ವಿಷಯದ ವಿವರಗಳಿಗೆ ದಾಟಿರಿ

Posts tagged ‘ಧ್ಯಾನ’

24
ಸೆಪ್ಟೆಂ

ಸೆಕ್ಸ್ ಗುರುವಿನ ಸನ್ನಿಧಿಯಲ್ಲಿ….

– ಚೇತನಾ ತೀರ್ಥಹಳ್ಳಿ

Oshoಓಶೋ!

ಈ ಹೆಸರು ಕಿವಿಗೆ ಬಿದ್ದ ಕ್ಷಣಕ್ಕೆ ನೆನಪಾಗೋದು ಅಮ್ಮನ ಆ ಅವತ್ತಿನ ತಟವಟ. “ಆ ಹಾಳಾದ xyz ತಾನು ಕೆಡೋದಲ್ದೆ ಊರು ಹಾಳು ಮಾಡ್ತಾನೆ. ಆ ಮನುಷ್ಯನ್ನ ನೋಡಿದ್ರೆ ಸ್ವಾಮೀಜಿ ಥರ ಕಾಣ್ತಾನಾ?”
ಅಪ್ಪ ಸಹೋದ್ಯೋಗಿ ಬಳಿಯಿಂದ ಮನೆಯಲ್ಲಿ ತಂದಿಟ್ಟುಕೊಂಡಿದ್ದ ಓಶೋ ಪುಸ್ತಕವನ್ನ ನೋಡೀ ನೋಡೀ ಸಿಡುಕುತ್ತಿದ್ದಳು. ಯಾರಾದ್ರೂ ನೋಡಿದ್ರೆ ಏನು ತಿಳಿದಾರು! ಅನ್ನುವ ಆತಂಕ ಜೊತೆಗೆ. ನಾನು ಕೇಳೀಕೇಳೀ ರೇಜಿಗೆ ಬಿದ್ದು ಕೇಳಿದ್ದೆ, “ಯಾಕೆ?”

ಬಹಳಷ್ಟು ಜನ ಓಶೋ ಬಗ್ಗೆ ತಳೆದಿರುವ ಅಭಿಪ್ರಾಯವನ್ನೆ ನನ್ನ ಮುಗ್ಧ ಅಮ್ಮನೂ ಹೇಳಿದ್ದಳು. ಅದು ಎಂಭತ್ತರ ದಶಕ. ಓಶೋ ಎಂಬ ಮಹಾ ಸಂತನ ಬಗ್ಗೆ ಭಾರತ ಮಾತ್ರವೇನು, ಪಶ್ಚಿಮ ದೇಶಗಳಲ್ಲೂ ಸಾಕಷ್ಟು ಪುಕಾರು ಹಬ್ಬಿದ್ದ ಕಾಲವದು. ಅಂಥ ಸಂದರ್ಭದಲ್ಲಿ ಅವಳ ಯೋಚನೆ ತಪ್ಪೇನೂ ಆಗಿರಲಿಲ್ಲ ಅನ್ನಿಸುತ್ತೆ. ಯಾಕಂದರೆ ಅದೇ ಅಮ್ಮ ಆಮೇಲೆ ನನ್ನ ಕಪಾಟಿನಿಂದ ಹಲವು ಓಶೋ ಪುಸ್ತಕಗಳನ್ನ ತೆಗೆದು ಕಣ್ಣಾಡಿಸಿದ್ದಾಳೆ; ಆಗೀಗ ಅದರ ಕೆಲವು ವಿಚಾರಗಳ ಉಲ್ಲೇಖವನ್ನೂ ಮಾಡುವಷ್ಟು ಬದಲಾಗಿದ್ದಾಳೆ.ಅದೇನೇ ಇರಲಿ, ನನಗೆ ಓಶೋ ಮೊದಲ ಬಾರಿ ಪರಿಚಯವಾಗಿದ್ದು ಹೀಗೆ. ಅದೇನು ತಿಕ್ಕಲುತನವೋ! ಅಮ್ಮ ಮಾಡಿದ್ದ ಆರೋಪವೇ ನನ್ನಲ್ಲಿ ಓಶೋ ಬಗ್ಗೆ ಕುತೂಹಲ ಹುಟ್ಟಿಸಿತ್ತು. ಇಷ್ಟೆಲ್ಲ ಬೈಸಿಕೊಳ್ಳುವ ಈ ಮನುಷ್ಯನ ಮಾತನ್ನ ಅಷ್ಟೊಂದು ಜನ ಕೇಳ್ತಾರೆ ಅಂದ್ರೆ ಸುಮ್ಮನೆನಾ? ಅನ್ನುವಂಥ ಕುತೂಹಲವದು. ಮುಂದೊಂದು ದಿನ ’ಶೂನ್ಯ ನಾವೆ’ ಏರಿ ಶುರುವಾದ ನನ್ನ ಓಶೋ ಯಾನ ಈ ಹೊತ್ತಿನವರೆಗೆ ಸೇರಿದೆ.

