ವಿಷಯದ ವಿವರಗಳಿಗೆ ದಾಟಿರಿ

Posts tagged ‘ನಮೋ’

3
ಡಿಸೆ

ದಿನೇ ದಿನೇ ಹೆಚ್ಚುತ್ತಿರುವ ‘ಮೋದಿ ಜಪ’

– ನರೇಂದ್ರ ಕುಮಾರ ಎಸ್.ಎಸ್

NaModiದಿನಗಳೆದಂತೆ, ೨೦೧೪ರ ಮಹಾ ಚುನಾವಣೆಯು ಹತ್ತಿರ ಬಂದಂತೆ ಭಾರತದಾದ್ಯಂತ ‘ಮೋದಿ ಜಪ’ ಹೆಚ್ಚುತ್ತಿದೆ. ಇದನ್ನು ಕೆಲವರು ‘ಮೋದಿ ಜ್ವರ’, ‘ಮೋದಿತ್ವ’ ಎಂದೂ ಬಣ್ಣಿಸುತ್ತಿರುವರು. ಯಾರು ಏನೇ ಹೇಳಲಿ, ಭಾರತದಾದ್ಯಂತ ನಿತ್ಯವೂ ಚರ್ಚಿಸಲ್ಪಡುತ್ತಿರುವ ಒಂದು ವಿಷಯವೆಂದರೆ “ನರೇಂದ್ರ ಮೋದಿ”. ಪತ್ರಿಕೆಗಳಲ್ಲಿ, ದೃಶ್ಯ ಮಾಧ್ಯಮಗಳಲ್ಲಿ, ಸಾಮಾಜಿಕ ತಾಣಗಳಾದ ಟ್ವಿಟ್ಟರ್ ಹಾಗೂ ಪೇಸ್^ಬುಕ್ ಗಳಲ್ಲಿ, ಯುವಕರು ನಡೆಸುವ ಚರ್ಚೆಗಳಲ್ಲಿ, ಕ್ಷೌರಿಕನ ಅಂಗಡಿಯಲ್ಲಿ ನಡೆಯುವ ವಾರ್ತಾಲಾಪಗಳಲ್ಲಿ, ಹಳ್ಳಿಗಳಲ್ಲಿ ನಡೆಯುವ ಸಂಭಾಷಣೆಗಳಲ್ಲಿ – ಎಲ್ಲರೂ ಮೋದಿಯ ಕುರಿತು ಮಾತನಾಡುತ್ತಿದ್ದಾರೆ! ಸ್ವಾತಂತ್ರ್ಯಾ ನಂತರದ ಭಾರತದಲ್ಲಿ ಜನರ ಚರ್ಚೆಗಳಲ್ಲಿ ಇಷ್ಟರಮಟ್ಟಿಗೆ ಹೊಕ್ಕಿರುವ ಮತ್ತೊಂದು ಹೆಸರಿಲ್ಲ.

ನಾನು ಕೆಲವು ದಿನಗಳ ಹಿಂದೆ, ಬೆಂಗಳೂರಿನಲ್ಲಿ ಆಟೋ ರಿಕ್ಷಾದಲ್ಲಿ ಹೋಗುತ್ತಿದ್ದೆ. ರಸ್ತೆಗಳೆಲ್ಲ ಗುಂಡಿಗಳಿಂದ ಗಬ್ಬೆದ್ದು ಹೋಗಿದ್ದವು. ಈ ರೀತಿ ಸ್ವಲ್ಪ ಹೊತ್ತು ಪ್ರಯಾಣಿಸಿದ ನಂತರ, ನನಗೆ ನಾನೇ “ಯಾವಾಗ ಸರಿ ಹೋಗುತ್ತೋ ನಮ್ಮ ಬೆಂಗಳೂರು” ಎಂದು ಸ್ವಲ್ಪ ಗಟ್ಟಿಯಾಗಿ ಹೇಳಿಕೊಂಡೆ. ಕೂಡಲೇ, ಆಟೋ ರಿಕ್ಷಾದ ಚಾಲಕ, “ಸಾರ್, ನರೇಂದ್ರ ಮೋದಿಯವರಿಗೆ ಒಂದು ಚಾನ್ಸ್ ಕೊಟ್ಟು ನೋಡಿ, ಎಲ್ಲಾ ಸರಿ ಹೋಗುತ್ತೆ” ಎಂದು ಬಿಡೋದೇ!?

ಮತ್ತಷ್ಟು ಓದು »

28
ಆಕ್ಟೋ

ಮೂರ್ತಿಗಳೇ,ಸೈನ್ಯ ಸಾಮ್ರಾಟ ಅಶೋಕನ ಬಳಿಯೂ ಇತ್ತು.ಆದರೆ,ಗೆದ್ದಿದ್ದು ಕಳಿಂಗ …!

– ರಾಕೇಶ್ ಶೆಟ್ಟಿ

Siddu n URAಭಾರತ ಬಿಡದಿರಲು ನಿರ್ಧರಿಸಿದ ಮೇಲೆ ನಮ್ಮ ಅನಂತ ಮೂರ್ತಿಯವರು, ಕಳೆದ ವಾರ ಸಿ.ಎಂ ಸಿದ್ದರಾಮಯ್ಯ ನವರಿಗೆ ಮೋದಿಯಂತೆ ಸೈಬರ್ ಸೈನ್ಯ ಕಟ್ಟಲು ಹೇಳಿ ಮತ್ತೊಮ್ಮೆ ಸುದ್ದಿಯಾದರು.

