ಬೇಕಾಗಿರುವುದು ರಾಜಕೀಯ ಅಸ್ತಿತ್ವವೇ ವಿನಃ ಕೇವಲ ಭ್ರಷ್ಟಚಾರ ನಿಗ್ರಹವಲ್ಲ
– ನವೀನ್ ನಾಯಕ್
ಅಣ್ಣಾ ನೇತೃತ್ವದ ಜನಲೋಕಪಾಲ ಹೋರಾಟದಿಂದ ಪ್ರಸಿದ್ದರಾದ ಅರವಿಂದ್ ಕೇಜ್ರಿವಾಲ್ ದೆಹಲಿ ಗದ್ದುಗೆಗೇರಿ ಬದಲಾವಣೆಯ ಪರ್ವ ತರಲು ಹೊರಟಿದ್ದಾರೆ. ಸರಕಾರ ರಚಿಸಲು ಜನರ ಅಭಿಪ್ರಾಯ ಸಂಗ್ರಹಿಸಿದ ಕಾರಣಕ್ಕೆ ಹಗಲು ರಾತ್ರಿ ಮಾಧ್ಯಮಗಳು ತಲೆದೂಗಿದ್ದೇ ತೂಗಿದ್ದು. ಎಲ್ಲಾ ಮಾಧ್ಯಮಗಳಲ್ಲಿ ಒಂದೇ ಕೂಗು. ಇದೇ ನೈಜ ಪ್ರಜಾಪ್ರಭುತ್ವ!. ಈ ಮಾಧ್ಯಮಗಳ ಕಣ್ಣಿಗೆ ಮೂರು ರಾಜ್ಯಗಳಲ್ಲಿ ಭರ್ಜರಿ ಜಯಗಳಿಸಿದ ಮತ್ತು ದೆಹಲಿಯಲ್ಲಿ ಮೊದಲ ಸ್ಥಾನ ಪಡೆದ ಬಿಜೆಪಿ ನೈಜ ಪ್ರಜಾಪ್ರಭುತ್ವದಲ್ಲಿ ಗೆದ್ದಿದ್ದಲ್ಲ ! ಪಕ್ಷ ಕಟ್ಟಿ ಒಂದು ವರ್ಷದಲ್ಲೇ ಎರಡನೆಯ ಸ್ಥಾನಕ್ಕೆ ಬರುವುದು ಅಚ್ಚರಿಯೇ, ಅವರ ಪ್ರಯತ್ನಕ್ಕೆ ನಾವು ಶಹಭಾಸ್ ಹೇಳಲೇ ಬೇಕು. ದೇಶದ ಭವಿಷ್ಯಕ್ಕೆ ಉತ್ತಮ ಆಡಳಿತ ನೀಡಲು ಆಪ್ ಪಕ್ಷವೇ ಮುಂಚೂಣಿಗೆ ಬರಬೇಕೆಂಬ ನಿರ್ಧಾರವನ್ನು ಕೇಜ್ರಿವಾಲ್ ಯಶಸ್ವಿಯಾಗಿ ಯುವಕರ ಮನಸ್ಸಲ್ಲಿ ತುಂಬಿದ್ದರು. ರಾಜಕೀಯ ಮಾಡುವುದು ಹೇಗೆ ಅಂತ ನಾವು ಕಲಿಸುತ್ತೇವೆ, ನಮಗೆ ಕೆಂಪು ಗೂಟದ ಕಾರು ಬೇಕಿಲ್ಲ, ನಮಗೆ ಭದ್ರತೆ ಬೇಕಿಲ್ಲ, ಸರಕಾರಿ ಭವ್ಯ ಮನೆಯೂ ಬೇಕಿಲ್ಲ ಹೀಗೆ ಒಂದರ ಮೇಲೊಂದಂತೆ ಘೋಷಿಸತೊಡಗಿದರು. ಯುವಕರ ಉತ್ಸಾಹ ಇಮ್ಮಡಿಯಾಗಿತ್ತು. ತಮ್ಮ ನಾಯಕನಿಗೆ ಈ ಜಗದಲ್ಲಿ ಬೇರಾರು ಸರಿಸಾಟಿ ಇಲ್ಲವೆಂಬತೆ ವರ್ತಿಸತೊಡಗಿದರು. ಅಣ್ಣಾ ಹಜಾರೆಯವರು ಯಾವಾಗ ತನ್ನ ಹೆಸರನ್ನು ರಾಜಕೀಯಕ್ಕೆ ದುರುಪಯೋಗ ಪಡಿಸಿಕೊಳ್ಳಬೇಡಿ ಎಂದರೋ ಕೇಜ್ರಿವಾಲ್ ಅಭಿಮಾನಿಗಳು ಬುಸುಗುಡತೊಡಗಿದರು. ಸಾಲದೇ ಐಎಸಿ ಚಳುವಳಿಯ ಹಣದ ಲೆಕ್ಕ ಕೇಳಿದರೋ ಎಲ್ಲ ಅಭಿಮಾನಿಗಳು ಸಿಡಿದೆದ್ದರು. ಅಣ್ಣಾ ಮುದುಕರಾಗಿದ್ದಾರೆ ಹುಚ್ಚರಂತೆ ವರ್ತಿಸುತಿದ್ದಾರೆ ಎಂಬ ಕ್ಷುಲ್ಲಕ ಮಾತುಗಳನ್ನು ಸಾಮಾಜಿಕ ತಾಣದ ತುಂಬ ಪಸರಿಸತೊಡಗಿದರು. ಯಾರ ಏಳಿಗೆಗೆ ಯಾರು ಕಾರಣರಾಗಿದ್ದರೋ ಅವರು ಮದುಕರಾಗಿದ್ದರು ಹುಚ್ಚರಾಗಿದ್ದರು.
