ವಿಷಯದ ವಿವರಗಳಿಗೆ ದಾಟಿರಿ

Posts tagged ‘ಕೃಷಿ’

1
ಜೂನ್

ಮನೆಮಗಳಿಗೊಂದು ಗಿಡ ನೆಡುವ ಧರ್ ಹರಾ ನಮಗೂ ಆದರ್ಶವಾಗಲಿ…

– ಚಿತ್ರ ಸಂತೋಷ್

ಹೆಣ್ಣುಮಗಳಿಗಾಗಿ ಗಿಡಗಳನ್ನು ನೆಡುವ ಬಿಹಾರದ ಧರ್‌ಹರಾ ಗ್ರಾಮದ ‘ವಿಶಿಷ್ಟ ಸಂಸ್ಕೃತಿ’ಯನ್ನು ನೋಡಿ ಅಮೆರಿಕಾವೇ ನಿಬ್ಬೆರಗಾಗಿತ್ತು. ಅಮೆರಿಕ ರಾಯಭಾರಿ ಮೆಲನ್ನೆ ವರ್ರ್ ಈ ಗ್ರಾಮವನ್ನು ಮನತುಂಬಾ ಕೊಂಡಾಡಿ, ಈ ಗ್ರಾಮ ವಿಶ್ವಕ್ಕೆ ಮಾದರಿ ಎಂದಿದ್ದರು. ಆದರೆ, ನಮ್ಮದೇ ನೆಲದ ಇಂಥದ್ದೊಂದು ಅಪೂರ್ವ ಸಂಸ್ಕೃತಿಯನ್ನು ನಮ್ಮನೆಯ ಸಂಸ್ಕೃತಿಯನ್ನಾಗಿ ಬೆಳೆಸುವ ‘ಕರ್ತವ್ಯ’ವನ್ನು ನಾವಿನ್ನೂ ಮಾಡೇ ಇಲ್ಲ!

ಬಿಟಿಯಾಕೀ ಜನ್ಮ್ ಹೋನಾ, ಹಮಾರೆ ಲಿಯೇ ತೋ ಬಹುತ್ ಖುಷಿಕೀ ಬಾತ್ ಹೈ. ಬಿಟಿಯಾ ಹಮಾರೆ ಲಿಯೇ ಬೋಜ್ ನಹೀ ಹೈ,  ಉನ್ಕೋ ಬಿ ಪಡಾಯೆತೋ ಓಬಿ ಸಾಕ್ಷರ್ ಬನಾಯೇಂಗೆ, ಶಾದಿಬೀ ಕರೇಂಗೆ. ಕ್ಯಾಂಕೀ ಬಿಟಿಯಾ ಧೋ ಘರ್ ಕೀ ಚಿರಾಗ್ ಹೈ….(ನಮಗೆ ಹೆಣ್ಣು  ಮಕ್ಕಳು ಹುಟ್ಟುವುದೆಂದರೆ ಅದೊಂದು ಸಂಭ್ರಮ, ಹೆಮ್ಮೆ. ಹೆಣ್ಣು ಮಕ್ಕಳು ನಮಗೆ ಹೊರೆಯಲ್ಲ. ಗಂಡು ಮಕ್ಕಳಂತೆ ಹೆಣ್ಣು ಮಕ್ಕಳಿಗೂ ಶಿಕ್ಷಣ ನೀಡ್ತೀವಿ. ಮದುವೆ ಮಾಡ್ತೀವಿ. ಏಕೆಂದರೆ ಹೆಣ್ಣು ಮಕ್ಕಳು ಎರಡು ಕುಟುಂಬಗಳ ಬಾಂಧವ್ಯವನ್ನು ಬೆಸೆಯುವ ಕೊಂಡಿ)

