ವಿಷಯದ ವಿವರಗಳಿಗೆ ದಾಟಿರಿ

Posts tagged ‘ಪ್ರಜಾಪ್ರಭುತ್ವ’

17
ಫೆಬ್ರ

ಏಕರೂಪ ನಾಗರಿಕ ಸಂಹಿತೆ – ಸುಪ್ರೀಂ ಕೋರ್ಟ್ V/S ಜಮಾತೆ ವಿಚಾರಧಾರೆ

– ಅನಿರುದ್ಧ ವಸಿಷ್ಟ,ಭದ್ರಾವತಿ

ಅರಾಜಕತೆ ತಂದೊಡ್ಡದಿರಲಿ ಧರ್ಮಾಧಾರಿತ ಕಾನೂನು

Uniform Civil Codeಪ್ರಜಾಪ್ರಭುತ್ವ ದೇಶದಲ್ಲಿರುವ ಭಾರತೀಯರಿಗೆ ದೇಶದ ಸಂವಿಧಾನವೇ ಮೇಲ್ಪಂಕ್ತಿಯಾಗಿದ್ದು, ಸಂವಿಧಾನವೇ ಅಂತಿಮವಾದುದು. ಧರ್ಮ ಗ್ರಂಥಗಳಾದ ರಾಮಾಯಣ, ಮಹಾಭಾರತ, ಕುರಾನ್, ಬೈಬಲ್‌ಗಳು ಆಯಾ ಧರ್ಮದ ಅನುಯಾಯಿಗಳ ವೈಯಕ್ತಿಕವಾಗಿರಬೇಕು.ಆದರೆ,ವೋಟ್ ಬ್ಯಾಂಕ್ ರಾಜಕಾರಣದ ಫಲವಾಗಿ ಸರ್ಕಾರಗಳು ಕೈಗೊಂಡ ನಿರ್ಧಾರಗಳು ಸಂವಿಧಾನ ವಿರುದ್ಧ ನಡೆಯಲು ಪ್ರೇರಣೆಯಾಗುತ್ತವೆ ಎಂದರೆ ಅದು ಪ್ರಜಾಪ್ರಭುತ್ವದ ದುರಂತವೇ ಹೌದು.೩೦೦ ವರ್ಷಗಳ ಕಾಲ ಬ್ರಿಟೀಷರಿಂದ ಆಳಿಸಿಕೊಂಡ ನಮ್ಮ ದೇಶ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೊಂದಿದ್ದರೂ, ಒಂದು ರೀತಿಯಲ್ಲಿ ಸರ್ವಾಧಿಕಾರಿ ಮನಸ್ಥಿತಿಯನ್ನೆ ಇಂದಿಗೂ ಹೊಂದಿದೆ ಎಂದರೆ ತಪ್ಪಲ್ಲ. ಇದು ಕೇವಲ ಆಳುವ ಪಕ್ಷಗಳ ಮನಸ್ಥಿತಿ ಮಾತ್ರವಲ್ಲ, ದೇಶದ ಪ್ರತಿ ಧರ್ಮ ಹಾಗೂ ಜಾತಿಗಳಲ್ಲಿ ಇದು ಹಾಸು ಹೊಕ್ಕಾಗಿದೆ.

೧೯೪೭ರಲ್ಲಿ ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ರೂಪಿಸಲಾದ ಸಂವಿಧಾನ ಮಹೋನ್ನತ ಆಶಯಗಳನ್ನು ಹೊಂದಿದೆ.ಸಂವಿಧಾನವೇ ಭಾರತೀಯರಿಗೆ ಒಂದು ರೀತಿಯಲ್ಲಿ ಸವೋತ್ತಮ ಎಂದರೂ ತಪ್ಪಲ್ಲ. ಆದರೆ, ಸಂವಿಧಾನ ಆಶಯಕ್ಕೆ ಧಕ್ಕೆ ಬರುವ ರೀತಿಯಲ್ಲಿ ಯಾವುದೇ ಸರ್ಕಾರ ಅಥವಾ ಧರ್ಮಗಳು ನಡೆದುಕೊಂಡಾಗ ಅದನ್ನು ನ್ಯಾಯಾಂಗದಲ್ಲಿ ಪ್ರಶ್ನೆ ಮಾಡುವ ಅಧಿಕಾರವನ್ನು ಇದೇ ಸಂವಿಧಾನ ಕಲ್ಪಿಸಿದೆ. ಆದರೆ, ಯಾವುದೇ ಒಂದು ಒಳ ವ್ಯವಸ್ಥೆ ದೇಶದ ಅತ್ಯುನ್ನತ ನ್ಯಾಯಾಂಗ ವ್ಯವಸ್ಥೆಯನ್ನೇ ಪ್ರಶ್ನಿಸುತ್ತದೆ ಎಂದರೆ ಹೇಗೆ?

