ವಿಷಯದ ವಿವರಗಳಿಗೆ ದಾಟಿರಿ

Posts tagged ‘ನರೇಂದ್ರ ಮೋದಿ’

28
ಆಕ್ಟೋ

ದಲಿತರ ಹೆಗಲ ಮೇಲೆ ಬಂದೂಕಿಟ್ಟಿರುವ ಕೈಗಳು ಯಾರದ್ದು?

ರಾಕೇಶ್ ಶೆಟ್ಟಿ

udupi‘ಅಧಿಕಾರದಲ್ಲಿರುವ ಕಾಂಗ್ರೆಸ್ಸಿಗಿಂತಲೂ, ಅಧಿಕಾರದಲ್ಲಿರದ ಕಾಂಗ್ರೆಸ್ಸ್ ದೇಶಕ್ಕೆ ಅಪಾಯಕಾರಿ’ ಅಂತ ಗೆಳೆಯನೊಬ್ಬ ಆಗಾಗ್ಗೆ ಹೇಳ್ತಾ ಇರ್ತಾನೆ. 2014ರ ಮೇ 16 ರಂದು ಬಿಜೆಪಿ ಅಧಿಕಾರ ಹಿಡಿದ ದಿನದಿಂದ ಇವತ್ತಿನವರೆಗೂ ಕಾಂಗ್ರೆಸ್ಸ್ ಪಕ್ಷದವರ ಆರ್ಭಟಗಳನ್ನು ನೋಡಿದರೇ, ಗೆಳೆಯನ ಮಾತು ನಿಜವೆನಿಸುತ್ತದೆ. 2014ರ ಲೋಕಸಭಾ ಚುನಾವಣೆಯ ಫಲಿತಾಂಶ ಈ ಹಿಂದಿನ ಯಾವುದೇ ಚುನಾವಣೆಗಳಂತಿರಲಿಲ್ಲ. ಕಾಂಗ್ರೆಸ್ ಎಂಬ ಪುರಾತನ ಪಕ್ಷ ಮಕಾಡೆ ಮಲಗಿದರೇ, ಉಳಿದ ಅವಕಾಶವಾದಿ ಪ್ರಾದೇಶಿಕ, ಕೌಟುಂಬಿಕ, ಸೆಕ್ಯುಲರ್, ಕಮ್ಯುನಿಸ್ಟ್ ಪಕ್ಷಗಳು ಹೇಳ ಹೆಸರಿಲ್ಲದಂತಾದವು. ಮತ್ತಷ್ಟು ಓದು »

5
ಮಾರ್ಚ್

ಸೈನಿಕರೊಂದಿಗೆ ಸದೃಢ ಭಾರತ ಸರಕಾರ

– ಅನಿರುದ್ಧ ಎಸ್.ಆರ್ , ಭದ್ರಾವತಿ

56215932-indian“ಈ ಕ್ಷಣದಿಂದಲೇ ಪಾಕಿಸ್ಥಾನ ಅಪ್ರಚೋದಿತ ದಾಳಿ ನಡೆಸುವುದನ್ನು ನಿಲ್ಲಿಸಬೇಕು, ಭಾರತದ ಕಡೆಯಿಂದ ಎಂದಿಗೂ ಸ್ವಯಂ ಪ್ರೇರಿತವಾಗಿ ಗುಂಡಿನ ದಾಳಿ ನಡೆಯುವುದಿಲ್ಲ. ಆದರೆ ನಿಮ್ಮ ಕಡೆಯಿಂದ ಗುಂಡಿನ ದಾಳಿಯೇನಾದರೂ ನಡೆದರೆ, ಆನಂತರ ನಮ್ಮಿಂದ ಹಾರುವ ಗುಂಡುಗಳನ್ನು ಲೆಕ್ಕ ಹಾಕಲು ನಿಮಗೆ ಸಾಧ್ಯವಿಲ್ಲ ” ಹೀಗೆ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದು ಸರಕಾರದ ಗೃಹ ಸಚಿವರಾದ ರಾಜನಾಥ್ ಸಿಂಗ್.

