ವಿಷಯದ ವಿವರಗಳಿಗೆ ದಾಟಿರಿ

Posts tagged ‘ಕಾಶ್ಮೀರ’

5
ಜೂನ್

ಒಮ್ಮೆ ಜನಮತಸಾಂದ್ರತೆ (Demography) ಬದಲಾದರೆ…

– ಎಂ.ಡಿ ಸುಬ್ರಮಣ್ಯ ಮಾಚಿಕೊಪ್ಪ

ಪ್ರದೇಶವೊಂದನ್ನು (ಅದು ರಾಜ್ಯವಾಗಿರಲಿ ಅಥವಾ ರಾಜ್ಯವೊಂದರ ಭಾಗವಾಗಿರಲಿ) ದೇಶದಲ್ಲಿ ಇರುವಂತೆ ಮಾಡುವ ಅನೇಕ ಸಮಾನ ಅಂಶಗಳಿರುತ್ತವೆ. ಅವುಗಳಲ್ಲಿ ಅತ್ಯಂತ ಮುಖ್ಯವಾಗಿದ್ದು ಆ ಪ್ರದೇಶದ ಜನಮತಸಾಂದ್ರತೆ (demography) ಎಂಬುದು ನನ್ನ ಸ್ಪಷ್ಟ ಅಭಿಪ್ರಾಯ. ಒಮ್ಮೆ ಆ ಪ್ರದೇಶದ ಜನಮತಸಾಂದ್ರತೆ ಬದಲಾದರೆ ಎಲ್ಲವೂ ಬದಲಾಗುತ್ತದೆ. ಇಲ್ಲಿ ಎಲ್ಲವೂ ಅಂದರೆ ಆ ಪ್ರದೇಶದ ಭಾಷೆ, ಆಚಾರ-ವಿಚಾರ, ರಾಷ್ಟ್ರನಿಷ್ಠೆ, ನಾಯಕರುಗಳು-ಎಲ್ಲವೂ ಬದಲಾಗುತ್ತದೆ!!! ಇದಕ್ಕೆ ಕಶ್ಮೀರಕಣಿವೆಯ ಉದಾಹರಣೆಯೇ ನಮ್ಮ ಕಣ್ಣುಮುಂದೆ (ಕಣ್ಣಿದ್ದವರಿಗೆ) ಕಾಣುತ್ತಿದೆ. ಕಲ್ಹಣ ಸಾಹಿತ್ಯ ರಚಿಸಿದ ಆ ಕಾಶ್ಮೀರಿ ಭಾಷೆ ಕಣಿವೆಯಲ್ಲಿ ಎಲ್ಲಿದೆ? ಬೋರ್ಡ್ ಗಳಲ್ಲೆಲ್ಲಾ ಅರಬಿ ಲಿಪಿ. ‘India’ ಎಂದು ಕಾಣುವ ಬೋರ್ಡ್ ಗಳ ಮೇಲೆ ಕಲ್ಲು, ಆಗಸ್ಟ್ ೧೫ ಬಂದ್!! ವಿಜೃಂಭಣೆಯ ಪಾಕಿಸ್ತಾನದ ಸ್ವಾತಂತ್ರ್ಯ ದಿನಾಚರಣೆ!!! ನಾಗಲ್ಯಾಂಡ್, ಮಿಜೊರಾಂ ಪರಿಸ್ಥಿತಿಯೂ (ಸದ್ಯಕ್ಕೆ ತಣ್ಣಕ್ಕಿದ್ದಂತೆ ಕಂಡರೂ) ತುಂಬವೇನು ಭಿನ್ನವಾಗಿಲ್ಲ. ಒಟ್ಟು ಭಾರತದಲ್ಲಿ ಹಿಂದೂಗಳು ಬಹುಸಂಖ್ಯಾತರಾಗಿದ್ದು ಕಶ್ಮೀರ, ನಾಗಲ್ಯಾಂಡ್ ಮತ್ತು ಮಿಜೋರಾಂಗಳಲ್ಲಿ ಅವರು ತುಂಬಾ ಅಲ್ಪಸಂಖ್ಯಾತರಾಗಿದ್ದು ಮುಸ್ಲಿಂ ಹಾಗೂ ಕ್ರೈಸ್ತರು ಅಲ್ಲಿ ಬಹುಸಂಖ್ಯಾತರಾಗಿರುವುದೇ ಇದಕ್ಕೆ ಕಾರಣ. (ಹಿಂದೂಗಳು ಅಲ್ಪಸಂಖ್ಯಾತರಾಗಿರುವ ಆದರೆ ಬೌದ್ದರೇ ಸಾಕಷ್ಟು ಸಂಖ್ಯೆಯಲ್ಲಿರುವ ಲಡಕ್ ಪ್ರದೇಶದಲ್ಲಿ ಈ ಸಮಸ್ಯೆ ಅಷ್ಟಿಲ್ಲ!!) ಒಮ್ಮೆ ಜನಮತಸಾಂದ್ರತೆ ಬದಲಾದರೆ ರಾಷ್ಟ್ರನಿಷ್ಟೆಯೂ ಬದಲಾಗುತ್ತದೆಂಬುದು (ಪ್ರಪಂಚ ಮಟ್ಟದಲ್ಲಿ) ಅಪ್ರಿಯ ಸತ್ಯ.