ವಿಷಯದ ವಿವರಗಳಿಗೆ ದಾಟಿರಿ

Posts tagged ‘ಚರ್ಚೆ’

7
ಮೇ

ನಮ್ಮ ವಿಶ್ವವಿದ್ಯಾಲಯಗಳಲ್ಲಿ ಸಾಮಾಜಿಕ ಸಂಶೋಧನೆಗೆ ಭವಿಷ್ಯವಿದೆಯೆ?

ಪ್ರೊ. ರಾಜಾರಾಮ ಹೆಗಡೆ ಮತ್ತು ಡಾ. ಷಣ್ಮುಖ. ಎ

Sr[ಪ್ರೊ.ರಾಜೇಂದ್ರ ಚೆನ್ನಿಯವರು ಬರೆದಿದ್ದು ಎನ್ನಲಾದ “ಭಾರತದಲ್ಲಿ ಜಾತಿವ್ಯವಸ್ಥೆ ಇದೆಯೆ?” ಎಂಬ ಪುಸ್ತಕದ ವಿಮರ್ಶೆಯು ಅವರ ಆಪ್ತ ವಲಯದಲ್ಲಿ ಸರ್ಕುಲೇಟ್ ಆಗುತ್ತಿದೆ. ಆ ವಿಮರ್ಶೆಯ ಮಿತಿಗಳು ಮತ್ತು ಪೂರ್ವಾಗ್ರಹಗಳನ್ನು ಸ್ಪಷ್ಟಪಡಿಬೇಕೆಂದು ಈ ಲೇಖನವನ್ನು ಬರೆಯಲಾಗಿದೆ]

ಇತ್ತೀಚೆಗೆ ಜಾಲತಾಣದಲ್ಲಿ ಸುತ್ತಾಡುತ್ತಿದ್ದ ಒಂದು ಪುಸ್ತಕ ವಿಮರ್ಶೆಯ ಪ್ರಾರಂಭಿಕ ಸಾಲುಗಳು ನಮ್ಮನ್ನು ಬೆಚ್ಚಿಬೀಳಿಸಿದವು. ಅವು ಹೀಗಿವೆ:

“ಈ ಕೃತಿಯು ನನ್ನಲ್ಲಿ ಹುಟ್ಟಿಸಿದ ವೈಚಾರಿಕ ಕುತೂಹಲವನ್ನು ಹೀಗೆ ವಿವರಿಸಬಹುದು. ಮನುಷ್ಯರು ಓದು, ಬುದ್ಧಿಶಕ್ತಿ, ತರ್ಕ ಹಾಗೂ ಭಾಷೆಯನ್ನು ಮಾನವ ದ್ವೇಷಿಯಾದ ಬೌದ್ಧಿಕ ಕೆಲಸಗಳಿಗೆ ಏಕೆ ಬಳಸುತ್ತಾರೆ? ಪಾಂಡಿತ್ಯವೆಂದು ಕರೆಯಲಾಗುವ ಸಂಗತಿಯು ಒಂದು ವಲಯದಲ್ಲಿ ಅಂತಃಕರಣ, ಪ್ರೀತಿ, ಇತರರ ಬಗ್ಗೆ ಸದ್ಭಾವನೆ ಮುಂತಾದ ಭಾವನೆಗಳಿಂದ ಸಂಪೂರ್ಣ ಪರಕೀಯವಾಗಿ, ಕ್ರೂರವಾದ ಅಭಿಪ್ರಾಯಗಳನ್ನು ಸಮರ್ಥಿಸುವ `ತರ್ಕದ ಟಗರ ಹೋರಟೆ’ ಯಾಕೆ ಆಗುತ್ತದೆ? ಬಹು ಸಂಖ್ಯಾತ ಜನರಿಗೆ ಮನುಷ್ಯರಾಗಿ ಬದುಕುವ ಅವಕಾಶಗಳೇ ಇಲ್ಲವಾಗುತ್ತಿರುವ ಬಡದೇಶದಲ್ಲಿ ಅತಿಶಯವಾದ ಸವಲತ್ತುಗಳನ್ನು ಪಡೆದಿರುವ ವಿಶ್ವವಿದ್ಯಾಲಯಗಳ ಬುದ್ಧಿಜೀವಿ ಹಾಗು ಸಂಶೋಧಕವರ್ಗವು ಈ ಜನರು ಆಳವಾಗಿ ನಂಬಿಕೊಂಡು ಬಂದಿರುವ ಸಮಾನತೆ, ನ್ಯಾಯ ಮುಂತಾದ ಮೌಲ್ಯಗಳನ್ನು ಉಡಾಫೆಯಿಂದ ತಿರಸ್ಕರಿಸುವ ದುಷ್ಟತನದ ಮೂಲವು ಎಲ್ಲಿದೆ? ನಿರ್ದಿಷ್ಟವಾಗಿ ಹೇಳುವುದಾದರೆ ಪಾಂಡಿತ್ಯ ಮತ್ತು ಬುದ್ಧಿಶಕ್ತಿಗಳು Evil ನ ಅತ್ಯಂತ ಆಳವಾದ ಕೆಡುಕಿನ ರೂಪಗಳೇಕೆ ಆಗುತ್ತವೆ?”

ಮತ್ತಷ್ಟು ಓದು »

7
ಮೇ

ದೇವನೂರರ ಬರಹದ ಕುರಿತು ನಡೆದ ಚರ್ಚೆಯ ಸುತ್ತ . . .

