ವಿಷಯದ ವಿವರಗಳಿಗೆ ದಾಟಿರಿ

Posts tagged ‘ಕಲ್ಲಡ್ಕ ಪ್ರಭಾಕರ್ ಭಟ್ಟ’

7
ಜೂನ್

ಇದು ವಿಮರ್ಶೆಯಲ್ಲ ನನ್ನನಿಸಿಕೆ…

-ಕೆ.ಗುರುಪ್ರಸಾದ್

yADSಇತ್ತೀಚೆಗೆ ಒಂದು ವಿಷಯದ ಬಗ್ಗೆ ನಾ ಮೆಚ್ಚುವ ಇಬ್ಬರು ಲೇಖಕರ ಆರ್ಟಿಕಲ್ ಓದಿದೆ. ಒಂದು ಪ್ರತಾಪ್ ಸಿಂಹ ಅವರ ” ಮೇನಕೆ ಬಂದು ಕುಣಿಯುವವರೆಗೆ ವಿಶ್ವಾಮಿತ್ರ ಮಹಾತಪಸ್ವಿಯಾಗಿದ್ದ, ಬಿಜೆಪಿ ಕಥೆಯೂ ಹಾಗೇಯೇ ಆಯಿತು ” ಇನ್ನೊಂದು ಚಕ್ರವರ್ತಿ ಸೂಲಿಬೆಲೆಯವರ ” ಎರಡು ರಾಷ್ಟ್ರೀಯ ಪಕ್ಷ ಎಷ್ಟೊಂದು ಅಂತರ “. ಮೊದಲೇ ಹೇಳಿದಂತೆ ಎರಡೂ ಕರ್ನಾಟಕದಲ್ಲಿನ ಬಿಜೆಪಿಯ ಸೋಲಿನ ಕುರಿತಾಗೇ ಇರೋದು. ಪ್ರತಾಪ್ ಸಿಂಹ ಅವರು ಯಾವ ರೀತಿ ಸೋಲನುಭವಿಸಿತು ಅನ್ನೋದನ್ನ ವಿಶ್ಲೇಷಣೆ ಮಾಡಿದ್ದರೆ, ಸೂಲಿಬೆಲೆಯವರು ಎರಡು ಪಕ್ಷಗಳ ನಡುವಿನ ವ್ಯತ್ಯಾಸವನ್ನ ಜನರ ಮುಂದಿಡುವ ಪ್ರಯತ್ನ ಮಾಡಿದ್ದಾರೆ. ಈ ಎರಡು ಲೇಖನಗಳನ್ನ ಓದಿದ ನಂತರ ನನಗೆ ನನ್ನ ಅನಿಸಿಕೆಯನ್ನು ಹೇಳೋ ಮನಸಾಯಿತು ಹಾಗಾಗಿ ಈ ಸಣ್ಣ ಲೇಖನ…ಮೊದಲೇ ಶೀರ್ಷಿಕೆಯ ರೂಪದಲ್ಲಿ ಹೇಳಿದ್ದೇನೆ, ಇದು ವಿಮರ್ಶೆಯಲ್ಲ ಯಾಕೆಂದರೆ ಇಬ್ಬರೂ ತಮ್ಮ ಬರಹಗಳಿಂದ ಜನರ ಮಂತ್ರಮುಗ್ಧರನ್ನಾಗಿಸಿದವರು. ಅವರ ಕುರಿತಾಗಿ ವಿಮರ್ಶೆ ಮಾಡುವ ಯೋಗ್ಯತೆ ಎಳ್ಳಷ್ಟೂ ನನ್ನಲ್ಲಿಲ್ಲ ಅನ್ನೋದು ನನ್ನ ಧೃಡವಾದ ನಂಬಿಕೆ. ಹಾಗಾಗಿ ಇಲ್ಲಿರೋದು ಅದೇ ವಿಷಯದ ಕುರಿತಾದ ನನ್ನ ಅನಿಸಿಕೆ ಅಷ್ಟೇ..

