ನೂರರ ನೋಟು ಮತ್ತು ನೈತಿಕತೆ
– ಪ್ರಸನ್ನ
ನನ್ನದು ಕುಗ್ರಾಮದ ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ. ಸಹಪಾಠಿ ದಯಾನಂದ ನಮ್ಮೂರ ಪಟೇಲರ ಮೊಮ್ಮಗ. ಆಗ ಕಾಂಗ್ರೆಸ್ ಮತ್ತು ಜನತಾ ಪಕ್ಷ ಎರಡೇ ಪಕ್ಷಗಳಿದ್ದಂತೆ ತೋರುತ್ತದೆ. ಯಾವ ಚುನಾವಣೆ ಎಂಬುದು ನೆನಪಿಲ್ಲ. ಕಾಂಗ್ರೆಸ್ಸಿನ ಚಿಹ್ನೆ ಹಸು ಮತ್ತು ಕರುವಿನದ್ದು. ತಗಡಿನ ಬಿಲ್ಲೆಯ ಮೇಲೆ ಮುದ್ರಿತಗೊಂಡಿದ್ದ ಆ ಬಿಲ್ಲೆ ನಮಗೆ ಅಚ್ಚುಮೆಚ್ಚು, ಕಾರಣ ಎರಡು ತೂತ ಹಾಕಿ ದಾರ ಕಟ್ಟಿ ಜುಯ್ ಎಂದೆಳೆಯುವ ಮೋಜಿನ ಬಿಲ್ಲೆಗೆ ಅದು ಅತ್ಯಂತ ಸೂಕ್ತವಾಗಿತ್ತು. ಆಗ ಜನತಾ ಪಕ್ಷದವರು ಸಂಘರ್ಷ ಚಿತ್ರದ “ಯೌವನದ ಹೊಳೆಯಲ್ಲಿ ಈಜಾಟವಾಡಿದರೆ ಓ ಹೆಣ್ಣೆ ಸೋಲು ನಿನಗೆ” ಹಾಡಿನ ರೀಮಿಕ್ಸ್ ಮಾಡಿ, ಓ ಇಂದಿರಾ ಸೋಲು ನಿನಗೆ ಎಂಬ ಹಾಡನ್ನು ಎಲ್ಲೆಡೆ ಬಿತ್ತರಿಸುತ್ತಿದ್ದ ನೆನಪು ಇದೇ ಚುನಾವಣೆಯ ಅಥವ ನಂತರದ್ದ ನೆನಪಿಲ್ಲ.
ಒಂದು ದಿನ ದಯಾನಂದ ಮಧ್ಯಾಹ್ನ ಊಟದ ನಂತರ ಬಂದು ನೂರು ರೂಪಾಯಿ ನೋಡಿದ್ಯ? ಅಂತ ಕೇಳ್ದ, ಇಲ್ಲಾ ಅಂತ ತಲೆ ಆಡಿಸಿದೆ. ನೋಡ್ತಿಯ? ಅಂದವನಿಗೆ ಗೋಣು ಹಾಕಿ ಇಚ್ಚೆ ವ್ಯಕ್ತ ಪಡಿಸಿದೆ. ಸರಿ ಬಾ ತೋರಿಸ್ತಿನಿ. ಭಯದಿಂದ ಕೇಳಿದೆ ನಿನ್ ಹತ್ರ ಹೇಗ್ ಬಂತು. ನನ್ ಹತ್ರ ಇಲ್ಲ. ನಮ್ಮನೆಲಿದೆ ತೋರಿಸ್ತಿನಿ ಬಾ.
ಪಟೇಲರು ವಂಶಪಾರಂಪರ್ಯವಾಗಿ ಕಾಂಗ್ರೆಸ್ಸಿನ ಸದಸ್ಯರು. ಅವರ ವಂಶದ ಯಾರೋ ಒಬ್ಬರು ನೆಹರುರೊಡನೆ ಇದ್ದ ಫೋಟೊವೊಂದು ಅವರ ಮನೆಯ ನಡುಮನೆಯ ಮುಂಬಾಗಿಲಿನ ಎದುರು ನೇತಾಡುತ್ತಿತ್ತು.
