ವಿಷಯದ ವಿವರಗಳಿಗೆ ದಾಟಿರಿ

Posts tagged ‘ದಲಿತ’

29
ಡಿಸೆ

ಬಂಗುಡೆ ಫ್ರೈ ಮತ್ತು ಭಗವದ್ಗೀತೆ

– ರೋಹಿತ್ ಚಕ್ರತೀರ್ಥ

ದೇವನೂರು ಮಹಾದೇವವರ್ಷಕ್ಕೋ ಎರಡು ವರ್ಷಕ್ಕೋ ಒಂದು – ಎರಡಲ್ಲ, ಒಂದೇ – ಸಿನೆಮಾ ಕೊಡುತ್ತಿದ್ದ ಹಿಂದಿಯ ರಾಜ್‍ಕುಮಾರ್ ಮೇಲೆ, ನನ್ನ ತಂದೆಗೆ ಕುತೂಹಲ, ಪ್ರೀತಿ, ಹುಚ್ಚು ಅಭಿಮಾನ ಇದ್ದವು. ಹಾಗೆಯೇ, ಬಹುಕಾಲ ಮೌನವಾಗಿದ್ದು ವರ್ಷಕ್ಕೆ ಒಂದೆರಡು ಮಾತು, ಒಂದೆರಡು ಹಾಳೆ ಸಾಹಿತ್ಯ ಬರೆಯುವವರ ಬಗ್ಗೆ ಹೆಚ್ಚಾಗಿ ಜನರಿಗೆ ಕುತೂಹಲ ಇರುತ್ತದೆ. ಇಂಥವರು ಕಾವಿ ತೊಟ್ಟರೆ, ಮಾತಾಡದೆ ಕೂತರೂ ಜಗತ್ಪ್ರಸಿದ್ಧರಾಗುತ್ತಾರೆ! ಇಂತಹ ಮಿತಾಕ್ಷರಿಗಳ ಪಂಥಕ್ಕೆ ಸೇರಿದ ಕನ್ನಡದ ಸಾಹಿತಿ ದೇವನೂರ ಮಹಾದೇವ, ವರ್ಷಕ್ಕೆ ಒಂದು ಭಾಷಣ ಮಾಡಿದರೆ, ಅದರ ಹಿಂದೆ ಹಲವು ದಿನಗಳ ಚಿಂತನೆ ಇರುತ್ತದೆ; ಇರಬೇಕು ಎಂದು ನಾವೆಲ್ಲ ಬಯಸುತ್ತೇವೆ. ಹಾಗೆಯೇ, ಅವರ ಐನೂರು ಪದಗಳೊಂದು ಲೇಖನ ಪ್ರಕಟವಾದರೂ, ಅದರಲ್ಲೇನೋ ಗಹನವಾದ ಸೂತ್ರರೂಪೀ ಸಂಗತಿಗಳು ಅಡಕವಾಗಿರಬಹುದು ಎಂಬ ಪೂರ್ವಗ್ರಹದಿಂದ ಎರಡೆರಡು ಬಾರಿ ಓದಿನೋಡುವ ಸಾಹಿತ್ಯಪ್ರೇಮಿಗಳಿದ್ದಾರೆ. ಹಾಗಾಗಿ ದಿನಕ್ಕೆ ಸಾವಿರ ಪದಗಳನ್ನು ಕುಟ್ಟುವ ನನ್ನಂಥ ಕೈಬಡುಕರಿಗಿಂತ ದೇವನೂರರ ಮೇಲೆ ಹುಟ್ಟುವ ನಿರೀಕ್ಷೆ ದೊಡ್ಡದು. ಅದನ್ನು ನಿಜ ಮಾಡುವ ಆನೆಯಂಥ ಹೊಣೆಗಾರಿಕೆಯೂ ಅವರ ಹೆಗಲ ಮೇಲೆ ಕೂತಿರುತ್ತದೆ.

ಈ ವರ್ಷ, ನಿಯಮ ತಪ್ಪಿ, ದೇವನೂರ ಎರಡು ಸಲ ಮಾತಾಡಿದರು. ಒಮ್ಮೆ, ಪ್ರಶಸ್ತಿ ಯಾಕೆ ವಾಪಸು ಮಾಡುತ್ತಿದ್ದೇನೆ ಎಂದು ಹೇಳಲು ಪತ್ರ ಬರೆಯುವುದರ ಮೂಲಕ. ಇನ್ನೊಮ್ಮೆ, ಮಂಗಳೂರಲ್ಲಿ ನಡೆದ – ಸಾಹಿತ್ಯವೊಂದು ಬಿಟ್ಟು ಮಿಕ್ಕೆಲ್ಲ ಅಪಸವ್ಯಗಳೂ ಇದ್ದ – ಒಂದು ಸಾಹಿತ್ಯ ಸಮ್ಮೇಳನದಲ್ಲಿ ಅಧ್ಯಕ್ಷಭಾಷಣ ಮಾಡುವ ಮೂಲಕ. ಪ್ರಶಸ್ತಿ ವಾಪಸು ಪ್ರಹಸನದ ನಿಜಬಣ್ಣ ಲೋಕಕ್ಕೇ ಗೊತ್ತಾಗಿರುವುದರಿಂದ, ಆ ಸಂದರ್ಭದ ಮಾತುಗಳನ್ನು ಮತ್ತೆ ಕೆದಕುವುದು ಬೇಡ. ನಕಲು ಸಮ್ಮೇಳನದಲ್ಲಿ ಅವರು ಏನು ಹೇಳಿದರು ಎನ್ನುವುದನ್ನು ಮಾತ್ರ ಈ ಲೇಖನದ ಸೀಮಿತ ಚೌಕಟ್ಟಿಗೆ ಎತ್ತಿಕೊಂಡಿದ್ದೇನೆ.

