ಮುಧೋಳ ನಾಯಿಯ ಜೊತೆಯ ಹೋಲಿಕೆಗೆ ಇವರು ಅರ್ಹರೇ?
ಚುನಾವಣೆ ಸಮೀಪಿಸಿದಾಗಲೆಲ್ಲಾ ಕಾಂಗ್ರೆಸಿಗರು, “ನಮ್ಮ ಇತಿಹಾಸ ತೆರೆದ ಪುಸ್ತಕವಿದ್ದಂತೆ’,‘ದೇಶಕ್ಕೆ ಕಾಂಗ್ರೆಸಿನ ಕೊಡುಗೆಯೇನೆಂಬುದನ್ನು ಯಾರಿಗೂ ನಿರೂಪಿಸುವ ಆವಶ್ಯಕತೆಯಿಲ್ಲ’ಎಂದು ಆಲಾಪಿಸತೊಡಗುತ್ತಾರೆ. ಅವರ ತೆರೆದ ಪುಸ್ತಕದ ಕೆಲವೇ ಪುಟಗಳನ್ನು ನೋಡಿದರೆ ಅಲ್ಲಿ ವಿಚಿತ್ರಗಳೇ ಕಾಣಿಸುತ್ತವೆ. ಇದು ಅಂಥ ಒಂದು ಸ್ಯಾಂಪಲ್.ಲಾಲ್ ಬಹೂದ್ದೂರ್ ಶಾಸ್ತ್ರಿಗಳ ಬಾಯಿಂದ ಭಾರತ್ ಕೀ ಆಯೂಬ್ ಎಂದು ಬೆನ್ನು ತಟ್ಟಿಸಿಕೊಂಡ ಒರ್ವ ಯೋಧ ಕ್ಯಾ.ಆಯೂಬ್ ಖಾನ್. ವೀರ ಚಕ್ರ ಪುರಷ್ಕೃತ ಕ್ಯಾ.ಖಾನ್ಗೆ ಶಾಸ್ತ್ರಿ ಮೇಲೆ ಅದೆಷ್ಟು ಅಭಿಮಾನವಿತ್ತೆಂದರೆ ನಿವೃತ್ತಿಯ ನಂತರ ಅವರು ಕಾಂಗ್ರೆಸ್ಗೆ ಸೇರಿದರು. ಎರಡು ಬಾರಿ ರಾಜಾಸ್ಥಾನದ ಜುಂಜುನು ಲೋಕಸಭಾ ಕ್ಷೇತ್ರದಿಂದ ಸ್ಫರ್ಧಿಸಿ ಸಂಸದರೂ ಆದರು. ಆದರೆ ಆಯೂಬ್ ಖಾನರಿಗೆ ಶಾಸ್ತ್ರಿಗಳ ನಿಧನಾನಂತರ ಯಾಕೋ ತನ್ನ ಆಯ್ಕೆ ತಪ್ಪಿದೆ ಎನಿಸತೊಡಗಿತು. ಇಂದಿರಾ ಸರ್ವಾಧಿಕಾರ ಮತ್ತು ರಾಜೀವ್ ಗಾಂಧಿ ಪಟಾಲಮ್ಮಿನ ಸೈನಿಕ ವಿರೋಧಿ ನೀತಿಗಳನ್ನು ಸಹಿಸುವಷ್ಟು ದಿನ ಸಹಿಸಿದರು. ಕೊನೆಗೆ ಶಾಸ್ತ್ರಿಗಳಿಗಾದ ಸ್ಥಿತಿ ನರಸಿಂಹರಾಯರಿಗೂ ಬಂದಾಗ ಹಿಂದೆ ಮುಂದೆ ನೋಡದೆ ಕಾಂಗ್ರೆಸ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ರಾಜಕೀಯ ಸಂನ್ಯಾಸ ಸ್ವೀಕರಿಸಿದರು. ಕೊನೆ ಕಾಲದಲ್ಲಿ ಆಯೂಬ್ ಖಾನರಿಗೆ ಕಾಂಗ್ರೆಸ್ ಸೇರಿದ್ದ ಬಗ್ಗೆ ಎಷ್ಟು ಪಾಪಪ್ರಜ್ಞೆ ಕಾಡುತ್ತಿತ್ತೆಂದರೆ ಆರೋಗ್ಯ ವಿಚಾರಿಸಲು ಬಂದ ವಾಜಪೇಯಿಯವರ ಪಾದಸ್ಪರ್ಶಕ್ಕೆ ಅನುಮತಿಯನ್ನೂ ಆ ಯೋಧ ಕೇಳಿದ್ದರು. ಏಕೆಂದರೆ ಒಬ್ಬ ದೇಶಭಕ್ತ ಯೋಧ ಮತ್ತು ಕಾಂಗ್ರೆಸಿಗ ಏಕಕಾಲಕ್ಕೆ ಆಗಲು ಸಾಧ್ಯವಿಲ್ಲ ಎಂಬ ಸತ್ಯ ಆಯೂಬ್ ಖಾನರಿಗೆ ತಮ್ಮ ಕೊನೆಕಾಲದಲ್ಲಿ ಅರ್ಥವಾಗಿತ್ತು.
