ಕುರಿಯ ವಿಠಲ ಶಾಸ್ತ್ರಿ ಆತ್ಮಕಥನ : ಬಣ್ಣದ ಬದುಕು 5 – ಕರ್ಣನಿಂದಾಗಿ ಕಣ್ಣೀರು ಬಂತು ….
ಅಡವಿ ಗಿಡ ಮರ ಕಲ್ಲು ನೋಡಿದರೆಯರಸಿನದ ಪುಡಿಯಂತೆ ತೋರುತಿದೆ ತಮ್ಮಾ! ಒಡಲೊಳುರಿ ತಾಪ ಬೇರ್ವಿಡಿದು ಜಠರಾಗ್ನಿಯಲಿ ನಡುಗುತಿದೆ ಕೈ ಕಾಲು ತಮ್ಮಾ” ಎಂದು ಸೀತೆಯನ್ನು ಕಳೆದುಕೊಂಡ ಶ್ರೀರಾಮ ಹಂಬಲಿಸುತ್ತಾನೆ. ಲಕ್ಷ್ಮಣನೊಡನೆ ಅಳಲನ್ನು ತೋಡಿಕೊಳ್ಳುತ್ತಾನೆ. ಪದ್ಯದ ತರುವಾಯ, ರಾಮನ ಉದ್ವೇಗದ ಸಂಪೂರ್ಣ ಚಿತ್ರಣವಾಗಬೇಕಾದರೆ- ತಾಳಮದ್ದಳೆಯ (ಕುಳಿತು ಮಾತನಾಡುವ- ವೇಷವಿಲ್ಲದ) ರಾಮ ಬಹಳ ಮಾತುಗಳನ್ನು ಖರ್ಚು ಮಾಡಬೇಕಾಗುತ್ತದೆ. ಭಾವನೆಗಳು ಮೂಡದೆ ಬರಿಯ ಮಾತುಗಳನ್ನೇ ಹೊರಡಿಸುವವನು ರಾಮನಾಗಿದ್ದರೆ, ಪ್ರೇಕ್ಷಕರಲ್ಲಿ ಪ್ರತಿಕ್ರಿಯೆ ಮೂಡಿಸುವ ಪ್ರಯತ್ನ ನಿರರ್ಥಕ ಎನಿಸುತ್ತದೆ,
ಶೃಂಗಾರ ರಸದ ನಿರೂಪಣೆ ಇರುವ ಪಾತ್ರಗಳಲ್ಲೂ ಅಂತಹುದೇ ಅನುಭವ. ”ಕಾಮಸನ್ನಿಭ ಮಾತ ಕೇಳೂ! ನಿನ್ನೊಳ್! ಕಾಮಿಸಿ ಕಾಮಿಸಿ ಬಂದೆ ಕೃಪಾಳೂ!!” ಎಂದು ಮಾಯಾ ಶೂರ್ಪನಖಿಯು ಲಕ್ಷ್ಮಣನೊಡನೆ ನುಡಿದ ಸನ್ನಿವೇಶದಲ್ಲಿ ಬರಿ ಮಾತಿನ ಬರಡುತನವನ್ನೂ ಕಂಡುಕೊಳ್ಳುವಂತಾಗಿತ್ತು.
ಅತೃಪ್ತಿ
ವೀರರಸದ ಸಂದರ್ಭಗಳಲ್ಲೂ ಅದೇ ತೊಡಕು, ಒಂದೆರಡು ಸನ್ನೆಗಳು, ಎರಡು ಮೂರು ಮಾತುಗಳಲ್ಲಿ ಪರಿಣಾಮಕಾರಿಯಾಗಿ ಮಾಡಬಹುದಾದ ಕೆಲಸಕ್ಕೆ ಬಹಳ ಮಾತುಗಳನ್ನೇ ವೆಚ್ಚ ಮಾಡಿದ ತರುವಾಯವೂ ‘ಇದು ಸಾಕಾಗಲಿಲ್ಲ!’ ಎಂದು ಅತೃಪ್ತಿ.
”ಅರ್ಥ ಉದ್ದವಾಯಿತು.” ಎಂಬ ಮಾತು ಕೇಳಿ ಬಂದರೆ ಅದರಲ್ಲಿ ಆಶ್ಚರ್ಯವೇನು?
ಇಂತಹುದೇ ವಿಚಾರಗಳ ಚರ್ಚೆ ಜಿಜ್ಞಾಸೆಗಳು ಗೆಳೆಯರೊಂದಿಗೆ ಆಗಾಗ ನಡೆಯುತ್ತಿದ್ದವು.
