ವಿಷಯದ ವಿವರಗಳಿಗೆ ದಾಟಿರಿ

Posts tagged ‘ಕ್ರಾಂತಿಕಾರಿ’

21
ಮಾರ್ಚ್

“ಅರ್ನೆಸ್ಟೊ ಚೆಗುವಾರ ಕ್ರಾಂತಿಕಾರಿ ಭಾವಜೀವಿ”

– ನಾರಾಯಣ್ ಕೆ ಕ್ಯಾಸಂಬಳ್ಳಿ

Cheguvera‘ನಾನು ಎಂದಿಗೂ ಸೋತು ಮನೆಗೆ ಹಿಂತಿರುಗುವುದಿಲ್ಲ. ಸೋಲಿಗಿಂತ ಸಾವನ್ನೆ ಹೆಚ್ಚು ಇಚ್ಛಿಸುತ್ತೇನೆ’  ಎಂದು ಕ್ಯೂಬ ಬಿಡುವ ಮೊದಲು ಹೇಳಿದ ಮಾತಿನಂತೆಯೇ ನಿರಂತರವಾಗಿ ಹೋರಾಟದಲ್ಲೇ ತಮ್ಮ ಜೀವನವನ್ನು ಸವೆದು ಸೋಲಲು ಇಚ್ಛಿಸಿದೆ ತನನ್ನು ಸಾವಿಗೆ ಒಡ್ಡಿಕೊಂಡ ಮಹಾನ್ ಕ್ರಾಂತಿಕಾರಿ, ಮಾನವತಾವಾದಿ, ಗೆರಿಲ್ಲಾ ಯುದ್ಧ ತಂತ್ರ ನಿಪುಣ, ವೈದ್ಯ, ಬರಹಗಾರ, ಬುದ್ಧಿಜೀವಿ ಹಾಗೂ ಕ್ಯೂಬಾ ಕ್ರಾಂತಿಯ ಪ್ರಮುಖ ನೇತಾರ ಅರ್ನೆಸ್ಟೊ ಚೆಗುವರ ಜಗತ್ತಿನ ಕ್ರಾಂತಿಕಾರಿ ಹೋರಾಟಗಾರರಲ್ಲಿ ಪ್ರಮುಖರು. ಚೆಗುವಾರ ಹುಟ್ಟಿದ್ದು ಜೂನ್ 14, 1928ರಂದು ಅರ್ನೆಸ್ಟೊ ಚೆಗುವಾರ ಲಿಂಚ್ ಮತ್ತು ಸೀಲಿಯಾ ಡ ಲಾ ಸೆರ್ನ್ ಎಂಬ ಸ್ಪ್ಯಾನಿಷ್ ಮತ್ತು ಐರಿಷ್ ತಂದೆ ತಾಯಿಗಳ ಮೊದಲ ಮಗನಾಗಿ ಅರ್ಜೆಂಟೀನಾದ ರೊಸಾರಿಯೋ ಪಟ್ಟಣದಲ್ಲಿ. ಚೆಗುವರ ಚಿಕ್ಕಂದಿನಿಂದಲೇ ಬಡವರ, ಶ್ರಮಿಕರ ಪರವಾಗಿ ಹೆಚ್ಚು ಪ್ರೀತಿಯನ್ನು ಬೆಳೆಸಿಕೊಂಡವನು ಮತ್ತು ಎಡಪಂಥೀಯ ಒಲವು ಹೊಂದಿದ್ದ ಕುಟುಂಬದಲ್ಲಿ ಹುಟ್ಟಿಬೆಳೆದ ಅವನಿಗೆ ಚಿಕ್ಕಂದಿನಿಂದಲೇ ಸ್ಪಷ್ಟ ರಾಜಕೀಯ ದೃಷ್ಟಿಕೋನಗಳ ಬಗೆಗೆ ಪರಿಚಯ ದೊರೆಯುತಿತ್ತು.

