ವಿಷಯದ ವಿವರಗಳಿಗೆ ದಾಟಿರಿ

Posts tagged ‘ಚಿಮೂ’

1
ಮೇ

ವಚನಗಳ ಧ್ವನಿಯನ್ನು ಎಲ್ಲಿ ಹುಡುಕಬೇಕು?

– ರಾಜಾರಾಮ ಹೆಗಡೆ

ಸ್ಥಳೀಯ ಸಂಸ್ಕೃತಿಗಳ ಅಧ್ಯಯನ ಕೇಂದ್ರ, ಕುವೆಂಪು ವಿಶ್ವವಿದ್ಯಾನಿಲಯ

{ಡಾ. ಆಶಾದೇವಿಯವರು ಪ್ರಜಾವಾಣಿಯಲ್ಲಿ ಪ್ರಕಟವಾದ ಲೇಖನಕ್ಕೆ ಪ್ರತಿಕ್ರಿಯೆಯಾಗಿ ಬರೆದು ಪ್ರಜಾವಾಣಿಗೆ ಕಳುಹಿಸಿದ್ದ ಅಪ್ರಕಟಿತ ಲೇಖನ}

Vachana Charche           ಡಾ. ಆಶಾದೇವಿಯವರ ಪ್ರತಿಕ್ರಿಯೆಯಲ್ಲಿ ನನ್ನ ವಿಚಾರಗಳ ಕುರಿತು ವ್ಯಕ್ತವಾದ ಎರಡು ಮುಖ್ಯ ಅಭಿಪ್ರಾಯಗಳ ಕುರಿತು ನನ್ನ ಆಕ್ಷೇಪಣೆಯಿದೆ: 1. ನಾವು ಉಲ್ಲೇಖಿಸುತ್ತಿರುವ ಸಂಶೋಧನಾ ವಿಧಾನವೇ ಒಂದು ಕಣ್ಕಟ್ಟು ಅಥವಾ ಮಾಯೆ. ಅದು ಸ್ವಘೋಷಿತ. ಆ ಮೂಲಕ ನಾವು ಕನ್ನಡಿಗರಿಗೆ ಮೋಸಮಾಡುತ್ತಿದ್ದೇವೆ. 2. ಈ ಸಂಶೋಧನೆಯ ಹಿಂದೆ ಒಂದು ಜಾಗತಿಕ ಹುನ್ನಾರವಿದೆ. ಇಂಥ ಹೇಳಿಕೆಗಳನ್ನು ಇದುವರೆಗೆ ನಾವು ನಿರ್ಲಕ್ಷಿಸಿಕೊಂಡು ಬಂದಿದ್ದೆವು. ಆದರೆ ಇಂಥ ಹೇಳಿಕೆಗಳನ್ನು ಸತ್ಯವೆಂಬಂತೆ ಪುನಃ ಪುನಃ ಮಾಡಲಾಗುತ್ತಿರುವುದರಿಂದ ನಾವು ಇದನ್ನು ಗಂಭೀರವಾಗಿ ಎಣಿಸಲೇಬೇಕಿದೆ.

ಆಶಾದೇವಿಯವರೊಂದೇ ಅಲ್ಲ, ನಾವು ಮಂಡಿಸಿದ ವಿಷಯದ ಕುರಿತು ಆಕ್ಷೇಪಣೆಯೆತ್ತುತ್ತಿರುವ ಬಹುತೇಕರು ಇಂಥ ಆರೋಪಗಳನ್ನು ಯಾವುದೇ ಎಗ್ಗಿಲ್ಲದೇ ತಾವು ಕಂಡುಕೊಂಡ ಸತ್ಯವೆಂಬಂತೆ ಹೇಳುತ್ತಿದ್ದಾರೆ. ಅಂದರೆ ನಾವು ಮೋಸಗಾರರು, ವಿದೇಶೀ ಹಣವನ್ನು ಕಬಳಿಸಲಿಕ್ಕೆ ಇಂಥ ಮಾತುಗಳನ್ನು ಹೇಳುತ್ತಿದ್ದೇವೆ, ಪೂರ್ವಾಗ್ರಹ ಪೀಡಿತರು, ನಮಗೊಂದು ಹುನ್ನಾರವಿದೆ, ನಾವು ದಲಿತರ, ಶೋಷಿತರ ವಿರೋಧಿಗಳು, ವಚನಕಾರರು ಯಾವ ಶಕ್ತಿಗಳ ವಿರುದ್ಧ ಹೋರಾಡಿದ್ದರೊ ನಾವು ಅವೇ ಶಕ್ತಿಗಳು, ಇತ್ಯಾದಿ. ಇವು ಸಣ್ಣಪುಟ್ಟ ಆರೋಪಗಳಲ್ಲ ಎಂಬುದನ್ನು ಪ್ರತ್ಯೇಕ ತಿಳಿಸಬೇಕಿಲ್ಲ. ಇದು ಯಾರ ವಿರುದ್ಧ ಯಾರನ್ನು ಎತ್ತಿಕಟ್ಟುವ ಹುನ್ನಾರ ಎಂಬುದು ನನಗೆ ತಿಳಿಯುತ್ತಿಲ್ಲ. ಇದು ಚಾರಿತ್ರ್ಯಹರಣದ ಪ್ರಯತ್ನ. ನಮ್ಮ ಕುರಿತು ಪ್ರಮಾಣಿತ ಸತ್ಯವೋ ಎಂಬಂತೆ ಈ ಆರೋಪಗಳನ್ನು ಅವರು ಸಾರ್ವಜನಿಕವಾಗಿ ಇಡುತ್ತಿದ್ದಾರೆ.  ಮಾಧ್ಯಮವೊಂದರಲ್ಲಿ ಇಂಥ ಗುರುತರ ಆಪಾದನೆಗಳನ್ನು ಮಾಡುವಾಗ ಸಾಕ್ಷ್ಯಾಧಾರಗಳು ಬೇಕಾಗುತ್ತವೆ. ಅದಿಲ್ಲದ ಹೇಳಿಕೆಗಳು ಮಾನನಷ್ಟಕ್ಕೆ ಸಮನಾಗುತ್ತವೆ. ಹಾಗಾಗಿ ಮೊದಲು ಅದಕ್ಕೆ ಇವರೆಲ್ಲ ಸಾಕ್ಷ್ಯಾಧಾರಗಳನ್ನು ಒದಗಿಸಬೇಕು, ಇಲ್ಲದಿದ್ದಲ್ಲಿ ಇದು ಕಪೋಲ ಕಲ್ಪಿತ ಹೇಳಿಕೆ ಎಂಬುದಾಗಿ ಸ್ಪಷ್ಟೀಕರಿಸಬೇಕು ಎಂಬುದು ನನ್ನ ಆಗ್ರಹ.

