ವಿಷಯದ ವಿವರಗಳಿಗೆ ದಾಟಿರಿ

Posts tagged ‘ಕಾಶ್ಮೀರ’

17
ಆಗಸ್ಟ್

ಅಂದು ಜೆ ಎನ್ ಯು, ಇಂದು ಬೆಂಗಳೂರು

– ತನ್ಮಯೀ ಪ್ರೇಮ್ ಕುಮಾರ್

downloadಜೆಎನ್‌ಯುನಲ್ಲಿ ನಡೆದ ದೇಶದ್ರೋಹದ ಕೆಲಸಗಳು, ಘೋಷಣೆಗಳು, ಬೌದ್ಧಿಕ ದಾರಿದ್ರ್ಯತನವನ್ನು, ವೈಚಾರಿಕ ಗುಲಾಮಿತನದ ಪರಿಸ್ಥಿತಿ ಕಂಡು ಮರುಗಿದ್ದೆ. ಎಷ್ಟೋ ಅಸಹನೆಯ ರಾತ್ರಿಗಳನ್ನು ನಿದ್ದೆಯಿಲ್ಲದೆ ಕಳೆದಿದ್ದೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರತಿಭಟನೆ, ವಿಚಾರ ಸಂಕಿರಣ, ಆಂದೋಲನದ ಭಾಗವಾಗಿದ್ದೆ ಕೂಡ. ಆದರೆ ಶಾಂತಿಪ್ರಿಯ ಬೆಂಗಳೂರಿನಲ್ಲಿ ಇಂಥದೇ ಘಟನೆ ನಡೆಯಬಹುದೆಂಬ ಕಲ್ಪನೆ ಕನಸಿನಲ್ಲೂ ಬಂದಿರಲಿಲ್ಲ. ಮೊನ್ನೆ ಜೆಎನ್‌ಯು ವಿವಿಯ ಸ್ನೇಹಿತೆಯೊಬ್ಬಳು ಸಿಕ್ಕಾಗಲೂ ಕರ್ನಾಟಕ ಇಂಥ ಘಟನೆಗಳಿಂದ ಮುಕ್ತವಾಗಿದೆ ಎಂಬ ಗರ್ವದಿಂದ ಮಾತನಾಡಿದ್ದೆ. ಮೊನ್ನೆಯವರೆಗೆ ಎಲ್ಲರ ನಂಬಿಕೆಯೂ ಅದೇ ಆಗಿತ್ತು. ಆದರೆ ಆಗಸ್ಟ್ 13ರ ಸಂಜೆ ಭಾರತ 70ನೇ ಸ್ವಾತಂತ್ರ್ಯ ಸಂಭ್ರಮದ ಹೊಸ್ತಿಲಲ್ಲಿ ನಿಂತ ಸಂದರ್ಭದಲ್ಲಿ ನಮ್ಮ ವಿಶ್ವಾಸಕ್ಕೆ, ನೆಮ್ಮದಿಯ ಬಾಳಿಗೆ ಕೊಡಲಿ ಪೆಟ್ಟು ಬೀಳುವಂತ ಘಟನೆ ನಡೆದಿದೆ. ಮತ್ತಷ್ಟು ಓದು »

27
ಜುಲೈ

ಕಶ್ಮೀರಿಯತ್ – ಅಸ್ಮಿತೆಯೋ ವಿಸ್ಮೃತಿಯೋ

–  ಶೈಲೇಶ್ ಕುಲ್ಕರ್ಣಿ
12-kashmir-protest-2೮೦ರ ದಶಕದ ಸಮಯ, ಕಾಶ್ಮೀರದಲ್ಲಿ ಇಸ್ಲಾಮೀ ಉಗ್ರವಾದ ನಿಧಾನವಾಗಿ ತನ್ನ ಹೆಡೆ ಬಿಚ್ಚುತ್ತಿತ್ತು . ಆಗಷ್ಟೇ ಆಫ್ಘಾನಿಸ್ತಾನವನ್ನ ರಷ್ಯಾದ ಬಾಹುಗಳಿಂದ ಬೇರ್ಪಡಿಸುವಲ್ಲಿ  ನಂಬಿಕಸ್ಥ ಸಹಾಯಕನಾಗಿ ಒದಗಿಬಂದ ಪಾಕಿಸ್ತಾನ  ಸಹಜವಾಗಿ ಅಮೇರಿಕಾದ ಕಣ್ಮಣಿಯಾಗಿತ್ತು . ಕಾಶ್ಮೀರದಲ್ಲಿ ಭಾರತದ ದಬ್ಬಾಳಿಕೆ ವಿರೋಧಿಸಿ ತಮ್ಮ ನ್ಯಾಯೋಚಿತ ಸ್ವಾತಂತ್ರವನ್ನು ಕೇಳುತ್ತಿರುವ ಜನರಿಗೆ ತನ್ನದು ನೈತಿಕ ಸಮರ್ಥನೆ ಅಷ್ಟೇ ಎಂಬ ಪಾಕಿಸ್ತಾನದ ವಾದಕ್ಕೆ ಅಮೇರಿಕಾ ಮತ್ತು ಯೂರೋಪಿನ ರಾಷ್ಟ್ರಗಳ ಮೃದು ಪ್ರೋತ್ಸಾಹವೂ ಇತ್ತು . ಇಷ್ಟು ಸಾಕಿತ್ತು ಪಾಕಿಸ್ತಾನಕ್ಕೆ.  ಅಫ್ಘಾನಿಸ್ತಾನದಲ್ಲಿ ಐಎಸ್ಐ ಸಹಾಯದಿಂದ ಹುಟ್ಟಿಕೊಂಡಿದ್ದ ಬಾಡಿಗೆ ಯೋಧರೆಲ್ಲ ಭಾರತದೊಳಕ್ಕೆ ನುಸುಳಿಸಲು ಅದರ ಯೋಜನೆ ಸಿದ್ಧವಾಗಿತ್ತು. ದಿನಭತ್ಯೆಯ ಮೇಲೆ ದುಡಿಯುತ್ತಿದ್ದ ಈ ಕೂಲಿ ಉಗ್ರರಿಗೆ ತನ್ನ ದೇಶದ ಗಡಿಯಿಂದಲೇ ಭಾರತದೊಳಕ್ಕೆ ಕಳ್ಳಸಾಗಣಿಕೆಗೆ ಶುರುವಿಟ್ಟಿತ್ತು.

