ವಿಷಯದ ವಿವರಗಳಿಗೆ ದಾಟಿರಿ

Posts tagged ‘ಪ್ರೀತಿ’

25
ಜನ

ಮಧುರ ಪಿಸುಮಾತಿಗೆ, ಅದರ ತುಸು ಪ್ರೀತಿಗೆ

–  ಪ್ರಸಾದ್.ಡಿ.ವಿ

ಜನವರಿ ೧, ಸದಾ ನನ್ನ ನೆನಪಿನಲ್ಲುಳಿಯುವ ದಿನ. ಅದು ನವ ವಸಂತದ ಆರಂಭವೆಂಬ ಕಾರಣಕ್ಕೆ ಮಾತ್ರವಲ್ಲ. ನನ್ನ ಜೀವನದಲ್ಲಿನ ಒಂದು ಅನಿರೀಕ್ಷಿತ ತಿರುವು, ಒಂದು ಸುಮಧುರ ಯಾತನೆಯಾಗಿ ಉಳಿದ ಕಾರಣದಿಂದ. “ಆತ(?)” ನನ್ನ ಜೀವನದಲ್ಲಾಡಿದ ಆಟವನ್ನು ನಾನೆಂದಿಗೂ ಮರೆಯುವಂತಿಲ್ಲ..! ಇಂದು ಆ ಕ್ಷಣವನ್ನು ನಿಮ್ಮ ಮುಂದೆ ಬಿಚ್ಚಿಡುತ್ತಿದ್ದೇನೆ.

ನನ್ನ ಕ್ಯಾಂಟೀನ್ ಪುರಾಣದಲ್ಲಿ “ನಾನು ನಿನ್ನನ್ನು ನನ್ನ ಜೀವದ ಗೆಳೆಯನೆಂದು ತಿಳಿದಿದ್ದೇನೆಯೇ ಹೊರತು ನಲ್ಲನಾಗಿ ಅಲ್ಲ” ಎಂದು ಆಕೆ ನನ್ನ ಪ್ರೀತಿಗೆ ಅಲ್ಪವಿರಾಮವಿಟ್ಟಿದ್ದಳು..! ನನಗೋ ಅದ್ಯಾವುದಕ್ಕೂ ಹೊಂದಿಕೊಳ್ಳಲಾಗದೆ ಸ್ನೇಹಕ್ಕೆ ಪ್ರೀತಿಯನ್ನು ತ್ಯಾಗ ಮಾಡಿದ ಅಮರ ಪ್ರೇಮಿಯಾಗಿದ್ದೆ. ಆನಂತರದಲ್ಲಿ ಆಕೆ ಮತ್ತೊಂದು ಕತೆ ಹೇಳಲು ಶುರುವಚ್ಚಿದ್ದಳು. ನಾನು ಒಬ್ಬ ಹುಡುಗನನ್ನು ಪ್ರೇಮಿಸಿದ್ದೇನೆ, ಆತನನ್ನು ನನ್ನ ಜೀವದ ಗೆಳೆಯನಾದ ನಿನಗೆ ಪರಿಚಯಿಸಬೇಕೆಂದು ಹೇಳಿದಳು.ನನಗೋ ಹೃದಯದಲ್ಲಿ ಹೇಳಿಕೊಳ್ಳಲೂ, ತಾಳಿಕೊಳ್ಳಲೂ ಆಗದ ತಳಮಳ. ನನ್ನವಳೆಂದು ತಿಳಿದವಳು ನನ್ನೆದುರಿಗೆ ಮತ್ತೊಬ್ಬನನ್ನು ಪ್ರೀತಿಸುವುದು ಸಹಿಸಲಾಗದ ನೋವನ್ನು ನೀಡಿತ್ತು, ನಿದ್ರೆ ಬಿಟ್ಟ ಉದಾಹರಣೆಗಳೂ ಉಂಟು. ಇವೆಲ್ಲವುಗಳ ನಡುವೆಯೇ ಆಕೆ ಮತ್ತು ಆಕೆಯ ಮನೆಯವರೊಂದಿಗೆ ನಿಮಿಷಾಂಬಾ ದೇವಿಯ ದರ್ಶನವೂ ಆಗಿತ್ತು. ಅವಳ ಕುಟುಂಬದ ಎಲ್ಲ ಸದಸ್ಯರೂ ನನಗೆ ತುಂಬಾ ಹಿಡಿಸಿದ್ದರು ಆಕೆ ಅಂದು ನನ್ನೊಂದಿಗೆ ಏನನ್ನೋ ಹೇಳಲು ಚಡಪಡಿಸಿದ್ದಳು, ನಾನು ಆ ನಿಮಿಷಾಂಬಾ ದೇವಿಗೆ ನನ್ನ ಪ್ರೀತಿಯನ್ನು ‘ನಮ್ಮ ಪ್ರೀತಿಯಾಗಿ’ ಮಾಡೆಂದು ಅರ್ಜಿ ಹಾಕಿದ್ದೂ ಆಗಿತ್ತು.

