ವಿಷಯದ ವಿವರಗಳಿಗೆ ದಾಟಿರಿ

Posts tagged ‘ಬಿಜೆಪಿ’

6
ಡಿಸೆ

ರಾಮ ಜನ್ಮಭೂಮಿ/ಬಾಬರಿ ವಿವಾದ : ಭೂತಕಾಲದ ತಪ್ಪುಗಳು ಭವಿಷ್ಯಕ್ಕೆ ಭಾರವಾಗಬಾರದು

– ರಾಕೇಶ್ ಶೆಟ್ಟಿ

Ayodhya Issue and Unityಮುಂಬೈನಿಂದ ನಾನು ಬೆಂಗಳೂರಿಗೆ ಹೊರಟಿದ್ದ ಸೆಪ್ಟಂಬರ್ ೩೦,೨೦೧೦ರ ಗುರುವಾರದ ಆ ದಿನ ಉಳಿದ ದಿನಗಳಂತೆ ಇರಲಿಲ್ಲ.ಒಂದು ಬಗೆಯ ಕುತೂಹಲ,ಕಾತರ,ಆತಂಕಗಳು ಭಾರತದ ಬಹುತೇಕರಲ್ಲಿ ಮನೆ ಮಾಡಿದ್ದ ದಿನವದು.ಅಲಹಬಾದ್ ಉಚ್ಚ ನ್ಯಾಯಾಲಯ ಅಯೋಧ್ಯೆಯ “ರಾಮ ಜನ್ಮ ಭೂಮಿ/ಬಾಬರಿ ಮಸೀದಿ” ವಿವಾದದ ಕುರಿತು ತೀರ್ಪು ನೀಡುವ ದಿನವಾಗಿತ್ತದು.ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಹಳಷ್ಟು ಮುನ್ನೆಚ್ಚರಿಕೆಯ ಕ್ರಮ ಕೈಗೊಂಡಿದ್ದವು,ಸೂಕ್ಷ್ಮ,ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಖಾಕಿ ಪಡೆಯ ಕಣ್ಗಾವಲಿತ್ತು.ಜನರ ಜೊತೆಗೆ ವಿಶೇಷವಾಗಿ ಟಿ.ಆರ್.ಪಿ ಮಾಧ್ಯಮಗಳು ಕೂಡ ಸಂಯಮದಿಂದ ವರ್ತಿಸಬೇಕು ಎನ್ನುವ ಮನವಿಗಳು ಸರ್ಕಾರದಿಂದಲೇ ಬರುತಿತ್ತು.ಮಧ್ಯಾಹ್ನ ೩.೩೦ರ ಸುಮಾರಿಗೆ ತೀರ್ಪು ಹೊರಬರಲಿದೆ ಎನ್ನುವ ಸುದ್ದಿಗಳು ಹರಿದಾಡುತಿದ್ದವು.ನನ್ನ ವಿಮಾನವಿದ್ದಿದ್ದು ಸಂಜೆಯ ವೇಳೆಗೆ.ಆದರೆ,ಬಾಬರಿ ಮಸೀದಿ ಧರಾಶಾಹಿಯಾದ ಮೇಲೆ ಭೀಕರ ದಂಗೆಗೆ ಸಾಕ್ಷಿಯಾಗಿದ್ದ ಮುಂಬೈನಲ್ಲಿ ತೀರ್ಪು ಹೊರಬಂದ ಮೇಲೆ ಏನಾದರೂ ಆಗಬಾರದ್ದು ಶುರುವಾದರೇ,ಅದಕ್ಕೂ ಮುಖ್ಯವಾಗಿ ನಾನು ಹೋಗಬೇಕಾದ ದಾರಿಯಲ್ಲೇ “ಅತಿ ಸೂಕ್ಷ್ಮ ಪ್ರದೇಶ”ಗಳು ಇದ್ದವಾದ್ದರಿಂದ,ಸೇಫರ್ ಸೈಡ್ ಎಂಬಂತೆ ತುಸು ಬೇಗವೇ ನಾನು ಮತ್ತು ನನ್ನ ಸಹುದ್ಯೋಗಿ ಕ್ಯಾಬ್ ಹತ್ತಿಕೊಂಡೆವು.