ಮತ್ತಷ್ಟು ಓದು »

25
ಜುಲೈ

ಆಜಾದ್ ಕಾಶ್ಮೀರವಾದಿಗಳಿಗೆ ಶಾಶ್ವತ “ಆಜಾದಿ” ಕೊಡಬೇಕಾದ ಕಠಿಣ ಸಮಯವಿದು

– ರಾಕೇಶ್ ಶೆಟ್ಟಿ

12-kashmir-protest-2ಕಾಶ್ಮೀರದಲ್ಲಿ ಬರ್ಹನ್ ವನಿ ಎಂಬ ಭಯೋತ್ಪಾದಕ ರಕ್ಷಣಾ ಪಡೆಗಳ ಗುಂಡಿಗೆ ಬಲಿಯಾದ ನಂತರ ಶುರುವಾದ ಗಲಭೆಗೆ 42 (ಈ ಲೇಖನ ಬರೆಯುವ ಸಮಯಕ್ಕೆ) ಜನರು ಬಲಿಯಾಗಿ, 3000ದಷ್ಟು ಜನರು ಗಾಯಾಳುಗಳಾಗಿದ್ದಾರೆ ಎಂದು ವರದಿಯಾಗಿದೆ ಮತ್ತು 12ನೇ ದಿನಕ್ಕೂ ಕರ್ಫ್ಯೂ ಮುಂದುವರೆದಿದೆ! ಇಷ್ಟಕ್ಕೆಲ್ಲಾ ಕಾರಣವಾಗಿದ್ದು ಉಗ್ರನ ಶವ ಸಂಸ್ಕಾರಕ್ಕೆ ಅನುವು ಮಾಡಿಕೊಟ್ಟ ಕೇಂದ್ರ ಸರ್ಕಾರ ತಪ್ಪು ನಡೆ. ಉಗ್ರರು ಸತ್ತಾಗ ಅವರ ಕಳೆಬರವನ್ನು ಸಮುದ್ರಕ್ಕೋ, ನಾಯಿ-ನರಿಗಳಿಗೋ ಎಸೆಯುವುದು ಬಿಟ್ಟು ಕುಟುಂಬಸ್ಥರಿಗೆ ಕೊಟ್ಟಿದ್ದೇಕೆ? ಮುಂಬೈ ಸರಣಿ ಬಾಂಬ್ ಸ್ಪೋಟದ ಅಪರಾಧಕ್ಕಾಗಿ ನೇಣಿಗೇರಿದ ಯಾಕೂಬ್ ಮೆಮನ್ ಅಂತ್ಯಸಂಸ್ಕಾರದಲ್ಲಿ ಸೇರಿದ್ದ ಜನಸ್ತೋಮವನ್ನು ನೋಡಿಯಾದರೂ ಇವರು ಬುದ್ದಿ ಕಲಿಯಬಾರದಿತ್ತೇ? ಕನಿಷ್ಟ ಅಫ್ಜಲ್ ಗುರುವಿನ ಕಳೆಬರವನ್ನು ಕೊಡದೇ ಯುಪಿಎ ಸರ್ಕಾರ ತೋರಿದ ನಡೆಯನ್ನು ತೋರುವ ಜಾಣ್ಮೆಯನ್ನೇಕೆ ಕೇಂದ್ರದ ಬಿಜೆಪಿ ತೋರಿಸಲಿಲ್ಲ? ಮೈತ್ರಿ ಸರ್ಕಾರದ ಮರ್ಜಿಗೆ ಬಿದ್ದು ಈ ರೀತಿ ಮಾಡಿತೇ? ಇವರ ಈ ನೀತಿಯಿಂದಾಗಿ ಸಂಕಟ ಅನುಭವಿಸುತ್ತಿರುವುದು ಭದ್ರತಾಪಡೆಗಳು ಹಾಗೂ ಪೋಲಿಸರು. ಮತ್ತಷ್ಟು ಓದು »

11
ನವೆಂ

ಕಾನೂನು Vs ಪ್ರತ್ಯೇಕತೆ – ಬದಲಾಗಬೇಕಾಗಿದ್ದು ಯಾರು ?

– ಶೈಲೇಶ್ ಕುಲ್ಕರ್ಣಿ

Jammu-Kashmirಕಾಲಕಾಲಕ್ಕೆ ಭಾರತದ ಕೆಲವೊಂದು ರಾಜ್ಯಗಳ ಆಡಳಿತಾರೂಢ ಜನಪ್ರತಿನಿಧಿಗಳೇ ಭಾರತವಿರೋಧಿ ಭಾವನೆಗಳನ್ನ ಸಾರ್ವಜನಿಕವಾಗಿ ಪ್ರದರ್ಶನಕ್ಕಿಡೋದು ಅವ್ಯಾಹತವಾಗಿ ನಡೆದುಕೊಂಡು ಬಂದಿದೆ.ಈಗ್ಗೆ ಸ್ವಲ್ಪ ಸಮಯದ ಕೆಳಗೆ ಜಮ್ಮುಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಸಂವಿಧಾನದ ೩೭೦ನೆ ವಿಧಿ ಆ ರಾಜ್ಯದಲ್ಲಿ ಜಾರಿಗೊಂಡ ಪಕ್ಷದಲ್ಲಿ ಆ ರಾಜ್ಯ ಭಾರತದಭಾಗವಾಗಿ ಮುಂದುವರೆಯೋದಿಲ್ಲ ಅಂತ ಸಾರ್ವಜನಿಕವಾಗಿಯೇ ಹೇಳಿದ್ದರು.ಹೀಗೆ ಪ್ರತೀ ಬಾರಿ ಒಡಕಿನ ರಾಗ ಆಲಾಪಿಸಿದಾಗಲೂ ಅವರೆಲ್ಲರ ದುಃಖಕ್ಕೆ  AFSPA ನಂಥ  ಕಾನೂನನ್ನೇ  ಹೊಣೆಯಾಗಿಸೋದು ಮಾಮೂಲಿ ಸಂಗತಿ .

