ಮೂರ್ತಿಗಳ ದ್ವಂದ್ವಗಳು ಮತ್ತು ದೇವನೂರರ ಬಾಂಬುಗಳು
– ಮು.ಅ ಶ್ರೀರಂಗ, ಬೆಂಗಳೂರು
ಸುಮಾರು ಹತ್ತು ದಿನಗಳಿಂದ ಈಚೆಗೆ ನಮ್ಮೀ ಸುವರ್ಣ ಕರ್ನಾಟಕವು ಅನಂತಮೂರ್ತಿಯವರ ಹೇಳಿಕೆ,ಮರುಹೇಳಿಕೆ,ಅವುಗಳಿಗೆ ಮಾಧ್ಯಮಗಳ,ಜನರ ಪ್ರತಿಕ್ರಿಯೆಗಳು,ಅಭಿವ್ಯಕ್ತಿ ಸ್ವಾತಂತ್ರ್ಯ ಎಂದರೆ ಏನು ಎತ್ತ ಎಂದು ಇತರ ಬುದ್ಧಿಜೀವಿಗಳ ಪಾಠಗಳಿಂದ ತುಂಬಿ ಹೋಗಿದೆ. ಈರುಳ್ಳಿ ಬೆಲೆ ಎಷ್ಟು ಏರಿತು,ರುಪಾಯಿ ಎಷ್ಟು ಆಳಕ್ಕೆ ಬಿತ್ತು ಇತ್ಯಾದಿಗಳ ಕಡೆಗೆ ನಮಗೆ ಆಸಕ್ತಿಯಿಲ್ಲ. ಅನಂತಮೂರ್ತಿಯವರು ಏನು ಹೇಳಿದ್ದಾರೆ?ಈಗ ಎಲ್ಲಿದ್ದಾರೆ?ಏನು ಮಾಡುತ್ತಿದ್ದಾರೆ?ಇದೇ ಮುಖ್ಯವಾಗಿದೆ. ಇದರ ಜತೆಗೆ ಈಗ ನಮ್ಮ ಖ್ಯಾತ ದಲಿತ ಮತ್ತು ಬಂಡಾಯ ಸಾಹಿತಿಗಳಾದಂತಹ ಮಾನ್ಯ ದೇವನೂರು ಮಹಾದೇವ ಅವರು ಬೆಂಗಳೂರು ಸುತ್ತಮುತ್ತಲಿನ ಬ್ರಾಹ್ಮಣ ಮತ್ತು ಲಿಂಗಾಯಿತರ townshipಗಳನ್ನು ಪ್ರಾಣಹಾನಿ ಆಗದಂತೆ ಬಾಂಬ್ ಹಾಕಿ ನಾಶಪಡಿಸಲೇಬೇಕು ಎಂದು “ಫತ್ವಾ” ಹೊರಡಿಸಿದ್ದಾರೆ. . ಈ ಬಾಂಬ್ ಯೋಜನೆಯನ್ನು ಅವರು ಹೇಳಿದ್ದು ಕರ್ನಾಟಕ ಕೇಂದ್ರೀಯ ವಿ ವಿ ಮತ್ತು ಗುಲ್ಬರ್ಗ ವಿ ವಿ ಸಂಯುಕ್ತವಾಗಿ ಆಯೋಜಿಸಿದ ಕರ್ನಾಟಕ ದಲಿತ ಚಳುವಳಿ ಹಾಗು ಸಾಹಿತ್ಯದ “ಉದ್ಘಾಟನಾ” ಸಮಾರಂಭದಲ್ಲಿ. ಇದುವರೆಗೆ ವಿ ವಿ ಗಳ ಕೆಲವು ಅಧ್ಯಾಪಕರು ಮತ್ತು ಪ್ರಾಧ್ಯಾಪಕರು ನಕ್ಸಲರ ಮತ್ತು ಮಾವೋವಾದಿಗಳ ಹಿಂಸೆಗೆ ಬೌದ್ಧಿಕ ಬೆಂಬಲವನ್ನು ಮಾತ್ರ ಕೊಡುತ್ತಿದ್ದರು. ಇನ್ನು ಮುಂದೆ ಭೌತಿಕ ಬೆಂಬಲವನ್ನೂ ಸಹ ನಿರ್ಭಯವಾಗಿ ನೀಡಬಹುದು. ಏಕೆಂದರೆ ಬುದ್ಧಿಜೀವಿಗಳು ಹೇಳಿದ ಮೇಲೆ ಮುಗಿಯಿತು. ಅವರು ಏನೇ ಮಾಡಿದರೂ, ಹೇಳಿದರೂ ಅದು ಅಪರಾಧವಲ್ಲ.
