ತುಳುಲಿಪಿ ಒಂದು ವಿಶ್ಲೇಷಣೆ
– ದ್ಯಾವನೂರು ಮಂಜುನಾಥ್
ಕನ್ನಡ ನಾಡಿನ ಹಸ್ತಪ್ರತಿ ಇತಿಹಾಸದಲ್ಲಿ ತುಳುಲಿಪಿ ಹಸ್ತಪ್ರತಿಗಳಿಗೆ ಒಂದು ವಿಶಿಷ್ಟಮಯವಾದ ವಾತಾವರಣವಿದ್ದು, ದಕ್ಷಿಣ ಭಾರತದ ಸಾಂಸ್ಕೃತಿಕ ಬದುಕಿನ ಮೇಲೆ ತನ್ನದೇ ಆದ ಪ್ರಭಾವವನ್ನು ಬೀರಿದೆ. ಇಲ್ಲಿನ ಭೌಗೋಳಿಕ ಸಾಮ್ಯತೆ ಈ ಪ್ರದೇಶಕ್ಕಿದ್ದರೂ, ಇಲ್ಲಿ ವಿಭಿನ್ನ ಸಂಸ್ಕೃತಿಗಳು ಬೆಳೆದು ಬಂದಿದೆ. ಕನ್ನಡ, ತುಳು, ಕೊಂಕಣಿ, ಮಲೆಯಾಳ ಇಲ್ಲಿನ ಜನರ ಪ್ರಧಾನ ಭಾಷೆಗಳಾಗಿವೆ. ಈ ಭಾಷೆಗಳಲ್ಲಿ ‘ತುಳುಭಾಷೆ’ ಮತ್ತು ನೆಲೆಸಿದ ಪ್ರದೇಶ ‘ತುಳುನಾಡು’ (ತೌಳವ) ದು ಪ್ರಸಿದ್ಧ. ವಿದೇಶಿ ಪ್ರವಾಸಿ ಬಾರ್ಕೋಸನ ವರದಿ ಮತ್ತು ಗೋವರ್ಧನ ಗಿರಿ ಓಂಕಾರ ಬಸದಿಯ ಶಾಸನಗಳ ಆಧಾರದಿಂದ ತುಳುನಾಡು ಚಂದ್ರಗಿರಿಯ ಉತ್ತರಕ್ಕೆ ಮತ್ತು ಗಂಗಾವತಿ ನದಿಗಳ ದಕ್ಷಿಣಕ್ಕೆ ಸೀಮಿತವಾಗಿತ್ತು ಎಂದು ಸ್ಥೂಲವಾಗಿ ಹೇಳಬಹುದು. ಹೀಗಿದ್ದರೂ ತುಳುಭಾಷೆಯನ್ನಾಡುವ ಜನಸಮುದಾಯವು ಈಗ ಕಲ್ಯಾಣಪುರ ಮತ್ತು ಚಂದ್ರಗಿರಿ ನದಿಗಳವರೆಗಿನ ಕರಾವಳಿ ಪ್ರದೇಶಗಳಿಗೆ ಸೀಮಿತವಾಗಿದೆ.
