ನಮೋ ಅಭಿವೃದ್ಧಿ ಮಂತ್ರಕ್ಕೆ ಅನುಸರಿಸಬೇಕಾದ ಪ್ರಚಾರತಂತ್ರ ಯಾವುದು?
– ನವೀನ್ ನಾಯಕ್
ನರೇಂದ್ರ ಮೋದಿ ಇತ್ತೀಚೆಗೆ ಅತಿ ಹೆಚ್ಚಾಗಿ ಚರ್ಚೆಗೆ ತುತ್ತಾಗುತಿದ್ದಾರೆ. ಮೋದಿಯವರೇ ಮುಂದಿನ ಪ್ರಧಾನಿಯಾಗಬೇಕೆಂದು ಹಲವಾರು ರೀತಿಯಲ್ಲಿ ಉತ್ಸಾಹಿ ಯುವಕರು ಸ್ವಯಂಪ್ರೇರಣೆಯಿಂದ ಕೆಲಸ ನಿರ್ವಹಿಸುತಿದ್ದಾರೆ. ಅಭಿಮಾನಿಗಳ ಗುಂಪುಗಳಿರಬಹುದು, ಸಾಮಾಜಿಕ ತಾಣದಲ್ಲಿರುವ ಪೇಜ್, ಗ್ರೂಪ್ ಯಾವುದೇ ಆಗಬಹುದು. ರಾಜಕೀಯ ವಿಷಯದಲ್ಲಿ ಮಲಗಿದ್ದ ಯುವಪಡೆ ಎದ್ದು ನಿಂತಿರುವುದು ಸ್ವಾಗತಾರ್ಹ. ಪ್ರಸಕ್ತ ರಾಜಕೀಯ ದೊಂಬರಾಟದಲ್ಲಿ ಕಡಿವಾಣ ಹಾಕಬೇಕೆಂದರೆ ಯುವಕರ ಪಾತ್ರ ಬೇಕೆಬೇಕು. ಇತಿಹಾಸವೂ ಅದನ್ನೇ ಸಾರಿ ಸಾರಿ ಹೇಳಿದೆ. ನಮೋ ವಿಷಯದಲ್ಲಿ ಗಂಭೀರವಾದ ವಿಚಾರವೆಂದರೆ ಈ ಯುವಕರ ಕೆಲಸ ನೀರಿಕ್ಷಿತ ಮಟ್ಟವನ್ನು ತಲುಪುತ್ತದೆಯಾ. ಇವರ ಉತ್ಸಾಹಕ್ಕೆ 2014 ತಣ್ಣೀರೆರಚಬಹುದೇ ಎಂಬ ಅನುಮಾನ ನನಗೆ. ನನ್ನ ಅನುಮಾನಕ್ಕೆ ಕಾರಣವಿಲ್ಲದೆಯಿಲ್ಲ.
ಮೋದಿಯವರನ್ನು ಪ್ರಚಾರ ಮಾಡುತ್ತಿರುವ ಶೈಲಿ ಸ್ವತಃ ನಮೋ ಅಭಿವೃದ್ದಿ ಕನಸ್ಸಿನ ವಿರೋಧವಾಗಿದೆ. ಮುನ್ನುಗುತ್ತಿರುವ ವೇಗದಲ್ಲಿ ಗುರಿಯನ್ನೇ ಮರೆಯಲಾಗಿದೆ. ಮೋದಿ ನಾಯಕತ್ವದಲ್ಲಿ ಸರಕಾರ ರಚಿಸಬೇಕಾದರೆ ಆ ಸರಕಾರ ನಮ್ಮ ಕನಸ್ಸಿನ ಭಾರತ ಕಟ್ಟಬೇಕಾದರೆ ಮೋದಿ ಹೆಸರಲ್ಲಿ ಅಥವಾ ಬಿಜೆಪಿ ಹೆಸರಲ್ಲಿ ಗೆಲ್ಲುವ ಅಭ್ಯರ್ಥಿ ಹೇಗಿರಬೇಕು, ಅವನ ಕನಸುಗಳೇನಾಗಿರಬೇಕು, ಸಮಾಜ ಪರಿವರ್ತನೆಯಲ್ಲಿ ಆತನ ಸ್ಪಷ್ಟ ನಿರ್ಧಾರವೇನು. ಈ ಅಂಶಗಳು ಮುಖ್ಯವಾಗುವುದಿಲ್ಲವೇ? ಈ ಮಹತ್ತರ ಅಂಶಗಳನ್ನು ಮರೆತು ಅವರ ಹೆಸರಲ್ಲಿ ಅಯೋಗ್ಯರನ್ನು ಗೆಲ್ಲಿಸಿಬಿಟ್ಟರೆ. ಕಂಡ ಕನಸು ತಿರುಗಿ ಬೆಂಕಿ ಕೆಂಡವಾಗುತ್ತದೆಯಲ್ವಾ? ಕರ್ನಾಟಕದಲ್ಲಿ ಬದಲಾವಣೆ ಭರದಲ್ಲಿ ಬಿಜೆಪಿ ಬೆಂಬಲಿಸಿದಾಗ ಯಡವಟ್ಟಾಗಿದ್ದು ಈ ಅಂಶಗಳೇ. ಅಪಾತ್ರರೆಲ್ಲ ಗೆದ್ದು ಉಂಡಾಡಿ ಗುಂಡನ ಹಾಗೆ ಆಡಿದ್ದ ಉದಹಾರಣೆ ಕಣ್ಣ ಮುಂದಿರುವಾಗ ಮತ್ತದೇ ಹೆಜ್ಜೆಯನ್ನಿಟ್ಟರೆ ಏನು ಪ್ರಯೋಜನ ?.. ಬದಲಾವಣೆ ಎಲ್ಲರಿಗೂ ಬೇಕು ಅದೇ ಭರದಲ್ಲಿ ಯೋಗ್ಯರು ಮತ್ತು ಅಯೋಗ್ಯರ ನಡುವಿನ ವ್ಯತ್ಯಾಸ ಮರೆಯಬಾರದು.