ಹೌದು. ಆಡಳಿತರೂಢರಿಂದ ಇಂತಹ ಮಾತುಗಳನ್ನು ಕೇಳಲು ಮೋದಿ ನೇತೃತ್ವದ ಸರ್ಕಾರವೇ ಬರಬೇಕಾಯಿತು. ಕದನ ವಿರಾಮ ಉಲ್ಲಂಘನೆ, ಅಂತರಾಷ್ಟ್ರೀಯ ಗಡಿ ಒಪ್ಪಂದದ ಉಲ್ಲಂಘನೆ, ಗಡಿ ಭಾಗದ ನಾಗರಿಕ ವಸತಿ ಪ್ರದೇಶಗಳ ಮೇಲೆ ಗುಂಡಿನ ದಾಳಿ ಹಾಗೂ ಭಾರತೀಯ ಯೋಧರ ಮೇಲೆ ಅಪ್ರಚೋದಿತ ಗುಂಡಿನ ದಾಳಿ ನಡೆಸುವುದನ್ನೇ ಚಾಳಿಯನ್ನಾಗಿ ಮಾಡಿಕೊಂಡಿರುವ ಪಾಕಿಸ್ತಾನಕ್ಕೆ ಕಲಿಯುಗ ಅಸುರರೆಂಬ ಭಯೋತ್ಪಾದಕರ ಕುಮ್ಮಕ್ಕೂ ಇರುವುದು ಭಂಡ ಧೈರ್ಯಕ್ಕೆ ಕಾರಣ. ಈಗ 125 ಕೋಟಿ ಭಾರತೀಯರು  ಪೂರ್ಣ ಬಹುಮತದ ಶಕ್ತ ಸರಕಾರವನ್ನು ಆಯ್ಕೆ ಮಾಡಿದ ನಂತರ ಪಾಕ್ ಗೆ ಮಾತ್ರವಲ್ಲ ಭಯೋತ್ಪಾದನೆಯನ್ನು ನಡೆಸುತ್ತಿರುವ ಪ್ರತೀ ರಾಕ್ಷಸನಿಗೂ ಒಳಗೊಳಗೇ ನಡುಕ ಶುರುವಾಗಿದೆ. ಅದರ ಒಂದು ಪರಿಣಾಮವೇ ಪಾಕ್ ಸೇನೆಯೊಂದಿಗೆ ಸೇರಿಕೊಂಡು ಭಾರತದ ಗಡಿಯಲ್ಲಿ ನಡೆಸುತ್ತಿರುವ ಅಪ್ರಚೋದಿತ ದಾಳಿಯೆಂಬ ಭಯೋತ್ಪಾದನೆ. ಇಂತಹ ಕುತಂತ್ರಿಗಳನ್ನು ಗಡಿಯಲ್ಲಿ ಬಗ್ಗು ಬಡಿಯಲು ನಮ್ಮ ಸೈನಿಕರಿಗೆ ಮನಸ್ಸಿದ್ದರೂ ಹಿಂದಿನ ಸರ್ಕಾರದ ಅವಧಿಯಲ್ಲಿ ತಣ್ಣಗೆ ಕೂರಬೇಕಿತ್ತು. ಶತ್ರುಗಳಿಗೆ ದಿಟ್ಟ ಉತ್ತರ ನೀಡುವುದಿರಲಿ, ಕನಿಷ್ಟ ಹಿಮ್ಮೆಟ್ಟಿಸುವ ಕಾರ್ಯಕ್ಕೂ ಕೇಂದ್ರದ ಆದೇಶಕ್ಕಾಗಿ ಕಾಯಬೇಕಿತ್ತು.
ಮಾತೃಭೂಮಿಯ ರಕ್ಷಣೆಗಾಗಿ ಪ್ರಾಣತ್ಯಾಗಕ್ಕೆ ಸಿದ್ಧರಾಗಿದ್ದರೂ, ಬೇಕಾದರೆ ಪ್ರಾಣ ಬಿಡಿ, ಪ್ರತಿದಾಳಿ ನಡೆಸಬೇಡಿ ಎನ್ನುವುದು ನಮ್ಮ ಸೇನೆಗೆ ಹಿಂದಿನ ಸರ್ಕಾರ ನೀಡುತ್ತಿದ್ದ ಅಲಿಖಿತ ಮೌನ ಸಂದೇಶವಾಗಿತ್ತು. ಇದನ್ನರಿತೇ ಪಾಕ್ ಸೈನಿಕರು ಹಾಗೂ ಪಾಕ್ ಕೃಪಾಪೋಷಿತ ಉಗ್ರರು ಗಡಿಯಲ್ಲಿ ತೀವ್ರವಾಗಿ ದಾಳಿಗಳನ್ನು ನಡೆಸುತ್ತಿದ್ದರು. ನಮ್ಮ ಯೋಧರ ತಲೆ ಕತ್ತರಿಸಿಕೊಂಡು ಹೋದರೂ ಶತ್ರುಗಳಿಗೆ ದಿಟ್ಟ ಉತ್ತರ ನೀಡುವಲ್ಲಿ ಅಂದಿನ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಸೋತು ಜಗತ್ತಿನ ಮುಂದೆ ತಲೆ ತಗ್ಗಿಸಿನಿಂತಿದ್ದರೆ ಹೊಟ್ಟೆಯೆಲ್ಲಾ ಉರಿಯುತ್ತಿತ್ತು. ಆದರೆ, ಈಗ ಕಾಲ ಕೊಂಚ ಬದಲಾಗಿದೆ. ಮಾಹಿತಿಯೊಂದರ ಪ್ರಕಾರ ನಮ್ಮ ರಕ್ಷಣಾ ಬಜೆಟ್ 3.25 ಲಕ್ಷ ಕೋಟಿ, 13 ಲಕ್ಷ ಸೈನಿಕರು, 1905 ಯುದ್ಧ ವಿಮಾನಗಳು ನಮ್ಮಲ್ಲಿವೆ. ಇವೆಲ್ಲದರ ಜೊತೆಗೆ ಸೇನೆಗೆ ನಿರ್ಧಾರವನ್ನು ಕೈಗೊಳ್ಳೊ ಸ್ವಾತಂತ್ರ್ಯವನ್ನು ನೀಡಿ, ಅವರಿಗೆ ನೈತಿಕ ಸ್ಥೈರ್ಯ ತುಂಬುವ ಮೂಲಕ ಭಾರತದ ರಕ್ಷಣೆಗೆ ಸಮರ್ಥ ಪ್ರಧಾನಿಯ ನೇತೃತ್ವದಲ್ಲಿ ಯೋಗ್ಯ ರಕ್ಷಣಾ ಸಚಿವರು ಹಾಗು ಗೃಹ ಮಂತ್ರಿಗಳಿರುವುದು ನೆಮ್ಮದಿಯ ವಿಷಯ.
ಮೋದಿಯವರ ನೇತೃತ್ವದ ಸರಕಾರ ಅಸ್ತಿತ್ವಕ್ಕೆ ಬಂದ ನಂತರ ಗಡಿಯಲ್ಲಿ ದಾಳಿಗಳು ನಡೆದೇ ಇಲ್ಲವೆಂದು ಹೇಳುತ್ತಿಲ್ಲ. ವಾಸ್ತವವಾಗಿ ನೋಡುವುದಾದರೆ, ಮೋದಿ ಸರಕಾರ ಬಂದ ನಂತರ ಗಡಿಯಲ್ಲಿ ಪಾಕಿಗಳ ಉಪಟಳ ಹೆಚ್ಚಾಗಿದೆ ಎಂದೇ ಹೇಳಬೇಕು. ಅದಕ್ಕಿರುವ ಕಾರಣ ಮೋದಿ ಸರಕಾರದ ಮೇಲಿರುವ ಭಯವಷ್ಟೇ. ಅಂದರೆ ಗಡಿಯಲ್ಲಿ ದಾಳಿ ನಡೆಸಿದ ವೇಳೆ ಹಿಂದಿನಂತೆ ಪ್ರತಿದಾಳಿಗಾಗಿ ಆದೇಶಕ್ಕೆ ಈಗ ಕಾಯಬೇಕಿಲ್ಲ. ಇದಕ್ಕೆ ಸಾಕ್ಷಿಯಾಗಿ ರಕ್ಷಣಾ ಸಚಿವರಾದ ಮನೋಹರ್ ಪರಿಕ್ಕರ್ ಅವರ ಹಿಂದಿನ ಹೇಳಿಕೆಯೊಂದನ್ನು ನೋಡೋಣ. ಕಳೆದ ವರ್ಷ ಜಮ್ಮುವಿನ ಗಡಿಭಾಗದಲ್ಲಿ ಪಾಕ್ ಸೈನಿಕರು ನಡೆಸಿದ ದಾಳಿಗೆ ಓರ್ವ ಭಾರತೀಯ ಯೋಧ ಹುತಾತ್ಮನಾಗಿದ್ದ.
ಈ ದುಷ್ಕೃತ್ಯಕ್ಕೆ ಪ್ರತಿಯಾಗಿ ನಾಲ್ವರು ಪಾಕಿಸ್ತಾನದ ಸೈನಿಕರನ್ನು ನಮ್ಮ ಸೈನಿಕರು ಕ್ಷಣ ಮಾತ್ರದಲ್ಲಿ ಹೊಡೆದುರುಳಿಸಿದ್ದರು. ಪರಿಣಾಮ, ಬೆಚ್ಚಿದ ಪಾಕ್ ಸೇನೆ ಬಿಳಿ ಬಾವುಟ ತೋರಿಸಿ ದಾಳಿ ನಿಲ್ಲಿಸುವಂತೆ ಭಿಕ್ಷೆ ಬೇಡಿತ್ತು. ಹೀಗಾಗಿ ನಮ್ಮ ಕಡೆಯಿಂದ ಗುಂಡಿನ ದಾಳಿ ನಿಂತಿತ್ತು. ಆದರೆ, ಇದಾದ ಕೆಲವೇ ಗಂಟೆಗಳಲ್ಲಿ ತನ್ನ ನರಿ ಬುದ್ದಿಯನ್ನು ಪ್ರದರ್ಶಿಸಿದ ಪಾಕ್, ಭಾರತೀಯ ಪೋಸ್ಟಗಳ ಮೇಲೆ ಪುನಃ ದಾಳಿ ಆರಂಭಿಸಿತ್ತು. ಈ ಘಟನೆಗಳನ್ನೆಲ್ಲಾ ಸೂಕ್ಷ್ಮವಾಗಿ ಗಮನಿಸಿದ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ” ಪಾಕ್ಗೆ ಸರಿಯಾದ ಬುದ್ದಿ ಕಲಿಸಿ, ಪಾಕ್ ಕಡೆಯಿಂದ ಒಂದು ಗುಂಡು ಬಂದರೆ ಅದಕ್ಕೆ ಪ್ರತಿಯಾಗಿ ನಮ್ಮಿಂದ ನಾಲ್ಕು ಗುಂಡು ಹಾರಲಿ. ಅವರು ಒಮ್ಮೆ ಟ್ರಿಗರ್ ಒತ್ತಿದರೆ, ನಮ್ಮ ಕಡೆಯಿಂದ ನಿರಂತರವಾಗಿ ಗುಂಡಿನ ಮಳೆಗರೆಯಲಿ” ಎಂದಿದ್ದರು. ಎಲ್ಲಕ್ಕೂ ಮಿಗಿಲಾಗಿ ಅವರು ಹೇಳಿದ್ದ ಒಂದು ಮಾತು ” ನಿಮ್ಮೊಂದಿಗೆ ನಾವಿದ್ದೇವೆ” ಎಂದು.
ಇಂತಹ ಮಾತನ್ನು ಭಾರತೀಯ ಸೈನಿಕರು ಕೇಳಲು ಮೋದಿಯವರ ನೇತೃತ್ವದಲ್ಲಿ ಸರಕಾರ ಬರಬೇಕಾಯಿತು ಎಂದರೆ ನಾಚಿಕೆಯಾಗಬೇಕು ದಶಕಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ಸಿಗರಿಗೆ. ಈಗ ಪರಿಕ್ಕರ್ ರವರ ರೀತಿಯಲ್ಲಿಯೇ ಗೃಹ ಸಚಿವ ರಾಜನಾಥ್ ಸಿಂಗ್ ರವರು  ಕೂಡ ಮಾತನಾಡಿದ್ದು, ಪಾಕಿಸ್ತಾನ ಅಪ್ರಚೋದಿತ ದಾಳಿ ನಡೆಸುವುದನ್ನು ನಿಲ್ಲಿಸಬೇಕು. ಭಾರತದ ಕಡೆಯಿಂದ ಯಾವತ್ತೂ ಸ್ವಯಂ ಪ್ರೇರಿತವಾಗಿ ಗುಂಡಿನ ದಾಳಿ ನಡೆಯುವುದಿಲ್ಲ. ಆದರೆ, ನಿಮ್ಮ ಕಡೆಯಿಂದ ಗುಂಡಿನ ದಾಳಿಯೇನಾದರೂ ನಡೆದರೆ, ಆನಂತರ ನಮ್ಮಿಂದ ಹಾರುವ ಗುಂಡುಗಳನ್ನು ಲೆಕ್ಕ ಹಾಕಲು ನಿಮಗೆ ಸಾಧ್ಯವಿಲ್ಲ ಎಂದಿದ್ದಾರೆ. ಇಲ್ಲಿ ಈ ಮಾತಿಗೆ ಹೆದರಿ ಪಾಕ್ ಸೇನೆ ಹಿಂಜರಿಯುತ್ತದೆ ಎಂಬ ಭ್ರಮೆ ನಮ್ಮದಲ್ಲ. ಆದರೆ, ಆಡಳಿತಾರೂಢರಿಂದ ಇಂತಹ ಮಾತುಗಳು ಸೇನೆಗೆ ನೈತಿಕ ಬಲವನ್ನು ತುಂಬುತ್ತದೆ. ಆ ಮೂಲಕ ದೇಶಕ್ಕಾಗಿ ಪ್ರಾಣತ್ಯಾಗಕ್ಕೂ ಸಿದ್ಧರಾಗಿರುವ ಯೋಧರ ಕಾರ್ಯವನ್ನು ಗೌರವಿಸಿದಂತಾಗುತ್ತದೆ ಎನ್ನುವುದು ವಾಸ್ತವ. ಇದರೊಂದಿಗೆ ಪಾಕಿಸ್ತಾನದ ಈ ಭಯೋತ್ಪಾದನಾ ಚಟುವಟಿಕೆಯನ್ನು ಮಟ್ಟ ಹಾಕಲು ನೈತಿಕ ಸ್ಥೈರ್ಯ ತುಂಬುವ ಜೊತೆಯಲ್ಲಿ, ಸೇನೆಗೆ ಅತ್ಯಾಧುನಿಕ ಶಸ್ತ್ರಾಸ್ತ್ರಾಗಳನ್ನು ಒದಗಿಸುವುದರ ಜೊತೆಗೆ ರಾಫೆಲ್ ಜೆಟ್ನಂತಹ ಯುದ್ಧ ವಿಮಾನದ ಖರೀದಿಗೆ ಭಾರತ ಸರಕಾರ ಒಪ್ಪಂದ ಮಾಡಿಕೊಂಡಿರುವುದು ನಿಜಕ್ಕೂ ಸೇನೆಗೆ ನೂರಾನೆ ಬಲ ಬಂದಂತಾಗಿದೆ. ಹೀಗಿದ್ದಾಗ, ಪ್ರತಿ ಯೋಧನೂ ಒಂದೊಂದು ಅಸ್ತ್ರವಾಗಿ ದೇಶಕ್ಕಾಗಿ ಹೋರಾಡಬಲ್ಲ. ಇವರೊಂದಿಗೆ ನಿಜವಾದ ದೇಶಪ್ರೇಮಿಗಳೂ ಸೇನೆಯೊಂದಿಗಿದ್ದಾರೆ. ಪಾಪಿಗಳೇ ಬಾಲ ಮುದುರಿ, ಇಲ್ಲವೇ ಹೆಡೆಮುರಿ ಕಟ್ಟುತ್ತೇವೆ. ಇಲ್ಲವೇ, ಬಾಂಗ್ಲಾ ಗಡಿಯಲ್ಲಿ ನುಗ್ಗಿ, ನಾಗಾ ಉಗ್ರರನ್ನು ಅಟ್ಟಾಡಿಸಿಕೊಂಡು ಬೇಟೆಯಾಡಿದಂತೆ, ಭಾರತೀಯ ಯೋಧರು ಪಿಒಕೆಯಲ್ಲಿ ನಿಮ್ಮನ್ನು ಬೇಟೆಯಾಡುವ ದಿನ ದೂರವಿಲ್ಲ. ಎಚ್ಚರ !.
ಕೊನೆಯಲ್ಲಿ…
ಪರಮವೀರ ಚಕ್ರ ವಿಜೇತ ಸುಬೇದಾರ್ ಯೋಗೀಂದ್ರ ಸಿಂಗ್ ಅವರೊಂದಿಗೆ ಮಾತನಾಡುತ್ತಿದ್ದಾಗ ಅವರು ಹೇಳಿದ ಮಾತು ನೆನಪಿಗೆ ಬರುತ್ತಿದೆ.
“ಶತ್ರುಗಳು ಎಷ್ಟೇ ಪ್ರಬಲರಾಗಿದ್ದರೂ ಅವರನ್ನು ಎದುರಿಸಿ ಜಯಭೇರಿ ಬಾರಿಸುವಷ್ಟು ಸಾಮರ್ಥ್ಯ ನಮ್ಮ ಭಾರತೀಯ ಸೇನೆಗೆ ಇದೆ. ಅಸ್ತ್ರ, ಅಣ್ವಸ್ತ್ರಕ್ಕಿಂತಲೂ ಭಾರತೀಯ ಸೇನೆಯಲ್ಲಿರುವ ಪ್ರತಿಯೊಬ್ಬ ಯೋಧನೂ ಶಕ್ತಿಶಾಲಿಯಾದ ಒಂದೊಂದು ಪ್ರಬಲ ಅಸ್ತ್ರ “