ದೇವನೂರರ ಬರಹದ ಕುರಿತು ನಡೆದ ಚರ್ಚೆಯ ಸುತ್ತ . . .
-ಡಾ. ಕಿರಣ್ ಗಾಜನೂರು
“ದೇವನೂರರ ಕುರಿತು ಅಪಾರ ಗೌರವ ಇಟ್ಟುಕೊಂಡೆ ಈ ಮಾತು ಹೇಳುತ್ತಿದ್ದೇನೆ ಅವರ ಲೇಖನದಲ್ಲಿ ಲಾಜಿಕ್ಕೆ ಇಲ್ಲ ಇನ್ನು ತಪ್ಪುಗಳನ್ನು ಹೇಗೆ ಗುರುತಿಸುವುದು ಈಗ ಒಬ್ಬರೂ ಒಂದು ಸಂಶೋಧನೆಯ ಮೂಲಕ ನಿಮಗೆ ಒಂದು ಪ್ರಶ್ನೆ/ವಾದ ಕೇಳುತ್ತಾರೆ ಎಂದು ಇಟ್ಟುಕೊಳ್ಳಿ ಅದಕ್ಕೆ ನೀವು ಬೌದ್ಧಿಕವಾಗಿ ಅಂಧರೆ ಆ ವ್ಯಕ್ತಿ ಯಾವ ಸಂಶೋಧಾನ ವಿಧಾನ ಬಳಸಿ ಯಾವ ಮಾಹಿತಿಯ ಆಧಾರದ ಮೇಲೆ ತನ್ನ ವಾದ ಮಂಡಿಸುತ್ತಿದ್ದಾನೆ ಅದರಲ್ಲಿರುವ ದೂಷಗಳೇನು ಅವನು ಬಳಸಿದ ವಿಧಾನ ಮತ್ತು ಪಡೆದ ಮಾಹಿತಿ ಹೇಗೆ ಆ ವಸ್ಥುವಿನ ಸರಿಯಾಗಿ ವಿವರಿಸುವಲ್ಲಿ ಎಡವಿದೆ ಎಂಬುದನ್ನು ಲಾಜಿಕಲಿ ಸಾಧಿಸಬೇಕಾಗುತ್ತದೆ. ಆದರೆ ದೆವನೂರರ ಬರಹದಲ್ಲಿ ಈ ಅಂಶವೇ ಇಲ್ಲ ಅವರೂ ಇದುವರೆಗೂ ನಂಬಿಕೊಂಡು ಬಂದ ಐಡಿಯಾಲಜಿಯನ್ನು ವಿವರಿಸಿದ್ದಾರೆ ಅಷ್ಟೆ ಈ ರೀತಿಯಾದರೆ ಯಾರೂ ಬೇಕಾದರೂ ಮಾತನಾಡಬಹುದು ಆದರೆ ಅದರಿಂದ ಎನೂ ಪ್ರಯೋಜನ? ಅದೂ ಅಲ್ಲದೆ ದೆವನೂರು ಮತ್ತು ಅವರ ಹಿಂಬಾಲಕರು ನಂಬಿದ ವಿಷಯಗಳೇ ಅಂತಿಮ ಅವರ ವಿವರಣೆಗೆ ವಿರುಧ್ಧದ ಸಂಶೋಧನೆ ಯಾರೂ ಮಾಡಬಾರದು ಮಾಡಿದರೆ ಅವರ ಮೇಲೆ ಕಣ್ಣಿಡಿ ವಿಚಾರಣೇ ಮಾಡಿ ಎಂಬಿತ್ಯಾದಿ ಮಾತನಾಡುವುದು ಅವರ ವ್ಯಕ್ತಿತ್ವಕ್ಕೆ ಶೋಭೆ ತರುವ ವಿಷಯವು ಅಲ್ಲ ಒಂದೂ ಕಾಲದಲ್ಲಿ ಆರ್.ಎಸ್.