ಮತ್ತಷ್ಟು ಓದು 
“ಕೈ”ಲಾಗದ ಸರ್ಕಾರ ಮತ್ತು ನಮ್ಮ ಕಾಶ್ಮೀರ
– ರಾಕೇಶ್ ಶೆಟ್ಟಿ
ಬಡ ಬೆಸ್ತನೊಬ್ಬನ ಕತ್ತನ್ನು ಸೀಳಿ ಅವನದೇ ಬೋಟನ್ನೇರಿ ೧೦ ಜನರ ಪಾಕಿಸ್ತಾನದ ಸೈತಾನರ ತಂಡ ಗೇಟ್ ವೇ ಆಫ್ ಇಂಡಿಯಾ ಮೂಲಕ ಮುಂಬೈಗೆ ವಕ್ಕರಿಸಿಕೊಳ್ಳುತ್ತದೆ.೧೦ ಜನರಿಂದ ಬೇರ್ಪಟ್ಟ ಇಬ್ಬರು ಮೊದಲಿಗೆ ದಾಳಿಯಿಡುವುದು ’ಲಿಯೋಫೋಲ್ಡ್ ಕೆಫೆ”ಗೆ ಅಲ್ಲಿ ಕಂಡ ಕಂಡಂತೆ ಗುಂಡಿನ ಮಳೆ ಸುರಿಸಿದ ಆ ಇಬ್ಬರು ಪಾಕಿ ಉಗ್ರರು ಅಲ್ಲಿಂದ ರಾಜಾರೋಷವಾಗಿ ಹೊರಡುತ್ತಾರೆ.ಉಗ್ರರ ಕಣ್ಣಿಗೆ ಬೀಳದೆ ಅವಿತು ಕುಳಿತಿದ್ದವನೊಬ್ಬ ಮೆಲ್ಲಗೆ ಬಾಗಿಲ ಸಂದಿಯಿಂದ ರಾಕ್ಷಸರು ಇದ್ದಾರೋ ಅನ್ನುವುದನ್ನು ಖಾತ್ರಿ ಮಾಡಿಕೊಳ್ಳಲು ಇಣುಕಿದಾಗ ಬಾಗಿಲಿಗೆ ಕಲ್ಲೊಂದು ಬಡಿಯುತ್ತದೆ.ಮತ್ತೆ ನೋಡುತ್ತಾನೆ ಊಹೂಂ “ಗುಂಡಲ್ಲ… ಕಲ್ಲು…!”
ಉಗ್ರರು ಅಮಾಯಕರ ರಕ್ತ ಹರಿಸಿ ಅಲ್ಲಿಂದ ರಾಜಾರೋಷವಾಗಿ ಹೊರಟ ಮೇಲೆ ಬೀಟ್ ನಲ್ಲಿದ್ದ ಪೋಲಿಸ್ ಕಾನ್ಸ್ಟೇಬಲ್ ಗಳು ಒಂದು ಕೈಯಲ್ಲಿ ಲಾಠಿ ಹಿಡಿದು ಇನ್ನೊಂದು ಕೈಯಲ್ಲಿ ಕಲ್ಲು ಎಸೆದು ಒಳಗಿನಿಂದ “ಗುಂಡು” ಬರುತ್ತಿಲ್ಲ ಅನ್ನುವುದನ್ನು ಕನ್ಫರ್ಮ್ ಮಾಡಿಕೊಂಡು ಒಳಬರುತ್ತಾರೆ. ಹೇಗಿದೆ ನೋಡಿ ಉಗ್ರನ ಕೈಯಲ್ಲಿ “ಎ.ಕೆ ೪೭” ಅವನೆದುರಿಸಲು ಬಂದ ಪೋಲಿಸಣ್ಣನ ಕೈಯಲ್ಲಿ “ಕಲ್ಲು”…! ಇದು ನಮ್ಮ ಭಾರತದ ಆಂತರಿಕ ರಕ್ಷಣಾ ವ್ಯವಸ್ಥೆಯ ಸ್ಥಿತಿ.ಭಾರತದ ಬಂಡವಾಳವನ್ನು ಸರಿಯಾಗಿಯೇ ಅರಿತಿದ್ದ ಪಾಪಿ ಪಾಕಿಗಳು ಆ ೧೦ ಜನರ ತಂಡವನ್ನು ನುಗ್ಗಿಸಿ ಒಂದಿಡಿ ಭಾರತವನ್ನು ದಿನಗಳ ಮಟ್ಟಿಗೆ ಗಾಬರಿ ಬೀಳಿಸಿದ್ದರು. ಮುಂಬೈ ಮಾರಣ ಹೋಮದ ನಂತರ ಆಗಿದ್ದಾದರೂ ಏನು? ಭಾರತ-ಪಾಕಿಸ್ತಾನಗಳು ಸಮರದಂಚಿಗೆ ಬಂದು ನಿಂತವು.ನಮ್ಮ ಸರ್ಕಾರ “ಹೊಡಿಬೇಡಿ.ಹೊಡೆದ್ರೆ ನೋವಾಗುತ್ತೆ” ಅನ್ನುವಂತೆಯೇ ವರ್ತಿಸಿದ್ದಲ್ಲವೇ? ಅದಕ್ಕಿಂತ ಹೆಚ್ಚೆಂದರೆ “ಹೋಗಿ.ನಾವು ನಿಮ್ಮೊಂದಿಗೆ ನಾವು ಕ್ರಿಕೆಟ್ ಆಡುವುದಿಲ್ಲ” ಅಂದರು ಅಷ್ಟೇ…!