ಮತ್ತಷ್ಟು ಓದು »

11
ಡಿಸೆ

ಮಲೇಷ್ಯಾದಲ್ಲಿ ನರಕಯಾತನೆ ಅನುಭವಿಸುತಿದ್ದ ಯುವಕರಿಗೆ ಒಂದು ಈ-ಮೇಲ್ ‪#‎ಅಚ್ಚೇದಿನ್‬ ತಂದ ಕಥೆ

– ಅರುಣ್ ಬಿನ್ನಡಿ

Anil Chalageriಕಾಡಿ ಬೇಡಿದ್ದಕ್ಕೆ ದಿನಕ್ಕೆ ಸಿಗುತ್ತಿದ್ದದ್ದು ಕೇವಲ ಒಂದೊತ್ತು ಊಟ,ಭವಿಷ್ಯದ ಕನಸುಗಳು ಮೊಸದ ಜಾಲಕ್ಕೆ ಸಿಲುಕಿ ಕಣ್ಮರೆಯಾಗಿದ್ದವು,ಕತ್ತಲೆಯ ಕೊಣೆಯಲ್ಲಿ ೨೦ ದಿನಗಳಿಂದ ನರಕಯಾತನೆಯ ರೌದ್ರನರ್ತನ,ಅಷ್ಟಕ್ಕೂ ಹೇಗಾದರು ಈ ವಿಷವರ್ತುಲದಿಂದ ಜೀವವನ್ನಾದರು ಉಳಿಸಿಕೊಳ್ಳೊಣವೆಂದರೆ ಆ ದೇಶದಲ್ಲಿ ಯಾರು ಪರಿಚಿತರಿರಲಿಲ್ಲ,ಒಟ್ಟಿನಲ್ಲಿ ಆ ಯುವಕರ ಪಾಲಿಗೆ ಜಗತ್ತಿನ ಬೆಳಕು ನೊಡಲು ಯಾವ ದಾರಿಯು ಉಳಿದಿರಲಿಲ್ಲ,ಉದ್ಯೋಗ ಅರಸಿ ದೂರದ ಮಲೇಶಿಯಾಕ್ಕೆ ಹೋದ ನಮ್ಮ ಬೆಂಗಳೂರಿನ ಇಬ್ಬರು ಯುವಕರ ದಾರುಣ ಕಥೆ ಇದು.

ಬೆಂಗಳೂರಿನ ಕೆಂಗೇರಿಯ ರಾಜೀವ್ ಮತ್ತು ಪ್ರಭು ಎಂಬ ಯುವಕರಿಬ್ಬರು ಉದ್ಯೋಗಕ್ಕಾಗಿ ಮಲೇಷ್ಯಾಗೆ ತೆರಳಲು ನಿರ್ಧರಿಸಿದ್ದರು.ಆಗ್ರಾದಲ್ಲಿರುವ ಟ್ರಾವೆಲ್ ಏಜೆಂಟ್ ಇಬ್ಬರಿಂದಲೂ ತಲಾ ೨.೫೦ಲಕ್ಷ ಹಣವನ್ನು ಕೇಳಿದ್ದಾನೆ.ಈ ಹುಡುಗರು ಹಣ ನೀಡಿದ ಬಳಿಕ ಅವರಿಗೆ ಏರ್-ಟಿಕೇಟ್ ಕೊಟ್ಟು ಮಲೇಷ್ಯಾಗೆ ಕಳುಹಿಸಲಾಗಿದೆ.ಅಲ್ಲಿ ತಲುಪಿಕೊಂಡ ನಂತರ ತಿಳಿದುಬಂದಿದ್ದೇನೆಂದರೆ ಭಾರತದ ಏಜೆಂಟ್ ಅಲ್ಲಿನ ಏಜೆಂಟರಿಗೆ ದುಡ್ಡು ನೀಡಿರಲಿಲ್ಲ.ಅಲ್ಲಿನ ಏಜೆಂಟರು ಈ ಹುಡುಗರನ್ನು ೧೮ ದಿನಗಳ ಗೃಹಬಂಧನದಲ್ಲಿಟ್ಟು ದಿನಕ್ಕೆ ಒಂದೊತ್ತು ಊಟ ಮಾತ್ರ ನೀಡುತಿದ್ದರು ಮತ್ತು ಕುಟುಂಬದವರಿಗೆ ಕರೆ ಮಾಡಿಸಿ ಹಣಕ್ಕಾಗಿ ಬೇಡಿಕೆಯಿಡುತಿದ್ದರು.ಅತ್ತ ಆ ಯುವಕರು ಸಿಬು ಎಂಬ ಸಣ್ಣ ಪಟ್ಟಣದಲ್ಲಿ ಒಂದು ಕೋಣೆಯಲ್ಲಿ ಬಂಧಿತರಾಗಿ ಹೈರಾಣಗಿದ್ದರೇ,ಇತ್ತ ಹೆತ್ತವರಿಗೆ ದಿಕ್ಕು ತೋಚದಂತಾಗಿತ್ತು.ಈ ಸುದ್ದಿ ಕೆಂಗೇರಿ ಬಿಜೆಪಿಯ ಯುವಮುಖಂಡರಾದ ಅನಿಲ್ ಚಳಗೇರಿಯವರ ಗಮನಕ್ಕೆ ಬಂದಿದೆ.

