ವಿಷಯದ ವಿವರಗಳಿಗೆ ದಾಟಿರಿ

Posts tagged ‘ಬಾಲಗಂಗಾಧರ’

22
ಆಗಸ್ಟ್

ರಮಾನಂದ ಐನಕೈ ಅವರ “ನಮಗೆ ನಾವೇ ಪರಕೀಯರು” ಪುಸ್ತಕದ ಕುರಿತು

– ಮು . ಅ . ಶ್ರೀರಂಗ  ಯಲಹಂಕ  ಬೆಂಗಳೂರು

ನಮಗೆ ನಾವೇ ಪರಕೀಯರುರಮಾನಂದ ಐನಕೈ ಅವರ “ನಮಗೆ ನಾವೇ ಪರಕೀಯರು ” (ನ. ನಾ. ಪ) (ಪ್ರಕಾಶಕರು : ರಾಷ್ಟ್ರೋತ್ಹಾನ ಸಾಹಿತ್ಯ ಬೆಂಗಳೂರು -೧೯ )ಪುಸ್ತಕ ಓದುವ ಮುನ್ನ ನಾನು ಪ್ರೊ .ಎಸ್ .ಎನ್. ಬಾಲಗಂಗಾಧರ (ಬಾಲು)ಅವರ ವಿಚಾರಗಳನ್ನು ಆಧರಿಸಿದ ಕನ್ನಡಕ್ಕೆ ಅನುವಾದವಾಗಿರುವ ಮೂರುಪುಸ್ತಕಗಳನ್ನು ಓದಿದ್ದೆ (ಪೂರ್ವಾವಲೋಕನ ,ಭಾರತದಲ್ಲಿ ಜಾತಿ ವ್ಯವಸ್ಥೆ ಇದೆಯೆ? ಮತ್ತು ಹುಡುಕಾಟವನ್ನು ನಿಲ್ಲಿಸದಿರೊಣ). ಸ್ಮೃತಿ-ವಿಸ್ಮೃತಿ ;ಭಾರತೀಯ ಸಂಸ್ಕೃತಿ ತನ್ನ ವಿಚಾರ ಮತ್ತು ಗಾತ್ರದಲ್ಲಿ ತುಂಬಾ ಘನವಾಗಿದೆ ಹೀಗಾಗಿ ನಿಧಾನವಾಗಿ ಓದಿ ಅರ್ಥಮಾಡಿಕೊಳ್ಳಬೇಕಾಗಿದೆ. ಇದುವರೆಗೆ ಸುಮಾರು ಇನ್ನೂರು ಪುಟಗಳನ್ನು ಓದಿದ್ದೆನೆ. ರಮಾನಂದರ ಪ್ರಸ್ತುತ ಪುಸ್ತಕ ಮೇಲೆ ಹೇಳಿದ ಬಾಲು ಅವರ ನಾಲ್ಕು ಪುಸ್ತಕಗಳ ಅದರಲ್ಲೂ ಮುಖ್ಯವಾಗಿ ಸ್ಮೃತಿ-ವಿಸ್ಮೃತಿ ಪುಸ್ತಕದಲ್ಲಿರುವ ವಿಷಯಗಳನ್ನು ನೇರವಾಗಿ ಭಟ್ಟಿ ಇಳಿಸಿರುವುದರ ಪ್ರತಿಫಲ! ಇದಕ್ಕೆ ಪುರಾವೆಗಳು ರಮಾನಂದರ ನ.ನಾ.ಪ.. ಪುಸ್ತಕದಲ್ಲೇ ಇವೆ.

,         ೧. ಬಾಲು ಅವರೇ ತಮ್ಮ ಮುನ್ನುಡಿಯಲ್ಲಿ—ರಮಾನಂದರ ಎಲ್ಲಾ ಲೇಖನಗಳು ಈ ವಿಷಯಗಳ ಕುರಿತಾಗಿ ಬೆಲ್ಜಿಯಂ ಹಾಗೂ ಭಾರತದಲ್ಲಿ ಕುವೆಂಪು ವಿ. ವಿ. ಸ್ಥಳೀಯ ಸಂಸ್ಕೃತಿಗಳ ಅಧ್ಯಯನ ಕೇಂದ್ರದಲ್ಲಿ ನಡೆಯುತ್ತಿರುವ ಸಂಶೋಧನೆಗಳಿಂದ ಪ್ರಭಾವಿತವಾಗಿವೆ ಎಂದ್ದಿದ್ದಾರೆ (ಪುಟxii)

೨. ಲೇಖಕರ ಮಾತಿನಲ್ಲಿ ಸ್ವತಃ ರಮಾನಂದ ಐನಕೈ ಅವರೇ ಮೇಲೆ ಹೇಳಿದ ಬಾಲು ಅವರ ಮಾತುಗಳನ್ನೇ ಅನುಮೋದಿಸಿದ್ದಾರೆ—ಬಾಲು ಅವರ ಮೂಲ ಸಿದ್ಧಾಂತಕ್ಕೆ ಚ್ಯುತಿ ಬಾರದ ಹಾಗೆ ಅವರ ವಿಚಾರಗಳನ್ನು ನನ್ನ ಅನುಭವಗಳ ಮೂಲಕ ಸರಳವಾಗಿ ನಿರೂಪಿಸುವ ಕೆಲಸ ಮಾಡಿದ್ದೇನೆ (ಪುಟ xvi )(ರಮಾನಂದರ ಅನುಭವಗಳ ಪ್ರಮಾಣ ಈ ಪುಸ್ತಕದ ವಿಚಾರದಲ್ಲಿ ತೀರಾ ಕಡಿಮೆ ಎಂಬುದು ಓದುಗರಿಗೆ ಮನವರಿಕೆಯಾಗುತ್ತದೆ!)

೩. ರಮಾನಂದರ ಪ್ರಸ್ತುತ ಪುಸ್ತಕ್ಕಕ್ಕೆ (ನ.ನಾ.ಪ) ಹಿನ್ನೆಲೆ ಬರೆದಿರುವ ದಾ॥ ರಾಜಾರಾಮ ಹೆಗಡೆಯವರು ಸಹ ರಮಾನಂದರದು ಸ್ವತಂತ್ರ ಲೇಖನಗಳಾದರೂ ಕೂಡ ಭಾರತೀಯ ಸಂಸ್ಕೃತಿಯ ಕುರಿತು ಎಸ್ . ಎನ್ . ಬಾಲಗಂಗಧರ ಅವರ ಹೊಸ ವಾದಗಳಿಂದ ಪ್ರಭಾವಿತವಾಗಿವೆ. (ಪುಟ xviii)

ಮತ್ತಷ್ಟು ಓದು »