ಸ್ಪ್ಯಾನಿಷ್ ಅಂತರ್‍ಯುದ್ಧದ ಕಾಲದಿಂದಲೂ ಗಣತಂತ್ರ ವಾದಿಗಳ ಪ್ರಬಲ ಸಮರ್ಥಕರಾಗಿದ್ದ ತಂದೆಯ ಪ್ರಭಾವ ಚೆಗುವಾರನ ಮೇಲೆ ಸಹಜವಾಗಿಯೇ ಬೀರಿತ್ತು.ಚೆಗುವಾರ ತನ್ನ 19ನೇ ವಯಸ್ಸಿನಲ್ಲಿ (1948) ವೈದ್ಯಕೀಯ ಕಲಿಕೆಗಾಗಿ ಬ್ಯೂನಸ್ ಐರ್ಸ್ ವಿಶ್ವವಿದ್ಯಾನಿಲಯಕ್ಕೆ ಸೇರುತ್ತಾನೆ. ಆದರೆ 1951ರಲ್ಲಿ ವಿಶ್ವವಿದ್ಯಾಲಯದಿಂದ ಒಂದು ವರ್ಷ ರಜೆ ಪಡೆದು ತನ್ನ ಆಪ್ತಮಿತ್ರ ಅಲ್ಬರ್ಟೊ ಗ್ರೆನಡೋ ಜೊತೆಗೂಡಿ ಮೋಟರ್ ಸೈಕಲ್ ಮೇಲೆ ದಕ್ಷಿಣ ಅಮೆರಿಕಾದ ಪ್ರವಾಸ ಹೊರಡುತ್ತಾನೆ. ಚೆಗುವಾರನ ಬದುಕಿನಲ್ಲಿ ಈ ಪ್ರವಾಸ ಬಹಳ ಪ್ರಮುಖವಾದದ್ದು ಮತ್ತು ಚೆಗುವಾರ ತಾನೊಬ್ಬ ಕ್ರಾಂತಿಕಾರಿಯಾಗಿರಲು ಪ್ರಮುಖ ಕಾರಣ ಈ ಪ್ರವಾಸದ ಅನುಭವಗಳೇ. ಅವನೆ ಹೇಳಿದ, ಬರೆದುಕೊಂಡಿರುವ ಹಾಗೆ “ಆಂಡೀಸ್ ಪರ್ವತಶ್ರೇಣಿಯ ಉನ್ನತ ಶಿಖರವಾದ ಮಾಚು ಪಿಚ್ಚುವಿಗೆ ಹೋಗುವ ದಾರಿಯಲ್ಲಿ ಶ್ರೀಮಂತ ಭೂಮಾಲೀಕರಿಂದ ತುಂಡು ಭೂಮಿಗಳನ್ನು ಪಡೆದು ಕೃಷಿ ಮಾಡುತಿದ್ದ ರೈತಾಪಿ ಜನಸಮುದಾಯಗಳ ಹೀನಾಯ ಬದುಕು, ಕಡುಬಡತನ, ನನ್ನ ಮನಸ್ಸಿಗೆ ತಾಕಿತು. ಈ ಜನರಿಗೆ ನೆರವಾಗಬೇಕಿದ್ದಲ್ಲಿ ನಾನು ವೈದ್ಯಕೀಯ ಅಭ್ಯಾಸವನ್ನು ಬಿಟ್ಟು ಸಶಸ್ತ್ರ ಹೋರಾಟದ ರಾಜಕೀಯ ರಂಗಕ್ಕೆ ಪ್ರವೇಶಿಸಬೇಕಿದೆ ಎಂದು ಮನವರಿಕೆಯಾಯಿತು” ಎಂದು ನಂತರ ಚೆಗುವಾರ ಬರೆದುಕೊಳ್ಲುತ್ತಾನೆ. ಹಾಗಾಗಿ ಈ ಮೋಟಾರ್ ಸೈಕಲ್ ಪ್ರವಾಸ್ ಚೆಗುವಾರನ ಕ್ರಾಂತಿ ಬದುಕಿನ ಬಹಳ ದೊಡ್ಡ ತಿರುವು. ಮೋಟಾರ್ ಸೈಕಲ್ ಪ್ರವಾಸದ ಜೊತೆಗಾರ ಆಲ್ಬರ್ಟೊ ಗ್ರಾನಡೊಸ್  ಚೆ ಕುರಿತು ಹೇಳುತ್ತಾ  ಟೆಟೆ (‘ಚೆ’ ನನ್ನು ಪ್ರೀತಿಯಿಂದ ಕರೆಯುತ್ತಿದ್ದ ಹೆಸರು) ನನ್ನು ನಾನು ಮೊದಲು ಭೇೀಟಿ ಆಗಿದ್ದು 1941ರಲ್ಲಿ ಅದು ನನ್ನ ಸಹೋದರ ಥಾಮಸ್ ಮೂಲಕ. ಆಗ ನನಗೆ 13 ವರ್ಷ ವಯಸ್ಸು. ನಮ್ಮಿಬ್ಬರನ್ನು ಒಟ್ಟೊಟ್ಟಾಗಿ ತಂದ ವಿಷಯವೆಂದರೆ ಓದುವ ಅಭಿರುಚಿ ಮತ್ತು ನಿಸರ್ಗ ಪ್ರೇಮ. ಚೆ ಮನೆಗೆ ನಾನು  ವಾಡಿಕೆಯ ಅಥಿತಿಯಾಗಿದ್ದೆ. ಅಲ್ಲಿದ್ದ ಗ್ರಂಥಭಂಡಾರವನ್ನು ನನ್ನದೆಂಬತೆಯೇ ಬಳಸಿಕೊಳ್ಳುತ್ತಿದ್ದೆ. ಟೆಟೆ (ಚೆ) ಒಬ್ಬ ರೂಢಿಯ ಮಾತುಗಾರನಾಗಿದ್ದ.