ಕ್ಯಾಬ್ ಹೊರಟಂತೇ,ಡ್ರೈವರ್ ಅನ್ನು ಮಾತಿಗೆಳೆದೆ.”ಇವತ್ತು ತೀರ್ಪು ಬರಲಿಕ್ಕಿದೆಯಲ್ಲ.ನಿಮಗೇನನ್ನಿಸುತ್ತದೆ,ಆ ಜಾಗ ಯಾರಿಗೆ ಸೇರಿಬೇಕು ನಿಮ್ಮ ಪ್ರಕಾರ?”.ಅವರು ನನ್ನತ್ತ ತಿರುಗಿ “ತಪ್ಪು ತಿಳಿಯಬೇಡಿ ಸರ್.ನಿಮ್ಮ ಪ್ರಶ್ನೆಯೇ ಸರಿಯಿಲ್ಲ.ಜಾಗ ಯಾರಿಗೆ ಸೇರಬೇಕು ಎನ್ನುವುದು ‘ಅಹಂ’ನ ಪ್ರಶ್ನೆಯಾಗುತ್ತದೆ.ಆ ಅಹಂ ಮುಂದೇ ಪ್ರತಿಷ್ಟೆ, ದ್ವೇಷವನ್ನಷ್ಟೇ ಹೊರಡಿಸುತ್ತದೆ.ಅಸಲಿಗೆ ಇದು “ನಂಬಿಕೆ”ಯ ಪ್ರಶ್ನೆ.ಈ ಸಮಸ್ಯೆಯ ಪರಿಹಾರವಾಗಬೇಕಿರುವುದು ಪರಸ್ಪರ ಸಂವಾದ,ಸಾಮರಸ್ಯ,ಶಾಂತಿಯ ಅನುಸಂಧಾನದಿಂದಲೇ ಹೊರತು, ಇದು ಸರ್ಕಾರ,ನ್ಯಾಯಾಲಯದಲ್ಲಿ ಇತ್ಯರ್ಥವಾಗುವ ವಿಷಯವಲ್ಲ.ಆ ಜಾಗ ರಾಮ ಜನ್ಮಭೂಮಿಯೆಂಬುದು ಹಿಂದೂಗಳ ನಂಬಿಕೆಯಾಗಿದೆ.ಮೊಘಲ ಬಾಬರ್ ಆದೇಶಂತೆ ಅಲ್ಲಿದ್ದ ಮಂದಿರವೊಂದನ್ನು ಕೆಡವಿ ಅದರ ಮೇಲೆ ಮಸೀದಿಯನ್ನು ನಿರ್ಮಿಸಲಾಗಿರುವ ವಾದವಿದೆಯಲ್ಲ ಸರ್ ಅದು ನಿಜವೇ ಆದರೆ,ಅಲ್ಲಿ ಮಂದಿರವೇ ನಿರ್ಮಾಣವಾಗಬೇಕು.ಯಾಕೆಂದರೆ ರಾಮ,ರಾಮಾಯಣ,ಕೃಷ್ಣ,ಮಹಾಭಾರತವೆಲ್ಲ ಈ ದೇಶದ ಜನರಿಗೆ ಕೇವಲ ಪುರಾಣಗಳಲ್ಲ.ಅವು ಜನರ ಜೀವನದ ಭಾಗಗಳು.ಹೀಗಿರುವಾಗ ಅಲ್ಲಿನ ಜನರ ನಂಬಿಕೆಗಳಿಗೆ ಬೆಲೆ ಕೊಟ್ಟು ಬಾಬರಿನಿಂದ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು” ಎಂದ.

ಮತ್ತಷ್ಟು ಓದು »

26
ನವೆಂ

ಭಾರತವನ್ನು “ಕಾಂಗ್ರೆಸ್ಸ್ ಮುಕ್ತ”ವಾಗಿಸಲು,ಕರ್ನಾಟಕದಲ್ಲಿ “ಬಿಜೆಪಿಯೇ ಇಲ್ಲ”!