ಜಮ್ಮು-ಕಾಶ್ಮೀರದ ಜೊತೆಗೇ ಭಾರತದ ನೈಋತ್ಯದ ರಾಜ್ಯಗಳ(ಅಸ್ಸಾಂ, ಮಣಿಪೂರ್) ಕೆಲ ಚುನಾಯಿತ ಪ್ರತಿನಿಧಿಗಳು ತಮ್ಮ ರಾಜ್ಯಗಳಲ್ಲಿ ಭಾರತೀಯ ಸೈನ್ಯ AFSPA (ಸಶಸ್ತ್ರ ಪಡೆಗಳ ವಿಶೇಷಾಧಿಕಾರ ಕಾಯ್ದೆ ೧೯೫೮) ಕಾನೂನಿನ ಅಡಿಯಲ್ಲಿ ಇರೋದನ್ನ ಬಲವಾಗಿ ವಿರೋಧಿಸಿಕೊಂಡೆ ಬಂದಿದ್ದಾರೆ. ಈ ವಿಶೇಷಾಧಿಕಾರದ ಅನ್ವಯದಿಂದ ತಮ್ಮ ರಾಜ್ಯಗಳು ಸೈನ್ಯದ ಛಾಯೆಯಲ್ಲೇ ಬದುಕಬೇಕಾದ ಅನಿವಾರ್ಯಕ್ಕೆ ಸಿಲುಕಿವೆ. ಸಂಪೂರ್ಣರಾಷ್ಟ್ರವೇ ಮಿಲಿಟರಿಯ ಹಂಗಿಲ್ಲದೆ ಮನಸೋಇಚ್ಛೆ ಬಾಳ್ವೆ ನಡೆಸುತ್ತಿರುವಾಗ ಪ್ರಜಾತಂತ್ರದ ಹೆಸರಿನಡಿಯಲ್ಲಿ ಹಾಡುಹಗಲೇ ತಮ್ಮ ಸ್ವಾತಂತ್ರ್ಯಹರಣಕ್ಕೆ ಸೈನ್ಯದಬಳಕೆ ಪ್ರಜಾತಂತ್ರಕ್ಕೆ ಮತ್ತು ಮಾನವೀಯತೆಗೆ ಮಾಡಿದ ಅಪಚಾರ ಅನ್ನೋದು ಅವರ ವಾದ .
ಪರಿಸ್ಥಿತಿಯ ಲಾಭಪಡೆವ ಸೈನ್ಯ ಅಲ್ಲಿನ ಪ್ರಜೆಗಳ ಮೇಲೆ ದೌರ್ಜನ್ಯಕ್ಕೂ ಮುಂದಾಗುತ್ತದೆ ಅನ್ನೋದು ಆ ವಾದದ ಸರಣಿ. .

ಕೂಲಂಕುಶವಾಗಿ ಈ ಎಲ್ಲ ವಾದಗಳ ಮೂಲ ಕೆದಕಿದಲ್ಲಿ ಅಲ್ಲಿ ಅಡಗಿರೋದು ಕ್ಷುದ್ರರಾಜಕಾರಣವಲ್ಲದೆ ಜನಪರ ಕಾಳಜಿ ಅಥವ ಮಾನವಸಂವೇದನೆ ಖಂಡಿತ ಅಲ್ಲ ಅನ್ನೋದು ಸ್ಪಷ್ಟವಾಗಿ ಕಾಣಬಹುದು.

ಮತ್ತಷ್ಟು ಓದು »

14
ಏಪ್ರಿಲ್

ತುಷ್ಟೀಕರಣ ನಿಲ್ಲದ ಹೊರತು ಕಾಶ್ಮೀರ ತಣಿಯದು

– ಯೋಗೀಶ ತೀರ್ಥಪುರ

J&Kಕಾಶ್ಮೀರ ಹಿಂದೂಗಳ ಪಾಲಿಗೆ ನರಕವಾಗಿ ಪರಿವರ್ತಿತವಾಗಿದೆ. ಹಿಂಸೆ, ಶೋಷಣೆಯ ದಳ್ಳುರಿಯಲ್ಲಿ ಇಲ್ಲನ ಹಿಂದೂಗಳ ಸ್ಥಿತಿ ತೀರಾ ದಯನೀಯವಾಗಿದೆ. ಇಷ್ಟೆಲ್ಲ ನಡೆದಿದ್ದರೂ ಕಾಶ್ಮೀರ ಸರ್ಕಾರ ಹಾಗೂ ಕೇಂದ್ರ ಸರ್ಕಾರ ತುಷ್ಟೀಕರಣ ರಾಜಕಾರಣದಲ್ಲೇ ಮುಂದುವರಿದಿರುವುದು ದುರದೃಷ್ಟಕರ.

1947ರ ವಿಭಜನೆಯ ನಂತರದ ಕಾಲದಲ್ಲಿ ಪಾಕ್ ಆಕ್ರಮಿತ ಕಾಶ್ಮೀರ ದಿಂದ ಸುಮಾರು 4.5 ಲಕ್ಷ ಹಿಂದುಗಳು ಕಾಶ್ಮೀರಕ್ಕೆ ಸ್ಥಳಾಂತರಗೊಂಡರು. ಈ ಹಿಂದುಗಳಿಗೆ ಕಾಶ್ಮೀರದಲ್ಲಿ ಮತದಾನದ ಹಕ್ಕಿಲ್ಲ ಮತ್ತು ಯಾವುದೇ ಪರಿಸ್ಥಿತಿಯಲ್ಲಿ ಹಿಂದುಗಳಿಗೆ ವಿಧಾನಸಭೆಯಲ್ಲಿ 31% ರಷ್ಟೇ ಪ್ರತಿ ನಿಧಿತ್ವ ಸಿಗುವಂತೆ ಒಟ್ಟು ಸ್ಥಾನಗಳ ಹೊಂದಾಣಿಕೆಯನ್ನು ಮಾಡಲಾಗಿದೆ.

