ವಿಷಯದ ವಿವರಗಳಿಗೆ ದಾಟಿರಿ

Posts tagged ‘ಪೇಶ್ವ’

29
ಸೆಪ್ಟೆಂ

ಪ್ರೇತದ ಆತ್ಮ ಚರಿತೆ! (ಭಾಗ ೫)

– ಶ್ರೀಕಾಂತ್ ಶೆಟ್ಟಿ

ಪ್ರೇತದ ಆತ್ಮ ಚರಿತೆ! (ಭಾಗ ೧)
ಪ್ರೇತದ ಆತ್ಮ ಚರಿತೆ! (ಭಾಗ ೨)
ಪ್ರೇತದ ಆತ್ಮ ಚರಿತೆ! (ಭಾಗ 3)
ಪ್ರೇತದ ಆತ್ಮ ಚರಿತೆ! (ಭಾಗ ೪)

14225499_1081747878587487_1441481958757222525_nಛೇ ಏನಾಗಿ ಹೋಯಿತು. ದೇಶದ ಗಡಿಗಳನ್ನು ಕಾಯ ಬೇಕಿದ್ದ ಮರಾಠಾ ಖಡ್ಗಗಳು ತಮ್ಮತಮ್ಮೊಳಗೆ ಕಣಕಣಿಸತೊಡಗಿದವು. ಹೆಣ್ಣೊಬ್ಬಳ ದುಷ್ಟತನಕ್ಕೆ ಸಾಮ್ರಾಜ್ಯದ ಸ್ಥಂಭಗಳೇ ಬುಡ ಕಳಚಿಕೊಂಡವು. ತನ್ನ ನಿಷ್ಟಾವಂತ ಸೇನಾನಿಗಳನ್ನು ಕೂಡಿಕೊಂಡು ರಘುನಾಥ ರಾವ್ ಪೇಶ್ವಾ ಪಟ್ಟವನ್ನು ಅಲಂಕರಿಸಿಯೇ ಬಿಟ್ಟ.!! ನಾರಾಯಣ ರಾವ್ ರಕ್ತದಿಂದ ತೊಯ್ದು ಹೋಗಿದ್ದ ಪೇಶ್ವಾ ಕಿರೀಟ ರಘುನಾಥ ರಾವ್ ಪೇಶ್ವಾ ತಲೆಯಲ್ಲಿ ಘಟಸರ್ಪವೊಂದು ಮಡಿಕೆ ಹಾಕಿ ಕುಳಿತಂತೆ ಕಾಣುತ್ತಿತ್ತು. ಯಾವುದೇ ಕ್ಷಣದಲ್ಲಾದರೂ ಆ ಆತ್ಮ ಪ್ರತಿಕಾರಕ್ಕಿಳಿಯದೆ ಸುಮ್ಮನಿರುವುದಿಲ್ಲ. ಅಷ್ಟು ಭೀಕರವಾಗಿ ಆ ಬಾಲಕನನ್ನು ಕತ್ತರಿಸಿ ಕೊಲ್ಲಲಾಗಿತ್ತು. ನಾರಾಯಣನ ಕಣ್ಣೀರು ರಕ್ತ ಒಂದಾಗಿ ಬೆರೆತು ರಘುನಾಥನ ಪಾದ ತೊಯ್ದರೂ ಆತ ಆ ಮುಗ್ದ ಬಾಲಕನ ಮೇಲೆ ಕರುಣೆ ತೋರಿರಲಿಲ್ಲ. ಮತ್ತಷ್ಟು ಓದು »