ವಿಷಯದ ವಿವರಗಳಿಗೆ ದಾಟಿರಿ

Posts tagged ‘ಡಂಕಿನ್ ಝಳಕಿ’

30
ಆಗಸ್ಟ್

ಅನುಭವಕ್ಕೆ ಮುಖಾಮುಖಿಯಾಗಿಸುವ ವಿಶೇಷ ಪುಸ್ತಕ

– ಡಂಕಿನ್ ಝಳಕಿ, ಸಂಶೋಧಕರು.

  ಶಿವಕುಮಾರ, ಸಂಶೋಧನಾ ವಿದ್ಯಾರ್ಥಿ.

ನಮಗೆ ನಾವೇ ಪರಕೀಯರು‘ಗ್ರಾಮೀಣ ಭಾರತದ ಸಾಮಾನ್ಯ ಜಗತ್ತಿನಲ್ಲಿ ಅನುಭವದೊಂದಿಗೆ ರೂಪತಾಳಿದ ಅಪರೂಪದ ಕೃತಿ’ : ನಮಗೆ ನಾವೇ ಪರಕೀಯರು

ಇತ್ತೀಚೆಗೆ ಕರ್ನಾಟಕದಲ್ಲಿ ಎಸ್.ಎನ್. ಬಾಲಗಂಗಾಧರರ (ಬಾಲುರವರ) ವಿಚಾರಧಾರೆಯು ಒಂದು ಸಂಶೋಧನಾ ಸಂಪ್ರದಾಯವಾಗಿ, ಒಂದು ಚಳುವಳಿಯಾಗಿ ಬೆಳೆಯುತ್ತಿರುವುದು ನಮಗೆ ತಿಳಿಯದ ಹೊಸ ವಿಚಾರವೇನಲ್ಲ. 2002ರಲ್ಲಿ ವಚನಗಳ ಕುರಿತ ಒಂದು ಕಾರ್ಯಾಗಾರವಾಗಿ ಕರ್ನಾಟಕಕ್ಕೆ ಕಾಲಿಟ್ಟ ಈ ವಿಚಾರಧಾರೆ ಕೇವಲ ಹತ್ತು ವರ್ಷಗಳಲ್ಲಿ ಎರಡು ಸಂಶೋಧನಾ ಸಂಸ್ಥೆಗಳಾಗಿ, ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಶೋಧನಾ ಯೋಜನೆಗಳಾಗಿ ಬೆಳೆದು ನಿಂತಿದೆ. ಈ ವಿಚಾರಧಾರೆಯನ್ನು ಕನ್ನಡಕ್ಕೆ ಪರಿಚಯಿಸುವ ಹಲವು ಕೃತಿಗಳೂ ಈಗಾಗಲೇ ಪ್ರಕಟವಾಗಿವೆ. ರಾಷ್ಟ್ರೋತ್ಥಾನ ಸಾಹಿತ್ಯದವರು ಪ್ರಕಟಿಸಿರುವ ರಮಾನಂದ ಐನಕೈಯವರÀ ನಮಗೆ ನಾವೇ ಪರಕೀಯರು (2012) ಈ ಸಾಲಿಗೆ ಸೇರುವ ಒಂದು ವಿಶೇಷ ಕೃತಿ.