ಮತ್ತಷ್ಟು ಓದು »

29
ಸೆಪ್ಟೆಂ

ಲೈಫು ಇಷ್ಟೇನೇ

– ರೂಪಾ ರಾಜೀವ್
ಗಾಂಧಿನಗರದಲ್ಲಿ ತಯಾರಾಗುವ ಪ್ರತಿ ಚಲನಚಿತ್ರಗಳು ಇಂತಿಂತಹ ಗುಂಪಿಗೆ ಎಂದು ತಯಾರಾಗುತ್ತವೆ.  ಉದಾಹರಣೆಗೆ ಮಚ್ಚು, ಲಾಂಗ್, ಫೈಟ್, ಇಂತಹವು ಒಂದು ವರ್ಗದ ವೀಕ್ಷಕರಿಗೆ, ಕಣ್ಣೀರು, ತಾಯಿ ಸೆಂಟಿಮೆಂಟ್ಸ್ ಮತ್ತೊಂದು ವರ್ಗದವರಿಗೆ, ದೇವಿ ಮಹಾತ್ಮೆ ಇಂತಹ ಭಕ್ತಿ ಪ್ರಧಾನ ಚಿತ್ರಗಳು ಇನ್ನೊಂದು ವರ್ಗದ ವೀಕ್ಷಕರಿಗೆ, ಹೀಗೆ.  ಯೋಗರಾಜ್ ಭಟ್ ತಮ್ಮ ‘ಪಂಚರಂಗಿ’ ನಿರ್ಮಾಣದ ವೇಳೆಗೆ ನೀಡಿದ ಸಂದರ್ಶನವೊಂದರಲ್ಲಿ ಹೇಳಿದ್ದರು, ನಮ್ಮ ಕನ್ನಡ ಚಲನಚಿತ್ರಗಳು ಉಳಿಯಬೇಕಾದರೆ ಅಥವಾ ಥಿಯೇಟರು ಗಳಲ್ಲಿ ಹಣ ಮಾಡಬೇಕೆಂದಿದ್ದರೆ ಆ ಚಿತ್ರವು ಯುವ ಜನಾಂಗವನ್ನು ಅಂದರೆ ೧೮ ವಯಸ್ಸಿನಿಂದ ೨೩ ವರ್ಷದವರನ್ನು ಸೆಳೆಯುವಂತಿರಬೇಕು. ಆ ವರ್ಗದವರಿಗೆ ಸಿನೆಮಾ ಹಿಡಿಸಿದರೆ ಚಿತ್ರವು ಹಿಟ್ ಆಗುವುದು ಎಂದಿದ್ದರು. ಅವರ ಶಿಷ್ಯ ಪವನ್ ಕುಮಾರ್ ಅಕ್ಷರಷಃ ಭಟ್ಟರ ಈ ಮಾತಿಗೆ ಮಾರು ಹೋಗಿ ನಿರ್ದೇಶಿಸಿರುವ ಸಿನೆಮಾ ‘ಲೈಫು ಇಷ್ಟೇನೇ’.

ಮತ್ತಷ್ಟು ಓದು »

7
ಸೆಪ್ಟೆಂ

ಮನದ ತೀರದ ತುಂಬಾ ಮರೆಯದ ಹೆಜ್ಜೆಗುರುತು!

– ವಾಣಿ ಶೆಟ್ಟಿ, ಉಡುಪಿ.

ನೆನಪುಗಳು………….. ಇವೇ ಹೊತ್ತಲ್ಲದ ಹೊತ್ತಲ್ಲಿ ಕಾಡುತ್ತವೆ.. ಮತ್ತವೇ ನೊಂದ ಮನಸ್ಸನ್ನು ಸಂತೈಸುತ್ತವೆ ಕೂಡಾ!ಅವುಗಳು ಸದಾ ನಮ್ಮ ಅದೊಂದು ಕಾಲದ…ಅನ್ನೋ ನೆನಪಿನ ಗಣಿಯ ವಜ್ರ.ಸರಿಯಾಗಿ ಏಳೆಂಟು ವರ್ಷಗಳ ಹಿಂದೆ ಹೈಸ್ಕೂಲ್ ಮುಗಿಸುವ ತರಾತುರಿಯಲ್ಲಿದ್ದೆವಲ್ಲ.ಆಗೆಲ್ಲ ನಮಗೆ ಬದುಕು ಇಷ್ಟು ಬೇಗ ಆಧುನಿಕವಾಗಿ ಬಿಡಬಹುದು ಅನ್ನೋ ಕಲ್ಪನೆಯೇ ಇದ್ದಿರಲಿಲ್ಲ.ಯಾವ ಗೋಜಲು,ಗೊಂದಲ ಗಳೇ ಇಲ್ಲದ ದಿನಗಳವು!ಸ್ಕೂಲ್ ಡೇಯ ಹಿಂದಿನ ದಿನ ನಾಟಕ ,ಡ್ಯಾನ್ಸ್ ಪ್ರಾಕ್ಟಿಸ್ ಮಾಡಿ ಶಾಲೆಯ ಹಿಂದಿದ್ದ ಮರಗಳ ಅಡಿ ಕುಳಿತು ಮಾತಾಡುವಾಗ ಬಹುಶಃ ನಮ್ಮ ನಾಲ್ವರಿಗೂ ಗೊತ್ತಿತ್ತು ಮುಂದೆ ಹೀಗೆ ಭೇಟಿ ಆಗೋದು ಕಷ್ಟ ಅಂತ.ಅಷ್ಟು ದೂರದ ಕಾಲೇಜಿಗೆ ನಮ್ಮೆಲ್ಲರ ಮನೇಲಿ ಕಳಿಸ್ತಾರೋ ಇಲ್ವೋ ಏನೇ ಆದರೂ ಸಿಗ್ತಾನೆ ಇರೋಣ ಆಯ್ತಾ ಅಂದಾಗ ಹಾಂ ಆಯ್ತು ಅದಕ್ಕೇನು ಅಂದಿದ್ದೆ..ಆಮೇಲೆ ದಿನಗಳೆಲ್ಲ ಹ್ಯಾಗೆ ಓಡಿಬಿಟ್ಟವಲ್ಲ, !