ಭಾರತದ ದೇಶ ಕಂಡ ಬೃಹತ್ ಸೈನ್ಯ ಸಾಮ್ರಾಟ ಅಶೋಕನ ಬಳಿಯೂ ಇತ್ತು ಮೂರ್ತಿಗಳೇ.ಆದರೆ ಅವನೆದುರು ಸೋತು ಗೆದ್ದಿದ್ದು ’ಕಳಿಂಗ’ …! ಸಾಮ್ರಾಟ ಅಶೋಕನ ಸೈನ್ಯದೆದುರಿಗೆ ಕಳಿಂಗ ಅನ್ನುವ ಪುಟ್ಟ ರಾಷ್ಟ್ರ ಏನೇಂದರೇ ಏನು ಆಗಿರಲಿಲ್ಲ.ಅವರಲ್ಲಿ ಅಶೋಕನ ಬಳಿಯಿದ್ದಷ್ಟು ಶಸ್ತ್ರ-ಅಸ್ತ್ರಗಳಿರಲಿಲ್ಲ,ಸೈನ್ಯವೂ ಇರಲಿಲ್ಲ.ಅವರಲ್ಲಿ ಇದ್ದಿದ್ದು ಸ್ವಾಭಿಮಾನ ಮತ್ತು ಧೈರ್ಯ. ಸಾಮ್ರಾಟ ಅಶೋಕನ ಸೈನ್ಯಕ್ಕೆ ಎದೆಯೊಡ್ಡಿ ಅವರು ಹೇಳಿದ್ದು “ನೀನು ಮಹಾನ್ ಸಾಮ್ರಾಟನಿರಬಹುದು,ನಿನ್ನ ಶಕ್ತಿ ಅಸಾಧಾರಣವಿರಬಹುದು.ಆದರೆ,ನಮಗೆ ಕನಿಷ್ಟ ಆತ್ಮಾಭಿಮಾನದಿಂದ ಸಾಯುವ ಅಧಿಕಾರವಾದರೂ ಇದೆ- ನೀನದನ್ನು ನಮ್ಮಿಂದ ಕಿತ್ತುಕೊಳ್ಳಲಾರೆ” ಅನ್ನುವುದೇ ಆಗಿತ್ತು.

ನೀವು ದುಡ್ಡು ಕೊಟ್ಟು,ಏನು ಮಾಡಬೇಕು ಅಂತ ಹೇಳಿಕೊಟ್ಟು ಕಟ್ಟಬಹುದಾದ ಸೈಬರ್ ಸೈನ್ಯ ಸಾಮ್ರಾಟ ಅಶೋಕನ ಸೈನ್ಯದಂತೆಯೇ ಅಗಾಧವಾಗಿರಬಹುದು.ಆದರೆ ಅದಕ್ಕೆದುರಾಗಿ ನಿಂತಿರುವುದು ಸ್ವಾಭಿಮಾನಿ ’ಕಳಿಂಗ’ದಂತಹ ಸೈನ್ಯ. ಈ ಸೈನಿಕರು ದುಡ್ಡಿಗಾಗಿ,ಅಧಿಕಾರಕ್ಕಾಗಿ,ಆಯ್ಕೆ ಸಮಿತಿಗಳ ಸ್ಥಾನಗಳಿಗಾಗಿ,ವಿವಿಗಳ ನಾಮಫಲಕಗಳಲ್ಲಷ್ಟೇ ರಾರಾಜಿಸುವ, ವಿವಿಗಳ ಕುರ್ಚಿ ಬಿಸಿ ಮಾಡುವ ಹುದ್ದೆಗಳಿಗಾಗಿಯೋ ಇಲ್ಲ ಪ್ರಶಸ್ತಿಗಳಿಗಾಗಿಯೋ ಕಾದು ಕುಳಿತಿರುವ ಅವಕಾಶವಾದಿಗಳಲ್ಲ.ಇವರೆಲ್ಲ ಕೇಂದ್ರ ಸರ್ಕಾರದ ಭ್ರಷ್ಟಚಾರದ ವಿರುದ್ಧ ಜೊತೆಯಾದವರು. ನಿಮ್ಮ ಸೆಕ್ಯುಲರ್ ಬ್ರಿಗೇಡ್ ಕಳೆದ ೧೧ ವರ್ಷಗಳಲ್ಲಿ ಮೋದಿ ಅನ್ನುವವನ ಮೇಲೆ ಏಕಪಕ್ಷೀಯವಾಗಿ ಕಟ್ಟುತ್ತ ಬಂದ ಸುಳ್ಳಿನ ಕೋಟೆಯನ್ನು ಕಂಡು ರೋಸಿ ಹೋಗಿ, ಆ ಸುಳ್ಳಿನ ಕೋಟೆಯ ಭೇಧಿಸಲು ತಾನಾಗೇ ಹುಟ್ಟಿಕೊಂಡ ಸೈನ್ಯ. ನಿಮ್ಮ ಸೆಕ್ಯುಲರ್ ಬ್ರಿಗೇಡಿನ ಸುಳ್ಳುಗಳಿಗೆ ಸಾಕ್ಷಿ ಬೇಕಾದರೇ, ನಿಮ್ಮದೇ ಹೇಳಿಕೆಯ ಸುತ್ತ ತಿರುಗೋಣ ಬನ್ನಿ ಮೂರ್ತಿಗಳೇ,

ಮತ್ತಷ್ಟು ಓದು »

25
ಆಕ್ಟೋ

ಮೋದಿ ಅಭಿಮಾನ ಮತ್ತು ಅಭಿಮಾನಿಗಳ ಸುತ್ತ

– ಮಹೇಶ್ ಪ್ರಸಾದ್ ನೀರ್ಕಜೆ

NaModiಎಲ್ಲೆಡೆ ಮೋದಿ ಜಪ (ಪರ ವಿರೋಧ) ಆಗುತ್ತಿರುವಾಗ ಮೋದಿ ಬೆಂಬಲಿಗನಾಗಿದ್ದುಕೊಂಡೆ ನನ್ನದೊಂದು ಕ್ರಿಟಿಕ್ ಬರಹ ಇರಲಿ ಅನಿಸಿ ಬರೆಯುತ್ತಿದ್ದೇನೆ.