**
ಇತ್ತೀಚೆಗೆ ರಾಮಾಯಣ, ಮಹಾಭಾರತಗಳ ಕಡೆ ನಮ್ಮ ಸಮಕಾಲೀನ ಲೇಖಕರು ಮತ್ತೆಮತ್ತೆ ಹೊರಳುವ ಪ್ರವೃತ್ತಿ ಹೆಚ್ಚಾಗುತ್ತಿದೆ. ಚರ್ಚೆಯ ವಿಷಯವಾಗಿರುವುದರಿಂದ ದೇವನೂರ ಕೂಡ ಆ ಎರಡು ಗ್ರಂಥಗಳನ್ನು ಎತ್ತಿಕೊಂಡಿದ್ದಾರೆ. ಮಿದುಳಿಲ್ಲದ ಧ್ವನಿವರ್ಧಕದಂತೆ ತನ್ನನ್ನು ಬಿಂಬಿಸಿಕೊಂಡು ಪ್ರಚಾರ ಪಡೆದ ಭಗವಾನ್‍ಗಿಂತ ಭಿನ್ನ ಧಾಟಿಯಲ್ಲಿ ಮಾತಾಡಿದ್ದರಿಂದ ದೇವನೂರರ ಮಾತುಗಳು – ಒಪ್ಪುವ ಒಪ್ಪದಿರುವ ಪ್ರಶ್ನೆಗಿಂತ, ಕನಿಷ್ಠ ವಿಶ್ಲೇಷಣೆಗೊಳಪಡಿಸಲು ಅರ್ಹವಾಗಿವೆ. ದೇವನೂರ ಬಹುಶಃ ಮೂರು ಪೂರ್ವಗ್ರಹಗಳಿಂದ ತನ್ನ ಮಾತು-ಚಿಂತನೆಗಳನ್ನು ಶುರುಮಾಡುತ್ತಾರೆ ಎಂದು ಕಾಣುತ್ತದೆ. ಒಂದು – ಭಾರತದಲ್ಲಿ ಇಂದಿಗೂ ದೇವಸ್ಥಾನಗಳಿಗೆ ಪ್ರವೇಶ ಪಡೆಯುವುದೇ ದಲಿತರ ದೊಡ್ಡ ಸವಾಲಾಗಿದೆ. ಎರಡು – ನಮ್ಮ ಪ್ರಾಚೀನ ಗ್ರಂಥಗಳಲ್ಲಿ ಹಲವು ಭಾಗಗಳು ಸರಿಯಿಲ್ಲ, ಮತ್ತು ಈ ಗ್ರಂಥಗಳೇ ಇಂದಿಗೂ ನಮ್ಮನ್ನು ಸಾಮಾಜಿಕವಾಗಿ ಬೌದ್ಧಿಕವಾಗಿ ಆಳುತ್ತಿವೆ. ಮೂರು – ಜಾತಿ ವರ್ಗ ಕಳೆದು ಎಲ್ಲವೂ ಸಮಾನವಾದರೆ ದೇಶದಲ್ಲಿ ಸರ್ವೋದಯವಾಗುತ್ತದೆ. ನಾನು ನನ್ನ ಸುತ್ತಲಿನ ಜಗತ್ತಿನಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನಷ್ಟೆ ಹಿನ್ನೆಲೆಯಾಗಿಟ್ಟುಕೊಂಡು ದೇವನೂರರ ಮಾತುಗಳ ವಿಶ್ಲೇಷಣೆ ನಡೆಸುವುದು ಸಾಧ್ಯ. ಹಾಗಾಗಿ ಮುಂದಿನ ಎಲ್ಲ ಮಾತುಗಳನ್ನು ಓದುಗರು ತಂತಮ್ಮ ಜಗತ್ತಿನ ಹಿನ್ನೆಲೆಯಲ್ಲಿಟ್ಟು ತಾಳೆ ನೋಡುವುದಕ್ಕೆ ಸ್ವತಂತ್ರರು.
ಮತ್ತಷ್ಟು ಓದು »