ಈಗ ಕಾಡುತ್ತಿವೆ ನೆನಪುಗಳು ಸಾಯುವಷ್ಟು…! ಅಂದುಕೊಂಡಿದ್ದು ಸಾಧಿಸಿ ಸಂಪೂರ್ಣವಾಗಿ ಆಧುನಿಕತೆಯ ಗೂಡೊಳಗೆ ಬಂದ ಮೇಲೆ ಇಂದು ಎಲ್ಲವೂ ಇದೆ ಇಲ್ಲಿ ..ಸಮಯ ಮರೆಸುವ ಸ್ನೇಹಿತರು ,ಅಂತರ್ಜಾಲಗಳು, ರೆಸಾರ್ಟ್, ಗೇಮ್ಸ್,ಪಿಕ್ನಿಕ್ ,…ಇನ್ನೂ..ಆದರೆ ಬರೀ ನೂರು ಪುಟಗಳ ನನ್ನ ಹಳೆಯ ಆಟೋಗ್ರಾಫ್ ಕೊಡೊ ಅಧ್ಬುತ ಭಾವುಕತೆಯನ್ನು ಯಾವ ಆರ್ಕುಟ್, ಫೇಸ್ ಬುಕ್ ಗಳು ಕೂಡಾ ಕೊಡಲಾರವು..ಈ ಆಟೋಗ್ರಾಫ್ ನಲ್ಲಿ ರಜನಿ ಬರೆದ ಒಂದು ವಾಕ್ಯವಿದೆ “ನಮ್ಮ ಜೀವನ ಒಂದು ಬಸ್ ಪ್ರಯಾಣ ಇದ್ದ ಹಾಗೆ .ನಮ್ಮ ನಮ್ಮ ಸ್ಟಾಪ್ ಬಂದಾಗ ಇಳಿದು ಕೊಳ್ಳಲೇಬೇಕು”..ಹೇಯ್, ತಿರುಗಿ ಬಂದಿದ್ದೆನಲ್ಲಾ ನೀವೆಲ್ಲ ಇಳಿದಲ್ಲಿ ನಿಮ್ಮನ್ನು ಹುಡುಕಿಕೊಂಡು !!?ಎಲ್ಲಿದ್ರಿ ನೀವೆಲ್ಲಾ ಅಲ್ಲಿ ?ಬರೀ 4-5 ವರ್ಷದಲ್ಲೇ ನಿಮ್ಮ ಮೂರೂ ಜನರ ಮದುವೆಯಾಗಿ ಎಲ್ಲೆಲ್ಲೋ ಹೋಗಿಬಿಟ್ಟಿರಲ್ಲ..ನಿನ್ನ ಅಡ್ರೆಸ್ ,ಫೋನ್ ನಂಬರ್ ತುಂಬಾ ಹುಡುಕಿದ್ಲು.ಅಡ್ರೆಸ್ ಕೊಡಲೇ ಇಲ್ವಂತೆ ನೀನು.ಮದುವೆಗ್ ಕರಿಯೋಕೆ ಆಗಲಿಲ್ಲ ಅಂತ ಎಸ್ಟ್ ಬೇಜಾರ್ ಮಾಡ್ಕೊಂಡ್ಲು ಗೊತ್ತ ..ಹೆಚ್ಚು ಕಮ್ಮಿ ಮೂವರ ಮನೆಯಲ್ಲೂ ಹೇಳಿದ ಮಾತಿದು ..ಪೇಲವ ನಗೆ ನಕ್ಕಿದ್ದೆ..ಮುಂದೆ ಎಲ್ಲಿ ಹ್ಯಾಗೆ ಎಷ್ಟು ಓದ್ತೀನಿ ಅಂತ ಗೊತ್ತಿಲ್ಲದವಳು ಏನು ಅಡ್ರೆಸ್ ಕೊಟ್ಟಿರಬೇಕಿತ್ತು?ನಿಮ್ಮೆಲ್ಲರ ಮದುವೆ ಆಲ್ಬಮ್ ನೋಡ್ಲಿಕ್ಕೆ ಸಿಕ್ಕಿದ್ದಷ್ಟೇ ಪುಣ್ಯ ! ಹಾಗೆ ವಾಪಾಸ್ ಬರೋವಾಗ ಶಾಲೆಯ ಬಳಿ ಹೋಗಿದ್ದೆ..ಸಡನ್ ಆಗಿ “ಮೈ ಆಟೋಗ್ರಾಫ್ ” ಸಿನೆಮಾ ನೆನಪಾಗಿತ್ತು.

ಮತ್ತಷ್ಟು ಓದು »

