ವಿಷಯದ ವಿವರಗಳಿಗೆ ದಾಟಿರಿ

Posts tagged ‘ದೇವರು’

28
ಆಗಸ್ಟ್

ಚಿನ್ನದ ಬಾಗಿಲಿಗೆ ‘ದೋಷ’ವಿಲ್ಲವೇ?!

– ಡಾ. ಅಶೋಕ್ ಕೆ.ಆರ್

ಕೆಲವು ದಿನಗಳ ಹಿಂದೆ ವಿಜಯ್ ಮಲ್ಯರವರು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಎಂಭತ್ತು ಲಕ್ಷ ಬೆಲೆಬಾಳುವ ಚಿನ್ನದ ಬಾಗಿಲನ್ನು ದಾನವಾಗಿ ನೀಡಿದ್ದಾರೆ. ತಿಂಗಳುಗಳ ಹಿಂದೆ ಅವರು ಹೊತ್ತಿದ್ದ ಹರಕೆಯಂತೆ ಅದು. ಮತ್ತೊಂದು ಬಾಗಿಲನ್ನು ದಾನವಾಗಿ ನೀಡುತ್ತಾರಂತೆ. ಕಿಂಗ್ ಫಿಷರ್ ಏರ್ ಲೈನ್ಸಿನ ಸಿಬ್ಬಂದಿಗಳಿಗೆ ಸಂಬಳ ಸರಿಯಾಗಿ ನೀಡದ ಮಲ್ಯ ಲಕ್ಷಾಂತರ ರುಪಾಯಿಗಳನ್ನು ಹೀಗೆ ‘ದಾನ’ದ ರೂಪದಲ್ಲಿ ಕೊಟ್ಟಿರುವುದು ಕೆಲವರ ಕಣ್ಣು ಕೆಂಪಗಾಗಿಸಿದೆ. ಇದೇ ದುಡ್ಡನ್ನು ಸಮಾಜದ ಕೆಳಸ್ತರದಲ್ಲಿರುವವರಿಗೆ ನೀಡಬಹುದಿತ್ತಲ್ಲ? ಎಂದೂ ಹಲವರು ಪ್ರಶ್ನಿಸುತ್ತಿದ್ದಾರೆ. ಬಿಡಿ, ಮೊದಲನೆಯದು ಅವರ ವ್ಯವಹಾರಕ್ಕೆ ಸಂಬಂಧಿಸಿದ್ದು, ಎರಡನೆಯದು ಅವರ ಭಕ್ತಿಗೆ ಸಂಬಂಧಿಸಿದ್ದು. ಹರಕೆ ತೀರಿಸುವುದಕ್ಕೆ ಲಕ್ಷಾಂತರ ರುಪಾಯಿ ವ್ಯಯಿಸುವುದು ಅವರ ಮರ್ಜಿ. ಆದರೆ ಅವರೆಲ್ಲಿದ್ದಾರೆ ಹಿಂದೂ ಧರ್ಮ ‘ರಕ್ಷಕರು’, ಪೇಜಾವರ ಸ್ವಾಮಿಗಳು, ಮುಖ್ಯವಾಗಿ ಅವರೆಲ್ಲಿದ್ದಾರೆ ಆ ದೇವರು?!
4
ಮೇ

ನಿಮಗೆ ದೇವರ ಅಸ್ಥಿತ್ವದಲ್ಲಿ ನಂಬಿಕೆ ಇದೆಯೇ?