ಮತ್ತಷ್ಟು ಓದು 
ಕುರಿಯ ವಿಠಲ ಶಾಸ್ತ್ರಿ ಆತ್ಮಕಥನ : ಬಣ್ಣದ ಬದುಕು 4 – ಐದು ವರ್ಷಗಳಲ್ಲಿ ಆಸ್ತಿ ಅಡವು
1931ರ ಆರ್ಥಿಕ ಮುಗ್ಗಟ್ಟಿನ ದಿನಗಳ ನೆನಪಿರುವವರು ಬಹಳ ಮಂದಿ. ನಮ್ಮ ನಾಟಕ ಮಂಡಳಿಯಿಂದಾಗಿ ನನಗೂ ಆ ದಿನಗಳ ನೆನಪು ಉಳಿದಿದೆ; ಅಂದಿನ ಮತ್ತು ಇಂದಿನ ಪರಿಸ್ಥಿತಿಗಳ ವ್ಯತ್ಯಾಸವನ್ನು ಜ್ಞಾಪಿಸಿಕೊಳ್ಳುವ ಹಾಗಾಗಿದೆ.
ಆಗ ಊರಿಂದೂರಿಗೆ ಸಾಮಾನು ಸಾಗಿಸುವ ಲಾರಿಗಳ ಸೌಕರ್ಯವಿರಲಿಲ್ಲ. ಸಾಗಾಟಕ್ಕೆ ಸಿಗುತ್ತಿದ್ದುದು ಎತ್ತಿನ ಗಾಡಿಗಳು ಮಾತ್ರ.
ದಶಾವತಾರದ ಮೇಳಗಳಲ್ಲಿ ಇರುತ್ತಿದ್ದ ಸಾಮಾನುಗಳನ್ನು ಸಾಗಿಸಲು ಬಹಳ ಕಷ್ಟವಾಗುತ್ತಿರಲಿಲ್ಲ. ಪರದೆ ಇತ್ಯಾದಿಗಳ ತೊಡಕು ಇಲ್ಲದ ಕಾರಣ, ಕೆಲವು ಪೆಟ್ಟಿಗೆಗಳನ್ನು ತಲೆ ಹೊರೆಯಲ್ಲಿ ಸಾಗಿಸಲು ಸಾಧ್ಯವಾಗುತ್ತಿತ್ತು. ಸಂಚಾರಕ್ಕೆ ರಸ್ತೆಯ ಅನುಕೂಲವಿದ್ದರೆ ಒಂದು ಗಾಡಿಯನ್ನು ಬಾಡಿಗೆಗೆ ಹಿಡಿದರೆ ಸಾಕಾಗುತ್ತಿತ್ತು. ಊರು ಸೇರಿದ ತರುವಾಯ ಡೇರೆಯ ವ್ಯವಸ್ಥೆಯೂ ಬೇಕಾಗುತ್ತಿರಲಿಲ್ಲ. ಹೆಚ್ಚಾಗಿ ಬಯಲಾಟಗಳೇ ಅಂದು ನಡೆಯುತ್ತಿದ್ದುವು.
ಆದರೆ ಯಕ್ಷಗಾನ ನಾಟಕ ಕಂಪೆನಿಯ ಹೊಣೆ ಹೊತ್ತ ನಮ್ಮ ಪರಿಸ್ಥಿತಿ ಅದಕ್ಕೆ ತೀರಾ ವ್ಯತಿರಿಕ್ತವಾಗಿತ್ತು.
ದೃಶ್ಯಾವಳಿಗಳಿಗಾಗಿ ಪರದೆಗಳು, ‘ಪಕ್ಕದ ರೆಕ್ಕೆ’ಗಳು, ಆಸನ- ಪೀಠೋಪಕರಣಗಳು, ಕಿರೀಟ-ಆಯುಧ, ಅಲಂಕಾರಗಳು ಇವೆಲ್ಲವುಗಳ ಜೊತೆಗೆ ಸಾಕಷ್ಟು ಫರ್ನಿಚರ್ಗಳನ್ನು ಸಾಗಿಸಲು ಎಂಟು ಹತ್ತು ಗಾಡಿಗಳನ್ನು ಅನುವು ಮಾಡಿಕೊಳ್ಳಬೇಕಾಗುತ್ತಿತ್ತು. ಎಷ್ಟೇ ಜನಪ್ರಿಯತೆ ಗಳಿಸಿದರೂ, ಕೆಲವು ದಿನಗಳ ತರುವಾಯ ಊರು ಬದಲಾಯಿಸಲೇಬೇಕಾಗುವುದಷ್ಟೇ.