ಮೊದಲನೆಯದಾಗಿ ಕೂಸು ಹುಟ್ಟುವ ಮುಂಚೆ ಕುಲಾವಿ ಹೊಲಿಸಿದ ಗಾದೆ ನಮಗೆ ಗೊತ್ತೇ ಇದೆ. ಮೇಲ್ನೋಟಕ್ಕೆ ಇದು ತೀರಾ ಸರಳ ವಿಚಾರ ಎನಿಸಿದರೂ ಆಚರಣೆಗೆ ಕಷ್ಟ ಅಂತ ಮೋದಿ ಮತ್ತು ಅವರ ಬೆಂಬಲಿಗರು ತುಳಿಯುತ್ತಿರುವ ಹಾದಿ ನೋಡಿದಾಗ ಅನಿಸುತ್ತಿದೆ. ಮೊನ್ನೆ ಮೊನ್ನೆ ಮೋದಿ ಪ್ರಧಾನ ಮಂತ್ರಿ ಅಭ್ಯರ್ಥಿ ಅಂತ ಆಯ್ಕೆ ಆದಾಗ ರಾಜನಾಥ್ ಸಿಂಗ್ ಜೊತೆ ಮೋದಿ ಪರಸ್ಪರ ಸಿಹಿ ಹಂಚಿಕೊಂಡಿದ್ದನ್ನು ನೋಡಿದಾಗ ಮೊದಲ ಬಾರಿಗೆ ನನಗೆ ಎಲ್ಲೋ ಎಡವಟ್ಟಾಗುತ್ತಿದೆ ಅನಿಸಿತು. ಟಿವಿ ಯಲ್ಲಿ ಇದನ್ನು ನೋಡುತ್ತಿದ್ದ ನನ್ನಂಥವರಿಗೆ ಆಗ ಈ ಗಾದೆ ನೆನಪಾದದ್ದು ಸುಳ್ಳಲ್ಲ. ಈಗ ಮೋದಿ ಬೆಂಬಲಿಗರ ವಿಚಾರದಲ್ಲೂ ನನಗೆ ಈ ಗಾದೆ ನೆನಪಾಗುತ್ತಿದೆ.

ಮತ್ತೊಮ್ಮೆ ಹೇಳುವುದಾದರೆ ನಾನು ಮೋದಿ ಪ್ರಧಾನ ಮಂತ್ರಿ ಆಗಬೇಕೆಂದು ಬಯಸುವವನು ಆದರೆ ಅದರ ಜೊತೆ ಜೊತೆಗೇ ನಾಳೆ ಭ್ರಮನಿರಸ ಗೊಳ್ಳಲು ಸಿಧ್ಧವಿಲ್ಲದಿರುವವನು. ಯಡ್ಯೂರಪ್ಪ ವಿಚಾರದಲ್ಲಿ ಈಗಾಗಲೇ ಒಮ್ಮೆ ಭ್ರಮನಿರಸ ಆಗಿದ್ದೇವೆ. ಹಾಗೆ ನೋಡಿದರೆ ಯಡ್ಯೂರಪ್ಪ ಕೂಡ ಪರಿಸ್ಥಿತಿ ಒತ್ತಡದಿಂದ ಭ್ರಷ್ಟರಾದರು ಹೊರತಾಗಿ ಸ್ವತಹ ಅವರೇ ಭ್ರಷ್ಟರಲ್ಲ. ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಅವರಿಗೆ ಸ್ಪಷ್ಟ ಬಹುಮತ ಸಿಕ್ಕಿದ್ದಿದ್ದರೆ ಅವರು ರೆಡ್ಡಿಗಳ ಕಾಲು ಹಿಡಿಯಬೇಕಾಗಿರಲಿಲ್ಲ ಮತ್ತು ಕೊನೆಗೆ ಸಿಬಿಐ ಬಲೆಗೆ ಬಿದ್ದು ಜೈಲಿಗೂ ಹೋಗುತ್ತಿರಲಿಲ್ಲ. ಮೋದಿ ಕೂಡ ಹಾಗೆ ಮಾಡ್ತಾರೆ ಅಂತ ಹೇಳ್ತಿಲ್ಲ, ಆದರೆ ಮೋದಿ ಪ್ರಚಾರ ಅನ್ನುವುದು ಒಂದು ಮುಟ್ಟಬೇಕಾದ ಗುರಿ ಹೊರತು ಸಂಭ್ರಮಿಸಬೇಕಾದ ಮತ್ತು ಸಂಭ್ರಮದಲ್ಲಿ ಮೈಮರೆಯುವ ವಿಚಾರ ಅಲ್ಲ ಅನ್ನುವುದನ್ನು ಅವರ ಅಭಿಮಾನಿಗಳು ಅರ್ಥಮಾಡಿಕೊಂಡರೆ ಸಾಕು.

ಮತ್ತಷ್ಟು ಓದು »

23
ಸೆಪ್ಟೆಂ

ವಿರೋಧಿಗಳೆಸೆದ ಕಲ್ಲನ್ನೇ ತನ್ನ ಏಳಿಗೆಯ ಮೆಟ್ಟಿಲಾಗಿಸಿಕೊಂಡ ಮೋದಿ

– ಪ್ರಸನ್ನ  ಬೆಂಗಳೂರು

NaModiಭಾರತದ ರಾಜಕೀಯ ಇತಿಹಾಸದಲ್ಲಿ ೧೦ ವರ್ಷಗಳಿಗೂ ಹೆಚ್ಚು ಕಾಲ ವಿರೋಧ ಪಕ್ಷಗಳು,ಮಾಧ್ಯಮಗಳು,ಪ್ರಗತಿಪರರು ಟಾರ್ಗೆಟ್ ಮಾಡಿರುವುದು ನರೇಂದ್ರ ಮೋದಿಯವರನ್ನು . ಮೋದಿಯವನರನ್ನು  ಬಿಜೆಪಿ ತನ್ನ ಪ್ರಧಾನಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಮೇಲೆ ಅವರ ಮೇಲಿನ ಹಿಂದಿನ ಆರೋಪಗಳ ಜೊತೆ ಜೊತೆಗೆ ಅವರ ಅಭಿವೃದ್ಧಿ ಕಾರ್ಯಗಳನ್ನು ವಿಶ್ಲೇಷಣೆಗೊಳಪಡಿಸಲಾಗುತ್ತಿದೆ. ಈ ಹಿಂದೆ ಪ್ರಧಾನಿಯಾದವರ ಬಗ್ಗೆ ಇಷ್ಟೊಂದು ವಿಶ್ಲೇಷಣೆ ವಿಮರ್ಶೆ ಪರೀಕ್ಷೆ ನಡೆದಿತ್ತೆ? ನಡೆದು ಅಂತಹ ಅಗ್ನಿ ಪರೀಕ್ಷೆಯಲ್ಲಿ ಗೆದ್ದು ಬಂದಿದ್ದರೆ ಬಹುಶಃ ಭಾರತವಿಂದು ಇಂತಹ ಪರಿಸ್ಥಿತಿಯಲ್ಲಿರುತ್ತಿರಲಿಲ್ಲ ಅಲ್ಲವೆ? ಮೋದಿ ಈ ಪರಿ ಬೆಳೆದಿದ್ದಕ್ಕೆ ಕಾರಣ ಹುಡುಕುತ್ತಾ ಹೊರಟವನಿಗೆ ಕಂಡದ್ದು ಈ ವಿಭಿನ್ನವಾದ ಆದರೆ ತೆರೆಮರೆಯ ಕಾರಣ.

