ವಿಷಯದ ವಿವರಗಳಿಗೆ ದಾಟಿರಿ

Posts tagged ‘ದಾವೂದ್’

5
ನವೆಂ

ಗಡ್ಕರಿಯ ಅ”ವಿವೇಕ” ಮತ್ತು ಸಂಘದ “ಸ್ವಾಮಿ”ನಿಷ್ಠೆ…!

– ರಾಕೇಶ್ ಶೆಟ್ಟಿ

“ಇನ್ನೊಬ್ಬ ವಿವೇಕಾನಂದನಿದ್ದಿದ್ದರೆ ಅವನಿಗೆ ತಿಳಿಯುತಿತ್ತು – ಈ ವಿವೇಕಾನಂದ ಏನು ಮಾಡಿದ್ದಾನೆ ಎಂದು… ಇರಲಿ, ಕಾಲಾಂತರದಲ್ಲಿ ಮತ್ತೆಷ್ಟು ಮಂದಿ ವಿವೇಕಾನಂದರು ಉದಿಸಲಿರುವರೋ!” ಸ್ವಾಮೀಜಿ ದೇಹತ್ಯಾಗದ ದಿನ ತಮ್ಮಷ್ಟಕ್ಕೆ ತಾವೇ ಹೇಳಿಕೊಂಡ ಮಾತುಗಳಿವು. ನಿಜ ವಿವೇಕಾನಂದ ಮಾಡಿ ಹೋಗಿದ್ದೇನು? ಯಾರನ್ನಾದರು ಕೇಳಿ ನೋಡಿ, ತಟ್ಟನೆ “ಅವರು ಸರ್ವ ಧರ್ಮ ಸಮ್ಮೇಳನದಲ್ಲಿ ಹಿಂದೂ ಧರ್ಮದ ಶ್ರೇಷ್ಠತೆಯನ್ನು ಜಗತ್ತಿಗೆ ಸಾರಿದರು” ಅಂತಲೇ ಹೇಳುತ್ತಾರೆ..ಮುಂದೇನು ಮಾಡಿದ್ದರು ಅಂತ ಕೇಳುವಷ್ಟರಲ್ಲಿ ಮಾತು ತಡವರಿಸುತ್ತದೆ… ಬಹುಷಃ ಇದೆಲ್ಲವನ್ನೂ ಅರಿತೇ ಸ್ವಾಮೀಜಿ ಬಹುಷಃ ಮೇಲಿನ ಮಾತನ್ನು ಹೇಳಿದ್ದರು ಅನ್ನಿಸುತ್ತದೆ.

ಆದರೆ,ಮುಂದೊಂದು ದಿನ ತಾನು ಪ್ರತಿಪಾದಿಸುತ್ತಿರುವ “ರಾಷ್ಟ್ರೀಯತೆ(?)” ಅನ್ನುವ ಪದವನ್ನು ಹಿಡಿದು ಪಕ್ಷವೊಂದು ಉದಯಿಸಬಹುದು ಮತ್ತು ಅದಕ್ಕೊಬ್ಬ ಮೇಧಾವಿ ಅಧ್ಯಕ್ಷ ಬಂದು ಅವನು “ಸ್ವಾಮಿ ವಿವೇಕಾನಂದರ ಬುದ್ದಿಮತ್ತೆಯನ್ನು ಮುಂಬೈನ ಕಪ್ಪು ಜಗತ್ತಿನ ಕಳ್ಳನಾಗಿದ್ದವನ ಬುದ್ದಿ ಮತ್ತೆಗೆ ಸರಿಸಮ” ಅಂತೇಳಬಹುದು ಅನ್ನುವುದನ್ನು ಮಾತ್ರ ಊಹಿಸಿರಲಿಕ್ಕಿಲ್ಲ…!

ಮತ್ತಷ್ಟು ಓದು »