ಈ ಕೃತಿಯನ್ನು ಎರಡು ಪ್ರಮುಖ ಕಾರಣಗಳಿಗಾಗಿ ವಿಶೇಷ ಕೃತಿಯೆನ್ನಬಹುದು. ಇದುವರೆಗೂ ಬಾಲುರವರ ವಿಚಾರಧಾರೆಯ ಕುರಿತು ಪುಸ್ತಕರೂಪದಲ್ಲಿ ಬಂದ ಕೃತಿಗಳೆಲ್ಲಾ ಬಾಲಗಂಗಾಧರರ ಆಂಗ್ಲ ಕೃತಿಗಳ ಕನ್ನಡ ಅವತರಣಿಕೆಗಳೇ. ಈ ಕೃತಿ ಅವರ ವಿಚಾರಗಳನ್ನಿಟ್ಟುಕೊಂಡು ಕನ್ನಡದಲ್ಲಿ ಬಂದ ಮೊದಲ ಸ್ವತಂತ್ರ ಕೃತಿ. ಇದು ಈ ಕೃತಿಯ ಮೊದಲನೆಯ ವಿಶೇಷತೆ. ಇದರ ಎರಡನೆಯ ವಿಶೇಷತೆಯನ್ನು ಅರ್ಥಮಾಡಿಕೊಳ್ಳಬೇಕಾದರೆ ಸಂಪ್ರದಾಯ ಮತ್ತು ಚಳುವಳಿಗಳ ಕುರಿತು ಒಂದು ವಿಚಾರವನ್ನು ನಾವು ಮನಗಾಣಬೇಕು. ಸಂಪ್ರದಾಯ ಮತ್ತು ಚಳುವಳಿಗಳ ಯಶಸ್ಸು ಅದು ಹುಟ್ಟುಹಾಕುವ ಅನುಯಾಯಿಗಳ ಸಂಖ್ಯೆ ಮತ್ತು ಪ್ರಕಟಿಸುವ ಕೃತಿಗಳ ಸಂಖ್ಯೆಯ ಮೇಲೆ ನಿರ್ಧಾರವಾಗುವುದಿಲ್ಲ. ಉದಾಹರಣೆಗೆ ವಚನ ಸಂಪ್ರದಾಯದ ಮತ್ತು ಚಳುವಳಿಯ ಯಶಸ್ಸು ಅದು ಹುಟ್ಟುಹಾಕಿದ (ಇಂದು ನಮಗೆ ತಿಳಿದಿರುವ ಅಂಕಿಸಂಖೆಗಳ ಆಧಾರದ ಮೇಲೆ ಹೇಳುವುದಾದರೆ) ಸುಮಾರು 200 ವಚನಕಾರರ ಮತ್ತು 21500 ವಚನಗಳ ಆಧಾರದ ಮೇಲೆ ನಾವು ಅಳೆಯುವುದಿಲ್ಲ್ಲ. ಒಂದು ಸಂಪ್ರದಾಯ, ಅನುಭವಗಳ ಕುರಿತು ಚಿಂತಿಸುವ ಒಂದು ಚಿಂತನಾ ವಿಧಾನವನ್ನು ಹುಟ್ಟುಹಾಕಬೇಕು. ಆದರೆ ಎರಡು ವಸಾಹತುಶಾಹಿಗಳ ಬಳಿಕ, 21ನೇ ಶತಮಾನದಲ್ಲಿ ಒಂದು ಚಿಂತನಾ ವಿಧಾನವನ್ನು ಹುಟ್ಟುಹಾಕುವ ಮೊದಲು, ಒಂದು ಸಂಸ್ಕøತಿಯಾಗಿ ನಾವು (ಭಾರತೀಯರು) ಮರೆತಿರುವ ನಮ್ಮ ಅನುಭವಗಳನ್ನು ಕುರಿತು ಚಿಂತಿಸುವ ಪ್ರಕ್ರಿಯೆಯನ್ನೇ ಮತ್ತೊಮ್ಮೆ ಪುನರುಜ್ಜೀವನಗೊಳಿಸಬೇಕಾಗುತ್ತದೆ. ಇದು ಬಾಲುರವರ ಸಂಶೋಧನೆಯ ಪ್ರಮುಖ ಉದ್ದೇಶ. ಈ ಪ್ರಕ್ರಿಯೆಯನ್ನು ಅವರು ಪ್ರತ್ಯಭಿಜ್ಞಾನ ಎಂದು ಕರೆಯುತ್ತಾರೆ. ಒಂದು ಸಂಸ್ಕøತಿಯಾಗಿ ನಾವು ಕಲಿತು ಮರೆತಿರುವ ‘ಅನುಭವಗಳನ್ನು ಕುರಿತು ಚಿಂತಿಸುವ’ ಪ್ರಕ್ರಿಯೆಯನ್ನು ಪುನರುಜ್ಜೀವನಗೊಳಿಸುವ ಈ ಪ್ರಕ್ರಿಯೆ ಒಂದು ಅಕಾಡೆಮಿಕ್ ಯೋಜನೆಯಷ್ಟೇ ಅಲ್ಲ, ಇದೊಂದು ಸಾಂಸ್ಕøತಿಕ ಚಳುವಳಿ ಕೂಡ. ಅಂದರೆ ಇದು ಎಲ್ಲಿ ಮತ್ತು ಹೇಗೆ ಆರಂಭವಾದರೂ ಸರಿ, ಅಂತಿಮವಾಗಿ ತನ್ನ ನಿತ್ಯದ ಸಾಮಾಜಿಕ ಜೀವನವನ್ನು ಇನ್ನಷ್ಟು ಅರ್ಥವತ್ತಾಗಿ ಬಾಳಲು ಇದರಿಂದ ಪ್ರತಿಯೋರ್ವನಿಗೂ ಸಹಾಯವಾಗಬೇಕು. ಪ್ರಸ್ತುತ ಕೃತಿ ಅಂತಹ ಪ್ರಕ್ರಿಯೆಗೆ ಒಂದು ಅತ್ಯುತ್ತಮ ಉದಾಹರಣೆ. ಅಷ್ಟೇ ಅಲ್ಲ ಅಂತಹ ಪ್ರಕ್ರಿಯೆಗೆ ಪ್ರೇರಣೆಯನ್ನೂ ನೀಡುತ್ತದೆ ಎನ್ನುವುದು ಈ ಕೃತಿಯ ಎರಡನೇ ಮತ್ತು ಅತ್ಯಂತ ಪ್ರಮುಖವಾದ ವಿಶೇಷತೆ.

