ವಿಷಯದ ವಿವರಗಳಿಗೆ ದಾಟಿರಿ

Posts tagged ‘ತಾಲಿಬಾನ್’

21
ಆಕ್ಟೋ

ಹೊರಾಟಗಾರ್ತಿ ಮಲಾಲಾ ಮತ್ತು ಮಿಥ್ಯಾ ಪ್ರಗತಿಪರರ ಭ೦ಡತನ

– ಗುರುರಾಜ್ ಕೊಡ್ಕಣಿ,ಯಲ್ಲಾಪುರ

Malalaaಪ್ರತಿವರ್ಷದ೦ತೇ ಈ ಬಾರಿಯ ನೊಬೆಲ್ ಪ್ರಶಸ್ತಿಯ ಘೊಷಣೆಯಾಗಿದೆ.ಅದರಲ್ಲೂ ಈ ಬಾರಿ ಶಾ೦ತಿಗಾಗಿ ಕೊಡುವ ನೊಬೆಲ್ ಪ್ರಶಸ್ತಿ ಚರ್ಚಿತ ವಿಷಯವಾಗಿತ್ತು. .ಪಾಕಿಸ್ತಾನದ ಪುಟ್ಟ,ದಿಟ್ಟ ಹೋರಾಟಗಾರ್ತಿ ಮಲಾಲಾ ಯುಸುಫಜಾಯ್ ನೊಬೆಲ್ ಶಾ೦ತಿ ಪ್ರಶಸ್ತಿಯ ಕಣದಲ್ಲಿದ್ದು ಆಸಕ್ತಿಗೆ ಕಾರಣವಾಗಿತ್ತು.ಆ ಪುಟ್ಟ ಹುಡುಗಿ ತೋರಿದ ದಿಟ್ಟತನಕ್ಕೆ ಆಕೆಗೆ ನೊಬೆಲ್ ಸಿಗಲಿ ಎ೦ಬುದು ಬಹುತೇಕರ ಆಶಯ ಮತ್ತು ಅಭಿಪ್ರಾಯವಾಗಿತ್ತು.ಆದರೆ ಕೊನೆಯ ಕ್ಷಣಗಳಲ್ಲಿ ಆಕೆಗೆ ನೊಬೆಲ್ ಪ್ರಶಸ್ತಿ ತಪ್ಪಿದ್ದು ಅನೇಕರಲ್ಲಿ ನಿರಾಸೆಯು೦ಟು ಮಾಡಿತು.ಪರಮ ಕ೦ಟಕ ರಾಷ್ಟ್ರ ಪಾಕಿಸ್ತಾನದ ಪ್ರಜೆಯಾಗಿದ್ದರೂ ಈ ಚಿಕ್ಕ ವಯಸ್ಸಿನಲ್ಲಿ ಆಕೆ ತೋರಿದ ಧೈರ್ಯಕ್ಕೆ ಅಕೆಗೆ ನೊಬೆಲ್ ಸಿಗಲೆ೦ದು ಅನೇಕ ಭಾರತೀಯರೂ ಬಯಸಿದ್ದರೆ೦ಬುದು ಸುಳ್ಳಲ್ಲ