ಭಯೋತ್ಪಾದನೆ, ರಾಜಕೀಯ ನೇತಾರರು ಮತ್ತು ಮಾಧ್ಯಮಗಳು
ತೀರಾ ಇತ್ತೀಚಿನವರೆಗೂ ಭಯೋತ್ಪಾದನಾ ಧಾಳಿಗಳಿಗೆ ಸಂಬಂಧಿಸಿದಂತೆ ಇರಾಕ್ ಮತ್ತು ಪಾಕಿಸ್ತಾನಗಳ ನಂತರ ಭಾರತ ವಿಶ್ವದಲ್ಲಿ ಮೂರನೆಯ ಸ್ಥಾನದಲ್ಲಿತ್ತು. ಈಗಲೂ ಈ ದೇಶದಲ್ಲಿ ಭಯೋತ್ಪಾದನಾ ಕೃತ್ಯಗಳೇನೂ ಗಮನಾರ್ಹವಾಗಿ ತಗ್ಗಿಲ್ಲ. ಆಂತರ್ಯುದ್ಧದ ದಳ್ಳುರಿಗೆ ಸಿಲುಕಿರುವ ಸಿರಿಯಾ, ಲಿಬಿಯಾಗಳು ಭಾರತವನ್ನು ಕೆಳಕ್ಕೆ ತಳ್ಳಿವೆ ಅಷ್ಟೆ. ಅಂಕಿಅಂಶಗಳ ಪ್ರಕಾರ ೧೯೮೧ರಲ್ಲಿ ಖಲಿಸ್ತಾನ್ ಚಳುವಳಿ ಆರಂಭವಾದಂದಿನಿಂದ ಈ ದೇಶದಲ್ಲಿ ನಾಲ್ಕುಸಾವಿರ್ವಕ್ಕೂ ಅಧಿಕ ಭಯೊತ್ಪಾದನಾ ಧಾಳಿಗಳಾಗಿವೆ ಮತ್ತು ಈ ಪಿಡುಗಿಗೆ ದಿನಕ್ಕೆ ಸರಾಸರಿ ನಾಲ್ವರು ಭಾರತೀಯರು ಬಲಿಯಾಗುತ್ತಿದ್ದಾರೆ.ಕಾಂಗ್ರೆಸ್ಸಿನ ‘ನಮೋ’ನಿಯಾ ಮತ್ತು ಸೆಕ್ಯುಲರ್ ‘ನಾಯಿಮರಿ’
– ರಾಕೇಶ್ ಶೆಟ್ಟಿ
ಭಾರತದಲ್ಲಿ ಭಾವುಕತೆಗೇನಾದರೂ ಬರವುಂಟೇ? ಹಾಗೇನಾದರೂ ಇದ್ದಿದ್ದರೆ ನಮ್ಮ ಸ್ಥಿತಿ ಸ್ವಲ್ಪಮಟ್ಟಿಗಾದರೂ ಸುಧಾರಿಸುತ್ತಿತ್ತೋ ಏನೋ? ಆದರೆ,ಭಾವುಕತೆ ಅನ್ನುವುದು ನಮ್ಮ ಅಸ್ಮಿತೆಯ ಭಾಗವಾಗಿರುವುದರಿಂದಲೇ ನಮ್ಮ ರಾಜಕಾರಣಿಗಳು,ರಾಜಕೀಯ ಪಕ್ಷಗಳು ಪದೇ ಪದೇ ಭಾವುಕತೆಯ ಬಿರುಗಾಳಿಯೆಬ್ಬಿಸಿ ತಮ್ಮ ಹಗರಣ,ವೈಫಲ್ಯಗಳನ್ನು ಮುಚ್ಚಿಕೊಳ್ಳುವುದು.ಅದರಲ್ಲೂ ಇಂತ ವಿಷಯದಲ್ಲಿ ಕಾಂಗ್ರೆಸ್ಸ್ ಪಕ್ಷದ್ದು ಉಳಿದೆಲ್ಲರಿಗಿಂತ ಒಂದು ‘ಕೈ’ ಮೇಲೆಯೇ ಹೌದು.
೨೪ ಗಂಟೆಯ ಮೀಡಿಯಾ ಯುಗದಲ್ಲಿ ದೊಡ್ಡ ದೊಡ್ಡ ಹಗರಣಗಳು ಸುದ್ದಿಯಾದಗಾಲೆಲ್ಲ ಕಾಂಗ್ರೆಸ್ಸ್ ಅದರಿಂದ ಹೊರಬರಲು ಒಂದು ಸಣ್ಣ ಎಳೆಯೇನಾದರೂ ಸಿಗುತ್ತದೆಯಾ ಅಂತ ನೋಡುತ್ತಿರುತ್ತದೆ.ಈ ಬಾರಿ ರೂಪಾಯಿ ಮೌಲ್ಯ ಕುಸಿದು,ಆಡಳಿತ ವ್ಯವಸ್ಥೆಯೇ ಹಳ್ಳ ಹಿಡಿದು ಕುಳಿತಿರುವಾಗ ಅದಕ್ಕೆ ಕಾಣಿಸಿದ ಬೆಳಕಿನ ಹಾದಿ “ನಾಯಿ ಮರಿ”…!
ಹೌದು. ಗುಜರಾತ್ ಮುಖ್ಯಮಂತ್ರಿ ರಾಯಿಟರ್ಸ್ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಬಳಸಿದ ನಾಯಿ ಮರಿ ಪದ.ರಾಯಿಟರ್ಸ್ ನೀಡಿದ ಸಂದರ್ಶನದಲ್ಲಿ ನಾಯಿ ಮರಿ ಬಂದಿದ್ದು ಹೇಗೆ ಅಂತ ನೋಡಿದರೆ,
“ಸಂದರ್ಶಕ: “ಏನು (೨೦೦೨ ರ ಗಲಭೆ) ನಡೆಯಿತೋ ಆ ಬಗ್ಗೆ ನೀವು ಪಶ್ಚಾತ್ತಾಪ ಪಡುತ್ತಿರಾ?”
ಮುಸ್ಲಿಂ ಸಮುದಾಯದ ಉತ್ಪ್ರೇಕ್ಷಿತ ಕೊರಗುಗಳು
– ಪ್ರೇಮ ಶೇಖರ
“ಇಂದು ಈ ದೇಶದಲ್ಲಿ ಹಿಂಸೆ, ಹತ್ಯಾಕಾಂಡಗಳು ನಡೆದಿರುವುದು ಜಾತಿ ಸಮಾವೇಶ, ರ್ಯಾಲಿಗಳಿಂದಲ್ಲ. ಪ್ರವೀಣ್ ತೊಗಾಡಿಯಾರಂತಹ ಮಂದಿಗಳು ದೇಶಾದ್ಯಂತ ಏರ್ಪಡಿಸಿಕೊಂಡು ಬಂದ ಹಿಂದೂ ಸಮಾಜೋತ್ಸವದಂತಹ ಸಮಾವೇಶಗಳು, ರ್ಯಾಲಿಗಳು ದೇಶವನ್ನು ಕಂಗೆಡಿಸಿದ್ದವು. ಹಲವು ಕೋಮುಗಲಭೆಗಳಿಗೆ, ಹಿಂಸೆಗಳಿಗೆ ಬಿಜೆಪಿ ಮತ್ತು ಆರೆಸ್ಸೆಸ್ನ ರ್ಯಾಲಿಗಳು ಕಾರಣವಾಗಿವೆ. ಅವು ಸಮಾಜವನ್ನು, ದೇಶವನ್ನು ಒಡೆದಿವೆ.”