ಮತ್ತಷ್ಟು ಓದು »

22
ಜನ

ರಾಜರಿಲ್ಲದ ರಾಜ್ಯದಲ್ಲಿ ವಂಶಾಡಳಿತದ ಪೋಷಣೆ

-ಗೋಪಾಲ ಕೃಷ್ಣ

vamshadalitaರಾಜಪ್ರಭುತ್ವದ ನೆರಳು ಮಾಸುವ ಮುನ್ನವೇ, ಕುಟುಂಬ ರಾಜಕಾರಣ ತಲೆ ಎತ್ತುತ್ತಿದೆ. ಪ್ರಜಾಪ್ರಭುತ್ವದ ಹರೆಯದಲ್ಲೇ ಆಶಯಗಳು ಸತ್ತು ಬೀಳುತ್ತಿವೆ.  ಜನಸೇವೆಯೆಂಬ ಟೊಳ್ಳು ಕುದುರೆಗೆ ಹಣ, ಹೆಣ್ಣು, ಅಧಿಕಾರದ ಲೇಪನ ಹಚ್ಚಿ ಹಾದಿ ತಪ್ಪಿಸಲಾಗುತ್ತಿದೆ.  ದೇಶ ವಿಭಜನೆಯ ನಂತರ, ಧರ್ಮದ ಮೂಲಕ ವಿಭಜನೆ, ಇದೀಗ ಜಾತಿ ಜಾತಿಗಳ ನಡುವೆ ವಿಭಜಿಸಿ, ಸಾಮರಸ್ಯದ ಬದಲಿಗೆ ಸಂಘರ್ಷದ ಬೋಧನೆ ನಡೆಯುತ್ತಿದೆ.ಕಾಲು ಮುರಿದ ಕಾರ್ಯಾಂಗ,ಸವೆದು ಹೋದ ಶಾಸಕಾಂಗಗಳ ಮಧ್ಯೆ ಆಮ್ ಆದ್ಮಿ ಕಂಗಾಲಾಗಿದ್ದಾನೆ.

ಇಲ್ಲಿ ದೂರುವುದಾದರೂ ಯಾರನ್ನು? ಸಂತತಿ ರಾಜಕಾರಣದ ಉನ್ನತೀಕರಣಕ್ಕೆ ನೀರು-ಗೊಬ್ಬರ ಹಾಕಿ ಬೆಳೆಸುತ್ತಿರುವಾಗ ವಂಶಾಡಳಿತದ ಫಲ ದೊರೆಯದೆ ಮತ್ತಿನ್ನೇನು ಸಿಕ್ಕೀತು…..? ನಾಗರೀಕ, ಜ್ಞಾನಸಂಪನ್ನ ಸಮಾಜದಲ್ಲಿಯೇ ಜನತಂತ್ರ ವ್ಯವಸ್ಥೆಗೆ ಧಕ್ಕೆಯಾದರೆ, ಪ್ರಜಾಪ್ರಭುತ್ವಕ್ಕೆ ಉಳಿಗಾಲವುಂಟೇ?ಉದಾತ್ತ ಭಾರತ ಸಂಸ್ಕೃತಿಯನ್ನು ಬಿಟ್ಟು, ಪಾಶ್ಚಾತ್ಯ ಸಂಸ್ಕೃತಿಗೆ ಮಾರು ಹೋದ ಯುವ ಜನತೆಯಿಂದ ಸಮೃದ್ಧ ರಾಷ್ಟ್ರ ನಿರ್ಮಾಣವನ್ನು ಬಯಸಲಾದೀತೆ? ತಪ್ಪು-ಒಪ್ಪುಗಳಿಗೆ ನಮ್ಮ ಮನಸ್ಸುಗಳು ಒಗ್ಗೂಡದಿರುವಾಗ, ಚಾರಿತ್ರ್ಯವಂತ ಸಮಾಜದ ನಿರೀಕ್ಷೆ ನಮ್ಮ ಭ್ರಮೆಯಲ್ಲವೇ?
ಮತ್ತಷ್ಟು ಓದು »