ಕೇಜ್ರಿವಾಲ್ ಮತ್ತು ಮೋದಿ – ಹೀಗೊಂದು ಮುನ್ನೋಟ
– ಗಣೇಶ್ ಕೆ. ದಾವಣಗೆರೆ
ರಾಹುಲ ಗಾಂಧೀ ಮತ್ತು ಅರವಿಂದ ಕೇಜ್ರಿವಾಲ್ ಒಂದೇ ವಯಸ್ಸಿನವರು. ಇಬ್ಬರಿಗೂ ಎಷ್ಟು ವ್ಯತ್ಯಾಸಗಳಿವೆ. ಒಬ್ಬವ ತೀರಾ ಎಳಸು. ಇನ್ನೊಬ್ಬವ ಜನರ ಗಮನವನ್ನ ತನ್ನ ಮಾತುಗಳತ್ತ ಸೆಳೆದ ಯುವಕ. ಹೊಸ ಹೊಸ ಚಿಂತನೆಗಳನ್ನ ಹರಿಯಬಿಟ್ಟವ. ಆಡಳಿತದಲ್ಲಿ ಪಳಗಿದ ಮೋದಿಗೆ ರಾಹುಲ ಯಾವ ರೀತಿಯಲ್ಲೂ ಸರಿಸಮನಲ್ಲ. ಜೊತೆಗೆ, ಪ್ರತಿಸ್ಪರ್ಧಿಯೂ ಅಲ್ಲ. ರಾಹುಲಗಾಂಧೀ ವಯಸ್ಸಿನವನೇ ಆದ ಕೇಜ್ರಿವಾಲ್ ಯಾವ ರಾಜಕೀಯ ಅನುಭವವೂ ಇಲ್ಲದೇ ಪಕ್ಷವೊಂದನ್ನ ಕಟ್ಟಿ ಆರು ತಿಂಗಳಲ್ಲಿ ಆಧಿಕಾರದ ಹೊಸ್ತಿಲತ್ತ ತಂದು ನಿಲ್ಲಿಸುವುದು ಸಾಮಾನ್ಯ ಸಂಗತಿಯಲ್ಲ.
ನಮ್ಮೆಲ್ಲ ಪೂರ್ವಾಗ್ರಹಗಳನ್ನ ಬದಿಗಿಟ್ಟು ಈ ಯಶಸ್ಸನ್ನ ಗಮನಿಸಬೇಕಾದ ಅಗತ್ಯವಿದೆ. ಕೆಲವರಿಗೆ ಕೇಜ್ರಿವಾಲನನ್ನ ಹೊಗಳಿದರೆ, ಮೆಚ್ಚಿಕೊಂಡರೆ, ಮೋದಿ ಗತಿಯೇನು ಅನ್ನುವ ಚಿಂತೆ. ದೆಹಲಿಯಲ್ಲಿ ಕಾಂಗ್ರೇಸ್ ವಿರೋಧಿ ಅಲೆ ಇತ್ತು ಅನ್ನೋದು ಸರ್ವವಿದಿತವಾದ ಸಂಗತಿ. ಆದರೆ, ಆ ಅಧಿಕಾರ ವಿರೋಧಿ ಅಲೆಯ ಸಂಪೂರ್ಣ ಲಾಭ ಪಡೆಯಲಿಕ್ಕೆ ಬಿಜೆಪಿಗೆ ಏಕೆ ಸಾಧ್ಯವಾಗಲಿಲ್ಲ? ಮೋದಿಯೂ ಕೂಡಾ ಬಂದು ಹೋಗಿದ್ದರಲ್ಲ? ಕಾಂಗ್ರೇಸ್ ಆಡಳಿತ ವಿರೋಧಿ ಅಲೆಯಿರುವಾಗ ಮೋದಿಯವರ ಭಾಷಣಕ್ಕೆ ಸರಳ ಬಹುಮತ ಕೊಡಿಸುವಷ್ಟೂ ಶಕ್ತಿ ಸಾಮರ್ಥ್ಯಗಳಿಲ್ಲವೇ? ಹಾಗಾದರೆ, ಬಿಜೆಪಿ ಎಡವಿದ್ದೆಲ್ಲಿ?
ಮತ್ತಷ್ಟು ಓದು 
ಸರ್ವಾಧಿಕಾರಿ ಧೋರಣೆಯ ಪ್ರಗತಿಪರರು ಮತ್ತು ಮೋದಿ
– ಪ್ರಸನ್ನ,ಬೆಂಗಳೂರು
ಅಹಮದಾಬಾದಿನ ಮೆಟ್ರೊಪಾಲಿಟನ್ ನ್ಯಾಯಾಲಯ ಪ್ರಗತಿಪರರಿಗೆ ಒಂದು ತಡೆಯಲಾರದ ಆಘಾತ ನೀಡಿದೆ. ಈ ಆಘಾತವನ್ನು ಸಹಿಸಿಕೊಂಡು ಈಗಲಾದರೂ ಈ ಬುದ್ದಿಗೇಡಿಗಳು ತಮ್ಮ ಮಾರ್ಗ ಸರಿ ಪಡಿಸಿಕೊಳ್ಳುತ್ತರೇನೋ ಎಂಬ ನಮ್ಮ ನಿರೀಕ್ಷೆ ಹುಸಿಯಾಗುವಂತಿದೆ, ಯಥಾ ಪ್ರಕಾರ ಅವರು ತಮ್ಮ ಪ್ರಜಾಪ್ರಭುತ್ವ ವಿರೋಧಿ ಧೋರಣೆಯಲ್ಲೇ ಇನ್ನೂ ಬಿದ್ದು ಒದ್ದಾಡುತ್ತಿದ್ದಾರೆ. ನಾನಂತೂ ಇವರನ್ನು ಪ್ರಜಾಪ್ರಭುತ್ವ ನ್ಯಾಯಾಂಗ ವ್ಯವಸ್ಥೆ ಮತ್ತು ಭಾರತದ ಕಾನೂನಗಳನ್ನು ಗೌರವಿಸದ ದೇಶದ್ರೋಹಿಗಳೆಂದೆ ಪರಿಗಣಿಸುತ್ತೇನೆ. ಹೇಗೆಂದಿರಾ?
ನೀವೆ ಗಮನಿಸಿ ೨೦೦೨ದಿಂದೀಚೆಗೆ ಇವರು ಹಾಡುತ್ತಿದ್ದುದು ಒಂದೇ ರಾಗ ಅದು ಮೋದಿ ನರಹಂತಕ ಎಂಬುದು, ಇವರ ಅಧಿನಾಯಕಿಯಂತೂ ಆತನನ್ನು ಸಾವಿನ ವ್ಯಾಪಾರಿಯೆಂದು ಜರೆದು ನಾಲಿಗೆ ಕುಲ ಹೇಳುತ್ತದೆಂಬುವುದನ್ನು ತೋರಿಸಿಕೊಟ್ಟುಬಿಟ್ಟಿದ್ದಲ್ಲದೇ ತನ್ನ ನಾಲಿಗೆಯನ್ನು ತಾನೆ ಕಚ್ಚಿ ಕೊಳ್ಳುವಂತಾಯ್ತು. ಗುಜರಾತಿನ ಜನರು ಸತತ ೩ ಬಾರಿ ಇವರ ತಲೆಯ ಮೇಲೆ ಕಲ್ಲು ಹಾಕಿದ್ದೂ ಆಯ್ತು. ಆದರೂ ನಮ್ಮ ಕರ್ನಾಟಕದ ಪ್ರಗತಿಪ್ರರು ಮಾತ್ರ ಇನ್ನೂ ಆ ರೋಗದಿಂದ ಹೊರಬರಲೇ ಇಲ್ಲ.
