ಕುರಿಯ ವಿಠಲ ಶಾಸ್ತ್ರಿ ಆತ್ಮಕಥನ : ಬಣ್ಣದ ಬದುಕು 9 – ಯುದ್ಧಕಾಲದ ಅಭಾವಗಳ ಬಿಸಿ
“ಈ ವರ್ಷವಾದರೂ ನಮ್ಮ ಮೇಳಕ್ಕೆ ಬನ್ನಿ.” ಶೆಟ್ಟರು ಮನೆಗೆ ಬಂದ ಕಾರಣ ನನಗೆ ಅರ್ಥವಾಯಿತು.”ನಿಮ್ಮಂತಹ ಕಲಾವಿದರು ಹೀಗೆ ಸುಮ್ಮನಿರುವುದು ಸರಿಯಲ್ಲ. ನೀವು ಮೇಳದಲ್ಲಿದ್ದರೆ ಉಳಿದವರಿಗೂ ಮಾರ್ಗದರ್ಶನ ಆದೀತು.”
ನಾನು ಮೇಳದ ತಿರುಗಾಟಕ್ಕೆ ಹೋಗುವುದನ್ನು ನಿಲ್ಲಿಸಿದ ಕಾರಣವನ್ನು ಅವರಿಗೆ ವಿವರಿಸಲೇ ಬೇಕಾಯಿತು. ಆದರೆ, ಆ ತಲೆನೋವಿಗೂ ಅವರು ಚಿಕಿತ್ಸೆ ಬಲ್ಲವರಾಗಿದ್ದರು.
“ನಾನು ಈ ವರ್ಷ ಎರಡು ಮೇಳಗಳನ್ನು ನಡೆಸಬೇಕೆಂದಿದ್ದೇನೆ. ಒಂದು ಮೇಳಕ್ಕಂತೂ ಸರಿಯಾದ ವ್ಯವಸ್ಥಾಪಕನ ಅಗತ್ಯವಿದೆಯಲ್ಲ!” ಎಂದರವರು.
“ಅಂದರೆ?”
“ಅಂದರೆ, ಒಂದು ಮೇಳದ ವ್ಯವಸ್ಥಾಪಕನ ಕೆಲಸವನ್ನು ನೀವು ವಹಿಸಿಕೊಳ್ಳಿ. ಲಾಭ ನಷ್ಟಕ್ಕೆ ಮಾತ್ರ ನಾನು. ಉಳಿದ ಎಲ್ಲ ವಿಚಾರಗಳಿಗೂ ನೀವೇ ಅದರ ಯಜಮಾನರಾಗಿ. ನಿಮ್ಮ ಮನಸ್ಸಿನಂತೆ ಆಟಗಳನ್ನು ಆಡಿ ಪ್ರದರ್ಶಿಸುವ ಅನುಕೂಲ; ನನಗೆ ಒಬ್ಬ ವ್ಯವಸ್ಥಾಪಕನ ಸೌಕರ್ಯ. ನೀವೇ ಹೊಸ ಮೇಳವನ್ನು ನಡೆಸಿರಿ. ಆಗದೇ?”
ವ್ಯವಹಾರಶೂನ್ಯನಾದ ನನ್ನನ್ನು ನಂಬಿ ಸಾವಿರಾರು ರೂ.ಗಳನ್ನು ಸುರಿಯುವುದೆ? ನನ್ನ ಅಸಮರ್ಥತೆಯನ್ನು ಸ್ಪಷ್ಟವಾಗಿ ಹೇಳಿದೆ.
“ಮೊದಲೇ ಹೇಳಿದೆನಲ್ಲ. ನಷ್ಟವಾದರೆ ನನಗೇ ಇರಲಿ.”
“ಆಗಲಿ ನೋಡೋಣ.”