ಈಗಾಗಲೇ ಮಲಾಲಾ ವಿಶ್ವದಾದ್ಯ೦ತ ಮನೆಮಾತಾಗಿದ್ದರೂ ಆಕೆಯ ಬಗ್ಗೆ ಹೆಚ್ಚಾಗಿ ಗೊತ್ತಿಲ್ಲದಿದ್ದವರಿಗೆ ಕೊ೦ಚ ಮಾಹಿತಿ ನೀಡುತ್ತಿದ್ದೇನೆ.ಹದಿನಾರು ವರ್ಷದ ಮಲಾಲಾ ಯುಸುಫಜಾಯ್ ಮೂಲತ: ಪಾಕಿಸ್ತಾನದ ತಾಲಿಬಾನ್ ಪೀಡಿತ ಸ್ವಾಟ್ ಕಣಿವೆಯವಳು.ತಾಲಿಬಾನಿ ಆಡಳಿತದಲ್ಲಿನ ಈ ಪ್ರದೇಶದಲ್ಲಿ ತಾಲಿಬಾನ್ ಕರ್ಮಠ ಇಸ್ಲಾ೦ ಸ೦ಪ್ರದಾಯಗಳನ್ನು ,ಕಾನೂನುಗಳನ್ನು ಈ ಪ್ರದೇಶದಲ್ಲಿ ಜಾರಿಗೊಳಿಸಿದೆ.ಹೆಣ್ಣು ಮಕ್ಕಳಿಗೆ ವಿದ್ಯಾಭ್ಯಾಸವಿಲ್ಲ ಎ೦ಬ ಕಾನೂನನ್ನು ಈ ಪ್ರದೇಶದಲ್ಲಿ ಜಾರಿಗೊಳಿಸಿದ್ದರು.ಅಲ್ಲಿ ತಾಲಿಬಾನಿಗಳ ನಿರ್ಣಯವನ್ನು ಯಾರೂ ಪ್ರಶ್ನಿಸುವ೦ತಿರಲಿಲ್ಲ.ಆದರೆ ಈ ಪುಟ್ಟ ಬಾಲಕಿ ಮಲಾಲಾ ಈ ಅನ್ಯಾಯವನ್ನು ವಿರೋಧಿಸುವ ನಿರ್ಧಾರಕ್ಕೆ ಬ೦ದಳು.ತನ್ನ ಹನ್ನೊ೦ದನೆಯ ವಯಸ್ಸಿನಲ್ಲಿ ಬಿಬಿಸಿಯ ಅ೦ತರ್ಜಾಲ ತಾಣಗಳಿಗೆ ಮಲಾಲಾ ಗುಪ್ತ ನಾಮದಲ್ಲಿ ಬ್ಲಾಗ್ ಬರೆಯಲಾರ೦ಭಿಸಿದಳು.ಬಿಬಿಸಿಯ೦ತಹ ವಿಶ್ವಮಾನ್ಯ ಸ೦ಸ್ಥೆಗೆ ,ಸ್ವಾಟ್ ನಲ್ಲಿ ತಾಲಿಬಾನಿಗಳ ಅರಾಜಕತೆ,ಮಹಿಳೆಯರ ಮೇಲಿನ ದೌರ್ಜನ್ಯವನ್ನು ವಿವರಿಸುವ ಪ್ರಯತ್ನ ಮಾಡಿದಳು. ಮಹಿಳಾ ಶಿಕ್ಷಣದ ಬಗ್ಗೆ ತನ್ನ ಅಭಿಪ್ರಾಯವನ್ನು ವಿಶ್ವಕ್ಕೆ ಅರುಹಿದಳು.ಚಿಕ್ಕ ವಯಸ್ಸಿನಲ್ಲಿಯೇ ಆಕೆಯ ವೈಚಾರಿಕತೆಗೆ ತಲೆದೂಗಿದ ನ್ಯೂಯಾರ್ಕ್ ಟೈಮ್ಸ್ ಆಕೆಯ ಬಗ್ಗೆ ಸಾಕ್ಷ್ಯ ಚಿತ್ರವನ್ನು ನಿರ್ಮಿಸಿತು.ಅಲ್ಲಿ೦ದ ವಿಶ್ವ ಪ್ರಸಿದ್ದಳಾದ ಆಕೆ ಮುಕ್ತವಾಗಿ ಮಾಧ್ಯಮಗಳಲ್ಲಿ,ಪತ್ರಿಕೆಗಳಲ್ಲಿ ಸ೦ದರ್ಶನಗಳನ್ನು ನೀಡತೊಡಗಿದಳು.ಆಗ ಎಚ್ಚೆತ್ತುಕೊ೦ಡ ಪಾಕಿಸ್ತಾನದ ಸೈನ್ಯ ಸ್ವಾಟ್ ಕಣಿವೆಯ ಮೇಲೆ ಕದನ ಘೋಷಿಸಿತು. ’ಎರಡನೇ ಸ್ವಾಟ್ ಯುದ್ದ’ ಎ೦ದೇ ಪ್ರಸಿದ್ಧವಾದ ಈ ಯುದ್ದದಲ್ಲಿ ಪಾಕಿಸ್ತಾನಿ ಸೈನ್ಯ ಸ್ವಾಟ್ ಕಣಿವೆಯನ್ನು ಮರಳಿ ತನ್ನ ವಶಕ್ಕೆ ಪಡೆಯಿತು.ಅನೇಕ ತಾಲಿಬಾನಿ ಕಮಾ೦ಡರಗಳ ಬ೦ಧನವಾಯ್ತು.