ಊರಿಂದೂರಿಗೆ
ಬಟ್ಟೆಯ ಡೇರೆಗೆ ಬೇಕಾದ ಅನುಕೂಲ ನಮಗೆ ಇರಲಿಲ್ಲ. ಆದುದರಿಂದ ಪ್ರತಿಯೊಂದು ಊರಿನಲ್ಲೂ ”ಥಿಯೇಟರ್” ಕಟ್ಟಿಸಬೇಕಾಗುತ್ತಿತ್ತು. ಸರಾಸರಿ ಒಂದು ಸಾವಿರ ರೂ. ಅದಕ್ಕಾಗಿ ವೆಚ್ಚವಾಗುತ್ತಿತ್ತು.
ಮತ್ತಷ್ಟು ಓದು 
ಕುರಿಯ ವಿಠಲ ಶಾಸ್ತ್ರಿ ಆತ್ಮಕಥನ: ತಲೆಗೆ ಬಿದ್ದ ತಾಳ
“ನನ್ನಿಂದಾದಷ್ಟು ಸಮಯ… ಈ ಜೀವನ ನನ್ನನ್ನು ಕುಣಿಸಿದಷ್ಟು ದಿನವೂ ಕುಣಿಯುತ್ತೇನೆ…. ಕುಣಿಯುತ್ತಲಿರುತ್ತೇನೆ…” ಎಂದು ತೀರ್ಮಾನಿಸಿ ಯಕ್ಷಗಾನ ಕಲೆಗಾಗಿ ಅವಿರತವಾಗಿ ದುಡಿದು 18.11.1972 ರಂದು ಬಣ್ಣ ಕಳಚಿ ಯಕ್ಷಗಾನ ರಂಗವನ್ನು ತಬ್ಬಲಿಯನ್ನಾಗಿ ಮಾಡಿ ಯಕ್ಷಮಾತೆಯ ಪಾದವನ್ನು ಸೇರಿದ ಕುರಿಯ ವಿಠಲ ಶಾಸ್ತ್ರಿಯವರು ಜನಿಸಿದ್ದು ಕಳೆದ ಶತಮಾನದ ದಿನಾಂಕ 8.9.1912 ರಂದು .ಯಕ್ಷಗಾನ ರಂಗದಲ್ಲಿ ಎಲ್ಲೂ ಸಲ್ಲುವ ಯಾವ ವೇಷಕ್ಕೂ ಸೈ ಎನಿಸಿಕೊಳ್ಳುತ್ತಿದ್ದ ಒಬ್ಬ ಪ್ರಬುದ್ಧ ಹಾಗೂ ಮೇರು ಕಲಾವಿದರಾಗಿದ್ದ ದಿವಂಗತ ಕುರಿಯ ವಿಠಲ ಶಾಸ್ತ್ರಿಯವರು ತಮ್ಮ ವಯಸ್ಸಿನ ನೂರನೇ ಸಂವತ್ಸರಕ್ಕೆ ಕಾಲಿಡುತ್ತಿರುವ ಈ ಸಂದರ್ಭದಲ್ಲಿ ಖ್ಯಾತ ಪತ್ರಕರ್ತ ಪದ್ಯಾಣ ಗೋಪಾಲಕೃಷ್ಣ (ಪದ್ಯಾಣ ಎಂದೊಡನೆ ತಕ್ಷಣ ನೆನಪಿಗೆ ಬರುವುದು ಯಕ್ಷಗಾನ .ಕನ್ನಡ ನಾಡಿನ ರಾಜಧಾನಿ ಬೆಂಗಳೂರು ನಗರದಲ್ಲಿ ಮೊದಲ ಬಾರಿಗೆ ಯಕ್ಷಗಾನದ ಕೇಳಿ ಬಡಿದವರು ಎಂದು 1955ನೇ ಇಸವಿಯಲ್ಲಿ ಗುರುತಿಸಿಕೊಂಡವರು ಕಳೆದ ಶತಮಾನದ ಮಂಗಳೂರಿನ ಹಿರಿಯ ಪತ್ರಕರ್ತ ಹಾಗೂ ಅಂಕಣಕಾರ ಪದ್ಯಾಣ ಗೋಪಾಲಕೃಷ್ಣ ( ಪ.ಗೋ. 1928 -1997 ).)ರವರರು ನಿರೂಪಣೆ ಗೈದಿರುವ ಕುರಿಯ ವಿಠಲ ಶಾಸ್ತ್ರಿಯವರ ಆತ್ಮ ಕಥನ “ಬಣ್ಣದ ಬದುಕು” ಇಂದು ಯಕ್ಷಗಾನ ಅಭಿಮಾನಿಗಳಿಗಾಗಿ ನಿಲುಮೆಯಲ್ಲಿ…
—————-
ಕಲಾವಿದರೊಳಗಿನ ವಿವಾದಗಳ ಬ್ರಾಂಡ್ ಅಂಬಾಸಿಡರ್
–ಮಂಸೋರೆ ಬೆಂಗಳೂರು
ಈ ಲೇಖನವನ್ನು ನಾನೊಬ್ಬ ಕಲಾವಿದ ಎಂಬ ದೃಷ್ಟಿಕೋನದಿಂದಲೇ ಓದುತ್ತಾರೆ ಎಂಬ ಅರಿವಿನೊಂದಿಗೆ ಬರೆಯುತ್ತಿದ್ದೇನೆ.