ಕಾಶ್ಮೀರಿ ಹಿಂದುಗಳಲ್ಲಿ ಸಾಕ್ಷರತಾ ಪ್ರಮಾಣವು 88%ರಷ್ಟು ಇದ್ದರೂ ರಾಜ್ಯ ಸರಕಾರದ ಸೇವೆ, ಸಾರ್ವಜನಿಕವಲಯ ಮತ್ತು ಸರಕಾರಿ ಕಂಪೆನಿಗಳಲ್ಲಿ ಹಿಂದು ಕಾರ್ಮಿಕರ ಪ್ರಮಾಣವು 4.8% ರಷ್ಟು ಮಾತ್ರ ಇದೆ. 1980 ರಿಂದ 1990ರ ಅವಧಿಯಲ್ಲಿ ಕಾಶ್ಮೀರದಲ್ಲಿ ಭಯೋತ್ಪಾದನೆ ಹೆಚ್ಚಾದ ಮೇಲೆ ಈ ಪ್ರಮಾಣವು 1.7%ಕ್ಕೆ ಇಳಿಯಿತು. ಕಾಶ್ಮೀರದಲ್ಲಿನ ಯಾವ ಆರ್ಥಿಕ ವ್ಯವಹಾರವೂ ಹಿಂದೂಗಳ ಕೈಯಲ್ಲಿ ಇಲ್ಲ. ಕಾಶ್ಮೀರದ 97.4% ಭೂಮಿಯು ಮುಸಲ್ಮಾನರ ಒಡೆತನದಲ್ಲಿದೆ. ಕೇವಲ 2.6% ಭೂಮಿಯು ಮಾತ್ರ ಹಿಂದು ಮತ್ತು ಇತರ ಅಲ್ಪಾಸಂಖ್ಯಾತರ ಒಡೆತನದಲ್ಲಿದೆ. 1985ರಲ್ಲಿ ಕಾಶ್ಮೀರದಲ್ಲಿ ನೋದವಣೆ ಮಾಡಲ್ಪಟ್ಟ ಲಘು ಉದ್ಯೋಗಗಳ ಸಂಖ್ಯೆ 46,293 ಇತ್ತು. ಇದರಲ್ಲಿ 0.01% ರಷ್ಟು ಉದ್ಯೋಗಗಳು ಹಿಂದುಗಳ ಒಡೆತನದಲ್ಲಿದ್ದವು ಮತ್ತು ವಿದ್ಯುತ್ ಆಧಾರಿತ ಉದ್ಯೋಗಗಳ ಪೈಕಿ 98.9%ರಷ್ಟು ಮುಸಲ್ಮಾನರ ಒಡೆತನದ್ದಲಿವೆ. ಕಾಶ್ಮೀರದಲ್ಲಿನ 96%ರಷ್ಟು ಸೇಬು ತೋಟಗಳ ಜಮೀನು ಮುಸಲ್ಮಾನರ ಒಡೆತನದ್ದಲಿದೆ.

ಮತ್ತಷ್ಟು ಓದು »

17
ಮಾರ್ಚ್

ರಿಲಿಜನ್ನಿನ ಅಫೀಮು “ಶಂಕರಾಚಾರ್ಯ ಹಿಲ್” ಅನ್ನು “ತಖ್ತ್-ಈ-ಸುಲೇಮಾನ್” ಆಗಿಸುತ್ತದೆ

ರಾಕೇಶ್ ಶೆಟ್ಟಿ

ಶಂಕರಾಚಾರ್ಯ ಹಿಲ್ಬೆಳಗ್ಗೆ ಎದ್ದು ನಮ್ಮಲ್ಲಿ ಕೆಲವರು ಹೇಳುತಿದ್ದ “ನಮಸ್ತೆ ಶಾರದ ದೇವಿ ಕಾಶ್ಮಿರಪುರವಾಸಿನಿ||” ಅನ್ನುವ ಉದ್ಘೋಷವನ್ನು ಇನ್ಮುಂದೆ ಬದಲಾಯಿಸಬೇಕಾದ ಅನಿವಾರ್ಯತೆ ಬರಬಹುದು ಅನ್ನಿಸುತ್ತಿದೆ.ಯಾಕೆಂದರೆ, ನಮ್ಮ ’ಭಾರತೀಯ ಪುರಾತತ್ವ ಇಲಾಖೆ’ ಮಾಡುತ್ತಿರುವ ಕೆಲಸವೇ ಅಂತದ್ದು.

ಟ್ರಿಬ್ಯೂನ್ ಪೇಪರಿನಲ್ಲಿ ಬಂದ ವರದಿಯ ಪ್ರಕಾರ,ಜಮ್ಮು-ಕಾಶ್ಮೀರದ “ಶಂಕರಾಚಾರ್ಯ ಹಿಲ್” ಅನ್ನು ಭಾರತೀಯ ಪುರಾತತ್ವ ಇಲಾಖೆ “ತಖ್ತ್-ಈ-ಸುಲೇಮಾನ್” ಅಂತ ಬದಲಾಯಿಸಿದೆ.ಕಾಶ್ಮೀರವನ್ನು ಈ ಹಿಂದೆ ಶಾರದ ದೇಶ,ಶಾರದ ಪೀಠ ಅಂತೆಲ್ಲ ಕರೆಯುತಿದ್ದರು.ಮೇಲೆ ಹೇಳಿದ್ದ “ನಮಸ್ತೆ ಶಾರದ ದೇವಿ ಕಾಶ್ಮಿರಪುರವಾಸಿನಿ||” ಅದನ್ನೇ ಸಾರುತ್ತಿದೆ.ಇನ್ನು ಶಂಕರಾಚಾರ್ಯರು ದೇಶದ ನಾಲ್ಕು ಮೂಲೆಗಳಿಗೂ ಸಾಗಿ ಶಾರದ ಪೀಠಗಳನ್ನು ಸ್ಥಾಪಿಸಿದ್ದು ಎಲ್ಲರಿಗೂ ತಿಳಿದಿರುವುದೇ,ಹಾಗಿದ್ದ ಮೇಲೆ,ಇವನೆಲ್ಲಿಂದ ಬಂದ ಸುಲೇಮಾನ್?

