ನಾಡು-ನುಡಿ:ಮರುಚಿಂತನೆ – “ಜಾತಿ ಹಾಗೂ ಅಸ್ಮಿತೆ ರಾಜಕೀಯ” ಭಾಗ ೨
– ಪ್ರೊ. ಜೆ.ಎಸ್. ಸದಾನಂದ, ಕುವೆಂಪು ವಿಶ್ವವಿದ್ಯಾನಿಲಯ
ನಾಡು-ನುಡಿ:ಮರುಚಿಂತನೆ – “ಜಾತಿ ಹಾಗೂ ಅಸ್ಮಿತೆ ರಾಜಕೀಯ” ಭಾಗ ೧
ನವ ಸಾಮಾಜಿಕ ಚಳುವಳಿ ಸಿದ್ಧಾಂತಗಳು:
1960 ಹಾಗೂ 70ರ ದಶಕದಲ್ಲಿ ಪ್ರಾರಂಭವಾದ ನವ ಸಾಮಾಜಿಕ ಚಳುವಳಿ ಸಿದ್ಧಾಂತಗಳು ಮಾರ್ಕ್ಸ್ ವಾದಿ ನಿಲುವುಗಳಿಗಿಂತ ಭಿನ್ನವಾದ ನಿಲುವನ್ನು ಮುಂದಿಡಲು ಯಶಸ್ವಿಯಾದವು. ವರ್ಗಾದಾರಿತವಲ್ಲದ ಅಸ್ಮಿತೆಯ ರಾಜಕೀಯ ಕೇವಲ ಸಾಂಕೇತಿಕ ಎನ್ನುವ ಮಾರ್ಕ್ಸ್ ವಾದಿ ನಿಲುವನ್ನು ಇವು ಅಲ್ಲಗಳೆಯುತ್ತವೆ. ಈ ಸಿದ್ಧಾಂತವು ಅಸ್ಮಿತೆ ರಾಜಕೀಯವನ್ನು ಒಂದು ವಿಶಿಷ್ಟ ಬಗೆಯ ರಾಜಕೀಯ ಎಂದೇ ಪ್ರತಿಪಾದಿಸುತ್ತದೆ. ಅಸ್ಮಿತೆಯಾದಾರಿತ ಚಳುವಳಿಗಳನ್ನು ಆಧುನಿಕತೆಯ ಪರಿಣಾಮವಾಗಿ ಆರ್ಥಿಕ ಮತ್ತು ಸಾಮಾಜಿಕ ವಲಯದ ಉನ್ನತ ಸ್ಥರದಲ್ಲಿ ಆದ ರಾಚನಿಕ ಬದಲಾವಣೆ ಅಸ್ಮಿತೆ ರಾಜಕೀಯವನ್ನು ಹುಟ್ಟು ಹಾಕಿದೆ ಮತ್ತು ಇದೊಂದು ಐತಿಹಾಸಿಕವಾದ ಸಾಮೂಹಿಕ ಪ್ರತಿಕ್ರಿಯೆ ಎಂದು ಈ ಸಿದ್ಧಾಂತದ ಪ್ರತಿಪಾದನೆಯಾಗಿದೆ. ಕೆಲವು ವಿದ್ವಾಂಸರು ಹೇಳುವಂತೆ ಅಸ್ಮಿತೆ ರಾಜಕೀಯವು ಕೈಗಾರಿಕೋತ್ತರ ಸಮಾಜದಲ್ಲಾಗುತ್ತಿರುವ ಒಂದು ಬಗೆಯ ಸ್ಥಿತ್ಯಂತರ (ಟೌರಿನ್ 1981). ಹಬರ್ಮಾಸ್ರವರ ಅಭಿಪ್ರಾಯದಲ್ಲಿ ಅಸ್ಮಿತೆ ಚಳುವಳಿಗಳು ಪ್ರಭುತ್ವದ ನಿಯಂತ್ರಣ ಹಾಗೂ ಅದರ ನಿರ್ಣಯಗಳ ಒತ್ತಡಕ್ಕೆ ಹೆಚ್ಚು ಹೆಚ್ಚಾಗಿ ಒಳಗಾಗುತ್ತಿರುವ ಸಮುದಾಯಗಳು ಅಂತಹ ಹಿಡಿತದಿಂದ ತಪ್ಪಿಸಿಕೊಳ್ಳುವ ಪ್ರಯತ್ನದ ಫಲವಾಗಿವೆ (ಹಬರ್ಮಾಸ್ 1985).
