ವಿಷಯದ ವಿವರಗಳಿಗೆ ದಾಟಿರಿ

Posts tagged ‘ಪಾಕಿಸ್ತಾನ’

13
ಆಕ್ಟೋ

ಮಲಾಳ ಯೂಸುಫ್ ಝಾಯಿಯ ಡೈರಿಯಿಂದ

–  ಡಾ ಅಶೋಕ್ ಕೆ ಆರ್

ಪಾಕಿಸ್ತಾನಿ ತಾಲಿಬಾನಿಗಳಿಂದ ಗುಂಡೇಟು ತಿಂದು ಸಾವು ಬದುಕಿನ ನಡುವೆ ಹೋರಾಡುತ್ತಿರುವ ಈ ಹೋರಾಟಗಾರ್ತಿ ಮಾಡಿದ ತಪ್ಪಾದರೂ ಏನು? ಹೆಣ್ಣುಮಕ್ಕಳು ಶಾಲೆಗೆ ಹೋಗಬಾರದು ಎಂಬ ತಾಲಿಬಾನ್ ಆದೇಶವನ್ನು ವಿರೋಧಿಸಿದ್ದೇ ಇವಳ ಅಪರಾಧ! ಎರಡು ವರುಷದ ಮುಂಚೆ ಬರೆದ ದಿನಚರಿಗಳನ್ನು ಗುಲ್ ಮಕಾಯಿ ಎಂಬ ಕಾವ್ಯನಾಮದಡಿಯಲ್ಲಿ ಬಿಬಿಸಿ ಉರ್ದುವಿನಲ್ಲಿ ಪ್ರಕಟಣೆಗೆ ನೀಡಿದ್ದು ಇವಳ ಬಹುದೊಡ್ಡ ತಪ್ಪು. ಅಂದಹಾಗೆ ಮಲಾಳ ಯೂಸುಫ್ ಝಾಯಿ ಎಂಬ ಹೆಸರಿನ ಈ ಹೋರಾಟಗಾರ್ತಿಯ ವಯಸ್ಸು ಹದಿನಾಲ್ಕು!

ಶನಿವಾರ ಜನವರಿ 3 : ಭಯವಾಗ್ತಿದೆ
ನಿನ್ನೆ ಕನಸಿನಲ್ಲಿ ಮಿಲಿಟರಿ ಹೆಲಿಕಾಪ್ಟರ್ ಗಳು ಮತ್ತು ತಾಲಿಬಾನಿಗಳು ಬಂದಿದ್ದರು. ನಮ್ಮ ಸ್ವಾಟ್ ಜಿಲ್ಲೆಯಲ್ಲಿ ಸೈನಿಕ ಕಾರ್ಯಾಚರಣೆ ಶುರುವಾದಾಗಿನಿಂದ ಈ ರೀತಿಯ ದುಸ್ವಪ್ನಗಳು ಮಾಮೂಲಾಗಿದೆ. ಅಮ್ಮ ಮಾಡಿಕೊಟ್ಟ ತಿಂಡಿ ತಿಂದು ಶಾಲೆಗೆ ಹೊರಟೆ. ಹೆಣ್ಣುಮಕ್ಕಳು ಶಾಲೆಗೆ ಹೋಗುವುದನ್ನು ತಾಲಿಬಾನಿಗಳು ನಿಷೇಧಿಸಿರುವುದರಿಂದ ನನಗೆ ಭಯವಾಗುತ್ತಿದೆ.
27 ಜನರಲ್ಲಿ 11 ಮಂದಿ ಮಾತ್ರ ಶಾಲೆಗೆ ಬಂದಿದ್ದೆವು. ತಾಲಿಬಾನ್ ಆದೇಶದಿಂದ ಹಾಜರಾತಿ ಕಡಿಮೆಯಾಗಿತ್ತು. ನನ್ನ ಮೂವರು ಗೆಳತಿಯರು ಈ ಆದೇಶದ ನಂತರ ತಮ್ಮ ಕುಟುಂಬದೊಡನೆ ಲಾಹೋರ್, ಪೇಷಾವರ, ರಾವಲ್ಪಿಂಡಿಗೆ ಹೊರಟುಹೋಗಿದ್ದಾರೆ.
1
ಆಕ್ಟೋ

ಜಾತ್ಯಾತೀತ ‘ಜಿನ್ನಾ’ ಖಳ ನಾಯಕನಾದರೆ ‘ಗಾಂಧೀ’ ಯಾರು?..