ದಾಲ್ ನದಿಯ ಕಡೆಗೆ ಮುಖಮಾಡಿ ನಿಂತಿರುವ ಈ ಪರ್ವತವಿರುವುದು ಶ್ರೀನಗರದಲ್ಲಿ.ಇದೇ ಜಾಗದಲ್ಲಿ ಆದಿ ಶಂಕರಾಚಾರ್ಯರು 788-820 ADರಲ್ಲಿ ನೆಲೆಸಿದ್ದರು ಅನ್ನುತ್ತದೆ ಇತಿಹಾಸ.ಪಂಡಿತ್ ಆನಂದ್ ಕೌಲ್ ಅವರ ಪ್ರಕಾರ ಈ ದೇವಸ್ಥಾನದ ನಿರ್ಮಾಣ ಮಾಡಿದ್ದು ಸಂಡಿಮನ್ ಎಂಬುವವ 2629 -2564 BC ಯಲ್ಲಿ.ಆ ನಂತರ ರಾಜ ಗೋಪಾದಿತ್ಯ 426–365 BCರಲ್ಲಿ ಮತ್ತು ರಾಜ ಲಲಿತಾಧಿತ್ಯ 697–734BC ರಲ್ಲಿ ಇದರ ಪುನುರುಜ್ಜೀವನ ಮಾಡಿಸಿದ್ದರು.ಝೈನ್-ಉಲ್-ಅಬಿದ್ದೀನ್ ಅವರು ದೇವಸ್ಥಾನದ ಮೇಲ್ಛಾವಣಿಯನ್ನು ದುರಸ್ತಿ ಮಾಡಿಸಿದ್ದರು.1841–1846ರಲ್ಲಿ ಸಿಖ್ ಗವರ್ನರ್ ಶೇಕ್ ಗುಲಾಂ ಮೊಹಿದುದ್ದೀನ್ ಕೂಡ ದುರಸ್ತಿ ಮಾಡಿಸಿದ್ದರು.ಇದನ್ನು ಜ್ಯೋತೇಶ್ವರ ದೇವಸ್ಥಾನವೆಂದು ಕರೆಯಲಾಗುತಿತ್ತು.ಬೌದ್ಧರಿಗೂ ಪೂಜ್ಯನೀಯವಾದ ಸ್ಥಳವಿದು.ಅವರಿದನ್ನು ಪಾರಸ್- ಪಹಾರ್ ಅನ್ನುತ್ತಾರೆ.ಶಂಕರರು ಇಲ್ಲಿ ಶಿವಲಿಂಗ ಪ್ರತಿಷ್ಟಾಪಿಸಿದ್ದರು.ಶಂಕರರು ಇಲ್ಲಿ ಬಂದನಂತರ,ಈ ಪರ್ವತ ಮತ್ತು ದೇವಸ್ಥಾನವನ್ನು ಶಂಕರಾಚರ್ಯರ ಹೆಸರಿನಿಂದಲೇ ಗುರಿತಿಸಲಾಗುತ್ತಿದೆ.

ಮತ್ತಷ್ಟು ಓದು »

14
ನವೆಂ

ಚಾಚಾ… Oh My God… !!!

– ಅಶ್ವಿನ್ ಅಮೀನ್

Neharu Gandhijiನವೆಂಬರ್ 14. ನೆಹರೂ ಜನ್ಮ ದಿನ. ನಾವು ಶಾಲಾ ದಿನಗಳಲ್ಲಿರುವಾಗ ನಮಗೆಲ್ಲ ಖುಷಿಯ ದಿನ..  ಕಾರಣ ಅಂದು ನಮ್ಮ ದಿನ.. ಮಕ್ಕಳ ದಿನ.. ಮನೋರಂಜನಾ ಕಾರ್ಯಕ್ರಮಗಳು, ಆಟೋಟ, ಸಿಹಿ ತಿಂಡಿ, ಅರ್ಧ ದಿವಸ ರಜಾ ಬೇರೆ.. !! ಆಹಾ ಮಕ್ಕಳಿಗೆ ಅದೇ ಚಂದ.. ಅಂದು ನಾವೆಲ್ಲಾ ‘ಚಾಚಾ…’ ಎನ್ನುತ್ತಾ ಶಿಕ್ಷಕರು ಕೊಟ್ಟ ಸಿಹಿ ತಿನ್ನುತ್ತಾ ಖುಷಿಪಡುತ್ತಿದ್ದೆವು.

ಆದರೆ…

ಆ ಸಿಹಿ ತಿನ್ನುತ್ತಿದ್ದ ಬಾಯಿ ಯಾಕೋ ಇಂದು ಕಹಿಯೆನಿಸುತ್ತಿದೆ.ಮತ್ತೆ ‘ಚಾಚಾ…’ ಎಂದು ಕೂಗಲು ಮನಸ್ಸೇ ಬರುತ್ತಿಲ್ಲ. ನೆಹರೂ ಹೆಸರು ಕೇಳಿದರೇನೇ ಏನೋ ಒಂದು ಆಕ್ರೋಶ, ಅಸಹ್ಯತನ…!ಅಂತಹ ಒಬ್ಬ ದುರ್ಬಲ ಪ್ರಧಾನಿಯನ್ನು ಭಾರತ ಹೊಂದಿತ್ತಾ ಎಂಬ ಬಗ್ಗೆ ಅನುಮಾನ.ಖಂಡಿತಾ ನಾನು ಬದಲಾಗಿಲ್ಲ.ನಾನು ಈಗಲೂ ಅದೇ ದೇಶ ಪ್ರೇಮಿ.ಆದರೆ ನನ್ನ ಜ್ಞಾನ ಬದಲಾಯಿತು.ನನ್ನ ಮುಂದಿದ್ದ ಸುಳ್ಳಿನ ಇತಿಹಾಸ ಕರಗುತ್ತಾ ಹೋದಂತೆ ನೆಹರೂ ಬಗೆಗಿನ ತೆರೆಮರೆಯ ರಹಸ್ಯಗಳು ಒಂದೊಂದಾಗಿ ಗೋಚರಿಸತೊಡಗಿದವು.ಆ ತೆರೆಯ ಹಿಂದೆ ಕಂಡದ್ದೆಲ್ಲ ಸ್ವಾರ್ಥದ,ನಾಚಿಕೆಗೇಡಿನ,ಅಸಹ್ಯಕರ,ಹೇಡಿ ಹಾಗೂ  ಮೂರ್ಖತನದ ಪರಮಾವಧಿ…!