ಮತ್ತಷ್ಟು ಓದು »

24
ಏಪ್ರಿಲ್

ವಚನ ಸಾಹಿತ್ಯ ಹಾಗೂ ಜಾತಿ ವ್ಯವಸ್ಥೆ: ರಾಜೇಂದ್ರ ಚೆನ್ನಿಯವರಿಗೊಂದು ಪ್ರತಿಕ್ರಿಯೆ

– ಡಂಕಿನ್ ಝಳಕಿ
Vachana Charcheಇದು ರಾಜೇಂದ್ರ ಚೆನ್ನಿಯವರು ಲಡಾಯಿ ಬ್ಲಾಗ್ನಲ್ಲಿ ಬರೆದ ಲೇಖನಕ್ಕೆ ನನ್ನ ಪ್ರತಿಕ್ರಿಯೆ. ಅವರ ಲೇಖನ ಸಾಕಷ್ಟು ಉದ್ದವಿದ್ದರೂ ಅದರಲ್ಲಿ ಉತ್ತರ ಕೊಡಲು ಯೋಗ್ಯವಾದ ವಿಚಾರಗಳಿರುವುದು ಎರಡು ಅಥವಾ ಮೂರು ಮಾತ್ರ. ಉಳಿದದ್ದೆಲ್ಲಾ ವೈಯುಕ್ತಿಕ ನಿಂದನೆಗಳು, ಆಧಾರ ರಹಿತ ಆಪಾದನೆಗಳು, ಮತ್ತು ಬಾಲಿಶ ಹಾಸ್ಯಗಳು. ಅವುಗಳಿಗೆ ಉತ್ತರ ಕೊಡುವುದು ಘನತೆಯ ವಿಚಾರವಲ್ಲ.

೧.ಮೇಲುಚಲನೆಯ ಕುರಿತು: ಡಾ.ಷಣ್ಮುಖರವರು ಹೇಳುವ ನನ್ನ “ಪ್ರಬಂಧದಲ್ಲಿ ಎಲ್ಲೂ ಈಗ ಇರುವ ವಚನಗಳು ಜಾತಿ(ವ್ಯವಸ್ಥೆ) ವಿರೋಧಿ ಚಳುವಳಿ ಎಂಬ ಕಥೆಯನ್ನು ವೀರಶೈವರು ತಮ್ಮ ಮೇಲುಚಲನೆಗಾಗಿ ಹರಡಿದರು ಎನ್ನುವ ವಾದವಿಲ್ಲ” ಎಂಬುದನ್ನು ಅಲ್ಲಗಳೆಯುತ್ತಾ ಚೆನ್ನಿಯವರು ನಾನು ನನ್ನ ಪ್ರಬಂಧದಲ್ಲಿ ತನ್ನ ಅಸ್ಮಿತೆ ಹಾಗೂ ಸಂಘಟನೆಯನ್ನು ಬಲಪಡಿಸುವ ಪ್ರಯತ್ನದಲ್ಲಿ ಬ್ರಿಟಿಷರು ಕಟ್ಟಿಕೊಟ್ಟ ಚಿತ್ರಣಗಳನ್ನು ತನಗೆ ಅಪ್ಯಾಯಮಾನವಾಗಿ ಕಂಡಿದ್ದರಿಂದ ಆಧುನಿಕ ವೀರಶೈವ ಶಿಕ್ಷಿತ ವರ್ಗವು ಒಪ್ಪಿಕೊಂಡಿತು ಎಂದು ವಾದಿಸುತ್ತೇನೆ ಎಂದು ಹೇಳುತ್ತಾರೆ.

