ವಿಷಯದ ವಿವರಗಳಿಗೆ ದಾಟಿರಿ

Posts tagged ‘ಕಾಂಗ್ರೆಸ್ಸ’

6
ಫೆಬ್ರ

ದೇಶ – ಭಾಷೆಗಳ ನಡುವೆ

– ರಾಕೇಶ್ ಶೆಟ್ಟಿ

ಆಗ ದೇಶದಲ್ಲಿ ಆಹಾರ ಸಮಸ್ಯೆಯಿತ್ತು.ಅಂತ ಕ್ಲಿಷ್ಟಕರ ಸಮಯದಲ್ಲಿ ಪ್ರಧಾನಿಯಾಗಿದ್ದವರು ಲಾಲ್ ಬಹದ್ದೂರ್ ಶಾಸ್ತ್ರಿಗಳು.ಆಹಾರದ ಸಮಸ್ಯೆಗೆ ಅಮೇರಿಕಾ PL480 (food for peace) ಕಾರ್ಯಕ್ರಮದಲ್ಲಿ ಕಳಿಸುತಿದ್ದ ಗೋಧಿ ತುಂಬಾ ಕಳಪೆ ಮಟ್ಟ ಮುಟ್ಟಿದಾಗ,ಅಂತ ಗೋಧಿಯನ್ನ ಬಳಸುವುದನ್ನ ವಿರೋಧಿಸಿದ ಶಾಸ್ತ್ರಿಗಳು ‘ಇಂತ ಅವಮಾನದ ಬದಲು ಒಪ್ಪೊತ್ತು ಉಪವಾಸ ಇರೋಣ’ ಅಂತ ದೇಶದ ಜನಕ್ಕೆ ಕರೆ ಕೊಟ್ಟಿದ್ದರು,ಹಾಗೆ ಕರೆಕೊಡುವ ಮೊದಲೇ ಅವರ ಮನೆಯಲ್ಲಿ ರಾತ್ರಿ ಅಡಿಗೆ ಮಾಡುವಂತಿಲ್ಲ ಅಂತ ಹೇಳಿದ್ದರು! , ‘ನೀ ಬಯಸುವ ಬದಲಾವಣೆ ನಿನ್ನಿಂದಲೇ ಆಗಲಿ’ ಅನ್ನುವ ಗಾಂಧೀ ಮಾತನ್ನ ಪಾಲಿಸಿ ತೋರಿಸಿದ್ದರು ಶಾಸ್ತ್ರಿಗಳು!

ಆರ್.ಎಸ್.ಎಸ್ ನ ಎರಡನೇ ಸರಸಂಘಚಾಲಕರಾದ ಶ್ರೀ ಮಾಧವ ಸದಾಶಿವ ಗೋಲ್ವಾಲ್ಕರ್ ಅವರ “ಚಿಂತನಗಂಗಾ” ಪುಸ್ತಕದ ಸುತ್ತ ಅಂತರ್ಜಾಲದಲ್ಲಿ ನಡೆಯುತ್ತಿರುವ ಚರ್ಚೆ ಫ಼ಾಲೋ ಮಾಡುವಾಗ “ಸಂಘದಲ್ಲಿ ವಿಚಾರ ಸ್ವಾತಂತ್ರವಿದೆಯೇ” ಎನ್ನುವ ಪದ ಬಳಕೆ ನೋಡಿ ನಗು ಬಂತು.ಅಸಲಿಗೆ ಯಾವುದೇ ಸಂಘಟನೆ,ಸ್ವಸ್ಥ ಸಮಾಜದಲ್ಲಿ ವಿಚಾರ ಸ್ವಾತಂತ್ರ್ಯವಿರಲೇಬೇಕು ಅದು ಇರಲಿ ಅಂತ ಕೇಳುವುದು ತಪ್ಪೇನು ಅಲ್ಲ.ಆದರೆ ವಿಚಾರ ಸ್ವಾತಂತ್ರ್ಯದ ಬಗ್ಗೆ ಕೇಳಿದವರು ಯಾರು ಅನ್ನುವುದು ಮುಖ್ಯವಾಗುತ್ತದಲ್ಲವೇ? ವೇದಾಂತ ಇರೋದು ಬೇರೆಯವ್ರಿಗೆ ಹೇಳೋಕ್ ಮಾತ್ರ ಅಂದುಕೊಂಡವರಿಗಾಗಿಯೇ ಗಾಂಧೀಜಿಯವರು ‘ನೀ ಬಯಸುವ ಬದಲಾವಣೆ ನಿನ್ನಿಂದಲೇ ಆಗಲಿ’  ಅಂದಿದ್ದು.

ಮತ್ತಷ್ಟು ಓದು »