12
ಆಗಸ್ಟ್

ನೊಂದ ಹುಡುಗಿಯ ಡೈರಿಯಿಂದ…

– ವಿದ್ಯಾ ರಮೇಶ್

ದೇವರೆ,

ಇದೊ ನಿನಗೊಂದು ಪತ್ರ. ಏನು ಈ ಹುಚ್ಚು ಹುಡುಗಿ ನನಗೆ ಪತ್ರ ಬರೆಯುತ್ತಿದ್ದಾಳೆ ಎಂದುಕೊಳ್ಳುತ್ತಿದ್ದೀಯ? ಏನು ಮಾಡಲಿ, ನಿನ್ನ ಜೊತೆ ಯಾವಗಲೊ ಒಂದು ಸರತಿ ಸಂಪರ್ಕಿಸುವ ನಾನು, ಒಂದೇ ಕ್ಷಣದಿ ಎಲ್ಲಾ ಹೇಳಲು ಹೇಗೆ ಸಾಧ್ಯ? ಅದು ಅಲ್ಲದೆ ನಿನಗೆ ಎಲ್ಲಾ ಕೇಳುವ ತಾಳ್ಮೆಯಾದರು ಎಲ್ಲಿದೆ? ಎಷ್ಟೋ ಜನರ ಕೋರಿಕೆಗಳನ್ನ ನೋಡ್ಕೊಬೇಕು ನೀನು.., ಅಂತಹದರಲ್ಲಿ ನನ್ನ ನಿಧಾನಗತಿಯಲ್ಲಿ ಹೇಳುವ ಮಾತುಗಳ ಕೇಳಿಸಿಕೊಳ್ಳಲು ಸಧ್ಯವೆ ನಿನಗೆ? ಕಂಡಿತಾ ಇಲ್ಲ. ಇನ್ನು ನೀನು ಈ ಪತ್ರವನ್ನೂ ಓದ್ತಿಯಾ ಅಂತ ನಾ ಅಂದುಕೊಂಡಿಲ್ಲ…ಹಾಗೆ ಅಂದುಕೊಳ್ಳುವುದು ಮೂರ್ಖತನ ಅಂತಲೂ ಗೊತ್ತು. ಆದ್ರೇನು ಮಾಡ್ಲಿ, ಹೇಗಾದರು ನಿನಗೆ ಕನಿಕರ ಬಂದೋ ಏನೊ ಒಮ್ಮೆ ಈ ಪತ್ರ ಓದಿ ನನ್ನ ಮನಸ್ಥಿತಿ ತಿಳಿದಿಕೊಳ್ತಿಯೇನೋ ಅನ್ನೊ ಒಂದು ಚೂರು ನಂಬಿಕೆ…, ಅದಕ್ಕೆ ನಿನಗೆ ಪತ್ರ ಬರೆಯುತಿರುವುದು…

ನಿನಗೆ ತಿಳಿದಿದೆ ಅಲ್ವ ದೇವ್ರೆ, ನಾನು ನಿನ್ನನ್ನು ಜಾಸ್ತಿ ಏನೂ ಕೇಳಿಕೊಳ್ಳುವುದಿಲ್ಲ. ಅಲ್ಲದೆ ನಿನ್ನ ಬಳಿ ಬರುವುದು ನಾನು ಎಂದೊ ಒಂದು ದಿನ, ಯಾವುದೋ ಹಬ್ಬದಂದು. ಆಗ “ಎಲ್ಲರನ್ನು ಚೆನ್ನಾಗಿ ಇಡು” ಅಥವಾ ಪರೀಕ್ಷೆಗಳು ಹತ್ತಿರ ಬರುತಿದ್ದರೆ “ಓದು ಚೆನ್ನಾಗಿ ಆಗಲಿ, ಪರೀಕ್ಷೆ ಸುಲಭವಾಗಿ ಇರಲಿ” ಎಂದು ಕೇಳಿಕೊಳ್ಳುತೀನಿ. ಅದು ಬಿಟ್ಟು ಬೇರೆ ಏನಾದರು ಕೇಳಿರುವೆನೇನು? ಬೆಳಗೆ ಎದ್ದಾಗ ಒಮ್ಮೆ ನಿನ್ನ ಆ ಫೋಟೊ ನೋಡಿದರೆ ಮತ್ತೆ ನಿನ್ನ ನೋಡುವುದು ಮಾರನೆ ದಿನವೇ! ಇದೇ ನಿನಗೆ ಕೋಪವನ್ನುಂಟು ಮಾಡುತಿದೇಯ? ಮನಸ್ಸಿನಲ್ಲಿರುವ ಭಕ್ತಿ ಸಾಲದೆ? ಬೂಟಾಟಿಕೆಗಾಗಿ ನಡೆಸುವವರ ಭಕ್ತಿಯೇ ನಿನಗೆ ಮೆಚ್ಚೆ?

ಮಧ್ಯಮ ವರ್ಗದಲ್ಲಿದ್ದರೂ ನಿನ್ನ ಎಂದೂ ಇಶ್ವರ್ಯಕ್ಕಾಗಿ ಕೇಳಿಲ್ಲ. ನನ್ನನ್ನು ಸಿರಿಯುಳ್ಳವರ ಮನೆಯಲ್ಲಿ ಹುಟ್ಟಿಸಲಿಲ್ಲವಲ್ಲ ಎಂದು ದೂಡಿಲ್ಲ.., ಅಂತಹದರಲ್ಲಿ ಇದ್ದ ಅಲ್ಪ ಸ್ವಲ್ಪ ಖುಷಿಗೂ ಕಲ್ಲೊಡೆಯುವುದೆ ನೀನು? ಸಂತೊಷವ ಬಯಸಲೇ ಬಾರದೆ ನಾನು? ಬಯಸಬಾರದಂತಾದರೆ ನಾನು ಮಾಡಿರುವ ತಪ್ಪಾದರೂ ಏನು?