ಎಎಪಿ ಗೆಲುವಿನ ಗುಂಗಿನಲ್ಲಿ ‘ಪೊರಕೆ’ ಹಿಡಿಯಲು ಹೊರಟವರು
– ರಾಕೇಶ್ ಶೆಟ್ಟಿ
ಮಿನಿ ಲೋಕಸಭಾ ಚುನಾವಣೆ ಎಂದೇ ಪರಿಗಣಿತವಾಗಿದ್ದ ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ ಹೊರಬಿದ್ದಿದೆ. ಸಮೀಕ್ಷೆಯಂತೆಯೇ ೪ ರಾಜ್ಯಗಳಲ್ಲಿ ಬಿಜೆಪಿ ಮತ್ತು ೧ ರಾಜ್ಯದಲ್ಲಿ ಕಾಂಗ್ರೆಸ್ಸ್ ತನ್ನ ಮುದ್ರೆಯೊತ್ತಿದೆ.ಆದರೆ,ಆಮ್ ಆದ್ಮಿ ಪಕ್ಷಕ್ಕೆ ೨೮ ಸ್ಥಾನಗಳನ್ನು ನೀಡುವ ಮೂಲಕ ಅಚ್ಚರಿಯ ಫಲಿತಾಂಶ ನೀಡಿದ್ದು ದೆಹಲಿಯ ಮತದಾರರು.
ಎಲ್ಲಾ ಚುನಾವಣಾ ಪೂರ್ವ ಸಮೀಕ್ಷೆಗಳಲ್ಲಿ ಎಎಪಿ ಪಕ್ಷ ೧೦-೧೫ ಸೀಟು ಪಡೆಯಬಹುದು ಮತ್ತು ಆ ಮೂಲಕ ಸರ್ಕಾರ ರಚಿಸುವಲ್ಲಿ ನಿರ್ಣಾಯಕ ಪಾತ್ರವಹಿಸಬಹುದು ಅನ್ನುವ ಅಭಿಪ್ರಾಯಗಳೇ ಬಂದಿತ್ತು.ಆದರೆ ಮತದಾರಪ್ರಭು ಕೇಜ್ರಿವಾಲ್ ನೇತೃತ್ವದ ಎಎಪಿ ಪಕ್ಷದೆಡೆಗೆ ಹೆಚ್ಚು ಉದಾರಿಯಾಗಿದ್ದಾನೆ.’ರಾಜಕಾರಣಿಗಳೆಲ್ಲ ಭ್ರಷ್ಟರು’ ಅನ್ನುತಿದ್ದ ಕೇಜ್ರಿವಾಲ್ ತಾವೇ ಒಂದು ರಾಜಕೀಯ ಪಕ್ಷ ಸ್ಥಾಪಿಸುತ್ತೇವೆ ಅಂತ ಹೊರಟು ನಿಂತು ಪ್ರಸಕ್ತ ರಾಜಕೀಯ ಪಕ್ಷಗಳಿಗಿಂತ ವಿಭಿನ್ನವಾಗಿ ಅದನ್ನು ಕಟ್ಟಿಕೊಳ್ಳುತ್ತ ಹೊರಟಾಗ ಯಾವ ರಾಜಕಾರಣಿಗಳು ಅದನ್ನು ಲೆಕ್ಕಕ್ಕೇ ತೆಗೆದುಕೊಳ್ಳಲಿಲ್ಲ. ದೆಹಲಿಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ಸ್ ನಡುವೆ ನೇರಾನೇರ ಹಣಾಹಣಿ ನಡೆಯಲಿದೆ ಅನ್ನುವಷ್ಟು ನಿರ್ಲಕ್ಷ್ಯದಲ್ಲಿದ್ದ ಶೀಲಾ ದಿಕ್ಷೀತ್ ಕೂಡ,ಕೇಜ್ರಿವಾಲ್ ಮುಂದೆ ಸೋತು ಸುಣ್ಣವಾಗಿದ್ದಾರೆ.
ತೀರಾ ತುಘಲಕ್ ದರ್ಬಾರ್ ಬೇಡ್ರೀ ಸಿಧ್ಧರಾಮಣ್ಣ…
– ಕೆ.ಎಸ್ ರಾಘವೇಂದ್ರ ನಾವಡ
ತೀರಾ ಬೇಸರಗೊ೦ಡು ರಾಜ್ಯದ ಮುಖ್ಯ ಮ೦ತ್ರಿಗಳಿಗೆ ಈ ಮಾತನ್ನು ಹೇಳಿತಿದ್ದೇನೆ ! ಸಮಾಜವಾದಿ ಹಿನ್ನೆಲೆ.. ಹೋರಾಟದ ಹಿನ್ನೆಲೆ.. ಎಲ್ಲದ್ದಕ್ಕಿ೦ತಲೂ ಕರ್ನಾಟಕದ ಗ್ರಾಮೀಣ ಸೊಗಡಿನಿ೦ದ ಮೇಲೆದ್ದು ಬ೦ದವರು ಸಿಧ್ಧರಾಮಯ್ಯ. ಆದರೆ ಹಿ೦ದಿನ ಸಮಾಜವಾದಿ ಹಿನ್ನೆಲೆಗಳಿ೦ದ ಬ೦ದ ಮುಖ್ಯಮ೦ತ್ರಿಗಳಿಗೂ (ಮಾನ್ಯ ಹೆಗಡೇಜಿ, ಬ೦ಗಾರಪ್ಪನವರು, ಜೆ.ಹೆಚ್ ಪಟೇಲರು)ನಮ್ಮ ಸಿಧ್ಧರಾಮಯ್ಯನವರಿಗೂ ಅಜಗಜಾ೦ತರ ವ್ಯತ್ಯಾಸ…ಇವರು ಇದೇ ಥರ ಮು೦ದುವರಿದಲ್ಲಿ ಮು೦ಬರುವ ಲೋಕಸಭಾ ಚುನಾವಣೆಯಲ್ಲಿ ಕಾ೦ಗ್ರೆಸ್ ಕರ್ನಾಟಕದಲ್ಲಿ ನೆಲಕಚ್ಚುವುದ೦ತೂ ಖಚಿತ!