18
ಆಗಸ್ಟ್

ಬುದ್ಧಿಜೀವಿಗಳ ಬ್ರಾಹ್ಮಣ ಥಿಯರಿಗಳು ಬರುತ್ತಿರುವುದೆಲ್ಲಿಂದ? – ಭಾಗ ೨

– ರೋಹಿತ್ ಚಕ್ರತೀರ್ಥ

ಬುದ್ಧಿಜೀವಿಗಳ ಬ್ರಾಹ್ಮಣ ಥಿಯರಿಗಳು ಬರುತ್ತಿರುವುದೆಲ್ಲಿಂದ? – ಭಾಗ ೧

ಬ್ರಾಹ್ಮಣಎಲ್ಲ ವಿಷಯಗಳಲ್ಲೂ, ಇಪ್ಪತ್ತೊಂದನೆ ಶತಮಾನದ ಸಂದರ್ಭವನ್ನು ನೋಡಿ ಎನ್ನುವ ನಾವು ಬ್ರಾಹ್ಮಣ ಮತ್ತು ಉಳಿದ ಜಾತಿಗಳ ನಡುವಿನ ಸಂಬಂಧಗಳ ವಿಷಯ ಬಂದಾಗ ಮಾತ್ರ ಇತಿಹಾಸಕ್ಕೆ ಹಾರುವುದು ಯಾಕೆ ಎನ್ನುವುದು ಸದ್ಯದ ಯುಗದಲ್ಲಿ ಬದುಕುತ್ತಿರುವ ನನ್ನಂಥವರಿಗೆ ಬಿಡಿಸಲಾರದ ಒಗಟಾಗಿದೆ. ಇಪ್ಪತ್ತೊಂದನೆ ಶತಮಾನದ ಬ್ರಾಹ್ಮಣ, ಉಳಿದ ಜಾತಿ-ಪಂಥದ ಜನರಿಗಿಂತ ಯಾವ ವಿಷಯದಲ್ಲೂ ಹೆಚ್ಚಿನ ಸವಲತ್ತುಗಳನ್ನು ಪಡೆದು ಹುಟ್ಟಿಬಂದ ಸೂಪರ್‍ಮ್ಯಾನ್ ಅಲ್ಲ. ನಿಜಕ್ಕಾದರೆ, ಅವನು ನೂರಾರು ಹರಿತಖಡ್ಗಗಳನ್ನು “ಬ್ರಾಹ್ಮಣ”ನೆಂಬ ತನ್ನ ಮೊಂಡುಗತ್ತಿಯಿಂದ ಎದುರಿಸಬೇಕಾಗಿದೆ. ತನ್ನ ಬಾಲ್ಯ, ಶಾಲೆ, ಕಾಲೇಜುಗಳಲ್ಲಿ ಒಂದು ದಿನವೂ ಜಾತೀಯತೆ ಆಚರಿಸದ ಬ್ರಾಹ್ಮಣನಿಗೆ ಕೂಡ ಅಂಥದೊಂದು ವಿಷಸರ್ಪದ ಮೊದಲ ಕಡಿತದ ಅನುಭವವಾಗುವುದು, ಕಾಲೇಜಿನ ಫೀಸ್ ಕಟ್ಟುವಾಗ. ಪ್ರವಾಸಿಸ್ಥಳಗಳಲ್ಲಿ, “ಭಾರತೀಯರಿಗೆ 5 ರುಪಾಯಿ ಟಿಕೇಟು; ವಿದೇಶಿಯರಿಗೆ 50 ರುಪಾಯಿ” ಎಂದು ಬೋರ್ಡ್ ಬರೆದಿರುವಂತೆ, ಬೇರೆ ಜಾತಿಯವನು ಕಟ್ಟಿದ ಫೀಸಿಗೆ ಎರಡೋ ಮೂರೋ ಸೊನ್ನೆ ಸೇರಿಸಿ ವಿಧಿಸುವ ದೊಡ್ಡಮೊತ್ತವನ್ನು ತಾನು ಕಟ್ಟಬೇಕಾಗಿ ಬಂದಾಗ, ಅವನಿಗೆ ಜಾತೀಯತೆಯ ಮೊದಲ ಮುಖದರ್ಶನವಾಗುತ್ತದೆ. ಆದರೆ, ಈ ಸರಕಾರೀ ಜಾತೀಯತೆಯ ಬಗ್ಗೆ ಎಲ್ಲಾದರೂ ಆತ ಪ್ರತಿಭಟಿಸಲು ಅವಕಾಶ ಇದೆಯೆ?

ಭಾರತೀಯ ವಿಜ್ಞಾನ ಸಂಸ್ಥೆಯಂತಹ ಸರಕಾರೀ ಸಂಸ್ಥೆಗಳಲ್ಲಿ, ಪದವಿ/ಪಿಎಚ್‍ಡಿ ಕೋರ್ಸುಗಳ ಸಂದರ್ಶನಕ್ಕೆ ಆಯ್ಕೆಯಾದ ಕೆಲವೊಂದು ಜಾತಿಯ ವಿದ್ಯಾರ್ಥಿಗಳು ಸಂದರ್ಶನಕ್ಕೆ ಎರಡು ದಿನ ಮೊದಲು ಸಂಸ್ಥೆಗೆ ಬಂದು, “ತರಬೇತಿ” ಪಡೆಯುವ ಅವಕಾಶ ಇದೆ. ಪ್ರತಿಭೆಯೊಂದೇ ಮಾನದಂಡವೆಂದು ಪರಿಗಣಿಸಬೇಕಿದ್ದ ಇಂತಹ ಉನ್ನತ ಸಂಸ್ಥೆಗಳಲ್ಲಿ ಕಾಣಸಿಗುವ ಈ ಜಾತೀಯತೆಯನ್ನು ಬ್ರಾಹ್ಮಣವಟು ಎಂದಾದರೂ ಪ್ರಶ್ನೆ ಮಾಡಿದ್ದಿದೆಯೆ? ಇನ್ನು ಉದ್ಯೋಗದ ವಿಷಯಕ್ಕೆ ಬಂದಾಗ ನಮ್ಮ ದೇಶದಲ್ಲಿ ನಡೆಯುವ “ಸರಕಾರೀ ಜಾತೀಯತೆ”ಯ ಅಂದಾಜು ಮಾಡುವುದು ಯಾವ ಬ್ರಹ್ಮನಿಗೂ ಸಾಧ್ಯವಿಲ್ಲದ ಮಾತು. ಮೀಸಲಾತಿ, ವಿಶೇಷ ಸವಲತ್ತು, ಸಬಲೀಕರಣಗಳ ಹೆಸರಿನಲ್ಲಿ ಹುಟ್ಟುಹಾಕಿದ ಈ ಯಾವ ವ್ಯವಸ್ಥೆಯನ್ನೂ ನಾವು ಜಾತೀಯತೆ ಎಂದು ಪರಿಗಣಿಸದೇ ಇರುವಾಗ, ಶತಶತಮಾನಗಳ ಹಿಂದೆ ಬ್ರಾಹ್ಮಣ ಮಾಡಿದ್ದಾನೆನ್ನಲಾದ ತಾರತಮ್ಯ ಮಾತ್ರ “ಜಾತೀಯತೆ” ಆಗುವುದು ಹೇಗೆ? ನನಗಂತೂ ಗೊತ್ತಿಲ್ಲದ ರಹಸ್ಯ ಇದು!
ಮತ್ತಷ್ಟು ಓದು »

17
ಆಗಸ್ಟ್

ಬುದ್ಧಿಜೀವಿಗಳ ಬ್ರಾಹ್ಮಣ ಥಿಯರಿಗಳು ಬರುತ್ತಿರುವುದೆಲ್ಲಿಂದ? – ಭಾಗ ೧

– ರೋಹಿತ್ ಚಕ್ರತೀರ್ಥ

ಬ್ರಾಹ್ಮಣ!