ಅದು ತನ್ನ ಕುಕೃತ್ಯಕ್ಕೆ ತಾನೆ ಬಲಿಯಾದ ಆತನ ದ್ವೇಷ ವರ್ಗ.ಇವರ ದ್ವೇಷ,’ತನ್ನೊಡಲ ಬೆಂಕಿ ತನ್ನನ್ನಲ್ಲದೆ ಅನ್ಯರನ್ನು ಸುಡದು‘ ಎಂಬ ಜನಪ್ರಿಯ ವಚನದಂತೆ ದ್ವೇಷಿಗಳೇ ನಾಲಿಗೆ ಕಚ್ಚಿಕೊಳ್ಳುವಂತಾಗಿರುವುದು ಸುಳ್ಳಲ್ಲ. ತಾನು ವೈಭವೀಕರಿಸಿದ ಸುಳ್ಳು ತನಗೇ ತಿರುಗುಬಾಣವಾಗಿರುವುದು ಅವರ ಈಗಿನ ಬಡಬಡಿಕೆಗೆ ಕಾರಣವಾಗಿದೆ. ಈ ವರ್ಗ ಮೋದಿಯ ವಿರುದ್ದ ಮಾಡಿದ ಅಪಪ್ರಚಾರಗಳೇ ಅಪಚಾರಗಳೇ ಅವರಿಗೆ ಇಂದು ಮುಳುವಾಗಲು ಮೂಲ ಕಾರಣವೆಂದು ಅವರು ಒಪ್ಪಿಕೊಳ್ಳಲು ಸಿದ್ದರಿಲ್ಲದಿದ್ದರೂ ಅದು ಸತ್ಯವಲ್ಲವೆಂದು ತಳ್ಳಿ ಹಾಕಲು ಅವರಿಗೆ ಸಾಧ್ಯವಾಗುವುದಿಲ್ಲ.

ಮೋದಿ ಮಾಡದ ತಪ್ಪಿಗೆ ಅವನನ್ನು ಹೊಣೆಗಾರನನ್ನಾಗಿಸುವ ಮೂಲಕ ಆತನ ಬೆಳವಣಿಗೆ ದಾರಿ ಮಾಡಿಕೊಟ್ಟದ್ದು ಹೇಗೆ?

ಮತ್ತಷ್ಟು ಓದು »

28
ಆಗಸ್ಟ್

ನಮೋ ಅಭಿವೃದ್ಧಿ ಮಂತ್ರಕ್ಕೆ ಅನುಸರಿಸಬೇಕಾದ ಪ್ರಚಾರತಂತ್ರ ಯಾವುದು?

– ನವೀನ್ ನಾಯಕ್

NaModi       ನರೇಂದ್ರ ಮೋದಿ ಇತ್ತೀಚೆಗೆ ಅತಿ ಹೆಚ್ಚಾಗಿ ಚರ್ಚೆಗೆ ತುತ್ತಾಗುತಿದ್ದಾರೆ. ಮೋದಿಯವರೇ ಮುಂದಿನ ಪ್ರಧಾನಿಯಾಗಬೇಕೆಂದು ಹಲವಾರು ರೀತಿಯಲ್ಲಿ ಉತ್ಸಾಹಿ ಯುವಕರು ಸ್ವಯಂಪ್ರೇರಣೆಯಿಂದ ಕೆಲಸ ನಿರ್ವಹಿಸುತಿದ್ದಾರೆ. ಅಭಿಮಾನಿಗಳ ಗುಂಪುಗಳಿರಬಹುದು, ಸಾಮಾಜಿಕ ತಾಣದಲ್ಲಿರುವ ಪೇಜ್, ಗ್ರೂಪ್ ಯಾವುದೇ ಆಗಬಹುದು. ರಾಜಕೀಯ ವಿಷಯದಲ್ಲಿ ಮಲಗಿದ್ದ ಯುವಪಡೆ ಎದ್ದು ನಿಂತಿರುವುದು ಸ್ವಾಗತಾರ್ಹ. ಪ್ರಸಕ್ತ ರಾಜಕೀಯ ದೊಂಬರಾಟದಲ್ಲಿ ಕಡಿವಾಣ ಹಾಕಬೇಕೆಂದರೆ ಯುವಕರ ಪಾತ್ರ ಬೇಕೆಬೇಕು. ಇತಿಹಾಸವೂ ಅದನ್ನೇ ಸಾರಿ ಸಾರಿ ಹೇಳಿದೆ. ನಮೋ ವಿಷಯದಲ್ಲಿ ಗಂಭೀರವಾದ ವಿಚಾರವೆಂದರೆ ಈ ಯುವಕರ ಕೆಲಸ ನೀರಿಕ್ಷಿತ ಮಟ್ಟವನ್ನು ತಲುಪುತ್ತದೆಯಾ. ಇವರ ಉತ್ಸಾಹಕ್ಕೆ 2014 ತಣ್ಣೀರೆರಚಬಹುದೇ ಎಂಬ ಅನುಮಾನ ನನಗೆ. ನನ್ನ ಅನುಮಾನಕ್ಕೆ ಕಾರಣವಿಲ್ಲದೆಯಿಲ್ಲ.