ಥತ್! ಇದ್ಯಾವುದೋ ಭಾಷಣಕಾರನ ಬೊಗಳೆ ಮಾತುಗಳು ಎಂದೆನಿಸಬಹುದು. ಆದರೆ, ನಿಮ್ಮ ಊಹೆ ಖಂಡಿತಾ ತಪ್ಪು. ಇದು ಕ್ಷಣ ಕ್ಷಣದ ಬದುಕನ್ನೂ ಕೂಲಿ-ನಾಲಿ ಮೂಲಕ ಕಂಡುಕೊಳ್ಳುವ ಜನಸಾಮಾನ್ಯರ ಮಾತು. ಇವರಿಗೆ ಹೆಣ್ಣು ಮಕ್ಕಳು ಹುಟ್ಟಿದರೆ ಹಬ್ಬದ ಸಂಭ್ರಮ. ನಮ್ಮ ಮನೆಮಗಳು ಹುಟ್ಟಿದರೆ, ಅವಳ ಬದುಕು ಅವಳೇ ಕಟ್ಟಿಕೊಳ್ಳುತ್ತಾಳೆ ಅನ್ನೋ ಗಟ್ಟಿ ನಂಬಿಕೆ ಅವರದು. ಹೆಣ್ಣು ಭ್ರೂಣ ಹತ್ಯೆ, ವರದಕ್ಷಿಣೆಗಾಗಿ ಪತ್ನಿಯನ್ನು ಪೀಡಿಸುವುದು ಅಥವಾ ಹೆಣ್ಣು ಮಗಳ ಮದುವೆಗಾಗಿ ಲಕ್ಷಾಂತರ ರೂಪಾಯಿ ಸಾಲಮಾಡಿ ಜೀವನಡೀ ಸಾಲ ತೀರಿಸಲು ಪರದಾಡುವುದು…ಇದೆಲ್ಲಾ ಈ ಊರಿನಲ್ಲಿ ಇನ್ನೂ “ಅಪರಿಚಿತ” ಸುದ್ದಿಗಳು. ಇದ್ಯಾವ ಸಂಸ್ಕೃತಿ, ಇದ್ಯಾವ ಊರು? ಅಂತೀರಾ…

ಮತ್ತಷ್ಟು ಓದು »

19
ಏಪ್ರಿಲ್

ಹಸಿರುಕಾನನದ ಮಗಳೀಕೆ ಗೌರಾದೇವಿ…..

– ಚಿತ್ರ ಸಂತೋಷ್

ಉತ್ತರ ಖಾಂಡದ ರೇನಿ ಗ್ರಾಮದಲ್ಲಿ  ಮರಗಳನ್ನು ಕಡಿಯಲು ಬಂದ ಅಧಿಕಾರಿಗಳ ವಿರುದ್ಧ ಬಂಡೆದ್ದವಳು ಗೌರಾದೇವಿ. ಬುಡಕಟ್ಟು ಜನರಿಗೆ ದಟ್ಟಾರಣ್ಯಗಳೇ ತವರು. ಕಾಡಿಗೂ-ನಮಗೂ ಇರುವುದು ಅಮ್ಮ-ಮಕ್ಕಳ ಸಂಬಂಧ.ಬದುಕಿದರೆ ನಮಗೆ ಆಸರೆ ನೀಡಿದ ಈ ಹಸಿರು ಕಾಡುಗಳಿಗಾಗಿ ಬದುಕಿ …ಎಂದು ಹಳ್ಳಿ ಮನೆಗಳ ಜಗುಲಿಯಲ್ಲಿ ಕುಳಿತು ಜಾಗೃತಿಯ ಕಹಳೆ ವೊಳಗಿಸಿದವಳು ಇವಳೇ ಗೌರಾದೇವಿ. ದೇಶದ್ಯಾಂತ ಪರಿಸರ ಕ್ರಾಂತಿ ಮಾಡಿದ ಚಿಪ್ಕೋ ಚಳವಳಿನ್ನು ಹುಟ್ಟು ಹಾಕಿದ್ದೇ ಇವಳು. ಇಂಥ ಗೌರಾದೇವಿಯನ್ನು ಗೌರವದಿಂದ ನೆನೆಯುವ ಕೆಲಸವನ್ನು ನಾವು ಮಾಡಬೇಕಿದೆ.

“ಸಹೋದರರೇ  ಈ ಅರಣ್ಯ ಪ್ರದೇಶ ನಮ್ಮ ಜೀವಮೂಲ. ನಮ್ಮ ಹುಟ್ಟಿನಿಂದ ಸಾವಿನ ತನಕದ ಜೀವನ ಬಂಡಿಗೆ ಸಾಥ್ ನೀಡುವುದು ಇದೇ ಹಸಿರು ಕಾನನ. ಈ ‘ರಮೆಯೇ ನಮ್ಮಮ್ಮ. ನೀವು ನಿಮ್ಮ ಹರಿತವಾದ ಗರಗಸವನ್ನು ನಮ್ಮಮ್ಮನ ಕರುಳಿಗೆ ಇಡುವ ವೊದಲು ನನ್ನ ಎದೆಗೆ ಹಿಡಿ”