ಮತ್ತಷ್ಟು ಓದು »

24
ಏಪ್ರಿಲ್

ವಚನ ಸಾಹಿತ್ಯ ಹಾಗೂ ಜಾತಿ ವ್ಯವಸ್ಥೆ: ರಾಜೇಂದ್ರ ಚೆನ್ನಿಯವರಿಗೊಂದು ಪ್ರತಿಕ್ರಿಯೆ

– ಡಂಕಿನ್ ಝಳಕಿ
Vachana Charcheಇದು ರಾಜೇಂದ್ರ ಚೆನ್ನಿಯವರು ಲಡಾಯಿ ಬ್ಲಾಗ್ನಲ್ಲಿ ಬರೆದ ಲೇಖನಕ್ಕೆ ನನ್ನ ಪ್ರತಿಕ್ರಿಯೆ. ಅವರ ಲೇಖನ ಸಾಕಷ್ಟು ಉದ್ದವಿದ್ದರೂ ಅದರಲ್ಲಿ ಉತ್ತರ ಕೊಡಲು ಯೋಗ್ಯವಾದ ವಿಚಾರಗಳಿರುವುದು ಎರಡು ಅಥವಾ ಮೂರು ಮಾತ್ರ. ಉಳಿದದ್ದೆಲ್ಲಾ ವೈಯುಕ್ತಿಕ ನಿಂದನೆಗಳು, ಆಧಾರ ರಹಿತ ಆಪಾದನೆಗಳು, ಮತ್ತು ಬಾಲಿಶ ಹಾಸ್ಯಗಳು. ಅವುಗಳಿಗೆ ಉತ್ತರ ಕೊಡುವುದು ಘನತೆಯ ವಿಚಾರವಲ್ಲ.

೧.ಮೇಲುಚಲನೆಯ ಕುರಿತು: ಡಾ.ಷಣ್ಮುಖರವರು ಹೇಳುವ ನನ್ನ “ಪ್ರಬಂಧದಲ್ಲಿ ಎಲ್ಲೂ ಈಗ ಇರುವ ವಚನಗಳು ಜಾತಿ(ವ್ಯವಸ್ಥೆ) ವಿರೋಧಿ ಚಳುವಳಿ ಎಂಬ ಕಥೆಯನ್ನು ವೀರಶೈವರು ತಮ್ಮ ಮೇಲುಚಲನೆಗಾಗಿ ಹರಡಿದರು ಎನ್ನುವ ವಾದವಿಲ್ಲ” ಎಂಬುದನ್ನು ಅಲ್ಲಗಳೆಯುತ್ತಾ ಚೆನ್ನಿಯವರು ನಾನು ನನ್ನ ಪ್ರಬಂಧದಲ್ಲಿ ತನ್ನ ಅಸ್ಮಿತೆ ಹಾಗೂ ಸಂಘಟನೆಯನ್ನು ಬಲಪಡಿಸುವ ಪ್ರಯತ್ನದಲ್ಲಿ ಬ್ರಿಟಿಷರು ಕಟ್ಟಿಕೊಟ್ಟ ಚಿತ್ರಣಗಳನ್ನು ತನಗೆ ಅಪ್ಯಾಯಮಾನವಾಗಿ ಕಂಡಿದ್ದರಿಂದ ಆಧುನಿಕ ವೀರಶೈವ ಶಿಕ್ಷಿತ ವರ್ಗವು ಒಪ್ಪಿಕೊಂಡಿತು ಎಂದು ವಾದಿಸುತ್ತೇನೆ ಎಂದು ಹೇಳುತ್ತಾರೆ.