ಮೋದಿಯವರನ್ನು ಪ್ರಚಾರ ಮಾಡುತ್ತಿರುವ ಶೈಲಿ ಸ್ವತಃ ನಮೋ ಅಭಿವೃದ್ದಿ ಕನಸ್ಸಿನ ವಿರೋಧವಾಗಿದೆ. ಮುನ್ನುಗುತ್ತಿರುವ ವೇಗದಲ್ಲಿ ಗುರಿಯನ್ನೇ ಮರೆಯಲಾಗಿದೆ. ಮೋದಿ ನಾಯಕತ್ವದಲ್ಲಿ ಸರಕಾರ ರಚಿಸಬೇಕಾದರೆ ಆ ಸರಕಾರ ನಮ್ಮ ಕನಸ್ಸಿನ ಭಾರತ ಕಟ್ಟಬೇಕಾದರೆ ಮೋದಿ ಹೆಸರಲ್ಲಿ ಅಥವಾ ಬಿಜೆಪಿ ಹೆಸರಲ್ಲಿ ಗೆಲ್ಲುವ ಅಭ್ಯರ್ಥಿ ಹೇಗಿರಬೇಕು, ಅವನ ಕನಸುಗಳೇನಾಗಿರಬೇಕು, ಸಮಾಜ ಪರಿವರ್ತನೆಯಲ್ಲಿ ಆತನ ಸ್ಪಷ್ಟ ನಿರ್ಧಾರವೇನು. ಈ ಅಂಶಗಳು ಮುಖ್ಯವಾಗುವುದಿಲ್ಲವೇ? ಈ ಮಹತ್ತರ ಅಂಶಗಳನ್ನು ಮರೆತು ಅವರ ಹೆಸರಲ್ಲಿ ಅಯೋಗ್ಯರನ್ನು ಗೆಲ್ಲಿಸಿಬಿಟ್ಟರೆ. ಕಂಡ ಕನಸು ತಿರುಗಿ ಬೆಂಕಿ ಕೆಂಡವಾಗುತ್ತದೆಯಲ್ವಾ? ಕರ್ನಾಟಕದಲ್ಲಿ ಬದಲಾವಣೆ ಭರದಲ್ಲಿ ಬಿಜೆಪಿ ಬೆಂಬಲಿಸಿದಾಗ ಯಡವಟ್ಟಾಗಿದ್ದು ಈ ಅಂಶಗಳೇ. ಅಪಾತ್ರರೆಲ್ಲ ಗೆದ್ದು ಉಂಡಾಡಿ ಗುಂಡನ ಹಾಗೆ ಆಡಿದ್ದ ಉದಹಾರಣೆ ಕಣ್ಣ ಮುಂದಿರುವಾಗ ಮತ್ತದೇ ಹೆಜ್ಜೆಯನ್ನಿಟ್ಟರೆ ಏನು ಪ್ರಯೋಜನ ?.. ಬದಲಾವಣೆ ಎಲ್ಲರಿಗೂ ಬೇಕು ಅದೇ ಭರದಲ್ಲಿ ಯೋಗ್ಯರು ಮತ್ತು ಅಯೋಗ್ಯರ ನಡುವಿನ ವ್ಯತ್ಯಾಸ ಮರೆಯಬಾರದು.
ಮತ್ತಷ್ಟು ಓದು »

25
ಜುಲೈ

ಮೋದಿ ಸ್ವಲ್ಪ ಸಿಹಿ , ಸ್ವಲ್ಪ ಕಹಿ

– ಕೆ.ಎಂ.ವಿಶ್ವನಾಥ (ಮಂಕವಿ) ಮರತೂರ

Modi12ನಮ್ಮ ಭಾರತ ಬಹು ಭವ್ಯವನ್ನು ಮೆರೆಯುವ ದೇಶ, ಪ್ರಪಂಚದಲ್ಲೆ ಉತ್ತಮವಾದ ಇತಿಹಾಸ ಹೊಂದಿರುವ ದೇಶ ಅನೇಕ ಅದ್ಭುತಗಳಿಗೆ ಹೆಸರಾದ ದೇಶ , ರಾಜಕೀಯದಲ್ಲಿ ಈಡಿ ಪ್ರಪಂಚವೆ ಕಣ್ಣರಳಿಸಿ ನೋಡುವಂತೆ ಇರುವ ದೇಶ , ಇಂದಿನ ರಾಜಕೀಯ ಏಕೊ ಬೇಸರ ಮೂಡಿಸುತ್ತಿದೆ. ಏಕೆಂದರೆ ಎಲ್ಲವು ಗಿಮಿಕ್ ಬರಿ ಜಾಹಿರಾತು ಜೀವನ ಜಾಹಿರಾತಿನಲ್ಲಿ ರಾಜಕೀಯ ನೈಜವಾಗಿ ಜನರ ಮುಟ್ಟು ಕೆಲಸಗಳು ಆಗುತ್ತಿಲ್ಲ ಎಂಬುವುದು ಭಾರತೀಯರ ಪಾಲಿಗೆ ಕಹಿಸತ್ಯ.

ಇತ್ತಿಚಿಗೆ ನಮ್ಮ ಅಂತರಜಾಲ ತಾಣಗಳಲ್ಲಿ ಮಾನ್ಯ ಮೋದಿಯವರ ವಿಚಿತ್ರ ಜಾಹಿರಾತುಗಳನ್ನು ನೋಡಿ ಗಾಬರಿ ಹುಟ್ಟಿಸುತ್ತವೆ. ಇನ್ನೇನು ತಾನು ಈ ದೇಶದ ಪ್ರಧಾನಿಯಾಗಿರುವೇನು ಎಂಬ ಕಲ್ಪನೆ ಅವು ನೊಡುಗರಿಗೆ ಮೂಡಿಸುತ್ತವೆ. ಮುಗ್ದ ಜನರನ್ನು ಇನ್ನಷ್ಟು ಮಂದರನ್ನಾಗಿ ಮಾಡುವ ಈ ಜಾಹಿರಾತುಗಳು ಅವರಿಂದ ಅದೆಷ್ಟು ಹಣ ವಸೂಲಿ ಮಾಡಬಹುದು ಲೆಕ್ಕಹಾಕಿ ನಾಳೆ ಇವರು ನಮ್ಮ ದೇಶದ ಪ್ರಧಾನಿಯಾದರೆ ಈಡಿ ನಮ್ಮ ದೇಶವನ್ನು ಜಾಹಿರಾತಿನಲ್ಲಿ ಮುಳಗಿಸುವುದರಲ್ಲಿ ಸಂದೇಹವೆ ಇಲ್ಲಾ.

