ವಿಷಯದ ವಿವರಗಳಿಗೆ ದಾಟಿರಿ

Posts tagged ‘ಕಲಾವಿದ’

8
ಸೆಪ್ಟೆಂ

ಕುರಿಯ ವಿಠಲ ಶಾಸ್ತ್ರಿ ಆತ್ಮಕಥನ: ತಲೆಗೆ ಬಿದ್ದ ತಾಳ

“ನನ್ನಿಂದಾದಷ್ಟು ಸಮಯ… ಈ ಜೀವನ ನನ್ನನ್ನು ಕುಣಿಸಿದಷ್ಟು ದಿನವೂ ಕುಣಿಯುತ್ತೇನೆ…. ಕುಣಿಯುತ್ತಲಿರುತ್ತೇನೆ…”  ಎಂದು ತೀರ್ಮಾನಿಸಿ ಯಕ್ಷಗಾನ ಕಲೆಗಾಗಿ ಅವಿರತವಾಗಿ ದುಡಿದು  18.11.1972  ರಂದು ಬಣ್ಣ ಕಳಚಿ  ಯಕ್ಷಗಾನ ರಂಗವನ್ನು ತಬ್ಬಲಿಯನ್ನಾಗಿ ಮಾಡಿ ಯಕ್ಷಮಾತೆಯ ಪಾದವನ್ನು ಸೇರಿದ ಕುರಿಯ ವಿಠಲ ಶಾಸ್ತ್ರಿಯವರು ಜನಿಸಿದ್ದು ಕಳೆದ ಶತಮಾನದ ದಿನಾಂಕ 8.9.1912  ರಂದು .ಯಕ್ಷಗಾನ ರಂಗದಲ್ಲಿ ಎಲ್ಲೂ ಸಲ್ಲುವ ಯಾವ ವೇಷಕ್ಕೂ ಸೈ ಎನಿಸಿಕೊಳ್ಳುತ್ತಿದ್ದ  ಒಬ್ಬ ಪ್ರಬುದ್ಧ ಹಾಗೂ ಮೇರು ಕಲಾವಿದರಾಗಿದ್ದ  ದಿವಂಗತ ಕುರಿಯ ವಿಠಲ ಶಾಸ್ತ್ರಿಯವರು  ತಮ್ಮ ವಯಸ್ಸಿನ ನೂರನೇ ಸಂವತ್ಸರಕ್ಕೆ ಕಾಲಿಡುತ್ತಿರುವ ಈ ಸಂದರ್ಭದಲ್ಲಿ ಖ್ಯಾತ ಪತ್ರಕರ್ತ ಪದ್ಯಾಣ ಗೋಪಾಲಕೃಷ್ಣ (ಪದ್ಯಾಣ ಎಂದೊಡನೆ ತಕ್ಷಣ ನೆನಪಿಗೆ ಬರುವುದು ಯಕ್ಷಗಾನ .ಕನ್ನಡ ನಾಡಿನ ರಾಜಧಾನಿ ಬೆಂಗಳೂರು ನಗರದಲ್ಲಿ  ಮೊದಲ ಬಾರಿಗೆ ಯಕ್ಷಗಾನದ ಕೇಳಿ ಬಡಿದವರು ಎಂದು 1955ನೇ ಇಸವಿಯಲ್ಲಿ ಗುರುತಿಸಿಕೊಂಡವರು ಕಳೆದ ಶತಮಾನದ ಮಂಗಳೂರಿನ ಹಿರಿಯ ಪತ್ರಕರ್ತ ಹಾಗೂ  ಅಂಕಣಕಾರ  ಪದ್ಯಾಣ ಗೋಪಾಲಕೃಷ್ಣ  ( ಪ.ಗೋ. 1928 -1997 ).)ರವರರು ನಿರೂಪಣೆ ಗೈದಿರುವ ಕುರಿಯ  ವಿಠಲ ಶಾಸ್ತ್ರಿಯವರ ಆತ್ಮ ಕಥನ “ಬಣ್ಣದ ಬದುಕು”  ಇಂದು ಯಕ್ಷಗಾನ ಅಭಿಮಾನಿಗಳಿಗಾಗಿ ನಿಲುಮೆಯಲ್ಲಿ…