ಮತ್ತಷ್ಟು ಓದು »

31
ಆಕ್ಟೋ

ಉಕ್ಕಿನ ಮನುಷ್ಯನಿಗೆ ಸಿಗಲಿ ತಕ್ಕ ಗೌರವ

– ರೋಹಿತ್ ಚಕ್ರತೀರ್ಥ

ಸರ್ದಾರ್ ವಲ್ಲಭಾಯ್ ಪಟೇಲ್1909ರ ಒಂದು ದಿನ. ನ್ಯಾಯಾಲಯದಲ್ಲಿ ಕ್ರಾಸ್ ಎಕ್ಸಾಮಿನೇಶನ್ ನಡೆಯುತ್ತಿದೆ. ನಿರಪರಾಧಿಯೊಬ್ಬ ಅಪರಾಧಿ ಸ್ಥಾನದಲ್ಲಿ ನಿಂತಿದ್ದಾನೆ. ವಕೀಲರು ಪಾಟೀಸವಾಲು ಹಾಕುತ್ತಿರುವಾಗಲೇ ಮಧ್ಯದಲ್ಲಿ ಅವರಿಗೊಂದು ಟೆಲಿಗ್ರಾಂ ಬಂತು. ಆ ಕಾಲದಲ್ಲಿ ಯಾರಿಗಾದರೂ ತಂತಿ ಸಂದೇಶ ಬಂತೆಂದರೆ ಅದು ಸಾವಿನ ಸುದ್ದಿಯೆಂದೇ ಲೆಕ್ಕ. ಚೀಟಿಯತ್ತ ಒಮ್ಮೆ ಕಣ್ಣುಹಾಯಿಸಿ, ಕ್ಷಣಕಾಲ ಕಣ್ಣುಮುಚ್ಚಿ ದೀರ್ಘವಾಗಿ ಉಸಿರೆಳೆದು, ಅವರು ಆ ಚೀಟಿಯನ್ನು ತನ್ನ ಕೋಟಿನ ಜೇಬಿನೊಳಗಿಳಿಸಿ ವಾದ ಮುಂದುವರಿಸಿದರು. ಕೊನೆಗೆ ಕಟಕಟೆಯಲ್ಲಿ ನಿಂತಿದ್ದ ವ್ಯಕ್ತಿ ನಿರಪರಾಧಿಯೆಂದು ಸಾಬೀತಾಯಿತು. ಕೋರ್ಟಿನ ಕಲಾಪಗಳು ಮುಗಿದ ನಂತರ ನ್ಯಾಯಮೂರ್ತಿಗಳು ಟೆಲಿಗ್ರಾಂ ವಿಷಯ ಪ್ರಸ್ತಾಪಿಸಿದಾಗ ವಕೀಲರು, “ಅದು ನನ್ನ ಪತ್ನಿಯ ಸಾವಿನ ಸುದ್ದಿ. ನಾನು ಆ ಕೂಡಲೇ ನ್ಯಾಯಾಲಯದಿಂದ ಹೊರಟುಬಿಡುತ್ತಿದ್ದರೆ ಇಲ್ಲಿ ನಿರಪರಾಧಿಯ ಪರವಾಗಿ ವಾದಿಸುವವರು ಯಾರೂ ಇಲ್ಲದೆ ಅವನು ಶಿಕ್ಷೆಗೆ ಗುರಿಯಾಗುತ್ತಿದ್ದನೇನೋ. ಒಂದು ಪ್ರಾಣ ಹೇಗೂ ಹೋಗಿಯಾಗಿದೆ. ಇಲ್ಲಿಂದ ಹೊರನಡೆದಿದ್ದರೆ ಈ ದಿನ ನಾನು ಎರಡನೇ ಸಾವನ್ನೂ ನೋಡಬೇಕಾಗಿತ್ತಲ್ಲ” ಎಂದರು. ಸರ್ದಾರ್ ವಲ್ಲಭಭಾಯಿ ಪಟೇಲರನ್ನು ಉಕ್ಕಿನ ಮನುಷ್ಯ ಎಂದು ಕರೆಯುವುದು ಸುಮ್ಮನೇ ಅಲ್ಲ ಎನ್ನುವುದಕ್ಕೆ ಇದೊಂದು ದೃಷ್ಟಾಂತ ಸಾಕು.

ಪಟೇಲರು 1875ನೇ ಇಸವಿ ಅಕ್ಟೋಬರ್ 31ರಂದು ಗುಜರಾತ್‍ನಲ್ಲಿ ಜನಿಸಿದರು. ಪಟೇಲ್ ಸಮುದಾಯದ ಸಂಪ್ರದಾಯದಂತೆ ಹುಡುಗನಿಗೆ 18ರ ಹರೆಯದಲ್ಲೇ ಮದುವೆಯಾಯಿತು. ಕುಟುಂಬ ದೊಡ್ಡದು. ಜೀವನ ನಿರ್ವಹಣೆಗೆ ಶಕ್ತಿಮೀರಿ ದುಡಿಯುವುದು ಅನಿವಾರ್ಯ ಕರ್ಮವಾಗಿದ್ದ ಕಾಲ. ಪಟೇಲರು ಸ್ವಂತ ಪರಿಶ್ರಮದಿಂದ ಓದಿ, ಪದವಿ ಪಡೆದು, ಉನ್ನತ ವ್ಯಾಸಂಗಕ್ಕೆ ಇಂಗ್ಲೆಂಡಿಗೆ ಹೋಗುವ ಕನಸು ಕಂಡಿದ್ದರು. ಅವರ ಕನಸಿಗೆ ನೀರೆರೆಯುವಂತೆ ಇಂಗ್ಲೆಂಡಿನಿಂದ ವಕೀಲಿ ವ್ಯಾಸಂಗದ ಪ್ರವೇಶಾತಿಯ ಕಾಗದಪತ್ರಗಳೂ ಪ್ರಯಾಣದ ಟಿಕೇಟೂ ಬಂದವು. ಆ ಎಲ್ಲ ದಾಖಲೆಗಳಲ್ಲೂ ಪಟೇಲರ ಹೆಸರನ್ನು ವಿ.ಜೆ. ಪಟೇಲ್ ಎಂದು ನಮೂದಿಸಲಾಗಿತ್ತು. ಆಗ, ಇಂಗ್ಲೆಂಡಿಗೆ ಹೋಗಿ ಕಲಿಯಲು ತನಗೂ ಆಸೆಯಿದೆ ಎಂದು ಸೋದರ ವಿಠಲಭಾಯಿ ಝಾವೆರ್‍ಬಾಯಿ ಪಟೇಲ್ ಮುಂದೆ ಬಂದು ಅಣ್ಣನ ಬಳಿ ಹೇಳಿಕೊಂಡ. ಅಣ್ಣ ವಲ್ಲಭಭಾಯಿ ತಮ್ಮನ ಆಸೆ ಮನ್ನಿಸಿ ಆತನಿಗೆ ವಿದೇಶಕ್ಕೆ ಹೋಗಲು ಅವಕಾಶ ಮಾಡಿಕೊಟ್ಟು ತಾನು ಭಾರತದಲ್ಲೆ ಉಳಿದರು. ವಜ್ರದಂಥ ವ್ಯಕ್ತಿಯ ಮನಸ್ಸು ಹೂವಿನಷ್ಟು ಮೃದುವೂ ಆಗಿತ್ತೆನುವುದಕ್ಕೆ ಈ ಘಟನೆ ಸಾಕ್ಷಿ.

ಮತ್ತಷ್ಟು ಓದು »

10
ಆಕ್ಟೋ

ಈಗ ಎಲ್ಲರ ಚಿತ್ತ ಬಿಹಾರದತ್ತ…..!!!