26
ಜನ

ಪ್ರಜಾಪ್ರಭುತ್ವದ ಶಿಕ್ಷಣ

-ರಾವ್ ಎವಿಜಿ

ಪ್ರಜಾಪ್ರಭುತ್ವ ಒಂದು ಸುಂದರ ಪರಿಕಲ್ಪನೆ ಎಂಬುದರ ಕುರಿತಾಗಲಿ, ನಮಗೆ ತಿಳಿದಿರುವ ಪ್ರಭುತ್ವದ ನಮೂನೆಗಳ ಪೈಕಿ ಅತ್ಯಂತ ಶ್ರೇಷ್ಠವಾದದ್ದು ಎಂಬುದರ ಕುರಿತಾಗಲಿ ಯಾವ ಸಂಶಯವೂ ನನಗಿಲ್ಲವಾದರೂ ನಮಗೆ, ಅರ್ಥಾತ್ ಈ ಕರ್ಮಭೂಮಿಯ ಪ್ರಜೆಗಳಿಗೆ ಪ್ರಜಾಪ್ರಭುತ್ವ ಪದ್ಧತಿಯನ್ನು ಅಳವಡಿಸಿಕೊಳ್ಳಲು ಅಗತ್ಯವಾದ ಅರ್ಹತೆ ಇದೆಯೇ ಎಂಬುದರ ಕುರಿತು ಸಂಶಯ ಇದೆ. ನನಗೆ ತಿಳಿದ ಮಟ್ಟಿಗೆ ಪ್ರಜಾಪ್ರಭುತ್ವದ ಯಶಸ್ಸು ಪ್ರಜೆಗಳ, ಅರ್ಥಾತ್  ಮತದಾರನ ವಿವೇಕವನ್ನು ಆಧರಿಸಿರುತ್ತದೆ.

  • ಹಣ, ಹೆಂಡ. ಸೀರೆ ಮೊದಲಾದವನ್ನು ಧಾರಾಳವಾಗಿ ಕೊಡುವವರನ್ನೇ ಆಗಲಿ ಚುನಾವಾಣೆಯಲ್ಲಿ ಗೆದ್ದು ಬಂದರೆ ಉಚಿತವಾಗಿ ‘ಕಲರ್’ಟಿವಿ,’ಮಿಕ್ಸಿ’ ನಗಣ್ಯ ಅನ್ನಬಹುದಾದಷ್ಟು ಕಡಿಮೆ ಬಡ್ಡಿಯ ಸಾಲ ಮುಂತಾದವನ್ನು ಕೊಡುವುದಾಗಿ ಭರವಸೆ ನೀಡುವ ಮಂದಿಯನ್ನು ಆಯ್ಕೆ ಮಾಡುವ ನಾವು ವಿವೇಕಿಗಳೇ?
  • ನಮ್ಮ ಮತದವ, ನಮ್ಮ ಜಾತಿಯವ, ನಮ್ಮ ಊರಿನವ ಎಂಬ ಕಾರಣಕ್ಕಾಗಿ ನಾಯಕನನ್ನು ಆಯ್ಕೆ ಮಾಡುವ ನಾವು ವಿವೇಕಿಗಳೇ ? ಮತ್ತಷ್ಟು ಓದು »