– ರಾಕೇಶ್ ಶೆಟ್ಟಿ

Modi Karnataka BJPಕುರುಕ್ಷೇತ್ರದ ಯುದ್ದಕ್ಕೆ ಬೆಂಬಲ ಕೋರಿ ಬಂದ ಅರ್ಜುನನಿಗೆ,”ನಾರಾಯಣ ಬೇಕೋ?”,”ನಾರಾಯಣಿ ಸೈನ್ಯ ಬೇಕೋ?” ಎಂದು ಕೇಳುತ್ತಾನೆ ಶ್ರೀಕೃಷ್ಣ.’ಸಂಖ್ಯೆ’ ಗಿಂತ ‘ವ್ಯಕ್ತಿ’ ಮತ್ತು ‘ವ್ಯಕ್ತಿ’ಗಿಂತ ‘ವ್ಯಕ್ತಿತ್ವ’ದ ಮಹತ್ವ ಅರಿತಿದ್ದ ಅರ್ಜುನ “ನಾರಾಯಣ” ಎನ್ನುತ್ತಾನೆ. ಅರ್ಜುನನೆಡೆಗೆ ಕನಿಕರ ತೋರಿದ ದುರ್ಯೋಧನ “ನಾರಾಯಣಿ ಸೈನ್ಯ”  ಪಡೆದು ಹೋಗುತ್ತಾನೆ.ಕಡೆಗೆ ಯುದ್ಧದಲ್ಲಿ ಗೆದ್ದಿದ್ದು ಯಾರು ಎನ್ನುವುದು ಎಲ್ಲರಿಗೂ ತಿಳಿದ ವಿಷಯವೇ. ಇಲ್ಲಿ ನನ್ನ ಗಮನವಿರುವುದು ಯುದ್ಧದ ಮೇಲಲ್ಲ.ಯುದ್ಧಕ್ಕೆ ಹೊರಟು ನಿಂತವನು ಮಾಡಿಕೊಳ್ಳುವ ತಯಾರಿಯ ಮೇಲೆ.ಕುರುಕ್ಷೇತ್ರದ ಯುದ್ಧಕ್ಕೆ ಕಾರಣನಾದ ದುರ್ಯೋಧನ,ಯುದ್ಧಕ್ಕೆ ಬೇಕಾದ ಜನರನ್ನು (ಸಂಖ್ಯೆ) ಒಟ್ಟುಗೂಡಿಸಿಕೊಂಡು ಹೊರಟು ನಿಂತನೇ ಹೊರತು,ಯುದ್ದಕ್ಕೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳಲಿಲ್ಲ.

ಬಹುಷಃ, ತನ್ನ ಜೊತೆಗೆ ಭೀಷ್ಮ,ದ್ರೋಣಾಚರ್ಯರಂತ ಅಸಾಧಾರಣ ಸಾಮರ್ಥ್ಯದ “ವ್ಯಕ್ತಿ”ಗಳಿದ್ದಾರೆ ಎನ್ನುವ ಅಹಂ ದುರ್ಯೋಧನನಿಗಿದ್ದೀತು.ವ್ಯಕ್ತಿಗಳಿದ್ದರೇನಂತೆ “ವ್ಯಕ್ತಿತ್ವ” ಇರಲಿಲ್ಲವಲ್ಲ!

ಏನಿದು,ಭೀಷ್ಮನಂತ ಭೀಷ್ಮ,ದ್ರೋಣಾಚಾರ್ಯರಿಗೆ ವ್ಯಕ್ತಿತ್ವವಿರಲಿಲ್ಲ ಎನ್ನುತ್ತಿದ್ದೇನೆ ಎನ್ನಿಸಬಹುದು.ಧರ್ಮ-ಅಧರ್ಮದ ಪ್ರಶ್ನೆ ಬಂದಾಗ ಅದಿನ್ನೇನೋ ಸಬೂಬು ಕೊಟ್ಟು ಅಧರ್ಮದ ಪರ ನಿಲ್ಲುವ ವ್ಯಕ್ತಿಯ “ವ್ಯಕ್ತಿತ್ವ”ಕ್ಕೆ ಬೆಲೆ ಉಳಿಯುತ್ತದೆಯೇ? ಕಡೆಗೂ ಮಹಾಭಾರತದ ಯುದ್ಧದಲ್ಲಿ ಗೆದ್ದಿದ್ದು ಧರ್ಮದ ಪರನಿಂತ ವ್ಯಕ್ತಿಗಳೇ.

ಮತ್ತಷ್ಟು ಓದು »

5
ಮೇ

ರಾಜಕೀಯ ಪಕ್ಷಗಳಿಗೆ ಬೇಕು, RTI ಬ್ರೇಕು!