– ಕೆ.ಎಸ್ ರಾಘವೇಂದ್ರ ನಾವಡ

ಬಿಹಾರ ಚುನಾವಣೆಬಿಹಾರದಲ್ಲಿ ಮತ್ತೊಮ್ಮೆ ನರೇ೦ದ್ರ ಮೋದಿಯವರ ಚರಿಶ್ಮಾ  ಸಾಬೀತಾಗಲು ಆಖಾಡ ಸಿಧ್ಧವಾಗಿದೆ! ತನ್ನ ೧೮ ವರ್ಷಗಳ ಮಿತ್ರಪಕ್ಷವೀಗ ಬಿಹಾರದಲ್ಲಿ ಭಾ.ಜ.ಪಾಕ್ಕೆ ಎದುರಾಗಿ ಚುನಾವಣಾ ಆಖಾಡದಲ್ಲಿ ತನ್ನೆಲ್ಲ ವಿರೋಧಿಗಳೊ೦ದಿಗೆ ಕೈ ಜೋಡಿಸಿಕೊ೦ಡು ಮೈಕೊಡವಿ ಮೇಲೆದ್ದಿದೆ! ಎ೦ದಿಗೂ ಮೈತ್ರಿ ಸಾಧ್ಯವೇ ಇಲ್ಲವೇನೋ ಎ೦ಬ೦ತೆ ಬಧ್ಧ ಎದುರಾಳಿಗಳಾಗಿದ್ದ ಲಾಲು-ನಿತೀಶ್ ಒ೦ದಾಗಿದ್ದಾರೆ. ರಾಜಕೀಯದಲ್ಲಿ ಶಾಶ್ವತವಾಗಿ ಯಾರೂ ಮಿತ್ರರಲ್ಲ ಹಾಗೆಯೇ ಶತ್ರುಗಳೂ  ಅಲ್ಲ ! ಎ೦ಬುದು ಸಾಬೀತಾಗಿದೆ! ಜೊತೆಗೆ ಕಾ೦ಗ್ರೆಸ್, ಜೆ.ಎಮ್. ಸೊರೇನ್ ಎಲ್ಲಾ ನಿತೀಶ್ರೊ೦ದಿಗೆ ಕೈ ಜೋಡಿಸಿದ್ದಾರೆ! ಇತ್ತ ಭಾ.ಜ.ಪಾದೊ೦ದಿಗೆ ಮಾ೦ಜಿ, ರಾಮ್ ವಿಲಾಸ್ ಪಾಸ್ವಾನ್ ಜೊತೆಯಾಗಿದ್ದಾರೆ. ಒಟ್ಟಾರೆ ರ೦ಗ ಸಿಧ್ಧವಾಗಿದೆ.ನಾಟಕ ಇನ್ನಷ್ಟೇ ಶುರುವಾಗಬೇಕಿದೆ!

ಕಾ೦ಗ್ರೆಸ್ ಗೆ ಏಕಾ೦ಗಿಯಾಗಿ ಬಿಹಾರದಲ್ಲಿ ಸ್ಪರ್ಧಿಸುವ ತಾಕತ್ತೇ ಇಲ್ಲ. ಬಿ.ಜೆ.ಪಿಗಾದರೂ ಸ್ವಲ್ಪವಾದರೂ ತಾಕತ್ತಿದೆಯೇನೋ ಎನ್ನಬಹುದು! ಬೇರಾವ ಪಕ್ಷಗಳಿಗೂ ಅಲ್ಲಿ ಸ್ವ೦ತ ನೆಲೆ ಇಲ್ಲ! ಪಕ್ಕದಲ್ಲಿ ಯಾರದರೊಬ್ಬರು ಇರಲೇಬೇಕು. ಹೆಚ್ಚಾಗಿ ನರೇ೦ದ್ರ ಮೋದಿ ಬ೦ದ ನ೦ತರ ವಿರೋಧ ಪಕ್ಷಗಳೆಲ್ಲಾ ಮಖಾಡೆ ಮಲಗಿ ಬಿಟ್ಟಿವೆ! ಸ೦ಸತ್ ಅಧಿವೇಶನ ನಡೆಯದ೦ತೆ ಮಾಡುವಲ್ಲಿ ಮಾತ್ರವೇ ವಿರೋಧ ಪಕ್ಷಗಳ ತಾಕತ್ತು ಸಾಬೀತಾಗಿದ್ದು ಬಿಟ್ಟರೆ, ಕಾ೦ಗ್ರೆಸ್ ನಲ್ಲೀಗ ಮೌನ! ರಾಹುಲ್ ಹಿ೦ದೆ ಸರಿದಿದ್ದಾರೆ. ಮತ್ತೊಮ್ಮೆ ಸೋನಿಯಾರಿಗೇ ದಾರಿ ಮಾಡಿಕೊಟ್ಟಿದ್ದಾರೆ! ರಾಹುಲ್ ಗಾ೦ಧೀಯದ್ದೀಗ ಮೌನ ಕ್ರಾ೦ತಿ! ಬಿಹಾರದಲ್ಲಿ ಮಹಾ ಮೈತ್ರಿಕೂಟದಿ೦ದ ಸಮಾಜವಾದಿ ಪಕ್ಷ ಹೊರಗೆ ಬ೦ದು ಸ್ವತ೦ತ್ರವಾಗಿ ಸ್ಪರ್ಧಿಸುವ ಘೋಷಣೆ ಮಾಡಿದ್ದು ಆ ಮಟ್ಟಿಗಾದರೂ ವಿರೋಧಿಗಳ ಬಲವನ್ನು ಕು೦ಠಿತಗೊಳಿಸಿದ್ದು ಸತ್ಯವೂ ಹೌದು! ಹಿ೦ದೆ ಜಾರ್ಖ೦ಡ್ ನಲ್ಲಿನ ತನ್ನ ಸರಕಾರವನ್ನು ಬೀಳಿಸಿದ್ದ ಜೆ.ಎಮ್.ಎಮ್ ಇಲ್ಲಿ ಭಾ.ಜ.ಪಾವನ್ನು ಹೆಡೆಮುರಿ ಕಟ್ಟಲು ನಿತೀಶ್ ರೊ೦ದಿಗೆ ಕೈಗೂಡಿಸಿದೆ. ಒಟ್ಟಾರೆ ಅಲ್ಲೀಗ ಎರಡು ಬಣಗಳು!. ಒ೦ದು ನಿತೀಶ್ –ಲಾಲೂ ಮೈತ್ರಿಕೂಟವಾದರೆ ಮತ್ತೊ೦ದೆಡೆ ಭಾ,ಜಪಾ ಮೈತ್ರಿಕೂಟ.
ಮತ್ತಷ್ಟು ಓದು »

19
ಮೇ

ಚುನಾವಣೆ 2014: ಯುಪಿಎ ಸೋಲಿಗೆ ಕಾರಣಗಳೇನು?

– ತುರುವೇಕೆರೆ ಪ್ರಸಾದ್

SRಲೋಕಸಭಾ ಚುನಾವಣೆಯ ಚುನಾವಣೋತ್ತರ ಸಮೀಕ್ಷೆ ನಿಜವಾಗಿದ್ದು ಅದರಂತೆ ಬಿಜೆಪಿ ಮತ್ತು ಅದರ ಮಿತ್ರಪಕ್ಕಗಳನ್ನೊಳಗೊಂಡ ಎನ್‍ಡಿಎ ಕಳೆದ 25 ವರ್ಷಗಳಲ್ಲೇ ಐತಿಹಾಸಿಕ ಎನ್ನಬಹುದಾದ ಭಾರೀ  ಗೆಲುವು ದಾಖಲಿಸಿದೆ. ಯುಪಿಎ ನೂರರ ಗಡಿ ಮುಟ್ಟಲಾಗದೆ ದಯನೀಯ ಸೋಲು ಕಂಡಿದೆ. ಯುಪಿಎ ವೈಫಲ್ಯಕ್ಕೆ ಕಾರಣವಾದ ಹಲವು ಅಂಶಗಳಿವೆ. ಅವುಗಳಲ್ಲಿ  ಮಿತಿ ಮೀರಿದ ಭ್ರಷ್ಟಾಚಾರ, ಸಾಲು ಸಾಲು ಹಗರಣಗಳು, ಹಣದುಬ್ಬರ, ಬೆಲೆಯೇರಿಕೆ  ಇವು ಪ್ರಮುಖ ಕಾರಣಗಳು. ಯುಪಿಎ ಸರ್ಕಾರದ ವೈಫಲ್ಯಕ್ಕೆ ಕಾರಣವಾದ  ಅಂಕಿ-ಅಂಶಗಳನ್ನು ಖ್ಯಾತ ಪತ್ರಕರ್ತ ಸೆನ್‍ಗುಪ್ತ ಪಟ್ಟಿ ಮಾಡಿದ್ದಾರೆ.  ಅವುಗಳ ಸಾರಾಂಶ ಈ ಕೆಳಕಂಡಂತಿದೆ

•    ಯುಪಿಎ ಆಢಿತಾವಧಿಯಲ್ಲಿ ನಡೆದ 1.76 ಲಕ್ಷ ಕೋಟಿಯ 2ಜಿ ಹಗರಣ, 1.85 ಲಕ್ಷ ಕೋಟಿಯ ಕಲ್ಲಿದ್ದಲು ಹಂಚಿಕೆ ಹಗರಣ, ರೂ.3600 ಕೋಟಿಯ ಅಗಸ್ಟಾ ವೆಸ್ಟ್‍ಲ್ಯಾಂಡ್ ಹೆಲಿಕಾಪ್ಟರ್ ಹಗರಣ, 90 ಕೋಟಿ ಹಣ ದುರುಪಯೋಗದ ಕಾಮನ್‍ವೆಲ್ತ್ ಕ್ರೀಡಾಕೂಟದ ಹಗರಣ, ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಮಿಶನ್‍ನಿಂದ 5000 ಕೋಟಿ ದುರುಪಯೋಗದ ಆರೋಪ ಹೊತ್ತಿರುವ ಮಾಯಾವತಿ ಸರ್ಕಾರದ ಹಗರಣ- ಇವನ್ನು ಜನ ಎಂದಿಗೂ ಕ್ಷಮಿಸುವುದಿಲ್ಲ ಎಂಬುದನ್ನು ಈ ಚುನಾವಣೆಯಲ್ಲಿ ತೋರಿಸಿಕೊಟ್ಟಿದ್ದಾರೆ.