ಪಾಪ.. ಏನೂ ಮಾಡೋದಕ್ಕಾಗೋದಿಲ್ಲ.. ನಮಗೆ ಸಿಧ್ಧರಾಮಯ್ಯನವರ ಅಸಹಾಯಕತೆಯ ಅರಿವು ಇದೆ.ಆದರೆ ಕೈಯಲ್ಲಿ ಆಗದಿದ್ದವರ ಪರಿಸ್ಥಿತಿ ಏನೂ ಸಿಧ್ಧರಾಮಯ್ಯನವರದಲ್ಲ! ಹಾಗ೦ತ ತೀರಾ ಸಾರಾಸಗಟಾಗಿ ತಳ್ಳಿ ಹಾಕುವ೦ತಹ ವ್ಯಕ್ತಿತ್ವವೂ ಸಿಧ್ಧರಾಮಯ್ಯನವರದಲ್ಲ.ಆದರೆ ಒ೦ದ೦ತೂ ಖಚಿತ! ಏನೋ ಆಗಿದೆ… ಒ೦ದರ ಮೇಲೊ೦ದು ಎಡವಟ್ಟುಗಳನ್ನೇ ಸೃಷ್ಟಿಸಿಕೊಳ್ಳುತ್ತಿರುವ ಸಿಧ್ಧರಾಮಯ್ಯನವರು ಕೊನೇ ಪಕ್ಷ ತಮ್ಮ ನಿರ್ಧಾರಗಳಿಗೆ ಜೋತು ಬೀಳುವ೦ತಹ ಯಡಿಯೂರಪ್ಪನವರ ಛಾತಿಯನ್ನೂ ತೋರಿಸುತ್ತಿಲ್ಲ!
ಆರ೦ಭದಲ್ಲೇನೋ ಶೂರತನ ಮೆರೆದ ಅಶ್ವವೀರ.. ಕುದುರೆಗೆ ಸುಸ್ತಾದ೦ತೆ ತಾನೂ ನಡೆಯುತ್ತ ಸಾಗಿದ.. ಎನ್ನುವ ಹಳೇ ಮಾತೀಗ ಸಿಧ್ಧರಾಮಯ್ಯನವರ ವಿಚಾರದಲ್ಲಿ ಖಚಿತವಾಗುತ್ತಿದೆ! ಚುನಾವಣಾ ಪ್ರಣಾಳಿಕೆಯ ಅರ್ಧದಷ್ಟು ಅ೦ಶಗಳನ್ನು ಅನುಷ್ಠಾನಕ್ಕೆ ತರುವುದು ಹೆಚ್ಚುಗಾರಿಕೆಯೇ ಆದರೂ ಕೊಟ್ಟ ಮಾತುಗಳಾದರೂ ಎ೦ಥಾದ್ದಾಗಿದ್ದವು ಎನ್ನುವುದು ಬಹಳ ಮುಖ್ಯ!
ಮತಾಂಧ ಭಯೋತ್ಪಾದಕರೊಡನೆ ವೇದಿಕೆ ಹಂಚಿಕೊಂಡರೂ ಇವರು “ಜಾತ್ಯಾತೀತ”ರೇ!!
– ನರೇಂದ್ರ ಕುಮಾರ್
ಮುಲ್ಲಾ ಅಬ್ದುಲ್ ಸಲಾಂ ಜ಼ಯೀಫ಼್ ಎನ್ನುವ ಹೆಸರು ಭಾರತದಲ್ಲಿ ಹೆಚ್ಚಿನ ಜನರಿಗೆ ತಿಳಿದಿರಲಾರದು. 1990ರ ದಶಕದಲ್ಲಿ ಆಫ಼್ಘಾನಿಸ್ತಾನದಲ್ಲಿ ತಾಲಿಬಾನ್ ಸ್ಥಾಪನೆಯಾಯಿತು. ಆಫ಼್ಘಾನಿಸ್ತಾನ ಮತ್ತು ಪಾಕಿಸ್ತಾನಗಳಲ್ಲಿ ತಾಲಿಬಾನ್ ನಡೆಸಿರುವ ಮತಾಂಧ ಕೆಲಸಗಳು ಜಗತ್ಪ್ರಸಿದ್ಧ. ಆಫ಼್ಘಾನಿಸ್ತಾನದ ಹಜ಼ರತ್ ಪ್ರದೇಶದಲ್ಲಿರುವ ಬಾಮ್ವಾಮ್ ಕಣಿವೆಯಲ್ಲಿದ್ದ ೬ನೇ ಶತಮಾನದ ಬೃಹತ್ ಬುದ್ಧ ಭಗವಾನನ ಪ್ರತಿಮೆಗಳನ್ನು 2001ರಲ್ಲಿ ಭಗ್ನಗೊಳಿಸಿದಾಗ, ತಾಲಿಬಾನ್ ಹೆಸರು ಜಗತ್ತಿನಲ್ಲೆಲ್ಲಾ ಪ್ರಸಿದ್ಧವಾಯಿತು. ಜಗತ್ತಿನೆಲ್ಲೆಡೆಯಿಂದ ಬುದ್ಧನ ಪ್ರತಿಮೆಗಳನ್ನು ಹಾಳುಗೆಡವಿದ ಕಾರ್ಯವನ್ನು ಖಂಡಿಸಲಾಯಿತು. ಆದರೆ, ತಾಲಿಬಾನ್ ಅದಕ್ಕೆಲ್ಲಾ ತಲೆಕೆಡಿಸಿಕೊಳ್ಳಲಿಲ್ಲ. ಮೇಲೆ ಹೇಳಿದ “ಮುಲ್ಲಾ ಅಬ್ದುಲ್ ಸಲಾಂ ಜ಼ಯೀಫ಼್” ಎನ್ನುವವರು ಈ ತಾಲಿಬಾನ್ನ ಸಂಸ್ಥಾಪಕರಲ್ಲಿ ಒಬ್ಬರು. ತಾಲಿಬಾನ್ ಸಂಸ್ಥಾಪನೆ ಮಾಡಿದ ಮುಲ್ಲ ಮೊಹಮ್ಮದ್ ಓಮರ್ ಹೆಸರು ಸ್ವಲ್ಪಮಟ್ಟಿಗೆ ಎಲ್ಲರಿಗೂ ತಿಳಿದಿರುತ್ತದೆ. ಈ ಮುಲ್ಲಾ ಅಬ್ದುಲ್ ಸಲಾಮ್ ಜ಼ಯೀಫ಼್, ಮುಲ್ಲಾ ಓಮರ್^ನ ಬಲಗೈ ಭಂಟನಾಗಿದ್ದ. 2001ರಲ್ಲಿ ಅಮೆರಿಕಾದಲ್ಲಿ ಭಯೋತ್ಪಾದಕ ಕೃತ್ಯ ನಡೆಸಿದ ನಂತರದಲ್ಲಿ, ಒಸಾಮಾ ಬಿನ್ ಲಾಡೆನ್ನಿಗೆ ಆಫ್ಘಾನಿಸ್ತಾನದಲ್ಲಿ ಆಶ್ರಯ ಒದಗಿಸಿದವರು ಇವರೇ!