ಅವ್ವ ಒಳ್ಗೆ ಕೆಲ್ಸ ಮಾಡ್ತವ್ಳೆ ಎಂದ, ಮೆಲ್ಲಗೆ ನಡುಮನೆ ದಾಟಿ ಹಿಂದೆ ಕೋಣೆಯೊಂದಕ್ಕೆ ನನ್ನನ್ನು ಎಳೆದುಕೊಂಡು ಹೋದ. ಕೊಟೆಯೊಳಗೆ ನುಸುಳಿದಂತ ಅನುಭವ ದೊಡ್ಡಮನೆ, ದವಸ ಧಾನ್ಯಗಳ ತುಂಬಿತುಳುಕುತ್ತಿದ್ದ ಕೋಣೆಯ ಮೂಲೆಯೊಂದರಲ್ಲಿ ನಾಲ್ಕಾರು ತೆಳ್ಳನೆ ಗೋಣಿ ಚೀಲದ ಮೂಟೆಯ ಬಳಿಗೆ ಕರೆದೊಯ್ದು ಬೆರಳಿನಿಂದ ಚೀಲದ ದಾರಗಳನ್ನು ಬಿಡಿಸಿ ತೂತಿನಿಂದ ನೋಡು ಎಂದ ಉಹುಂ ಕತ್ತಲೆಯಲ್ಲಿ ಕಾಣುತ್ತಿರಲಿಲ್ಲ. ಮೆಲ್ಲಗೆ ಸ್ವಿಚ್ ಹಾಕಿದಾಗ ಮಂದ ಬೆಳಕು ಹರಿಯಿತು. ಯಾರ್ಲಾ ಅದು ಕೋಣ್ಯಾಗೆ? ಎಂಬ ವಯಸ್ಸಾದ ಹೆಣ್ಣಿನ ಧ್ವನಿ ತೂರಿ ಬಂತು. ನಾನು ನಡುಗಿ ಹೋಗಿದ್ದೆ. ಏ ನಾನೆ ಕಣಜ್ಜಿ ದಯಾ ಎಂದು ರೇಗಿದ. ಅಲ್ಲೇನ್ಲಾ ಕ್ಯಾಮೆ ನಿಂಗೆ ಇಸ್ಕೂಲ್ಗೆ ಓಗಿಲ್ವೆನ್ಲಾ? ಏಯ್ ಓಗಿದಿನಿ, ಪುಸ್ಕ ಮರ್ತೋಗಿದ್ದೆ ತಗೊಂಡೋಯ್ತಿನಿ.
ರಾಜರಿಲ್ಲದ ರಾಜ್ಯದಲ್ಲಿ ವಂಶಾಡಳಿತದ ಪೋಷಣೆ
-ಗೋಪಾಲ ಕೃಷ್ಣ
ರಾಜಪ್ರಭುತ್ವದ ನೆರಳು ಮಾಸುವ ಮುನ್ನವೇ, ಕುಟುಂಬ ರಾಜಕಾರಣ ತಲೆ ಎತ್ತುತ್ತಿದೆ. ಪ್ರಜಾಪ್ರಭುತ್ವದ ಹರೆಯದಲ್ಲೇ ಆಶಯಗಳು ಸತ್ತು ಬೀಳುತ್ತಿವೆ. ಜನಸೇವೆಯೆಂಬ ಟೊಳ್ಳು ಕುದುರೆಗೆ ಹಣ, ಹೆಣ್ಣು, ಅಧಿಕಾರದ ಲೇಪನ ಹಚ್ಚಿ ಹಾದಿ ತಪ್ಪಿಸಲಾಗುತ್ತಿದೆ. ದೇಶ ವಿಭಜನೆಯ ನಂತರ, ಧರ್ಮದ ಮೂಲಕ ವಿಭಜನೆ, ಇದೀಗ ಜಾತಿ ಜಾತಿಗಳ ನಡುವೆ ವಿಭಜಿಸಿ, ಸಾಮರಸ್ಯದ ಬದಲಿಗೆ ಸಂಘರ್ಷದ ಬೋಧನೆ ನಡೆಯುತ್ತಿದೆ.ಕಾಲು ಮುರಿದ ಕಾರ್ಯಾಂಗ,ಸವೆದು ಹೋದ ಶಾಸಕಾಂಗಗಳ ಮಧ್ಯೆ ಆಮ್ ಆದ್ಮಿ ಕಂಗಾಲಾಗಿದ್ದಾನೆ.