ಕಾಂಗ್ರೆಸ್ಸಿನ ಆಗಿನ ಅಧ್ಯಕ್ಷ ಮೋತಿಲಾಲರು ತನ್ನ ಮಗ ನೆಹರೂರವರನ್ನು ತನ್ನ ನಂತರ ಕಾಂಗ್ರೆಸ್ಸ್ ಅಧ್ಯಕ್ಷ ಪಟ್ಟಕ್ಕೇರಿಸಲು ಗಾಂಧೀಯ ಬೆನ್ನು ಬಿದ್ದಿದ್ದ ಕಾಲವದು.ಹಲವು ವರ್ಷಗಳ ಒತ್ತಡದ ನಂತರ ಗಾಂಧೀ ಮೊತಿಲಾಲರ ಹಠಕ್ಕೆ ಬಗ್ಗಲೇಬೇಕಾಯಿತು. ಉಕ್ಕಿನ ಮನುಷ್ಯ ವಲ್ಲಭ ಭಾಯಿ ಪಟೇಲರಿಗೆ ಬಹುಮತ ಇದ್ದ ಹೊರತಾಗಿಯೂ ಪಟೇಲ್ ಅವರನ್ನು ತಣ್ಣಗಾಗಿಸಿ ನೆಹರೂರವರನ್ನು ಕಾಂಗ್ರೆಸ್ಸ್ ಅಧ್ಯಕ್ಷ ಗಾದಿಯಲ್ಲಿ ಕೂರಿಸಿಯೇ ಬಿಟ್ಟರು.

ಮತ್ತಷ್ಟು ಓದು »

14
ಆಕ್ಟೋ

ಮೋದಿ ಫ್ಯಾಕ್ಟರ್ : ಒಮರ್ ಅಬ್ದುಲ್ಲಾರ ಮಾತುಗಳು ಯುಪಿಎ ದಿಗಿಲಿನ ಕನ್ನಡಿಯೇ?

ಮೂಲ : ಸಂಜಯ್ ಸಿಂಗ್
ಅನುವಾದ : ಪ್ರಶಾಂತ್ .ಕೆ

Modi Omar“ನನಗನ್ನಿಸುತ್ತೆ, ನಾವೇನಾದರೂ( ಯು.ಪಿ.ಎ. ಅಂಗಪಕ್ಷಗಳು) ‘ಮೋದಿ ಫ಼್ಯಾಕ್ಟರ್’ ನ್ನು ನಿರ್ಲಕ್ಷಿಸಿದರೆ ಅದು ಮೂರ್ಖತನವಾಗುತ್ತೆ; ಅಲ್ಲದೆ ಅದೊಂದು ಅಪಾಯಕಾರಿ ತಪ್ಪು ಕೂಡ..”
ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ‘ಒಮರ್ ಅಬ್ದುಲ್ಲಾ’, ‘ಹಿಂದುಸ್ತಾನ್ ಟೈಮ್ಸ್’ ಗೆ ನೀಡಿದ ಸಂದರ್ಶನದಲ್ಲಿ ಆಡಿದ ಮಾತುಗಳಿವು. ದೇಶದ ಅತ್ಯಂತ ಸಮಸ್ಯಾತ್ಮಕ ರಾಜ್ಯದ, ಅದರಲ್ಲೂ ಆ ರಾಜ್ಯದ ಆಗು- ಹೋಗುಗಳು ಇಡೀ ದೇಶವನ್ನ ತಲ್ಲಣಗೊಳಿಸುತ್ತಿರುವ ಸಂದರ್ಭದಲ್ಲಿ, ಆ ರಾಜ್ಯದ ಮುಖ್ಯಮಂತ್ರಿಯ ಮಾತುಗಳನ್ನು ಹಗುರವಾಗಿ ಕಾಣುವ ಹಾಗಿಲ್ಲ. ‘ಒಮರ್’ ‘ರಾಹುಲ್ ಗಾಂಧಿ’ಯವರ ಆಪ್ತ ಮಿತ್ರ, ಅಲ್ಲದೆ ಅವರ ತಂದೆ ‘ಫ಼ರೂಕ್ ಅಬ್ದುಲ್ಲ’ ಯು.ಪಿ.ಎ. ಸರಕಾರದಲ್ಲಿ ಮಂತ್ರಿ ಕೂಡ ಹೌದು; ಈ ಹಿನ್ನೆಲೆಯಲ್ಲಿ ಅವರ ಹೇಳಿಕೆಗಳು ಇನ್ನೂ ಮಹತ್ವ ಪಡೆದುಕೊಳ್ಳುತ್ತವೆ, ‘ರಾಹುಲ್ ಗಾಂಧಿ’ ಉತ್ತರ ಪ್ರದೇಶ, ರಾಮ್ ಪುರದಲ್ಲಿ ಹೇಳಿದ ” ೨೦೧೪ ರಲ್ಲಿ ಕೇಂದ್ರದಲ್ಲಿ ಯುವಶಕ್ತಿಯ ಸರಕಾರ ಅಧಿಕಾರಕ್ಕೆ ಬರುತ್ತದೆ, ಅದು ದೇಶವನ್ನೇ ಬದಲಾಯಿಸಬಲ್ಲುದು” ಎಂಬ ಮಾತುಗಳನ್ನು ಒಮರ್ ಪೂರ್ತಿ ಒಪ್ಪಿದಂತೆ ಕಾಣುವುದಿಲ್ಲ; ನಿಮಗೆ ಗೊತ್ತಿರಲಿ, ರಾಹುಲ್ ಮತ್ತು ಒಮರ್ ಇಬ್ಬರೂ ಒಂದೇ ವರ್ಷದಲ್ಲಿ ಜನಿಸಿದವರು ಮತ್ತು ಇಬ್ಬರಿಗೂ ಏಗ ೪೩ ವರ್ಷ ವಯಸ್ಸು. ಅನೇಕ ಕಾಂಗ್ರೆಸ್ ನಾಯಕರಂತೆ, ರಾಹುಲ್ ಗಾಂಧಿಯ ಈ ಭಾಷಣದ ಬಳಿಕ ಮುಂದಿನ ಸರಕಾರ ನಡೆಸಲು ಆತನೇ ಸೂಕ್ತ ವ್ಯಕ್ತಿ ಎಂದು ಅಭಿಪ್ರಾಯ ವ್ಯಕ್ತಪಡಿಸದ ಕಾರಣ , ನ್ಯಾಷನಲ್ ಕಾನ್ಫ಼ರೆನ್ಸ್ ನ ನಾಯಕನ ಮಾತುಗಳನ್ನು ವಿಶೇಷವಾಗಿ ಪರಿಗಣಿಸಬೇಕು.