– ತುರುವೇಕೆರೆ ಪ್ರಸಾದ್           

RTI Political partiesನಾವು ಮತ್ತೊಂದು ಲೋಕಸಭಾ ಚುನಾವಣೆಯ ಹೊಸ್ತಿಲಲ್ಲಿದ್ದೇವೆ.ರಾಜಕೀಯ ಪಕ್ಷಗಳು ತಮ್ಮ ಮಾಮೂಲಿ ಬೂಟಾಟಿಕೆ ಹಾಗೂ ಡೋಂಗಿ ಮಾತುಗಳೊಂದಿಗೆ ಮತದಾರರನ್ನು ಸೆಳೆಯಲು ಕಸರತ್ತು ನಡೆಸಿವೆ. ಆಶ್ವಾಸನೆಗಳ ಸುರಿಮಳೆಯನ್ನೇ ಸುರಿಸುತ್ತಿವೆ. ಭ್ರಷ್ಟಾಚಾರ ಮುಕ್ತ ಪಾರದರ್ಶಕ ಆಡಳಿತದ ಭರವಸೆಗಳ ಮಹಾಪೂರವೇ ಹರಿಯುತ್ತಿದೆ. ಆದರೆ 9ತಿಂಗಳ ಹಿಂದೆ ಕೇಂದ್ರೀಯ ಮಾಹಿತಿ ಆಯೋಗ (ಸಿಐಸಿ) ಕಾಂಗ್ರೆಸ್, ಬಿಜೆಪಿ,ಸಿಪಿಐ, ಸಿಪಿಐ-ಎಂ, ಬಿಎಸ್ಪಿಷ ಹಾಗೂ ಎನ್ಸಿಿಪಿ-ಈ 6ರಾಜಕೀಯ ಪಕ್ಷಗಳನ್ನು ಮಾಹಿತಿ ಹಕ್ಕು ಕಾಯಿದೆ ವ್ಯಾಪ್ತಿಯಡಿ ಸಾರ್ವಜನಿಕ ಸಂಸ್ಥೆಗಳು ಎಂದು ಘೋಷಿಸಿತ್ತು. ಸಿಐಸಿಯ ಆ ಆದೇಶವನ್ನು ಎಲ್ಲಾ ರಾಜಕೀಯ ಪಕ್ಷಗಳು ಧಿಕ್ಕರಿಸಿವೆ. ಆ ಬಗ್ಗೆ ಚಕಾರವೆತ್ತದೆ ಮತದಾರರೂ ಎಲ್ಲಾ ಮರೆತಂತಿದ್ದಾರೆ.

ಮಾಹಿತಿ ಹಕ್ಕು ಕಾರ್ಯಕರ್ತರಾದ ಸುಭಾಷ್ ಅಗರ್ವಾದಲ್ ಮತ್ತು ಅನಿಲ್ ಬೈರ್ವಾೋಲ್ ಪ್ರಮುಖ ರಾಜಕೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ, ಸಿಪಿಐ-ಎಂ ಪಕ್ಷಗಳ ದೇಣಿಗೆ ಸ್ವೀಕೃತಿ ಹಾಗೂ ಖರ್ಚು-ವೆಚ್ಚಗಳ ಮಾಹಿತಿ ಕೋರಿದ್ದರು. ಬಿಜೆಪಿ ಮತ್ತು ಕಾಂಗ್ರೆಸ್ ತಾವು ಸಾರ್ವಜನಿಕ ಸಂಸ್ಥೆಗಳಲ್ಲ ಹಾಗೂ ಮಾಹಿತಿ ಹಕ್ಕು ಕಾಯಿದೆ ವ್ಯಾಪ್ತಿಯಡಿ ಬರುವುದಿಲ್ಲ ಎಂದು ತಿಳಿಸಿದ್ದವು. ಆದರೆ ಮಾಹಿತಿ ಹಕ್ಕು ಕಾರ್ಯಕರ್ತರು ರಾಜಕೀಯ ಪಕ್ಷಗಳನ್ನೂ ಮಾಹಿತಿ ಹಕ್ಕು ಕಾಯಿದೆಯ ಸೆಕ್ಷನ್ 2(ಎಚ್) ಅಡಿ ಸಾರ್ವಜನಿಕ ಸಂಸ್ಥೆಗಳೆಂದು ಘೋಷಿಸಬೇಕೆಂದು ಸಿಐಸಿಗೆ ಮನವಿ ಮಾಡಿದ್ದರು.ಅದರಂತೆ ಆಯೋಗದ ಪೂರ್ಣ ಪೀಠ ಜೂನ್ 3, 2013ರಂದು ಮೇಲಿನ 6ರಾಜಕೀಯ ಪಕ್ಷಗಳು ಸಾರ್ವಜನಿಕ ಸಂಸ್ಥೆಗಳು ಹಾಗೂ ಸಾರ್ವಜನಿಕರಿಗೆ ಅವು ಉತ್ತರದಾಯಿತ್ವ ಹೊಂದಿವೆ ಎಂದು ಆದೇಶ ನೀಡಿತು. ಅದಕ್ಕೆ ಸಿಐಸಿ ಕಾರಣಗಳನ್ನೂ ನೀಡಿತ್ತು. ಎಲ್ಲಾ 6ರಾಜಕೀಯ ಪಕ್ಷಗಳು ಪರೋಕ್ಷವಾಗಿ ಕೇಂದ್ರ ಸರ್ಕಾರದಿಂದ ಸಹಾಯ ಧನ ಪಡೆದಿದ್ದವು. ದೆಹಲಿಯ ಹೃದಯ ಭಾಗದಲ್ಲಿ ಅತಿ ಕಡಿಮೆ ಅಥವಾ ಪುಕ್ಕಟೆಯಾಗಿ ನಿವೇಶನ/ಕಟ್ಟಡಗಳನ್ನು ಪಡೆದಿದ್ದವು. ಎಲ್ಲಾ ಪಕ್ಷಗಳಿಗೂ ಆಕಾಶವಾಣಿ ಹಾಗೂ ದೂರದರ್ಶನದಲ್ಲಿ ರೂ.28.56ಲಕ್ಷ ಮೌಲ್ಯದ ಉಚಿತ ಪ್ರಸಾರ ಸೇವೆ ನೀಡಲಾಗಿತ್ತು. 2006-09ರ ಅವಧಿಯಲ್ಲಿ ಎಲ್ಲಾ ಪಕ್ಷಗಳಿಗೆ ಒಟ್ಟಾರೆ 510ಕೋಟಿ ಆದಾಯ ಕರ ವಿನಾಯತಿಯನ್ನು ನೀಡಲಾಗಿತ್ತು.