ಮತ್ತಷ್ಟು ಓದು »

2
ಏಪ್ರಿಲ್

ಮೀನಾಕ್ಷಿ ಬಾಳಿಯವರ ಅಸೈದ್ಧಾಂತಿಕ ವಿಮರ್ಶೆಗೊಂದು ಸೈದ್ಧಾಂತಿಕ ಉತ್ತರ

– ಡಂಕಿನ್ ಝಳಕಿ

Vachana Charcheನಮ್ಮ ವಚನ ಸಂಶೋಧನೆ ಕುರಿತು ಡಾ.ಮೀನಾಕ್ಷಿ ಬಾಳಿಯವರು ಪ್ರಜಾವಾಣಿಯ ೧೮/ಮಾರ್ಚ್/೨೦೧೩ರ ಸಂಚಿಕೆಯಲ್ಲಿ ಬರೆದ “ಆಧುನಿಕೋತ್ತರ ವಾದದ ಅಪಸವ್ಯ” ಎಂಬ ಬರಿಯ ಬೈಗುಳಗಳಿಂದಲೇ ತುಂಬಿರುವ ಇವರ ಬರಹಕ್ಕೆ ಇದು ನನ್ನ ಪ್ರತಿಕ್ರಿಯೆ.

(೧) ಅವರ ಟೀಕಾ ಪ್ರಹಾರ ಆರಂಭವಾಗುವುದೇ ನಮ್ಮ ವಾದದಲ್ಲಿ “ಯಾವುದೇ ಹೊಸ ಚಿಂತನೆಯಾಗಲಿ ಅಥವ ಆರೋಗ್ಯಪೂರ್ಣವಾದ ಚರ್ಚೆಗಾಗಲಿ ಅವಕಾಶವಿಲ್ಲ” ಎಂದು ಸಾರುತ್ತಾ, ನಮ್ಮ ಸಂಶೋಧನೆಯು ಪೂರ್ವಗ್ರಹ ಪೀಡಿತವಾಗಿದೆ ಮತ್ತು “ಈ ನಿಲುವಿಗೆ ಬರಲು ಬಳಸಿಕೊಂಡ ಸಂಶೋಧನ ಮಾದರಿಯೇ ಪ್ರಶ್ನಾರ್ಹವಾಗಿದೆ” ಎನ್ನುವ ಮೂಲಕ. ನಮ್ಮ ವಾದದಲ್ಲಿ ಆರೋಗ್ಯಪೂರ್ಣವಾದ ಚರ್ಚೆಗಾಗಲಿ ಅವಕಾಶವಿಲ್ಲದ ಮೇಲೆ ಬಾಳಿಯವರು ಈ ಲೇಖನವನ್ನು ಬರೆದದ್ದಾದರೂ ಹೇಗೆ, ಪ್ರಜಾವಾಣಿ ನಮ್ಮ ವಿರುದ್ಧ ಅಷ್ಟೊಂದು ಲೇಖನಗಳನ್ನು ಪ್ರಕಟಿಸಿದ್ದು  ಹೇಗೆ? ಈ ಪ್ರಶ್ನೆಗಳು ಹಾಗಿರಲಿ, ಮುಖ್ಯವಾದ ವಿಷಯಕ್ಕೆ ಬರೋಣ. ನಮ್ಮ ಸಂಶೋಧನ ಮಾದರಿಯೇ ಪ್ರಶ್ನಾರ್ಹವಾಗಿದೆ ಎಂದು ಇವರು ಹೇಳುವುದು ನಾವು ಕೇವಲ ವಚನಗಳಲ್ಲಿನ ಶಬ್ದ ಬಳಕೆಯ ಲೆಕ್ಕ ಮಾತ್ರ ಮಾಡುತ್ತೇವೆ, ಒಟ್ಟು ವಚನಗಳ ಜೀವಧ್ವನಿ, ಅವರ ಬದುಕಿನ ಸಂಘರ್ಷ ಮುಂತಾದವುಗಳನ್ನು, ವಚನಕಾರರ ನಂತರ ಅವರ ಬದುಕು ಕುರಿತು ರಚನೆಯಾದ ಕಾವ್ಯ ಪುರಾಣಗಳು ಶಾಸನಗಳು ಜಾನಪದ ಸಾಹಿತ್ಯರಾಶಿ ಇತ್ಯಾದಿಗಳನ್ನು ನಾವು ಗುರುತಿಸುವುದಿಲ್ಲವಂತೆ. ಇಂತಹ ಹೇಳಿಕೆಗಳನ್ನು ಮಾಡುವ ಮೊದಲು ನಾವು ಬರೆದ ಲೇಖನ, ಪುಸ್ತಕಗಳನ್ನು ಇವರು ಓದಬೇಕಿತ್ತು. ಅವರು ಉಲ್ಲೇಖಿಸುವುದು ನಮ್ಮೆಲ್ಲ ವಚನ ಸಂಶೋಧನೆಯ ಸಾರಾಂಶವನ್ನು ಕೊಟ್ಟಿರುವ, ನಾನು ಸಂಪಾದಿಸಿದ ಭಾರದಲ್ಲಿ ಜಾತಿವ್ಯವಸ್ಥೆ ಇದೆಯೇ? ಕೃತಿಯಲ್ಲಿನ ಎರಡು ಪುಟಗಳ ಲೇಖನವನ್ನಷ್ಟೇ. ಇದನ್ನು ಏನೆಂದು ಕರೆಯೋಣ: ಬಾಳಿಯವರ ವಿದ್ವತ್ತಿನಲ್ಲಿನ ಕೊರತೆ ಎಂದೋ ಅಥವಾ ಸೋಮಾರಿತಂವೆಂದೋ?