ಕಾಸರಗೋಡು ತುಳು ನಾಡೆಂದು ಸಂಗಮ ಸಾಹಿತ್ಯ ಹೇಳಿದೆ. ತುಳು ಭಾಷೆಯ ಪ್ರಾಚೀನತೆಯನ್ನು ಕ್ರಿ.ಶ.9ನೆಯ ಶತಮಾನದ ತನಕ ಹೋಗುತ್ತದೆಯೆಂಬ ಅಭಿಪ್ರಾಯ ನಿಕೋರಸ್ ನ ವರದಿ ಸೂಚಿಸುವುದಾದರೂ ಈ ಭಾಷೆಯು ತುಳುನಾಡು, ತುಳು ದೇಶ, ತುಳು ವಿಷಯ ಶಬ್ದಗಳು ಕ್ರಿ.ಶ.12ನೆಯ ಹಾಗೂ 16ನೆಯ ಶತಮಾನದ ಕೆಲವು ಶಾಸನಗಳಲ್ಲಿ ಉಲ್ಲೇಖಗಳಿಂದ ಕಾಣಬಹುದಾಗಿದೆ. ಇಂತಹ ಶಾಸನಗಳು ಬ್ರಹ್ಮಾವರ, ಉಡುಪಿ, ಕಂದಾವರ ಮತ್ತು ಗುಣವಂತೆಗಳಲ್ಲಿ ಪತ್ತೆಯಾಗಿದೆ. ಕ್ರಿ.ಶ.14ನೆಯ ಶತಮಾನದ ಮತ್ತು ಅಂತ್ಯದಲ್ಲಿ ತುಳುಶಾಸನ ತುಳುಲಿಪಿಯಲ್ಲಿ ಲಿಖಿಸುವಷ್ಟು ಪ್ರಬಲವಾಗಿತ್ತೆಂಬುದಕ್ಕೆ ಕುಂಬಳೆ ಸಮೀಪದ ಅನಂತಪುರದ ಶಾಸನ, ಪೆರ್ಲದ ಬಜಂಕೂಡ್ಲು ಶಾಸ, ಪುತ್ತೂರು ಸಮೀಪದ ಈಶ್ವರ ಮಂಗಲದ ಶಾಸನಗಳ ಅಧ್ಯಯನಗಳಿಂದ ತಿಳಿದು ಬರುತ್ತದೆ. ಕೊಳನಕೋಡು ದೇವಸ್ಥಾನ ಕೊಂಗುಬಳ್ಳಿ ಮನೆಯ ಪರಿಸರದಲ್ಲಿ ಮೊತ್ತ ಮೊದಲನೆಯ ತುಳುಲಿಪಿ ಶಾಸನವನ್ನು ಡಾ||ಗುರುರಾಜ ಭಟ್ಟರು ಶೋಧಿಸಿದ್ದರೆ.
ಪ್ರಾಚೀನ ಲಿಪಿಗಳಾದ ಸಿಂಧು, ಬ್ರಾಹ್ಮಿ ಮತ್ತು ಖರೋಷ್ಠಿ ಲಿಪಿಗಳ ಪೈಕಿ ಅತ್ಯಂತ ಪ್ರಾಚೀನವಾದ್ದು ಸಿಂಧು ಲಿಪಿ. ಈ ಲಿಪಿ ಎಲ್ಲರೂ ಒಪ್ಪದ ರೀತಿಯಲ್ಲಿ ಓದಲು ಸಾಧ್ಯವಾಗಿಲ್ಲ. ಆದರೆ ಬ್ರಾಹ್ಮಿಶಾಸನಶಾಸ್ತ್ರ ಇತಿಹಾಸ ಪ್ರಾರಂಭದ ಬ್ರಾಹ್ಮಿ ಶಾಸನಗಳು ದೊರೆಯುವಲ್ಲಿಂದ ಆರಂಭವಾಗುತ್ತದೆ ಎಂದು ವಿದ್ವಾಂಸರ ಅಭಿಮತ, ಬ್ರಾಹ್ಮಿ ಭಾರತದಲ್ಲಿನ ನಂತರದ ಉತ್ತರ ಹಾಗೂ ದಕ್ಷಿಣದ ಎಲ್ಲಾ ಲಿಪಿಗಳಿಗೆ ಮೂಲವಾಗಿದೆ.
ತುಳುವಿಗೆ ೮ನೇ ಪರಿಚ್ಛೇದದ ಮಾನ್ಯತೆ ತುಳುವರ “ಹಕ್ಕು” ಯಾರ ಭಿಕ್ಷೆಯಲ್ಲ…!