ಉತ್ತರ ಪ್ರದೇಶದಲ್ಲಿ ಜಾತಿಯಾಧಾರಿತ ರ್ಯಾಲಿಗಳನ್ನು ನಿರ್ಬಂಧಿಸಿ ಕಳೆದ ಗುರುವಾರ ಅಲಹಾಬಾದ್ ಹೈಕೋರ್ಟ್ ನೀಡಿದ ತೀರ್ಪಿನ ಬಗ್ಗೆ ಮರುದಿನವೇ ಅಂದರೆ ಶುಕ್ರವಾರ ಪ್ರಕಟವಾದ ಕನ್ನಡ ದೈನಿಕವೊಂದರ ಸಂಪಾದಕೀಯದಲ್ಲಿ ಕಂಡುಬಂದ ಸಾಲುಗಳಿವು. ಪ್ರವೀಣ್ ತೊಗಾಡಿಯಾರಂತಹ ಮಂದಿಗಳು ದೇಶಾದ್ಯಂತ ನಡೆಸಿಕೊಂಡು ಬಂದ ರ್ಯಾಲಿಗಳು ದೇಶವನ್ನು ಕಂಗೆಡಿಸಿದ ಬಗ್ಗೆ ಹೇಳುವ ಈ ಸಂಪಾದಕೀಯ ಅಕ್ಬರುದ್ದೀನ್ ಒವೈಸಿಯಂತಹ ಮಂದಿಗಳು ಹದಿನೈದು ನಿಮಿಷಗಳಲ್ಲಿ ಹಿಂದೂಗಳನ್ನು ಮಟ್ಟಹಾಕುತ್ತೇವೆಂದು ಘೋಷಿಸುವ ರ್ಯಾಲಿಗಳು ದೇಶವನ್ನು ಕಂಗೆಡಿಸಿದ ಬಗ್ಗೆ ಮೌನವಾಗಿದೆ.
ನನ್ನ ಅರಿವಿನ ಪ್ರಕಾರ ಈ ದೇಶ “ಒಡೆದದ್ದು” ೧೯೪೭ರಲ್ಲಿ ಮತ್ತು ಅದಕ್ಕೆ ಆರೆಸ್ಸೆಸ್ ಆಗಲೀ, ಬಿಜೆಪಿಯಾಗಲೀ ಏರ್ಪಡಿಸಿದ ರ್ಯಾಲಿಗಳು ಕಾರಣವಾಗಿರಲಿಲ್ಲ. ಬ್ರಿಟಿಷ್ ವಸಾಹತುಶಾಹಿ ಆಳರಸರ ಕೈಗೊಂಬೆಯಾಗಿ, ಅವರ ಸಕ್ರಿಯ ಸಹಕಾರದಿಂದ ಮುಸ್ಲಿಂ ಲೀಗ್ ನಡೆಸಿದ ರ್ಯಾಲಿಗಳು ಸಮಾಜವನ್ನು ಒಡೆದವು ಮತ್ತು ಬಂಗಾಳದಲ್ಲಿ ಅಧಿಕಾರದಲ್ಲಿದ್ದ ಮುಸ್ಲಿಂ ಲೀಗ್ ಆಗಸ್ಟ್ ೧೬, ೧೯೪೬ರಂದು ಕಲ್ಕತ್ತಾ ನಗರದಲ್ಲಿ ಆಯೋಜಿಸಿದ “ಡೈರೆಕ್ಟ್ ಆಕ್ಷನ್ ಡೇ” ಎಂಬ ಕೋಮುವಾದಿ ರ್ಯಾಲಿ ಮತ್ತದು ಬಲಿತೆಗೆದುಕೊಂಡ ಸುಮಾರು ನಾಲ್ಕುಸಾವಿರ ಜೀವಗಳು ದೇಶದ ಐಕ್ಯತೆಗೆ ಅಂತಿಮ ಹೊಡೆತ ನೀಡಿ ಭಾರತ ಇಬ್ಬಾಗವಾಗಲು ಕಾರಣವಾದವು. ಭಾರತವಷ್ಟೇ ಇಬ್ಬಾಗವಾಗಲಿಲ್ಲ, ಮುಸ್ಲಿಂ ಲೀಗ್ನ ಮೂರ್ಖತನದಿಂದಾಗಿ ಉಪಖಂಡದ ಬಲಿಷ್ಟ ಮುಸ್ಲಿಂ ಸಮುದಾಯವೂ ಇಬ್ಬಾಗವಾಯಿತು. ೧೯೭೧ರಲ್ಲಿ ಅದು ಮೂರು ಭಾಗಗಳಾಗಿ ಹೋಳಾಗಿ ಮತ್ತಷ್ಟು ಕೃಶವಾಯಿತು. ಈ ಒಡೆಯುವಿಕೆಗೂ ಬಿಜೆಪಿಯಾಗಲೀ, ಆರೆಸ್ಸೆಸ್ ಆಗಲೀ ಕಾರಣವಾಗಿರಲಿಲ್ಲ.
ಮತ್ತಷ್ಟು ಓದು 
‘ಹಿಂದು’ ಶಬ್ದ ಕೇಳುತ್ತಲೇ ಇವರೇಕೆ ಹುಯಿಲೆಬ್ಬಿಸುತ್ತಾರೆ?
– ಪ್ರವೀಣ್ ಪಟವರ್ಧನ್
ಕೆಲ ದಿನಗಳ ಹಿಂದಷ್ಟೇ ಬೋಧ್ಗಯಾ ಬಾಂಬ್ ಬ್ಲಾಸ್ಟ್ ಪ್ರಕರಣದ ನಂತರ ನೀಡಿದ್ದ ವಿಚಿತ್ರ- ವಿಕೃತ ಹೇಳಿಕೆಗಳನ್ನು ಆಧರಿಸಿ, ತಮಗೆ ಸಮಯ ಬಂದಾಗಲೆಲ್ಲಾ ತಮ್ಮ ತಪ್ಪುಗಳನ್ನು ಮುಚ್ಚಿ ಹಾಕಿ, ಇತರರ (ಉದ್ದೇಶಪೂರ್ವಕವಾಗಿ ಗುಜರಾತಿನ ಮುಖ್ಯಮಂತ್ರಿ ಮೋದಿಯವರ) ತೇಜೋವಧೆ ಮಾಡುವ ಕಾಂಗ್ರೆಸ್ಸಿಗ “ಒಸಾಮಾ ಜೀ” ಎಂದು ಮುಕ್ತ ಮನಸ್ಸಿನಿಂದ ಮರ್ಯಾದೆ ನೀಡಿದ ಖ್ಯಾತಿಯ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯಸಿಂಗ್ ಅವರನ್ನು ಕುರಿತು Facebook ಜಾಲತಾಣದಲ್ಲಿ ಒಂದು ವ್ಯಂಗ್ಯ ಚಿತ್ರ ಹರಿದಾಡುತ್ತಿತ್ತು. ಸಂಕ್ಷಿಪ್ತವಾಗಿ ಹೇಳುವುದಾದರೆ ವ್ಯಂಗ್ಯಚಿತ್ರದಲ್ಲಿ ಇದ್ದುದು ಇಷ್ಟೇ. “ಟೀವಿಯಲ್ಲಿ ದಿಗ್ವಿಜಯಸಿಂಗ್ ಒಂದು ಪತ್ರಿಕಾ ಹೇಳಿಕೆ ನೀಡುತ್ತಿದ್ದಾಗ ಮನೆಯಲ್ಲಿನ ಸಾಕಿದ ನಾಯಿಗಳು ಟೀವಿ ನೋಡುತ್ತಾ ಬೊಗಳುತ್ತಿವೆ. ಮುಂದೇನೂ ಹೇಳಲಾರೆ. ನೀವೇ ಅರ್ಥ ಮಾಡಿಕೊಳ್ಳಬಲ್ಲಿರಷ್ಟೇ.