ಮತ್ತಷ್ಟು ಓದು »

1
ಏಪ್ರಿಲ್

ವಚನ ಸಾಹಿತ್ಯದ ಬಗೆಗಿನ ಚರ್ಚೆಯ ಕುರಿತು…

– ಜೆ.ಎಸ್.ಸದಾನಂದ
ಸ್ಥಳೀಯ ಸಂಸ್ಕಂತಿಗಳ ಅಧ್ಯಯನ ಕೇಂದ್ರ,
ಕುವೆಂಪು ವಿಶ್ವ ವಿದ್ಯಾನಿಲಯ.

Vachana Charche‘ಪ್ರಜಾವಾಣಿ’ಯಲ್ಲಿ ನಡೆಯುತ್ತಿರುವ ಢಂಕಿನ್‍ರವರ ವಚನ ಸಾಹಿತ್ಯ ಹಾಗು ಜಾತಿ ವ್ಯವಸ್ಥೆಯ ಕುರಿತಾದ ಸಂಶೋಧನೆಯ ಮೇಲಿನ ಚರ್ಚೆ ಹೆಚ್.ಎಸ್.ಶಿವಪ್ರಕಾಶ್ ಹಾಕಿಕೊಟ್ಟ ಅಕಾಡಮಿಕ್ ಅಡಿಪಾಯವನ್ನು ಬಿಟ್ಟು ಅತ್ತಿತ್ತ ಓಲಾಡತೊಡಗಿದೆ ಎಂದು ನನಗನಿಸುತ್ತಿದೆ. ಕೆಲವು ನಿರ್ಧಿಷ್ಟ ಲಕ್ಷಣಗಳನ್ನೊಳಗೊಂಡ ಬ್ರಾಹ್ಮಣ ಪುರೋಹಿತಶಾಹಿ ಪ್ರಚೋದಿತ ಜಾತಿ ವ್ಯವಸ್ಥೆ ಅಸ್ತಿತ್ವದಲ್ಲಿದೆ ಎನ್ನುವ ಪೂರ್ವನಂಬಿಕೆಯಿಂದ ವಚನ ಸಾಹಿತ್ಯವನ್ನು ನೋಡಿದಾಗ ಅವು ಜಾತಿ ವ್ಯವಸ್ಥೆಯ ವಿರುದ್ಧದ ಚಳುವಳಿಗಳಂತೆ ನಮಗೆ ಕಾಣಿಸುತ್ತದೆ. ಅಂತಹ ಭೌದ್ಧಿಕ ಚೌಕಟ್ಟಿನಿಂದ ಹೊರಬಂದು ವಚನಗಳನ್ನು ಓದಿದಾಗ ಅವು ಜಾತಿ ವ್ಯವಸ್ಥೆಯ ವಿರುದ್ಧದ ಚಳುವಳಿ ಎಂದು ಸಿದ್ಧಪಡಿಸಿ ತೋರಿಸಲು ಸಾಧ್ಯವಾಗುವುದಿಲ್ಲ ಎನ್ನುವುದು ಢಂಕಿನ್‍ರವರ ವಾದದ ಸಾರಾಂಶ ಎಂದು ನಾನು ತಿಳಿದುಕೊಂಡಿದ್ದೇನೆ. ಮತ್ತು ಇದಕ್ಕೆ ಪೂರಕವಾಗಿ ಜಾತಿಯ ಉಲ್ಲೇಖವಿರುವ ವಚನಗಳ ಸಂಖ್ಯೆ ಅತ್ಯಂತ ಕಡಿಮೆ ಎಂದು ಅವರು ಕೊಡುವ ಪುರಾವೆ ತಮ್ಮ ವಾದವನ್ನು ಸಮರ್ಥಿಸಿಕೊಳ್ಳಲು ಅವರು ಬಳಸುವ ಕೇವಲ ಒಂದು ಅಂಶವಷ್ಟೇ ಎನ್ನುವುದು ನನ್ನ ತಿಳುವಳಿಕೆಯಾಗಿದೆ. ಕೇವಲ ಅದೊಂದರಿಂದಲೇ ತಮ್ಮ ವಾದವನ್ನು ಅವರು ಸಮರ್ಥಿಸಿಕೊಂಡಿರಲು ಸಾಧ್ಯವಿಲ್ಲ. ಹೆಚ್.ಎಸ್.ಶಿವಪ್ರಕಾಶ್‍ರವರು ಈ ಒಂದು ಅಂಶವನ್ನು ಉಲ್ಲೇಖಿಸಿರುವುದರಿಂದ ಅದೇ ಚರ್ಚೆಯ ಪ್ರಮುಖ ಗುರಿಯಾಗಿ ಚರ್ಚೆಗೆತ್ತಿಕೊಳ್ಳಬುದಾಗಿದ್ದ ಇನ್ನಿತರ ಮಹತ್ತರ ಅಂಶಗಳು ಕಣ್ಮರೆಯಾಗಿರುವ ಸಾಧ್ಯತೆ ಇದೆ.

ನನಗನಿಸುವಂತೆ ಇಲ್ಲಿ ಅತ್ಯಂತ ಪ್ರಮುಖವಾಗಿ ಚರ್ಚೆಗೊಳಬೇಕಾದ ಸಂಗತಿಗಳು ಎಂದರೆ: ಢಂಕಿನ್‍ರವರ ಸಂಶೋಧನೆಯು ಅದರ ಅಧ್ಯಯನದ ಕೇಂದ್ರವಾದ ವಿಧ್ಯಮಾನದ ಮೇಲೆ ಎಷ್ಟರ ಮಟ್ಟಿಗೆ ಬೆಳಕು ಚೆಲ್ಲುತ್ತದೆ; ಅವರ ಸಂಶೋಧನೆಯ ಪ್ರಾಕ್‍ಕಲ್ಪನೆಗೆ (ಜಾತಿ ವ್ಯವಸ್ಥೆಯ ಚೌಕಟ್ಟಿನಲ್ಲಿ ವಚನಗಳನ್ನು ಗ್ರಹಿಸಿದಾಗ ಮಾತ್ರ ಅವು ಜಾತಿ ವಿರೋಧಿ ಚಳುವಳಿಗಳಂತೆ ಕಾಣುತ್ತವೆ ಎನ್ನುವ ಪ್ರಾಕ್‍ಕಲ್ಪನೆ) ಇರುವ ಸಮರ್ಥನೆ ಯಾವುದು; ಸಂಶೋಧನೆಯಲ್ಲಿ ಮಂಡಿಸಲಾಗಿರುವ ವಾದ ಎಷ್ಟು ತರ್ಕಬದ್ಧವಾಗಿದೆ ಇತ್ಯಾದಿ. ಚರ್ಚೆ ಈ ನಿಟ್ಟಿನಲ್ಲಿ ಮುಂದುವರೆದಿದ್ದರೆ ಇದೊಂದು ಅರ್ಥಪೂರ್ಣ ಚರ್ಚೆಯಾಗಿರುತ್ತಿತ್ತು ಹಾಗು ಓದುಗರಿಗೂ ಉಪಯುಕ್ತವಾಗುತ್ತಿತ್ತು.