ಮತ್ತಷ್ಟು ಓದು »

28
ಸೆಪ್ಟೆಂ

ಕ್ರಾಂತಿಕಾರಿ ಹೇಗೆ ತಾನೇ ಕಾಮ್ರೆಡ್ ಆಗಬಲ್ಲ?

 -ಸಂತೋಶ್ ತಮ್ಮಯ್ಯ

ಕೇರಳದ ತ್ರಿಶೂರ್‌ನಿಂದ ಕಣ್ಣೂರಿಗೆ ಹೋಗುತ್ತಿದ್ದರೆ ದಾರಿಯುದ್ದಕ್ಕೂ ವಿಚಿತ್ರಗಳು. ಕೆಂಪು ಕಮ್ಯುನಿಸ್ಟರ ಕಛೇರಿಗಳು. ರಸ್ತೆ ಬದಿಯುದ್ದಕ್ಕೂ ಬಂಟಿಂಗ್ಸ್‌ಗಳು. ದೊಡ್ಡ ದೊಡ್ಡ ಕೌಟೌಟ್‌ಗಳು,ಫ್ಲೆಕ್ಸ್‌ಗಳು,ಬ್ಯಾನರ್‌ಗಳು.ಈ ಬ್ಯಾನರ್‌ಗಳಲ್ಲಿ ಪೊಲೀಸ್ ಠಾಣೆಗಳಲ್ಲಿ ’ಬೇಕಾಗಿದ್ದಾರೆ’ ಎಂದು ಹಾಕುವಲ್ಲಿ ಕಾಣಬಹುದಾದ ಭಾವಚಿತ್ರಗಳು.ವೊದಲ ನೋಟಕ್ಕೇ ಗೂಂಡಗಾಳು ಎಂದು ತಿಳಿದುಬಿಡುವ ವೃತ್ತಿಪರ ರೌಡಿಗಳ ಚಿತ್ರಗಳು. ಅವರೆಲ್ಲರೂ ಎಂದೋ ಸತ್ತುಹೋದವರು. ಕಮ್ಯುನಿಸ್ಟ್ ಕಾಮ್ರೆಡರ ಪ್ರಕಾರ ಅವರೆಲ್ಲರೂ ಹುತಾತ್ಮ ಕಾಮ್ರೆಡ್‌ಗಳು.ಇವನು ಕಮ್ಯುನಿಷ್ಟರ ಪ್ರಾರಬ್ಧ,ಸಾಯಲಿ ಎನ್ನುವಂತೆಯೂ ಇಲ್ಲ.ಏಕೆಂದರೆ ಈ ಸತ್ತ ಗೂಂಡಾಗಳ ಪಕ್ಕದಲ್ಲೇ ಹ್ಯಾಟು ಹಾಕಿದ ಭಗತ್ ಸಿಂಗ್ ಚಿತ್ರ. ಕಮ್ಯುನಿಸ್ಟರ ಪ್ರಕಾರ ದೇಶಕ್ಕಾಗಿ ಪ್ರಾಣ ಕೊಟ್ಟ ಭಗತ್‌ಸಿಂಗನೂ ಎಲ್ಲೋ ಕೊಲೆಯಾಗಿ ಹೋದ ರೌಡಿಗಳಿಬ್ಬರೂ ಕಾಮ್ರೆಡ್‌ಗಳು,ಶಹೀದ್‌ಗಳು. ಇಬ್ಬರಿಗೂ ಅವರದು ಲಾಲ್ ಸಲಾಂ. ಇನ್ನೊಂದೆಡೆ ದೇಶವನ್ನೇ ಅರಿಯದ ಲೋಕಲ್ ರೌಡಿ! ಕಮ್ಯುನಿಸ್ಟರ್ ಹಾಗೆಯೆ. ಅವರು ರೌಡಿಯನ್ನು ಕಾಣುವಂತೆಯೆ ಭಗತ್‌ಸಿಂಗ್‌ರನ್ನೂ ಕಾಣುತ್ತಾರೆ.ಇಬ್ಬರನ್ನೂ ಕಾಮ್ರೆಡ್ ಎಂದೇ ಭಾವಿಸುತ್ತಾರೆ.