ಮತ್ತಷ್ಟು ಓದು »

14
ಮಾರ್ಚ್

ಟಿಪ್ಪು ಹೊಗಳಿದ ಮೇಲೆ ಕೋವಿದನೂ ಅಲ್ಲ ಕೋದಂಡನೂ ಅಲ್ಲ

– ಸಂತೋಶ್ ತಮ್ಮಯ್ಯ

Pratap Simha's bookಕೊಡವರಿಗೆ ಕಾವೇರಮ್ಮನ ಶಾಪವಿದೆಯಂತೆ, ಬ್ರಹ್ಮಹತ್ಯಾದೋಷವೂ, ನಾಗದೋಷವೂ ಕಾಡುತ್ತಿದೆಯಂತೆ. ಹಾಗಾಗಿ ಕೊಡವರಿಗೆ ಶಾಂತಿ ನೆಮ್ಮದಿ ಇಲ್ಲವಂತೆ, ಅಷ್ಟಮಂಗಲ ಪ್ರಶ್ನೆಯಲ್ಲಿ ಅದು ಕಂಡುಬಂದಿದೆಯಂತೆ. ಇದು ಸದ್ಯ ಕೊಡಗಿನಲ್ಲಿ ಚರ್ಚೆಯಾಗುತ್ತಿರುವ ವಿಷಯ. ಈ ದೋಷ, ಶಾಪ, ಪ್ರಶ್ನೆ, ಅದಕ್ಕಿರುವ ಪರಿಹಾರಗಳು ಏನೇನಿವೆಯೋ ಗೊತ್ತಿಲ್ಲ. ಆದರೆ ಒಂದು ಶಾಪವಂತೂ ಅಷ್ಟಮಂಗಲ ಪ್ರಶ್ನೆಯ ಹೊರತಾಗಿಯೂ ಪ್ರಜ್ನಾವಂತ ಕೊಡವರಿಗೆ ತಿಳಿದೇ ಇದೆ.

ಅದೆಂದರೆ ಕರ್ನಾಟಕದ ಎಲ್ಲರಿಗೂ ಕೊಡಗಿಗೆ ಹೋದಾಗ ಅಲ್ಲಿನ ಯೋಧರು, ಧೀರರು, ಶೂರರು ಎಲ್ಲರೂ ನೆನಪಾಗಿಬಿಡುತ್ತಾರೆ. ಮಡಿಕೇರಿಗೆ ಬಂದ ರಾಜಕಾರಣಿಗಳು, ಸಾಹಿತಿಗಳಿಗೆ ಯೋಧರನ್ನು ಹೊರತಾಗಿಸಿ ಮಾತು ಹೊರಬರುವುದೇ ಇಲ್ಲ. ಅವರೆಲ್ಲರಿಗೂ ಭಾಷಣಕ್ಕೆ, ಸಾಹಿತ್ಯಕ್ಕೆ, ಸಿನಿಮಾಕ್ಕೆ ಕೊಡಗಿನ ಯೋಧರು, ಬ್ರಹ್ಮಗಿರಿ, ಕಾವೇರಮ್ಮೆ, ಇಗ್ಗುತ್ತಪ್ಪರು ಬೇಕು. ಆದರೆ ಅವರೆಲ್ಲರೂ ಟಿಪ್ಪು ವಿಷಯಕ್ಕೆ ಬಂದರೆ ಟಿಪ್ಪು ಆ ಯೋಧರನ್ನೆಲ್ಲಾ ಮೀರಿ ನಿಂತುಬಿಡುತ್ತಾನೆ! ಅಂದರೇ ಧರ್ಮಕ್ಕಾಗಿ ಹೋರಾಡಿದ ಕೊಡಗಿನ ಯೋಧರು ಸಾಹಿತಿಗಳ ಪ್ರಕಾರ ಸೆಕ್ಯುಲರ್ ಆಗಿಬಿಡುತ್ತಾರೆ. ಈ ಸೆಕ್ಯುಲರ್ ವ್ಯಾದಿ ಸಾಹಿತಿಗಳ ಪ್ರಾರಬ್ಧವಾದರೂ ಕೊಡವರ ಪಾಲಿಗೆ ಅದು ಶಾಪ. ಅವರ ಭಾವನೆಗಳ ಮೇಲಿನ ಚೆಲ್ಲಾಟ. ಏಕೆಂದರೆ ಈ ಸೆಕ್ಯುಲರ್ ವ್ಯಾದಿ ಟಿಪ್ಪುವನ್ನು ಹೊಗಳಲು ಕೊಡವರ ಬಲಿದಾನವನ್ನೂ ತಿರುಚಲೂ ಹಿಂಜರಿಯುವುದಿಲ್ಲ. ಹೀಗೆ ಟಿಪ್ಪುವನ್ನು ಹೊಗಳುತ್ತಾ ಕೊಡವರ ಯೋಧತನವನ್ನು ವರ್ಣಿಸಲು ಹೇಗೆ ತಾನೇ ಸಾಧ್ಯ? ಸಾಧ್ಯವಿಲ್ಲ ನಿಜ. ಆದರೆ ಅದು ನಿರಂತರ ನಡೆಯುತ್ತಲೇ ಇದೆ. ಕೊಡಗಲ್ಲೇ ಕೆಲವರು ಭಂಡರಿದ್ದಾರೆ. ಅಂಥವರಿಗೆ ಅಷ್ಟು ಮಾತುಗಳು ಸಾಕಾಗುತ್ತವೆ. ಸಾಹಿತಿ-ರಾಜಕಾರಣಿಗಳಿಗೆ ಚಪ್ಪಾಳೆಗಳು ಭರಪೂರ ಗಿಟ್ಟುತ್ತವೆ. ಹಾಗಾಗಿ ಕಾರ್ನಾಡರೂ “ಟಿಪ್ಪು ಸುಲ್ತಾನ ಕಂಡ ಕನಸು” ಎಂದು ಬರೆಯುತ್ತಾರೆ. ಕೆಲವರು “ಟಿಪ್ಪು ಜನ್ಮದಿನವನ್ನು ಆಚರಿಸಲು ಶಾಲೆಗಳಿಗೆ ರಜಾ ಘೋಷಿಸಲಾಗುವುದು” ಎನ್ನುತ್ತಾರೆ. ಇನ್ನೊಬ್ಬರು ” ಟಿಪ್ಪು ಓರ್ವ ಸಂತ” ಎಂದುಬಿಡುತ್ತಾರೆ. ವಿಚಿತ್ರವೆಂದರೆ ಇವರೆಲ್ಲರೂ ಹೀಗೆ ಹೇಳುವ ಮೊದಲು ಮಡಿಕೇರಿಯ ಯುದ್ಧ ಸ್ಮಾರಕಗಳಿಗೆ ಹಾರ ಹಾಕಿ ಬಂದಿರುತ್ತಾರೆ. ಇವನ್ನೆಲ್ಲಾ ಕೇಳುವುದು, ನೋಡುವುದೇ ಕೊಡಗಿನವರ ಪಾಲಿನ ಶಾಪ. ಏಕೆಂದರೆ ಕೊಡಗಲ್ಲಿ ಬಂದು ಟಿಪ್ಪುವನ್ನು ಹೊಗಳುವುದೆಂದರೆ ಕೊಡಗಿನ ಪೂರ್ವಜರನ್ನು ನಿಂದಿಸಿದಂತೆಯೇ.