– ಅಶ್ವಿನ್ ಅಮೀನ್

ಕೆಲವು ವರ್ಷಗಳ ಹಿಂದೆ ಮಾಜಿ ಉಪ ಪ್ರಧಾನಿ ಎಲ್. ಕೆ.ಅಡ್ವಾಣಿ ಯವರು ಪಾಕಿಸ್ತಾನದಲ್ಲಿರುವ ಮಹಮ್ಮದ್ ಆಲಿ ಜಿನ್ನಾ ಸಮಾಧಿಗೆ ಭೇಟಿ ಕೊಟ್ಟು ‘ಜಿನ್ನಾ ಒಬ್ಬ ಜಾತ್ಯಾತೀತ ನಾಯಕ’ ಎಂದು ಉದ್ಗರಿಸಿದ್ದರು. ಆ ಹೇಳಿಕೆ ಭಾರತದಾದ್ಯಂತ ಎಷ್ಟು ಸಂಚಲನವನ್ನು ಉಂಟು ಮಾಡಿತ್ತೆಂದರೆ ಸ್ವಪಕ್ಷೀಯರೇ ಆಡ್ವಾಣಿಯನ್ನು ವಿರೋಧಿಸತೊಡಗಿದರು.ಆದರೆ, ಅಷ್ಟು ಹಿರಿಯ ಮುತ್ಸದ್ದಿಯಾದ ಆಡ್ವಾನಿಯವರು ಯಾವುದೇ ಆಧಾರ – ಕಾರಣಗಳಿಲ್ಲದೆ ಆ ಹೇಳಿಕೆ ನೀಡಿಯಾರೇ ಎಂಬ  ಪ್ರಶ್ನೆ ನನ್ನನ್ನು ಕಾಡುತ್ತಲೇ ಇತ್ತು. ಅದಕ್ಕೆ ಉತ್ತರ ಹುಡುಕುತ್ತಾ ಇತಿಹಾಸದ ಪುಟಗಳನ್ನು ತಿರುವ ಹೊರಟ ನನಗೆ ಕಂಡು ಬಂದ ಸತ್ಯ ಮಾತ್ರ ನಿಜಕ್ಕೂ ಆಘಾತಕಾರಿ!. ‘ಧರ್ಮಕ್ಕಿಂತ ದೇಶ ಮೊದಲು, ನಾನು ಮೊದಲು ಭಾರತೀಯ’ ಎನ್ನುತ್ತಿದ್ದ ಮಹಮ್ಮದ್ ಆಲಿ ಜಿನಾ ಭಾರತವನ್ನು ಒಡೆಯುವಷ್ಟರ ಮಟ್ಟಿಗೆ ಹೋಗಲು ಕಾರಣೀಭೂತರಾದರೂ ಯಾರು? ಆ ಸತ್ಯಗಳನ್ನು ತಿಳಿಯುತ್ತಾ ಹೋದಂತೆ ಆಡ್ವಾಣಿಯವರು ಜಿನ್ನಾರ ಬಗ್ಗೆ ಅಂದು ಹೇಳಿದ ಮಾತುಗಳು ಸತ್ಯವಾಗುತ್ತಾ ಹೋಯಿತು.

ಮಹಮ್ಮದ್ ಆಲಿ ಜಿನ್ನಾ… ಆತನ ವ್ಯಕ್ತಿತ್ವ ಎಂದಿಗೂ ಒಬ್ಬ ಮುಸ್ಲಿಮನಿಗೆ ತಕ್ಕುದಾಗಿ ಇರಲಿಲ್ಲ. ಆತನೆಂದೂ ಗಡ್ಡ ಬಿಡಲಿಲ್ಲ, ಸ್ಕಲ್ ಕ್ಯಾಪ್ ಹಾಕಲಿಲ್ಲ, ದಿನಕ್ಕೆ ಐದು ಬಾರಿ ನಮಾಜ್ ಮಾಡಲಿಲ್ಲ, ಮದರಸಾದಲ್ಲಿ ಕಲಿಯಲಿಲ್ಲ… ಮದುವೆಯಾಗಿದ್ದು ಪಾರ್ಸಿ ಹುಡುಗಿಯನ್ನು, ಕಲಿತಿದ್ದು ಕ್ರೈಸ್ತ ಕಾನ್ವೆಂಟ್ ನಲ್ಲಿ, ಇಂಗ್ಲೆಂಡ್ ನಲ್ಲಿ ಉನ್ನತ ವ್ಯಾಸಾಂಗ… ಆತ ಸಿಗರೇಟು ಸೇದುತ್ತಿದ್ದ, ಹಂದಿ ಮಾಂಸ ತಿನ್ನುತ್ತಿದ್ದ, ಮದ್ಯ ಸೇವಿಸುತ್ತಿದ್ದ… ಅಂತಹ ವ್ಯಕ್ತಿ ಅದೇಗೆ ಧರ್ಮಾಂಧನಾಗಲು ಸಾಧ್ಯ…?