ಮತ್ತಷ್ಟು ಓದು »

1
ಜುಲೈ

ಪ್ರೀತಿ ಕುರುಡಾದರೂ ಪ್ರಿತಿಸುವವರು ಕುರುಡಾಗದಿರಲಿ

– ಪವನ್ ಪಾರುಪತ್ತೇದಾರ್

ಅಗ್ರಹಾರದ ಶಾಮಣ್ಣನವರಿಗೆ ತಮ್ಮ ಮಗಳನ್ನ ಬ್ಯಾಂಕ್ ಮ್ಯಾನೇಜರ್ ಮಾಡಬೇಕಂಬ ಅಸೆ ಇತ್ತು.ಮಗಳಿಗೆ SSLC ವರೆಗೂ ಹಳ್ಳಿಯಲ್ಲಿನ ಶಾಲೆಯಲ್ಲಿ ಓದಿಸಿದರು, ಪ್ರತಿದಿನ ಮಗಳನ್ನ ಶಾಲೆಗೆ ಕರೆದೊಯ್ಯುವುವುದು ಮತ್ತೆ ಕರೆತರುವುದು ಅವರದೇ ಕೆಲಸ. ಮನೆಗೆ ಕರೆ ತಂದೊಡನೆ ಮುದ್ದಾಗಿ ಮಾತನಾಡಿಸಿ ಶಾಲೆಯ ಬಗ್ಗೆ ವಿಚಾರಿಸುವುದು ಇವೆಲ್ಲ ನಡೆಯುತ್ತಿತ್ತು. ಆದರೆ ಹಳ್ಳಿಯಲ್ಲಿ ಕಾಲೇಜ್ ಇಲ್ಲದಿದ್ದರಿಂದ ಅನಿವಾರ್ಯವಾಗಿ ಪಕ್ಕದ ಪಟ್ಟಣಕ್ಕೆ ಸೇರಿಸಬೇಕಾಯ್ತು, ಪ್ರತಿ ದಿನ ಬಸ್ ಅಲ್ಲಿ ಪ್ರಯಾಣ ಮಗಳು ಮನೆಯಿಂದ ಹೊರ ಮತ್ತೆ ಸಂಜೆ ಬರುವ ವರೆಗೂ ಅವಳದ್ದೇ ಚಿಂತೆ ಶಾಮಣ್ಣ ಮತ್ತು ಅವರ ಹೆಂಡತಿಗೆ. ಆಗಾಗ ಕಾಲೇಜ್ ಬಳಿ ಹೋಗುತಿದ್ದರು, ಒಂದೆರಡು ಸಲಿ ಅವರು ಹೋದಾಗ ಮಗಳು ಕಾಲೇಜ್ ನಲ್ಲಿ ಇರಲಿಲ್ಲ.

ಮಗಳು ಮನೆಗೆ ಬಂದಮೇಲೆ ಕೇಳಿದಾಗ ಸ್ನೇಹಿತೆಯ ಮನೆಗೆ ಓದಲು ಹೋಗಿದ್ದೆ ಎಂದಳು. ಆದರು ಶಾಮಣ್ಣ ನವರಿಗೆ ಏನೋ ಒಂದು ರೀತಿ ಅನುಮಾನ ಮಗಳು ಎಲ್ಲಾದರೂ ತಪ್ಪು ದಾರಿ ತುಳಿಯುತಿರುವಳೋ ಅನ್ನೋ ಭಯ, ಕಾಲೇಜ್ ಹತ್ತಿರದಲ್ಲೇ ಇದ್ದಿದ್ದರೆ ಮೊದಲಿನ ಹಾಗೆ ತಾನೆ ಜೊತೆಯಲಿ ಹೋಗಿ ಬರಬಹುದಾಗಿತ್ತು ಅನ್ನೋ ಯೋಚನೆ ಇನ್ನು ಸ್ವಲ್ಪ ದಿನಗಳಾದ ಮೇಲೆ ಕಾಲೇಜ್ ಗೆ ಹೋದ ಶಾಮಣ್ಣ ನವರ ಮಗಳು ಮತ್ತೆ ಮನೆಗೆ ತಿರುಗಿ ಬಂದಿಲ್ಲ. ಆಮೇಲೆ ತಿಳಿದ ವಿಷಯ ಅಂದ್ರೆ ಅವಳು ಪಟ್ಟಣದಲ್ಲಿನ ಒಬ್ಬ ಆಟೋ ಡ್ರೈವರ್ ಜೊತೆ ಓದಿ ಹೋಗಿದ್ದಳು, ಹತ್ತಾರು ಎಕರೆ ಜಮೀನು ಅಸ್ತಿ ಪಾಸ್ತಿ ಎಲ್ಲ ಇದ್ದ ಶಾಮಣ್ಣನವರಿಗೆ ಮಗಳ ಮದುವೆ ಮಾಡುವುದು ಅಷ್ಟೇನೂ ಕಷ್ಟದ ಕೆಲಸವಾಗಿರಲಿಲ್ಲ. ಆದರೆ ಮಗಳು ವಿದ್ಯಾವಂತೆ ಅಗಲಿ ಎಂದು ಅಸೆ ಪಟ್ಟಿದ್ದಕ್ಕೆ ಶಾಮಣ್ಣ ನವರಿಗೆ ಸಿಕ್ಕ ಪ್ರತಿಫಲ ಬಹಳ ವಿಷಾದನೀಯ. ಬಹಳ ಕಟ್ಟುನಿಟ್ಟಿನ ಬ್ರಾಹ್ಮಣ ಕುಟುಂಬ ಊರಿನ ಜನ ಮಾತ್ರವಲ್ಲದೆ ನೆಂಟರು ಇಷ್ಟರ ಮಧ್ಯೆ ಸಹ ಅವಮಾನ ಪಡುವಂತಾಯಿತು.

ಮತ್ತಷ್ಟು ಓದು »

17
ಜೂನ್

ಏನ್ ಹುಡ್ಗಿರೋ…!!!

