ವಿಷಯದ ವಿವರಗಳಿಗೆ ದಾಟಿರಿ

Posts tagged ‘ನೆಹರೂ’

1
ಆಕ್ಟೋ

ಜಾತ್ಯಾತೀತ ‘ಜಿನ್ನಾ’ ಖಳ ನಾಯಕನಾದರೆ ‘ಗಾಂಧೀ’ ಯಾರು?..

– ಅಶ್ವಿನ್ ಅಮೀನ್

ಕೆಲವು ವರ್ಷಗಳ ಹಿಂದೆ ಮಾಜಿ ಉಪ ಪ್ರಧಾನಿ ಎಲ್. ಕೆ.ಅಡ್ವಾಣಿ ಯವರು ಪಾಕಿಸ್ತಾನದಲ್ಲಿರುವ ಮಹಮ್ಮದ್ ಆಲಿ ಜಿನ್ನಾ ಸಮಾಧಿಗೆ ಭೇಟಿ ಕೊಟ್ಟು ‘ಜಿನ್ನಾ ಒಬ್ಬ ಜಾತ್ಯಾತೀತ ನಾಯಕ’ ಎಂದು ಉದ್ಗರಿಸಿದ್ದರು. ಆ ಹೇಳಿಕೆ ಭಾರತದಾದ್ಯಂತ ಎಷ್ಟು ಸಂಚಲನವನ್ನು ಉಂಟು ಮಾಡಿತ್ತೆಂದರೆ ಸ್ವಪಕ್ಷೀಯರೇ ಆಡ್ವಾಣಿಯನ್ನು ವಿರೋಧಿಸತೊಡಗಿದರು.ಆದರೆ, ಅಷ್ಟು ಹಿರಿಯ ಮುತ್ಸದ್ದಿಯಾದ ಆಡ್ವಾನಿಯವರು ಯಾವುದೇ ಆಧಾರ – ಕಾರಣಗಳಿಲ್ಲದೆ ಆ ಹೇಳಿಕೆ ನೀಡಿಯಾರೇ ಎಂಬ  ಪ್ರಶ್ನೆ ನನ್ನನ್ನು ಕಾಡುತ್ತಲೇ ಇತ್ತು. ಅದಕ್ಕೆ ಉತ್ತರ ಹುಡುಕುತ್ತಾ ಇತಿಹಾಸದ ಪುಟಗಳನ್ನು ತಿರುವ ಹೊರಟ ನನಗೆ ಕಂಡು ಬಂದ ಸತ್ಯ ಮಾತ್ರ ನಿಜಕ್ಕೂ ಆಘಾತಕಾರಿ!. ‘ಧರ್ಮಕ್ಕಿಂತ ದೇಶ ಮೊದಲು, ನಾನು ಮೊದಲು ಭಾರತೀಯ’ ಎನ್ನುತ್ತಿದ್ದ ಮಹಮ್ಮದ್ ಆಲಿ ಜಿನಾ ಭಾರತವನ್ನು ಒಡೆಯುವಷ್ಟರ ಮಟ್ಟಿಗೆ ಹೋಗಲು ಕಾರಣೀಭೂತರಾದರೂ ಯಾರು? ಆ ಸತ್ಯಗಳನ್ನು ತಿಳಿಯುತ್ತಾ ಹೋದಂತೆ ಆಡ್ವಾಣಿಯವರು ಜಿನ್ನಾರ ಬಗ್ಗೆ ಅಂದು ಹೇಳಿದ ಮಾತುಗಳು ಸತ್ಯವಾಗುತ್ತಾ ಹೋಯಿತು.

ಮಹಮ್ಮದ್ ಆಲಿ ಜಿನ್ನಾ… ಆತನ ವ್ಯಕ್ತಿತ್ವ ಎಂದಿಗೂ ಒಬ್ಬ ಮುಸ್ಲಿಮನಿಗೆ ತಕ್ಕುದಾಗಿ ಇರಲಿಲ್ಲ. ಆತನೆಂದೂ ಗಡ್ಡ ಬಿಡಲಿಲ್ಲ, ಸ್ಕಲ್ ಕ್ಯಾಪ್ ಹಾಕಲಿಲ್ಲ, ದಿನಕ್ಕೆ ಐದು ಬಾರಿ ನಮಾಜ್ ಮಾಡಲಿಲ್ಲ, ಮದರಸಾದಲ್ಲಿ ಕಲಿಯಲಿಲ್ಲ… ಮದುವೆಯಾಗಿದ್ದು ಪಾರ್ಸಿ ಹುಡುಗಿಯನ್ನು, ಕಲಿತಿದ್ದು ಕ್ರೈಸ್ತ ಕಾನ್ವೆಂಟ್ ನಲ್ಲಿ, ಇಂಗ್ಲೆಂಡ್ ನಲ್ಲಿ ಉನ್ನತ ವ್ಯಾಸಾಂಗ… ಆತ ಸಿಗರೇಟು ಸೇದುತ್ತಿದ್ದ, ಹಂದಿ ಮಾಂಸ ತಿನ್ನುತ್ತಿದ್ದ, ಮದ್ಯ ಸೇವಿಸುತ್ತಿದ್ದ… ಅಂತಹ ವ್ಯಕ್ತಿ ಅದೇಗೆ ಧರ್ಮಾಂಧನಾಗಲು ಸಾಧ್ಯ…?