ಬ್ರಾಹ್ಮಣಕಳೆದ ಎರಡೂವರೆ ಸಾವಿರ ವರ್ಷಗಳಲ್ಲಿ ಇತ್ತೋ ಇಲ್ಲವೋ ಗೊತ್ತಿಲ್ಲ; ಆದರೆ ಕಳೆದ ಹತ್ತು-ಹದಿನೈದು ವರ್ಷಗಳಿಂದ ಇದೊಂದು ಶಬ್ದ ಬಹಳ ಶಬ್ದ ಮಾಡುತ್ತಿದೆ! ಸೊಳ್ಳೆ ಕಡಿದು ಕಾಲು ಕೆಂಪಾಯಿತು ಎನ್ನುವುದರಿಂದ ಹಿಡಿದು ಗ್ರೀಸ್ ದೇಶದ ದಿವಾಳಿತನದವರೆಗೆ ಈ ಜಗತ್ತಿನಲ್ಲಿ ನಡೆದುಹೋದ ಯಾವ ಸಮಸ್ಯೆಯ ಬಗ್ಗೆ ನಮ್ಮ ಬುದ್ಧಿಜೀವಿಗಳನ್ನು ಕೇಳಿದರೂ, ಅವರ ಉತ್ತರ ಶುರುವಾಗುವುದು ಹೀಗೆ: “ಹಸಿವು! ಈ ದೇಶದ ಶೋಷಿತ ಸಮುದಾಯದ ಹಸಿವನ್ನು ತುಳಿದು ಅವರ ಬೆವರ ಹನಿಗಳ ಮೇಲೆ ಅರಮನೆ ಕಟ್ಟಿಕೊಂಡವರು ವೈದಿಕರು. ಇವರ ಉದರದ ಉರಿ ಇಂದುನಿನ್ನೆಯದಲ್ಲ! ಆಳದಲ್ಲಿ ಅಡಗಿ ಸಿಂಬೆ ಸುತ್ತಿಕೊಂಡು ಮಲಗಿರುವ ಈ ಅಸಹನೆಯ ದಂತಗಳಲ್ಲಿ ಪುರಾತನ ಕಾಲದ ವಿಷವಿದೆ. ನೊಂದವನ, ಹಸಿದವನ, ಕೆಳಗೆ ಬಿದ್ದು ಧೂಳಾದವನ ಗೋಳಿಗೆ ಕರಗದೆ ನುಲಿಯದೆ ಸೆಟೆದು ಬಿದ್ದ ಆರ್ಯಪುತ್ರರ ಕರುಳುಗಳಲ್ಲಿ ಕ್ರೌರ್ಯವಿದೆ…” ಈ ಮಾತುಗಳನ್ನು ಹಾಗೇ ಒಂದು ಸಿನೆಮಾದೃಶ್ಯದಂತೆ ಕಲ್ಪಿಸಿನೋಡಿ. ನಿಮಗೆ ಕಾಣುವುದೇನು? ಒಬ್ಬ ಬಳಲಿ ಬೆಂಡಾದ, ಕಡಿದುಹಾಕಿದ ಬಾಳೆಗಿಡದಂತೆ ನೆಲಕ್ಕೆ ಚೆಲ್ಲಿಬಿದ್ದ “ಶೋಷಿತ” ಮತ್ತು ಅವನನ್ನು ಹಿಗ್ಗಾಮುಗ್ಗಾ ಥಳಿಸುವ; ಒದೆಯುವ; ತುಚ್ಛಮಾತುಗಳಿಂದ ಹೀಯಾಳಿಸುವ ರಾಕ್ಷಸರೂಪೀ ಘೋರ “ಆರ್ಯಪುತ್ರ”! ಆ ದಲಿತ ಜೀವ ಉಳಿಸೆಂದು ದಯನೀಯವಾಗಿ ಬೇಡಿಕೊಳ್ಳುತ್ತಿದ್ದಾನೆ; ಆದರೆ ಅವನ ಜೀವ ತೆಗೆದೇ ಸಿದ್ಧ ಎಂದು ಶಪಥ ಹಾಕಿದಂತೆ ಈ ಬ್ರಾಹ್ಮಣ ಅವನಿಗೆ ಬಾರಿಸುತ್ತಿದ್ದಾನೆ! ಜನಿವಾರದ ಈ ಹಾರುವನಿಗೆ ಹುಲಿಗಿರುವಂತಹ ವಿಕಾರ ಕೋರೆಹಲ್ಲುಗಳು! ಅದರಂಚಿನಿಂದ ಕೀವಿನಂತೆ ಒಸರುತ್ತಿರುವ ಅಸಹನೆಯ ವಿಷ! ಅಬ್ಬಾ!

ಮತ್ತಷ್ಟು ಓದು »

29
ಏಪ್ರಿಲ್

ನಾಡು-ನುಡಿ : ಮರುಚಿಂತನೆ – ಹಿಂದೂ ಶಬ್ದಕ್ಕೆ ನಕಾರಾತ್ಮಕ ಅರ್ಥವೇಕೆ?

– ಪ್ರೊ.ರಾಜಾರಾಮ್ ಹೆಗಡೆ
ಪ್ರಾಧ್ಯಾಪಕರು, ಇತಿಹಾಸ ಮತ್ತು ಪ್ರಾಕ್ತನಶಾಸ್ತ್ರ ವಿಭಾಗ, ಕುವೆಂಪು ವಿ.ವಿ