ಮತ್ತಷ್ಟು ಓದು »

24
ಏಪ್ರಿಲ್

ಒಳಸಂಚಿಗೆ ಬೇಕಿದೆ ಆತ್ಮವಿಶ್ವಾಸದ ಅಗ್ನಿಸ್ಪರ್ಷ

– ಚಕ್ರವರ್ತಿ ಸೂಲಿಬೆಲೆ
   ಅಗ್ನಿ ೫ ಬಂದನಂತರ ರಣಾಂಗಣದಲ್ಲಿ ನಮ್ಮನ್ನು ಸೋಲಿಸಲು ಚೀನಾಕ್ಕೆ ಸಾಧ್ಯವಾಗಲಾರದು ನಿಜ. ಆದರೆ ಸಂಸತ್ತಿನ ಮೇಜಿನ ಮೇಲೆಯೇ ನಮ್ಮ ಸೋಲಿಗೆ ಷರಾ ಬರೆದರೆ ಯಾರು ಏನು ಮಾಡಿಯಾರು ಹೇಳಿ!?

ನಾಲ್ಕು ವರ್ಷಗಳ ತಪಸ್ಸು ಪೂರ್ಣಗೊಂಡಿದೆ. ೭೦೦ ಕಿ.ಮೀ.ದೂರದವರೆಗೂ ಹೋಗಿ ಶತ್ರು ಠಾಣ್ಯ ನಾಶ ಮಾಡಿಬರಬಲ್ಲ. ಅಗ್ನಿ ೧ನ್ನು ನಭಕ್ಕೆ ಹಾರಿಬಿಟ್ಟಾಗಿನಿಂದಲೂ ೫,೦೦೦ ಕಿ.ಮೀ. ದೂರಕ್ಕೆ ಹೋಗಬಲ್ಲ ಅಗ್ನಿಯ ಕನಸು ಕಾಣುತ್ತಲೇ ಇದ್ದವರು ನಾವು. ಮೊನ್ನೆ ಅಗ್ನಿ ೫ ಯಶಸ್ವಿಯಾಗಿ ಉಡಾವಣೆಗೊಂಡು ಸೈನ್ಯದ ಶಕ್ತಿಯನ್ನು ನೂರ್ಮಡಿಗೊಳಿಸಿದಾಗ ಆ ಕನಸು ನನಸಾಯಿತು. ಕನಸು ನನಸುಗಳ ಕತೆ ಏನೇ ಇರಲಿ. ಸೈನ್ಯದ ಸಾಮರ್ಥ್ಯದ ಕುರಿತಂತೆ ನಡೆಯುತ್ತಿದ್ದ ವಾದ ವಿವಾದಗಳಿಂದ ಈ ಪರೀಕ್ಷೆ ಕೇಂದ್ರ ಸರ್ಕಾರವನ್ನಂತೂ ಪಾರುಮಾಡಿತು. ಅಗ್ನಿಯೂ ತಂಪೆರೆಯಬಲ್ಲದೆಂದರೆ ಹೀಗೇ ನೋಡಿ!

ಈ ನಾಲ್ಕು ವರ್ಷಗಳ ಪ್ರಯತ್ನ ಅಂತ್ಯ ಕಾಣಲು ಇನ್ನೂ ಸ್ವಲ್ಪ ಕಾಲಾವಕಾಶ ಬೇಕಿತ್ತು. ಆದರೆ ರಕ್ಷಣಾ ಸಚಿವ ಆಂಟನಿ ವಿಜ್ಞಾನಿಗಳಿಗೆ ದುಂಬಾಲು ಬಿದ್ದು ಈ ಪ್ರಯೋಗವನ್ನು ಸಾಧ್ಯವಾಗಿಸಿ ಯಶಸ್ಸು ಗಳಿಸಿಕೊಂಡರು. ಈ ನಿಟ್ಟಿನಲ್ಲಿ ಡಿಆರ್‌ಡಿಓಗೆ ಸಹಕಾರಿಯಾಗಿ ಹಲವು ವೈಜ್ಞಾನಿಕ ಸಂಸ್ಥೆಗಳು ದುಡಿದಿವೆ. ಯಶಸ್ಸಿನ ಈ ಹೊತ್ತಿನಲ್ಲಿ ಆ ವಿಜ್ಞಾನಿಗಳಿಗೆಲ್ಲ ಒಂದು ಪ್ರೀತಿಯ ಸಲಾಮು.

ಮತ್ತಷ್ಟು ಓದು »

5
ಮೇ

ಒಸಾಮಾ – ಒಬಾಮಾ…!

