“Consumer Protection Act” ನಲ್ಲಿ ಗ್ರಾಹಕನ ಕೆಲ ಮೂಲಭೂತ ಹಕ್ಕನ್ನು ಹಾಗೂ ಅವುಗಳನ್ನು ಬಳಸಿಕೊಳ್ಳಬಹುದಾದ ಕೆಲವು ಉದಾಹರಣೆಗಳನ್ನು ಇಲ್ಲಿ ನೋಡೋಣ.
(a) the right to be protected against the marketing of goods and services which are hazardous to life and property;
ಒಬ್ಬ ಗ್ರಾಹಕನಿಗೆ ತನ್ನ ಜೀವಕ್ಕೆ ಅಥವಾ ತನ್ನ ಆಸ್ತಿಗೆ ಹಾನಿ ತರಬಹುದಾದ ಸಾಮಗ್ರಿಗಳ ಮಾರಾಟದಿಂದ ರಕ್ಷಣೆ ಪಡೆಯುವ ಹಕ್ಕು ಇದೆ. ಆದರೆ ನಾವು ದಿನ ನಿತ್ಯ ಬಳಸುವ ಅಡುಗೆ cylinder ಗಳಲ್ಲಿ, ದೀಪಾವಳಿಯಲ್ಲಿ ಸುಡುವ ಪಟಾಕಿಗಳ ಸೂಚನೆಗಳ ಮೇಲೆ , ಔಷಧಿಗಳಲ್ಲಿ ಕನ್ನಡದ ಸೂಚನೆಗಳು ಇಲ್ಲದಾಗಿದೆ. ಸರಿಯಾಗಿ ಬಳಸಲು ಸೂಚನೆಗಳು ಗ್ರಾಹಕರಿಗೆ ಕೊಡದೆ ಇದ್ದುದರಿಂದ ,ಈ ವಸ್ತುಗಳ ಬಳಕೆಗಳಿಂದ ಜನರ ಆಸ್ತಿಗೆ ಅಥವಾ ಜೀವಕ್ಕೆ ಹಾನಿ ಉಂಟಾಗಬಹುದು. ಹಾಗಾಗಿ ಈ ಎಲ್ಲ ವಸ್ತುಗಳ ಮೇಲೂ ಸಹ ಕನ್ನಡದ ಸೂಚನೆ ಇರಲೆಬೇಕಾಗಿದೆ. ವಿಮಾನಗಳಲ್ಲಿ , ರೈಲುಗಳಲ್ಲಿ ,ಸುರಕ್ಷತಾ ಸೂಚನೆಗಳು ಹಾಗೂ ಘೋಷಣೆಗಳು ಇದಕ್ಕೆ ಹೊರತಲ್ಲ
17
ಜನ

ಮಕ್ಕಳಿಗೆ ಉತ್ತಮ ಮೌಲ್ಯಗಳನ್ನು (ವ್ಯಾಲ್ಯೂಸ್) ಕಲಿಸುವುದು ಹೇಗೆ?

-ರಾವ್ ಎವಿಜಿ

ಮೌಲ್ಯಗಳು ಎಂದರೇನು ಎಂಬ ಪ್ರಶ್ನೆಗೆ ‘ನಿರ್ದಿಷ್ಟ ವಸ್ತು, ಕ್ರಿಯೆ ಮತ್ತು ಸನ್ನಿವೇಶಗಳಿಗೆ ವ್ಯಕ್ತಿಗಳು ನೀಡುವ ಬೆಲೆಗೆ ಸಂಬಂಧಿಸಿದ ಅದ್ವಿತೀಯ ಶಾಬ್ದಿಕ ಪರಿಕಲ್ಪನೆಗಳು’ ಎಂಬ ಸೈದ್ಧಾಂತಿಕ ಉತ್ತರ ನೀಡಬಹುದಾದರೂ ಎಲ್ಲರಿಗೂ ಸುಲಭವಾಗಿ ಅರ್ಥವಾಗುವ ಸರ್ವಸಮ್ಮತ ಉತ್ತರ ನೀಡುವುದು ಕಷ್ಟ. ಕೆಲವು ವಿಶೇಷಜ್ಞರು ವ್ಯಕ್ತಿಯ ಮನೋಧರ್ಮಗಳ (ಆಟಿಟ್ಯೂಡ್) ಸಂಘಟನೆಯನ್ನು ಮೌಲ್ಯ ಎಂದು ಉಲ್ಲೇಖಿಸುವುದೂ ಉಂಟು. ಅದೇನೇ ಇರಲಿ ವರ್ತನೆಯ ನೈತಿಕತೆಗೆ ಸಂಬಂಧಿಸಿದಂತೆ ಯಾವುದು ಸರಿ ಯಾವುದು ತಪ್ಪು, ಜೀವನದಲ್ಲಿ ಯಾವುದಕ್ಕೆ ಎಷ್ಟು ಪ್ರಾಮುಖ್ಯ ನೀಡಬೇಕು, ಜೀವನದ ಗುರಿ ಏನಾಗಿರಬೇಕು ಮುಂತಾದವನ್ನು ನಿರ್ಧರಿಸುವುದರಲ್ಲಿ ನಾವು ಒಪ್ಪಿಕೊಂಡಿರುವ ಮೌಲ್ಯಗಳು ನಿರ್ಣಾಯಕ ಪಾತ್ರ ವಹಿಸುತ್ತವೆ ಎಂಬುದರಲ್ಲಿ ಸಂಶಯವಿಲ್ಲ. ಆದರೂ ಬಹುತೇಕ ಸನ್ನಿವೇಶಗಳಲ್ಲಿ ನಾವು ಕೈಗೊಳ್ಳುವ ಮೌಲ್ಯಾಧಾರಿತ ತೀರ್ಮಾನಗಳು ವ್ಯಕ್ತಿನಿಷ್ಠವೂ ಸಾಪೇಕ್ಷವೂ ಆಗಿರುತ್ತವೆ. (ಅ) ನಿರ್ದಿಷ್ಟ ಅಂಶಕ್ಕೆ ನಾವು ಎಷ್ಟು ಬೆಲೆ ಕೊಡುತ್ತೇವೆ ಎಂಬುದನ್ನು ಸೂಚಿಸುವ ಪರಿಮಾಣಾತ್ಮಕ ಆಯಾಮ, (ಆ) ನಿರ್ದಿಷ್ಟ ಮೌಲ್ಯಕ್ಕೆ ನಾವು ಎಷ್ಟು ಬದ್ಧರಾಗಿರುತ್ತೇವೆ ಎಂಬುದನ್ನು ಸೂಚಿಸುವ ಗುಣಾತ್ಮಕ ಆಯಾಮ ಮತ್ತು (ಇ) ನಮ್ಮಲ್ಲಿ ಅಂತಸ್ಥವಾಗಿರುವ ಮೌಲ್ಯಗಳ ನಡುವಿನ ಸಂಬಂಧವನ್ನು ಸೂಚಿಸುವ ಅಂತರ್- ಸಂಬಂಧ ಆಯಾಮ – ಈ ಮೂರು ಆಯಾಮಗಳು ನಮ್ಮಲ್ಲಿ ಅಂತಸ್ಥವಾಗಿರುವ ಮೌಲ್ಯಗಳಿಗೆ ಇರುತ್ತವೆ.

ಮತ್ತಷ್ಟು ಓದು »