-ಡಾ. ಕಿರಣ್ ಗಾಜನೂರು

Vachana Charche“ದೇವನೂರರ ಕುರಿತು ಅಪಾರ ಗೌರವ ಇಟ್ಟುಕೊಂಡೆ ಈ ಮಾತು ಹೇಳುತ್ತಿದ್ದೇನೆ ಅವರ ಲೇಖನದಲ್ಲಿ ಲಾಜಿಕ್ಕೆ ಇಲ್ಲ ಇನ್ನು ತಪ್ಪುಗಳನ್ನು ಹೇಗೆ ಗುರುತಿಸುವುದು ಈಗ ಒಬ್ಬರೂ ಒಂದು ಸಂಶೋಧನೆಯ ಮೂಲಕ ನಿಮಗೆ ಒಂದು ಪ್ರಶ್ನೆ/ವಾದ ಕೇಳುತ್ತಾರೆ ಎಂದು ಇಟ್ಟುಕೊಳ್ಳಿ ಅದಕ್ಕೆ ನೀವು ಬೌದ್ಧಿಕವಾಗಿ ಅಂಧರೆ ಆ ವ್ಯಕ್ತಿ ಯಾವ ಸಂಶೋಧಾನ ವಿಧಾನ ಬಳಸಿ ಯಾವ ಮಾಹಿತಿಯ ಆಧಾರದ ಮೇಲೆ ತನ್ನ ವಾದ ಮಂಡಿಸುತ್ತಿದ್ದಾನೆ ಅದರಲ್ಲಿರುವ ದೂಷಗಳೇನು ಅವನು ಬಳಸಿದ ವಿಧಾನ ಮತ್ತು ಪಡೆದ ಮಾಹಿತಿ ಹೇಗೆ ಆ ವಸ್ಥುವಿನ ಸರಿಯಾಗಿ ವಿವರಿಸುವಲ್ಲಿ ಎಡವಿದೆ ಎಂಬುದನ್ನು ಲಾಜಿಕಲಿ ಸಾಧಿಸಬೇಕಾಗುತ್ತದೆ. ಆದರೆ ದೆವನೂರರ ಬರಹದಲ್ಲಿ ಈ ಅಂಶವೇ ಇಲ್ಲ ಅವರೂ ಇದುವರೆಗೂ ನಂಬಿಕೊಂಡು ಬಂದ ಐಡಿಯಾಲಜಿಯನ್ನು ವಿವರಿಸಿದ್ದಾರೆ ಅಷ್ಟೆ ಈ ರೀತಿಯಾದರೆ ಯಾರೂ ಬೇಕಾದರೂ ಮಾತನಾಡಬಹುದು ಆದರೆ ಅದರಿಂದ ಎನೂ ಪ್ರಯೋಜನ? ಅದೂ ಅಲ್ಲದೆ ದೆವನೂರು ಮತ್ತು ಅವರ ಹಿಂಬಾಲಕರು ನಂಬಿದ ವಿಷಯಗಳೇ ಅಂತಿಮ ಅವರ ವಿವರಣೆಗೆ ವಿರುಧ್ಧದ ಸಂಶೋಧನೆ ಯಾರೂ ಮಾಡಬಾರದು ಮಾಡಿದರೆ ಅವರ ಮೇಲೆ ಕಣ್ಣಿಡಿ ವಿಚಾರಣೇ ಮಾಡಿ ಎಂಬಿತ್ಯಾದಿ ಮಾತನಾಡುವುದು ಅವರ ವ್ಯಕ್ತಿತ್ವಕ್ಕೆ ಶೋಭೆ ತರುವ ವಿಷಯವು ಅಲ್ಲ ಒಂದೂ ಕಾಲದಲ್ಲಿ ಆರ್.ಎಸ್.ಎಸ್ ನವರನ್ನು ಯಾವ ಯಾವ ಕಾರಣಕ್ಕೆ ಇವರುಗಳು ವಿರೋಧಿಸಿದ್ದರೂ ಇವತ್ತು ಅವೇ ಲಕ್ಷಣಗಳನ್ನು ಇವರು ಅವಾಹಿಸಿಕೊಂಡು ಮಾತನಾಡುತ್ತಿದ್ದಾರೆ ಇತರರ ಸಂಶೋಧನೆ ಟೀಕಿಸುತ್ತಿದ್ದರೆ. ಅಂದರೆ ಯಾರೂ ಸಂಶೋಧನೆಯನ್ನೆ ಮಾಡಬಾರದು ಮಾಡಿದರೆ ಪರಿಣಾಮ ನೆಟ್ಟಗಿರುವುದಿಲ್ಲ ಎಂದೂ ಎಚ್ಚರಿಸುತ್ತಿದ್ದಾರೆ ಇನ್ನು ಮುಂದೆ ಹೋಗಿ ಜಿನ್ನಾ ನೀಡಿದಂತೆ ಡೈರೆಕ್ಟ್ ಆಕ್ಷನ್ ಗೆ ಕರೆನೀಡುತ್ತಿದ್ದಾರೆ ನನಗೆ ಆಶ್ಚರ್ಯವಾಗುವುದೇ ಇದಕ್ಕೆ ಯಾರೂ ಎನೇ ಸಂಶೋಧನೆ ಮಾಡಲಿ ನಾವು ಅವರೂ ಎತ್ತುವ ಪ್ರಶ್ನೆಗಳಿಗೆ ಉತ್ತರಿಸುತ್ತೇವೆ ಆ ಮಟ್ಟದ ಸೈಂಧಾಂತಿಕ ಪಕ್ವತೆ ನಾವು ನಂಬಿದ ಸಿಂಧಾಂತಕ್ಕೆ ಇದೆ ಎಂದು ಆತ್ಮವಿಶ್ವಾಸದಿಂದ ನುಡಿಯುಬೇಕಾದ ಈ ಚಿಂತಕರೂ ಹೀಗೆ ವರ್ತಿಸುತ್ತಿರುವುದು ನಮ್ಮ ಸಂಶೋಧನಾ ಮಾದರಿಯ ವೈಪಲ್ಯ ತೋರಿಸುತ್ತದೆ”  ಪೇಸ್ ಬುಕ್ ನಲ್ಲಿ ನಾನೂ ಪ್ರಕಟಿಸಿದ ಈ ಬರಹಕ್ಕೆ ಹಲವರು ಅನೇಕ ರೀತಿಯ ಪ್ರಶ್ನೆಗಳನ್ನು/ಟೀಕೆಗಳನ್ನು ಮಾಡಿದ್ದಾರೆ ಅವೆಲ್ಲವುಗಳನ್ನು ಒಂದೂ ಚರ್ಚೆಯ ಮಾದರಿಯಲ್ಲಿ ಕೆಳಗೆ ಬರೆದಿದ್ದೇನೆ ನೋಡಿ. . . .
ನಮ್ಮ ಸಮಾಜದಲ್ಲಿ ನಡೆಯುತ್ತಿರುವ ಮತ್ತು ನಡೆದಿರುವ ಶೋಷಣೆಗಳ ಕುರಿತು ಅವುಗಳ ನಿವಾರಣೆಯಗಳ ಕುರಿತು ಇಲ್ಲಿರುವ ಎಲ್ಲರ ಪ್ರಯತ್ನ ಮತ್ತು ಭಾವನೆ ಎಲ್ಲವೂ ತುಂಬಾ ಗೌರವಿಸುವ ವಿಚಾರಗಳೆ ಅಂದರೆ ನಮ್ಮೇಲ್ಲರ ಹಾನೆಸ್ಟ್ ಗುರಿ ಒಂದೇ ಅದು ನಮ್ಮ ಸಮಕಾಲಿನ ಸಮಾಜದ ಶೋಷಣೆಗಳನ್ನು ಹೊಗಲಾಡಿಸಬೇಕು.