ಮತ್ತಷ್ಟು ಓದು »

20
ಆಗಸ್ಟ್

“ಕೈ”ಲಾಗದ ಸರ್ಕಾರ ಮತ್ತು ನಮ್ಮ ಕಾಶ್ಮೀರ

–     ರಾಕೇಶ್ ಶೆಟ್ಟಿ

Kashmiraಬಡ ಬೆಸ್ತನೊಬ್ಬನ ಕತ್ತನ್ನು ಸೀಳಿ ಅವನದೇ ಬೋಟನ್ನೇರಿ ೧೦ ಜನರ ಪಾಕಿಸ್ತಾನದ ಸೈತಾನರ ತಂಡ ಗೇಟ್ ವೇ ಆಫ್ ಇಂಡಿಯಾ ಮೂಲಕ ಮುಂಬೈಗೆ ವಕ್ಕರಿಸಿಕೊಳ್ಳುತ್ತದೆ.೧೦ ಜನರಿಂದ ಬೇರ್ಪಟ್ಟ ಇಬ್ಬರು ಮೊದಲಿಗೆ ದಾಳಿಯಿಡುವುದು ’ಲಿಯೋಫೋಲ್ಡ್ ಕೆಫೆ”ಗೆ ಅಲ್ಲಿ ಕಂಡ ಕಂಡಂತೆ ಗುಂಡಿನ ಮಳೆ ಸುರಿಸಿದ ಆ ಇಬ್ಬರು ಪಾಕಿ ಉಗ್ರರು ಅಲ್ಲಿಂದ ರಾಜಾರೋಷವಾಗಿ ಹೊರಡುತ್ತಾರೆ.ಉಗ್ರರ ಕಣ್ಣಿಗೆ ಬೀಳದೆ ಅವಿತು ಕುಳಿತಿದ್ದವನೊಬ್ಬ ಮೆಲ್ಲಗೆ ಬಾಗಿಲ ಸಂದಿಯಿಂದ ರಾಕ್ಷಸರು ಇದ್ದಾರೋ ಅನ್ನುವುದನ್ನು ಖಾತ್ರಿ ಮಾಡಿಕೊಳ್ಳಲು ಇಣುಕಿದಾಗ ಬಾಗಿಲಿಗೆ ಕಲ್ಲೊಂದು ಬಡಿಯುತ್ತದೆ.ಮತ್ತೆ ನೋಡುತ್ತಾನೆ ಊಹೂಂ “ಗುಂಡಲ್ಲ… ಕಲ್ಲು…!”

ಉಗ್ರರು ಅಮಾಯಕರ ರಕ್ತ ಹರಿಸಿ ಅಲ್ಲಿಂದ ರಾಜಾರೋಷವಾಗಿ ಹೊರಟ ಮೇಲೆ ಬೀಟ್ ನಲ್ಲಿದ್ದ ಪೋಲಿಸ್ ಕಾನ್ಸ್ಟೇಬಲ್ ಗಳು  ಒಂದು ಕೈಯಲ್ಲಿ ಲಾಠಿ ಹಿಡಿದು ಇನ್ನೊಂದು ಕೈಯಲ್ಲಿ ಕಲ್ಲು ಎಸೆದು ಒಳಗಿನಿಂದ “ಗುಂಡು” ಬರುತ್ತಿಲ್ಲ ಅನ್ನುವುದನ್ನು ಕನ್ಫರ್ಮ್ ಮಾಡಿಕೊಂಡು ಒಳಬರುತ್ತಾರೆ. ಹೇಗಿದೆ ನೋಡಿ ಉಗ್ರನ ಕೈಯಲ್ಲಿ “ಎ.ಕೆ ೪೭” ಅವನೆದುರಿಸಲು ಬಂದ ಪೋಲಿಸಣ್ಣನ ಕೈಯಲ್ಲಿ “ಕಲ್ಲು”…! ಇದು ನಮ್ಮ ಭಾರತದ ಆಂತರಿಕ ರಕ್ಷಣಾ ವ್ಯವಸ್ಥೆಯ ಸ್ಥಿತಿ.ಭಾರತದ ಬಂಡವಾಳವನ್ನು ಸರಿಯಾಗಿಯೇ ಅರಿತಿದ್ದ ಪಾಪಿ ಪಾಕಿಗಳು ಆ ೧೦ ಜನರ ತಂಡವನ್ನು ನುಗ್ಗಿಸಿ ಒಂದಿಡಿ ಭಾರತವನ್ನು ದಿನಗಳ ಮಟ್ಟಿಗೆ ಗಾಬರಿ ಬೀಳಿಸಿದ್ದರು. ಮುಂಬೈ ಮಾರಣ ಹೋಮದ ನಂತರ ಆಗಿದ್ದಾದರೂ ಏನು? ಭಾರತ-ಪಾಕಿಸ್ತಾನಗಳು ಸಮರದಂಚಿಗೆ ಬಂದು ನಿಂತವು.ನಮ್ಮ ಸರ್ಕಾರ “ಹೊಡಿಬೇಡಿ.ಹೊಡೆದ್ರೆ ನೋವಾಗುತ್ತೆ” ಅನ್ನುವಂತೆಯೇ ವರ್ತಿಸಿದ್ದಲ್ಲವೇ? ಅದಕ್ಕಿಂತ ಹೆಚ್ಚೆಂದರೆ “ಹೋಗಿ.ನಾವು ನಿಮ್ಮೊಂದಿಗೆ ನಾವು ಕ್ರಿಕೆಟ್ ಆಡುವುದಿಲ್ಲ” ಅಂದರು ಅಷ್ಟೇ…!