ಮತ್ತಷ್ಟು ಓದು »

8
ಜುಲೈ

’ಹರಶರಣ ದೆನಿಲೋನ ಹಾದಿಯಲ್ಲಿ’ ಶಿವಪ್ರಕಾಶರ ಲೇಖನಕ್ಕೊಂದು ಪ್ರತಿಕ್ರಿಯೆ

-ಬಾಲಚಂದ್ರ ಭಟ್

Danielouಈ ಲೇಖನ ಪ್ರಜಾವಾಣಿಯಲ್ಲಿ ಪ್ರಕಟವಾದ ಎಚ್.ಎಸ್.ಶಿವಪ್ರಕಾಶರ ಜುಲೈ ೫ ರಂದು ಪ್ರಕಟವಾದ ’ಹರಶರಣ ದೆನಿಲೋನ ಹಾದಿಯಲ್ಲಿ’ ಬರಹಕ್ಕೆ ಪ್ರತಿಕ್ರಿಯೆ. ಬಹಳಷ್ಟು ವಿಷಯಗಳನ್ನು ಲೇಖನದಲ್ಲಿ ಉಲ್ಲೇಖಿಸಿದ್ದನ್ನು ಓದಿದ ನಂತರ ಸ್ವಲ್ಪ ಲೇಖನ ಏನು ಹೇಳಹೊರಟಿದೆಯೆಂಬುದರ ಬಗ್ಗೆ ಗೊಂದಲ ಮೂಡಿತು. ನಾನು ತಿಳಿದುಕೊಂಡಂತೆ ಲೇಖಕರು ಒಟ್ಟಾರೆಯಾಗಿ ಏನು ಹೇಳುತ್ತಾರೆಂದರೆ,

೧. ಆಲೆನ್ ದೆನಿಲೋ ನ ವಿಚಾರಗಳು, ಬಹುತೇಕ ಭಾರತೀಯ ಆಧ್ಯಾತ್ಮಿಕ ಪರಿಕಲ್ಪನೆಗಳಿಗಿಂತ(‘ಕನಿಕರ ಹುಟ್ಟಿಸುವ ಮುಖಮುದ್ರೆಯ ವೇದಾಂತ’) ಭಿನ್ನವಾಗಿತ್ತು, ಹಾಗೂ

೨. ಭಾರತದ ಆಧ್ಯಾತ್ಮಿಕ ವಿಷಯಗಳ ಬಗ್ಗೆ ’ಸ್ಟೀರಿಯೊಟೈಪಡ್ ಪೌರಾತ್ಯ’ ಚಿಂತನೆಗಳಿಂದ, ಹಾಗೂ ವಸಾಹತುಶಾಹಿ ಪರಿಕಲ್ಪನೆಗಳಿಂದ ಹೊರತಾಗಿದ್ದವು.

ಈ ಮೇಲಿನ ಎರಡು ಲೇಖಕರ ಅಭಿಪ್ರಾಯಗಳನ್ನು ಈ ಕೆಳಗಿನಂತೆ ವಿಮರ್ಶಿಸಿದ್ದೇನೆ.ಹಾಗೆಯೆ ಪ್ರಶ್ನೆಗಳ ಮೂಲಕ ನನ್ನಲ್ಲಿನ ಗೊಂದಲಗಳನ್ನ ಪ್ರಸ್ತಾಪಿಸಿದ್ದೇನೆ. ತಪ್ಪಿದ್ದಲ್ಲಿ ಸರಿಪಡಿಸಿ.

೧. ನಾನು ಹಾಗೆ ತಿಳಿದುಕೊಳ್ಳಲು ಕಾರಣ ಶಿವಪ್ರಕಾಶರು ಹೀಗೆ ಉಲ್ಲೇಖಿಸಿರುವದು: “ಕನಿಕರ ಹುಟ್ಟಿಸುವ ಮುಖಮುದ್ರೆಯ ವೇದಾಂತವನ್ನೇ ಭಾರತದ ಸಾರ ಸರ್ವಸ್ವವೆನ್ನುವರು ಆ ಕಾಲದ ಬಹಳ ಮಂದಿ ವಿದ್ವಾಂಸರು. ಅವರಲ್ಲಿ ಬಹುತೇಕ ಪ್ರಭೃತಿಗಳು ಭಾರತೀಯರೆಂದರೆ ಜೀವನೋತ್ಸಾಹ, ರಾಗರತಿಗಳಿಲ್ಲದ ಓಡುಗಾಲ ಯೋಗಿಗಳೆಂದು ಬಗೆದಿದ್ದರು. ಆದರೆ ವಿದ್ವತ್ತು, ರಸಗ್ರಾಹಿತ್ವ ಮತ್ತು ವ್ಯಕ್ತಿಗತ ಆಧ್ಯಾತ್ಮಿಕ ಸಾಧನೆಗಳ ತ್ರಿವೇಣಿಸಂಗಮವಾಗಿದ್ದ ದೆನಿಲೋ ಒತ್ತು ನೀಡಿದ್ದು ಭಾರತೀಯರ ರಸವಿಮುಖಿಯಾದ ಸಮಣಪಂಥೀಯ ಅಧ್ಯಾತ್ಮವಾದಕ್ಕಲ್ಲ, ಐಂದ್ರಿಕ ಜಗತ್ತಿಗೆ ತನ್ನನ್ನು ಪೂರ್ಣವಾಗಿ ತೆರೆದುಕೊಂಡು ಹಾಕುವ ಪ್ರತಿಯೊಂದು ತುತ್ತನ್ನೂ ಬಿಂದುವಾಗಿ ಮಾಡಿಕೊಂಡ ಶೈವ-ಶಾಕ್ತರ ಪೂರ್ಣಾದ್ವೈತಕ್ಕೆ.”

ಮತ್ತಷ್ಟು ಓದು »