ಹಿಂದೂದಲಿತರನ್ನು ಹಿಂದೂ ಸಮಾಜದ ಒಳಗೆ ತರಬೇಕೆಂಬ ಪ್ರತಿಪಾದನೆ ಕಳೆದ ನೂರಾರು ವರ್ಷಗಳಿಂದ ನಡೆದು ಬಂದಿದೆ. ಹಿಂದೂ ಸಮಾಜದ ಐಕ್ಯತೆಯನ್ನು ಸಾಧಿಸಬೇಕೆನ್ನುವ ರಾಷ್ಟ್ರೀಯ ನಾಯಕರೆಲ್ಲರೂ ಇಂಥ ಕಾರ್ಯಕ್ರಮಗಳ ಮಹತ್ವವನ್ನು ಒಪ್ಪಿದ್ದಾರೆ. ಮತ್ತೊಂದೆಡೆ ಈ ಕಾರ್ಯಕ್ರಮವನ್ನು ಒಂದು ಹುನ್ನಾರವೆಂಬಂತೆ ನೋಡುವ ಹಾಗೂ ಆ ಕಾರಣದಿಂದ ಅದನ್ನು ತಿರಸ್ಕರಿಸುವ ಪ್ರಯತ್ನಗಳೂ ನೂರಾರು ವರ್ಷಗಳಿಂದ ನಡೆದಿವೆ. ಹುನ್ನಾರವೇಕೆಂದರೆ, ಜಾತಿ ವ್ಯವಸ್ಥೆಯ ಹಿಂದೂ ಸಮಾಜದೊಳಗೆ ದಲಿತರನ್ನು ಮತ್ತೆ ಸೇರಿಸಿ ಶೋಷಿಸುವ ಉದ್ದೇಶದಿಂದ ಸಂಪ್ರದಾಯಸ್ಥ ಹಿಂದೂಗಳು ಈ ಕಾರ್ಯಕ್ರಮವನ್ನು ಹಾಕಿಕೊಂಡಿದ್ದಾರೆ ಎಂಬ ಆರೋಪ. ಆದರೆ ಜಾತಿ ವ್ಯವಸ್ಥೆಯು ಹಿಂದೂ ಸಮಾಜದ ಲಕ್ಷಣವಾದರೆ, ಹಾಗೂ ದಲಿತರು ಹಿಂದೂ ಸಮಾಜದೊಳಗೆ ಇಲ್ಲ ಅಂತಾದರೆ ಅವರು ಇದುವರೆಗೆ ಜಾತಿ ವ್ಯವಸ್ಥೆಗೆ ಒಳಪಟ್ಟಿಲ್ಲ ಎಂದು ಇಂಗಿತವೆ? ಅಥವಾ ಜಾತಿವ್ಯವಸ್ಥೆಯ ಹೊರಗಿದ್ದೂ ಅವರನ್ನು ಸಾವಿರಾರು ವರ್ಷಗಳ ವರೆಗೆ ಶೋಷಿಸಲು ಹಿಂದೂಗಳಿಗೆ ಸಾಧ್ಯವಾಗಿದ್ದೇ ಹೌದಾದಲ್ಲಿ ಆ ಕೆಲಸವನ್ನೇ ಮಾಡಲು ಹಿಂದೂ ಸಮಾಜದೊಳಗೆ ಅವರನ್ನು ಹೊಸತಾಗಿ ಸೇರಿಸಿಕೊಳ್ಳುವ ಅಗತ್ಯವೇಕೆ? ಒಟ್ಟಿನಲ್ಲಿ ಇದು ಒಂದು ಒಗಟಾಗಿ ಬಿಡುತ್ತದೆ.

ಈ ಒಗಟು ಏಕೆ ಹುಟ್ಟುತ್ತದೆಯೆಂದರೆ ನಮ್ಮ ಸಂಸ್ಕೃತಿಯ ಇತಿಹಾಸವನ್ನು ಕಟ್ಟುವಾಗ ಪರಸ್ಪರ ಸುಸಂಬದ್ಧವಲ್ಲದ ಅನೇಕ ವಿವರಗಳನ್ನು ಒಟ್ಟಿಗೆ ತರಲಾಗಿದೆ.  ಅವುಗಳಲ್ಲಿ ಒಂದು ಹಿಂದೂಯಿಸಂ ಎಂಬ ರಿಲಿಜನ್ನಿನ ಕಲ್ಪನೆ, ಮತ್ತೊಂದು ಆರ್ಯರ ಆಕ್ರಮಣದ ಕಥೆ. ಭಾರತದಲ್ಲಿ ಹಿಂದೂಯಿಸಂ ಎಂಬ ರಿಲಿಜನ್ನಿದೆ, ಅದಕ್ಕೆ ಬ್ರಾಹ್ಮಣರು ಪುರೋಹಿತಶಾಹಿಗಳು, ಇದರಲ್ಲಿ ಮೂರ್ತಿಪೂಜೆ ಜಾತಿ ವ್ಯವಸ್ಥೆಗಳಂಥ ಅನಿಷ್ಟ ಆಚರಣೆಗಳಿವೆ ಎಂಬ ಕಥೆ 19ನೆಯ ಶತಮಾನದಲ್ಲೇ ಗಟ್ಟಿಯಾಯಿತು. ಪಾಶ್ಚಾತ್ಯರು ಕ್ಯಾಥೋಲಿಕ್ ಚರ್ಚಿನಂತೇ ಇದೊಂದು ಭ್ರಷ್ಟವಾದ ರಿಲಿಜನ್ನು ಎಂದು ಭಾವಿಸಿದ್ದರು. ಆ ಸಂದರ್ಭದಲ್ಲಿ ರಾಜಾ ರಾಮಮೋಹನರಾಯರಂಥವರು ಹಿಂದೂಯಿಸಂ ಮೂಲತಃ ಉದಾತ್ತವಾದ ರಿಲಿಜನ್ನಾಗಿದೆ ಎಂಬ ನಿರೂಪಣೆಯನ್ನು ಗಟ್ಟಿಮಾಡತೊಡಗಿದರು.ಈ ನಿರೂಪಣೆಗೆ ಪ್ರೊಟೆಸ್ಟಾಂಟ್ ಕ್ರಿಶ್ಚಿಯಾನಿಟಿಯ ಏಕದೇವತಾ ತತ್ವವೇ ಆಧಾರವಾಯಿತು.ಅಂದರೆ ಹಿಂದೂಯಿಸಂನ ಶುದ್ಧ ರೂಪವು ವೇದಾಂತದಲ್ಲಿ ಇದೆ ಎಂದಾಯಿತು.