ಮೋದಿ ಫ್ಯಾಕ್ಟರ್ : ಒಮರ್ ಅಬ್ದುಲ್ಲಾರ ಮಾತುಗಳು ಯುಪಿಎ ದಿಗಿಲಿನ ಕನ್ನಡಿಯೇ?
ಮೂಲ : ಸಂಜಯ್ ಸಿಂಗ್
ಅನುವಾದ : ಪ್ರಶಾಂತ್ .ಕೆ
“ನನಗನ್ನಿಸುತ್ತೆ, ನಾವೇನಾದರೂ( ಯು.ಪಿ.ಎ. ಅಂಗಪಕ್ಷಗಳು) ‘ಮೋದಿ ಫ಼್ಯಾಕ್ಟರ್’ ನ್ನು ನಿರ್ಲಕ್ಷಿಸಿದರೆ ಅದು ಮೂರ್ಖತನವಾಗುತ್ತೆ; ಅಲ್ಲದೆ ಅದೊಂದು ಅಪಾಯಕಾರಿ ತಪ್ಪು ಕೂಡ..”
ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ‘ಒಮರ್ ಅಬ್ದುಲ್ಲಾ’, ‘ಹಿಂದುಸ್ತಾನ್ ಟೈಮ್ಸ್’ ಗೆ ನೀಡಿದ ಸಂದರ್ಶನದಲ್ಲಿ ಆಡಿದ ಮಾತುಗಳಿವು. ದೇಶದ ಅತ್ಯಂತ ಸಮಸ್ಯಾತ್ಮಕ ರಾಜ್ಯದ, ಅದರಲ್ಲೂ ಆ ರಾಜ್ಯದ ಆಗು- ಹೋಗುಗಳು ಇಡೀ ದೇಶವನ್ನ ತಲ್ಲಣಗೊಳಿಸುತ್ತಿರುವ ಸಂದರ್ಭದಲ್ಲಿ, ಆ ರಾಜ್ಯದ ಮುಖ್ಯಮಂತ್ರಿಯ ಮಾತುಗಳನ್ನು ಹಗುರವಾಗಿ ಕಾಣುವ ಹಾಗಿಲ್ಲ. ‘ಒಮರ್’ ‘ರಾಹುಲ್ ಗಾಂಧಿ’ಯವರ ಆಪ್ತ ಮಿತ್ರ, ಅಲ್ಲದೆ ಅವರ ತಂದೆ ‘ಫ಼ರೂಕ್ ಅಬ್ದುಲ್ಲ’ ಯು.ಪಿ.ಎ. ಸರಕಾರದಲ್ಲಿ ಮಂತ್ರಿ ಕೂಡ ಹೌದು; ಈ ಹಿನ್ನೆಲೆಯಲ್ಲಿ ಅವರ ಹೇಳಿಕೆಗಳು ಇನ್ನೂ ಮಹತ್ವ ಪಡೆದುಕೊಳ್ಳುತ್ತವೆ, ‘ರಾಹುಲ್ ಗಾಂಧಿ’ ಉತ್ತರ ಪ್ರದೇಶ, ರಾಮ್ ಪುರದಲ್ಲಿ ಹೇಳಿದ ” ೨೦೧೪ ರಲ್ಲಿ ಕೇಂದ್ರದಲ್ಲಿ ಯುವಶಕ್ತಿಯ ಸರಕಾರ ಅಧಿಕಾರಕ್ಕೆ ಬರುತ್ತದೆ, ಅದು ದೇಶವನ್ನೇ ಬದಲಾಯಿಸಬಲ್ಲುದು” ಎಂಬ ಮಾತುಗಳನ್ನು ಒಮರ್ ಪೂರ್ತಿ ಒಪ್ಪಿದಂತೆ ಕಾಣುವುದಿಲ್ಲ; ನಿಮಗೆ ಗೊತ್ತಿರಲಿ, ರಾಹುಲ್ ಮತ್ತು ಒಮರ್ ಇಬ್ಬರೂ ಒಂದೇ ವರ್ಷದಲ್ಲಿ ಜನಿಸಿದವರು ಮತ್ತು ಇಬ್ಬರಿಗೂ ಏಗ ೪೩ ವರ್ಷ ವಯಸ್ಸು. ಅನೇಕ ಕಾಂಗ್ರೆಸ್ ನಾಯಕರಂತೆ, ರಾಹುಲ್ ಗಾಂಧಿಯ ಈ ಭಾಷಣದ ಬಳಿಕ ಮುಂದಿನ ಸರಕಾರ ನಡೆಸಲು ಆತನೇ ಸೂಕ್ತ ವ್ಯಕ್ತಿ ಎಂದು ಅಭಿಪ್ರಾಯ ವ್ಯಕ್ತಪಡಿಸದ ಕಾರಣ , ನ್ಯಾಷನಲ್ ಕಾನ್ಫ಼ರೆನ್ಸ್ ನ ನಾಯಕನ ಮಾತುಗಳನ್ನು ವಿಶೇಷವಾಗಿ ಪರಿಗಣಿಸಬೇಕು.
ಸುದ್ಧಿ ಮಾಡುವವರಲ್ಲಿ ಶುದ್ಧಿ ಇಲ್ಲವಾದರೆ. . .
– ಡ್ಯಾನಿ ಪಿರೇರಾ,ಹಳ್ಳಿಮೈಸೂರು
ಇಂದು ವಾರ್ತಾ ವಾಹಿನಿಗಳು ಯಥಾತ್ಶಿರ್ಘ ಸುದ್ಧಿಗಳನ್ನು ಜಗತ್ತಿನ ಮೂಲೆ ಮೂಲೆಗೂ ಅತಿ ವೇಗದಲ್ಲಿ ಮುಟ್ಟಿಸುವ ಕೆಲಸ ಮಾಡುತ್ತಿವೆ. ಇದರಿಂದ ಉಪಯೋಗವಿದೆ ಎನ್ನುವುದು ನಿಜವೇ ಆದರೂ ಸುದ್ಧಿ ಹೇಳುವ ಮನಸ್ಸುಗಳ ಹಿಂದೆ ಶುದ್ಧಿ ಇಲ್ಲದಿರುವುದು ಗೋಚರವಾಗುತ್ತಿದೆ. ಹಾಗಾಗಿ ಅವುಗಳ ಹಿಂದಿರುವ ಉದ್ದೇಶ ಪ್ರಶ್ನಾರ್ಹವಾಗುತ್ತಿದೆ. ಒಂದು ಕಾಲವಿತ್ತು ಒಬ್ಬ ವ್ಯಕ್ತಿಗೆ ಅಪಮಾನವೆನಿಸುವ ಸುದ್ಧಿಯೊಂದು ಪತ್ರಿಕೆ ಅಥವಾ ದೃಶ್ಯ ಮಾಧ್ಯಮಗಳಲ್ಲಿ ಬಂದರೆ ಅದರಿಂದ ವ್ಯಕ್ತಿಗೆ ಅದು ನಿಜವಿರಲಿ, ಸುಳ್ಳಿರಲಿ ಒಂದೋ ಅವನಿಗದು ಆಘಾತ ತರುವಂತಿತ್ತು ಅಥವಾ ಆತ ತನ್ನನ್ನು ತಾನು ಆತ್ಮ ವಿಮರ್ಶೆಗೆ ಒಳಪಡಿಸುವ ಸಾಧನವಾಗಿರುತ್ತಿತ್ತು. ಅದು ವ್ಯಕ್ತಿಯೊಬ್ಬ ಸಾರ್ವಜನಿಕ ಜೀವನದಲ್ಲಿರುವವನಾಗಿದ್ದರೆ ಕೂಡಲೇ ರಾಜೀನಾಮೆ ನೀಡಿ ಅದರಿಂದ ಬಿಡುಗಡೆ ಹೊಂದುವ ಸಾಕ್ಷಿಪ್ರಜ್ಞೆ ಆತನನ್ನು ಎಚ್ಚರಿಸುತ್ತಿತ್ತು. ಆದರೆ ಕಾಲ ಬದಲಾಗಿದೆ. ಅಕ್ಷರ ಮಾಧ್ಯಮಗಳಿಗಿಂತ ದೃಶ್ಯ ಮಾಧ್ಯಮಗಳು ಅದರಲ್ಲೂ ಸುದ್ಧಿ ವಾಹಿನಿಗಳು ಇನ್ನಿಲ್ಲದ ವೇಗದಲ್ಲಿ ಕಾರ್ಯಪ್ರವೃತ್ತವಾಗಿವೆ. ಕ್ಷಣಾರ್ಧದಲ್ಲಿ ಅದು ಅಸಲಿಯೋ ನಕಲಿಯೋ ಅಂತೂ ಸುದ್ಧಿಗಳು ಬಿತ್ತರವಾಗುತ್ತವೆ. ಆದರೆ ಅಪರಾಧಿ ಸ್ಥಾನದಲ್ಲಿರುವ ವ್ಯಕ್ತಿಯ ಮೇಲೆ ಮಾತ್ರ ಅದು ಯಾವುದೇ ಪರಿಣಾಮ ಬೀರುವಂತೆ ಕಾಣುತ್ತಿಲ್ಲ. ಏಕೆಂದರೆ ಸುದ್ಧಿ ಮಾಡುವವನ ಮತ್ತು ಸುದ್ಧಿಯಾಗುವವನಲ್ಲಿ ಚಿತ್ತಶುದ್ಧಿಯಿಲ್ಲದಿರುವುದು! ಸುದ್ಧಿ ಮಾಡುವ ದಾವಂತದಲ್ಲಿ ಅದರಿಂದಾಗುವ ಪರಿಣಾಮವನ್ನು ಸುದ್ಧಿ ಮಾಡುವವ ಯೋಚಿಸುತ್ತಿಲ್ಲವೋ ಅಥವಾ ಅದು ತನಗೆ ಸಂಬಂದಿಸಿದ್ದಲ್ಲ ಎನ್ನುವ ತಾತ್ಸಾರ ಮನೋಭಾವವೋ ಗೊತ್ತಿಲ್ಲ ಅಂತೂ ಅನಾಹುತ ಮಾಡುವುದರಲ್ಲೇ ಆನಂದ ಕಾಣುತ್ತಿವೆ ನಮ್ಮ ಅನೇಕ ದೃಶ್ಯ ಮಾಧ್ಯಮಗಳು.
ಕೆಲ ವರ್ಷಗಳ ಹಿಂದೆ ಕನ್ನಡದ ಸುದ್ಧಿ ಮಾಧ್ಯಮವೊಂದು ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿಕೊಂಡ ಮಕ್ಕಳು ತೀವ್ರ ಅಸ್ವಸ್ಥವೆಂದು ‘ಬ್ರೇಕಿಂಕ್ ನ್ಯೂಸ್’ ಹಾಕಿತು. ಲಸಿಕೆ ಹಾಕಿಸಿಕೊಂಡ ಮಕ್ಕಳ ಪೋಷಕರು ಆತಂಕದಿಂದ ಆಸ್ಪತ್ರೆ ಸುತ್ತ ಜಮಾವಣೆಗೊಂಡರು. ಜನರಿಗೆ ಅಲ್ಲಿನ ಆಸ್ಪತ್ರೆ ಮತ್ತು ಅದರ ಸಿಬ್ಬಂದಿ ದಾಳಿಯ ವಸ್ತುವಾದರು. ಆದರೆ ಅದರ ನೈಜ ವಿಚಾರವೆಂದರೆ ಅಸ್ವಸ್ಥಗೊಂಡ ಒಂದೆರಡು ಮಕ್ಕಳು ಸೇವಿಸಿದ ಆಹಾರ Food Poison ಅಗಿದ್ದು . ಆ ಸುದ್ಧಿ ಮಾಧ್ಯಮ ಮಾಡಿದ ಅವಾಂತರದ ಬಗ್ಗೆ ಅಂದಿನ ಗೃಹ ಸಚಿವರಾದ ವಿ.ಎಸ್. ಆಚಾರ್ಯರು ಗಮನ ಸೆಳೆದರೂ ಅದು ತನ್ನ ದುಡುಕುತನದ ಬಗ್ಗೆ ವಿಷಾದ ವ್ಯಕ್ತಪಡಿಸಲಿಲ್ಲ. ಹೀಗೆ ಸುದ್ಧಿ ಮಾಧ್ಯಮಗಳು ಸುದ್ಧಿ ಮಾಡುವ ಭರದಲ್ಲಿ ಅವುಗಳು ಮಾಡುವ ಅವಾಂತರಗಳೇ ದೊಡ್ಡ ಸುದ್ಧಿಯಾದರೂ ಅವುಗಳಿಗೇನು ಪಶ್ಚತ್ತಾಪವಾಗುವುದಿಲ್ಲ. ಜನರಿಗೆ ಉಚಿತ ಬುದ್ಧಿ ಹೇಳುವುದಷ್ಟೇ ಅವುಗಳ ಕೆಲಸ