ಮತ್ತಷ್ಟು ಓದು »

24
ಏಪ್ರಿಲ್

ವಚನ ಸಾಹಿತ್ಯ ಹಾಗೂ ಜಾತಿ ವ್ಯವಸ್ಥೆ: ರಾಜೇಂದ್ರ ಚೆನ್ನಿಯವರಿಗೊಂದು ಪ್ರತಿಕ್ರಿಯೆ

– ಡಂಕಿನ್ ಝಳಕಿ
Vachana Charcheಇದು ರಾಜೇಂದ್ರ ಚೆನ್ನಿಯವರು ಲಡಾಯಿ ಬ್ಲಾಗ್ನಲ್ಲಿ ಬರೆದ ಲೇಖನಕ್ಕೆ ನನ್ನ ಪ್ರತಿಕ್ರಿಯೆ. ಅವರ ಲೇಖನ ಸಾಕಷ್ಟು ಉದ್ದವಿದ್ದರೂ ಅದರಲ್ಲಿ ಉತ್ತರ ಕೊಡಲು ಯೋಗ್ಯವಾದ ವಿಚಾರಗಳಿರುವುದು ಎರಡು ಅಥವಾ ಮೂರು ಮಾತ್ರ. ಉಳಿದದ್ದೆಲ್ಲಾ ವೈಯುಕ್ತಿಕ ನಿಂದನೆಗಳು, ಆಧಾರ ರಹಿತ ಆಪಾದನೆಗಳು, ಮತ್ತು ಬಾಲಿಶ ಹಾಸ್ಯಗಳು. ಅವುಗಳಿಗೆ ಉತ್ತರ ಕೊಡುವುದು ಘನತೆಯ ವಿಚಾರವಲ್ಲ.

೧.ಮೇಲುಚಲನೆಯ ಕುರಿತು: ಡಾ.ಷಣ್ಮುಖರವರು ಹೇಳುವ ನನ್ನ “ಪ್ರಬಂಧದಲ್ಲಿ ಎಲ್ಲೂ ಈಗ ಇರುವ ವಚನಗಳು ಜಾತಿ(ವ್ಯವಸ್ಥೆ) ವಿರೋಧಿ ಚಳುವಳಿ ಎಂಬ ಕಥೆಯನ್ನು ವೀರಶೈವರು ತಮ್ಮ ಮೇಲುಚಲನೆಗಾಗಿ ಹರಡಿದರು ಎನ್ನುವ ವಾದವಿಲ್ಲ” ಎಂಬುದನ್ನು ಅಲ್ಲಗಳೆಯುತ್ತಾ ಚೆನ್ನಿಯವರು ನಾನು ನನ್ನ ಪ್ರಬಂಧದಲ್ಲಿ ತನ್ನ ಅಸ್ಮಿತೆ ಹಾಗೂ ಸಂಘಟನೆಯನ್ನು ಬಲಪಡಿಸುವ ಪ್ರಯತ್ನದಲ್ಲಿ ಬ್ರಿಟಿಷರು ಕಟ್ಟಿಕೊಟ್ಟ ಚಿತ್ರಣಗಳನ್ನು ತನಗೆ ಅಪ್ಯಾಯಮಾನವಾಗಿ ಕಂಡಿದ್ದರಿಂದ ಆಧುನಿಕ ವೀರಶೈವ ಶಿಕ್ಷಿತ ವರ್ಗವು ಒಪ್ಪಿಕೊಂಡಿತು ಎಂದು ವಾದಿಸುತ್ತೇನೆ ಎಂದು ಹೇಳುತ್ತಾರೆ.

ಮತ್ತಷ್ಟು ಓದು »

23
ಏಪ್ರಿಲ್

ವಚನ ಸಂಶೋಧನೆಯ ವಿಮರ್ಶೆ: ನಿರ್ಬಲ ವಾದ, ತಾರ್ಕಿಕ ಸಮಸ್ಯೆ

ಡಂಕಿನ್ ಝಳಕಿ

Vachana Charche`ಪ್ರಜಾವಾಣಿ’ಯಲ್ಲಿ ವಚನಗಳ ಕುರಿತ ನಮ್ಮ ಸಂಶೋಧನೆಯ ಬಗ್ಗೆ ನಡೆಯುತ್ತಿರುವ ಚರ್ಚೆಯಲ್ಲಿ ಒಂದು ಸಮಸ್ಯೆ ಮತ್ತೆ ಮತ್ತೆ ಚರ್ಚೆಗೆ ಬಂದಿದೆ. ಈ ಸಮಸ್ಯೆಯನ್ನು ಅರ್ಥ ಮಾಡಿಕೊಳ್ಳಬೇಕಾದರೆ ಈ ಮುಂದಿನ ಮಾತುಗಳನ್ನು ಕುರಿತು ನಾವು ಚಿಂತಿಸಬೇಕು: “ವಚನಕಾರರು ಜಾತಿಯ ಬಗ್ಗೆ ತಮ್ಮ ಸಿಟ್ಟು, ಅಸಮಾಧಾನ ಮತ್ತು ಕೊರಗುಗಳನ್ನು ಹೇಳಿದ್ದಾರೆಂಬುದಕ್ಕೆ ಸಾಕಷ್ಟು ಪುರಾವೆಗಳನ್ನು ವಚನಗಳಲ್ಲಿ ತೋರಿಸಬಹುದು. ಅವುಗಳ ಸಂಖ್ಯೆ ವಿರಳವೆಂಬುದು ಅವುಗಳ ಪ್ರಾಮುಖ್ಯವನ್ನು ಕುಂದಿಸುವುದಿಲ್ಲ”.

ಶಿವಪ್ರಕಾಶರ ಈ ಹೇಳಿಕೆಯ ಎರಡನೇ ಸಾಲನ್ನು ಗಮನಿಸಿ. ಈ ಸಾಲನ್ನು ನೋಡಿದಾಗಲೆಲ್ಲಾ ನನಗೆ ಅನಿಸಿದ್ದು ಈ ಆಕ್ಷೇಪಣೆಗೆ ಸಮರ್ಪಕವಾದ ಉತ್ತರ ನಮ್ಮ ಲೇಖನದಲ್ಲೇ ಇದೆಯಲ್ಲಾ ಎಂದು. ಹಾಗೇಕೆ ಅನಿಸುತ್ತದೆ ಎಂದೂ ಹೇಳಿ ಬಿಡುತ್ತೇನೆ. ಸಮಗ್ರ ವಚನ ಸಂಪುಟಗಳಲ್ಲಿರುವ ಒಟ್ಟು 21,788 ವಚನಗಳಲ್ಲಿ, ನಮ್ಮ ಲೇಖನ ತೋರಿಸುವ ಪ್ರಕಾರ, ಜಾತಿ ವಿರೋಧಿ ಚಳವಳಿ ಎಂಬ ವಿಷಯದ ಚರ್ಚೆಗೆ ಸರಿಯಾಗಿ ಉಳಿದುಕೊಳ್ಳುವ ವಚನಗಳು 72 ಮಾತ್ರ.

ಇರುವ ಈ 72 ವಚನಗಳಲ್ಲಿ, ವಚನಗಳು ಜಾತಿಯನ್ನು ವಿರೋಧಿಸುತ್ತವೆ ಎಂದು ಸಾಧಿಸ ಹೊರಡುವ ಚಿಂತಕರು ಬಳಸುವುದು ಕೇವಲ ಎಂಟು ಹತ್ತು ವಚನಗಳನ್ನು ಮಾತ್ರ. ಕೇವಲ ಎಂಟು ಹತ್ತು ವಚನಗಳನ್ನು ಆಯ್ದುಕೊಂಡು ಎಂಟುನೂರು ವರ್ಷಗಳ ಸುದೀರ್ಘ ಇತಿಹಾಸ ಉಳ್ಳ ಇಡಿಯ ವಚನ ಸಂಪ್ರದಾಯದ ಬಗ್ಗೆ ಮಾತನಾಡುವುದಾದರೆ, ಯೋಚಿಸಿ ನೋಡಿ, ನಾವು ಏನನ್ನು ಬೇಕಾದರೂ ಸಾಧಿಸಿಬಿಡಬಹುದು.