ನಾನೀಗ ಬರೆಯುತ್ತಿರುವ ವಿಷಯದ ವ್ಯಕ್ತಿಯ ಕುರಿತಂತೆ ಸಾಕಷ್ಟು ಚರ್ಚೆಗಳಾಗಿವೆ. ಈ ಲೇಖನ ಆ ಚರ್ಚೆ, ಲೇಖನಗಳನ್ನು ವಿರೋದಿಸುವುದೂ ಅಲ್ಲ, ಸಮರ್ಥಿಸಿಕೊಳ್ಳುವುದು ಅಲ್ಲ. ಇದು ನನ್ನ ಸ್ವವಿಚಾರವಷ್ಟೇ.
ಹುಸೇನ್ ನನಗೆ ಈ ಕಲಾವ್ಯಾಸಂಗಕ್ಕೆ ಬರುವ ಮೊದಲಿಂದಲೂ ಗೊತ್ತು. ಈ ವ್ಯಕ್ತಿಯ ಜೊತೆ ಜೊತೆಗೆ ನನಗೆ ಗೊತ್ತಿದ್ದ ಇನ್ನಿತರ ಕಲಾವಿದರೆಂದರೆ ಕೆ.ಕೆ.ಹೆಬ್ಬಾರ್ ಮತ್ತು ರವಿವರ್ಮ ಬಿ.ಕೆ.ಎಸ್.ವರ್ಮ. ಈ ನಾಲ್ವರ ಪರಿಚಯ ನನಗೆ ನಾಲ್ಕು ವಿಭಿನ್ನ ಕಾರಣಗಳಿಂದಾಗಿ ಪರಿಚಿತರಾಗಿದ್ದರು, ಹುಸೇನ್ ಪತ್ರಿಕೆಗಳಲ್ಲಿ ಆಗಾಗ ಬರುತ್ತಿದ್ದ ಸುದ್ದಿಗಳಿಂದಾಗಿ, ಬಿ.ಕೆ.ಎಸ್ ವರ್ಮ ದೂರದರ್ಶನದಲ್ಲಿ ಚಿತ್ರ ಗೀತೆ(ಹಿನ್ನಲೆಯಲ್ಲಿ ಪರಿಸರ ಕುರಿತಾದ ಹಾಡು ಬರುತ್ತಿದ್ದರೆ ಅದಕ್ಕೆ ತಕ್ಕಂತೆ ಪ್ರಾತ್ಯಕ್ಷಿಕೆ ನೀಡುವಂತೆ ಚಿತ್ರ ರಚಿಸುತ್ತಿದ್ದರು), ಕೆ.ಕೆ ಹೆಬ್ಬಾರ್ ಕುರಿತಂತೆ ಪಠ್ಯವೊಂದಿದ್ದ ಕಾರಣದಿಂದಾಗಿ, ರವಿವರ್ಮ ಹಾಡಿನ ಮೂಲಕ(ರವಿವರ್ಮನ ಕುಂಚದ ಕಲೆ). ಇವಿಷ್ಟೇ , ಇವರಿಷ್ಟೇ ನನಗೆ ಗೊತ್ತಿದ್ದ ಕಲಾವಿದರು ಕಲಾಕೃತಿಗಳು. ಮತ್ತಷ್ಟು ಓದು 