ಇಲ್ಲಿ ದೂರುವುದಾದರೂ ಯಾರನ್ನು? ಸಂತತಿ ರಾಜಕಾರಣದ ಉನ್ನತೀಕರಣಕ್ಕೆ ನೀರು-ಗೊಬ್ಬರ ಹಾಕಿ ಬೆಳೆಸುತ್ತಿರುವಾಗ ವಂಶಾಡಳಿತದ ಫಲ ದೊರೆಯದೆ ಮತ್ತಿನ್ನೇನು ಸಿಕ್ಕೀತು…..? ನಾಗರೀಕ, ಜ್ಞಾನಸಂಪನ್ನ ಸಮಾಜದಲ್ಲಿಯೇ ಜನತಂತ್ರ ವ್ಯವಸ್ಥೆಗೆ ಧಕ್ಕೆಯಾದರೆ, ಪ್ರಜಾಪ್ರಭುತ್ವಕ್ಕೆ ಉಳಿಗಾಲವುಂಟೇ?ಉದಾತ್ತ ಭಾರತ ಸಂಸ್ಕೃತಿಯನ್ನು ಬಿಟ್ಟು, ಪಾಶ್ಚಾತ್ಯ ಸಂಸ್ಕೃತಿಗೆ ಮಾರು ಹೋದ ಯುವ ಜನತೆಯಿಂದ ಸಮೃದ್ಧ ರಾಷ್ಟ್ರ ನಿರ್ಮಾಣವನ್ನು ಬಯಸಲಾದೀತೆ? ತಪ್ಪು-ಒಪ್ಪುಗಳಿಗೆ ನಮ್ಮ ಮನಸ್ಸುಗಳು ಒಗ್ಗೂಡದಿರುವಾಗ, ಚಾರಿತ್ರ್ಯವಂತ ಸಮಾಜದ ನಿರೀಕ್ಷೆ ನಮ್ಮ ಭ್ರಮೆಯಲ್ಲವೇ?
ಮತ್ತಷ್ಟು ಓದು 
ಕರ್ನಾಟಕದಲ್ಲಿ ಅಶಾಂತಿಯ ಗಾಳಿ ಬೀಸಬೇಕೆಂದು ಕಾಂಗ್ರೆಸ್ಸ್ ನಿರ್ಧರಿಸಿದೆಯೇ?