ಬಹುಶಃ ಚಿಪ್ಕೋ ಚಳವಳಿ ಹುಟ್ಟುವ ವೊದಲು ಓರ್ವ ಬುಡಕಟ್ಟು ಮಹಿಳೆ ಉತ್ತರ ಖಾಂಡದ ಆ ಬೃಹತ್ ಅರಣ್ಯದಲ್ಲಿ ಈ ರೀತಿ ಮರಗಳನ್ನು ತಬ್ಬಿಕೊಂಡು ಸರ್ಕಾರದ ಅಕಾರಿಗಳ ಎದುರು ಈ ರೀತಿ ಅಳಲು ತೋಡಿಕೊಂಡಿದ್ದು ಬಹಳಷ್ಟು ಜನರಿಗೆ ನೆನಪು ಇರಲಿಕ್ಕಿಲ್ಲ. ಚಿಪ್ಕೋ ಚಳವಳಿ ಕುರಿತು ಮಾತೆತ್ತಿದ್ದರೆ ತಕ್ಷಣಕ್ಕೆ ನೆನಪಿಗೆ ಬರುವುದು ಸುಂದರ್ ಲಾಲ್ ಬಹುಗುಣ ಎಂಬ ಮಹಾನ್ ವ್ಯಕ್ತಿ. ಆದರೆ, ಇವರಿಗಿಂತಲೂ ವೊದಲು ಅಲ್ಲಿ ಮಹಿಳೆಯೊಬ್ಬಳ ದನಿಯಿತ್ತು,  ದೇಶದಾದ್ಯಂತ ಬೃಹತ್ ಪರಿಸರ ಕ್ರಾಂತಿಗೆ ಮುನ್ನುಡಿಯಾದ ಆ ಚಳವಳಿಯ ಹಿಂದೆ ಅನಕ್ಷರಸ್ಥೆ ಮಹಿಳೆಯ ಶ್ರಮ ಇತ್ತು, ಕಣ್ಣೀರಿತ್ತು, ಜಾಗೃತಿಯ ಕಹಳೆಯಿತ್ತು.

ಅವಳ ಹೆಸರು ಗೌರಾದೇವಿ.

ಮತ್ತಷ್ಟು ಓದು »

21
ಮಾರ್ಚ್

ಸಾವಯವ ಕೃಷಿ ಎಂಬ ಮೂರ್ಖತನ !

– ಶ್ರೀ ಹರ್ಷ ಸಾಲಿಮಠ

ವ್ಯವಸಾಯ ಎಂಬುದು ಭಾರತ ದೇಶದ ಮಟ್ಟಿಗೆ ಉದ್ಯೋಗ ಮತ್ತು ಹೊಟ್ಟೆಪಾಡು ಮಾತ್ರವಲ್ಲ. ಅದೊಂದು ಸಂಸ್ಕೃತಿ, ಜೀವನಶೈಲಿ. ಅದೆಷ್ಟೋ ವರ್ಷಗಳಿಂದ ನಾಗರಿಕತೆಯನ್ನು ಸಲಹಿಕೊಂಡು ಬಂದ ದಾರಿ.ಮನುಷ್ಯ ಒಂದೆಡೆ ನಿಂತು ನೆಲೆಯೂರಿ ತನ್ನದೊಂದು ಬದುಕು ಕಟ್ಟಿ ಕೊಳ್ಳುವುದು ಸಾಧ್ಯವಾದದ್ದೇ ಅವನು ಬೇಸಾಯ ಮಾಡಲು ಆರಂಭಿಸಿದಾಗಿನಿಂದ.
ಇತ್ತೀಚೆಗೆ ಸಾವಯವ ಕೃಷಿ ಎಂಬುದು ಬಹಳವಾಗಿ ಕೇಳಿ ಬರುತ್ತಿರುವ ಸುದ್ದಿ. ಸರಕಾರವೂ ಸೇರಿದಂತೆ ಸಮೂಹ ಸನ್ನಿಗೊಳಗಾದಂತೆ ಸಾವಯವ ಕೃಷಿಯ ಕಡೆ ಜನ ಓಡುತ್ತಿದ್ದಾರೆ.  ಸುಭಾಶ್ ಪಾಳೇಕರ್ ರಂತಹ ಅನೇಕರು ಕೃಷಿ ಗುರುಗಳಾಗಿದ್ದಾರೆ.
ಅವರ ಬಳಿ ನೂರಾರು ರೈತರು ಸಾವಯವ ಕೃಷಿಯ ತರಬೇತಿ ಪಡೆದು ಬೇಸಾಯದಲ್ಲಿ ತೊಡಗಿದ್ದಾರೆ. ರಸಗೊಬ್ಬರ ಹಾಕಿ ಹಣ ಕಳೆದುಕೊಂಡವರಂತೆ ಸಾವಯವ ಕೃಷಿಗೆ ಮೊರೆ ಹೋದವರೂ ಹಣ ಕಳೆದುಕೊಂಡಿದ್ದಾರೆ. ಸಮಯ ಹಾಳು ಮಾಡಿಕೊಂಡಿದ್ದಾರೆ.ಅದೆಷ್ಟೇ ತರಬೇತಿ ಶಿಬಿರ ಪ್ರಚಾರ ನಡೆಯುತ್ತಿದ್ದರೂ ರೈತರ ಪರಿಸ್ಥಿತಿ ಸುಧಾರಿಸುತ್ತಿಲ್ಲ.
ನಮ್ಮ ದೇಶದಲ್ಲಿ ನೆಲ ಜಲ ಭಾಷೆ ಔಶಧಿ ನಲವತ್ತು ಕಿಲೋಮೀಟರು ಗಳಿಗೊಮ್ಮೆ ಬದಲಾಗುತ್ತದೆ. ಮಣ್ಣಿನ ಗುಣ ಪ್ರತಿ ನಲವತ್ತು ನಲವತ್ತು ಕಿಲೋಮೀಟರುಗಳಿಗೆ ಬದಲಾಗುತ್ತದೆ. ಗಾಳಿ ಬೀಸುವ ದಿಕ್ಕು, ಮಳೆಯ ಪ್ರಮಾಣ, ಭೂಮಿಯ ಗಟ್ಟಿತನ, ನೀರಿನ ಕ್ಷಾರತೆ ಎಲ್ಲವೂ ಬದಲಾಗುತ್ತಾ ಹೋಗುತ್ತದೆ. ಅಷ್ಟೇ ಅಲ್ಲ ಅಲ್ಲಿನ ಪ್ರಾಣಿಸಂಪತ್ತು ಸಹ ಬದಲಾಗುತ್ತದೆ. ಅಸುಗಳ ಜಾತಿ ಮತ್ತು ಅವುಗಳ ಹೊಂದಿಕೊಳ್ಳುವಿಕೆ ಬದಲಾಗುತ್ತದೆ.  ಬೆಳೆಯುವ ಬೆಳೆ ಸಂಪೂರ್ಣವಾಗಿ ಈ ಎಲ್ಲ ಪ್ರಾಕೃತಿಕ ಗುಣಗಳ ಮೇಲೆ ಅವಲಂಬನೆಯಾಗಿರುತ್ತದೆ.