ಕುರಿಯ ವಿಠಲ ಶಾಸ್ತ್ರಿ ಆತ್ಮಕಥನ : ಬಣ್ಣದ ಬದುಕು 6 – ಕುಣಿಯಲು ಕಲಿತವರೇ …
ನನ್ನ ಇನ್ನೊಬ್ಬ ಗೆಳೆಯರಾದ ಕೆ.ಪಿ. ಗೋಪಾಲಕೃಷ್ಣ ಭಟ್ಟರು ಸಲಹೆ ನೀಡುವವರೆಗೂ ಮೇಳಕ್ಕೆ ಸೇರಿ ವೃತ್ತಿಪರ ಕಲಾವಿದನಾಗುವ ಯೋಚನೆ ನನ್ನ ತಲೆಯಲ್ಲೇ ಸುಳಿದಿರಲಿಲ್ಲ.
ಕೆಲವೊಂದು ಕಡೆ ಆಟಗಳಿಂದ ಆಕರ್ಷಿತನಾದಾಗ, ಒಂದೆರಡು ವೇಷಗಳು ನನ್ನ ಮೇಲೆ ಪ್ರಭಾವ ಬೀರಿದಾಗ ‘ನಾನು ಹಾಗೆ ಕುಣಿಯಲಾಗುತ್ತಿದ್ದರೆ?’ ಎಂದುಕೊಂಡಿದ್ದೆಯೇ ಹೊರತು, ಆರು ತಿಂಗಳ ಕಾಲ ಎಡೆಬಿಡದೆ ಪ್ರತಿ ರಾತ್ರೆಯೂ ಗೆಜ್ಜೆ ಕಟ್ಟುವ ಯೋಚನೆ ಮಾಡಿರಲಿಲ್ಲ.
ಮೇಳಗಳ ನೇರ ಸಂಪರ್ಕವಿರಲಿಲ್ಲವಾದರೂ, ವೇಷ ಹಾಕುವವರು ಕೆಲವರ ಗುರುತಿತ್ತು. ವೇಷಧಾರಿಗಳ ಜೀವನದ ‘ಸೊಗಸು’ ಕಾಣಿಸಿತ್ತು.
ಅವರು ಯಾವ ದೇವಿಯ ವರಪ್ರಸಾದದಿಂದಾಗಿಯೇ ಕಲಾವಿದರಾಗಿರಲಿ, ಬೇರೇನೂ ಉದ್ಯೋಗ ದೊರೆಯದೆಯೇ ಆಟದ ಮೇಳ ಸೇರಲು ಬಂದವರು ಎನ್ನುವ ಭಾವನೆ ಜನರಲ್ಲಿ ಬೇರೂರಿತ್ತು. ಕೆಲವರಂತೂ, ಆ ಭಾವನೆಯನ್ನು ಮತ್ತೂ ಬೆಳೆಸಲು ಸಹಕರಿಸಿದ್ದರೆಂದರೆ ಹೆಚ್ಚಲ್ಲ.
ಕುರಿಯ ವಿಠಲ ಶಾಸ್ತ್ರಿ ಆತ್ಮಕಥನ : ಬಣ್ಣದ ಬದುಕು 5 – ಕರ್ಣನಿಂದಾಗಿ ಕಣ್ಣೀರು ಬಂತು ….