ಮೊನ್ನೆ  ಪ್ರತಾಪ ರವರು ಬರೆದ ಮೋದಿ ಯಾರು ತುಳಿಯದ  ಹಾದಿ ಪುಸ್ತಕ ಓದಿದೆ ಅಲ್ಲಿ ಪುಸ್ತಕ ದುದ್ದಕ್ಕು  ಅವರ ವ್ಯಕ್ತಿತ್ವ ಬಹಳ ಮಾರ್ಮಿಕವಾಗಿ ಬರೆದಿದ್ದಾರೆ. ಅವರು ಅತಿ ಚಿಕ್ಕ ವಯಸ್ಸಿನಲ್ಲಿಯೆ ಈ ರಾಜಕೀಯ ಹಾದಿ ಹಿಡಿದು ಆರ್ ಎಸ್ ಎಸ್ ನ ಪಕ್ಕ ಕಾರ್ಯಕರ್ತನಾಗಿ ಮತ್ತೆ ಅದೆ ಗರಡಿಯಲ್ಲಿ ಪಳಗಿದ ಹುಲಿ ಎಂಬ ಮಾತು ಒಂದಡೆ ಕೇಳಿ ಬರುತ್ತದೆ. ಅವರ ಛಲ ಸಾಧನೆ ಎಲ್ಲವು ಮೆಚ್ಚಲೇಬೇಕು ಒಬ್ಬ ವ್ಯಕ್ತಿ ಯಾರ ಸಹಾಯವಿಲ್ಲದೆ ರಾಜಕೀಯ ರಂಗದಲ್ಲಿ ಅಷ್ಟು ಮೇಲೆತ್ತರಕ್ಕೆ ಬೆಳಿಯುವವುದು ಸಾಮಾನ್ಯವಾದ ಮಾತಲ್ಲಾ, ಆದರೆ ತಾನು ಈ ದೇಶದ ಪ್ರಧಾನಿಯಾಗಬೇಕು ಎನ್ನುವುದು ಸಾಮಾನ್ಯ ಜನ ಮಾತಾಡಿ ಅವರಿಗೆ ಗೌರವದಿಂದ ಸೂಚಿಸಬೇಕು, ಆದರೆ ಅದೇಕೊ ಮೋದಿಯವರು ಈ ಜಾಹಿರಾತಿನ ಸಹಾಯ ಪಡೆದು ತಾವು ಮುಂದಿನ ಪ್ರಧಾನಿಯೆಂದು ಬಿಂಬಿಸುತ್ತಿರುವರು ತಿಳಿಯದು, ಇದು ಹುಲಿಗೆ ಹೋಲಿಸುವ ರೀತಿ ಸರಿಯೆ ನೀವೆ ಯೋಚಿಸಿ.
ಮತ್ತಷ್ಟು ಓದು »

22
ಜುಲೈ

ಕಾಂಗ್ರೆಸ್ಸಿನ ‘ನಮೋ’ನಿಯಾ ಮತ್ತು ಸೆಕ್ಯುಲರ್ ‘ನಾಯಿಮರಿ’

–  ರಾಕೇಶ್ ಶೆಟ್ಟಿ

NaModiಭಾರತದಲ್ಲಿ ಭಾವುಕತೆಗೇನಾದರೂ ಬರವುಂಟೇ? ಹಾಗೇನಾದರೂ ಇದ್ದಿದ್ದರೆ ನಮ್ಮ ಸ್ಥಿತಿ ಸ್ವಲ್ಪಮಟ್ಟಿಗಾದರೂ ಸುಧಾರಿಸುತ್ತಿತ್ತೋ ಏನೋ? ಆದರೆ,ಭಾವುಕತೆ ಅನ್ನುವುದು ನಮ್ಮ ಅಸ್ಮಿತೆಯ ಭಾಗವಾಗಿರುವುದರಿಂದಲೇ ನಮ್ಮ ರಾಜಕಾರಣಿಗಳು,ರಾಜಕೀಯ ಪಕ್ಷಗಳು ಪದೇ ಪದೇ ಭಾವುಕತೆಯ ಬಿರುಗಾಳಿಯೆಬ್ಬಿಸಿ ತಮ್ಮ ಹಗರಣ,ವೈಫಲ್ಯಗಳನ್ನು ಮುಚ್ಚಿಕೊಳ್ಳುವುದು.ಅದರಲ್ಲೂ ಇಂತ ವಿಷಯದಲ್ಲಿ ಕಾಂಗ್ರೆಸ್ಸ್ ಪಕ್ಷದ್ದು ಉಳಿದೆಲ್ಲರಿಗಿಂತ ಒಂದು ‘ಕೈ’ ಮೇಲೆಯೇ ಹೌದು.

೨೪ ಗಂಟೆಯ ಮೀಡಿಯಾ ಯುಗದಲ್ಲಿ ದೊಡ್ಡ ದೊಡ್ಡ ಹಗರಣಗಳು ಸುದ್ದಿಯಾದಗಾಲೆಲ್ಲ ಕಾಂಗ್ರೆಸ್ಸ್ ಅದರಿಂದ ಹೊರಬರಲು ಒಂದು ಸಣ್ಣ ಎಳೆಯೇನಾದರೂ ಸಿಗುತ್ತದೆಯಾ ಅಂತ ನೋಡುತ್ತಿರುತ್ತದೆ.ಈ ಬಾರಿ ರೂಪಾಯಿ ಮೌಲ್ಯ ಕುಸಿದು,ಆಡಳಿತ ವ್ಯವಸ್ಥೆಯೇ ಹಳ್ಳ ಹಿಡಿದು ಕುಳಿತಿರುವಾಗ ಅದಕ್ಕೆ ಕಾಣಿಸಿದ ಬೆಳಕಿನ ಹಾದಿ “ನಾಯಿ ಮರಿ”…!

ಹೌದು. ಗುಜರಾತ್ ಮುಖ್ಯಮಂತ್ರಿ ರಾಯಿಟರ್ಸ್ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಬಳಸಿದ ನಾಯಿ ಮರಿ ಪದ.ರಾಯಿಟರ್ಸ್ ನೀಡಿದ ಸಂದರ್ಶನದಲ್ಲಿ ನಾಯಿ ಮರಿ ಬಂದಿದ್ದು ಹೇಗೆ ಅಂತ ನೋಡಿದರೆ,

ಸಂದರ್ಶಕ: “ಏನು (೨೦೦೨ ರ ಗಲಭೆ) ನಡೆಯಿತೋ ಆ ಬಗ್ಗೆ ನೀವು ಪಶ್ಚಾತ್ತಾಪ ಪಡುತ್ತಿರಾ?”

ಮತ್ತಷ್ಟು ಓದು »

17
ಜುಲೈ

‘ಹಿಂದು’ ಶಬ್ದ ಕೇಳುತ್ತಲೇ ಇವರೇಕೆ ಹುಯಿಲೆಬ್ಬಿಸುತ್ತಾರೆ?