ಮತ್ತಷ್ಟು ಓದು »

16
ಆಕ್ಟೋ

ಹದಿನಾಲ್ಕರ ಬಾಲೆಗೆ ಹೆದರಿದ ತಾಲಿಬಾನಿ ಹೇಡಿಗಳು!

– ಚಕ್ರವರ್ತಿ ಸೂಲಿಬೆಲೆ

‘ನನ್ನ ಪಾಕಿಸ್ತಾನದ ಕನಸು ಇಂತಹದುಲ್ಲ. ಅಲ್ಲಿ ಶಾಂತಿ ಇರಬೇಕು. ನೆರೆಯವರೊಂದಿಗೆ ಸೌಹಾರ್ದ ಗೆಳೆತನವಿರಬೇಕು. ನನ್ನ ಪಾಕಿಸ್ತಾನದಲ್ಲಿ ಹಗರಣಗಳಿರಬಾರದು. ಶತ್ರುಗಳಿಲ್ಲದ ರಾಷ್ಟ್ರವಾಗಿರಬೇಕು ಅದು.’ ಹಾಗಂತ ಪಟಪಟನೆ ಮಾತನಾಡುತ್ತ ಇಂತಹದೊಂದು ರಾಷ್ಟ್ರದ ನಿರ್ಮಾಣಕ್ಕೆ ಅಗತ್ಯಬಿದ್ದಲ್ಲಿ ಓದು ಮುಗಿಸಿ ರಾಜಕಾರಣಕ್ಕೂ ಧುಮುಕುವೆನೆಂದು ಪತ್ರಕರ್ತರ ಮುಂದೆ ಹೇಳಿದ್ದು ಬೆನಜಿರ್ ಭುಟ್ಟೋ ಅಲ್ಲ. ಹದಿಮೂರರ ಬಾಲೆ ಮಲಾನಾ ಯೂಸುಫ್ ಜಾಯ್…!ಹೌದು. ಮೊನ್ನೆ ದುಷ್ಟ ತಾಲಿಬಾನಿಗಳು ಗುಂಡು ಹಾರಿಸಿ ಕೊಲ್ಲುವ ಯತ್ನ ನಡೆಸಿದ್ದು ಈ ಹುಡುಗಿಯ ಮೇಲೆಯೇ. ಈಗ ಅವಳಿಗೆ ಹದಿನಾಲ್ಕು ವರ್ಷ ಮಾತ್ರ. ತಾಲಿಬಾನ್ ಎನ್ನುವ ಪದ ಕ್ರೌರ್ಯಕ್ಕೆ ಪರ್ಯಾಯವಾಗಿ ನಿಂತಿರುವುದು ಇಂದೇನಲ್ಲ. ಆಪ್ಘಾನಿಸ್ತಾನದ ಪುಷ್ತೂನ್ ಬುಡಕಟ್ಟಿನ ಜನರ ಮಹತ್ವಾಕಾಂಕ್ಷೆಯ ಭಾಗವಾಗಿ ಹುಟ್ಟಿದ ದಿನದಿಂದ ಅದು ಹಾಗೆಯೇ. ಅಫ್ಘಾನಿಸ್ತಾನ ಗಾಂಧಾರ ದೇಶವಾಗಿದ್ದ ಕಾಲದಿಂದಲೂ ಭಿನ್ನಭಿನ್ನ ಬುಡಕಟ್ಟುಗಳ ಭೂಪ್ರದೇಶ. ಅದರಲ್ಲಿ ಸೂರ್ಯಚಂದ್ರರನ್ನು ಆರಾಧಿಸುವ ಪ್ರಕೃತಿ ಪೂಜಕರಿಂದ ಹಿಡಿದು ಸಗುಣ ಸಾಕಾರ ಮೂರ್ತಿಪೂಜಕರೂ ಇದ್ದರು. ನಡುವಲ್ಲಿ ಒಂದಷ್ಟು ಕಾಲ ಬುದ್ಧನ ಅನುಯಾಯಿಗಳ ಶಾಂತಿಯ ಪ್ರಭೆಯಿಂದಲೂ ಬೆಳಗಿತು ಆಫ್ಘಾನಿಸ್ತಾನ. ಆನಂತರದ ದಿನಗಳಲ್ಲಿ ದಾಳಿಗೆ ಒಳಗಾಗಿ ಕ್ರಮೇಣ ಇಸ್ಲಾಮ್ ವ್ಯಾಪ್ತಗೊಂಡಿತು. ಹಾಗಂತ ಇಸ್ಲಾಮ್ ಕೂಡ ಏಕಪ್ರಕಾರವಾಗಿರಲಿಲ್ಲ. ಆಯಾ ಬುಡಕಟ್ಟುಗಳು ತಮ್ಮದೇ ಆದ ಆಚರಣೆಗಳೊಂದಿಗೆ ಬದುಕಿದ್ದವು. ಸೂಫಿಸಂತರುಗಳು ಹೊಸ ಪರಂಪರೆಯನ್ನು ಹುಟ್ಟುಹಾಕಿದ್ದರು. ತಮ್ಮ ರೀತಿಯೇ ಸರಿ ಎನ್ನುವ ಕಾದಾಟಗಳು ಆಗೀಗ ನಡೆಯುತ್ತಲೇ ಇದ್ದವು. ಮೇಲುಗೈ ಸಾಧಿಸಿ ಇಡಿಯ ಪ್ರಾಂತವನ್ನು ಆಳಬೇಕೆಂಬ ತಹತಹವೂ ಸಹಜವಾಗೇ ಇತ್ತು. ಈ ಹಂತದಲ್ಲಿ ಪುಷ್ತೂನ್ ಬುಡಕಟ್ಟಿನ ಜನ ವಹಾಬಿಗಳ, ದಿಯೋಬಂದಿಗಳ ಸಿದ್ಧಾಂತದ ಆಧಾರದ ಮೇಲೆ ಕಟ್ಟಿದ ಕಟ್ಟರ್ ಇಸ್ಲಾಮೀಪಂಥ ’ತಾಲಿಬಾನ್’. ಮುಲ್ಲಾ ಮುಹಮ್ಮದ್ ಓಮರ್‌ನ ನೇತೃತ್ವ ಅದಕ್ಕೆ ದೊರೆಯಿತು. ಸೌದಿಯ ಹಣ, ಪಾಕಿಸ್ತಾನದ ಜನ ಎರಡೂ ವಿಪುಲವಾಗಿ ಹರಿಯಿತು. ೧೯೯೬ರಲ್ಲಿ ತಾಲಿಬಾನ್ ಅಫ್ಘಾನಿಸ್ತಾನ್ ಚುಕ್ಕಾಣಿಯನ್ನೆ ಹಿಡಿದುಬಿಟ್ಟಿತು.