ರಾಜಕಾರಣಿಯೆಂದರೆ ಅಲ್ಲಿ ವಾದ-ವಿವಾದಗಳು ಸಾಮಾನ್ಯ. ಈಗಿನ ರಾಜಕಾರಣದಲ್ಲಿ ಜನಪರ ಕೆಲಸ ಮಾಡುವುದಕ್ಕಿಂತ ವಾದಗಳಿಗೆ ಸಿಲುಕಿಕೊಳ್ಳುವುದೇ ಹೆಚ್ಚು. ಒಬ್ಬರ ಮೇಲೋಬ್ಬರ ಕೆಸರೆರಚಾಟ. ವಿರೋಧ ಪಕ್ಷದ ವ್ಯಕ್ತಿಯ ತೇಜೋವಧೆ, ಸುಳ್ಳು ಆರೋಪ, ಅರ್ಥವಿಹೀನ ಹೇಳಿಕೆ ಇವೆಲ್ಲವೂ ಕೆಸರೆರೆಚಾಟದ ವಿವಿಧ ಮುಖಗಳು. ನಿಮ್ಮ ಸರ್ಕಾರ ಹೀಗೆ ಮಾಡಿದ್ದು ಸರಿಯೇ ಎಂಬ ಪ್ರಶ್ನೆಗೆ ಸಿಗುವ ಉತ್ತರ, ನಮ್ಮ ಹಿಂದಿನ ಸರ್ಕಾರ ಇದಕ್ಕಿಂತಲೂ ಕೆಟ್ಟ ಕೆಲಸ ಮಾಡಿತ್ತು ಅದರ ಬಗ್ಗೆ ಮಾತಾಡೋಣವೇ ಎಂದು ಕುಟುಕಿ ತಮ್ಮ ಲೋಪಗಳನ್ನು cover-up ಮಾಡಿಕೊಳ್ಳುವವರೇ ಈ ದಿನ ಹೆಚ್ಚು.
ಅವರು ಉಳಿಸಿದ್ದು ಒಂದೆರಡು ಕೋಟಿ ಮಾತ್ರವಲ್ಲ…
– ಗೋಪಾಲ್ ಕೃಷ್ಣ
ಓಡುವುದರಲ್ಲಿ ಹುಸೇನ್ ಬೋಲ್ಟ್ ತನ್ನ ದಾಖಲೆಯನ್ನು ತಾನೆ ಸರಿಗಟ್ಟುತ್ತಾನೆ. ಭ್ರಷ್ಟಾಚಾರದಲ್ಲಿ ನಮ್ಮ ನೇತಾರರು, ಅಧಿಕಾರಿಗಳು ಬೋಲ್ಟ್ ಗೆ ಅನುರೂಪ. ಆದರೆ ಭ್ರಷ್ಟಾಚಾರ ಪತ್ತೆ ಹಚ್ಚುವುದರಲ್ಲಿ! ಹೌದು, ಇಂತಹದ್ದೊಂದು ದಾಖಲೆಯೂ ಸೃಷ್ಟಿಯಾದಂತಿದೆ. ಅದು ನಮ್ಮ ಮಹಾಲೇಖಪಾಲರಿಂದ. ಎರಡನೆ ತಲೆಮಾರಿನ ತರಂಗಗುಚ್ಛ ಹಂಚಿಕೆಯಲ್ಲಾದದ್ದು 1.76 ಲಕ್ಷ ಕೋಟಿ ಅವ್ಯವಹಾರ. ಇದೇ ಐತಿಹಾಸಿಕ ದಾಖಲೆ ಎನ್ನುತ್ತಿದ್ದರು. ಅದನ್ನೂ ಮೀರಿಸಿದ್ದು 1.86 ಲಕ್ಷ ಕೋಟಿಯ ‘ಕೋಲ್’ಗೇಟ್ ಹಗರಣ. ಎರಡನ್ನೂ ಹೊರಚೆಲ್ಲಿದವರು ಮಹಾಲೇಖಪಾಲರೇ. ಅಂದ ಮೇಲೆ ಅವರದೇ ಹೊಸ ದಾಖಲೆ ಸೃಷ್ಟಿಯಾಗಿದೆ.
ದೆಹಲಿಯಲ್ಲಿ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿನ ಹಗರಣ, ಎರಡನೆ ತಲೆಮಾರಿನ ತರಂಗಗುಚ್ಛ ಹಗರಣ ಮತ್ತು ಇದೀಗ ಕಲ್ಲಿದ್ದಲು ಗಣಿ ಹಂಚಿಕೆಯಲ್ಲಿನ ಲೋಪಗಳು ಕೇಂದ್ರ ಸರ್ಕಾರವನ್ನು ಬೆತ್ತಲುಗೊಳಿಸಿವೆ. ಭ್ರಷ್ಟಾಚಾರ ವಿರೋಧಿ ಹೋರಾಟವೆನ್ನುವುದು ಒಂದು ಫ್ಯಾಷನ್ ಆಗಿ ಹೋಗಿದೆ. ಈ ಒಂದು ಎಳೆಯನ್ನು ಹಿಡಿದುಕೊಂಡು ಖ್ಯಾತಿ, ಪ್ರಖ್ಯಾತಿ, ಕುಖ್ಯಾತಿ ಗಳಿಸುವವರಿಗೇನೂ ಲೆಕ್ಕವಿಲ್ಲ. ಅಂತಹವರುಗಳ ಮಧ್ಯೆಯೇ ಬೆರಳಣಿಕೆಯಷ್ಟು ಜನರು ಮಾತ್ರ ಪ್ರಾಮಾಣಿಕತೆ, ದಿಟ್ಟತನವನ್ನು ತಮ್ಮ ಕಾರ್ಯದಲ್ಲಿ ತೋರಿಸುತ್ತಾರೆ. ಈ ಸಾಲಿನಲ್ಲಿ ಅಗ್ರಗಣ್ಯರೆನ್ನುವಂತೆ ಕಾಣುವವರು ವಿನೋದ್ರಾಯ್.
ಕಸಾಯಿಖಾನೆಗಳನ್ನು ಮುಚ್ಚುವ ಅವಕಾಶವಿದ್ದೂ ಯಾಕೆ ಮೌನ ವಹಿಸಿದಿರಿ,ಹೇಳಿ?
– ಎ.ಕೆ ಕುಕ್ಕಿಲ
ಗೋಹತ್ಯೆಗೆ ಸಂಬಂಧಿಸಿ 1959 ಮತ್ತು 1961ರ ಮಧ್ಯೆ ಸುಪ್ರೀಮ್ ಕೋರ್ಟ್ ನ ಮುಂದೆ ಮೂರು ಪ್ರಕರಣಗಳು ದಾಖಲಾಗಿದ್ದುವು. ಮುಹಮ್ಮದ್ ಹನೀಫ್ ಖುರೇಷಿ ಮತ್ತು ಬಿಹಾರ ಸರಕಾರ; ಹಶ್ಮತುಲ್ಲಾ ಮತ್ತು ಮಧ್ಯಪ್ರದೇಶ ಸರಕಾರ; ಅಬ್ದುಲ್ ಹಕೀಮ್ ಮತ್ತು ಬಿಹಾರ ಸರಕಾರಗಳ ನಡುವಿನ ವ್ಯಾಜ್ಯವನ್ನು ವಿಚಾರಣೆಗೆ ಒಳಪಡಿಸುತ್ತಾ ಸುಪ್ರೀಮ್ ಕೋರ್ಟ್ ಅಂತಿಮವಾಗಿ ತೀರ್ಪು ಕೊಟ್ಟದ್ದು ಹೀಗೆ:
A total ban (on Cattle Slaughter) was not permisseble if, Under economic conditions, keeping useless bull or bullock be a burden on the society and therefore not in the public interest – ಸಮಾಜದ ಮೇಲೆ ಹೊರೆಯಾಗಬಲ್ಲ ಮತ್ತು ಸಾರ್ವಜನಿಕ ಹಿತಾಸಕ್ತಿಯನ್ನೂ ಪ್ರತಿನಿಧಿಸದ ನಿರುಪಯುಕ್ತ ಜಾನುವಾರುಗಳಿರುವಲ್ಲಿ, ಜಾನುವಾರು ಹತ್ಯೆಗೆ ಸಂಪೂರ್ಣ ನಿಷೇಧ ವಿಧಿಸುವುದು ಅನುವದನೀಯವಲ್ಲ.’ (ವಿಕಿಪೀಡಿಯಾ)
ನಿಜವಾಗಿ, ಕರ್ನಾಟಕದಲ್ಲಿ ಈ ಮೊದಲೇ ಜಾರಿಯಲ್ಲಿದ್ದ ‘ಗೋಹತ್ಯೆ ತಡೆ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ 1964’ರ ಬದಲು ರಾಜ್ಯ ಬಿಜೆಪಿ ಸರಕಾರವು ಜಾರಿಗೆ ತರಲು ಹೊರಟಿದ್ದ, ‘ಹತ್ಯೆ ತಡೆ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ 2010’ರಲ್ಲಿ ಇದ್ದದ್ದು ಈ ಗೊಂದಲಗಳೇ. ಒಂದು ಹಸು ಗರಿಷ್ಠ ಅಂದರೆ 14 ವರ್ಷಗಳ ವರೆಗೆ ಹಾಲು ಕೊಡುತ್ತದೆ. ಹಸು ಎಂದಲ್ಲ, ಎಮ್ಮೆ, ಕೋಣ, ಎತ್ತು, ಗೂಳಿಗಳೆಲ್ಲ ಉಪಯೋಗಕ್ಕೆ ಬರುವುದು 14-15 ವರ್ಷಗಳ ವರೆಗೆ ಮಾತ್ರ. ಹಾಗಂತ, ಆ ಬಳಿಕ ಅವು ತಕ್ಷಣ ಸಾಯುತ್ತವೆ ಎಂದಲ್ಲ. ಇನ್ನೂ 10 ವರ್ಷಗಳ ವರೆಗೆ ಬದುಕುವ ಸಾಮರ್ಥ್ಯ ಅವುಗಳಲ್ಲಿರುತ್ತವೆ. ಆದರೆ ಹಾಲು ಕೊಡದ, ಉಳುಮೆಗೆ ಬಾರದ ಈ ಅಯೋಗ್ಯ ಜಾನುವಾರುಗಳನ್ನು ಸಾಕುವ ಸಾಮರ್ಥ್ಯ ಎಷ್ಟು ರೈತರಲ್ಲಿದೆ? ಅವುಗಳಿಗೆ ಮೇವು, ಹಿಂಡಿಗಳನ್ನು ಒದಗಿಸುವುದಕ್ಕೆ ವರಮಾನ ಬೇಕಲ್ಲವೇ? ಉಳುಮೆಗೆ ಯೋಗ್ಯವಲ್ಲದ ಎತ್ತು ಕನಿಷ್ಠವೆಂದರೆ, 20ರಿಂದ 30 ಸಾವಿರದಷ್ಟು ಬೆಲೆ ಬಾಳುತ್ತದೆ. ಈ ಎತ್ತನ್ನು ಮಾರದೇ ಓರ್ವ ರೈತ ಉಳುಮೆಗೆ ಯೋಗ್ಯವಾದ ಬೇರೆ ಎತ್ತನ್ನು ಖರೀದಿಸುವುದಾದರೂ ಹೇಗೆ? ಖರೀದಿಸದಿದ್ದರೆ ಉಳುಮೆಗೆ ಏನು ಮಾಡಬೇಕು?
ಮತ್ತಷ್ಟು ಓದು 
ಎರಡು ರಾಷ್ಟ್ರೀಯ ಪಕ್ಷಗಳ ತುಲನೆ
– ಚಕ್ರವರ್ತಿ ಸೂಲಿಬೆಲೆ
ಬ್ರಿಟಿಷರ ಕೊನೆಯ ವೈಸ್ರಾಯ್ ಮೌಂಟ್ ಬ್ಯಾಟನ್. ಹಾಗಾದರೆ ಭಾರತದ ಮೊದಲ ವೈಸ್ರಾಯ್ ಯಾರು ಗೊತ್ತ? ಮತ್ಯಾರು? ಈ ದೇಶದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರೂ!