– ಶಶಾ೦ಕ.ಕೆ

  ಮೊದಲನೆ ಮಹಡಿಯಲ್ಲಿದ್ದ ನನ್ನ ಕೋಣೆಯ ಕಿಟಕಿಯಿ೦ದ ಒಳಗೆ ಚಿಮ್ಮುತ್ತಿದ್ದ ಮಳೆಯ ಹನಿಗಳು ಯಾವ ತರಹ ರೇಜಿಗೆ ಹುಟ್ಟಿಸಿದವೆ೦ದರೆ, ಎದ್ದು ಕಿಟಕಿ ಬಾಗಿಲು ಹಾಕಬೇಕನ್ನುವ ಮಟ್ಟಿಗೆ. ಮಧ್ದ್ಯಾನ್ಹ ೨ ಗ೦ಟೆಗೇ ಸ೦ಜೆ ಆರು ಗ೦ಟೆ ಆದ ಹಾಗಿತ್ತು. ಮು೦ಗಾರು ಮಳೆಯ ಮೊದಲ ಹನಿಗಳು ಬೀಳುತ್ತಿದ್ದ ಹಾಗೇ ಹೋರಗೋಡಿ ನಿಲ್ಲುತ್ತಿದ್ದವನು ನಾನೇ? ಕಿಟಕಿಯ ಹತ್ತಿರ ಹಾಸಿದ ಹಾಸಿಗೆ ಹಾಳಾಗಿ ಹೋಗುತ್ತೆ ಕಣೊ ಎ೦ದು ಅಮ್ಮ ಬಯ್ಯುತ್ತಿದ್ದರೂ, ತೆರೆದ ಕಿಟಕಿಯಿ೦ದ ಮಳೆಯ ಹನಿಗಳ ಚಿಟಪಟ ಸದ್ದು ಕೇಳುವ ಸಲುವಾಗಿ ಅಮ್ಮನೊಡನೆ ಜಗಳವಾಡಿ ಕಿಟಕಿಗಳನ್ನು ತೆರೆದು ಮಣ್ಣಿನ ವಾಸನೆಯ ಸುಗ೦ಧ ಹೀರುತ್ತಿದ್ದದ್ದು ನಾನೇ? ಎನ್ನುವ ಮಟ್ಟಿಗೆ ಈಗ ಬದಲಾಗಿದ್ದೇನೆ. ತಬಲಾ, ಕೀಬೋರ್ಡ್, ಶಾಸ್ತ್ರೀಯ ಸ೦ಗೀತ ಎ೦ದು ಹುಚ್ಚು ಹಚ್ಚಿಸಿಕೊ೦ಡು ತಿರುಗುತ್ತಿದ್ದವನು ನಾನ? ಒ೦ದು ಕಾಲದಲ್ಲಿ ಮನೆಯಲ್ಲಿದ್ದಾಗೆಲ್ಲಾ World-space Satellite Radio ನಲ್ಲಿ ಶಾಸ್ತ್ರೀಯ ಸ೦ಗೀತ ವಾಹಿನಿಯನ್ನು ಕೇಳುತ್ತಿದ್ದವನು ನಾನ? ರೇಡಿಯೊದಲ್ಲಿ ನನ್ನ ನೆಚ್ಚಿನ ಪ೦.ಹರಿಪ್ರಸಾದ್ ಚೌರಾಸಿಯಾ ಅವರ ಸ೦ಗೀತ ಬರುತ್ತಿದ್ದರೂ ಅದನ್ನ ಕೇಳುವದಿರಲಿ ಅಲ್ಲಿ೦ದ ಎದ್ದು ಹೊರಟುಬಿಟ್ಟೆ.

ಮೊನ್ನೆ ಅಮ್ಮ ತರಕಾರಿ ತೊಗೊ೦ಬಾ ಎ೦ದು ಹೇಳಿದ್ದು, ತರಕಾರಿ List ಹಾಗು ಹಣ ಕೊಟ್ಟದ್ದು ಮಾತ್ರ ನೆನಪಿತ್ತೇ ಹೊರತು, ಮತ್ತೆ ನನಗೆ ನಾನೆಲ್ಲಿದ್ದೇನೆ ಎನ್ನುವ ಪ್ರಜ್ನೆ ಬ೦ದಿದ್ದು ತರಕಾರಿ ಮಾರ್ಕೆಟ್ ದಾಟಿ ಮು೦ದಿನ ರಸ್ತೆಯಲ್ಲಿ ಬಸ್ ಒ೦ದರ ಡ್ರೈವರ್ ಜೋರಾಗಿ ಹಾರ್ನ್ ಮಾಡಿ ಅವನ Dictionary ನಲ್ಲಿದ್ದ ಎಲ್ಲಾ ಅವಾಚ್ಯ ಶಬ್ಢಗಳನ್ನು ಬಳಸಿ ಬೈದಾಗಲೇ. ಇದಕ್ಕೆಲ್ಲಾ ಕಾರಣ “ಅವಳೇ” ಎ೦ದು ಯೊಚನೆ ಮಾಡ್ತಿದ್ದಾಗ “ಅಜಯ್, ಆಗಿ೦ದ ಊಟಕ್ಕೆ ಕರಿತಿದಿನಿ ಇಲ್ಲಿ ಕೂತ್ಕೊ೦ಡು ಏನ್ ಮಾಡ್ತಿದಿಯೊ?” ಎ೦ದು ಅಮ್ಮ ಕೂಗಿದಾಗಲೆ ನನಗೆ ಎಚ್ಚರ ಆಗಿದ್ದು. ಹೇಳಿಕೊಳ್ಳಕ್ಕೆ “ಅವಳು” ನನ್ನ Best Friend. ಮತ್ತಷ್ಟು ಓದು »