– ರಾಕೇಶ್ ಶೆಟ್ಟಿ
ಬೆಂಗಳೂರಿನ ಸಮಸ್ತ ತುಳು ಸಂಘಟನೆಗಳೂ ಒಗ್ಗೂಡಿ,ತುಳುವನ್ನು ಸಂವಿಧಾನದ ೮ನೇ ಪರಿಚ್ಛೇದಕ್ಕೆ ಸೇರಿಸುವಂತೆ ಮತ್ತು ಇತರೆ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕಳೆದ ವರ್ಷದ ಸೆಪ್ಟಂಬರ್ ೨೮ ರ ಶನಿವಾರ ಕಳೆದ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಒಂದು ದಿನದ ’ಹಕ್ಕೊತ್ತಾಯ – ಪ್ರತಿಭಟನೆ’ಯನ್ನು ಮಾಡಿದ್ದವು.ಅಂದಿನ ಪ್ರತಿಭಟನೆಯ ನೇತೃತ್ವ ವಹಿಸಿದವರು ಹಿರಿಯ ಸಾಹಿತಿ ಡಾ|| ಡಿ.ಕೆ ಚೌಟ ಅವರು. ಚೌಟ ಅವರ ಭಾಷಣದಲ್ಲಿ ಇಷ್ಟು ವರ್ಷಗಳ ಕಾಯುವಿಕೆಯನ್ನು ಕಡೆಗಣಿಸಿದ ರಾಜಕಾರಣಿಗಳು,ವ್ಯವಸ್ಥೆಗಳ ಮೇಲೆ ಸಾತ್ವಿಕ ಕೋಪ ಎದ್ದು ಕಾಣುತಿತ್ತು.ಹಾಗೆಯೇ ತುಳುವಿಗೆ ಇರುವ ಅಪಾಯ, ನಮ್ಮ ಭೂಮಿ ಮಲಯಾಳಿಗಳ ಪಾಲಾಗುತ್ತಿರುವ ಬಗೆಗಿನ ಆತಂಕವಿತ್ತು.ಆ ದಿನ ಬಹಳಷ್ಟು ಜನ ಮಾತನಾಡಿದರು.ಆದರೆ ನಿಜವಾಗಿಯೂ ತುಳುವರ ಅಸ್ಮಿತೆಯನ್ನು ಬಡಿದ್ದೆಬ್ಬಿಸುವಂತ ಮಾತನಾಡಿದ್ದು ಚೌಟ ಅವರೊಬ್ಬರೇ.ಅವರ ಮಾತು ಮತ್ತದಕ್ಕೆ ವ್ಯಕ್ತವಾದ ಸ್ಪಂದನೆ ಕಂಡಾಗ ಏನಾದರೂ ಒಳ್ಳೆಯ ಬೆಳವಣಿಗೆಗಳು ಆಗಬಹುದು ಅಂದುಕೊಳ್ಳುತಿದ್ದೆ.ಅಷ್ಟರಲ್ಲೇ, ರಾಜಕಾರಣಿಗಳ ಆಗಮನವಾಯಿತು…!
ಒಬ್ಬರು ಚಿಕ್ಕಮಗಳೂರಿನ ಸಂಸದ ಜಯಪ್ರಕಾಶ್ ಹೆಗ್ಡೆ,ಮತ್ತೊಬ್ಬರು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ಅನಂತ ಕುಮಾರ್.ಇಂತ ಪ್ರತಿಭಟನಾ ಸಭೆಗಳಿಗೆ ರಾಜಕಾರಣಿಗಳನ್ನೇಕೆ ಕರೆಯುತ್ತಾರೆ ಅನ್ನುವುದು ನನಗೆ ಅರ್ಥವಾಗಲಿಲ್ಲ!
ಅದಕ್ಕೇ ಸರಿಯಾಗಿಯೇ ಈ ಇಬ್ಬರ ಮಾತುಗಳು ಸಾಗಿತ್ತು.ಪ್ರತಿಭಟನೆಗೆಂದು ಬಂದವರನ್ನು ತಮ್ಮ ಆಶ್ವಾಸನೆಗಳ ಮೂಲಕ,ಹಾಸ್ಯ ಚಟಾಕಿಗಳ ಮೂಲಕ ಸಮಾಧಾನಪಡಿಸುವ ಎಂದಿನ ರಾಜಕಾರಣಿಗಳ ಓಲೈಕೆಯ ಶೈಲಿಯ ಭಾಷಣ.೮ನೇ ಪರಿಚ್ಚೇದ ಬಿಟ್ಟು ಕೋರಿರೊಟ್ಟಿ,ನೀರ್ ದೋಸೆ ಇತ್ಯಾದಿ ಇತ್ಯಾದಿ.ಅನಂತ ಕುಮಾರ್ ಅವರು ನವೆಂಬರ್ ತಿಂಗಳಲ್ಲಿ ನೀವು ಒಂದು ತುಳು ನಿಯೋಗವನ್ನು ಕರೆದುಕೊಂಡು ದೆಹಲಿಗೆ ಬನ್ನಿ ಆ ಸಮಯಕ್ಕೆ ಶುರುವಾಗುವ ಸಂಸತ್ತಿನ ಅಧಿವೇಶನದಲ್ಲಿ ತುಳುವನ್ನು ಸಂವಿಧಾನದ ೮ನೇ ಪರಿಚ್ಛೇದಕ್ಕೆ ಸೇರಿಸುವ ಬಗ್ಗೆ ಮಾತನಾಡುವ ಅಂತ ಹೇಳಿ ಎಲ್ಲರ ಚಪ್ಪಾಳೆಯನ್ನು ಗಿಟ್ಟಿಸಿದ್ದರು.ಅನಂತ ಕುಮಾರ್ ಅವರ ಮಾತನ್ನು ಹೆಗ್ಡೆಯವರು ಅನುಮೋದಿಸಿದ್ದರು.ವೇದಿಕೆಯಲ್ಲಿದ್ದವರೂ ಅದಕ್ಕೇ ಸಮ್ಮತಿಸುವುದರೊಂದಿಗೆ ಪ್ರತಿಭಟನಾ ಸಭೆ ’ಶಾಂತ’ವಾಯಿತು.