ಉದಾಹರಣೆಗೆ ಮಲೆನಾಡಿನಲ್ಲಿ ಬೇಸಿನ ಮರ ಜಾಲಿಯ ಮರಗಳು ಬೆಳೆಯುವದಿಲ್ಲ, ಅದೇ ಸಮಯಕ್ಕೆ ಬಯಲುಸೀಮೆಯಲ್ಲಿ ಜಾಲಿಯ ಮರ ಆಳದಷ್ಟು ದೊಡ್ಡದಾಗಿ ಬೆಳೆಯುತ್ತದೆ. ಮಲೆನಾಡಿನ ಔಷಧೀಯ ಸಸ್ಯಗಳು ಬಯಲು ಸೀಮೆಯ ಕಡೆ ಬೆಳೆಯಲು ಸಾಧ್ಯವೆ ಇಲ್ಲ. ಹೀಗಿರುವಾಗ ಆಯಾ ನೆಲದ ಪ್ರಾಕೃತಿಕ ಅಂಶಗಳಿಗೆ ಅನುಗುಣವಾಗಿ ಬೆಳೆ ಬರುವಂತೆ ಕೃಷಿ ಇರಬೇಕೆ ಹೊರತು ಎಲ್ಲೋ ನಡೆಸಿದ ಪ್ರಯೋಗಗಳಿಗೆ ಅನುಗುಣವಾಗಿ ಅಲ್ಲ. ಸುಭಾಶ್ ಪಾಳೇಕರ್ ಅವರ ಪ್ರಯೋಗ ನಡೆದಿರುವುದು ಮಹಾರಾಷ್ಟ್ರದ ಗದ್ದೆಗಳಲ್ಲಿ. ಅವರ ಪ್ರಯೋಗಗಳಲ್ಲಿ  ಅಲ್ಲಿಯ ಪರಿಸರಕ್ಕೆ ಸರಿ ಹೊಂದುವಂತೆ ಕೆಲವು ಯಶಸ್ಸುಗಳು ಕೆಲವು ಅಪಜಯಗಳೂ ಸಿಕ್ಕಿರುತ್ತವೆ. ಅಲ್ಲಿನ ಯಶಸ್ವಿ ಸೂತ್ರಗಳನ್ನು ಅವರು ಎಲ್ಲೆಡೆ ಬೋಧಿಸುತ್ತಿದ್ದಾರೆ. ಆ ಯಶಸ್ಸನ್ನು ಹಿಂಬಾಲಿಸಿ ಜನ ಬೇಸಾಯ ಕೈಗೊಂಡು ಕೈ ಸುಟ್ಟು ಕೊಳ್ಳುತ್ತಿದ್ದಾರೆ.

ಮತ್ತಷ್ಟು ಓದು »