ಮತ್ತಷ್ಟು ಓದು »

17
ಏಪ್ರಿಲ್

ಕಾಂಗ್ರೆಸ್ ರಹಿತ ಭಾರತ ಸಾಧ್ಯವೇ?

– ಡಾ.ಅಶೋಕ್. ಕೆ. ಆರ್

indian-politician1‘ಯಥಾಸ್ಥಿತಿಗೋ ಬದಲಾವಣೆಗೋ ಸ್ಥಿರತೆಗೋ ಅಭಿವೃದ್ಧಿಗೋ ಸ್ಥಳೀಯ ಅನಿವಾರ್ಯತೆಗೋ ಮತ್ತೊಂದಕ್ಕೋ ಮಗದೊಂದಕ್ಕೋ ಒಟ್ಟಿನಲ್ಲಿ ಹೋಗಿ ವೋಟ್ ಮಾಡಿ!’

ಮೋದಿ ಜಪದ ಭಾಜಪ ಕಾಂಗ್ರೆಸ್ಸನ್ನು ಭಾರತದಿಂದ ಸಂಪೂರ್ಣ ನಿರ್ನಾಮವಾಗಿಸುವುದೇ ನಮ್ಮ ಗುರಿ ಎಂದು ಬಹಳಷ್ಟು ಪ್ರಚರಿಸುತ್ತಿದೆ. ಅನೇಕ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳ ಏಳಿಗೆಯಿಂದ ರಾಷ್ಟ್ರೀಯ ಪಕ್ಷಗಳೆನ್ನಿಸಿಕೊಂಡ ಕಾಂಗ್ರೆಸ್ ಮತ್ತು ಭಾಜಪ ತಮ್ಮ ಅಸ್ತಿತ್ವವನ್ನು ಕಂಡುಕೊಳ್ಳಲೂ ಎಣಗುತ್ತಿರುವ ಪರಿಸ್ಥಿತಿಯಿದೆ. ಒಂದಷ್ಟು ರಾಜ್ಯಗಳಲ್ಲಿ ಭಾಜಪ ಪ್ರಭಾವಶಾಲಿಯಾಗಿ ಮಗದೊಂದಷ್ಟು ಕಡೆ ಕಾಂಗ್ರೆಸ್ ಪ್ರಭಾವಶಾಲಿಯಾಗಿ ಮತ್ತೊಂದು ಪಕ್ಷದ ಏಳಿಗೆಗೆ ಅಡ್ಡಿಯಾಗಿದ್ದರೆ ಇನ್ನುಳಿದವುಗಳಲ್ಲಿ ಮತದಾರ ಒಮ್ಮೆ ಕಾಂಗ್ರೆಸ್ಸಿಗೆ ಮತ್ತೊಮ್ಮೆ ಭಾಜಪಕ್ಕೆ ಅವಕಾಶ ನೀಡುವ ಮನಸ್ಸು ಮಾಡಿದ್ದಾನೆ.
ಕಾಂಗ್ರೆಸ್ಸಿಗರು ಮಾಡುವ ಭ್ರಷ್ಟಾಚಾರದಿಂದ ರೋಸಿ ಹೋಗಿ ಬೇರೊಂದು ಪಕ್ಷಕ್ಕೆ ಮತ ಹಾಕುವ ಜನರ ತೀರ್ಮಾನ ಬಹಳಷ್ಟು ಸಲ ಬೆಂಕಿಯಿಂದ ಬಾಣಲೆಗೆ ಹಾಕಿಸಿಕೊಂಡಂತೆ ಆಗುತ್ತಿದೆ. ಮತ್ತಷ್ಟು ಓದು »