ಅಡವಿ ಗಿಡ ಮರ ಕಲ್ಲು ನೋಡಿದರೆಯರಸಿನದ ಪುಡಿಯಂತೆ ತೋರುತಿದೆ ತಮ್ಮಾ! ಒಡಲೊಳುರಿ ತಾಪ ಬೇರ್ವಿಡಿದು ಜಠರಾಗ್ನಿಯಲಿ ನಡುಗುತಿದೆ ಕೈ ಕಾಲು ತಮ್ಮಾ” ಎಂದು ಸೀತೆಯನ್ನು ಕಳೆದುಕೊಂಡ ಶ್ರೀರಾಮ ಹಂಬಲಿಸುತ್ತಾನೆ. ಲಕ್ಷ್ಮಣನೊಡನೆ ಅಳಲನ್ನು ತೋಡಿಕೊಳ್ಳುತ್ತಾನೆ. ಪದ್ಯದ ತರುವಾಯ, ರಾಮನ ಉದ್ವೇಗದ ಸಂಪೂರ್ಣ ಚಿತ್ರಣವಾಗಬೇಕಾದರೆ- ತಾಳಮದ್ದಳೆಯ (ಕುಳಿತು ಮಾತನಾಡುವ- ವೇಷವಿಲ್ಲದ) ರಾಮ ಬಹಳ ಮಾತುಗಳನ್ನು ಖರ್ಚು ಮಾಡಬೇಕಾಗುತ್ತದೆ. ಭಾವನೆಗಳು ಮೂಡದೆ ಬರಿಯ ಮಾತುಗಳನ್ನೇ ಹೊರಡಿಸುವವನು ರಾಮನಾಗಿದ್ದರೆ, ಪ್ರೇಕ್ಷಕರಲ್ಲಿ ಪ್ರತಿಕ್ರಿಯೆ ಮೂಡಿಸುವ ಪ್ರಯತ್ನ ನಿರರ್ಥಕ ಎನಿಸುತ್ತದೆ,
ಶೃಂಗಾರ ರಸದ ನಿರೂಪಣೆ ಇರುವ ಪಾತ್ರಗಳಲ್ಲೂ ಅಂತಹುದೇ ಅನುಭವ. ”ಕಾಮಸನ್ನಿಭ ಮಾತ ಕೇಳೂ! ನಿನ್ನೊಳ್! ಕಾಮಿಸಿ ಕಾಮಿಸಿ ಬಂದೆ ಕೃಪಾಳೂ!!” ಎಂದು ಮಾಯಾ ಶೂರ್ಪನಖಿಯು ಲಕ್ಷ್ಮಣನೊಡನೆ ನುಡಿದ ಸನ್ನಿವೇಶದಲ್ಲಿ ಬರಿ ಮಾತಿನ ಬರಡುತನವನ್ನೂ ಕಂಡುಕೊಳ್ಳುವಂತಾಗಿತ್ತು.
ಅತೃಪ್ತಿ
ವೀರರಸದ ಸಂದರ್ಭಗಳಲ್ಲೂ ಅದೇ ತೊಡಕು, ಒಂದೆರಡು ಸನ್ನೆಗಳು, ಎರಡು ಮೂರು ಮಾತುಗಳಲ್ಲಿ ಪರಿಣಾಮಕಾರಿಯಾಗಿ ಮಾಡಬಹುದಾದ ಕೆಲಸಕ್ಕೆ ಬಹಳ ಮಾತುಗಳನ್ನೇ ವೆಚ್ಚ ಮಾಡಿದ ತರುವಾಯವೂ ‘ಇದು ಸಾಕಾಗಲಿಲ್ಲ!’ ಎಂದು ಅತೃಪ್ತಿ.
”ಅರ್ಥ ಉದ್ದವಾಯಿತು.” ಎಂಬ ಮಾತು ಕೇಳಿ ಬಂದರೆ ಅದರಲ್ಲಿ ಆಶ್ಚರ್ಯವೇನು?
ಇಂತಹುದೇ ವಿಚಾರಗಳ ಚರ್ಚೆ ಜಿಜ್ಞಾಸೆಗಳು ಗೆಳೆಯರೊಂದಿಗೆ ಆಗಾಗ ನಡೆಯುತ್ತಿದ್ದವು.