– ಪ್ರವೀಣ್ ಪಟವರ್ಧನ್

Modi12ಕೆಲ ದಿನಗಳ ಹಿಂದಷ್ಟೇ ಬೋಧ್ಗಯಾ ಬಾಂಬ್ ಬ್ಲಾಸ್ಟ್ ಪ್ರಕರಣದ ನಂತರ ನೀಡಿದ್ದ ವಿಚಿತ್ರ- ವಿಕೃತ ಹೇಳಿಕೆಗಳನ್ನು ಆಧರಿಸಿ, ತಮಗೆ ಸಮಯ ಬಂದಾಗಲೆಲ್ಲಾ ತಮ್ಮ ತಪ್ಪುಗಳನ್ನು ಮುಚ್ಚಿ ಹಾಕಿ, ಇತರರ (ಉದ್ದೇಶಪೂರ್ವಕವಾಗಿ ಗುಜರಾತಿನ ಮುಖ್ಯಮಂತ್ರಿ ಮೋದಿಯವರ) ತೇಜೋವಧೆ ಮಾಡುವ ಕಾಂಗ್ರೆಸ್ಸಿಗ “ಒಸಾಮಾ ಜೀ” ಎಂದು ಮುಕ್ತ ಮನಸ್ಸಿನಿಂದ ಮರ್ಯಾದೆ ನೀಡಿದ ಖ್ಯಾತಿಯ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯಸಿಂಗ್ ಅವರನ್ನು ಕುರಿತು Facebook  ಜಾಲತಾಣದಲ್ಲಿ ಒಂದು ವ್ಯಂಗ್ಯ ಚಿತ್ರ ಹರಿದಾಡುತ್ತಿತ್ತು. ಸಂಕ್ಷಿಪ್ತವಾಗಿ ಹೇಳುವುದಾದರೆ ವ್ಯಂಗ್ಯಚಿತ್ರದಲ್ಲಿ ಇದ್ದುದು ಇಷ್ಟೇ. “ಟೀವಿಯಲ್ಲಿ ದಿಗ್ವಿಜಯಸಿಂಗ್ ಒಂದು ಪತ್ರಿಕಾ ಹೇಳಿಕೆ ನೀಡುತ್ತಿದ್ದಾಗ ಮನೆಯಲ್ಲಿನ ಸಾಕಿದ ನಾಯಿಗಳು ಟೀವಿ ನೋಡುತ್ತಾ ಬೊಗಳುತ್ತಿವೆ. ಮುಂದೇನೂ ಹೇಳಲಾರೆ. ನೀವೇ ಅರ್ಥ ಮಾಡಿಕೊಳ್ಳಬಲ್ಲಿರಷ್ಟೇ.

ರಾಜಕಾರಣಿಯೆಂದರೆ ಅಲ್ಲಿ ವಾದ-ವಿವಾದಗಳು ಸಾಮಾನ್ಯ. ಈಗಿನ ರಾಜಕಾರಣದಲ್ಲಿ ಜನಪರ ಕೆಲಸ ಮಾಡುವುದಕ್ಕಿಂತ ವಾದಗಳಿಗೆ ಸಿಲುಕಿಕೊಳ್ಳುವುದೇ ಹೆಚ್ಚು. ಒಬ್ಬರ ಮೇಲೋಬ್ಬರ ಕೆಸರೆರಚಾಟ. ವಿರೋಧ ಪಕ್ಷದ ವ್ಯಕ್ತಿಯ ತೇಜೋವಧೆ, ಸುಳ್ಳು ಆರೋಪ, ಅರ್ಥವಿಹೀನ ಹೇಳಿಕೆ ಇವೆಲ್ಲವೂ ಕೆಸರೆರೆಚಾಟದ ವಿವಿಧ ಮುಖಗಳು. ನಿಮ್ಮ ಸರ್ಕಾರ ಹೀಗೆ ಮಾಡಿದ್ದು ಸರಿಯೇ ಎಂಬ ಪ್ರಶ್ನೆಗೆ ಸಿಗುವ ಉತ್ತರ, ನಮ್ಮ ಹಿಂದಿನ ಸರ್ಕಾರ ಇದಕ್ಕಿಂತಲೂ ಕೆಟ್ಟ ಕೆಲಸ ಮಾಡಿತ್ತು ಅದರ ಬಗ್ಗೆ ಮಾತಾಡೋಣವೇ ಎಂದು ಕುಟುಕಿ ತಮ್ಮ ಲೋಪಗಳನ್ನು cover-up ಮಾಡಿಕೊಳ್ಳುವವರೇ ಈ ದಿನ ಹೆಚ್ಚು.

ಮತ್ತಷ್ಟು ಓದು »

20
ಜೂನ್

ಜಾನ್ ಮೆಕೇನ್ ಸ್ಪರ್ಧಿಯಾಗುವ ಮುನ್ನವೇ ಗೆದ್ದಿದ್ದರು ಒಬಾಮಾ, ಹಾಗೆಯೇ ಮೋದಿಯೂ!

– ಗೋಪಾಲ ಕೃಷ್ಣ

MoObಅದು 2008ರ ನವೆಂಬರ್ 04ನೇ ತಾರೀಖು.  ಹಲವು ಕಾರಣಗಳಿಗೆ ಅಮೇರಿಕಾ ಅಧ್ಯಕ್ಷೀಯ ಚುನಾವಣೆ ವಿಶೇಷತೆ ಪಡೆದುಕೊಂಡಿತ್ತು.  ಅದಕ್ಕೆ ಮುಖ್ಯವಾಗಿ ಕಾರಣವಾಗಿದ್ದು ಬರಾಕ್ ಒಬಾಮಾ.  ಎಲ್ಲಾ ಅಡೆತಡೆಗಳನ್ನು ದಾಟಿ ಚುನಾವಣೆಯ ಹೊಸ್ತಿಲಲ್ಲಿ ನಿಂತ ಒಬಾಮಾಗೆ ರಿಪಬ್ಲಿಕನ್ ಪಕ್ಷದ ಜಾನ್ ಮೆಕೇನ್ ಪ್ರತಿಸ್ಪರ್ಧಿಯಾಗಿದ್ದರು.  ಒಬಾಮಾ ಅವರೇ ಗೆಲ್ಲುತ್ತಾರೆ ಎನ್ನುವುದು ಚುನಾವಣೆಗೂ ಮುನ್ನವೆ ಅಮೇರಿಕಾದಲ್ಲಿ ಮಾತ್ರವಲ್ಲ ಇಡಿ ವಿಶ್ವದಲ್ಲೇ ನಿರೀಕ್ಷೆಗಳನ್ನು ಹುಟ್ಟಿಸಿತ್ತು.  ಆ ಪರಿಯ ಸಂಚಲನ ಮೂಡಿಸಿದ್ದರು ಒಬಾಮಾ.  ಅವರ ಪ್ರಚಾರ ವೈಖರಿ, ಬದಲಾವಣೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸಿದ್ದು, ಆಡಳಿತ ವಿರೋಧಿ ಅಲೆಯನ್ನು ಸಮರ್ಥವಾಗಿ ಬಳಸಿಕೊಂಡದ್ದು ಎಲ್ಲವೂ ಒಬಾಮಾ ಗೆಲುವಿನ ಹಾದಿಯನ್ನು ಸುಗಮಗೊಳಿಸಿದ್ದವು.  ಅಂತೆಯೇ ಗೆದ್ದು, ಅಧ್ಯಕ್ಷರಾದರು.