22
ಮಾರ್ಚ್

೨೦೧೪ರ ಚುನಾವಣ ಕಣದ ಸುತ್ತ

– ಡಾ.ಕಿರಣ್ ಎಂ ಗಾಜನೂರು

Modi vs Rahulಭಾರತದಲ್ಲಿ ಲೋಕಸಭಾ ಚುನಾವಣೆಗೆ ವೇದಿಕೆ ಸಜ್ಜುಗೊಂಡಿದೆ.ಹಾಗೆ ನೋಡುವುದಾದರೆ ಭಾರತದಲ್ಲಿ ಇದುವರೆಗೆ ನಡೆದ ಲೋಕಸಭಾ ಚುನಾವಣೆಗಳಿಗಿಂತ ೨೦೧೪ರ ಈ ಲೋಕಸಭಾ ಚುನಾವಣೆ ಹೆಚ್ಚು ಚರ್ಚೆಯಲ್ಲಿದೆ ಮತ್ತು ಜನ ಸಮಾನ್ಯರಲ್ಲಿಯು ಒಂದು ಸಹಜ ಕುತೂಹಲವನ್ನು ಈ ಚುನಾವಣೆ ಹುಟ್ಟುಹಾಕಿದೆ.ಭಾರತದಲ್ಲಿನ ಪ್ರಮುಖ ರಾಜಕೀಯ ಚಿಂತಕರು,ಮಾಧ್ಯಮಗಳು ಈ ವಿದ್ಯಮಾನಕ್ಕೆ ಹಲವಾರು ಕಾರಣಗಳನ್ನು ಗುರುತಿಸಿದ್ದಾರೆ ಅದರಲ್ಲಿ ಬಹಳ ಮುಖ್ಯವಾದದ್ದು

೧) ಆಡಳಿತಾತ್ಮಕ ಮತ್ತು ಭ್ರಷ್ಟಾಚಾರದ ಕಾರಣಕ್ಕಾಗಿ (ಮುಖ್ಯವಾಗಿ ಬೆಲೆ ಎರಿಕೆ) ರೂಪಿತಗೊಂಡ ಕಾಂಗ್ರೆಸ್ಸ್ ವಿರೋಧಿ ನಿಲುವು
೨) ಬಿ.ಜೆ.ಪಿ ತನ್ನ ಪ್ರಧಾನಿ ಆಭ್ಯರ್ಥಿ ನರೆಂದ್ರ ಮೋದಿಯವರ ಹಿನ್ನಲೆಯಲ್ಲಿ ರೂಪಿಸಿಕೊಂಡ ಜನಪ್ರಿಯತೆ.