ಮತ್ತಷ್ಟು ಓದು »

12
ಫೆಬ್ರ

ನಾಡು-ನುಡಿ:ಮರುಚಿಂತನೆ – “ಜಾತಿ ಹಾಗೂ ಅಸ್ಮಿತೆ ರಾಜಕೀಯ” ಭಾಗ ೨

– ಪ್ರೊ. ಜೆ.ಎಸ್. ಸದಾನಂದ, ಕುವೆಂಪು ವಿಶ್ವವಿದ್ಯಾನಿಲಯ

Social Science Column Logoನಾಡು-ನುಡಿ:ಮರುಚಿಂತನೆ – “ಜಾತಿ ಹಾಗೂ ಅಸ್ಮಿತೆ ರಾಜಕೀಯ” ಭಾಗ ೧

ನವ ಸಾಮಾಜಿಕ ಚಳುವಳಿ ಸಿದ್ಧಾಂತಗಳು:
1960 ಹಾಗೂ 70ರ ದಶಕದಲ್ಲಿ ಪ್ರಾರಂಭವಾದ ನವ ಸಾಮಾಜಿಕ ಚಳುವಳಿ ಸಿದ್ಧಾಂತಗಳು ಮಾರ್ಕ್ಸ್ ವಾದಿ ನಿಲುವುಗಳಿಗಿಂತ ಭಿನ್ನವಾದ ನಿಲುವನ್ನು ಮುಂದಿಡಲು ಯಶಸ್ವಿಯಾದವು. ವರ್ಗಾದಾರಿತವಲ್ಲದ ಅಸ್ಮಿತೆಯ ರಾಜಕೀಯ ಕೇವಲ ಸಾಂಕೇತಿಕ ಎನ್ನುವ ಮಾರ್ಕ್ಸ್ ವಾದಿ ನಿಲುವನ್ನು ಇವು ಅಲ್ಲಗಳೆಯುತ್ತವೆ. ಈ ಸಿದ್ಧಾಂತವು ಅಸ್ಮಿತೆ ರಾಜಕೀಯವನ್ನು ಒಂದು ವಿಶಿಷ್ಟ ಬಗೆಯ ರಾಜಕೀಯ ಎಂದೇ ಪ್ರತಿಪಾದಿಸುತ್ತದೆ. ಅಸ್ಮಿತೆಯಾದಾರಿತ ಚಳುವಳಿಗಳನ್ನು ಆಧುನಿಕತೆಯ ಪರಿಣಾಮವಾಗಿ ಆರ್ಥಿಕ ಮತ್ತು ಸಾಮಾಜಿಕ ವಲಯದ ಉನ್ನತ ಸ್ಥರದಲ್ಲಿ ಆದ ರಾಚನಿಕ ಬದಲಾವಣೆ ಅಸ್ಮಿತೆ ರಾಜಕೀಯವನ್ನು ಹುಟ್ಟು ಹಾಕಿದೆ ಮತ್ತು ಇದೊಂದು ಐತಿಹಾಸಿಕವಾದ ಸಾಮೂಹಿಕ ಪ್ರತಿಕ್ರಿಯೆ ಎಂದು ಈ ಸಿದ್ಧಾಂತದ ಪ್ರತಿಪಾದನೆಯಾಗಿದೆ. ಕೆಲವು ವಿದ್ವಾಂಸರು ಹೇಳುವಂತೆ ಅಸ್ಮಿತೆ ರಾಜಕೀಯವು ಕೈಗಾರಿಕೋತ್ತರ ಸಮಾಜದಲ್ಲಾಗುತ್ತಿರುವ ಒಂದು ಬಗೆಯ ಸ್ಥಿತ್ಯಂತರ (ಟೌರಿನ್ 1981).  ಹಬರ್ಮಾಸ್ರವರ ಅಭಿಪ್ರಾಯದಲ್ಲಿ ಅಸ್ಮಿತೆ ಚಳುವಳಿಗಳು ಪ್ರಭುತ್ವದ ನಿಯಂತ್ರಣ ಹಾಗೂ ಅದರ ನಿರ್ಣಯಗಳ ಒತ್ತಡಕ್ಕೆ ಹೆಚ್ಚು ಹೆಚ್ಚಾಗಿ ಒಳಗಾಗುತ್ತಿರುವ ಸಮುದಾಯಗಳು ಅಂತಹ ಹಿಡಿತದಿಂದ ತಪ್ಪಿಸಿಕೊಳ್ಳುವ ಪ್ರಯತ್ನದ ಫಲವಾಗಿವೆ (ಹಬರ್ಮಾಸ್ 1985).

ಮತ್ತಷ್ಟು ಓದು »