ಮತ್ತಷ್ಟು ಓದು »

8
ಫೆಬ್ರ

ಜೇನುಗೂಡಿಗೆ ಕಲ್ಲು ಹೊಡೆದ್ರೆ ಏನಾಗುತ್ತೆ ಅಂತ ಗೊತ್ತಾಯ್ತಾ!?

(ಇದೆ ಲೇಖನಗಳನ್ನ ನೋಡಿ ಬೋರ್ ಅನಿಸಬಹುದು,ಆದರೆ ಈ ಮನುಷ್ಯ ಮಾಡಿದ ಕೆಲಸ ಮೈ ಉರಿಯುವಂತದ್ದು,ನಾನು ಬರೆಯಬಾರದು ಅಂದುಕೊಂಡರು ಬರೆಯದಿರಲಾಗಲಿಲ್ಲ.ಇದನ್ನ ಬರೆಯುವ ಹೊತ್ತಿಗೆ ಚಿಮೂ ಅವರಿಗೆ ಗೌರವ ಸಲ್ಲಲ್ಲಿದೆ ಅನ್ನುವ ಸಮಾಧಾನಕರ ಸುದ್ದಿ ಬಂದರೂ,ಅಂತ ಹಿರಿಯ ಜೀವದ ಮನ ನೋಯಿಸಿದವರ ಬಗ್ಗೆ ಬರೆಯದಿರಲು ಹೇಗೆ ಸಾಧ್ಯ? )

ಮರವಂಜಿ ಅನ್ನೋದು ಈ ರಾಜ್ಯದ ಒಂದು ಪುಟ್ಟಹಳ್ಳಿ.ಆ ಹಳ್ಳಿಯ ಬಯಲಲ್ಲಿ ಆಟವಾಡುತಿದ್ದ ಮಕ್ಕಳ ಬಳಿ ಒಬ್ಬ ಪೇಲವ ಶರೀರದ,ಮೃದು ಮಾತಿನ ವ್ಯಕ್ತಿ ಬಂದು ಕೇಳಿದರು ’ಮಕ್ಕಳೇ,ಈ ಹಳ್ಳಿಯಲ್ಲಿ ದೊಡ್ಡ ಮನೆ ಯಾರದಪ್ಪ?’ಅಲ್ಲಿ ಆಟವಾಡುತಿದ್ದ ದೊಡ್ಡ ಮನೆಯ ಮಕ್ಕಳು ಆ ವ್ಯಕ್ತಿಯನ್ನ ಮನೆಗೆ ಕರೆದುಕೊಂಡು ಹೋದರು.ಮನೆಯ ಹಿರಿಯರೊಂದಿಗೆ ಆ ವ್ಯಕ್ತಿ ’ತಾನು, ಕರ್ನಾಟಕ-ಕನ್ನಡದ ಬಗ್ಗೆ ಸಂಶೋಧನೆ ಮಾಡುತ್ತಾ ಇರುವುದಾಗಿಯೂ,ಅದಕ್ಕಾಗಿ ಹೀಗೆ ಹಳ್ಳಿ ಹಳ್ಳಿಗಳಿಗೊ ಭೇಟಿ ನೀಡುತ್ತಿರುವುದಾಗಿಯು ಮತ್ತು ಹೋದೆಡೆ ಹೀಗೆ ಉಳ್ಳವರ ಮನೆಯಲ್ಲಿ ವಿಶ್ರಾಂತಿ ಪಡೆದು ಸಾಗುತ್ತಿರುವುದಾಗಿ’ ಹೇಳಿದ್ದರು.ಹಾಗೆ ಮುಂದುವರೆದು ’ಉಚಿತವಾಗಿ ಈ ರೀತಿ ಉಳಿದುಕೊಳ್ಳುವುದು ನನಗೆ ಕಷ್ಟವಾಗುತ್ತದೆ, ನಿಮ್ಮ ಮನೆಯ ಮಕ್ಕಳನ್ನೆಲ್ಲ ಕರೆಯಿರಿ ನಾನವರಿಗೆ ಕಥೆಯನ್ನಾದರು ಹೇಳುತ್ತೇನೆ’ ಅಂದರಂತೆ.ಆ ವ್ಯಕ್ತಿ ಹಾಗೆ ಮನೆಗೆ ಬಂದು ಹೋದ ೪-೫ ವರ್ಷದ ಮೇಲೆ ಯಾವುದೋ ಪತ್ರಿಕೆಯಲ್ಲಿ ಅವರ ಫೋಟೊ ನೋಡಿದಾಗಲೆ ಆ ಮನೆಯವರಿಗೆ ಗೊತ್ತಾಗಿದ್ದು ಅಂದು ನಮ್ಮ ಮನೆಗೆ ಬಂದು ಉಳಿದುಕೊಂಡಿದ್ದ ವ್ಯಕ್ತಿ, ಕನ್ನಡದ ಹಿರಿಮೆಯ ಸಂಶೋಧಕ,ವಿದ್ವಾಂಸರು ಅಂತ.