ಮತ್ತಷ್ಟು ಓದು »

20
ಏಪ್ರಿಲ್

ವಚನಗಳನ್ನು ಆಧ್ಯಾತ್ಮಿಕ ಸಂದರ್ಭದಲ್ಲಿಟ್ಟು ನೋಡಿದಾಗ ಕಾಣಿಸುವುದೇನು?

– ಬಾಲಗಂಗಾಧರ ಎಸ್. ಎನ್.

ಗೆಂಟ್ ವಿಶ್ವವಿದ್ಯಾಲಯ, ಬೆಲ್ಜಿಯಂ

Vachana Charcheವಚನಗಳ ಉದ್ದೇಶವು ಜಾತಿವಿನಾಶ ಚಳವಳಿಯಲ್ಲ ಎಂಬ ನನ್ನ ಹಾಗೂ ನನ್ನ ಸಹಸಂಶೋಧಕರ ವಾದವು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.ನನ್ನ ವಾದಕ್ಕೆ ಪ್ರತಿಕ್ರಿಯಿಸಿದವರೆಲ್ಲರೂ ನನ್ನ ವಾದವು ವಚನಗಳ ಹಿರಿಮೆಯನ್ನು ಅಲ್ಲಗಳೆಯುತ್ತಿದೆ ಎಂಬುದಾಗಿ ಭಾವಿಸಿದ್ದಾರೆ. ಅದನ್ನು ಸ್ಪಷ್ಟೀಕರಿಸಲು ವಚನಗಳನ್ನು ಆಧ್ಯಾತ್ಮಿಕ ಸಂದರ್ಭದಲ್ಲಿಟ್ಟು ನೋಡಬೇಕೆಂಬುದು ನಮ್ಮ ವಾದವೆಂಬುದನ್ನು ಓದುಗರ ಗಮನಕ್ಕೆ ತಂದಿದ್ದೂ ಆಗಿದೆ. ಆ ಹೇಳಿಕೆಯ ಕುರಿತೂ ಅನೇಕ ಪ್ರತಿಕ್ರಿಯೆಗಳು ಬಂದವು. ಈ ಪ್ರತಿಕ್ರಿಯೆಗಳಲ್ಲಿ ಪರೋಕ್ಷವಾಗಿ ಇವರೆಲ್ಲರೂ ಆಧ್ಯಾತ್ಮ ಸಂಪ್ರದಾಯವನ್ನು ಬ್ರಾಹ್ಮಣರಿಗೆ ಸಮೀಕರಿಸುವುದು ಕಂಡುಬರುತ್ತದೆ. ಇಲ್ಲಿ ಬಹುಶಃ ಈ ಅಭಿಪ್ರಾಯಗಳಿಗೆ ಉತ್ತರ ನೀಡುವುದಕ್ಕಿಂತ ನಾನು ಏನು ಹೇಳುತ್ತಿದ್ದೇನೆ ಎಂಬುದನ್ನು ಮತ್ತೂ ಸ್ಪಷ್ಟೀಕರಿಸುವುದು ಸೂಕ್ತ ಎನ್ನಿಸುತ್ತದೆ.

ಭಾರತೀಯ ಆಧ್ಯಾತ್ಮ ಪರಂಪರೆಯು ಇಂದಿನವರೆಗೂ ಐತಿಹಾಸಿಕ ಏಳು ಬೀಳುಗಳನ್ನೆಲ್ಲ ದಾಟಿಕೊಂಡು ಅವ್ಯಾಹತವಾಗಿ ಮುಂದುವರಿದುಕೊಂಡು ಬಂದಿದೆ. ಆದರೆ ಅದರ ಕುರಿತು ಅಧಿಕೃತವಾಗಿ ತಿಳಿದುಕೊಳ್ಳುವ ಗುರಿಯನ್ನು ಸಮಾಜ ವಿಜ್ಞಾನವು ಇನ್ನೂ ತಲುಪಿಲ್ಲ. ಏಕೆಂದರೆ, ಅದರ ಒಂದು ವಿಶೇಷತೆಯೆಂದರೆ  ಅದನ್ನು ಗುರು, ಶಿಷ್ಯವೃತ್ತಿ, ಸತತ ಸಾಧನೆ ಇತ್ಯಾದಿಗಳಿಂದಲೇ ಕಲಿಯಬೇಕಾಗುತ್ತದೆ. ಅದರ ಕುರಿತು ನಮ್ಮ ಆಧುನಿಕ ಪರಿಭಾಷೆಗಳಲ್ಲಿ ಮಾತನಾಡಲು ಹಾಗೂ ಅರ್ಥಮಾಡಿಕೊಳ್ಳಲು ನಾವಿನ್ನೂ ಸರಿಯಾದ ಭಾಷೆಯನ್ನು ಬೆಳೆಸಿಕೊಂಡಿಲ್ಲವೆಂಬುದು ವಚನದ ಕುರಿತ ಈ ಚರ್ಚೆಯಂದ ಧೃಡಪಡುತ್ತದೆ. ಏಕೆ ಈ ಸಂಪ್ರದಾಯವನ್ನು ಪ್ರವೇಶಿಸಲು ನಮಗೆ ಸಾಧ್ಯವಾಗುತ್ತಿಲ್ಲವೆಂದರೆ ಈಗ ಇರುವ ವಿವರಣೆಗಳೆಲ್ಲವೂ ಕ್ರೈಸ್ತ ಥಿಯಾಲಜಿಯನ್ನಾಧರಿಸಿ ಹುಟ್ಟಿದಂಥವು. ಅಂದರೆ, ಭಾರತೀಯ ಆಧ್ಯಾತ್ಮಿಕ ಪರಂಪರೆಯನ್ನು ಪ್ರಪ್ರಥಮವಾಗಿ ಸಮಾಜ ವಿಜ್ಞಾನದ ಪರಿಭಾಷೆಯಲ್ಲಿ ಇಟ್ಟ ಐರೋಪ್ಯರು ತಮಗೆ ಗೊತ್ತಿದ್ದ ಒಂದೇ ಒಂದು ಪರಿಭಾಷೆಗಳ ಲೋಕದಿಂದ ಇದನ್ನು ವರ್ಣಿಸಿದರು, ಅದೇ ಕ್ರೈಸ್ತರ ಥಿಯಾಲಜಿಯ ಲೋಕ. ಅಂದರೆ, ಇಂದು ಆಧ್ಯಾತ್ಮದ ಜ್ಞಾನದ ಹಿನ್ನೆಲೆಯನ್ನು ಹೊಂದಿದವರು ಏನನ್ನು ಹೇಳುತ್ತಿದ್ದಾರೆ ಎಂಬುದನ್ನು ಇಂದಿನ ಸಮಾಜ ವಿಜ್ಞಾನಿಗಳು ಸಂಶೋಧನಾ ಭಾಷೆಯಲ್ಲಿ ವರ್ಣಿಸಬೇಕಾದರೆ ಥಿಯಾಲಜಿಗೂ ಹೊರತಾದ ವೈಜ್ಞಾನಿಕ ಭಾಷೆಯೊಂದರ ಅಗತ್ಯವಿದೆ.
ಮತ್ತಷ್ಟು ಓದು »

8
ಏಪ್ರಿಲ್

ವಚನಗಳು ಜಾತಿವ್ಯವಸ್ಥೆಯನ್ನು ತೊಲಗಿಸಲು ನಡೆದಿರುವ ಚಳುವಳಿಯಲ್ಲ

ಡಾ. ಸಂತೋಷ್ ಕುಮಾರ್ ಪಿ.ಕೆ, ಶಿವಮೊಗ್ಗ.