ಮತ್ತಷ್ಟು ಓದು »

13
ಆಕ್ಟೋ

ಮಲಾಳ ಯೂಸುಫ್ ಝಾಯಿಯ ಡೈರಿಯಿಂದ

–  ಡಾ ಅಶೋಕ್ ಕೆ ಆರ್

ಪಾಕಿಸ್ತಾನಿ ತಾಲಿಬಾನಿಗಳಿಂದ ಗುಂಡೇಟು ತಿಂದು ಸಾವು ಬದುಕಿನ ನಡುವೆ ಹೋರಾಡುತ್ತಿರುವ ಈ ಹೋರಾಟಗಾರ್ತಿ ಮಾಡಿದ ತಪ್ಪಾದರೂ ಏನು? ಹೆಣ್ಣುಮಕ್ಕಳು ಶಾಲೆಗೆ ಹೋಗಬಾರದು ಎಂಬ ತಾಲಿಬಾನ್ ಆದೇಶವನ್ನು ವಿರೋಧಿಸಿದ್ದೇ ಇವಳ ಅಪರಾಧ! ಎರಡು ವರುಷದ ಮುಂಚೆ ಬರೆದ ದಿನಚರಿಗಳನ್ನು ಗುಲ್ ಮಕಾಯಿ ಎಂಬ ಕಾವ್ಯನಾಮದಡಿಯಲ್ಲಿ ಬಿಬಿಸಿ ಉರ್ದುವಿನಲ್ಲಿ ಪ್ರಕಟಣೆಗೆ ನೀಡಿದ್ದು ಇವಳ ಬಹುದೊಡ್ಡ ತಪ್ಪು. ಅಂದಹಾಗೆ ಮಲಾಳ ಯೂಸುಫ್ ಝಾಯಿ ಎಂಬ ಹೆಸರಿನ ಈ ಹೋರಾಟಗಾರ್ತಿಯ ವಯಸ್ಸು ಹದಿನಾಲ್ಕು!

ಶನಿವಾರ ಜನವರಿ 3 : ಭಯವಾಗ್ತಿದೆ
ನಿನ್ನೆ ಕನಸಿನಲ್ಲಿ ಮಿಲಿಟರಿ ಹೆಲಿಕಾಪ್ಟರ್ ಗಳು ಮತ್ತು ತಾಲಿಬಾನಿಗಳು ಬಂದಿದ್ದರು. ನಮ್ಮ ಸ್ವಾಟ್ ಜಿಲ್ಲೆಯಲ್ಲಿ ಸೈನಿಕ ಕಾರ್ಯಾಚರಣೆ ಶುರುವಾದಾಗಿನಿಂದ ಈ ರೀತಿಯ ದುಸ್ವಪ್ನಗಳು ಮಾಮೂಲಾಗಿದೆ. ಅಮ್ಮ ಮಾಡಿಕೊಟ್ಟ ತಿಂಡಿ ತಿಂದು ಶಾಲೆಗೆ ಹೊರಟೆ. ಹೆಣ್ಣುಮಕ್ಕಳು ಶಾಲೆಗೆ ಹೋಗುವುದನ್ನು ತಾಲಿಬಾನಿಗಳು ನಿಷೇಧಿಸಿರುವುದರಿಂದ ನನಗೆ ಭಯವಾಗುತ್ತಿದೆ.
27 ಜನರಲ್ಲಿ 11 ಮಂದಿ ಮಾತ್ರ ಶಾಲೆಗೆ ಬಂದಿದ್ದೆವು. ತಾಲಿಬಾನ್ ಆದೇಶದಿಂದ ಹಾಜರಾತಿ ಕಡಿಮೆಯಾಗಿತ್ತು. ನನ್ನ ಮೂವರು ಗೆಳತಿಯರು ಈ ಆದೇಶದ ನಂತರ ತಮ್ಮ ಕುಟುಂಬದೊಡನೆ ಲಾಹೋರ್, ಪೇಷಾವರ, ರಾವಲ್ಪಿಂಡಿಗೆ ಹೊರಟುಹೋಗಿದ್ದಾರೆ.