ಮತ್ತಷ್ಟು ಓದು »

20
ಮಾರ್ಚ್

ಇಂತ ಸಾವಿಗೆ ಕೊನೆಯೆಂದು?

– ಗುರುಗಜಾನನ ಭಟ್

sainikaruಕೇವಲ ಎರಡು ಜನ ಉಗ್ರರು ಐದು ಜನ ಸೈನಿಕರನ್ನು ಕೊಂದರೆಂದರೆ ನಮ್ಮ ಸೈನಿಕರದ್ದು ಎಂತಹ  ಸಾವಾಗಿರಬೇಕು ?? ಎಂದಾದರೂ ಯೋಚಿಸಿದ್ದೇವೆಯೇ? ಕೈಯಲ್ಲಿ ಉಗ್ರರು ಆಧುನಿಕ ಮೆಷೀನ್ ಗನ್ನುಗಳನ್ನೂ ಹಿಡಿದು ಬಂದರೆ , ಭಾರತೀಯ ಸೈನಿಕನಲ್ಲಿ ಎಂತಹ ಗನ್ನುಗಳಿರುತ್ತವೆ ಎಂದು ಗಮನಿಸಿದ್ದೆವೆಯೇ?? ನಮ್ಮ ಮುಗ್ಧ ಯೋಧರ ಎದೆಯಲ್ಲಿ ಅಗಾಧ ದೇಶಪ್ರೇಮವನ್ನು ಬಿತ್ತಿ , ಅದನ್ನು ಬೆಳೆಸಿ ಹೆಮ್ಮರ ವಾಗಿಸಿ , ಕೈಯಲ್ಲಿ ಸರಿಯಾದ ಗನ್ನುಗಳನ್ನೂ ಕೊಡದೆ, ಎದೆಗೆ ರಕ್ಷಾ ಕವಚಗಳನ್ನು ನೀಡದೆ , ಯುದ್ದಕ್ಕೆ ನಿಲ್ಲಿಸಿ ಬಿಡುತ್ತೆವಲ್ಲ ಇದಾವ ನ್ಯಾಯ ?

ಸೈನಿಕರನ್ನು ಕೊಲ್ಲಲು ಬಿಟ್ಟು, ಸತ್ತಮೇಲೆ ಪರಮವೀರ ಚಕ್ರ ಕೊಡುವ ಸರ್ಕಾರ ಬಹುಶಃ ಯಾವ ದೇಶದಲ್ಲೂ ಇಲ್ಲ. ನಮ್ಮ ನೆಲದಲ್ಲೇ ನಮ್ಮ ಸೈನಿಕರ ಹತ್ಯೆ ನಡೆಯುತ್ತದಲ್ಲ ಇದಕ್ಕಿಂತ ವಿಪರ್ಯಾಸ ಎಲ್ಲಾದರೂ ಉಂಟೇ ?? ಕಟ್ಟ ಕಡೆಗೆ ಸೈನಿಕ ಸತ್ತಿದ್ದಾನೆ , ಅವನದು ಮಾತೃ ಭಕ್ತಿ , ನೆಲದ ಮಣ್ಣಿನ ಪ್ರೀತಿ , ಎಲ್ಲವೂ ಸರಿ , ಆದರೇ ಅದನ್ನು ತೋರಿಸಲು ಸಾಯಲೇ ಬೇಕಿತ್ತೆ??   ಅಥವಾ ಆ ಸಾವು ಅನಿವಾರ್ಯವಾಗಿತ್ತೆ ??

ಎಂದು ಕೊನೆ ಈ ಸಾವಿಗೆ ?? 1947 ರಿಂದಲೂ ನಮ್ಮ ಸೈನಿಕರು ಸಾಯುತ್ತಲೇ ಇದ್ದಾರೆ  ನಮ್ಮ ಸೈನಿಕನಿಗೆ , ಅವನ ವೀರಾವೇಶಕ್ಕೆ , ಅವನ ಆತ್ಮ ಸ್ತೈರ್ಯಕ್ಕೆ , ಅವನ ಮಣ್ಣಿನ ಪ್ರೀತಿಗೆ , ಸರ್ಕಾರ ಕೊಟ್ಟಿದ್ದಾದರೂ ಏನು ? ನಮ್ಮ ಸೈನಿಕರ ಆಲೋಚನೆಯನ್ನೇಕೆ ಬದಲು ಮಾಡಲಾಗದು ?? ನೀನು ಹೊರಟಿರುವುದು ವೀರಮರಣವನ್ನೊಪ್ಪಲು ಅಲ್ಲ , ನಿನ್ನನ್ನು ಕಳುಹಿಸುತ್ತಿರುವುದು , ಸಾಯಲಿ ಎಂದಲ್ಲ , ಸಾಯಿಸು ಎಂದು . ನಿನಗೆ ಮುಕ್ತ ಅವಕಾಶವಿದೆ , ದೇಶದ್ರೋಹಿಗಳನ್ನು ಸದೆ ಬಡಿ ಎಂದು ಯಾಕೆ ಆತನಿಗೆ ತಿಳಿಸಬಾರದು ??

ಮತ್ತಷ್ಟು ಓದು »