Vachana Charcheಪ್ರಜಾವಾಣಿ ೧೯/೦೩/೨೦೧೩ ರಲ್ಲಿ ಪ್ರಕಟವಾದ ಕಲಬುರ್ಗಿಯವ ಲೇಖನಕ್ಕೆ ಪ್ರತಿಕ್ರಿಯೆ

ವಚನಗಳ ಕುರಿತು ನಡೆಯುತ್ತಿರುವ ಚರ್ಚೆಯಲ್ಲಿ ಒಂದು ರೀತಿಯ ಕಂದರವಿದೆ. ಒಂದೆಡೆ ಸಂಶೋಧನೆ ವಾಸ್ತವದ ಕುರಿತು ವಾದಿಸುತ್ತಿದ್ದರೆ ಮತ್ತೊಂದೆಡೆ ಐಡಿಯಾಲಜಿಗಳು ಕಟ್ಟುಕತೆಯನ್ನೇ ಮರುಪ್ರಸಾರ ಮಾಡುತ್ತಿವೆ. ಇಲ್ಲಿ ಕಂದರವಿರುವುದು ಸಂಶೋಧನೆ ಮತ್ತು ಐಡಿಯಾಲಜಿಯ ನಡುವೆ. ಸಂಶೋಧನೆ ನಡೆಸಿ ಸುಮಾರು ೨೨೦೦೦ ವಚನಗಳನ್ನು ಪರಿಶೀಲನೆಗೆ ಒಡ್ಡಿ, ಡಂಕಿನ್ ಮತ್ತು ಬಾಲುರವರು ಒಂದು ಹೊಸ ಹೈಪೋಥೀಸಿಸ್ ನ್ನು ನೀಡುತ್ತಿದ್ದಾರೆ. ಆದರೆ ಅದು ಸಂಶೋಧನಾ ಹೈಪೋಥೀಸಿಸ್ ಎಂಬುದು ಚರ್ಚೆಯಲ್ಲಿ ಭಾಗವಹಿಸುತ್ತಿರುವ ಪೂರ್ವಪಕ್ಷದವರಿಗೆ ಅರ್ಥವಾಗದೆ ಇರುವುದು ಖೇದದ ಸಂಗತಿ.

ವಚನಗಳು ಜಾತಿವ್ಯವಸ್ಥೆಯನ್ನು ತೊಲಗಿಸಲು ನಡೆದಿರುವ ಚಳುವಳಿಯಲ್ಲ ಎಂದು ಯಾರಾದರೂ ವಾದಿಸಿದರೆ, ಅದಕ್ಕೆ ಪೂರ್ವಪಕ್ಷದವರು ಅದು ಹೇಗೆ ಜಾತಿವ್ಯವಸ್ಥೆಯ ವಿರುದ್ಧವೇ ನಡೆದಿದೆ ಎಂಬುದನ್ನು ಸಾಬೀತು ಮಾಡಬೇಕಾಗುತ್ತದೆ. ಅರಚಾಟ, ಕಿರುಚಾಟ, ವಯಕ್ತಿಕ ಟೀಕೆಗಳನ್ನು ಮಾಡಿದರೆ ಯಾವುದೇ ಹೈಪೋಥೀಸಿಸ್ ನ್ನು ರೆಫ್ಯೂಟ್ ಮಾಡಿದಂತೆ ಆಗುವುದಿಲ್ಲ. ವಚನಗಳು ಸಾವಿರಾರು ವಿಷಯಗಳ ಕುರಿತು ಮಾತನಾಡಿವೆ, ಅವುಗಳಲ್ಲಿ ಜಾತಿಯ ಕುರಿತು ಮಾತನಾಡಿರುವುದು ಒಂದಾಗಿದೆ. ವಚನಗಳ ಮೂಲ ಸಿದ್ಧಾಂತ (ಕಲಬುರ್ಗಿಯವರು ಹೇಳುವಂತೆ) ಜಾತಿವ್ಯವಸ್ಥೆಯನ್ನು ಹೋಗಲಾಡಿಸುವುದೇ ಆಗಿದ್ದರೆ ಅವರು ರಚಿಸಿರುವ ಬಹುತೇಕ ವಚನಗಳು ಆ ವಿಷಯದ ಸುತ್ತವೇ ಇರಬೇಕಿತ್ತು. ಆದರೆ ವಾಸ್ತವ ಹಾಗಿಲ್ಲ. ಈ ವಾದವನ್ನು ವಿರೋಧಿಸಬೇಕಾದರೆ ವಚನಗಳು ಬಹುಸಂಖ್ಯೆಯಲ್ಲಿ ಜಾತಿಯನ್ನು ವಿರೋಧಿಸುತ್ತವೆ ಎಂಬುದನ್ನು ಸಾಬೀತು ಮಾಡಬೇಕಾಗುತ್ತದೆ. ಇಷ್ಟು ಕನಿಷ್ಟ ಜ್ಞಾನವಿರದಿದ್ದರೆ ಐಡಿಯಾಲಜಿ, ಅಂದರೆ ವಾಸ್ತವಕ್ಕಿಂತ ತಾನು ನಂಬಿರುವುದೇ ಸತ್ಯ ಎಂಬ ಧೋರಣೆ ಮುಸುಕಾಗಿ ನಿಲ್ಲುತ್ತದೆ. ಐಡಿಯಾಲಜಿಯು ಸಿದ್ಧಾಂತಕ್ಕೆ ತೀರಾ ವ್ಯತಿರಿಕ್ತವಾದುದಾಗಿದೆ. ಸಾಮಾನ್ಯವಾಗಿ ಸಿದ್ಧಾಂತಗಳು ಇರುವ ಜ್ಞಾನವನ್ನು ಒರೆಗೆ ಹಚ್ಚುವ ಮೂಲಕ ಹೆಚ್ಚೆಚ್ಚು ಸ್ಪಷ್ಟತೆಯನ್ನು ಒದಗಿಸುತ್ತಾ ಹೋಗುತ್ತವೆ.