– ರಾಕೇಶ್ ಶೆಟ್ಟಿ
ಪ್ರಶಾಂತವಾಗಿರುವ ಕರ್ನಾಟಕದಲ್ಲಿ ಅಶಾಂತಿಯ ಗಾಳಿ ಬೀಸಬೇಕೆಂದು ಕಾಂಗ್ರೆಸ್ಸ್ ನಿರ್ಧರಿಸಿದೆಯೇ? ಬಹುಶಃ ಹೌದು ಅನ್ನಿಸುತ್ತಿದೆ. ಶ್ರೀರಂಗ ಪಟ್ಟಣದಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ 50 ಪ್ರತಿಶತ ಮೀಸಲು ನೀಡುವಂತ ವಿವಿಯೊಂದನ್ನು ಸ್ಥಾಪಿಸುವ ಯೋಜನೆ ಕೇಂದ್ರ ಸರ್ಕಾರದ ಮುಂದಿದೆ ಮತ್ತು ಆ ವಿವಿಗೆ ‘ಟಿಪ್ಪು ವಿಶ್ವವಿದ್ಯಾಲಯ’ ಅಂತ ನಾಮಕರಣ ಮಾಡುತ್ತೇವೆ ಅನ್ನುವ ಹೇಳಿಕೆಯನ್ನು ಕೇಂದ್ರ ಸಚಿವರು ಕೊಟ್ಟ ದಿನದಿಂದಲೇ,’ಟಿಪ್ಪು’ ಬಗ್ಗೆ ಚರ್ಚೆ ಶುರುವಾಗಿದೆ.ಚಿದಾನಂದ ಮೂರ್ತಿ,ಎಸ್.ಎಲ್ ಭೈರಪ್ಪ ಮತ್ತು ಇತರರು, ಟಿಪ್ಪು ಕಾಲದಲ್ಲಿ ನಡೆದ ಮತಾಂತರ,ಪರ್ಷಿಯಾ ಭಾಷೆಯ ಹೇರಿಕೆ ಮತ್ತು ಮಲಬಾರಿನ ಸೇನಾಧಿಪತಿಗಳಿಗೆ ಮತ್ತು ಇತರರಿಗೆ ಟಿಪ್ಪು ಬರೆದ ಪತ್ರವನ್ನು ಮುಂದಿಟ್ಟು ‘ಟಿಪ್ಪು ಹೆಸರಿನ ವಿವಿ’ಯನ್ನು ವಿರೋಧಿಸುತಿದ್ದರೆ, ಇನ್ನೊಂದು ಕಡೆ ಟಿಪ್ಪು ಪರ ನಿಂತವರು, ಟಿಪ್ಪು ಒಬ್ಬ ದೇಶ ಭಕ್ತ, ಮಕ್ಕಳನ್ನು ದೇಶಕ್ಕಾಗಿ ಅಡ ಇಟ್ಟವನು ಅನ್ನುತಿದ್ದಾರೆ. ಟಿಪ್ಪು ಕುರಿತ ಈ ಚರ್ಚೆ ನಡೆಯುತ್ತಿರುವುದೂ ಇದೇ ಮೊದಲೇನಲ್ಲ.ಟಿಪ್ಪು ಕಾಲದ ಇತಿಹಾಸದ ಬಗ್ಗೆ ಅನೇಕ ಸಾಕ್ಷಿಗಳು ಸಿಗುವುದರಿಂದ ಟಿಪ್ಪು ಏನು ಅಂತ ನಿರ್ಧರಿಸುವುದು ಬೇರೆಯದೇ ವಿಷಯ.ಹಾಗಾಗಿ ಈ ಲೇಖನದಲ್ಲಿ ಟಿಪ್ಪು ಬಗ್ಗೆ ಗಮನ ಹರಿಸುವುದಕ್ಕಿಂತ,’ಅಲ್ಪಸಂಖ್ಯಾತರಿಗೆ ಪ್ರತ್ಯೇಕ ವಿವಿ (ಅಥವಾ 50% ಮೀಸಲು ನೀಡುವ ವಿವಿ) ಅಗತ್ಯವಿದೆಯೇ?’ ಅನ್ನುವ ಪ್ರಶ್ನೆಯನ್ನು ಕೇಂದ್ರ ಸರ್ಕಾರಕ್ಕೆ ಮತ್ತು ಟಿಪ್ಪು ವಿವಿ ಬೆಂಬಲಿಸುತ್ತಿರುವವರಿಗೆ ಕೇಳ ಬಯಸುತ್ತೇನೆ?