16
ಜೂನ್

ನನ್ನ ಕನಸಿನ ಹುಡುಗಿ

– ನವನೀತ್ ಪೈ

ನಾನು ನನ್ನ ಕನಸಿನ ಲೊಕದ ಚಕ್ರವರ್ತಿ. ಕನಸಿನಲ್ಲಿ ನನ್ನ ಮಹಾರಾಣಿಯು ಆಗಮಿಸುತ್ತಿರುವಾಗ ಭೀಕರ ಗುಡುಗಿನ ಆರ್ಭಟ ನನ್ನನ್ನು ಎಚ್ಚರಿಸಿತು. ಈ ನನ್ನ ನತದೃಷ್ಟ ಕಣ್ಣುಗಳು ಅವಳ ಆ ಸುಂದರ ಮುಖಕಮಲಗಳನ್ನು ನೋಡಲು ವಿಫಲವಾದವು. ಆಕೆ ಯಾರಿರಬಹುದು ಎಂದು ಯೋಚಿಸುವಾಗ ಪುನಃ ಗುಡುಗಿನ ಆರ್ಭಟ. ಈಗ ಕರೆಂಟ್ ಕೂಡ ಹೋಯಿತು. ನನ್ನ ಕಲ್ಪನಾ ಸಾಮ್ರಾಜ್ಯಕ್ಕೆ ಹೋಗಲು ಈ ಕತ್ತಲೆಯೇ ದಾರಿದೀಪವಾಯಿತು. ಒಂದು ಮೇಣದ ಬತ್ತಿಯನ್ನು ಹಚ್ಚಿ ಅದರ ಜ್ವಾಲೆಯಲ್ಲೇ ಅವಳ ಆ ಸುಂದರ ಮುಖವನ್ನು ಅರಸುತ್ತಿದ್ದೆ. ಅಲ್ಲೇ ಇದ್ದ ಮಂಚದ ಮೇಲೆ ಮಲಗಿ ಕಾರ್ಮೊಡದ ಹಿಂದೆ ಅವಿತಿರುವ ಚಂದಿರನನ್ನು ನೋಡಲು ಯತ್ನಿಸುತ್ತಾ ಅವಳ ಮುಖವನ್ನು ಊಹಿಸಿದೆ. ಬಹುಶಃ ಚಂದಿರನೇ ಎಸೆದ ಮಿಂಚಿನ ಚಾವಟಿ ನನ್ನ ಕನಸನ್ನು ಪುನಃ ಭಗ್ನಗೊಳಿಸಿತು. ಅವಳ ಬಗ್ಗೆ ಯೋಚಿಸುತ್ತಾ ರೆಪ್ಪೆಗಳು ಮುಚ್ಚಿಕೊಂಡವು ಆದರೆ ಮನಸಿನ್ನೂ ಜಾಗೃತವಾಗೇ ಇತ್ತು.

ನನ್ನ ಮೊದಲ ದಿನದ ಕಾಲೇಜು ಒಂದು ರೀತಿಯ ಹೊಸ ಉತ್ಸಾಹವನ್ನೂ, ಭಯವನ್ನೂ ಒಟ್ಟಿಗೆ ಮೂಡಿಸಿತು. ಕೋಟ್ಯಾಂತರ ನಕ್ಷತ್ರಗಳ ಮಧ್ಯೆ ಚಂದಿರನೊಬ್ಬನೇ ಹೇಗೆ ಪ್ರಕಾಶಿಸುತ್ತಾನೋ ಹಾಗೆ ನೂರಾರು ಹುಡುಗಿಯರ ನಡುವೆ ಅವಳೊಬ್ಬಳೇ ನನ್ನನ್ನು ಆಕರ್ಷಿಸಲು ಸಫಲಳಾದಳು.

 

 

ಮತ್ತಷ್ಟು ಓದು »

10
ಮೇ

‘ಕಾಪ’ ಪಂಚಾಯಿತಿ!

– ಪ್ರಶಾಂತ್ ಯಾಳವಾರಮಠ

ಸುನೀತಾ(21) ಮತ್ತು ‘ಜಸ್ಸಾ’ ಉರ್ಫ್ ಜಸ್ಬೀರ್ ಸಿಂಗ(22) ಒಬ್ಬರನ್ನೊಬ್ಬರು ಪ್ರೀತಿಸಿ.. ’ಪ್ರೀತಿ ಮಾಡಬಾರದು ಮಾಡಿದರೆ ಜಗಕೆ ಹೆದರಬಾರದು’ ಅಂದು ಕೊಂಡು ಮನೆಯವರ ಮತ್ತು ಊರಿನವರ ವಿರೋಧದ ನಡುವೆ ಮದುವೆಯಾಗಿದ್ದರು! ತಮ್ಮ ಪುಟ್ಟ ಸಂಸಾರ, ಪುಟ್ಟ ಮನೆ ಮತ್ತೆ ತಮಗೆ ಒಂದು ಪುಟ್ಟ ಮಗುವಿನ ಬರುವಿಗೆ ಕಾಯ್ತಾ ಹಾಯಾಗಿದ್ದರು ಅಂದರೆ ಸುನೀತಾ ೫ ತಿಂಗಳ ಗರ್ಭಿಣಿ!.
ಹೀಗೆ ಎಲ್ಲವೂ ಚೆನ್ನಾಗಿರುವಾಗ ಒಂದು ದಿನ ಮುಂಜಾನೆ ಸುನಿತಾಳ ತಂದೆಯ ಮನೆ ಮುಂದೆ ಅತೀ ಕ್ರೂರತನಕ್ಕೆ ಸಾಕ್ಷಿಯಾಗಿ ಎರಡು ದೇಹಗಳು ಬಿದ್ದಿದ್ದವು! ಅಬ್ಬಾ ಎಂತಹ ರಾಕ್ಷಸರು ಅಂತೀರಾ ಗರ್ಭಿಣಿಯ ಹೊಟ್ಟೆಗೆ ಒದ್ದಿದ್ದರು, ಮುಖಕ್ಕೆ ಗುದ್ದಿದ್ದರು ಮತ್ತು ಎರಡು ದೇಹಗಳಿಗೆ ಇರಿದಿದ್ದರು!