ಹಾಗಾದರೆ, ೨೦೧೪ ರ ಚುನಾವಣೆ ಈ ಎರಡು ನಿಲುಗಳ ಆಧಾರದಲ್ಲಿಯೆ ನಡೆಯುತ್ತದಾ? ದೇಶದ ಎಲ್ಲಾ ಭಾಗದ ಮತದಾರ ಈ ನಿಲುವುಗಳ ಆಧಾರದಲ್ಲಿಯೆ ಮತ ಚಲಾಯಿಸುತ್ತಾನಾ?  ಎಂಬ ಪ್ರಶ್ನೆಯನ್ನು ಭಾರತದಲ್ಲಿ ಇದುವರೆಗೆ ನಡೆದ ಲೋಕಸಭಾ ಚುನಾವಣೆಗಳ ಹಿನ್ನಲೆಯಲ್ಲಿ ವಿಶ್ಲೇಷಿಸಿ ಕೇಳಿಕೊಂಡರೆ, ’ಖಂಡಿತಾ ಇಲ್ಲಾ’ ಎಂಬ ಉತ್ತರವನ್ನೂ ಯಾರಾದರೂ ನೀರಿಕ್ಷಿಸಬಹುದಾಗಿದೆ…! ಏಕೆಂದರೆ ಕಳೆದ ಹತ್ತು ವರ್ಷಗಳ ಕಾಲ ಈ ದೇಶವನ್ನು ಆಳಿದ ಯುಪಿಎ ಸರ್ಕಾರ ಹಲವಾರು ಹಗರಣಗಳನ್ನು ತನ್ನ ಮೇಲೆ ಎಳೆದುಕೊಂಡಿದ್ದರೂ ಆದರ ಜೊತೆ ಜೊತೆಗೆ ’ಆರ್.ಟಿ.ಐ, ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನ”ಯಂತಹ ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತರುವುದರ ಮೂಲಕ ಸಮಾಜದ ಹಲವು ವರ್ಗಗಳ ಜನರ ಬೆಂಬಲವನ್ನು ಗಳಿಸಿಕೊಂಡಿದೆ .ಅದೂ ಅಲ್ಲದೆ, ಈ ದೇಶವನ್ನು ಹೆಚ್ಚು ಕಾಲ ಆಳಿದ ಕಾಂಗ್ರೆಸ್ಸ್ ಪಕ್ಷ ಅದರದ್ದೆ ಆದಂತಹ ಒಂದು ಮತದಾರರ ವರ್ಗ ಮತ್ತು ಬುದ್ದಿಜೀವಿಗಳ ಗುಂಪನ್ನು ಸೃಷ್ಟಿಸಿಕೊಂಡಿದೆ ಅವರು ಎಂದಿಗೂ ಕಾಂಗ್ರೆಸ್ಸ್ ಅನ್ನು ಬೆಂಬಲಿಸುತ್ತಾರೆ ಮತ್ತು ಚುನಾವಣೆಯಲ್ಲಿ ಈ ಅಂಶ ಖಂಡಿತವಾಗಿ ಪ್ರಭಾವ ಬೀರಲಿದೆ.ಇದರ ಜೊತೆಗೆ ದೇಶದ ಭವಿಷ್ಯದ ಪ್ರಧಾನಿ ಎಂದು ಕಾಂಗ್ರೆಸ್ಸ್ ವಲಯದಲ್ಲಿ ಗುರುತಿಸಿಕೊಂಡಿರುವ ರಾಹುಲ್ ಗಾಂಧಿಯವರು ಇತ್ತಿಚೆಗೆ “ಭಾರತಕ್ಕೆ ಬೇಕಿರುವುದು ಇಲ್ಲಿನ ವಿವಿಧತೆಯನ್ನು ಅವುಗಳ ನೆಲೆಯಲ್ಲಿಯೆ ಗುರುತಿಸಿ ಬೆಳೆಸಬೇಕಾದ ರಾಜಕೀಯ ಪಕ್ಷವೆ ಹೊರತು ವ್ಯಕ್ತಿ ಕೇಂದ್ರಿತ ಪಕ್ಷವಲ್ಲ” ಎಂಬ ಮಾದರಿಯ ಪ್ರಜಾಸತ್ತಾತ್ಮಕ ಹೇಳಿಕೆಗಳನ್ನು ನೀಡುತ್ತಿದ್ದಾರೆ ಮತ್ತು ಕಾಂಗ್ರೆಸ್ಸಿನಲ್ಲಿ ತಮ್ಮ ಈ ನಿಲುವನ್ನು ಜಾರಿಗೆ ತರುವ ಪ್ರಯತ್ನವನ್ನು ಮಾಡುತ್ತಿದ್ದಾರೆ ಇದಕ್ಕೆ ಉದಾಹರಣೆ ಇತ್ತೀಚೆಗೆ ಕಾಂಗ್ರೆಸ್ಸ್ ಪಕ್ಷದೊಳಗೆ ನಡೆದ ಆಂತರಿಕ ಚುನಾವಣೆ.ಈ ಅಂಶವು ದೇಶದ ಮಧ್ಯಮ ವರ್ಗದ ಮತದಾರರನ್ನು ಖಂಡಿತಾ ಸೆಳೆಯುತ್ತದೆ.

ಮತ್ತಷ್ಟು ಓದು »