ಜನರಲ್ ತಿಮ್ಮಯ್ಯ
– ಸಿ. ರವಿ ಕುಮಾರ್
ಒಂದು ದಿನ ನನ್ನ ತಂದೆಯವರು ತಮ್ಮ ಬಳಿ ಇದ್ದ ಮಿಲಿಟರಿ ಇತಿಹಾಸ ಈ ಒಂದು ಘಟನೆಯನ್ನು ತಿಳಿಸಿದರು. ಅದನ್ನು ಕೇಳಿದ ಮೇಲೆ ಬಹುಶಃ ನಮ್ಮ ಅಂದಿನ ಪ್ರಧಾನಿ ನೆಹರುರವರು ಈ ವ್ಯಕ್ತಿಯ ಅನುಭವವನ್ನು ಬಳಸಿಕೊಂಡಿದ್ದರೆ 1962ರ ಚೇನದೊಡನೆ ನಡೆದ ಯುದ್ಧದ ಗತಿ ಬದಲಾಗುತ್ತಿತ್ತೊ ಏನೊ? `ಅಪ್ಪಣೆ ಮೀರಿ ತಿಮ್ಮಯ್ಯ ಗೆದ್ದಾಗ’ ಎರಡನೇ ಮಹಾಯುದ್ಧದ ಮಧ್ಯಕಾಲ. ಜಪಾನಿ ಪಡೆಗಳು ಬರ್ಮಾ ದೇಶದಲ್ಲಿ ಹೊಕ್ಕು ಎತ್ತೆತ್ತಲೂ ಹಬ್ಬಿದ್ದವು. ಇರಾವತೀ ನದಿಯ ಕಣಿವೆ ಜಪಾನೀಯರ ವಶವಾಗಿ ಬ್ರಹ್ಮಪುತ್ರಾ ಕಣಿವೆಯೀಗ ಅವರ ತೋಪುಗಳ ಗರ್ಜನೆಯಿಂದ ಪ್ರತಿಧ್ವನಿಸುತ್ತಿತ್ತು. ಬ್ರಿಟಿಶ್ ಸಾಮ್ರಾಜ್ಯವಾದದ ಪರಕ್ರಮ ಸೂರ್ಯ ಅಕಾಲದಲ್ಲೇ ಅಸ್ತಂಗತನಾಗಿದ್ದ. ಬೆಟ್ಟದ ಒಂದು ಕೋಡಿನಲ್ಲಿ ಇನ್ನೂರೈವತ್ತು ಜಪಾನೀ ಸೈನಿಕರು ಕಂದಕ ತೋಡಿ ಬಲವಾಗಿ ತಳವೂರಿದ್ದರು. ಆ ಶೃಂಗದ ಕೆಳಗೆ ಕಡಿದಾದ ಬೆಟ್ಟದ ಗೋಡೆಗೆ ಅಂಟಿಕೊಂಡು ಭಾರತ ಸೈನ್ಯದ ಕುಮಾಂವ್ ರೆಜಿಮೆಂಟಿನ ಜವಾನರು ಟೆಂಟ್ ಹಾಕಿದ್ದರು. ಎರಡು ಸೈನ್ಯದ ಸೈನಿಕರು ತಮ್ಮ ತಮ್ಮ ನೆಲೆಗಳನ್ನು ಭದ್ರಪಡಿಸಿಕೊಂಡು ಮುನ್ನುಗುವ ದಾರಿಯನ್ನು ಯೋಚಿಸುತ್ತಿದ್ದವು. ಮತ್ತಷ್ಟು ಓದು 