ಅನ೦ತಮೂರ್ತಿಯವರಿಗೆ ಅಭಿಮಾನಿಯೊಬ್ಬನ ಪತ್ರ
– ಗುರುರಾಜ್ ಕೊಡ್ಕಣಿ,ಯಲ್ಲಾಪುರ
ಸನ್ಮಾನ್ಯ ಶ್ರೀ ಅನ೦ತಮೂರ್ತಿಗಳಿಗೆ,
ನಮಸ್ಕಾರಗಳು,
ಈಗ ಸದ್ಯದ ಪರಿಸ್ಥಿತಿಯಲ್ಲಿ ’ಹೇಗಿದ್ದೀರಿ..’? ಎ೦ದು ಕೇಳುವುದೇ ತಪ್ಪೇನೋ.ಇತ್ತೀಚಿನ ತಮ್ಮ ಹೇಳಿಕೆಗಳ ಬಗ್ಗೆ ಸ್ಪಷ್ಟನೆಗೆ ತಮಗೊ೦ದು ಪತ್ರ ಬರೆಯೊಣವೆನಿಸಿತು.ಪತ್ರವನ್ನು ನೇರವಾಗಿ ತಮಗೆ ಕಳುಹಿಸೊಣವೆ೦ದುಕೊ೦ಡೆ.ಆದರೆ ಇತ್ತೀಚೆಗೆ ತಾವು ಯಾವುದೇ ಪತ್ರ , ಪತ್ರಿಕೆ,ಓದುವುದಿಲ್ಲವ೦ತೆ.ಮೊನ್ನೆಯೊ೦ದು ಟಿವಿ ಸ೦ದರ್ಶನದಲ್ಲಿ ತಾವೇ ಹೇಳಿದ್ದೀರಿ.ಹಾಗಾಗಿ ಸುಮ್ಮನೇ ಏಕೆ ಐದು ರೂಪಾಯಿ ಹಾಳು ಮಾಡುವುದೆ೦ದು ಇಲ್ಲಿ ಹಾಕುತ್ತಿದ್ದೇನೆ.ಸಾಧ್ಯವಾದರೇ ಓದಿ,ಓದದಿದ್ದರೂ ಚಿ೦ತೆಯಿಲ್ಲ.
ಏನಾಗಿದೆ ಸರ್ ನಿಮಗೆ..? ಮತಿಭ್ರಮಣೆಯಾ ..? ಹೊಸದೊ೦ದು ಪ್ರಶಸ್ತಿ ಪಡೆಯುವ ಉಮ್ಮೇದಿಯಾ…?ಅಥವಾ ಸುದ್ದಿಯಲ್ಲಿರುವ ರೋಗವಾ..? ಒ೦ದು ಗೊತ್ತಾಗುತ್ತಿಲ್ಲ ಒ೦ದು ಕಾಲದಲ್ಲಿ ನಿಮ್ಮ ಸಾಹಿತ್ಯವನ್ನು ಪ್ರೀತಿಸುತ್ತಿದ್ದವರು ನಾವು,ನಿಮಗಾಗಿ ಎಷ್ಟು ಸ೦ತೋಷಿಸುತ್ತಿದ್ದೇವು ಗೊತ್ತಾ…? ನಿಮ್ಮದೊ೦ದು ಕತೆ ಪತ್ರಿಕೆಯಲ್ಲಿ ಬ೦ದಿದ್ದರೇ ನಮಗದುವೇ ಮೃಷ್ಟಾನ್ನ,ನಿಮ್ಮ ಹೊಸದೊ೦ದು ಪುಸ್ತಕ ಬಿಡುಗಡೆಯಾದರೇ ನಮಗೆ ಆ ದಿನ ಸ೦ಭ್ರಮ.ನಿಮಗೊ೦ದು ಪ್ರಶಸ್ತಿ ಬ೦ದರೇ ನಿಮಗಿ೦ತಲೂ ಹೆಚ್ಚು ಸ೦ತೊಷಿಸಿದವರು ನಾವು.ನಿಮಗೆ ಜ್ನಾನಪೀಠ ಬ೦ದಾಗಲ೦ತೂ ’ನೋಡ್ರೋ,ನಮ್ಮ ಗುರುಗಳಿಗೆ ದೇಶದ ಅತ್ಯುನ್ನತ ಗೌರವ ಬ೦ತು’ಎ೦ದು ಊರೆಲ್ಲಾ ಹೇಳಿಕೊ೦ಡು ತಿರುಗಿದೆವು.ನಿಮ್ಮ ಮೇಲಿನ ಅತಿಯಾದ ಅಭಿಮಾನಕ್ಕೋ ಏನೋ,ನೀವೇನೇ ಮಾಡಿದರೂ ,ಹೇಳಿದರೂ ಸಹಿಸಿಕೊ೦ಡೆವು.ಅನೇಕ ಕಾದ೦ಬರಿಗಳಲ್ಲಿ ಬ್ರಾಹ್ಮಣ ಯುವತಿಗೆ ದಲಿತ ಯುವಕನೊ೦ದಿಗೆ ಅನೈತಿಕ ಸ೦ಬ೦ಧವಿರುವ೦ತೆಯೋ ,ಅಥವಾ ಬ್ರಾಹ್ಮಣ ಯುವಕನೊಬ್ಬನಿಗೆ ,ದಲಿತ ಯುವತಿಯೊಬ್ಬಳೊ೦ದಿಗೆ ಅನೈತಿಕ ಸ೦ಬ೦ಧವಿರುವ೦ತೆಯೋ ಚಿತ್ರಿಸಿದಿರಿ. ಕೊ೦ಚ ಇರುಸುಮುರುಸಾದರೂ ’ಎಲ್ಲಾ ಕಡೆ ನಡೆಯೋದೆ ಬಿಡು ಇದು’ ಎ೦ದು ಸುಳ್ಳುಸುಳ್ಳೆ ನಿಮ್ಮನ್ನು ಸಮರ್ಥಿಸಿದೆವು.’ಭೈರಪ್ಪ ,ಒಬ್ಬ ಡಿಬೇಟರ್ ಆತನನ್ನು ಕಾದ೦ಬರಿಕಾರನೆ೦ದು ಒಪ್ಪಿಕೊಳ್ಳಲು ಕಷ್ಟವಾಗುತ್ತದೆ’ ಎ೦ದಿರಿ.’ಆವರಣ’ ಓದಿದ ನ೦ತರವೂ ನೀವು ಹೇಳಿದ್ದೇ ಸರಿ ಎ೦ದು ವಾದಿಸಿದೆವು.’ಮೋದಿ ಪ್ರಧಾನಿಯಾದರೇ ದೇಶ ಬಿಡುತ್ತೇನೆ ’ಎ೦ದಿರಿ,ನಾವು ಮುಜುಗರಕ್ಕೊಳಗಾದೆವು.ಆದರೆ ಈಗ ಇದೇನಿದು ನಿಮ್ಮ ಹೊಸರಾಗ..? ಆರ್.ಎಸ್.ಎಸ್. ಎ೦ದರೇ ’ಹುಚ್ಚು ನಾಯಿ ರೋಗ’ಎ೦ದುಬಿಟ್ಟೀರಿಲ್ಲ ಈಗ.. ಹೇಗೆ ಸಮರ್ಥಿಸುವುದು ನಿಮ್ಮ ಇ೦ಥ ನೀಚ ತಪ್ಪನ್ನು ಗುರುಗಳೇ.ದಯವಿಟ್ಟು ಕ್ಷಮಿಸಿ,ನಮ್ಮಿ೦ದ ಸಾಧ್ಯವಿಲ್ಲ.
