ವಿಷಯದ ವಿವರಗಳಿಗೆ ದಾಟಿರಿ

Posts tagged ‘ಗೆಳತಿ’

1
ಏಪ್ರಿಲ್

ಸ್ನೇಹಿತ ಮೊದಲ ಬಾರಿ ಅತ್ತುಬಿಟ್ಟ…!

ಪ್ರವೀಣಚಂದ್ರ, ಪುತ್ತೂರು

ಬಸ್ ವೇಗವಾಗಿ ಸಾಗುತ್ತಿತ್ತು. ಊರಿಗೆ ಬಂದ ಸಂಭ್ರಮವನ್ನು ಕಿತ್ತುಕೊಂಡ ಆ ಕ್ಷಣದ ಕುರಿತು ಯೋಚಿಸುತ್ತಿದ್ದೆ. ಬಸ್ಸಿನ ಕಿಟಕಿ ಹಾಕಿದ್ದರೂ ಚಳಿ ಕಾಡುತ್ತಿತ್ತು. ಹೃದಯವೂ ತಣ್ಣಗಿತ್ತು. ಅಪದಮನಿ ಅಭಿದಮನಿಗಳೆರಡೂ ನೋವಿನಲ್ಲಿತ್ತು. ಆಪ್ತ ಸ್ನೇಹಿತನೊಬ್ಬನ ಮುಂದೆ ಸ್ವಾಭಿಮಾನದ ಪ್ರಶ್ನೆಯೆದ್ದು ಅಹಲ್ಯೆಯಂತೆ ಕಲ್ಲಾದ ಪರಿಣಾಮವದು. ನನ್ನ ಎದುರು ಮಾತು ಆತನಿಗೆ ಅನಿರೀಕ್ಷಿತವಾಗಿತ್ತು. ನನಗೆ ಅನಿವಾರ್ಯವಾಗಿತ್ತು.
***
ಬ್ಯಾಗಿನಲ್ಲಿದ್ದ ಪತ್ರಿಕೆಯೊಂದನ್ನು ಕೈಗೆತ್ತಿಕೊಂಡೆ. ಅಲ್ಲಿ ನಾಗತಿಹಳ್ಳಿ ಸಂಬಂಧದ ಕುರಿತು ಬರೆದಿದ್ದರು. ಸಂಬಂಧವೆಂದರೆ ಬೆಂಕಿ ಮತ್ತು ಚಳಿ ಕಾಯುವವನ ನಡುವಿನ ಅಂತರದಂತೆ. ಚಳಿಯಾಗುತ್ತೆ ಎಂದು ಬೆಂಕಿಯನ್ನು ಮುಟ್ಟುವ ಹಾಗಿಲ್ಲ. ಬೆಂಕಿಗೂ ವ್ಯಕ್ತಿಗೂ ಒಂದಿಷ್ಟು ಅಂತರ ಕಾಯ್ದುಕೊಳ್ಳಬೇಕು ಅಂತ ಬರೆದಿದ್ದರು. ಸ್ನೇಹಕ್ಕೂ ಇದು ಅನ್ವಯವಾಗುತ್ತಾ? ನಾನು ಯೋಚಿಸತೊಡಗಿದೆ. ಸ್ನೇಹಕ್ಕೆ ಯಾವುದೇ ಅಂತರಗಳೇ ಇಲ್ಲವಾ ಅರ್ಥವಾಗಲಿಲ್ಲ.
***
ಇನ್ ಬಾಕ್ಸ್ ತೆರೆದು ನೋಡಿದಾಗ ಸ್ನೇಹದ ಮಹತ್ವ ಸಾರುವ ಹತ್ತಾರು ಸಂದೇಶಗಳು ಬಂದು ಕೂತ್ತಿದ್ದವು. ನಮ್ಮ ಕೋಪನೋಡಿ ಸ್ನೇಹಿತರೇ ಕಳುಹಿಸುತ್ತಿದ್ದರು. ಬೇರೆ ಸಂದರ್ಭದಲ್ಲಿಯಾದರೆ ಡಿಲಿಟ್ ಮಾಡಿ ಬಿಡುತ್ತಿದ್ದೆ. ಈಗ ಪ್ರತಿಪದಗಳು ಅರ್ಥವತ್ತಾಗಿ ಗೋಚರಿಸುತ್ತಿದ್ದವು. ನಮ್ಮೊಳಗೆ ಯಾಕೆ ಜಗಳ ಎಂದು ಸ್ನೇಹಿತರೆಲ್ಲರ ಗೋಗೆರತದಂತೆ ಕಾಡುತ್ತಿದ್ದವು.
***
ಅವನಲ್ಲಿ ಜಗಳ ಮಾಡಿದ ಮರುಕ್ಷಣವೇ ಆತನೊಂದಿಗೆ ಮನಸ್ಸು ರಾಜಿಯಾಗಿತ್ತು. ಆದರೆ ಮಾತನಾಡಲು ಮನಸ್ಸು ಇಚ್ಚಿಸಲಿಲ್ಲ. ಏನು ನಡೆಯಿತು ಎಂದು ಬರೆಯಲು ಕಷ್ಟ. ಯಾಕೆಂದರೆ ಅದರ ಯಾತನೆ ಅನುಭವವೇದ್ಯ. ಇಲ್ಲೊಂದು ಕತೆ ಓದಿ.
***
ಮತ್ತಷ್ಟು ಓದು »