ಮೊದಲಿಗೆ ಪ್ರತಾಪ್ ಸಿಂಹರ ಲೇಖನವನ್ನ ನೋಡೋದಾದ್ರೆ… ಬಿಜೆಪಿಯ ಸೋಲಿನ ಕುರಿತಾದ ಪ್ರತಾಪ್ ಅವರ ಅನಾಲಿಸಿಸ್ ಸೂಪರ್… ಎರಡು ಮಾತಿಲ್ಲದೆ ಒಪ್ಪಿಕೊಳ್ಳಬಹುದಾದ ರೀತಿಯಲ್ಲಿ ಪ್ರಸ್ತುತ ಪಡಿಸಿದ್ದಾರೆ. ಅಧಿಕಾರದ ಮೆಟ್ಟಲೇರುವ ಹೊತ್ತಲ್ಲಿ ಆದ ಸಣ್ಣ ಸಣ್ಣ ತಪ್ಪುಗಳು ಮುಂದೆ ಯಾವ ರೀತಿ ಯುಡಿಯೂರಪ್ಪ ಅವರನ್ನ ಕಾಡತೊಡಗಿತು, ಯಾವ ರೀತಿ ಹೈಕಮಾಂಡ್ ನ ನಡೆಗಳು ಯಡಿಯೂರಪ್ಪ ಅವರನ್ನ ತಪ್ಪು ದಾರಿ ಹಿಡಿಯುವಂತೆ ಪ್ರೇರೇಪಿಸಿತು ಅನ್ನೋದರ ಸ್ಪಷ್ಟ ಚಿತ್ರಣ ಕೊಡುತ್ತಾ ಹೋಗುತ್ತಾರೆ. ಆಪರೇಶನ್ ಕಮಲ, ರೆಡ್ಡಿಗಳ ದರ್ಪ, ಸುಷ್ಮಾರವರ ಮಾತುಗಳು, ಅನಂತ್ ಕುಮಾರರ ಒಳಸಂಚು ಹೀಗೆ…ಏಕಾಂಗಿತನವನ್ನ ಅನುಭವಿಸಿದ ಯಡಿಯೂರಪ್ಪನವರು ಎಡವಿದರು ಅಂದರು. ಇದೆಲ್ಲವನ್ನೂ ಒಪ್ಪೋಣ ಆದರೆ ಸ್ವಲ್ಪ ಹಿಂದಿನದನ್ನು ಮೆಲುಕು ಹಾಕಿದರೆ ಇದೇ ಪ್ರತಾಪ್ ಸಿಂಹ ಅವರು ಯಡಿಯೂರಪ್ಪ ಅವರನ್ನ ತಮ್ಮ ಎರಡು ಮೂರು ಲೇಖನದಲ್ಲಿ ಸರಿಯಾಗಿ ತರಾಟೆಗೆ ತೆಗೆದುಕೊಂಡಿದ್ದರು…( ೨೦೦೮ ರ ಲೇಖನಗಳು.. ಅವರ ಬ್ಲಾಗ್ ನಲ್ಲಿ ಈಗಲೂ ಲಭ್ಯವಿದೆ) ವರ್ಗಾವಣೆಯ ಕುರಿತಾಗಿ, ನಿವೃತ್ತಿ ವಯಸ್ಸನ್ನು ಏರಿಸಿದ್ದುದರ ಕುರಿತಾಗಿ ಹೀಗೆ ಹಲವು ವಿಷಯಗಳಲ್ಲಿ ನೇರವಾಗಿ ದೋಷಾರೋಪಣೆ ಮಾಡಿದ್ದ ಪ್ರತಾಪರಿಗೆ ಈಗ ಯುಡಿಯೂರಪ್ಪನವರ ತಪ್ಪುಗಳು ಕೂಡ ಬಿಜೆಪಿಯ ಸೋಲಿಗೆ ಒಂದು ಕಾರಣ ಅಂತನ್ನಿಸದೇ ಇರೋದು ನನಗೇಕೋ ಸರಿ ಅನ್ನಿಸಲಿಲ್ಲ. ಯಡಿಯೂರಪ್ಪನವರ ಪುತ್ರ ಪ್ರೇಮದ ಬಗ್ಗೆ ಟೀಕಿಸಿದ್ದ ಪ್ರತಾಪರು ಯಾಕೋ ಇಲ್ಲಿ ಅದನ್ನ ಉಲ್ಲೇಖಿಸಲಿಲ್ಲ. ಬಿಜೆಪಿಯಿಂದ ಹೊರ ಬಂದ ಮೇಲೆ ಯಡಿಯೂರಪ್ಪನವರ ನಡೆಯ ಬಗೆಗೆ ಯಾವುದೇ ರೀತಿಯ ಮಾತುಗಳನ್ನಾಡದೇ “ಬಿಜೆಪಿ” ಯಡಿಯೂರಪ್ಪನವರ ಬಳಿ ಹೋಗಿ ಅವರನ್ನ ಕರೆತರುವ ಪ್ರಯತ್ನ ಮಾಡಬೇಕು ಅಂದರು.

ಮತ್ತಷ್ಟು ಓದು »