ಮತ್ತಷ್ಟು ಓದು »

2
ಏಪ್ರಿಲ್

ಮೀನಾಕ್ಷಿ ಬಾಳಿಯವರ ಅಸೈದ್ಧಾಂತಿಕ ವಿಮರ್ಶೆಗೊಂದು ಸೈದ್ಧಾಂತಿಕ ಉತ್ತರ

– ಡಂಕಿನ್ ಝಳಕಿ

Vachana Charcheನಮ್ಮ ವಚನ ಸಂಶೋಧನೆ ಕುರಿತು ಡಾ.ಮೀನಾಕ್ಷಿ ಬಾಳಿಯವರು ಪ್ರಜಾವಾಣಿಯ ೧೮/ಮಾರ್ಚ್/೨೦೧೩ರ ಸಂಚಿಕೆಯಲ್ಲಿ ಬರೆದ “ಆಧುನಿಕೋತ್ತರ ವಾದದ ಅಪಸವ್ಯ” ಎಂಬ ಬರಿಯ ಬೈಗುಳಗಳಿಂದಲೇ ತುಂಬಿರುವ ಇವರ ಬರಹಕ್ಕೆ ಇದು ನನ್ನ ಪ್ರತಿಕ್ರಿಯೆ.

(೧) ಅವರ ಟೀಕಾ ಪ್ರಹಾರ ಆರಂಭವಾಗುವುದೇ ನಮ್ಮ ವಾದದಲ್ಲಿ “ಯಾವುದೇ ಹೊಸ ಚಿಂತನೆಯಾಗಲಿ ಅಥವ ಆರೋಗ್ಯಪೂರ್ಣವಾದ ಚರ್ಚೆಗಾಗಲಿ ಅವಕಾಶವಿಲ್ಲ” ಎಂದು ಸಾರುತ್ತಾ, ನಮ್ಮ ಸಂಶೋಧನೆಯು ಪೂರ್ವಗ್ರಹ ಪೀಡಿತವಾಗಿದೆ ಮತ್ತು “ಈ ನಿಲುವಿಗೆ ಬರಲು ಬಳಸಿಕೊಂಡ ಸಂಶೋಧನ ಮಾದರಿಯೇ ಪ್ರಶ್ನಾರ್ಹವಾಗಿದೆ” ಎನ್ನುವ ಮೂಲಕ. ನಮ್ಮ ವಾದದಲ್ಲಿ ಆರೋಗ್ಯಪೂರ್ಣವಾದ ಚರ್ಚೆಗಾಗಲಿ ಅವಕಾಶವಿಲ್ಲದ ಮೇಲೆ ಬಾಳಿಯವರು ಈ ಲೇಖನವನ್ನು ಬರೆದದ್ದಾದರೂ ಹೇಗೆ, ಪ್ರಜಾವಾಣಿ ನಮ್ಮ ವಿರುದ್ಧ ಅಷ್ಟೊಂದು ಲೇಖನಗಳನ್ನು ಪ್ರಕಟಿಸಿದ್ದು  ಹೇಗೆ? ಈ ಪ್ರಶ್ನೆಗಳು ಹಾಗಿರಲಿ, ಮುಖ್ಯವಾದ ವಿಷಯಕ್ಕೆ ಬರೋಣ. ನಮ್ಮ ಸಂಶೋಧನ ಮಾದರಿಯೇ ಪ್ರಶ್ನಾರ್ಹವಾಗಿದೆ ಎಂದು ಇವರು ಹೇಳುವುದು ನಾವು ಕೇವಲ ವಚನಗಳಲ್ಲಿನ ಶಬ್ದ ಬಳಕೆಯ ಲೆಕ್ಕ ಮಾತ್ರ ಮಾಡುತ್ತೇವೆ, ಒಟ್ಟು ವಚನಗಳ ಜೀವಧ್ವನಿ, ಅವರ ಬದುಕಿನ ಸಂಘರ್ಷ ಮುಂತಾದವುಗಳನ್ನು, ವಚನಕಾರರ ನಂತರ ಅವರ ಬದುಕು ಕುರಿತು ರಚನೆಯಾದ ಕಾವ್ಯ ಪುರಾಣಗಳು ಶಾಸನಗಳು ಜಾನಪದ ಸಾಹಿತ್ಯರಾಶಿ ಇತ್ಯಾದಿಗಳನ್ನು ನಾವು ಗುರುತಿಸುವುದಿಲ್ಲವಂತೆ. ಇಂತಹ ಹೇಳಿಕೆಗಳನ್ನು ಮಾಡುವ ಮೊದಲು ನಾವು ಬರೆದ ಲೇಖನ, ಪುಸ್ತಕಗಳನ್ನು ಇವರು ಓದಬೇಕಿತ್ತು. ಅವರು ಉಲ್ಲೇಖಿಸುವುದು ನಮ್ಮೆಲ್ಲ ವಚನ ಸಂಶೋಧನೆಯ ಸಾರಾಂಶವನ್ನು ಕೊಟ್ಟಿರುವ, ನಾನು ಸಂಪಾದಿಸಿದ ಭಾರದಲ್ಲಿ ಜಾತಿವ್ಯವಸ್ಥೆ ಇದೆಯೇ? ಕೃತಿಯಲ್ಲಿನ ಎರಡು ಪುಟಗಳ ಲೇಖನವನ್ನಷ್ಟೇ. ಇದನ್ನು ಏನೆಂದು ಕರೆಯೋಣ: ಬಾಳಿಯವರ ವಿದ್ವತ್ತಿನಲ್ಲಿನ ಕೊರತೆ ಎಂದೋ ಅಥವಾ ಸೋಮಾರಿತಂವೆಂದೋ?

ಮತ್ತಷ್ಟು ಓದು »

1
ಏಪ್ರಿಲ್

ವಚನ ಸಾಹಿತ್ಯದ ಬಗೆಗಿನ ಚರ್ಚೆಯ ಕುರಿತು…

– ಜೆ.ಎಸ್.ಸದಾನಂದ
ಸ್ಥಳೀಯ ಸಂಸ್ಕಂತಿಗಳ ಅಧ್ಯಯನ ಕೇಂದ್ರ,
ಕುವೆಂಪು ವಿಶ್ವ ವಿದ್ಯಾನಿಲಯ.