ನಾಡು-ನುಡಿ:ಮರುಚಿಂತನೆ – “ಜಾತಿ ಹಾಗೂ ಅಸ್ಮಿತೆ ರಾಜಕೀಯ” ಭಾಗ ೧
– ಪ್ರೊ. ಜೆ.ಎಸ್. ಸದಾನಂದ, ಕುವೆಂಪು ವಿಶ್ವವಿದ್ಯಾನಿಲಯ
ರಾಜಕೀಯ ಸಿದ್ಧಾಂತದಲ್ಲಿ ಅಸ್ಮಿತೆ ರಾಜಕೀಯದ ಪರಿಕಲ್ಪನೆ ಪ್ರಬಲವಾಗಿದ್ದು 20ನೇ ಶತಮಾನದ ಉತ್ತರಾರ್ಧದಲ್ಲಿ. ತಮ್ಮ ಅಸ್ತಿತ್ವ ಸಂಪೂರ್ಣ ಅವಗಣನೆಗೆ ಒಳಗಾಗಿದೆ ಮತ್ತು ಆ ಕಾರಣದಿಂದ ತಮ್ಮನ್ನು ಪ್ರಾತಿನಿಧ್ಯದಿಂದ ವಂಚಿತರನ್ನಾಗಿಸಿ ರಾಜಕೀಯ ಮುಖ್ಯವಾಹಿನಿಯಿಂದ ದೂರವಿರಸಲಾಗಿದೆ ಎನ್ನುವ ಭಾವನೆ ಬೆಳೆಸಿಕೊಂಡ ಒಂದು (ಸಾಮಾಜಿಕ/ಸಾಂಸ್ಕೃತಿಕ) ಗುಂಪು ರಾಜಕೀಯ ಸಂಚಲನೆಗೆ ತೊಡಗುವ ಪ್ರಕ್ರಿಯೆಯನ್ನು ಅಸ್ಮಿತೆ ರಾಜಕೀಯ ಎಂದು ಕರೆಯಲಾಗುತ್ತದೆ. ಸಾರ್ವತ್ರಿಕ ಒಳಿತು ಅಸ್ಮಿತೆ ರಾಜಕೀಯದ ಗುರಿಯಾಗಿರುವುದಿಲ್ಲ ಮತ್ತು ಅಂತಹ ರಾಜಕೀಯ ಹೋರಾಟ ಯಾವುದೇ ರಾಜಕೀಯ ಪಕ್ಷಕ್ಕೆ ಸೀಮಿತವಾಗಿರುವುದಿಲ್ಲ. ಮುಖ್ಯವಾಹಿನಿಯಿಂದ ಬದಿಗೆ ಸರಿಸಲ್ಪಟ್ಟ ತನ್ನನ್ನು ಮುಖ್ಯವಾಹಿನಿಯೊಂದಿಗೆ ಗುರುತಿಸಿಕೊಳ್ಳುವಂತೆ ಮಾಡುವುದು ಒಂದು ಗುಂಪಿನ ಅಸ್ಮಿತೆ ರಾಜಕೀಯದ ಮುಖ್ಯ ಉದ್ದೇಶವಾಗಿರುತ್ತದೆ.