•    2011ರಲ್ಲಿ ಸುಮಾರು 4 ಲಕ್ಷ ಕೋಟಿ ಕಪ್ಪು ಹಣ ಭಾರತದಿಂದ ಆಚೆ ಸಾಗಿಸಲಾಗಿದೆ. ಇದು 2010ರ ಶೇ.24ರಷ್ಟು ಹೆಚ್ಚು. ಪ್ರತಿ ವರ್ಷ ಇದು ಅವ್ಯಾಹತವಾಗಿ ನಡೆದು ಬಂದಿದೆ. ಆದರೆ ಸ್ವಿಸ್ ಬ್ಯಾಂಕ್‍ನಲ್ಲಿದೆ ಎಂದು ಹೇಳಾಗಿರುವ 1456 ಬಿಲಿಯನ್ ಡಾಲರ್ ಹಣ ಹಿಂದೆ ಪಡೆಯಲು ಯುಪಿಎ ಸರ್ಕಾರ ಯಾವ ಗಂಭೀರ ಪ್ರಯತ್ನವನ್ನೂ ಮಾಡಲಿಲ್ಲ.

•    ಯುಪಿಎ ಸರ್ಕಾರದ ಮಹದಾಕಾಂಕ್ಷಿ ಯೋಜನೆ ಎನಿಸಿದ ಉದ್ಯೋಗ ಖಾತ್ರಿ ಯೋಜನೆಯಡಿ ಯುಪಿಎ ಸರ್ಕಾರ 1.9ಲಕ್ಷ ಕೋಟಿ ಹಣ ವೆಚ್ಚ ಮಾಡಿದೆ. ಆದರೆ ಶೇ.31 ಗ್ರಾ.ಪಂಚಾಯ್ತಿಗಳಿಗೆ ಈ ಹಣ ಹೇಗೆ ವಿನಿಯೋಗಿಸಬೇಕು ಎಂಬುದೇ ಗೊತ್ತಿಲ್ಲ, ರಾಜ್ಯದಲ್ಲಿನ ಹಳೆ ಉಳಿಕೆ, ಬಳಕೆಯ ಲೆಕ್ಕವೇ ಇಡದೆ  ಕಳೆದ 3 ವರ್ಷಗಳಿಂದ ಒಟ್ಟಾರೆ 11549 ಕೋಟಿ  ಹಣ ಬಿಡುಗಡೆ ಮಾಡಲಾಗಿದೆ.   4.33 ಲಕ್ಷ ಜಾಬ್ ಕಾರ್ಡ್‍ಗಳಿಗೆ ಭಾವಚಿತ್ರವೇ ಇಲ್ಲ, ಗ್ರಾಮೀಣ  ಪ್ರದೇಶದಲ್ಲಿ ಕೇವಲ ಶೇ.20 ಹಣವನ್ನು ಮಾತ್ರ ಉದ್ದೇಶಿತ ಯೋಜನೆಗಳಿಗೆ ಬಳಸಲಾಗಿದ್ದು ವ್ಯಾಪಕ ಅವ್ಯವಹಾರ ನಡೆದಿದೆ ಎಂದು ಸಿಎಜಿ ಆಕ್ಷೇಪಿಸಿದೆ.

ಮತ್ತಷ್ಟು ಓದು »

22
ಮಾರ್ಚ್

೨೦೧೪ರ ಚುನಾವಣ ಕಣದ ಸುತ್ತ

– ಡಾ.ಕಿರಣ್ ಎಂ ಗಾಜನೂರು

Modi vs Rahulಭಾರತದಲ್ಲಿ ಲೋಕಸಭಾ ಚುನಾವಣೆಗೆ ವೇದಿಕೆ ಸಜ್ಜುಗೊಂಡಿದೆ.ಹಾಗೆ ನೋಡುವುದಾದರೆ ಭಾರತದಲ್ಲಿ ಇದುವರೆಗೆ ನಡೆದ ಲೋಕಸಭಾ ಚುನಾವಣೆಗಳಿಗಿಂತ ೨೦೧೪ರ ಈ ಲೋಕಸಭಾ ಚುನಾವಣೆ ಹೆಚ್ಚು ಚರ್ಚೆಯಲ್ಲಿದೆ ಮತ್ತು ಜನ ಸಮಾನ್ಯರಲ್ಲಿಯು ಒಂದು ಸಹಜ ಕುತೂಹಲವನ್ನು ಈ ಚುನಾವಣೆ ಹುಟ್ಟುಹಾಕಿದೆ.ಭಾರತದಲ್ಲಿನ ಪ್ರಮುಖ ರಾಜಕೀಯ ಚಿಂತಕರು,ಮಾಧ್ಯಮಗಳು ಈ ವಿದ್ಯಮಾನಕ್ಕೆ ಹಲವಾರು ಕಾರಣಗಳನ್ನು ಗುರುತಿಸಿದ್ದಾರೆ ಅದರಲ್ಲಿ ಬಹಳ ಮುಖ್ಯವಾದದ್ದು

೧) ಆಡಳಿತಾತ್ಮಕ ಮತ್ತು ಭ್ರಷ್ಟಾಚಾರದ ಕಾರಣಕ್ಕಾಗಿ (ಮುಖ್ಯವಾಗಿ ಬೆಲೆ ಎರಿಕೆ) ರೂಪಿತಗೊಂಡ ಕಾಂಗ್ರೆಸ್ಸ್ ವಿರೋಧಿ ನಿಲುವು
೨) ಬಿ.ಜೆ.ಪಿ ತನ್ನ ಪ್ರಧಾನಿ ಆಭ್ಯರ್ಥಿ ನರೆಂದ್ರ ಮೋದಿಯವರ ಹಿನ್ನಲೆಯಲ್ಲಿ ರೂಪಿಸಿಕೊಂಡ ಜನಪ್ರಿಯತೆ.

ಹಾಗಾದರೆ, ೨೦೧೪ ರ ಚುನಾವಣೆ ಈ ಎರಡು ನಿಲುಗಳ ಆಧಾರದಲ್ಲಿಯೆ ನಡೆಯುತ್ತದಾ? ದೇಶದ ಎಲ್ಲಾ ಭಾಗದ ಮತದಾರ ಈ ನಿಲುವುಗಳ ಆಧಾರದಲ್ಲಿಯೆ ಮತ ಚಲಾಯಿಸುತ್ತಾನಾ?  ಎಂಬ ಪ್ರಶ್ನೆಯನ್ನು ಭಾರತದಲ್ಲಿ ಇದುವರೆಗೆ ನಡೆದ ಲೋಕಸಭಾ ಚುನಾವಣೆಗಳ ಹಿನ್ನಲೆಯಲ್ಲಿ ವಿಶ್ಲೇಷಿಸಿ ಕೇಳಿಕೊಂಡರೆ, ’ಖಂಡಿತಾ ಇಲ್ಲಾ’ ಎಂಬ ಉತ್ತರವನ್ನೂ ಯಾರಾದರೂ ನೀರಿಕ್ಷಿಸಬಹುದಾಗಿದೆ…! ಏಕೆಂದರೆ ಕಳೆದ ಹತ್ತು ವರ್ಷಗಳ ಕಾಲ ಈ ದೇಶವನ್ನು ಆಳಿದ ಯುಪಿಎ ಸರ್ಕಾರ ಹಲವಾರು ಹಗರಣಗಳನ್ನು ತನ್ನ ಮೇಲೆ ಎಳೆದುಕೊಂಡಿದ್ದರೂ ಆದರ ಜೊತೆ ಜೊತೆಗೆ ’ಆರ್.ಟಿ.ಐ, ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನ”ಯಂತಹ ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತರುವುದರ ಮೂಲಕ ಸಮಾಜದ ಹಲವು ವರ್ಗಗಳ ಜನರ ಬೆಂಬಲವನ್ನು ಗಳಿಸಿಕೊಂಡಿದೆ .ಅದೂ ಅಲ್ಲದೆ, ಈ ದೇಶವನ್ನು ಹೆಚ್ಚು ಕಾಲ ಆಳಿದ ಕಾಂಗ್ರೆಸ್ಸ್ ಪಕ್ಷ ಅದರದ್ದೆ ಆದಂತಹ ಒಂದು ಮತದಾರರ ವರ್ಗ ಮತ್ತು ಬುದ್ದಿಜೀವಿಗಳ ಗುಂಪನ್ನು ಸೃಷ್ಟಿಸಿಕೊಂಡಿದೆ ಅವರು ಎಂದಿಗೂ ಕಾಂಗ್ರೆಸ್ಸ್ ಅನ್ನು ಬೆಂಬಲಿಸುತ್ತಾರೆ ಮತ್ತು ಚುನಾವಣೆಯಲ್ಲಿ ಈ ಅಂಶ ಖಂಡಿತವಾಗಿ ಪ್ರಭಾವ ಬೀರಲಿದೆ.ಇದರ ಜೊತೆಗೆ ದೇಶದ ಭವಿಷ್ಯದ ಪ್ರಧಾನಿ ಎಂದು ಕಾಂಗ್ರೆಸ್ಸ್ ವಲಯದಲ್ಲಿ ಗುರುತಿಸಿಕೊಂಡಿರುವ ರಾಹುಲ್ ಗಾಂಧಿಯವರು ಇತ್ತಿಚೆಗೆ “ಭಾರತಕ್ಕೆ ಬೇಕಿರುವುದು ಇಲ್ಲಿನ ವಿವಿಧತೆಯನ್ನು ಅವುಗಳ ನೆಲೆಯಲ್ಲಿಯೆ ಗುರುತಿಸಿ ಬೆಳೆಸಬೇಕಾದ ರಾಜಕೀಯ ಪಕ್ಷವೆ ಹೊರತು ವ್ಯಕ್ತಿ ಕೇಂದ್ರಿತ ಪಕ್ಷವಲ್ಲ” ಎಂಬ ಮಾದರಿಯ ಪ್ರಜಾಸತ್ತಾತ್ಮಕ ಹೇಳಿಕೆಗಳನ್ನು ನೀಡುತ್ತಿದ್ದಾರೆ ಮತ್ತು ಕಾಂಗ್ರೆಸ್ಸಿನಲ್ಲಿ ತಮ್ಮ ಈ ನಿಲುವನ್ನು ಜಾರಿಗೆ ತರುವ ಪ್ರಯತ್ನವನ್ನು ಮಾಡುತ್ತಿದ್ದಾರೆ ಇದಕ್ಕೆ ಉದಾಹರಣೆ ಇತ್ತೀಚೆಗೆ ಕಾಂಗ್ರೆಸ್ಸ್ ಪಕ್ಷದೊಳಗೆ ನಡೆದ ಆಂತರಿಕ ಚುನಾವಣೆ.ಈ ಅಂಶವು ದೇಶದ ಮಧ್ಯಮ ವರ್ಗದ ಮತದಾರರನ್ನು ಖಂಡಿತಾ ಸೆಳೆಯುತ್ತದೆ.

