ವಿಷಯದ ವಿವರಗಳಿಗೆ ದಾಟಿರಿ

Posts tagged ‘ಕ್ಷಿಪಣಿ’

24
ಏಪ್ರಿಲ್

ಒಳಸಂಚಿಗೆ ಬೇಕಿದೆ ಆತ್ಮವಿಶ್ವಾಸದ ಅಗ್ನಿಸ್ಪರ್ಷ

– ಚಕ್ರವರ್ತಿ ಸೂಲಿಬೆಲೆ
   ಅಗ್ನಿ ೫ ಬಂದನಂತರ ರಣಾಂಗಣದಲ್ಲಿ ನಮ್ಮನ್ನು ಸೋಲಿಸಲು ಚೀನಾಕ್ಕೆ ಸಾಧ್ಯವಾಗಲಾರದು ನಿಜ. ಆದರೆ ಸಂಸತ್ತಿನ ಮೇಜಿನ ಮೇಲೆಯೇ ನಮ್ಮ ಸೋಲಿಗೆ ಷರಾ ಬರೆದರೆ ಯಾರು ಏನು ಮಾಡಿಯಾರು ಹೇಳಿ!?

ನಾಲ್ಕು ವರ್ಷಗಳ ತಪಸ್ಸು ಪೂರ್ಣಗೊಂಡಿದೆ. ೭೦೦ ಕಿ.ಮೀ.ದೂರದವರೆಗೂ ಹೋಗಿ ಶತ್ರು ಠಾಣ್ಯ ನಾಶ ಮಾಡಿಬರಬಲ್ಲ. ಅಗ್ನಿ ೧ನ್ನು ನಭಕ್ಕೆ ಹಾರಿಬಿಟ್ಟಾಗಿನಿಂದಲೂ ೫,೦೦೦ ಕಿ.ಮೀ. ದೂರಕ್ಕೆ ಹೋಗಬಲ್ಲ ಅಗ್ನಿಯ ಕನಸು ಕಾಣುತ್ತಲೇ ಇದ್ದವರು ನಾವು. ಮೊನ್ನೆ ಅಗ್ನಿ ೫ ಯಶಸ್ವಿಯಾಗಿ ಉಡಾವಣೆಗೊಂಡು ಸೈನ್ಯದ ಶಕ್ತಿಯನ್ನು ನೂರ್ಮಡಿಗೊಳಿಸಿದಾಗ ಆ ಕನಸು ನನಸಾಯಿತು. ಕನಸು ನನಸುಗಳ ಕತೆ ಏನೇ ಇರಲಿ. ಸೈನ್ಯದ ಸಾಮರ್ಥ್ಯದ ಕುರಿತಂತೆ ನಡೆಯುತ್ತಿದ್ದ ವಾದ ವಿವಾದಗಳಿಂದ ಈ ಪರೀಕ್ಷೆ ಕೇಂದ್ರ ಸರ್ಕಾರವನ್ನಂತೂ ಪಾರುಮಾಡಿತು. ಅಗ್ನಿಯೂ ತಂಪೆರೆಯಬಲ್ಲದೆಂದರೆ ಹೀಗೇ ನೋಡಿ!

ಈ ನಾಲ್ಕು ವರ್ಷಗಳ ಪ್ರಯತ್ನ ಅಂತ್ಯ ಕಾಣಲು ಇನ್ನೂ ಸ್ವಲ್ಪ ಕಾಲಾವಕಾಶ ಬೇಕಿತ್ತು. ಆದರೆ ರಕ್ಷಣಾ ಸಚಿವ ಆಂಟನಿ ವಿಜ್ಞಾನಿಗಳಿಗೆ ದುಂಬಾಲು ಬಿದ್ದು ಈ ಪ್ರಯೋಗವನ್ನು ಸಾಧ್ಯವಾಗಿಸಿ ಯಶಸ್ಸು ಗಳಿಸಿಕೊಂಡರು. ಈ ನಿಟ್ಟಿನಲ್ಲಿ ಡಿಆರ್‌ಡಿಓಗೆ ಸಹಕಾರಿಯಾಗಿ ಹಲವು ವೈಜ್ಞಾನಿಕ ಸಂಸ್ಥೆಗಳು ದುಡಿದಿವೆ. ಯಶಸ್ಸಿನ ಈ ಹೊತ್ತಿನಲ್ಲಿ ಆ ವಿಜ್ಞಾನಿಗಳಿಗೆಲ್ಲ ಒಂದು ಪ್ರೀತಿಯ ಸಲಾಮು.

ಮತ್ತಷ್ಟು ಓದು »