20ನೇ ಶತಮಾನದ ಉತ್ತರಾರ್ಧದಲ್ಲಿ ಅಮೇರಿಕಾ ದೇಶದಲ್ಲಿ ಪ್ರಾರಂಭವಾದ (ದ್ವಿತೀಯ ಹಂತದ) ಸ್ತ್ರೀವಾದೀ ಚಳುವಳಿ, ಕರಿಯರ ನಾಗರೀಕ ಹಕ್ಕುಗಳ ಹೋರಾಟ, ಸಲಿಂಗಿಗಳು ತಮ್ಮ ಹಕ್ಕಿಗಳಿಗಾಗಿ ಮಾಡಿದ ಹೋರಾಟ ಮೊದಲಾದವುಗಳನ್ನು ಅಸ್ಮಿತೆ ರಾಜಕೀಯ ಎಂದು ಮೊತ್ತ ಮೊದಲ ಬಾರಿಗೆ ಗುರುತಿಸಲಾಯಿತು. ಈ ಎಲ್ಲಾ ಗುಂಪುಗಳು ತಮ್ಮ ವಿಶಿಷ್ಟ ಅಸ್ಮಿತೆಯನ್ನು ಗುರುತಿಸಿ ಗೌರವಿಸದೆ ಆ ಕಾರಣಕ್ಕಾಗಿ ತಾವು ಮುಖ್ಯವಾಹಿನಿಯಿಂದ ಬದಿಗೆ ಸರಿಸಲ್ಪಟ್ಟ ಪ್ರಕ್ರಿಯೆಯ ವಿರುದ್ಧ ಹೋರಾಟ ಪ್ರಾರಂಬಿಸಿದವು. ತಾವು ಸಾಮಾಜಿಕವಾಗಿ ರಾಜಕೀಯವಾಗಿ ತುಳಿತಕ್ಕೊಳಗಾಗಿದ್ದೇವೆ ಎನ್ನುವ ಭಾವನೆಯನ್ನು ಆಧರಿಸಿ ಅಸ್ಮಿತೆ ರಾಜಕೀಯದ ಸಂಘಟನೆಯು ತನ್ನ ಸ್ವರೂಪವನ್ನು ಪಡೆದುಕೊಳ್ಳುತ್ತದೆ. ಅಸ್ಮಿತೆ ರಾಜಕೀಯ ಎಂದು ಕರೆಯಲ್ಪಡುವ ರಾಜಕೀಯ/ಸಾಮಾಜಿಕ ಚಳುವಳಿಗಳ ವ್ಯಾಪ್ತಿ ವಿಶಾಲವಾದುದಾಗಿದೆ. ರಾಜಕೀಯ ಶಾಸ್ತ್ರದ ಅಧಯಯನಗಳಲ್ಲಿ ಅಸ್ಮಿತೆ ರಾಜಕೀಯಕ್ಕೆ ಸಂಬಂದಿಸಿದ ಬರವಣೆಗೆಗಳು ಪಾಶ್ಚಾತ್ಯ ಬಂಡವಾಳಿಶಾಹಿ ಪ್ರಜಾಪ್ರಭುತ್ವಗಳಿಗೆ ಸಂಬಂದಿಸಿರುತ್ತವೆ. ಬಂಡವಾಳಶಾಹಿ ವ್ಯವಸ್ಥೆಯ ಹಿಡಿತ ಪ್ರಬಲವಾಗುತ್ತಾ ಹೋದ ಹಾಗೆ ಪರಂಪರಾನುಗತವಾಗಿ ಬಂದ ಸಮುದಾಯಗಳು ತಮ್ಮ ಅಸ್ಮಿತೆಗಳನ್ನು ಕಳೆದುಕೊಳ್ಳುತ್ತಾ ಹೋಗಿ ಅಂತಹ ಸಮುದಾಯಗಳ ಸದಸ್ಯರಲ್ಲಿ ಪರಕೀಯತೆಯ ಭಾವನೆ ಹೆಚ್ಚಗುತ್ತಾ ಹೋದದ್ದರ ಪರಿಣಾಮದಿಂದಾಗಿ ಅಸ್ಮಿತೆ ರಾಜಕೀಯ ಹುಟ್ಟಿಕೊಂಡಿದೆ ಎಂದು ಕೆಲವರು ಭಾವಿಸುತ್ತಾರೆ.
ಮತ್ತಷ್ಟು ಓದು 
ಧೃತರಾಷ್ಟ್ರ,ದುರ್ಯೋಧನರಿಲ್ಲದೆ ದುಶ್ಯಾಸನರು ಎಲ್ಲಿಂದ ಬಂದಾರು?