6
ಫೆಬ್ರ

ನಾಡು-ನುಡಿ:ಮರುಚಿಂತನೆ – “ಜಾತಿ ಹಾಗೂ ಅಸ್ಮಿತೆ ರಾಜಕೀಯ” ಭಾಗ ೧

– ಪ್ರೊ. ಜೆ.ಎಸ್. ಸದಾನಂದ, ಕುವೆಂಪು ವಿಶ್ವವಿದ್ಯಾನಿಲಯ

Social Science Column Logoರಾಜಕೀಯ ಸಿದ್ಧಾಂತದಲ್ಲಿ ಅಸ್ಮಿತೆ ರಾಜಕೀಯದ ಪರಿಕಲ್ಪನೆ ಪ್ರಬಲವಾಗಿದ್ದು 20ನೇ ಶತಮಾನದ ಉತ್ತರಾರ್ಧದಲ್ಲಿ. ತಮ್ಮ ಅಸ್ತಿತ್ವ ಸಂಪೂರ್ಣ ಅವಗಣನೆಗೆ ಒಳಗಾಗಿದೆ ಮತ್ತು ಆ ಕಾರಣದಿಂದ ತಮ್ಮನ್ನು ಪ್ರಾತಿನಿಧ್ಯದಿಂದ ವಂಚಿತರನ್ನಾಗಿಸಿ ರಾಜಕೀಯ ಮುಖ್ಯವಾಹಿನಿಯಿಂದ ದೂರವಿರಸಲಾಗಿದೆ ಎನ್ನುವ ಭಾವನೆ ಬೆಳೆಸಿಕೊಂಡ ಒಂದು (ಸಾಮಾಜಿಕ/ಸಾಂಸ್ಕೃತಿಕ) ಗುಂಪು ರಾಜಕೀಯ ಸಂಚಲನೆಗೆ ತೊಡಗುವ ಪ್ರಕ್ರಿಯೆಯನ್ನು ಅಸ್ಮಿತೆ ರಾಜಕೀಯ ಎಂದು ಕರೆಯಲಾಗುತ್ತದೆ. ಸಾರ್ವತ್ರಿಕ ಒಳಿತು ಅಸ್ಮಿತೆ ರಾಜಕೀಯದ ಗುರಿಯಾಗಿರುವುದಿಲ್ಲ ಮತ್ತು ಅಂತಹ ರಾಜಕೀಯ ಹೋರಾಟ ಯಾವುದೇ ರಾಜಕೀಯ ಪಕ್ಷಕ್ಕೆ ಸೀಮಿತವಾಗಿರುವುದಿಲ್ಲ. ಮುಖ್ಯವಾಹಿನಿಯಿಂದ ಬದಿಗೆ ಸರಿಸಲ್ಪಟ್ಟ ತನ್ನನ್ನು ಮುಖ್ಯವಾಹಿನಿಯೊಂದಿಗೆ ಗುರುತಿಸಿಕೊಳ್ಳುವಂತೆ ಮಾಡುವುದು ಒಂದು ಗುಂಪಿನ ಅಸ್ಮಿತೆ ರಾಜಕೀಯದ ಮುಖ್ಯ ಉದ್ದೇಶವಾಗಿರುತ್ತದೆ.

20ನೇ ಶತಮಾನದ ಉತ್ತರಾರ್ಧದಲ್ಲಿ ಅಮೇರಿಕಾ ದೇಶದಲ್ಲಿ ಪ್ರಾರಂಭವಾದ (ದ್ವಿತೀಯ ಹಂತದ) ಸ್ತ್ರೀವಾದೀ ಚಳುವಳಿ, ಕರಿಯರ ನಾಗರೀಕ ಹಕ್ಕುಗಳ ಹೋರಾಟ, ಸಲಿಂಗಿಗಳು ತಮ್ಮ ಹಕ್ಕಿಗಳಿಗಾಗಿ ಮಾಡಿದ ಹೋರಾಟ ಮೊದಲಾದವುಗಳನ್ನು ಅಸ್ಮಿತೆ ರಾಜಕೀಯ ಎಂದು ಮೊತ್ತ ಮೊದಲ ಬಾರಿಗೆ ಗುರುತಿಸಲಾಯಿತು. ಈ ಎಲ್ಲಾ ಗುಂಪುಗಳು ತಮ್ಮ ವಿಶಿಷ್ಟ ಅಸ್ಮಿತೆಯನ್ನು ಗುರುತಿಸಿ ಗೌರವಿಸದೆ ಆ ಕಾರಣಕ್ಕಾಗಿ ತಾವು ಮುಖ್ಯವಾಹಿನಿಯಿಂದ ಬದಿಗೆ ಸರಿಸಲ್ಪಟ್ಟ ಪ್ರಕ್ರಿಯೆಯ ವಿರುದ್ಧ ಹೋರಾಟ ಪ್ರಾರಂಬಿಸಿದವು. ತಾವು ಸಾಮಾಜಿಕವಾಗಿ ರಾಜಕೀಯವಾಗಿ ತುಳಿತಕ್ಕೊಳಗಾಗಿದ್ದೇವೆ ಎನ್ನುವ ಭಾವನೆಯನ್ನು ಆಧರಿಸಿ ಅಸ್ಮಿತೆ ರಾಜಕೀಯದ ಸಂಘಟನೆಯು ತನ್ನ ಸ್ವರೂಪವನ್ನು ಪಡೆದುಕೊಳ್ಳುತ್ತದೆ. ಅಸ್ಮಿತೆ ರಾಜಕೀಯ ಎಂದು ಕರೆಯಲ್ಪಡುವ ರಾಜಕೀಯ/ಸಾಮಾಜಿಕ ಚಳುವಳಿಗಳ ವ್ಯಾಪ್ತಿ ವಿಶಾಲವಾದುದಾಗಿದೆ. ರಾಜಕೀಯ ಶಾಸ್ತ್ರದ ಅಧಯಯನಗಳಲ್ಲಿ ಅಸ್ಮಿತೆ ರಾಜಕೀಯಕ್ಕೆ ಸಂಬಂದಿಸಿದ ಬರವಣೆಗೆಗಳು ಪಾಶ್ಚಾತ್ಯ ಬಂಡವಾಳಿಶಾಹಿ ಪ್ರಜಾಪ್ರಭುತ್ವಗಳಿಗೆ ಸಂಬಂದಿಸಿರುತ್ತವೆ. ಬಂಡವಾಳಶಾಹಿ ವ್ಯವಸ್ಥೆಯ ಹಿಡಿತ ಪ್ರಬಲವಾಗುತ್ತಾ ಹೋದ ಹಾಗೆ ಪರಂಪರಾನುಗತವಾಗಿ ಬಂದ ಸಮುದಾಯಗಳು ತಮ್ಮ ಅಸ್ಮಿತೆಗಳನ್ನು ಕಳೆದುಕೊಳ್ಳುತ್ತಾ ಹೋಗಿ ಅಂತಹ ಸಮುದಾಯಗಳ ಸದಸ್ಯರಲ್ಲಿ ಪರಕೀಯತೆಯ ಭಾವನೆ ಹೆಚ್ಚಗುತ್ತಾ ಹೋದದ್ದರ ಪರಿಣಾಮದಿಂದಾಗಿ ಅಸ್ಮಿತೆ ರಾಜಕೀಯ ಹುಟ್ಟಿಕೊಂಡಿದೆ ಎಂದು ಕೆಲವರು ಭಾವಿಸುತ್ತಾರೆ.
ಮತ್ತಷ್ಟು ಓದು »