ಮತ್ತಷ್ಟು ಓದು »

7
ಫೆಬ್ರ

ಸಂಶೋಧನೆಯ ಸತ್ಯಕ್ಕೆ ಸಂದ ಜಯ: ಚಿಮೂ.ಗೆ ಗೌರವ ಡಾಕ್ಟರೇಟ್ ನೀಡಲು ಒಪ್ಪಿಗೆ

ಕೃಷ್ಣವೇಣಿ ಜಿ ಎಸ್ ಮಡಿಕೇರಿ

ಕನ್ನಡದ ಹಿರಿಯ ಸಂಶೋಧಕರಾದ ಡಾ.ಎಂ. ಚಿದಾನಂದ ಮೂರ್ತಿಯವರಿಗೆ ಬೆಂಗಳೂರು ವಿಶ್ವವಿದ್ಯಾನಿಲಯದ ಗೌರವ ಡಾಕ್ಟರೇಟ್ ನೀಡಲು ನಿರಾಕರಿಸಿದ್ದ ಕುಲಾಧಿಪತಿಗಳೂ ಆಗಿರುವ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಕೊನೆಗೂ ಗೌರವ ಡಾಕ್ಟರೇಟ್ ನೀಡಲು ಸಮ್ಮತಿಸಿದ್ದಾರೆ. ಕನ್ನಡಿಗರ, ಸಾಹಿತಿಗಳ, ಸಂಘಟನೆಗಳ ಒತ್ತಾಯಕ್ಕೆ ಒಪ್ಪಿಗೆ ನೀಡುವ ಮೂಲಕ ವಿವಾದಕ್ಕೆ ತೆರೆ ಎಳೆದಿದ್ದಾರೆ.

ಚರ್ಚ್ ಮೇಲಿನ ದಾಳಿಯ ಕುರಿತು ನ್ಯಾಯಮೂರ್ತಿ ಸೋಮಶೇಖರ್ ಆಯೋಗವು ನೀಡಿದ ವರದಿಯನ್ನು ಚಿದಾನಂದಮೂರ್ತಿಯವರು ಸಮರ್ಥಿಸಿದ್ದಾರೆ. ಅಲ್ಲದೇ ಡಾಕ್ಟರೇಟ್ ನೀಡಲು ಸಾಹಿತ್ಯಿಕ ಸಾಧನೆಗಳ ಜೊತೆಗೆ ಸಾಮಾಜಿಕ ಕಾಳಜಿಯೂ ಮಾನದಂಡ ಎಂದು ಹೇಳುವ ಮೂಲಕ ಗೌರವ   ಡಾಕ್ಟರೇಟ್ ಗೆ ಹೊಸ ಮಾನದಂಡವೊಂದನ್ನು ಸೇರ್ಪಡೆಗೊಳಿಸಿದ್ದರು.

ರಾಜ್ಯಪಾಲರ ಈ ನಿರ್ಧಾರವನ್ನು  ಸಾಹಿತಿಗಳು, ಹಲವು ಕನ್ನಡಪರ ಸಂಘಟನೆಗಳು, ಕನ್ನಡ ಪ್ರೇಮಿಗಳು ವಿರೋಧಿಸಿದ್ದರು. ಚಿದಾನಂದಮೂರ್ತಿಯವರನ್ನು  ಕೋಮುವಾದಿಯೆಂದು ಸಹ ಹೇಳುವಲ್ಲಿ ರಾಜ್ಯಪಾಲರು ಹಿಂದೆ ಬಿದ್ದಿರಲಿಲ್ಲ. ಇದನ್ನು ತೀವ್ರವಾಗಿ ವಿರೋಧಿಸಿದ್ದ ಸಾಹಿತ್ಯ ಪ್ರೇಮಿಗಳು, ಸಂಶೋಧನಾ ಆಸಕ್ತರು ಇಂದು ರಾಜಭವನದ ಮುಂದೆ ಪ್ರತಿಭಟನೆ ನಡೆಸಿದ್ದರು.