ಮತ್ತಷ್ಟು ಓದು »

1
ಏಪ್ರಿಲ್

ವಚನ ಸಾಹಿತ್ಯವು ಜಾತಿವ್ಯವಸ್ಥೆಯ ವಿರುದ್ಧ ಮಾತನಾಡುತ್ತದೆಯೆ?

(ಪ್ರಜಾವಾಣಿಯಲ್ಲಿ CSLC ಯ ಡಂಕಿನ್ ಝಳಕಿ ಮತ್ತು ಎಸ್.ಎನ್. ಬಾಲಗಂಗಾಧರ ’ವಚನ ಸಾಹಿತ್ಯವು ಜಾತಿವ್ಯವಸ್ಥೆಯ ವಿರುದ್ಧ ಮಾತನಾಡುತ್ತದೆಯೆ?’ ಅನ್ನುವ ಲೇಖನದ ಬಗ್ಗೆ ಚರ್ಚೆ ಹುಟ್ಟುಹಾಕಿದವರು ಎಚ್.ಎಸ್. ಶಿವಪ್ರಕಾಶ್.ಆದರೆ ಸುಮಾರು ೧೫ ದಿನಗಳ ಈ ಇಡಿ ಚರ್ಚೆಯಲ್ಲಿ ಮೂಲ ಲೇಖನದ ವಿರುದ್ಧವಾದ ದನಿಗಳಿಗೆ ಮಾತ್ರ ಇದುವರೆಗೆ ವೇದಿಕೆ ಕಲ್ಪಿಸಿ, ಲೇಖಕರ ಅಭಿಪ್ರಾಯ ಮಂಡನೆಗೆ ಅವಕಾಶವನ್ನೇ ನೀಡಲಾಗಿಲ್ಲ ..!

ಡಂಕಿನ್ ಝಳಕಿ ಯವರ ಮೂಲ ಲೇಖನ ಇಲ್ಲಿದೆ. ಈ ಚರ್ಚೆಯ ಎಲ್ಲಾ ರೀತಿಯ ಅಭಿಪ್ರಾಯಗಳಿಗೂ “ನಿಲುಮೆ” ಮುಕ್ತ ವೇದಿಕೆಯಾಗಲಿದೆ – ನಿಲುಮೆ)

 – ಡಂಕಿನ್ ಝಳಕಿ, ಎಸ್.ಎನ್. ಬಾಲಗಂಗಾಧರ

Balu - Jalaki

[ಇದು ಚಿಂತನ ಬಯಲು ಸಂಪುಟ ೧, ಸಂಚಿಕೆ ೩ರಲ್ಲಿ ಪ್ರಕಟಗೊಂಡ ಮೂಲ ಲೇಖನದ ಸಂಕ್ಷಿಪ್ತ ಪಾಠ. ಲೇಖನದ ಪೂರ್ಣ ಪಾಠ, ಆಕರ ಗ್ರಂಥಗಳ ಪಟ್ಟಿ ಮತ್ತು ಅಡಿಟಿಪ್ಪಣಿಗಳಿಗಾಗಿ ಮೂಲ ಲೇಖನವನ್ನು ನೋಡಿ ಅಥವಾ ಇವರನ್ನು ಸಂಪರ್ಕಿಸಿ: dunkinjalkiAToutlookDOTcom]