8
ಜುಲೈ

’ಹರಶರಣ ದೆನಿಲೋನ ಹಾದಿಯಲ್ಲಿ’ ಶಿವಪ್ರಕಾಶರ ಲೇಖನಕ್ಕೊಂದು ಪ್ರತಿಕ್ರಿಯೆ

-ಬಾಲಚಂದ್ರ ಭಟ್

Danielouಈ ಲೇಖನ ಪ್ರಜಾವಾಣಿಯಲ್ಲಿ ಪ್ರಕಟವಾದ ಎಚ್.ಎಸ್.ಶಿವಪ್ರಕಾಶರ ಜುಲೈ ೫ ರಂದು ಪ್ರಕಟವಾದ ’ಹರಶರಣ ದೆನಿಲೋನ ಹಾದಿಯಲ್ಲಿ’ ಬರಹಕ್ಕೆ ಪ್ರತಿಕ್ರಿಯೆ. ಬಹಳಷ್ಟು ವಿಷಯಗಳನ್ನು ಲೇಖನದಲ್ಲಿ ಉಲ್ಲೇಖಿಸಿದ್ದನ್ನು ಓದಿದ ನಂತರ ಸ್ವಲ್ಪ ಲೇಖನ ಏನು ಹೇಳಹೊರಟಿದೆಯೆಂಬುದರ ಬಗ್ಗೆ ಗೊಂದಲ ಮೂಡಿತು. ನಾನು ತಿಳಿದುಕೊಂಡಂತೆ ಲೇಖಕರು ಒಟ್ಟಾರೆಯಾಗಿ ಏನು ಹೇಳುತ್ತಾರೆಂದರೆ,

೧. ಆಲೆನ್ ದೆನಿಲೋ ನ ವಿಚಾರಗಳು, ಬಹುತೇಕ ಭಾರತೀಯ ಆಧ್ಯಾತ್ಮಿಕ ಪರಿಕಲ್ಪನೆಗಳಿಗಿಂತ(‘ಕನಿಕರ ಹುಟ್ಟಿಸುವ ಮುಖಮುದ್ರೆಯ ವೇದಾಂತ’) ಭಿನ್ನವಾಗಿತ್ತು, ಹಾಗೂ

೨. ಭಾರತದ ಆಧ್ಯಾತ್ಮಿಕ ವಿಷಯಗಳ ಬಗ್ಗೆ ’ಸ್ಟೀರಿಯೊಟೈಪಡ್ ಪೌರಾತ್ಯ’ ಚಿಂತನೆಗಳಿಂದ, ಹಾಗೂ ವಸಾಹತುಶಾಹಿ ಪರಿಕಲ್ಪನೆಗಳಿಂದ ಹೊರತಾಗಿದ್ದವು.

ಈ ಮೇಲಿನ ಎರಡು ಲೇಖಕರ ಅಭಿಪ್ರಾಯಗಳನ್ನು ಈ ಕೆಳಗಿನಂತೆ ವಿಮರ್ಶಿಸಿದ್ದೇನೆ.ಹಾಗೆಯೆ ಪ್ರಶ್ನೆಗಳ ಮೂಲಕ ನನ್ನಲ್ಲಿನ ಗೊಂದಲಗಳನ್ನ ಪ್ರಸ್ತಾಪಿಸಿದ್ದೇನೆ. ತಪ್ಪಿದ್ದಲ್ಲಿ ಸರಿಪಡಿಸಿ.

೧. ನಾನು ಹಾಗೆ ತಿಳಿದುಕೊಳ್ಳಲು ಕಾರಣ ಶಿವಪ್ರಕಾಶರು ಹೀಗೆ ಉಲ್ಲೇಖಿಸಿರುವದು: “ಕನಿಕರ ಹುಟ್ಟಿಸುವ ಮುಖಮುದ್ರೆಯ ವೇದಾಂತವನ್ನೇ ಭಾರತದ ಸಾರ ಸರ್ವಸ್ವವೆನ್ನುವರು ಆ ಕಾಲದ ಬಹಳ ಮಂದಿ ವಿದ್ವಾಂಸರು. ಅವರಲ್ಲಿ ಬಹುತೇಕ ಪ್ರಭೃತಿಗಳು ಭಾರತೀಯರೆಂದರೆ ಜೀವನೋತ್ಸಾಹ, ರಾಗರತಿಗಳಿಲ್ಲದ ಓಡುಗಾಲ ಯೋಗಿಗಳೆಂದು ಬಗೆದಿದ್ದರು. ಆದರೆ ವಿದ್ವತ್ತು, ರಸಗ್ರಾಹಿತ್ವ ಮತ್ತು ವ್ಯಕ್ತಿಗತ ಆಧ್ಯಾತ್ಮಿಕ ಸಾಧನೆಗಳ ತ್ರಿವೇಣಿಸಂಗಮವಾಗಿದ್ದ ದೆನಿಲೋ ಒತ್ತು ನೀಡಿದ್ದು ಭಾರತೀಯರ ರಸವಿಮುಖಿಯಾದ ಸಮಣಪಂಥೀಯ ಅಧ್ಯಾತ್ಮವಾದಕ್ಕಲ್ಲ, ಐಂದ್ರಿಕ ಜಗತ್ತಿಗೆ ತನ್ನನ್ನು ಪೂರ್ಣವಾಗಿ ತೆರೆದುಕೊಂಡು ಹಾಕುವ ಪ್ರತಿಯೊಂದು ತುತ್ತನ್ನೂ ಬಿಂದುವಾಗಿ ಮಾಡಿಕೊಂಡ ಶೈವ-ಶಾಕ್ತರ ಪೂರ್ಣಾದ್ವೈತಕ್ಕೆ.”

ಮತ್ತಷ್ಟು ಓದು »