ನಿನ್ನೆ ಮುಕ್ತಾಯಗೊಂಡ 77ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದಲ್ಲಿಯೂ ರಾಜ್ಯಪಾಲರ ವಿರುದ್ಧ ಖಂಡನಾ ನಿರ್ಣಯವನ್ನು ಕೈಗೊಳ್ಳಲಾಗಿತ್ತು. ತಮ್ಮ ನಡುವಿನ ವೈಚಾರಿಕ ಭಿನ್ನತೆಗಳನ್ನು ಮರೆತು ಕನ್ನಡ ಸಂಶೋಧಕನಿಗೆ ಸಲ್ಲಬೇಕಿದ್ದ ಸ್ಥಾನಮಾನಗಳನ್ನು ಕೊಡಿಸುವಲ್ಲಿ ಎಲ್ಲ ಕನ್ನಡ ಸಾಹಿತಿಗಳು ಒಂದಾದದ್ದು ಮತ್ತು ಒಕ್ಕೊರಲಿನಲ್ಲಿ ಆಗ್ರಹಪಡಿಸಿದ್ದು ವಿಶೇಷವಾಗಿತ್ತು. ಮತ್ತಷ್ಟು ಓದು »

7
ಫೆಬ್ರ

ಮತ್ತೊಮ್ಮೆ ನಿಷ್ಠೆ ತೋರಿಸಿದ ರಾಜ್ಯಪಾಲರು

ಜಗನ್ನಾಥ್ ಶಿರ್ಲಾಲ್

ಈ ನಾಡಿನ ಹೆಸರಾಂತ, ಸಾಹಿತಿ, ಸಂಶೋಧಕ ಡಾ.ಚಿದಾನಂದ ಮೂರ್ತಿಯವರಿಗೆ ಬೆಂಗಳೂರು ವಿಶ್ವವಿದ್ಯಾನಿಲಯ ಗೌರವ ಡಾಕ್ಟರೇಟ್ ನೀಡಲು ತನ್ನ ವಿಶ್ವವಿದ್ಯಾನಿಲಯದ ಸೆನೆಟ್ ಸಭೆಯಲ್ಲಿ ಚರ್ಚಿಸಿ ಶಿಪಾರಸ್ಸು ಮಾಡಲಾಗಿದ್ದ ಹೆಸರನ್ನು ರಾಜ್ಯಪಾಲರು ತೆಗೆದು ಹಾಕುವ ಮುಖಾಂತರ ದೊಡ್ಡ ಅಪಮಾನ ಮಾಡಿದ್ದಾರೆ.ಸದಾ ಸುದ್ದಿಯಲ್ಲಿರುವ ನಮ್ಮ ರಾಜ್ಯಪಾಲರಾದ ಹೆಚ್. ಆರ್. ಭಾರಧ್ವಾಜ್ ತನ್ನ ಹಳೆ ಚಾಳಿಯನ್ನು ಮತ್ತೊಮ್ಮೆ ತನ್ನ ಅಧಿಕಾರದ ಮೂಲಕ ತೋರಿಸಿ ಪಕ್ಷನಿಷ್ಠೆ ಎಂಬ ಮುಖವಾಡವನ್ನು ಇಡಿ ದೇಶಕ್ಕೆ ತೋರಿಸಿ ಕೊಟ್ಟಿದ್ದಾರೆ.ಆ ಮೂಲಕ ತನ್ನ ಪಕ್ಷಕಾಗದವರು, ತನ್ನ ಸಿದ್ಧಾಂತ ವಿರೋಧಿಗಳನ್ನು ಮಟ್ಟ ಹಾಕುವ ಪ್ರಯತ್ನ ಮುಂದುವರೆಸುತ್ತಾ ರಾಜ್ಯಪಾಲ ಎಂಬ ಉನ್ನತ ಸ್ಥಾನದ ಮರ‍್ಯಾದೆಯನ್ನು ಕಳಚಿ ಬಿಟ್ಟಿದ್ದಾರೆ.ರಾಜ್ಯಪಾಲ ಎಂಬ ಪದವಿ ನಾಮಕವಸ್ಥೆಯಾದರೂ ವಿಶ್ವವಿದ್ಯಾನಿಲಯಗಳ ವಿಷಯಕ್ಕೆ ಸಂಬಂಧಿಸಿದಂತೆ ಕೊಟ್ಟ ಅಧಿಕಾರವನ್ನು ಇಂತಹ ನೀತಿಗೆಟ್ಟ ರಾಜಕೀಕರಣಕ್ಕೆ ತಂದುದು ವಿಪರ‍್ಯಾಸವಾದುದು.

ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ವಿಚಾರದಲ್ಲೂ ನಿರಂಕುಶ ಅಧಿಕಾರವನ್ನು ತೋರ್ಪಡಿಸಿ ಆ ಮೂಲಕ ಉಪಕುಲಪತಿ ಸ್ಥಾನಕ್ಕೆ ಅಗೌರವ ತೋರಿಸಿ ಬೀದಿ ಬದಿಯಲ್ಲಿ ನೀತಿ ಪಾಠ ಮಾಡಲು ಹೊರಟಿದ್ದ ರಾಜ್ಯಪಾಲರು ತನ್ನ ಪಕ್ಷವಾತ್ಸಲ್ಯಕ್ಕೆ ಚಿದಾನಂದ ಮೂರ್ತಿಯಂತವರೂ ಸಿಕ್ಕಿದ್ದು, ಹೆಚ್. ಆರ್. ಭಾರಧ್ವಾಜ್ ‘ರಾಜ್ಯಪಾಲ’ ಸ್ಥಾನಕ್ಕೆ ಅನರ್ಹವೆಂಬುದನ್ನು ಈ ರಾಜ್ಯದ ಜನರು ಸಾಹಿತಿ, ಸಂಶೋಧಕರು ಮತ್ತೊಮ್ಮೆ ಸಾರಿ ಹೇಳುವಂತಾಗಿದೆ.