ವಚನಗಳ ಆಧುನಿಕ ಅಧ್ಯಯನಗಳ ಒಂದು ಮರು ಪರಿಶೀಲನೆ

ಕನ್ನಡ ಸಾಹಿತ್ಯದ ಬಹು ಮುಖ್ಯ ಭಾಗವಾಗಿರುವ ವಚನಗಳನ್ನು ‘ಲಿಂಗಾಯತ/ವೀರಶೈವ ಚಳುವಳಿ’ ಅಥವಾ ‘ವಚನ ಚಳುವಳಿ’ ಎಂಬ ಹನ್ನೆರಡನೇ ಶತಮಾನದ ಒಂದು ಆಂದೋಲನದ ಭಾಗವೆಂದು ನೋಡುವುದು ಇಂದು ಒಂದು ವಾಡಿಕೆಯಾಗಿ ಬಿಟ್ಟಿದೆ. ಹನ್ನೆರಡನೇ ಶತಮಾನದ ಈ ಆಂದೋಲನವನ್ನು, ಬುದ್ಧಿಸಂನ ಬಳಿಕ ಭಾರತ ಕಂಡ ಅತ್ಯಂತ ಪ್ರಮುಖ ಜಾತಿ ವಿರೋಧೀ ಚಳುವಳಿ ಎಂಬಂತೆ ಬಿಂಬಿಸಲಾಗಿದೆ. ಇಪ್ಪತ್ತನೇ ಶತಮಾನದ ಹೊತ್ತಿಗೆ ಈ ವಚನಗಳನ್ನು ಭಾರತ ಕಂಡ ಜಾತಿಯ ವಿರುದ್ಧ ಹೋರಾಡಿದ ಮೊಟ್ಟಮೊದಲ ಚಳುವಳಿಯ ಭಾಗವೆಂದು ಗುರುತಿಸಲಾಯಿತು. ಪ್ರಸ್ತುತ ಬಹುಮತಾಭಿಪ್ರಾಯದ ಪ್ರಕಾರ ಜಾತಿ ವಿರೋಧಿ ವಿಚಾರವು ವಚನ ಚಳುವಳಿಯ ಮತ್ತು ವಚನಗಳ ಮೂಲ ಆಶಯ. ಈ ಪ್ರಸಿದ್ಧ ವಾದಕ್ಕೆ ತರ್ಕದ ಅಥವಾ ನಿಜಾಂಶಗಳ ಯಾವುದೇ ಆಧಾರವಿಲ್ಲ ಎಂಬುದನ್ನು ತೋರಿಸುವುದೇ ಈ ಲೇಖನದ ಉದ್ದೇಶ.

ಈ ವಾದವನ್ನು ನಾವು ಬೆಳೆಸಿಕೊಂಡು ಹೋಗಲು ಹೀಗೊಂದು ಊಹಾಸಿದ್ಧಾಂತವನ್ನು ಮಾಡೋಣ: ವಚನಗಳು ಜಾತಿಯ ವಿರುದ್ಧದ ಚಳುವಳಿಯನ್ನು ಪ್ರತಿನಿಧಿಸುತ್ತವೆ ಎಂಬ ಪ್ರಚಲಿತ ಜನಪ್ರಿಯ ನಂಬಿಕೆಯು ನಿಜವೇ ಆಗಿದ್ದರೆ, ಬಹುತೇಕ ವಚನಗಳು ಜಾತಿಯ ಕುರಿತು ಮಾತನಾಡಲೇಬೇಕು. ಏಕೆಂದರೆ ಜಾತಿ ವಿರುದ್ಧದ ಚಳುವಳಿಯ ಭಾಗವಾಗಿದ್ದುಕೊಂಡೂ ವಚನಗಳು ಜಾತಿಯ ವಿರುದ್ಧ ಮಾತನಾಡದೆ ಊಳಿದಿರಬಹುದಾದ ಪರಿಸ್ಥಿತಿ ಸಾಧ್ಯವಿಲ್ಲದ ಮಾತು. ಈ ಊಹಾಸಿದ್ಧಾಂತದ ಪ್ರಕಾರ, ಒಂದುವೇಳೆ ನಾವು ವಚನಗಳು ಜಾತಿಯ ವಿರುದ್ಧ ಮಾತನಾಡುವುದಿಲ್ಲ ಅಥವಾ ಜಾತಿಯ ವಿಚಾರ ವಚನಗಳಿಗೆ ಮಹತ್ವದ ವಿಚಾರವೇ ಅಲ್ಲವೆಂದು ತೋರಿಸಿದರೆ, ವಚನಗಳು ಜಾತಿವಿರೋಧಿ ಸಾಹಿತ್ಯವೆಂಬ ಪ್ರಚಲಿತ ವಾದವನ್ನು ತಳ್ಳಿ ಹಾಕಿದಂತಾಗುತ್ತದೆ.

ಮತ್ತಷ್ಟು ಓದು »

31
ಮಾರ್ಚ್

ವಚನ ಸಾಹಿತ್ಯ ಮತ್ತು ಜಾತಿ ವ್ಯವಸ್ಥೆ ಚರ್ಚೆಯ ಸುತ್ತ

Nilume-CSLC - 4