Vachana Charche‘ಪ್ರಜಾವಾಣಿ’ಯಲ್ಲಿ ನಡೆಯುತ್ತಿರುವ ಢಂಕಿನ್‍ರವರ ವಚನ ಸಾಹಿತ್ಯ ಹಾಗು ಜಾತಿ ವ್ಯವಸ್ಥೆಯ ಕುರಿತಾದ ಸಂಶೋಧನೆಯ ಮೇಲಿನ ಚರ್ಚೆ ಹೆಚ್.ಎಸ್.ಶಿವಪ್ರಕಾಶ್ ಹಾಕಿಕೊಟ್ಟ ಅಕಾಡಮಿಕ್ ಅಡಿಪಾಯವನ್ನು ಬಿಟ್ಟು ಅತ್ತಿತ್ತ ಓಲಾಡತೊಡಗಿದೆ ಎಂದು ನನಗನಿಸುತ್ತಿದೆ. ಕೆಲವು ನಿರ್ಧಿಷ್ಟ ಲಕ್ಷಣಗಳನ್ನೊಳಗೊಂಡ ಬ್ರಾಹ್ಮಣ ಪುರೋಹಿತಶಾಹಿ ಪ್ರಚೋದಿತ ಜಾತಿ ವ್ಯವಸ್ಥೆ ಅಸ್ತಿತ್ವದಲ್ಲಿದೆ ಎನ್ನುವ ಪೂರ್ವನಂಬಿಕೆಯಿಂದ ವಚನ ಸಾಹಿತ್ಯವನ್ನು ನೋಡಿದಾಗ ಅವು ಜಾತಿ ವ್ಯವಸ್ಥೆಯ ವಿರುದ್ಧದ ಚಳುವಳಿಗಳಂತೆ ನಮಗೆ ಕಾಣಿಸುತ್ತದೆ. ಅಂತಹ ಭೌದ್ಧಿಕ ಚೌಕಟ್ಟಿನಿಂದ ಹೊರಬಂದು ವಚನಗಳನ್ನು ಓದಿದಾಗ ಅವು ಜಾತಿ ವ್ಯವಸ್ಥೆಯ ವಿರುದ್ಧದ ಚಳುವಳಿ ಎಂದು ಸಿದ್ಧಪಡಿಸಿ ತೋರಿಸಲು ಸಾಧ್ಯವಾಗುವುದಿಲ್ಲ ಎನ್ನುವುದು ಢಂಕಿನ್‍ರವರ ವಾದದ ಸಾರಾಂಶ ಎಂದು ನಾನು ತಿಳಿದುಕೊಂಡಿದ್ದೇನೆ. ಮತ್ತು ಇದಕ್ಕೆ ಪೂರಕವಾಗಿ ಜಾತಿಯ ಉಲ್ಲೇಖವಿರುವ ವಚನಗಳ ಸಂಖ್ಯೆ ಅತ್ಯಂತ ಕಡಿಮೆ ಎಂದು ಅವರು ಕೊಡುವ ಪುರಾವೆ ತಮ್ಮ ವಾದವನ್ನು ಸಮರ್ಥಿಸಿಕೊಳ್ಳಲು ಅವರು ಬಳಸುವ ಕೇವಲ ಒಂದು ಅಂಶವಷ್ಟೇ ಎನ್ನುವುದು ನನ್ನ ತಿಳುವಳಿಕೆಯಾಗಿದೆ. ಕೇವಲ ಅದೊಂದರಿಂದಲೇ ತಮ್ಮ ವಾದವನ್ನು ಅವರು ಸಮರ್ಥಿಸಿಕೊಂಡಿರಲು ಸಾಧ್ಯವಿಲ್ಲ. ಹೆಚ್.ಎಸ್.ಶಿವಪ್ರಕಾಶ್‍ರವರು ಈ ಒಂದು ಅಂಶವನ್ನು ಉಲ್ಲೇಖಿಸಿರುವುದರಿಂದ ಅದೇ ಚರ್ಚೆಯ ಪ್ರಮುಖ ಗುರಿಯಾಗಿ ಚರ್ಚೆಗೆತ್ತಿಕೊಳ್ಳಬುದಾಗಿದ್ದ ಇನ್ನಿತರ ಮಹತ್ತರ ಅಂಶಗಳು ಕಣ್ಮರೆಯಾಗಿರುವ ಸಾಧ್ಯತೆ ಇದೆ.

ನನಗನಿಸುವಂತೆ ಇಲ್ಲಿ ಅತ್ಯಂತ ಪ್ರಮುಖವಾಗಿ ಚರ್ಚೆಗೊಳಬೇಕಾದ ಸಂಗತಿಗಳು ಎಂದರೆ: ಢಂಕಿನ್‍ರವರ ಸಂಶೋಧನೆಯು ಅದರ ಅಧ್ಯಯನದ ಕೇಂದ್ರವಾದ ವಿಧ್ಯಮಾನದ ಮೇಲೆ ಎಷ್ಟರ ಮಟ್ಟಿಗೆ ಬೆಳಕು ಚೆಲ್ಲುತ್ತದೆ; ಅವರ ಸಂಶೋಧನೆಯ ಪ್ರಾಕ್‍ಕಲ್ಪನೆಗೆ (ಜಾತಿ ವ್ಯವಸ್ಥೆಯ ಚೌಕಟ್ಟಿನಲ್ಲಿ ವಚನಗಳನ್ನು ಗ್ರಹಿಸಿದಾಗ ಮಾತ್ರ ಅವು ಜಾತಿ ವಿರೋಧಿ ಚಳುವಳಿಗಳಂತೆ ಕಾಣುತ್ತವೆ ಎನ್ನುವ ಪ್ರಾಕ್‍ಕಲ್ಪನೆ) ಇರುವ ಸಮರ್ಥನೆ ಯಾವುದು; ಸಂಶೋಧನೆಯಲ್ಲಿ ಮಂಡಿಸಲಾಗಿರುವ ವಾದ ಎಷ್ಟು ತರ್ಕಬದ್ಧವಾಗಿದೆ ಇತ್ಯಾದಿ. ಚರ್ಚೆ ಈ ನಿಟ್ಟಿನಲ್ಲಿ ಮುಂದುವರೆದಿದ್ದರೆ ಇದೊಂದು ಅರ್ಥಪೂರ್ಣ ಚರ್ಚೆಯಾಗಿರುತ್ತಿತ್ತು ಹಾಗು ಓದುಗರಿಗೂ ಉಪಯುಕ್ತವಾಗುತ್ತಿತ್ತು.

ಮತ್ತಷ್ಟು ಓದು »

1
ಏಪ್ರಿಲ್

ವಚನ ಸಾಹಿತ್ಯವು ಜಾತಿವ್ಯವಸ್ಥೆಯ ವಿರುದ್ಧ ಮಾತನಾಡುತ್ತದೆಯೆ?

(ಪ್ರಜಾವಾಣಿಯಲ್ಲಿ CSLC ಯ ಡಂಕಿನ್ ಝಳಕಿ ಮತ್ತು ಎಸ್.ಎನ್. ಬಾಲಗಂಗಾಧರ ’ವಚನ ಸಾಹಿತ್ಯವು ಜಾತಿವ್ಯವಸ್ಥೆಯ ವಿರುದ್ಧ ಮಾತನಾಡುತ್ತದೆಯೆ?’ ಅನ್ನುವ ಲೇಖನದ ಬಗ್ಗೆ ಚರ್ಚೆ ಹುಟ್ಟುಹಾಕಿದವರು ಎಚ್.ಎಸ್. ಶಿವಪ್ರಕಾಶ್.ಆದರೆ ಸುಮಾರು ೧೫ ದಿನಗಳ ಈ ಇಡಿ ಚರ್ಚೆಯಲ್ಲಿ ಮೂಲ ಲೇಖನದ ವಿರುದ್ಧವಾದ ದನಿಗಳಿಗೆ ಮಾತ್ರ ಇದುವರೆಗೆ ವೇದಿಕೆ ಕಲ್ಪಿಸಿ, ಲೇಖಕರ ಅಭಿಪ್ರಾಯ ಮಂಡನೆಗೆ ಅವಕಾಶವನ್ನೇ ನೀಡಲಾಗಿಲ್ಲ ..!