ಮತ್ತಷ್ಟು ಓದು »

20
ಮಾರ್ಚ್

ಹೊಸ ಚಿಂತನೆ ಮೂಡಿ ಬರಲಿ

– ಡ್ಯಾನಿ ಪಿರೇರಾ,ಹಳ್ಳಿಮೈಸೂರು

ಸೆಕ್ಯುಲರ್ನಿಜ ಹೇಳಬೇಕೆಂದರೆ 2014ರ ಲೋಕಸಭಾ ಚುನಾವಣೆ ನಮ್ಮಲ್ಲಿನ ನೈಜ ರಾಷ್ಟ್ರೀಯತೆಗೆ ಅದರ ಪರಂಪರಾಗತವಾದ ಜಾತ್ಯಾತೀತತೆಯ ನಿಜ ಅರ್ಥವಂತಿಕೆಗೆ ಮತದಾರ ಕೊಡಬೇಕಾದ ಪ್ರಬುದ್ಧ ತೀರ್ಪು ಎನ್ನಬಹುದುದೇನೋ!  ಅದರಲ್ಲೂ ಈ ಚುನಾವಣೆ ಈ ದೇಶದ ಅಲ್ಪಸಂಖ್ಯಾತ-ಬಹುಸಂಖ್ಯಾತರೆಂಬ ಸಂಕುಚಿತ ಅವಕಾಶವಾದಿ ಮನೋಭೂಮಿಕೆಯನ್ನೊದ್ದು, ಈ ದೇಶ ಒಂದು ರಾಷ್ಟ್ರವಾಗಿ, ಜಾತಿ-ಮತಗಳ ಸಣ್ಣತನವನ್ನು ಬದಿಗಿಟ್ಟು, ಈ ದೇಶದ ಭವ್ಯ ಭವಿಷ್ಯವನ್ನು ಕಣ್ತುಂಬಿಕೊಳ್ಳಲು ಈ ದೇಶದ ಶ್ರೀಸಾಮಾನ್ಯನಿಗೆ ಸ್ವತಃ ಆ ಭಗವಂತನೇ ನೀಡಿದ ಅವಕಾಶವೆಂದರೆ ಖಂಡಿತ ಉತ್ಪ್ರೇಕ್ಷೆ ಎಂದು ಭಾವಿಸಬೇಕಿಲ್ಲ. ಅದಲ್ಲೂ ಇಲ್ಲಿನ ಅಲ್ಪಸಂಖ್ಯಾತರೆಂದೇ ಬಿಂಬಿಸಲ್ಪಡುವ ಕ್ರೈಸ್ತ-ಮುಸುಲ್ಮಾನ ಬಂಧುಗಳಿಗೂ ಈ ಚುನಾವಣೆ ಈ ದೇಶದ ತಮ್ಮ ವಾರಸಿಕೆ ಶೃತಪಡಿಸಲು ಇದೊಂದು ಸದವಕಾಶ ಎನ್ನಲು ಅವರು ಸಂಕೋಚಪಡಬೇಕಿಲ್ಲ. ಈ ದೇಶದ ಬಹುತೇಕ ರಾಜಕೀಯ ನಾಯಕರು ಬುದ್ಧಿಜೀವಿವರ್ಗ ಅಕ್ಷರಶಃ ಈ ದೇಶದ ನೈಜ ರಾಷ್ಟ್ರೀಯತೆ ಮತ್ತದರ ಪಾರಂಪರಿಕ ಜಾತ್ಯಾತೀತತೆಯ ವೈಶಾಲ್ಯತೆಯನ್ನು ಪ್ರತಿಪಾದಿಸಲು ಸಂಪೂರ್ಣ ವಿಫಲವಾಗಿರುವ ಹಿನ್ನೆಲೆಯಲ್ಲಿ ಈ ದೇಶದ ಜಾತಿ-ಪಂಥಗಳಿಗೆ ಮೀರಿದ ಈ ರಾಷ್ಟ್ರ ನನ್ನದು, ಈ ರಾಷ್ಟ್ರದ ಐಕ್ಯತೆ ಮತ್ತು ಸಮಗ್ರತೆಗೆ ಸವಾಲಾಗಿರುವ ಭಾರತದ ಇಂದಿನ ಜಾತ್ಯಾತೀತತೆಯ ವ್ಯಾಖ್ಯಾನದ ನೈಜ ಅರ್ಥವನ್ನು ಪುನರ್‍ರೂಪಿಸುವ ಅವಕಾಶ ಒದಗಿಬಂದಿರುವುದು ಈ ದೇಶದ ಅಲ್ಪಸಂಖ್ಯಾತರೆಂದು ಕರೆಯಲ್ಪಡುತ್ತಿರುವವರು ಮಾಡಬೇಕಾದ ಅವಶ್ಯಕತೆ ಮತ್ತು ಅನಿವಾರ್ಯತೆ ಎಂದರೆ ತಪ್ಪಲ್ಲ.  ಈ ದೇಶವನ್ನು ಬ್ರಿಟಿಷರು ಆಳುತ್ತಿದ್ದಾಗ ಹಿಂದುಗಳ ಗುಮ್ಮವನ್ನು ಮುಸಲ್ಮಾನರ ಮುಂದೆ, ಮುಸಲ್ಮಾನರ ಗುಮ್ಮವನ್ನು ಹಿಂದುಗಳ ಮುಂದೆ ತೋರಿಸಿ ಅಖಂಡ ಭಾರತವನ್ನು ತುಂಡಾಗಿಸಿ ಅವರ  ಸುತ್ತ ಗಿರಕಿ ಹೊಡೆಯುತ್ತಿದ್ದ ಮುಸ್ಲಿಂ ಲೀಗ್ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಒಂದೊಂದು ತುಂಡನ್ನು ಆಳಲು ಕೊಟ್ಟು, ಬ್ರಿಟಿಷರು ಹೋದ ಮೇಲೆ ಇಲ್ಲಿ ಸುದೀರ್ಘ ಆಡಳಿತ ನಡೆಸಿದ ಕಾಂಗ್ರೆಸ್ಸ್ ಮಾಡಿದ್ದೇನು?

ಮತ್ತಷ್ಟು ಓದು »

21
ಫೆಬ್ರ

ರಾಜಿನಾಮೆ ಕೊಡಲು ಸಿದ್ಧ !

– ನವೀನ್ ನಾಯಕ್

ಅಟಲ್,ಅಡ್ವಾಣಿ,ಮೋದಿರಾಜಿನಾಮೆ ಕೊಡಲು ಸಿದ್ಧ !
ಯಾರು ಗೊತ್ತೇ ಹೀಗೆ ಹೇಳಿದ್ದು ? ನರೇಂದ್ರ ಮೋದಿಯವರು !