ಎಸ್ ನವರನ್ನು ಯಾವ ಯಾವ ಕಾರಣಕ್ಕೆ ಇವರುಗಳು ವಿರೋಧಿಸಿದ್ದರೂ ಇವತ್ತು ಅವೇ ಲಕ್ಷಣಗಳನ್ನು ಇವರು ಅವಾಹಿಸಿಕೊಂಡು ಮಾತನಾಡುತ್ತಿದ್ದಾರೆ ಇತರರ ಸಂಶೋಧನೆ ಟೀಕಿಸುತ್ತಿದ್ದರೆ. ಅಂದರೆ ಯಾರೂ ಸಂಶೋಧನೆಯನ್ನೆ ಮಾಡಬಾರದು ಮಾಡಿದರೆ ಪರಿಣಾಮ ನೆಟ್ಟಗಿರುವುದಿಲ್ಲ ಎಂದೂ ಎಚ್ಚರಿಸುತ್ತಿದ್ದಾರೆ ಇನ್ನು ಮುಂದೆ ಹೋಗಿ ಜಿನ್ನಾ ನೀಡಿದಂತೆ ಡೈರೆಕ್ಟ್ ಆಕ್ಷನ್ ಗೆ ಕರೆನೀಡುತ್ತಿದ್ದಾರೆ ನನಗೆ ಆಶ್ಚರ್ಯವಾಗುವುದೇ ಇದಕ್ಕೆ ಯಾರೂ ಎನೇ ಸಂಶೋಧನೆ ಮಾಡಲಿ ನಾವು ಅವರೂ ಎತ್ತುವ ಪ್ರಶ್ನೆಗಳಿಗೆ ಉತ್ತರಿಸುತ್ತೇವೆ ಆ ಮಟ್ಟದ ಸೈಂಧಾಂತಿಕ ಪಕ್ವತೆ ನಾವು ನಂಬಿದ ಸಿಂಧಾಂತಕ್ಕೆ ಇದೆ ಎಂದು ಆತ್ಮವಿಶ್ವಾಸದಿಂದ ನುಡಿಯುಬೇಕಾದ ಈ ಚಿಂತಕರೂ ಹೀಗೆ ವರ್ತಿಸುತ್ತಿರುವುದು ನಮ್ಮ ಸಂಶೋಧನಾ ಮಾದರಿಯ ವೈಪಲ್ಯ ತೋರಿಸುತ್ತದೆ” ಪೇಸ್ ಬುಕ್ ನಲ್ಲಿ ನಾನೂ ಪ್ರಕಟಿಸಿದ ಈ ಬರಹಕ್ಕೆ ಹಲವರು ಅನೇಕ ರೀತಿಯ ಪ್ರಶ್ನೆಗಳನ್ನು/ಟೀಕೆಗಳನ್ನು ಮಾಡಿದ್ದಾರೆ ಅವೆಲ್ಲವುಗಳನ್ನು ಒಂದೂ ಚರ್ಚೆಯ ಮಾದರಿಯಲ್ಲಿ ಕೆಳಗೆ ಬರೆದಿದ್ದೇನೆ ನೋಡಿ. . . .
ನಮ್ಮ ಸಮಾಜದಲ್ಲಿ ನಡೆಯುತ್ತಿರುವ ಮತ್ತು ನಡೆದಿರುವ ಶೋಷಣೆಗಳ ಕುರಿತು ಅವುಗಳ ನಿವಾರಣೆಯಗಳ ಕುರಿತು ಇಲ್ಲಿರುವ ಎಲ್ಲರ ಪ್ರಯತ್ನ ಮತ್ತು ಭಾವನೆ ಎಲ್ಲವೂ ತುಂಬಾ ಗೌರವಿಸುವ ವಿಚಾರಗಳೆ ಅಂದರೆ ನಮ್ಮೇಲ್ಲರ ಹಾನೆಸ್ಟ್ ಗುರಿ ಒಂದೇ ಅದು ನಮ್ಮ ಸಮಕಾಲಿನ ಸಮಾಜದ ಶೋಷಣೆಗಳನ್ನು ಹೊಗಲಾಡಿಸಬೇಕು.