ಅಂದ ಹಾಗೆ, ಇತರ ವಿಶ್ವವಿದ್ಯಾನಿಲಯಗಳಲ್ಲಿ ಡಾಕ್ಟರೇಟ್ ಪದವಿ ಪ್ರಧಾನ ಮಾಡಿದ ರಾಜ್ಯಪಾಲರಿಗೆ ಇಂತಹ ಸೈದಾಂತಿಕತೆ ಯಾಕೆ ಕಂಡಿಲ್ಲ. ಅಷ್ಟಕ್ಕೂ ಚಿದಾನಂದ ಮೂರ್ತಿಯವರು ಗೌರವ ಡಾಕ್ಟರೇಟ್‌ಗೆ ಯಾಕೆ ಅನರ್ಹರು ? ಯಡಿಯೂರಪ್ಪರವರ ವಿರುದ್ಧ ಮಾತಾಡಿಲ್ಲವೆಂದ ! ಅಥವಾ ಕಾಂಗ್ರೇಸ್ ಪಕ್ಷದ ಸದಸ್ಯ ಅಲ್ಲವೆಂದ ? ಇತಿಹಾಸದ ಸತ್ಯ ವಿಚಾರಗಳನ್ನು ಹೇಳ ಹೊರಟರೆ ಆತ ಬಲಪಂಥೀಯನಾಗಿ ಬಿಡುತ್ತಾನೆ. ಅಲ್ಪಸಂಖ್ಯಾತರ ಪರ ಮಾತಾಡಿದರೆ ಆತ ಜಾತ್ಯಾತೀತ ? ಈ ರೀತಿಯ ಮಾನಸಿಕತೆ ಎಲ್ಲಿಯವರೆಗೆ ಈ ವರ್ಗದ ಜನರಲ್ಲಿ, ರಾಜಕಾರಣಿ, ಸಾಹಿತಿಗಳಲ್ಲಿ ಇರುತ್ತದೊ ಅಲ್ಲಿಯವರೆಗೆ ಅವರು ಉದ್ಧಾರವಾಗೋದಿಲ್ಲ. ಮತ್ತಷ್ಟು ಓದು »

5
ಫೆಬ್ರ

ಚಿಮೂ ಗೌರವ ಡಾಕ್ಟರೇಟ್ : ನಿಲುಮೆಯ ನಿಲುವು ಮತ್ತು ಕನ್ನಡ ಸಾಹಿತ್ಯ ಲೋಕದ ನಿಲುವು

ನಿಲುಮೆ

ಕನ್ನಡದ ಹಿರಿಯ ಸಂಶೋಧಕ,ವಿದ್ವಾಂಸ,ಇತಿಹಾಸಜ್ಞ ಹಾಗೂ ಲೇಖಕ ಚಿಮೂ ಅವರಿಗೆ ರಾಜ್ಯಪಾಲ ಹಂಸ ಭಾರಧ್ವಾಜ್ ರಾಜಕೀಯ ಉದ್ದೇಶದಿಂದ ಗೌರವ ಡಾಕ್ಟರೇಟ್ ನಿರಾಕರಿಸಿದನ್ನ ಪ್ರಶ್ನಿಸಿ ನಿನ್ನೆ ನಿಲುಮೆ ತನ್ನ ನಿಲುವನ್ನ ಪ್ರಕಟಿಸಿತ್ತು.ಇಂದಿನ ಪ್ರಜಾವಾಣಿ ಪತ್ರಿಕೆಯಲ್ಲಿ ಕನ್ನಡ ಸಾಹಿತ್ಯವಲಯದಿಂದ ರಾಜ್ಯಪಾಲರ ನಿಲುವಿಗೆ ತಪರಾಕಿಗಳು ಬಿದ್ದಿವೆ.

ಇವರ ತಪರಾಕಿಗಳನ್ನ ನೋಡಿ ನಮಗಂತೂ ಬಹಳ ಸಮಧಾನವಾಗಿದೆ.ಇದೋ ನಿಮಗಾಗಿ

ಹಂಪಿ ಕನ್ನಡ ವಿಶ್ವವಿದ್ಯಾಲಯ ವಿಶ್ರಾಂತ ಕುಲಪತಿ ಡಾ.ಎಂ.ಎಂ.ಕಲಬುರ್ಗಿ :
‘ರಾಜ್ಯಪಾಲರು ಮಾಡಿದ್ದು ಬಹಳ ತಪ್ಪು. ಅವರು ಈ ರೀತಿ ನಡೆದುಕೊಂಡಿರುವುದು ವಿಪರ್ಯಾಸ. ಚಿದಾನಂದಮೂರ್ತಿ ಅವರು ವಯಸ್ಸಿನಲ್ಲೂ, ವಿದ್ವತ್ತಿನಲ್ಲೂ ನಮಗಿಂತ ಹಿರಿಯರು. ಈ ಬೆಳವಣಿಗೆಯನ್ನು ನೋಡಿದರೆ ಸ್ವಾಭಿಮಾನ ಇರುವ ಯಾವ ಸಾಹಿತಿಯೂ ಗೌರವ ಡಾಕ್ಟರೇಟ್ ಸ್ವೀಕರಿಸಬಾರದು ಎಂದೆನಿಸುತ್ತದೆ. ಅವರಿಗೆ ಡಾಕ್ಟರೇಟ್ ಕೊಡುವ, ಕೊಡದಿರುವ ಬಗ್ಗೆ ಗುಪ್ತವಾಗಿ ಚರ್ಚೆ ನಡೆಯಬೇಕಿತ್ತು. ಆದರೆ ಈ ವಿಷಯ ರಾಜ್ಯಪಾಲರ ತನಕ ಹೋಗಿ, ದಿನಪತ್ರಿಕೆಗಳಲ್ಲಿ ಅವರಿಗೆ ‘ಡಾಕ್ಟರೇಟ್ ತಿರಸ್ಕರಿಸಲಾಗಿದೆ’ ಎಂದು ಪ್ರಕಟವಾಗುವ ಹಂತ ತಲುಪಿದ್ದು ನೋವಿನ ಸಂಗತಿ. ಯಾವ ಸಾಹಿತಿಗಳೂ ಈ ರೀತಿ ನೀಡಲಾಗುವ ಡಾಕ್ಟರೇಟ್ ಸ್ವೀಕರಿಸಬಾರದು’
ಮತ್ತಷ್ಟು ಓದು »