ಮತ್ತಷ್ಟು ಓದು 
ವಿರೋಧಿಗಳೆಸೆದ ಕಲ್ಲನ್ನೇ ತನ್ನ ಏಳಿಗೆಯ ಮೆಟ್ಟಿಲಾಗಿಸಿಕೊಂಡ ಮೋದಿ
– ಪ್ರಸನ್ನ ಬೆಂಗಳೂರು
ಭಾರತದ ರಾಜಕೀಯ ಇತಿಹಾಸದಲ್ಲಿ ೧೦ ವರ್ಷಗಳಿಗೂ ಹೆಚ್ಚು ಕಾಲ ವಿರೋಧ ಪಕ್ಷಗಳು,ಮಾಧ್ಯಮಗಳು,ಪ್ರಗತಿಪರರು ಟಾರ್ಗೆಟ್ ಮಾಡಿರುವುದು ನರೇಂದ್ರ ಮೋದಿಯವರನ್ನು . ಮೋದಿಯವನರನ್ನು ಬಿಜೆಪಿ ತನ್ನ ಪ್ರಧಾನಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಮೇಲೆ ಅವರ ಮೇಲಿನ ಹಿಂದಿನ ಆರೋಪಗಳ ಜೊತೆ ಜೊತೆಗೆ ಅವರ ಅಭಿವೃದ್ಧಿ ಕಾರ್ಯಗಳನ್ನು ವಿಶ್ಲೇಷಣೆಗೊಳಪಡಿಸಲಾಗುತ್ತಿದೆ. ಈ ಹಿಂದೆ ಪ್ರಧಾನಿಯಾದವರ ಬಗ್ಗೆ ಇಷ್ಟೊಂದು ವಿಶ್ಲೇಷಣೆ ವಿಮರ್ಶೆ ಪರೀಕ್ಷೆ ನಡೆದಿತ್ತೆ? ನಡೆದು ಅಂತಹ ಅಗ್ನಿ ಪರೀಕ್ಷೆಯಲ್ಲಿ ಗೆದ್ದು ಬಂದಿದ್ದರೆ ಬಹುಶಃ ಭಾರತವಿಂದು ಇಂತಹ ಪರಿಸ್ಥಿತಿಯಲ್ಲಿರುತ್ತಿರಲಿಲ್ಲ ಅಲ್ಲವೆ? ಮೋದಿ ಈ ಪರಿ ಬೆಳೆದಿದ್ದಕ್ಕೆ ಕಾರಣ ಹುಡುಕುತ್ತಾ ಹೊರಟವನಿಗೆ ಕಂಡದ್ದು ಈ ವಿಭಿನ್ನವಾದ ಆದರೆ ತೆರೆಮರೆಯ ಕಾರಣ.
ಅದು ತನ್ನ ಕುಕೃತ್ಯಕ್ಕೆ ತಾನೆ ಬಲಿಯಾದ ಆತನ ದ್ವೇಷ ವರ್ಗ.ಇವರ ದ್ವೇಷ,’ತನ್ನೊಡಲ ಬೆಂಕಿ ತನ್ನನ್ನಲ್ಲದೆ ಅನ್ಯರನ್ನು ಸುಡದು‘ ಎಂಬ ಜನಪ್ರಿಯ ವಚನದಂತೆ ದ್ವೇಷಿಗಳೇ ನಾಲಿಗೆ ಕಚ್ಚಿಕೊಳ್ಳುವಂತಾಗಿರುವುದು ಸುಳ್ಳಲ್ಲ. ತಾನು ವೈಭವೀಕರಿಸಿದ ಸುಳ್ಳು ತನಗೇ ತಿರುಗುಬಾಣವಾಗಿರುವುದು ಅವರ ಈಗಿನ ಬಡಬಡಿಕೆಗೆ ಕಾರಣವಾಗಿದೆ. ಈ ವರ್ಗ ಮೋದಿಯ ವಿರುದ್ದ ಮಾಡಿದ ಅಪಪ್ರಚಾರಗಳೇ ಅಪಚಾರಗಳೇ ಅವರಿಗೆ ಇಂದು ಮುಳುವಾಗಲು ಮೂಲ ಕಾರಣವೆಂದು ಅವರು ಒಪ್ಪಿಕೊಳ್ಳಲು ಸಿದ್ದರಿಲ್ಲದಿದ್ದರೂ ಅದು ಸತ್ಯವಲ್ಲವೆಂದು ತಳ್ಳಿ ಹಾಕಲು ಅವರಿಗೆ ಸಾಧ್ಯವಾಗುವುದಿಲ್ಲ.
ಮೋದಿ ಮಾಡದ ತಪ್ಪಿಗೆ ಅವನನ್ನು ಹೊಣೆಗಾರನನ್ನಾಗಿಸುವ ಮೂಲಕ ಆತನ ಬೆಳವಣಿಗೆ ದಾರಿ ಮಾಡಿಕೊಟ್ಟದ್ದು ಹೇಗೆ?