—————-

ಮತ್ತಷ್ಟು ಓದು »

11
ಜುಲೈ

ಕಲಾವಿದರೊಳಗಿನ ವಿವಾದಗಳ ಬ್ರಾಂಡ್ ಅಂಬಾಸಿಡರ್

ಮಂಸೋರೆ ಬೆಂಗಳೂರು

ಈ ಲೇಖನವನ್ನು ನಾನೊಬ್ಬ ಕಲಾವಿದ ಎಂಬ ದೃಷ್ಟಿಕೋನದಿಂದಲೇ ಓದುತ್ತಾರೆ ಎಂಬ ಅರಿವಿನೊಂದಿಗೆ ಬರೆಯುತ್ತಿದ್ದೇನೆ.

ನಾನೀಗ ಬರೆಯುತ್ತಿರುವ ವಿಷಯದ  ವ್ಯಕ್ತಿಯ ಕುರಿತಂತೆ ಸಾಕಷ್ಟು ಚರ್ಚೆಗಳಾಗಿವೆ. ಈ ಲೇಖನ ಆ ಚರ್ಚೆ, ಲೇಖನಗಳನ್ನು ವಿರೋದಿಸುವುದೂ ಅಲ್ಲ, ಸಮರ್ಥಿಸಿಕೊಳ್ಳುವುದು ಅಲ್ಲ. ಇದು ನನ್ನ ಸ್ವವಿಚಾರವಷ್ಟೇ.
ಹುಸೇನ್ ನನಗೆ ಈ ಕಲಾವ್ಯಾಸಂಗಕ್ಕೆ ಬರುವ ಮೊದಲಿಂದಲೂ ಗೊತ್ತು. ಈ ವ್ಯಕ್ತಿಯ ಜೊತೆ ಜೊತೆಗೆ ನನಗೆ ಗೊತ್ತಿದ್ದ ಇನ್ನಿತರ ಕಲಾವಿದರೆಂದರೆ ಕೆ.ಕೆ.ಹೆಬ್ಬಾರ್ ಮತ್ತು ರವಿವರ್ಮ ಬಿ.ಕೆ.ಎಸ್.ವರ್ಮ. ಈ ನಾಲ್ವರ ಪರಿಚಯ ನನಗೆ ನಾಲ್ಕು ವಿಭಿನ್ನ ಕಾರಣಗಳಿಂದಾಗಿ ಪರಿಚಿತರಾಗಿದ್ದರು, ಹುಸೇನ್ ಪತ್ರಿಕೆಗಳಲ್ಲಿ ಆಗಾಗ ಬರುತ್ತಿದ್ದ ಸುದ್ದಿಗಳಿಂದಾಗಿ, ಬಿ.ಕೆ.ಎಸ್ ವರ್ಮ ದೂರದರ್ಶನದಲ್ಲಿ ಚಿತ್ರ ಗೀತೆ(ಹಿನ್ನಲೆಯಲ್ಲಿ ಪರಿಸರ ಕುರಿತಾದ ಹಾಡು ಬರುತ್ತಿದ್ದರೆ ಅದಕ್ಕೆ ತಕ್ಕಂತೆ ಪ್ರಾತ್ಯಕ್ಷಿಕೆ ನೀಡುವಂತೆ ಚಿತ್ರ ರಚಿಸುತ್ತಿದ್ದರು), ಕೆ.ಕೆ ಹೆಬ್ಬಾರ್ ಕುರಿತಂತೆ ಪಠ್ಯವೊಂದಿದ್ದ ಕಾರಣದಿಂದಾಗಿ, ರವಿವರ್ಮ ಹಾಡಿನ ಮೂಲಕ(ರವಿವರ್ಮನ ಕುಂಚದ ಕಲೆ). ಇವಿಷ್ಟೇ , ಇವರಿಷ್ಟೇ ನನಗೆ ಗೊತ್ತಿದ್ದ ಕಲಾವಿದರು ಕಲಾಕೃತಿಗಳು.  ಮತ್ತಷ್ಟು ಓದು »