ರಾಜ್ಯದಲ್ಲಿ ಈಗಾಗಲೇ ಇರುವ 20ಕ್ಕೂ ಹೆಚ್ಚು ರಾಜ್ಯದ ವಿವಿ ಮತ್ತು ಡೀಮ್ದ್ ವಿವಿಗಳಲ್ಲಿ ಇಲ್ಲದಿರುವ ಹೊಸತನವೇನಾದರೂ, ಶ್ರೀರಂಗ ಪಟ್ಟಣದಲ್ಲಿ ನಿರ್ಮಿಸ ಬಯಸಿರುವ ವಿವಿಯಲ್ಲಿ ಇರಲಿದೆಯೇ? ಮೈಸೂರಿನಲ್ಲೇ 2 ವಿವಿ ಇರುವಾಗ ಶ್ರೀರಂಗಪಟ್ಟಣದಲ್ಲಿ ಇನ್ನೊಂದ್ಯಾಕೆ ಅನ್ನುವುದು ಒಂದು ಪ್ರಶ್ನೆಯಾದರೆ, ಜ್ಞಾನರ್ಜನೆಗಾಗಿಯೇ ವಿವಿಯನ್ನು ಸ್ಥಾಪಿಸುವ ಉದ್ದೇಶವಿದ್ದರೆ,ಅದರಲ್ಲಿ ಅಲ್ಪಸಂಖ್ಯಾತರಿಗೆ 50 ಪ್ರತಿಶತ ಮೀಸಲು ಯಾತಕ್ಕಾಗಿ? ಜ್ಞಾನಕ್ಯಾವ ಧರ್ಮ? ವಿದ್ಯೆ ಕಲಿಯಲು ಬರುವವರು ಪದವಿಯ ವಿಷಯಗಳ ಮೇಲೆ ನಿರ್ಧರಿಸಿ ಒಂದು ವಿವಿಗೆ ಹೋಗುತ್ತಾರೋ? ಅಥವಾ ಅವರ ಧರ್ಮಕ್ಕೆ ಅನುಗುಣವಾಗಿ ವಿವಿಗಳನ್ನು ಆಯ್ಕೆ ಮಾಡಿಕೊಳ್ಳುತಾರೆಯೋ?
’ಟಿಪ್ಪು’ ಹೆಸರಿನಲ್ಲಿ ’ಕೈ’ ರಾಜಕೀಯ?
– ಅಶ್ವಿನ್ ಎಸ್. ಅಮೀನ್
ಬಹುಶಃ ಭಾರತದಲ್ಲಿ ಹಿಂದೂ ಧರ್ಮ ಬಿಟ್ಟು ಇತರ ಧರ್ಮೀಯರಿಗೆ ಕೊಡುವ ಸವಲತ್ತುಗಳು,ಸೌಕರ್ಯಗಳು ಇತರ ಯಾವ ದೇಶದಲ್ಲೂ ಇರಲಿಕ್ಕಿಲ್ಲ.. ನಮ್ಮ ರಾಜಕೀಯ ವ್ಯವಸ್ಥೆಯೇ ಅಂತಹುದು. ನಮ್ಮ ರಾಷ್ಟ್ರಪಿತರು ಬುನಾದಿ ಹಾಕಿದ ಈ ಸಂಸ್ಕೃತಿ ಇಂದಿನವರೆಗೂ ನಿಂತಿಲ್ಲ.. ಈಗ ಇಂತಹದೇ ಒಂದು ಕಾರಣಕ್ಕಾಗಿ ಸುದ್ದಿ ಮಾಡುತ್ತಿರುವುದು ಪ್ರತ್ಯೇಕ ಮುಸ್ಲಿಂ ವಿಶ್ವ ವಿದ್ಯಾಲಯ.