ತುಳು ಭಾಷೆಯನ್ನು ‘ಕನ್ನಡ’ ಅಳಿಸುತ್ತಿದೆಯೋ..? ಉಳಿಸಿದೆಯೋ..?
-ತುಳುನಾಡು(ಅಫೀಶಿಯಲ್) ಫೇಸ್ಬುಕ್ ಪೇಜ್
ಕೆಲವು ತುಳುವಾದಿಗಳು ಕರ್ನಾಟಕ ರಾಜ್ಯದಿಂದ ಹೊರ ಬರುವ ಅಥವಾ ಪ್ರತ್ಯೇಕ ತುಳು ರಾಜ್ಯದ ಕಲ್ಪನೆಯನ್ನು ಇಟ್ಟುಕೊಂಡಿರುವುದು ಎಲ್ಲರಿಗೂ ತಿಳಿದಿರುವ ವಿಚಾರ..! ಇದಕ್ಕೆ ಅವರು ನೀಡುವ ಅತೀ ದೊಡ್ಡ ಕಾರಣ ಕನ್ನಡ ಭಾಷೆಯಿಂದ ತುಳು ಭಾಷೆಗೆ ಕಂಟಕ ಇದೆ ಅನ್ನೋದು..!! ಅದಕ್ಕೆ ಹಲವಾರು ಕಾರಣಗಳೂ ಇವೆ. ಇದು ಸತ್ಯ ಕೂಡ..! ತುಳು ಭಾಷೆಗೆ ಸಿಗಬೇಕಾಗಿದ್ದ ಪ್ರಾಶಸ್ತ್ಯಗಳು, ಸ್ಥಾನಮಾನಗಳು ಇನ್ನೂ ದೊರಕದೆ ಇರುವುದು ದುರ್ದೈವವೇ ಸರಿ. ಹಾಗಂತ ಇದೆಲ್ಲಾ ಕನ್ನಡಿಗರ ‘ಕುತಂತ್ರ’ ಅನ್ನುವವರು ಶತಃ ಮೂರ್ಖರೇ ಸರಿ…!
ಈ ಎಲ್ಲಾ ಬೆಳವಣಿಗೆಗಳಿಗೆ ಕಾರಣ ಯಾರು ಅಂತ ಹುಡುಕುತ್ತಾ ಹೊರಟರೆ, ಇದಕ್ಕೆ ಕಾರಣ ತುಳುವರೇ ಹೊರತು ಬೇರಾರೂ ಅಲ್ಲ ಅನ್ನೋದು ಸ್ಪಷ್ಟವಾಗಿ ಗೋಚರಿಸುತ್ತದೆ.
ತುಳುನಾಡನ್ನು ಕನ್ನಡೀಕರಣಗೊಳಿಸಿ ಅಂತ ಯಾರೂ ನಮ್ಮ ಮೇಲೆ ದಬ್ಬಾಳಿಕೆ ಮಾಡಿಲ್ಲ. ಎಲ್ಲಾ ತುಳುವರು ಮನಸ್ಸು ಮಾಡಿದರೆ, ಸಂವಿಧಾನದ 8ನೇ ಪರಿಚ್ಛೇದದಲ್ಲಿ ಸೇರಿಸುವುದು ಹಾಗೂ ಕರ್ನಾಟಕದಲ್ಲಿ ತುಳು ಭಾಷೆ ನಾಳೆಯೇ ಆಡಳಿತ ಭಾಷೆ ಆಗೋದರಲ್ಲಿ ಅನುಮಾನವೇ ಇಲ್ಲ.