– ಗೋವಿಂದ ರಾವ್

ವಿಜ್ಞಾನ ಮಾರ್ಗ, ವೈಜ್ಞಾನಿಕ ಮನೋಧರ್ಮ, ವೈಜ್ಞಾನಿಕತೆ ಮುಂತಾದ ವಿಷಯಗಳ ಕುರಿತು ನಾನು ಆಯೋಜಿಸುತ್ತಿದ್ದ ತರಬೇತಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದವರು ಕೇಳುತ್ತಿದ್ದ ಸಾಮಾನ್ಯ ಪ್ರಶ್ನೆ ಇದು. ಅಂಥ ಸಂದರ್ಭಗಳಲ್ಲಿ ನಾನು ನೀಡುತ್ತಿದ್ದ ಸ್ಪಷ್ಟ ಉತ್ತರ ಇಂತಿರುತ್ತಿತ್ತು – ‘ಖಂಡಿತ ಇದೆ. ಆಧ್ಯಾತ್ಮಿಕತೆ ಮತ್ತು ವೈಜ್ಞಾನಿಕತೆ ಪರಸ್ಪರ ವೈರುಧ್ಯಗಳಲ್ಲ, ಪೂರಕಗಳು. ವೈಜ್ಞಾನಿಕತೆ ಕಂದಾಚರಗಳನ್ನೂ ಯಾಂತ್ರಿಕ ಮತೀಯ ಆಚರಣೆಗಳನ್ನೂ ವಿರೋಧಿಸುತ್ತದೆಯೇ ವಿನಾ ಪ್ರಾಮಾಣಿಕ ಸತ್ಯಾನ್ವೇಷಣೆಯನ್ನಲ್ಲ, ಪ್ರಾಮಾಣಿಕ ಸತ್ಯಾನ್ವೇಷಕರನ್ನಲ್ಲ. ವೈಜ್ಞಾನಿಕ ಮನೋಧರ್ಮದ ಪ್ರವರ್ತಕರು ಇಂದಿನ ‘ಸ್ವಘೋಷಿತ ಜಗದ್ಗುರುಗಳು’ ‘ಧರ್ಮ’ದ ಹೆಸರಿನಲ್ಲಿ ಪೋಷಿಸುತ್ತಿರುವ ಮೌಢ್ಯವನ್ನೂ ಕಂದಾಚರಣೆಗಳನ್ನೂ ಪ್ರದರ್ಶಿಸುತ್ತಿರುವ ‘ಪವಾಡ’ಗಳನ್ನೂ ವಿರೋಧಿಸುತ್ತಿದ್ದಾರೆಯೇ ವಿನಾ ರಾಮಕೃಷ್ಣ ಪರಮಹಂಸರ, ಸ್ವಾಮಿ ವಿವೇಕಾನಂದರ, ಗೌತಮಬುದ್ಧನ, ಬಸವಣ್ಣನವರ ಆಧ್ಯಾತ್ಮಿಕ ಚಿಂತನೆಗಳನ್ನಲ್ಲ.’

ನಾನು ನಂಬಿರುವ ‘ದೇವರು’ ಯಾವುದು? (ಗಮನಿಸಿ: ಯಾರು? ಅಲ್ಲ). ಹಾಲಿ ಅಸ್ಥಿತ್ವದಲ್ಲಿ ಇರುವ ವಿಶ್ವ ಯಾವುದರಿಂದ ಮೂಡಿ ಬಂದಿತೋ ಅದೇ ನಾನು ನಂಬುವ ‘ದೇವರು’. ನಾನು ನೋಡದೇ ಇದ್ದರೂ ಇದೆಯೆಯೆಂದು ನಂಬಿರುವ ‘ದೇವರ’ ಕಿರು ಪರಿಚಯ ಈಗ ಮಾಡಿಕೊಡುತ್ತೇನೆ. ಈ ದೇವರ ವೈಜ್ಞಾನಿಕ ಹೆಸರು ‘ವಿಚಿತ್ರತೆ’. ‘ವೈಚಿತ್ರ್ಯ’ ಎಂದು ಕರೆದರೂ ಆದೀತು. ‘Singularity’ ಎಂಬ ಇಂಗ್ಲಿಷ್ ಪದದ ಭಾಷಾಂತರ ಇದು (ನೋಡಿ: ಮೈಸೂರು ವಿಶ್ವವಿದ್ಯಾನಿಲಯದ ಇಂಗ್ಲಿಷ್-ಕನ್ನಡ ನಿಘಂಟು). ಈ ದೇವರನ್ನು ಆವಿಷ್ಕರಿಸಿದವರು ವಿಶ್ವವಿಜ್ಞಾನಿಗಳು (Cosmologists).

ಮತ್ತಷ್ಟು ಓದು »