ಭಾರತದಲ್ಲಿರುವ ಒಂದು ಪ್ರತ್ಯೇಕ ಮುಸ್ಲಿಂ ವಿದ್ಯಾಲಯ ಅಲಿಘಡ. ಈಗ ಕೇಂದ್ರ ಸರ್ಕಾರ ಇನ್ನೊಂದು ಪ್ರತ್ಯೇಕ ಮುಸ್ಲಿಂ ವಿವಿ ಯನ್ನು ಕರ್ನಾಟಕದ ಶ್ರೀರಂಗಪಟ್ಟಣ ದಲ್ಲಿ ಸ್ಥಾಪಿಸಲು ಉದ್ದೇಶಿಸಿದೆ.ಈಗಾಗಲೇ ಒಂದು ಪ್ರತ್ಯೇಕ ವಿವಿ ಹೊಂದಿರುವ ಮುಸ್ಲಿಂ ಸಮುದಾಯಕ್ಕೆ ಮತ್ತೊಂದು ವಿವಿ ಯಾಕೆ? ಅದರಲ್ಲೂ ಧರ್ಮದ ಆಧಾರದ ಮೇಲೆ ವಿವಿ ವಿಂಗಡಣೆ ಸರಿಯೇ? ವಿಶ್ವವಿದ್ಯಾಲಯಗಳಿಗೆ ಧರ್ಮದ ಲೇಪ ಯಾಕೆ ಬೇಕು? ಭಾರತದಲ್ಲಿರುವ ಅಷ್ಟೂ ವಿವಿಗಳಲ್ಲಿ ಮುಸ್ಲಿಮರು ಓದಲಾರರೇ? ವಿವಿಗಳಲ್ಲಿ ಮುಸ್ಲಿಮರಿಗೆ ಅಂತಹ ತೊಂದರೆಗಳಿವೆಯೇ? ಹಾಗೆ ಹೀಗೆ ಎಂದು ಪ್ರಶ್ನೆಗಳನ್ನು ಕೇಳುತ್ತಾ ಹೋದರೆ ನಮಗೆ ಸಿಗುವ ಉತ್ತರ “ಹಾಗೇನೂ ಇಲ್ಲ, ಎಲ್ಲವೂ ಸರಿಯಾಗಿದೆ..” ಹಾಗಿದ್ದಲ್ಲಿ ಪ್ರತ್ಯೇಕ ಮುಸ್ಲಿಂ ವಿವಿ ಸ್ಥಾಪನೆಯ ಉದ್ಧೇಶ ರಾಜಕೀಯ ತಂತ್ರ ಅನ್ನುವುದು ಸ್ಪಷ್ಟವಾಗುತ್ತದೆ.
ಇನ್ನು ಮುಸ್ಲಿಮರಿಗೆ ಪ್ರತ್ಯೇಕ ವಿಶ್ವ ವಿದ್ಯಾಲಯ ಕೊಟ್ಟರೆ ಏನಾಗುತ್ತದೆ ಅನ್ನುವುದು ಅಲಿಘಡ ವಿವಿಯಲ್ಲೇ ಗೊತ್ತಾಗಿದೆ. ಅಲ್ಲಿ ಹುಟ್ಟಿಕೊಂಡ ‘ಸಿಮಿ’ ಸಂಘಟನೆ ದೇಶವ್ಯಾಪಿ ಬೆಳೆದು ದೇಶ ವಿರೋಧಿ ಭಯೋತ್ಪಾದನಾ ಸಂಘಟನೆಯಾಗಿ ಮಾರ್ಪಟ್ಟು ದೇಶದಾದ್ಯಂತ ವಿದ್ವಂಸಕ ಹಾಗು ದೇಶ ದ್ರೋಹಿ ಕೃತ್ಯಗಳನ್ನು ನಡೆಸಿ ಇಂದು ಆ ಸಂಘಟನೆಯನ್ನು ನಿಷೇಧಿಸಿದ್ದಾರೆ ಅಂದರೆ ಅದರ ಭಯಂಕರತೆಯನ್ನು ನಾವು ಅರ್ಥೈಸಿಕೊಳ್ಳಬೇಕಾಗಿದೆ. ಆದರೆ ಕೇಂದ್ರ ಸರಕಾರ ಇದರ ಬಗ್ಗೆ ಜಾಣ ಕುರುಡು ಪ್ರದರ್ಶಿಸಿ ಮತ್ತೊಂದು ವಿವಿಗೆ ಕೈ ಹಾಕಿರುವುದು ನಮ್ಮ ದೇಶದ ದುರದೃಷ್ಟವೆನ್ನಬೇಕು.