ನೆಹರೂ ಅತ್ಯಂತ ಶ್ರದ್ಧೆಯಿಂದ ಆಂಗ್ಲರ ರಾಜನೀತಿಯನ್ನು ಅರಿತುಕೊಂಡರು. ಅದನ್ನು ಹಂತಹಂತವಾಗಿ ಪ್ರಯೋಗಿಸಲಾರಂಭಿಸಿದರು. ಅಧಿಕಾರ ಕೈಗೆ ದಕ್ಕುವ ಮುನ್ನಿನ ಚುನಾವಣೆಗಳಲ್ಲಿ ತಮ್ಮ ಚಾಕಚಕ್ಯತೆಯನ್ನು, ವಿಭಜಿಸಿ ಗೆಲ್ಲುವ ತಂತ್ರವನ್ನು ಚೆನ್ನಾಗಿಯೇ ಬಳಸಿದರು. ಒಂದೆಡೆ ಮುಸಲ್ಮಾನರನ್ನು ಓಲೈಸಿ ಗೆಲ್ಲುವುದು, ಮತ್ತೊಂದೆಡೆ ಪಟೇಲರನ್ನು ಕಡು ಹಿಂದೂವಾಗಿ ಬಿಂಬಿಸಿ ಹಿಂದೂಗಳ ಮತವನ್ನು ಸೆಳೆದುಕೊಳ್ಳುವ ತಂತ್ರಗಾರಿಕೆ ಯಶಸ್ವಿಯಾಯ್ತು. ನೆಹರೂ ಪಕ್ಕಾ ಇಂಗ್ಲೀಶ್ ಬಾಬುವಾಗಿಬಿಟ್ಟರು. ಆಗಲೇ ಗಾಂಧೀಜಿ ಗಾಬರಿಯಿಂದ ಹೇಳಿದ್ದು, ‘ದೇಶ ವಿಭಜನೆಗೊಂಡು ಸ್ವಾತಂತ್ರ್ಯ ಬಂತು. ಇನ್ನು ಮುಂದೆ ಕಾಂಗ್ರೆಸ್ಸನ್ನು ವಿಸರ್ಜಿಸಿಬಿಡೋಣ.’ ಸ್ವತಃ ಗಾಂಧೀಜಿಗೆ ಅಸಹ್ಯವಾಗಿತ್ತು. ತಾನೇ ಮೂಲೆ ಮೂಲೆಗೆ ಕೊಂಡೊಯ್ದ ಕಾಂಗ್ರೆಸ್ಸು ಮುಂದೊಮ್ಮೆ ದೇಶದ ದುರ್ಗತಿಗೆ ಕಾರಣವಾಗುತ್ತದೆಂಬ ಸ್ಪಷ್ಟ ಅರಿವು ಅವರಿಗಿತ್ತು.
ಬಿಜೆಪಿಗೂ ಕಾಂಗ್ರೆಸ್ಸಿಗೂ ಒಂದು ಎದ್ದುಕಾಣುವಂತಹ ಭಿನ್ನತೆ ಇದೆ. ಒಂದು, ಕಾರ್ಯಕರ್ತರಿಂದಲೇ ನಿರ್ಮಾಣಗೊಂಡ, ಕೆಡರ್ ಆಧಾರಿತ ಪಕ್ಷ. ಮತ್ತೊಂದು, ಅಗತ್ಯ ಬಿದ್ದಾಗ ಕಾರ್ಯಕರ್ತರನ್ನು ಕೊಂಡುಕೊಳ್ಳುವ ಪಕ್ಷ. ಇವತ್ತಿಗೂ ನಾನು ಕಾಂಗ್ರೆಸ್ಸಿಗ ಎಂದು ಎದೆ ತಟ್ಟಿ ಹೇಳುವ ಸಾಮಾನ್ಯ ಕಾರ್ಯಕರ್ತರನ್ನು ತೋರಿಸಿ ನೋಡೋಣ. ಅಲ್ಲಿ ಕರುಳ ಸಂಬಂಧಗಳಿಲ್ಲ. ಅದೊಂಥರಾ ನಕಲು ಮಾಡಿಸಿ ನೂರು ಪ್ರತಿಶತ ಅಂಕ ಗಳಿಸುವ ಶಾಲೆಯಿದ್ದಂತೆ. ಆ ಶಾಲೆಯಲ್ಲಿ ಕೆಲಸ ನಡೆಯುವುದೇ ಕೊನೆಯ ಆರು ದಿನಗಳಲ್ಲಿ. ಹೀಗಾಗಿ ಬಂದ ಫಲಿತಾಂಶಕ್ಕೆ ಬೆನ್ನು ತಟ್ಟಿಕೊಳ್ಳುವವರು ಇರುತ್ತಾರೆಯೇ ಹೊರತು, ಆನಂದ ಪಡುವವರಲ್ಲ. ಈ ಕಾರಣಕ್ಕಾಗಿಯೇ ಕಾಂಗ್ರೆಸ್ ಬಿಟ್ಟು ಹೊರಬಂದಾಗ ತಾನು ತಾಯಿಯ ಮಡಿಲಿನಿಂದ ಹೊರಗೆ ಬಂದುಬಿಟ್ಟಿದ್ದೇನೆಂದು ಯಾರಿಗೂ ಅನ್ನಿಸೋದೇ ಇಲ್ಲ. ಅಲ್ಲಿ ತಪ್ಪಾದಾಗ ಪ್ರಶ್ನೆ ಯಾರನ್ನು ಕೇಳಬೇಕೆಂದು ಯಾರಿಗೂ ಗೊತ್ತೇಇರುವುದಿಲ್ಲ. ಗೋಹತ್ಯೆ ನಿಷೇಧ ಹಿಂತೆಗೆದುಕೊಂಡಿದ್ದನ್ನು ಕೇಳಿ ಅನೇಕ ಕಾಂಗ್ರೆಸ್ಸಿಗರೇ ಗರಮ್ ಆಗಿದ್ದಾರೆ. ದುರ್ದೈವ, ಈ ದರ್ದನ್ನು ಯಾರೆದುರು ತೋಡಿಕೊಳ್ಳಬೇಕೆಂದು ಗೊತ್ತಿಲ್ಲವಷ್ಟೆ. ಮುಖ್ಯಮಂತ್ರಿ ಸ್ಥಾನ ಸಿಗದಿದ್ದುದಕ್ಕೆ ಖರ್ಗೆಯ ಬಳಗ ಜಿಲ್ಲೆ ಜಿಲ್ಲೆಗಳಲ್ಲಿ ರಾಡಿ ಎಬ್ಬಿಸಿತಲ್ಲ, ಅದಕ್ಕೆಲ್ಲ ಪ್ರಚಾರವೇ ಸಿಗಲಿಲ್ಲ ಏಕೆ? ಬಹಳ ಸಿಂಪಲ್ಲು. ಈ ರೀತಿ ಜೀವ ಕೊಡುವ ಕಾರ್ಯಕರ್ತರು ಅಲ್ಲಿಲ್ಲ; ಖರೀದಿಸಿದವರಿಗಾಗಿ ತಲೆಕೆಡಿಸಿಕೊಳ್ಳಬೇಕಿಲ್ಲ ಅಂತರ್ಥ! ಇಷ್ಟು ಮಾತ್ರ ಬಿಜೆಪಿಯೊಳಗೆ ಕಿರಿಕಿರಿಯಾಗಿಬಿಟ್ಟಿದ್ದರೆ ಮಾಧ್ಯಮಗಳಿಗೆ ಹಬ್ಬವಾಗಿಬಿಟ್ಟಿರುತ್ತಿತ್ತು. ಏಕೆ ಗೊತ್ತೇನು? ರಾಯಚೂರಿನಲ್ಲಾಗುವ ಒಂದು ಸಣ್ಣ ಬೆಳವಣಿಗೆಗೂ ಮಡಿಕೇರಿಯ ಕಾರ್ಯಕರ್ತ ನೊಂದುಕೊಳ್ಳುತ್ತಾನೆ. ಅವನ ಹೃದಯ ಕಂಪಿಸುತ್ತದೆ.