ಅಡ್ವಾಣಿ ಮತ್ತು ಅಟಲ್ ಜೀಯರ ನಡುವೆ ಎದ್ದ ಭಿನ್ನಾಭಿಪ್ರಾಯಗಳಲ್ಲಿ ಮಹತ್ವದ ಎರಡು ಘಟನೆಗಳು ಒಂದು ಅಯೋಧ್ಯಾ ವಿಚಾರ ಇನ್ನೊಂದು ಮೋದಿಯವರ ರಾಜಿನಾಮೆ ವಿಚಾರ. ಮೋದಿಯವರ ವಿಚಾರದಲ್ಲಿ ಅಡ್ವಾಣಿಯವರು  ತಮ್ಮ ದೃಷ್ಟಿಕೋನವನ್ನು ಬೇರೆ ರೀತಿಯಾಗಿಸಿಕೊಂಡರು. ದಂಗೆಯ ಸಮಯದಲ್ಲಿ ಗುಜರಾತಿಗೆ ತೆರಳಿ ಅಲ್ಲಿಯ ಸಮಾಜದ ವಿವಿಧ ವರ್ಗಕ್ಕೆ ಸೇರಿದ ಅಪಾರ ಜನದೊಂದಿಗೆ ಮಾತನಾಡಿ ಸರಕಾರ ಕೈಗೊಳ್ಳುತ್ತಿರುವ ಕ್ರಮಗಳ ಕುರಿತು ಅರಿತುಕೊಂಡರು. ಕ್ರಮಗಳ ಕುರಿತು ಅಲ್ಲಿಯ ಜನತೆ ತೃಪ್ತಿಯನ್ನು ಹೊಂದಿತ್ತು. ಇದರಿಂಧ ಮೋದಿಯವರು ಅಪರಾಧಿಯಾಗಿರಲಿಲ್ಲ ಬದಲಾಗಿ ಅವರು ಸ್ವಯಂ ರಾಜಕೀಯ ಬಲಿಪಶುವಾಗಿದ್ದಾರೆಂಬುದು ತಿಳಿದುಕೊಂಡರು. ಆದ್ದರಿಂದ ಮುಖ್ಯಮಂತ್ರಿಯಾಗಿ ಒಂದು ವರ್ಷವೂ ಕಳೆಯದ ಮೋದಿಯವರನ್ನು ಸಂಕೀರ್ಣ ಕೋಮು ಸನ್ನಿವೇಶಕ್ಕೆ ರಾಜಿನಾಮೆ ಪಡೆಯುವುದು ಅನ್ಯಾಯವಾಗುತ್ತದೆ. ಅದಲ್ಲದೇ ರಾಜಿನಾಮೆ ಪಡೆಯುವುದರಿಂದ ಗುಜರಾತಿನ ಸಾಮಾಜಿಕ ಸ್ಥಿತಿಗತಿಯನ್ನು ಧೀರ್ಘಕಾಲೀನವಾಗಿ ಹದಗೆಡಬಹುದೆಂದು ಅಡ್ವಾಣಿಯವರು ಅರಿತುಕೊಂಡರು.

ಮತ್ತಷ್ಟು ಓದು »

15
ಜನ

ವಿಧಿ 370 – ಚರ್ಚೆ

– ಪ್ರವೀಣ್ ಪಟವರ್ಧನ್

Jammu Kashmir- Debate on Article 370ಬಿಜೆಪಿಯ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿಯವರು ಜಮ್ಮುವಿನಲ್ಲಿ ನಡೆದ ಇತ್ತೀಚೆಗಿನ ಸಮಾವೇಶದಲ್ಲಿ ನಮ್ಮ ದೇಶದ ಮೊದಲ ಪ್ರಧಾನ ಮಂತ್ರಿಯವರ ನಿಲುವನ್ನು ಪ್ರಶ್ನಿಸಿದ್ದಾರೆ. ಡಾ|| ಶ್ಯಾಮಾ ಪ್ರಸಾದ್ ಮುಖರ್ಜೀ ಯವರ ಜಮ್ಮು ಕಾಶ್ಮೀರದಲ್ಲಿನ ಹೋರಾಟವನ್ನು, ಬಲಿದಾನವನ್ನು (ನಿಗೂಢ ಸಾವು ಎಂದರೆ ತಪ್ಪಾಗಲಾರದು) ನೆನಪಿಸಿಕೊಂಡಿದ್ದಾರೆ. ಭಾರತ ಸಂವಿಧಾನದ ವಿಧಿ 370 (Article 370) ಯನ್ನು ಚರ್ಚಿಸಬೇಕೆಂದು ಕೇಳಿಕೊಂಡಿದ್ದಾರೆ. ಸಹಜವಾಗಿಯೇ ಕಾಂಗ್ರೆಸ್ ಹಾಗೂ ಕಾಂಗ್ರೆಸ್ ಬೆಂಬಲಿಸುವ ಕೆಲ ಮಾಧ್ಯಮ ವರ್ಗದವರು ಮೋದಿಯ ಭಾಷಣವನ್ನು ಆಕ್ಷೇಪಿಸಿದ್ದಾರೆ.ಕಾರಣ ಮಾಜಿ ಪ್ರಧಾನಿ ನೆಹರೂರಿಗೆ ಅವಮಾನವಾಯ್ತೆಂದೋ, ಅಥವಾ ನೆಹರೂರವರು ಕಾಶ್ಮೀರದಲ್ಲಿ ಗೊಂದಲ ಸೃಷ್ಟಿಸಿದ್ದನ್ನು ಒಪ್ಪಿಕೊಳ್ಳಲಾಗದೆಂದೋ ಗೊತ್ತಿಲ್ಲ. ಹಿಂದೊಮ್ಮೆ ಸರ್ದಾರ್ ವಲ್ಲಭ ಭಾಯಿ ಪಟೇಲ್, ನೆಹರೂರ ತುಲನೆ ಮಾಡಿದ್ದ ಮೋದಿಯನ್ನು ಆಕ್ಷೇಪಿಸಿದ್ದು ಸ್ಮರಿಸಬಹುದು. ನೆಹರೂ ರವರು ಅಪ್ರತಿಮ ದೇಶಭಕ್ತ, ದ್ರಷ್ಟಾರ; ಅವರ ಬಗ್ಗೆ ಲಘುವಾಗಿ ಮಾತನಾಡಿದ್ದು  ಮೋದಿಯವರ ತಪ್ಪು ಎಂದು ಅವರು ಸಮರ್ಥಿಸಿಕೊಂಡರೆ ಅದಕ್ಕಿಂತ ದೊಡ್ಡ ಹಾಸ್ಯ ಮತ್ತೊಂದಿರಲಿಕ್ಕಿಲ್ಲ.

ಮೊದಲನೆಯದಾಗಿ ನೆಹರೂ ಭಾರತದ ಜೊತೆಗಿನ ಕಾಶ್ಮೀರದ ವಿಲೀನವನ್ನು ಗೊಂದಲಕ್ಕೆ ಮಾರ್ಪಾಟು ಮಾಡಿದ್ದರು ಎಂಬುದಕ್ಕೆ ಸಾಕಷ್ಟು ಪುರಾವೆಗಳು ಈಗಾಗಲೇ ಹಲವಾರು ಲೇಖಕರು, ಚಿಂತಕರು ತೋರಿಸಿಕೊಟ್ಟಿದ್ದಾರೆ. ಇನ್ನು ನೆಹರೂ ದೇಶಭಕ್ತರು, ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡು ದೇಶಕ್ಕೆ ಬ್ರಿಟಿಷರಿಂದ ಬಿಡುಗಡೆ ತಂದುಕೊಟ್ಟವರಲ್ಲಿ ಅಗ್ರಗಣ್ಯರು – ಹಾಗಾಗಿ ನೆಹರೂ ರವರನ್ನು ದೂಷಿಸಬಾರದು ಎಂದಾದರೆ – ಅದೂ ಒಪ್ಪಿಕೊಳ್ಳುವ ಮಾತಲ್ಲವೇ ಅಲ್ಲ. ಒಬ್ಬರ ನಿಲುವನ್ನು ಪ್ರಶ್ನಿಸುವ, ತೆಗೆದುಕೊಂಡ ನಿಷ್ಕರ್ಷೆಯಿಂದ ದೇಶಕ್ಕೇ ಮಾರಕವಾದಾಗಲೂ ನಿಲುವನ್ನು ಪ್ರಷ್ನಿಸಬಾರದು ಎನ್ನುವುದು ಮೂರ್ಖತನದ ಪರಮಾವಧಿ. ಈ ದೇಶದ ಸಾಮಾನ್ಯ ಪ್ರಜೆಗೂ ಆ ಹಕ್ಕು ಇದ್ದೇ ಇರುತ್ತದೆ. ಅದೇ ರೀತಿಯಲ್ಲಿ, ಕೆಲ ವರ್ಷಗಳ ನಂತರ ಮೋದಿಯವರು ತೆಗೆದುಕೊಂಡ ಯವುದೋ ನಿಲುವು ತಪ್ಪೆಂದು ಜನರು ಮೋದಿಯವರ ನಿರ್ಧಾರವನ್ನು ಟೀಕಿಸಬಹುದಲ್ಲವೇ?

ಮತ್ತಷ್ಟು ಓದು »