ಮತ್ತಷ್ಟು ಓದು »

1
ಏಪ್ರಿಲ್

ಸ್ನೇಹಿತ ಮೊದಲ ಬಾರಿ ಅತ್ತುಬಿಟ್ಟ…!

ಪ್ರವೀಣಚಂದ್ರ, ಪುತ್ತೂರು

ಬಸ್ ವೇಗವಾಗಿ ಸಾಗುತ್ತಿತ್ತು. ಊರಿಗೆ ಬಂದ ಸಂಭ್ರಮವನ್ನು ಕಿತ್ತುಕೊಂಡ ಆ ಕ್ಷಣದ ಕುರಿತು ಯೋಚಿಸುತ್ತಿದ್ದೆ. ಬಸ್ಸಿನ ಕಿಟಕಿ ಹಾಕಿದ್ದರೂ ಚಳಿ ಕಾಡುತ್ತಿತ್ತು. ಹೃದಯವೂ ತಣ್ಣಗಿತ್ತು. ಅಪದಮನಿ ಅಭಿದಮನಿಗಳೆರಡೂ ನೋವಿನಲ್ಲಿತ್ತು. ಆಪ್ತ ಸ್ನೇಹಿತನೊಬ್ಬನ ಮುಂದೆ ಸ್ವಾಭಿಮಾನದ ಪ್ರಶ್ನೆಯೆದ್ದು ಅಹಲ್ಯೆಯಂತೆ ಕಲ್ಲಾದ ಪರಿಣಾಮವದು. ನನ್ನ ಎದುರು ಮಾತು ಆತನಿಗೆ ಅನಿರೀಕ್ಷಿತವಾಗಿತ್ತು. ನನಗೆ ಅನಿವಾರ್ಯವಾಗಿತ್ತು.
***
ಬ್ಯಾಗಿನಲ್ಲಿದ್ದ ಪತ್ರಿಕೆಯೊಂದನ್ನು ಕೈಗೆತ್ತಿಕೊಂಡೆ. ಅಲ್ಲಿ ನಾಗತಿಹಳ್ಳಿ ಸಂಬಂಧದ ಕುರಿತು ಬರೆದಿದ್ದರು. ಸಂಬಂಧವೆಂದರೆ ಬೆಂಕಿ ಮತ್ತು ಚಳಿ ಕಾಯುವವನ ನಡುವಿನ ಅಂತರದಂತೆ. ಚಳಿಯಾಗುತ್ತೆ ಎಂದು ಬೆಂಕಿಯನ್ನು ಮುಟ್ಟುವ ಹಾಗಿಲ್ಲ. ಬೆಂಕಿಗೂ ವ್ಯಕ್ತಿಗೂ ಒಂದಿಷ್ಟು ಅಂತರ ಕಾಯ್ದುಕೊಳ್ಳಬೇಕು ಅಂತ ಬರೆದಿದ್ದರು. ಸ್ನೇಹಕ್ಕೂ ಇದು ಅನ್ವಯವಾಗುತ್ತಾ? ನಾನು ಯೋಚಿಸತೊಡಗಿದೆ. ಸ್ನೇಹಕ್ಕೆ ಯಾವುದೇ ಅಂತರಗಳೇ ಇಲ್ಲವಾ ಅರ್ಥವಾಗಲಿಲ್ಲ.
***
ಇನ್ ಬಾಕ್ಸ್ ತೆರೆದು ನೋಡಿದಾಗ ಸ್ನೇಹದ ಮಹತ್ವ ಸಾರುವ ಹತ್ತಾರು ಸಂದೇಶಗಳು ಬಂದು ಕೂತ್ತಿದ್ದವು. ನಮ್ಮ ಕೋಪನೋಡಿ ಸ್ನೇಹಿತರೇ ಕಳುಹಿಸುತ್ತಿದ್ದರು. ಬೇರೆ ಸಂದರ್ಭದಲ್ಲಿಯಾದರೆ ಡಿಲಿಟ್ ಮಾಡಿ ಬಿಡುತ್ತಿದ್ದೆ. ಈಗ ಪ್ರತಿಪದಗಳು ಅರ್ಥವತ್ತಾಗಿ ಗೋಚರಿಸುತ್ತಿದ್ದವು. ನಮ್ಮೊಳಗೆ ಯಾಕೆ ಜಗಳ ಎಂದು ಸ್ನೇಹಿತರೆಲ್ಲರ ಗೋಗೆರತದಂತೆ ಕಾಡುತ್ತಿದ್ದವು.
***
ಅವನಲ್ಲಿ ಜಗಳ ಮಾಡಿದ ಮರುಕ್ಷಣವೇ ಆತನೊಂದಿಗೆ ಮನಸ್ಸು ರಾಜಿಯಾಗಿತ್ತು. ಆದರೆ ಮಾತನಾಡಲು ಮನಸ್ಸು ಇಚ್ಚಿಸಲಿಲ್ಲ. ಏನು ನಡೆಯಿತು ಎಂದು ಬರೆಯಲು ಕಷ್ಟ. ಯಾಕೆಂದರೆ ಅದರ ಯಾತನೆ ಅನುಭವವೇದ್ಯ. ಇಲ್ಲೊಂದು ಕತೆ ಓದಿ.
***
ಮತ್ತಷ್ಟು ಓದು »