ಡಾ.ಅಜಕ್ಕಳ ಗಿರೀಶ್ ಭಟ್

ಅಂತೂ ಅಮೆರಿಕ ಒಸಾಮಾನನ್ನು ಕೊಂದಿದೆ ಅನ್ನುವುದನ್ನು ಅದು ಅಧಿಕೃತವಾಗಿ ಘೋಷಿಸಿದೆ. ಹೀಗೆ ಕೊಲ್ಲುವುದು ಅಮೆರಿಕಕ್ಕೆ ಏನೂ ಕಷ್ಟದ ಸಂಗತಿಯಲ್ಲ. ಅದು ಅದನ್ನು ದಕ್ಕಿಸಿಕೊಳ್ಳಬಲ್ಲುದು. ಆದರೆ ಹಲವು ಪ್ರಶ್ನೆಗಳು ಎಲ್ಲರ ಮನಸ್ಸಲ್ಲೂ ಏಳುವುದು ಸಹಜ. ಕೆಲದಿನಗಳಾದ ನಂತರ ಆ ಪ್ರಶ್ನೆಗಳನ್ನು ಎಲ್ಲರೂ ಮರೆಯುತ್ತಾರೆ ಅನ್ನೋದು ಕೂಡ ನಮಗೆಲ್ಲ ಗೊತ್ತು.ನಾವು ಕೂಡ ಮರೀತೇವೆ.ಹಾಗೆ ಮರೆಯುವುದು ನಮ್ಮ ಮಾನಸಿಕ ಆರೋಗ್ಯಕ್ಕೆ ಅತ್ಯಂತ ಮುಖ್ಯ.ಆದರೂ ಈಗ ಮನಸಲ್ಲಿ ಬಂದ ಆಲೋಚನೆಗಳಲ್ಲಿ ಕೆಲವನ್ನು ಮರುನೆನೆದುಕೊಳ್ಳುತ್ತೇನೆ.ಇವು ನನ್ನ ಮನಸಲ್ಲಿ ಮಾತ್ರ ಬಂದ ಪ್ರಶ್ನೆಗಳಲ್ಲವಾದ್ದರಿಂದ ಈ ಪ್ರಶ್ನೆಗಳ ಬಗ್ಗೆ ನಾನು ಯಾವುದೇ ಕಾಪಿರೈಟ್ ಕ್ಲೈಮ್ ಮಾಡುವುದಿಲ್ಲ!!!

ನೋಡಿ,ಇದು ಅನ್ಯಾಯವಲ್ಲವೇ? ವ್ಯಕ್ತಿಯನ್ನು ವಿಚಾರಣೆಯಿಲ್ಲದೆ ಕೊಲ್ಲುವುದು ನ್ಯಾಯವೇ?

ಆಧುನಿಕ ನ್ಯಾಯಶಾಸ್ತ್ರದಲ್ಲಿ ಎಲ್ಲಾದರೂ ವಿಚಾರಣೆಯಿಲ್ಲದೆ ಹೀಗೆ ಶಿಕ್ಷೆ ನೀಡುವುದನ್ನು ಸಮರ್ಥಿಸಲಾಗಿದೆಯೇ? ಲಾಡೆನ್ ಗೆ ಫೇರ್ ಟ್ರಯಲ್ ನೀಡಲಾಗಿಲ್ಲ. ಅವನನ್ನು ಯಾವ ಕೋರ್ಟಿನಲ್ಲಿ ವಿಚಾರಣೆ ಮಾಡಲಾಗಿದೆ? ತಾನು ಕೊಲೆ ಮಾಡಿದ್ದೇನೆ ಅಂತ ಒಬ್ಬ ವ್ಯಕ್ತಿ ಹೇಳಿದ ಕೂಡಲೇ ಯಾವ ಕೋರ್ಟು ಕೂಡ ವಿಚಾರಣೆಯಿಲ್ಲದೆ ಆ ವ್ಯಕ್ತಿಯನ್ನು ಗಲ್ಲಿಗೆ ಹಾಕುವುದಿಲ್ಲ. ಹಾಗಿರುವಾಗ ,ಅಮೆರಿಕವಿರಬಹುದು ಅಥವಾ ಅದರಪ್ಪನಿರಬಹುದು, ಕಾನೂನನ್ನು ಕೈಗೆ ತೆಗೆದುಕೊಳ್ಳುವುದೆಂದರೇನು? ಓಯ್!! ಅಮ್ನೆಸ್ಟಿ ಇಂಟರ್ ನ್ಯಾಷನಲ್ ಅನ್ನುವ ಸಂಸ್ಥೆಯವರೇ!!!ಎಲ್ಲಿದ್ದೀರಿ? ಒಸಾಮಾನ ಮಾನವ ಹಕ್ಕಿಗೆ ಬೆಲೆ ಇಲ್ಲವೇ???

ಮತ್ತಷ್ಟು ಓದು »