ಮತ್ತಷ್ಟು ಓದು 
ಕುರಿಯ ವಿಠಲ ಶಾಸ್ತ್ರಿ ಆತ್ಮಕಥನ : ಬಣ್ಣದ ಬದುಕು 4 – ಐದು ವರ್ಷಗಳಲ್ಲಿ ಆಸ್ತಿ ಅಡವು
1931ರ ಆರ್ಥಿಕ ಮುಗ್ಗಟ್ಟಿನ ದಿನಗಳ ನೆನಪಿರುವವರು ಬಹಳ ಮಂದಿ. ನಮ್ಮ ನಾಟಕ ಮಂಡಳಿಯಿಂದಾಗಿ ನನಗೂ ಆ ದಿನಗಳ ನೆನಪು ಉಳಿದಿದೆ; ಅಂದಿನ ಮತ್ತು ಇಂದಿನ ಪರಿಸ್ಥಿತಿಗಳ ವ್ಯತ್ಯಾಸವನ್ನು ಜ್ಞಾಪಿಸಿಕೊಳ್ಳುವ ಹಾಗಾಗಿದೆ.
ಆಗ ಊರಿಂದೂರಿಗೆ ಸಾಮಾನು ಸಾಗಿಸುವ ಲಾರಿಗಳ ಸೌಕರ್ಯವಿರಲಿಲ್ಲ. ಸಾಗಾಟಕ್ಕೆ ಸಿಗುತ್ತಿದ್ದುದು ಎತ್ತಿನ ಗಾಡಿಗಳು ಮಾತ್ರ.
ದಶಾವತಾರದ ಮೇಳಗಳಲ್ಲಿ ಇರುತ್ತಿದ್ದ ಸಾಮಾನುಗಳನ್ನು ಸಾಗಿಸಲು ಬಹಳ ಕಷ್ಟವಾಗುತ್ತಿರಲಿಲ್ಲ. ಪರದೆ ಇತ್ಯಾದಿಗಳ ತೊಡಕು ಇಲ್ಲದ ಕಾರಣ, ಕೆಲವು ಪೆಟ್ಟಿಗೆಗಳನ್ನು ತಲೆ ಹೊರೆಯಲ್ಲಿ ಸಾಗಿಸಲು ಸಾಧ್ಯವಾಗುತ್ತಿತ್ತು. ಸಂಚಾರಕ್ಕೆ ರಸ್ತೆಯ ಅನುಕೂಲವಿದ್ದರೆ ಒಂದು ಗಾಡಿಯನ್ನು ಬಾಡಿಗೆಗೆ ಹಿಡಿದರೆ ಸಾಕಾಗುತ್ತಿತ್ತು. ಊರು ಸೇರಿದ ತರುವಾಯ ಡೇರೆಯ ವ್ಯವಸ್ಥೆಯೂ ಬೇಕಾಗುತ್ತಿರಲಿಲ್ಲ. ಹೆಚ್ಚಾಗಿ ಬಯಲಾಟಗಳೇ ಅಂದು ನಡೆಯುತ್ತಿದ್ದುವು.
ಆದರೆ ಯಕ್ಷಗಾನ ನಾಟಕ ಕಂಪೆನಿಯ ಹೊಣೆ ಹೊತ್ತ ನಮ್ಮ ಪರಿಸ್ಥಿತಿ ಅದಕ್ಕೆ ತೀರಾ ವ್ಯತಿರಿಕ್ತವಾಗಿತ್ತು.
ದೃಶ್ಯಾವಳಿಗಳಿಗಾಗಿ ಪರದೆಗಳು, ‘ಪಕ್ಕದ ರೆಕ್ಕೆ’ಗಳು, ಆಸನ- ಪೀಠೋಪಕರಣಗಳು, ಕಿರೀಟ-ಆಯುಧ, ಅಲಂಕಾರಗಳು ಇವೆಲ್ಲವುಗಳ ಜೊತೆಗೆ ಸಾಕಷ್ಟು ಫರ್ನಿಚರ್ಗಳನ್ನು ಸಾಗಿಸಲು ಎಂಟು ಹತ್ತು ಗಾಡಿಗಳನ್ನು ಅನುವು ಮಾಡಿಕೊಳ್ಳಬೇಕಾಗುತ್ತಿತ್ತು. ಎಷ್ಟೇ ಜನಪ್ರಿಯತೆ ಗಳಿಸಿದರೂ, ಕೆಲವು ದಿನಗಳ ತರುವಾಯ ಊರು ಬದಲಾಯಿಸಲೇಬೇಕಾಗುವುದಷ್ಟೇ.