‘ಕುಮಾರ’ ಮುಖ್ಯಮಂತ್ರಿ ಗಾದಿಗೆ! ‘ಮೋದಿ’ ಪ್ರಧಾನಿ ಹುದ್ದೆಗೆ!
– ಗೋಪಾಲಕೃಷ್ಣ
ಅಭಿವೃದ್ಧಿಯೇ ಮಾತನಾಡುವುದಾದರೆ; ‘ಕುಮಾರಣ್ಣ’ ಮುಖ್ಯಮಂತ್ರಿ ಗಾದಿಗೆ! ‘ಮೋದಿಜಿ’ ಪ್ರಧಾನಿ ಹುದ್ದೆಗೆ!
ಅರವತ್ತಾರು ವಸಂತಗಳ ಬಂಧಮುಕ್ತ ಬದುಕು.ಈ ನಡುವೆ ದೇಶ ಕಂಡದ್ದು 13 ಮಂದಿ ಪ್ರಧಾನಮಂತ್ರಿಗಳನ್ನು. ರಾಜ್ಯವನ್ನಾಳಿದ್ದು 21 ಮುಖ್ಯಮಂತ್ರಿಗಳು. ಇವರೆಲ್ಲರಲ್ಲಿಯೂ; ದೇಶದಲ್ಲಿ ಲಾಲ್ ಬಹದ್ದೂರ್ ಶಾಸ್ತ್ರಿ, ಇಂದಿರಾಗಾಂಧಿ, ಪಿ.ವಿ.ನರಸಿಂಹರಾವ್, ಅಟಲ್ ಬಿಹಾರಿ ವಾಜಪೇಯಿಯವರನ್ನು ಮತ್ತೆ ಮತ್ತೆ ನೆನದರೆ, ರಾಜ್ಯದಲ್ಲಿ ದೇವರಾಜ ಅರಸು ಅವರ ಸಾಮಾಜಿಕ ಪರಿಕಲ್ಪನೆ, ರಾಮಕೃಷ್ಣ ಹೆಗಡೆ ಅವಧಿಯ ಜನಪರ ಕಾರ್ಯಕ್ರಮಗಳು, ಎಸ್.ಎಂ.ಕೃಷ್ಣ ಅವರ ಲಯ ತಪ್ಪದ ಆಡಳಿತ, ಹೆಚ್.ಡಿ.ಕುಮಾರಸ್ವಾಮಿಯವರ ಇಪ್ಪತ್ತೇ ತಿಂಗಳ ಆಡಳಿತವನ್ನು ಮಾತ್ರ ಇಂದಿಗೂ ಮೆಲುಕು ಹಾಕುವಂತಾಗಿದೆ.
ಭಾರತದ ಜನಸಂಖ್ಯೆ 121 ಕೋಟಿಯನ್ನು ದಾಟಿರಬಹುದು. ನಾವು ಆಯ್ಕೆ ಮಾಡುವ ಜನಪ್ರತಿನಿಧಿಗಳು ಸುಮಾರು 5400 ಮಂದಿಯಷ್ಟೇ. ಆದರೆ, ಇಷ್ಟು ಜನ ಪ್ರತಿನಿಧಿಗಳು ತಮ್ಮ ಕ್ಷೇತ್ರದ ಜನರ ಆಶಯಗಳಿಗೆ ತಕ್ಕಂತೆ ನಡೆಯುವುದು ಅಪರೂಪ. ಅವರುಗಳ ನಿಷ್ಠೆಯೇನಿದ್ದರೂ ದೇಶವಾದರೆ ಪ್ರಧಾನಿಗೆ! ರಾಜ್ಯವಾದರೆ ಮುಖ್ಯಮಂತ್ರಿಗೆ ಮೀಸಲು ಎಂಬಂತಿರುತ್ತದೆ. ಸಂವಿಧಾನದ ಪ್ರಕಾರ ಮುಖ್ಯಮಂತ್ರಿ ಅಥವಾ ಪ್ರಧಾನಮಂತ್ರಿಯನ್ನು ಶಾಸಕರು, ಲೋಕಸಭಾ ಸದಸ್ಯರು ಆಯ್ಕೆ ಮಾಡಬೇಕು. ಆ ಪರಿಪಾಠ ಮುರಿದು ಬಿದ್ದು ಎಷ್ಟೋ ವರ್ಷಗಳು ಆಗಿವೆ. ಈಗೇನಿದ್ದರೂ ಚುನಾವಣಾ ಪೂರ್ವದಲ್ಲಿಯೇ ನಾಯಕನ ಆಯ್ಕೆ ಇಲ್ಲವೇ ಹೈಕಮಾಂಡ್ ಹೇಳಿದವರು ಅತ್ಯುನ್ನತ ಹುದ್ದೆಯಲ್ಲಿ ಕೂರುತ್ತಾರೆ.