4
ಫೆಬ್ರ

ಇದು ಕನ್ನಡಕ್ಕಾದ ಅವಮಾನವಲ್ಲವೇ?

ಕರ್ನಾಟಕದಲ್ಲಿ ಕನ್ನಡದ ಪರ ಕೆಲಸ ಮಾಡಿದವರಿಗೆ ಗೌರವ ಕೊಡೋದು ತಪ್ಪಾ? ತಪ್ಪು ಅನ್ನೋದಾದ್ರೆ ರಾಜ್ಯಪಾಲರು, ಡಾ|| ಎಂ. ಚಿದಾನಂದಮೂರ್ತಿ  ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ನಿರಾಕರಿಸಿರುವುದು ಸರಿಯಾಗುತ್ತದೆ,ಅಲ್ವಾ? ಚಿಮೂ ಯಾರು? ಕನ್ನಡಕ್ಕೆ ಅವರ ಕೊಡುಗೆಯೇನು? ಎಲ್ಲ ಅರ್ಹತೆಯಿದ್ದರು ಅವರಿಗೆ ಗೌರವ ಡಾಕ್ಟರೇಟ್  ನಿರಾಕರಿಸಲು ನೀಡಿರುವ ಕಾರಣವಾದರು ಏನು ಅಂತ ನೋಡಿದರೆ ‘ಸಂಘ ಪರಿವಾರದ’ ಜೊತೆ ಅವರು ಗುರ್ತಿಸಿಕೊಂಡಿರುವ ಮಹಾಪರಾಧವನ್ನ ಮಾಡಿರುವುದಂತೆ!

ಅದ್ಯಾವ ಸೀಮೆಯ ಅಪರಾಧ ಅಂತ ನನಗೂ ಇನ್ನು ಕೆಲವರಿಗೂ ಅನ್ನಿಸಬಹುದು ಆದರೆ ಸಿಕ್ಯುಲರ್ ಮನಸ್ಸುಗಳಿಗೆ ಅದು ದೇಶ ದ್ರೋಹಕ್ಕೆ ಸಮ ಅನ್ನಿಸಲೂಬಹುದು.ಆದರೆ ಚಿಮೂ ಅವರನ್ನ ಕೇಸರಿ-ಹಸಿರಿನ ಪರದೆ ಸರಿಸಿ, ಕೆಂಪು-ಹಳದಿಯ ಕನ್ನಡದ ಪರದೆಯ ಮೂಲಕ ನೋಡಿದಾಗಲೂ ಅವರ ವಿರೋಧಿಗಳು ಅವರಿಗೆ ಗೌರವ ಡಾಕ್ಟರೇಟ್ ನೀಡುವುದನ್ನು ವಿರೋಧಿಸಬಲ್ಲರೆ?

ಯಾವುದೇ ರಾಜಕೀಯ ಪಕ್ಷ,ಸಂಘಟನೆ, ಪಂಥಕ್ಕೆ ಸೇರದ ಒಬ್ಬ ಸಾಮನ್ಯ ಕನ್ನಡಿಗನ ಕಣ್ಣಿಗೆ ಚಿಮೂ ಅವರು,ಕನ್ನಡದ ಪ್ರಖ್ಯಾತ ಸಂಶೋಧಕ,ವಿದ್ವಾಂಸ,ಇತಿಹಾಸಜ್ಞ ಹಾಗೂ ಲೇಖಕರಾಗಿ ಮಾತ್ರ ಕಾಣಬಲ್ಲರು.

ಇಂತ ಚಿಮೂ ಅವರಿಗೆ ಗೌರವ ಡಾಕ್ಟರೇಟ್ ನಿರಾಕರಿಸುವುದು ಕನ್ನಡ ಭಾಷೆಯ ಪ್ರಾಚೀನತೆ ಹಾಗೂ ಪ್ರಾಚೀನ ಕರ್ನಾಟಕದ ಬಗ್ಗೆ ಅವರ ಒಲವನ್ನ,ನಿಷ್ಠೆಯನ್ನ,ತುಡಿತವನ್ನ ಮತ್ತು ಕನ್ನಡಕ್ಕಾಗಿ ಅವರು ಮಾಡಿರುವ ಕೆಲಸವನ್ನ ಕಡೆಗಣಿಸಿದಂತೆ ಅವಮಾನಿಸಿದಂತಲ್ಲವೇ? ಕನ್ನಡಕ್ಕಾಗಿ ಕೆಲಸ ಮಾಡಿದವರನ್ನ ಕಡೆಗಣಿಸುವುದು ಕನ್ನಡಿಗರನ್ನ,ಕರ್ನಾಟಕವನ್ನ ಕಡೆಗಣಿಸಿದಂತೆ-ಅವಮಾನಿಸಿದಂತೆಯೇ ಸರಿ. ಮತ್ತಷ್ಟು ಓದು »