ಈಗೊಂದು ಐದಾರು ವರ್ಷಗಳ ಹಿಂದೆ ಮಂಗಳೂರಿನಲ್ಲಿ ಫ್ರೀಡಂ ಪೆರೇಡ್ ಎಂಬ ಕಾರ್ಯಕ್ರಮ ನಡೆಯಿತು. ಕೆಎಫ್‌ಡಿಯ ಜನರನ್ನು ಎಲ್ಲೆಲ್ಲಿಂದಲೋ ಕರೆಸಿಕೊಳ್ಳಲಾಯಿತು. ಎಲ್ಲೆಲ್ಲಿಂದಲೋ ಬಸ್ಸುಗಳು ಬಂದವು. ಗಡ್ಡಧಾರಿಗಳು,ಆರ್ಮಿಯಂತೆ ಸಮವಸ್ತ್ರ ಭರಿಸಿದವರು ಬಂದಿಳಿದಿದ್ದರು. ಮುಂದೆ ಹುಣಸೂರಿನಲ್ಲಿ ಮಕ್ಕಳನ್ನು ಕೊಂದ ಆ ಸಂಘಟನೆಯ ಜನರನ್ನು ನೋಡುತ್ತಾ ಕೆಲವರು ’ಕರಾಚಿಯಾ?’ ಎಂದು ಮಾತಾಡಿಕೊಂಡರು.ಅವರೆಲ್ಲರೂ ಮಂಗಳಾ ಸ್ಟೇಡಿಯಂನಲ್ಲಿ ಸೇರಿ ಮಿಲಿಟರಿಯಂತೆ ಕವಾಯತು ನಡೆಸಿದರು. ಹಿಂದಿಯಲ್ಲಿ ಅವರನ್ನುದ್ದೇಶಿಸಿ ಒಬ್ಬ ಮಾತಾಡಿದ್ದ. ಸಾವರ್ಕರ್‌ರನ್ನು ಹಿಗ್ಗಾಮುಗ್ಗಾ ಬೈದಿದ್ದ. ಹೋಗಿ, ದನ ಕಡಿಯಿರಿ ಎಂದಿದ್ದ. ಆತ ಮಾತನಾಡುತ್ತಿದ್ದ ವೇದಿಕೆಯ ಹೆಸರು ’ಶಹೀದ್ ಭಗತ್ ಸಿಂಗ್ ವೇದಿಕೆ’ ಆಗಿತ್ತು. ಯಾವ ಭಗತ್ ಸಿಂಗ್ ದೇಶದ ಬಗ್ಗೆ ಕನಸು ಕಂಡಿದ್ದನೋ,ಯಾವ ಭಗತ್‌ಸಿಂಗ್‌ಗೆ ಸ್ಪಷ್ಟ ಸಾಮರಸ್ಯ ಸಮಾಜದ ಕಲ್ಪನೆಯಿತ್ತೋ , ಯಾವ ಭಗತ್‌ಸಿಂಗ್‌ಗೆ ದೇಶವೆನ್ನುವುದು ಉಸಿರಾಗಿತ್ತೋ ಅಂತಹ ಭಗತ್ ಸಿಂಗ್ ಇಂದು ಇವರೆಲ್ಲರ ಸ್ವತ್ತಂತೆ. ದಾಸ್ಯದ ಬಿಡುಗಡೆ ಕ್ರಾಂತಿಯಿಂದ ಅಸಾಧ್ಯ ಎಂದಿದ್ದ  ಭಗತ್ ಸಿಂಗ್‌ನ ಹೆಸರಲ್ಲಿ ಸಾವರ್ಕರ್‌ರನ್ನು ಬಯ್ಯುವುದು, ಧಾರ್ಮಿಕತೆ ಅಷ್ಟಕ್ಕಷ್ಟೇ ಎಂಬಂತಿದ್ದ ಭಗತ್‌ಸಿಂಗ್‌ನನ್ನು ನೆಪವಾಗಿಟ್ಟುಕೊಂಡು ಗೋಹತ್ಯೆಯನ್ನು ಸಮರ್ಥಿಸುವುದು , ದೇಶಪ್ರೇಮಕ್ಕೆ ಬಣ್ಣವನ್ನು  ಬಿತ್ತುವುದು ಇಂದು ನಿರಂತರ ನಡೆಯುತ್ತಿದೆ.

ಮತ್ತಷ್ಟು ಓದು »