ಮತ್ತಷ್ಟು ಓದು »

4
ಏಪ್ರಿಲ್

ಸೇನೆ-ಸರ್ಕಾರದ ನಡುವೆ ಬಡವಾಗದಿರಲಿ ನನ್ನ ಭಾರತ

– ರಾಕೇಶ್ ಶೆಟ್ಟಿ

ಆವತ್ತು ಸಂಸತ್ತಿನಲ್ಲಿ ಭಾಷಣಕ್ಕೆ ನಿಂತ ನೆಹರೂ ದೇಶದ ಒಂದಿಂಚು ನೆಲವನ್ನು ಚೀನಿಗಳೀಗೆ ಬಿಟ್ಟುಕೊಡುವುದಿಲ್ಲ.ಎಂತಾ ಯುದ್ಧಕ್ಕಾದರೂ ಸೈನ್ಯ ತಯಾರಿದೆ ಅನ್ನುತ್ತಲೇ  ತಮ್ಮ ಕೋಟಿನಿಂದ ತೆಗೆದ ಕೆಂಪು ಗುಲಾಬಿಯನ್ನ ಜನರ ಕಿವಿಗಿಟ್ಟರು.ಅವರ ಭಾಷಣದ ನಂತರದ ಇತಿಹಾಸ ನಿಮಗೆ ಗೊತ್ತಿರಲೇಬಹುದು.ಆ ಕಹಿ ನೆನಪಿಗೆ ೫೦ ವರ್ಷ ಆಗೋ ಸಮಯದಲ್ಲಿ ಮತ್ತೊಮ್ಮೆ ಕಳೆದವಾರ ಸಂಸತ್ತಿನಲ್ಲಿ ರಕ್ಷಣಾ ಸಚಿವ ಆಂಟನಿಯವರೂ ಸಹ ಭಾರತದ ಸೈನ್ಯ ಬಲಿಷ್ಟವಾಗಿದೆ,ಯುದ್ಧ ಸನ್ನದ್ಧವಾಗಿದೆ ಅಂದಿದ್ದಾರೆ.ನೆಹರೂ ಅವರಿಗೂ-ಅವ್ರ ಕಾಲಕ್ಕೂ ತುಲನೆ ಮಾಡಿದರೆ ಆಂಟನಿ ಅವರನ್ನ ಸ್ವಲ್ಪ ನಂಬಬಹುದು ಅನ್ನಿಸುತ್ತದೇ.ಆದರೆ…

ಕಳೆದ ವಾರ ನಡೆದ ವಿದ್ಯಾಮಾನಗಳಿವೆಯಲ್ಲ ಅವೆಲ್ಲ ಗಾಬರಿ ಹುಟ್ಟಿಸುವಂತವು.ಇದಕ್ಕೆ ಮುನ್ನುಡಿ ಬರೆದಿದ್ದು ಜನರಲ್.ವಿ.ಕೆ ಸಿಂಗ್…! ಜನ್ಮ ದಿನಾಂಕದ ರಗಳೆಯ ನಂತರ ಸ್ವಲ್ಪ ದಿನ ಸುಮ್ಮನಾಗಿದ್ದವ್ರು, ಟಿವಿ ಚಾನೆಲ್ನೊಂದಿಗೆ ಮಾತನಾಡುತ್ತ ತಮಗೆ ೧೪ ಕೋಟಿ ಲಂಚ ನೀಡಲು ಬಂದ ಪ್ರಸಂಗದ ಬಗ್ಗೆ ಬಾಯಿಬಿಡುವ ಮೂಲಕ.ಮತ್ತೆ ಆ ವಿಷಯವನ್ನ ನಾನು ರಕ್ಷಣಾ ಮಂತ್ರಿ ಆಂಟನಿ ಅವರಿಗೂ ಹೇಳಿದ್ದೆ ಅನ್ನುವುದು ಬೆಂಕಿಗೆ ತುಪ್ಪ ಸುರಿದಂತಾಗಿ ಹೋಯಿತು.ಸಂಸತ್ತಿನಲ್ಲಿ ಆಂಟನಿ ’ಅವರು ಮೌಕಿಕವಾಗಿ ಹೇಳಿದ್ದರು ನಾನು ಏನು ತಾನೇ ಮಾಡಲಿ” ಅಂತೆಲ್ಲ ಗೋಳಾಡುವಾಗಲೇ, ಜನರಲ್ ಪ್ರಧಾನಿ ಅವ್ರಿಗೆ ಬರೆದ ಮತ್ತು ದೇಶದ ಭದ್ರತೆಯ ದೃಷ್ಟಿಯಿಂದ ಅತ್ಯಂತ ರಹಸ್ಯವಾಗಿರಬೇಕಿದ್ದ ಪತ್ರ ಸೋರಿಕೆಯಾಗಿದ್ದು.!

ಮತ್ತಷ್ಟು ಓದು »