ಊರಿಂದೂರಿಗೆ
ಬಟ್ಟೆಯ ಡೇರೆಗೆ ಬೇಕಾದ ಅನುಕೂಲ ನಮಗೆ ಇರಲಿಲ್ಲ. ಆದುದರಿಂದ ಪ್ರತಿಯೊಂದು ಊರಿನಲ್ಲೂ ”ಥಿಯೇಟರ್” ಕಟ್ಟಿಸಬೇಕಾಗುತ್ತಿತ್ತು. ಸರಾಸರಿ ಒಂದು ಸಾವಿರ ರೂ. ಅದಕ್ಕಾಗಿ ವೆಚ್ಚವಾಗುತ್ತಿತ್ತು.
ಮತ್ತಷ್ಟು ಓದು 
ಕುರಿಯ ವಿಠಲ ಶಾಸ್ತ್ರಿ ಆತ್ಮಕಥನ : ಬಣ್ಣದ ಬದುಕು 3 – ನಜ್ಜು ಗುಜ್ಜಾಗುವ ಪ್ರಹ್ಲಾದ
ಮನೆಯಲ್ಲೊಂದು ದಿನ ಯಾವುದೋ ಶುಭಕಾರ್ಯ ನಿಮಿತ್ತ ನೆರೆಕರೆಯವರು ಸೇರಿದ್ದರು. ನಮ್ಮ ಊರಿನತ್ತ ಯಾವುದೇ ಕಾರ್ಯಕ್ಕಾಗಿ ಭೇಟಿ ಕೊಟ್ಟರೆ ‘ಉಂಡೊಡನೆ ಊರು ಬಿಡುವ’ ಕ್ರಮವಿರುವುದಿಲ್ಲ.
ಆ ದಿನ ಸಂಜೆಯ ಹೊತ್ತಿಗೆ ತೆರಳುವವರು ತೆರಳಿದ ತರುವಾಯವೂ, ಕೆಲವರು ಸಮೀಪದವರು ಉಳಿದಿದ್ದರು. ಬಂಧುಗಳೂ ಇದ್ದರು.
ಊರಿನ ಹಲವು ಸಮಸ್ಯೆಗಳ, ಜನರ ನಡೆನುಡಿಯ ವಿಚಾರಗಳ ಚರ್ಚೆ ಮಾತುಕತೆಗಳಲ್ಲಿ ಆಗುತ್ತಿತ್ತು. ಅಂತೆಯೇ ಮಾತು ಮುಂದುವರಿದು ತಾಳಮದ್ದಳೆಯ ಕಡೆಗೂ ತಿರುಗಿತು. ಬರಿಯ ಮಾತಿನಿಂದ ಪಾತ್ರ ಪೋಷಣೆಯಾಗುವುದಿಲ್ಲ, ಸಜೀವ ಚಿತ್ರಣವಾಗುವುದಿಲ್ಲ ಎಂದು ಒಬ್ಬರು ಹೇಳಿದರು.
”ಪಾತ್ರ ಚಿತ್ರಣ ಬೇಕಾದರೆ ಬಯಲಾಟವನ್ನೇ ನೋಡಬೇಕು” ಎಂದರು ಇನ್ನೊಬ್ಬರು.
ಮಳೆಗಾಲ ಕಳೆದಿದ್ದು, ಮೇಳಗಳು ಹೊರಡುವುದಕ್ಕೆ ಇನ್ನೂ ಸಮಯವಿದ್ದುದಾಗಿ ನನ್ನ ನೆನಪು.