ಒಬಾಮಾ ಗೆಲುವಿನ ಹಾದಿಗೆ ಸಾಮ್ಯತೆ ಎನಿಸುವಂತಹ ಬೆಳವಣಿಗೆಗಳು ಭಾರತದಲ್ಲಿಯೂ ಗೋಚರಿಸುತ್ತಿವೆ, ಅದು ಮುಂದಿನ ಲೋಕಸಭಾ ಚುನಾವಣೆಗೆ.  ಇದಕ್ಕೆ ಕಾರಣವಾಗಿರುವುದು ನರೇಂದ್ರ ಮೋದಿಯವರ ನಡೆಗಳು ಮತ್ತು ಅವರ ವಿರೋಧಿಗಳ ಅಡ್ಡಗಾಲುಗಳು.

ಒಬಾಮಾ ಡೆಮಾಕ್ರೆಟಿಕ್ ಪಕ್ಷದ ಅಭ್ಯರ್ಥಿಯಾಗುವುದು ಸುಲಭವಾಗಿರಲಿಲ್ಲ.  ಜಾನ್ ಎಡ್ವಡ್ರ್ಸ್ ಮತ್ತು ಹಿಲರಿ ಕ್ಲಿಂಟನ್ ಅವರಿಂದ ಭಾರೀ ಸ್ಪರ್ಧೆಯನ್ನೇ ಎದುರಿಸಬೇಕಾಯಿತು.  ಅದರಲ್ಲೂ ಹಿಲರಿ ಕ್ಲಿಂಟನ್ ಕೊನೆಯ ಕ್ಷಣದವರೆಗೂ ಒಬಾಮಾ ಹಾದಿಗೆ ಮುಳ್ಳಾಗುತ್ತಲೇ ಇದ್ದರು.  ಅಧ್ಯಕ್ಷೀಯ ಚುನಾವಣೆಗಿಂತಲೂ ಡೆಮಾಕ್ರೆಟಿಕ್ ಪಕ್ಷದ ಅಭ್ಯರ್ಥಿ ಆಯ್ಕೆಯೇ ಅಮೇರಿಕಾದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು.  ಇದು ಒಬಾಮಾ ಗೆಲುವಿನಲ್ಲಿ ಪ್ರಮುಖ ಪಾತ್ರವನ್ನೂ ವಹಿಸಿತ್ತು.  ‘We ಓeeಜ ಅhಚಿಟಿge’ ‘ಅಊಂಓಉಇ, ತಿe ಛಿಚಿಟಿ’  ಎಂಬ ಘೋಷವಾಕ್ಯಗಳೊಂದಿಗೆ ಒಬಾಮಾ ಜನರ ಬಳಿಗೆ ಹೋದರು.  ಹಿಲರಿ ಕ್ಲಿಂಟನ್ ‘ಇxಠಿeಡಿieಟಿಛಿe’ ಬಗ್ಗೆ ಮಾತನಾಡುತ್ತ ಜನರನ್ನು ತನ್ನತ್ತ ಸೆಳೆಯಲು ಪ್ರಯತ್ನಿಸಿದರು.  ಮೊದಮೊದಲು ಜನರ ಭಾವನೆಗಳು ಅನುಭವಿ ಎಂಬ ಕಾರಣಕ್ಕೆ ಹಿಲರಿಯತ್ತ ವಾಲುತ್ತಿದ್ದವು.  ಒಬಾಮಾರಾದರೂ ಹೊಸಬರು, ಇನ್ನು ಕಲಿಯಬೇಕಾದ್ದು ಬಹಳಷ್ಟಿದೆ ಎಂಬ ಅಭಿಪ್ರಾಯವೂ ಮೂಡಿತ್ತು.  ಆದರೆ ವಾಸ್ತವವನ್ನರಿತು ಬದಲಾವಣೆ ತರಲು ತನ್ನಲ್ಲಿರುವ ಸಾಮಥ್ರ್ಯವನ್ನು ಜನರಿಗೆ ಬಿಡಿಬಿಡಿಯಾಗಿ ಬಿಚ್ಚಿಟ್ಟರು ಒಬಾಮಾ.  ಹಿಲರಿ ತಮ್ಮ ಅನುಭವದ ಬಗ್ಗೆ ಹೇಳಿದರೆ ಹೊರತು, ಬದಲಾವಣೆಯ ಬಗ್ಗೆ ಜನರನ್ನು ಸೆಳೆಯಲಿಲ್ಲ.  ಅಭ್ಯರ್ಥಿ ಆಯ್ಕೆಯಲ್ಲಿ ಒಬಾಮಾಗೆ ಶೇ.52ರಷ್ಟು ಮತ ಬಂದಿದ್ದರೆ, ಹಿಲರಿ ಶೇ.42 ಮತಗಳಿಗೆ ತೃಪ್ತಿಪಡಬೇಕಾಯಿತು.  ಹಿರಿತನಕ್ಕಿಂತಲೂ ಇಚ್ಛಾಶಕ್ತಿಯೇ ಮುಖ್ಯ ಎಂಬುದನ್ನು ಸಾಬೀತುಪಡಿಸಿದರು.  ಇದು ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯುವ ಅವಕಾಶವನ್ನು ಒಬಾಮಾಗೆ ತಂದಿತ್ತಿತು.

ಮತ್ತಷ್ಟು ಓದು »