– ರಾಕೇಶ್ ಶೆಟ್ಟಿ
ಮಂಗಳೂರು ಹೋಂ-ಸ್ಟೇ ಮೇಲೆ ದಾಳಿ ಮಾಡಿದವರನ್ನು ‘ಆಧುನಿಕ ದುಶ್ಯಾಸನರು’ ಅಂದಾಗ, ಸಂಸ್ಕೃತಿ ರಕ್ಷಣೆ ಹೆಸರಲ್ಲಿ ಹೆಣ್ಣುಮಕ್ಕಳ ಮೈ ಮುಟ್ಟುವುದು,ಹೊಡೆಯುವುದು ಇಂತ ವಿಕೃತಿ ಮಾಡುವವರನ್ನು ದುಶ್ಯಾಸನರೆಂದರೆ ತಪ್ಪಿಲ್ಲ ಅನ್ನಿಸುತ್ತದೆ ಅನ್ನಿಸಲೇಬೇಕು.ಆದರೆ “ಧೃತರಾಷ್ಟ್ರ,ದುರ್ಯೋಧನರಿಲ್ಲದೆ ದುಶ್ಯಾಸನರು ಎಲ್ಲಿಂದ ಬಂದಾರು?”.ಹಾಗಂತ ದೃತರಾಷ್ಟ್ರ,ದುರ್ಯೋಧನರ ನೆಪವೊಡ್ಡಿ ದುಶ್ಯಾಸನರ ನಡವಳಿಕೆಯನ್ನು ಬೆಂಬಲಿಸಬೇಕಿಲ್ಲ,ಬೆಂಬಲಿಸುವುದು ಆರೋಗ್ಯವಂತ ಸಮಾಜದ ಲಕ್ಷಣವೂ ಅಲ್ಲ. ಅಂದು ಮಹಾಭಾರತದ ತುಂಬಿದ ಸಭೆಯಲ್ಲಿ ದುಶ್ಯಾಸನ ದ್ರೌಪದಿಯ ಸೀರೆ ಎಳೆಯುವಂತೆ ಅಪ್ಪಣೆ ಕೊಟ್ಟಿದ್ದು ದುರ್ಯೋಧನ ಮತ್ತು ಅದನ್ನ ಕೇಳಿಯೂ ತೆಪ್ಪಗೆ ಕೂತಿದ್ದು ಅಪ್ಪ ಅನ್ನಿಸಿಕೊಂಡ ಧೃತರಾಷ್ಟ್ರ ಅಲ್ಲವೇ? ಆಗಲೂ ಈಗಿನಂತೆ ಎಲ್ಲ ಗೊತ್ತಿದ್ದೂ ನಮ್ಮ ಸೆಕ್ಯುಲರ್ಗಳಂತೆ ಕಂಡು ಕಾಣದಂತಿದ್ದವರು ಉಳಿದೆಲ್ಲರು.ಒಬ್ಬ ಶ್ರೀ ಕೃಷ್ಣನನ್ನು ಬಿಟ್ಟು..! ಇಂದಿನ ಭಾರತದಲ್ಲಿ ದುಶ್ಯಾಸನರನ್ನೇನೋ ಮಾಧ್ಯಮಗಳು ತೋರಿಸಿವೆ.ಆದರೆ ಧೃತರಾಷ್ಟ್ರ,ದುರ್ಯೋಧನರೆಲ್ಲಿ? ದುಶ್ಯಾಸನ ಅನ್ನುವವನ ಹೆಸರು ಈ ಪರಿ (ಕು)ಖ್ಯಾತಿ ಪಡೆಯಲು ಕಾರಣ ವಸ್ತ್ರಾಪಹರಣ ಮಾಡಲು ಹೇಳಿದ ಅವನಣ್ಣ ದುರ್ಯೋಧನನಲ್ಲವೇ? ದುರ್ಯೋಧನ,ದುಶ್ಯಾಸನರಿಗೆ ಮೌನ ಸಮ್ಮತಿ ಕೊಟ್ಟ ದ್ರುತರಾಷ್ಟ್ರನು ಸೇರಿ ಇಡಿ ಕುರು ಸಭೆಯಲ್ಲವೇ? ಹಾಗಿದ್ದರೆ ಕರಾವಳಿಯ ಮಹಾಭಾರತದಲ್ಲಿ ದುಶ್ಯಾಸನರ ಸೃಷ್ಟಿಗೆ ಕಾರಣವಾದ ದುರ್ಯೋಧನ ಯಾರು?