ಮತ್ತಷ್ಟು ಓದು 
ಕುರಿಯ ವಿಠಲ ಶಾಸ್ತ್ರಿ ಆತ್ಮಕಥನ: ತಲೆಗೆ ಬಿದ್ದ ತಾಳ
“ನನ್ನಿಂದಾದಷ್ಟು ಸಮಯ… ಈ ಜೀವನ ನನ್ನನ್ನು ಕುಣಿಸಿದಷ್ಟು ದಿನವೂ ಕುಣಿಯುತ್ತೇನೆ…. ಕುಣಿಯುತ್ತಲಿರುತ್ತೇನೆ…” ಎಂದು ತೀರ್ಮಾನಿಸಿ ಯಕ್ಷಗಾನ ಕಲೆಗಾಗಿ ಅವಿರತವಾಗಿ ದುಡಿದು 18.11.1972 ರಂದು ಬಣ್ಣ ಕಳಚಿ ಯಕ್ಷಗಾನ ರಂಗವನ್ನು ತಬ್ಬಲಿಯನ್ನಾಗಿ ಮಾಡಿ ಯಕ್ಷಮಾತೆಯ ಪಾದವನ್ನು ಸೇರಿದ ಕುರಿಯ ವಿಠಲ ಶಾಸ್ತ್ರಿಯವರು ಜನಿಸಿದ್ದು ಕಳೆದ ಶತಮಾನದ ದಿನಾಂಕ 8.9.1912 ರಂದು .ಯಕ್ಷಗಾನ ರಂಗದಲ್ಲಿ ಎಲ್ಲೂ ಸಲ್ಲುವ ಯಾವ ವೇಷಕ್ಕೂ ಸೈ ಎನಿಸಿಕೊಳ್ಳುತ್ತಿದ್ದ ಒಬ್ಬ ಪ್ರಬುದ್ಧ ಹಾಗೂ ಮೇರು ಕಲಾವಿದರಾಗಿದ್ದ ದಿವಂಗತ ಕುರಿಯ ವಿಠಲ ಶಾಸ್ತ್ರಿಯವರು ತಮ್ಮ ವಯಸ್ಸಿನ ನೂರನೇ ಸಂವತ್ಸರಕ್ಕೆ ಕಾಲಿಡುತ್ತಿರುವ ಈ ಸಂದರ್ಭದಲ್ಲಿ ಖ್ಯಾತ ಪತ್ರಕರ್ತ ಪದ್ಯಾಣ ಗೋಪಾಲಕೃಷ್ಣ (ಪದ್ಯಾಣ ಎಂದೊಡನೆ ತಕ್ಷಣ ನೆನಪಿಗೆ ಬರುವುದು ಯಕ್ಷಗಾನ .ಕನ್ನಡ ನಾಡಿನ ರಾಜಧಾನಿ ಬೆಂಗಳೂರು ನಗರದಲ್ಲಿ ಮೊದಲ ಬಾರಿಗೆ ಯಕ್ಷಗಾನದ ಕೇಳಿ ಬಡಿದವರು ಎಂದು 1955ನೇ ಇಸವಿಯಲ್ಲಿ ಗುರುತಿಸಿಕೊಂಡವರು ಕಳೆದ ಶತಮಾನದ ಮಂಗಳೂರಿನ ಹಿರಿಯ ಪತ್ರಕರ್ತ ಹಾಗೂ ಅಂಕಣಕಾರ ಪದ್ಯಾಣ ಗೋಪಾಲಕೃಷ್ಣ ( ಪ.ಗೋ. 1928 -1997 ).)ರವರರು ನಿರೂಪಣೆ ಗೈದಿರುವ ಕುರಿಯ ವಿಠಲ ಶಾಸ್ತ್ರಿಯವರ ಆತ್ಮ ಕಥನ “ಬಣ್ಣದ ಬದುಕು” ಇಂದು ಯಕ್ಷಗಾನ ಅಭಿಮಾನಿಗಳಿಗಾಗಿ ನಿಲುಮೆಯಲ್ಲಿ…
—————-