ಡಂಕಿನ್ ಝಳಕಿ ಯವರ ಮೂಲ ಲೇಖನ ಇಲ್ಲಿದೆ. ಈ ಚರ್ಚೆಯ ಎಲ್ಲಾ ರೀತಿಯ ಅಭಿಪ್ರಾಯಗಳಿಗೂ “ನಿಲುಮೆ” ಮುಕ್ತ ವೇದಿಕೆಯಾಗಲಿದೆ – ನಿಲುಮೆ)

 – ಡಂಕಿನ್ ಝಳಕಿ, ಎಸ್.ಎನ್. ಬಾಲಗಂಗಾಧರ

Balu - Jalaki

[ಇದು ಚಿಂತನ ಬಯಲು ಸಂಪುಟ ೧, ಸಂಚಿಕೆ ೩ರಲ್ಲಿ ಪ್ರಕಟಗೊಂಡ ಮೂಲ ಲೇಖನದ ಸಂಕ್ಷಿಪ್ತ ಪಾಠ. ಲೇಖನದ ಪೂರ್ಣ ಪಾಠ, ಆಕರ ಗ್ರಂಥಗಳ ಪಟ್ಟಿ ಮತ್ತು ಅಡಿಟಿಪ್ಪಣಿಗಳಿಗಾಗಿ ಮೂಲ ಲೇಖನವನ್ನು ನೋಡಿ ಅಥವಾ ಇವರನ್ನು ಸಂಪರ್ಕಿಸಿ: dunkinjalkiAToutlookDOTcom]

ವಚನಗಳ ಆಧುನಿಕ ಅಧ್ಯಯನಗಳ ಒಂದು ಮರು ಪರಿಶೀಲನೆ

ಕನ್ನಡ ಸಾಹಿತ್ಯದ ಬಹು ಮುಖ್ಯ ಭಾಗವಾಗಿರುವ ವಚನಗಳನ್ನು ‘ಲಿಂಗಾಯತ/ವೀರಶೈವ ಚಳುವಳಿ’ ಅಥವಾ ‘ವಚನ ಚಳುವಳಿ’ ಎಂಬ ಹನ್ನೆರಡನೇ ಶತಮಾನದ ಒಂದು ಆಂದೋಲನದ ಭಾಗವೆಂದು ನೋಡುವುದು ಇಂದು ಒಂದು ವಾಡಿಕೆಯಾಗಿ ಬಿಟ್ಟಿದೆ. ಹನ್ನೆರಡನೇ ಶತಮಾನದ ಈ ಆಂದೋಲನವನ್ನು, ಬುದ್ಧಿಸಂನ ಬಳಿಕ ಭಾರತ ಕಂಡ ಅತ್ಯಂತ ಪ್ರಮುಖ ಜಾತಿ ವಿರೋಧೀ ಚಳುವಳಿ ಎಂಬಂತೆ ಬಿಂಬಿಸಲಾಗಿದೆ. ಇಪ್ಪತ್ತನೇ ಶತಮಾನದ ಹೊತ್ತಿಗೆ ಈ ವಚನಗಳನ್ನು ಭಾರತ ಕಂಡ ಜಾತಿಯ ವಿರುದ್ಧ ಹೋರಾಡಿದ ಮೊಟ್ಟಮೊದಲ ಚಳುವಳಿಯ ಭಾಗವೆಂದು ಗುರುತಿಸಲಾಯಿತು. ಪ್ರಸ್ತುತ ಬಹುಮತಾಭಿಪ್ರಾಯದ ಪ್ರಕಾರ ಜಾತಿ ವಿರೋಧಿ ವಿಚಾರವು ವಚನ ಚಳುವಳಿಯ ಮತ್ತು ವಚನಗಳ ಮೂಲ ಆಶಯ. ಈ ಪ್ರಸಿದ್ಧ ವಾದಕ್ಕೆ ತರ್ಕದ ಅಥವಾ ನಿಜಾಂಶಗಳ ಯಾವುದೇ ಆಧಾರವಿಲ್ಲ ಎಂಬುದನ್ನು ತೋರಿಸುವುದೇ ಈ ಲೇಖನದ ಉದ್ದೇಶ.

ಈ ವಾದವನ್ನು ನಾವು ಬೆಳೆಸಿಕೊಂಡು ಹೋಗಲು ಹೀಗೊಂದು ಊಹಾಸಿದ್ಧಾಂತವನ್ನು ಮಾಡೋಣ: ವಚನಗಳು ಜಾತಿಯ ವಿರುದ್ಧದ ಚಳುವಳಿಯನ್ನು ಪ್ರತಿನಿಧಿಸುತ್ತವೆ ಎಂಬ ಪ್ರಚಲಿತ ಜನಪ್ರಿಯ ನಂಬಿಕೆಯು ನಿಜವೇ ಆಗಿದ್ದರೆ, ಬಹುತೇಕ ವಚನಗಳು ಜಾತಿಯ ಕುರಿತು ಮಾತನಾಡಲೇಬೇಕು. ಏಕೆಂದರೆ ಜಾತಿ ವಿರುದ್ಧದ ಚಳುವಳಿಯ ಭಾಗವಾಗಿದ್ದುಕೊಂಡೂ ವಚನಗಳು ಜಾತಿಯ ವಿರುದ್ಧ ಮಾತನಾಡದೆ ಊಳಿದಿರಬಹುದಾದ ಪರಿಸ್ಥಿತಿ ಸಾಧ್ಯವಿಲ್ಲದ ಮಾತು. ಈ ಊಹಾಸಿದ್ಧಾಂತದ ಪ್ರಕಾರ, ಒಂದುವೇಳೆ ನಾವು ವಚನಗಳು ಜಾತಿಯ ವಿರುದ್ಧ ಮಾತನಾಡುವುದಿಲ್ಲ ಅಥವಾ ಜಾತಿಯ ವಿಚಾರ ವಚನಗಳಿಗೆ ಮಹತ್ವದ ವಿಚಾರವೇ ಅಲ್ಲವೆಂದು ತೋರಿಸಿದರೆ, ವಚನಗಳು ಜಾತಿವಿರೋಧಿ ಸಾಹಿತ್ಯವೆಂಬ ಪ್ರಚಲಿತ ವಾದವನ್ನು ತಳ್ಳಿ ಹಾಕಿದಂತಾಗುತ್ತದೆ.

ಮತ್ತಷ್ಟು ಓದು »

31
ಮಾರ್ಚ್

ವಚನ ಸಾಹಿತ್ಯ ಮತ್ತು ಜಾತಿ ವ್ಯವಸ್ಥೆ ಚರ್ಚೆಯ ಸುತ್ತ

Nilume-CSLC - 4