23
ಜನ

ಬೇಕಾಗಿರುವುದು ರಾಜಕೀಯ ಅಸ್ತಿತ್ವವೇ ವಿನಃ ಕೇವಲ ಭ್ರಷ್ಟಚಾರ ನಿಗ್ರಹವಲ್ಲ

– ನವೀನ್ ನಾಯಕ್          

AAPಅಣ್ಣಾ ನೇತೃತ್ವದ ಜನಲೋಕಪಾಲ ಹೋರಾಟದಿಂದ ಪ್ರಸಿದ್ದರಾದ ಅರವಿಂದ್ ಕೇಜ್ರಿವಾಲ್ ದೆಹಲಿ ಗದ್ದುಗೆಗೇರಿ ಬದಲಾವಣೆಯ ಪರ್ವ ತರಲು ಹೊರಟಿದ್ದಾರೆ. ಸರಕಾರ ರಚಿಸಲು ಜನರ ಅಭಿಪ್ರಾಯ ಸಂಗ್ರಹಿಸಿದ ಕಾರಣಕ್ಕೆ ಹಗಲು ರಾತ್ರಿ ಮಾಧ್ಯಮಗಳು ತಲೆದೂಗಿದ್ದೇ ತೂಗಿದ್ದು. ಎಲ್ಲಾ ಮಾಧ್ಯಮಗಳಲ್ಲಿ ಒಂದೇ ಕೂಗು. ಇದೇ ನೈಜ ಪ್ರಜಾಪ್ರಭುತ್ವ!. ಈ ಮಾಧ್ಯಮಗಳ ಕಣ್ಣಿಗೆ ಮೂರು ರಾಜ್ಯಗಳಲ್ಲಿ ಭರ್ಜರಿ ಜಯಗಳಿಸಿದ ಮತ್ತು ದೆಹಲಿಯಲ್ಲಿ ಮೊದಲ ಸ್ಥಾನ ಪಡೆದ ಬಿಜೆಪಿ ನೈಜ ಪ್ರಜಾಪ್ರಭುತ್ವದಲ್ಲಿ ಗೆದ್ದಿದ್ದಲ್ಲ ! ಪಕ್ಷ ಕಟ್ಟಿ ಒಂದು ವರ್ಷದಲ್ಲೇ ಎರಡನೆಯ ಸ್ಥಾನಕ್ಕೆ ಬರುವುದು ಅಚ್ಚರಿಯೇ, ಅವರ ಪ್ರಯತ್ನಕ್ಕೆ ನಾವು ಶಹಭಾಸ್ ಹೇಳಲೇ ಬೇಕು. ದೇಶದ ಭವಿಷ್ಯಕ್ಕೆ ಉತ್ತಮ ಆಡಳಿತ ನೀಡಲು ಆಪ್ ಪಕ್ಷವೇ ಮುಂಚೂಣಿಗೆ ಬರಬೇಕೆಂಬ ನಿರ್ಧಾರವನ್ನು ಕೇಜ್ರಿವಾಲ್ ಯಶಸ್ವಿಯಾಗಿ ಯುವಕರ ಮನಸ್ಸಲ್ಲಿ ತುಂಬಿದ್ದರು. ರಾಜಕೀಯ ಮಾಡುವುದು ಹೇಗೆ ಅಂತ ನಾವು ಕಲಿಸುತ್ತೇವೆ, ನಮಗೆ ಕೆಂಪು ಗೂಟದ ಕಾರು ಬೇಕಿಲ್ಲ, ನಮಗೆ ಭದ್ರತೆ ಬೇಕಿಲ್ಲ, ಸರಕಾರಿ ಭವ್ಯ ಮನೆಯೂ ಬೇಕಿಲ್ಲ ಹೀಗೆ ಒಂದರ ಮೇಲೊಂದಂತೆ ಘೋಷಿಸತೊಡಗಿದರು. ಯುವಕರ ಉತ್ಸಾಹ ಇಮ್ಮಡಿಯಾಗಿತ್ತು. ತಮ್ಮ ನಾಯಕನಿಗೆ ಈ ಜಗದಲ್ಲಿ ಬೇರಾರು ಸರಿಸಾಟಿ ಇಲ್ಲವೆಂಬತೆ ವರ್ತಿಸತೊಡಗಿದರು. ಅಣ್ಣಾ ಹಜಾರೆಯವರು ಯಾವಾಗ ತನ್ನ ಹೆಸರನ್ನು ರಾಜಕೀಯಕ್ಕೆ ದುರುಪಯೋಗ ಪಡಿಸಿಕೊಳ್ಳಬೇಡಿ ಎಂದರೋ ಕೇಜ್ರಿವಾಲ್ ಅಭಿಮಾನಿಗಳು ಬುಸುಗುಡತೊಡಗಿದರು. ಸಾಲದೇ ಐಎಸಿ ಚಳುವಳಿಯ ಹಣದ ಲೆಕ್ಕ ಕೇಳಿದರೋ ಎಲ್ಲ ಅಭಿಮಾನಿಗಳು ಸಿಡಿದೆದ್ದರು. ಅಣ್ಣಾ ಮುದುಕರಾಗಿದ್ದಾರೆ ಹುಚ್ಚರಂತೆ ವರ್ತಿಸುತಿದ್ದಾರೆ ಎಂಬ ಕ್ಷುಲ್ಲಕ ಮಾತುಗಳನ್ನು ಸಾಮಾಜಿಕ ತಾಣದ ತುಂಬ ಪಸರಿಸತೊಡಗಿದರು. ಯಾರ ಏಳಿಗೆಗೆ ಯಾರು ಕಾರಣರಾಗಿದ್ದರೋ ಅವರು ಮದುಕರಾಗಿದ್ದರು ಹುಚ್ಚರಾಗಿದ್ದರು.

ಮತ್ತಷ್ಟು ಓದು »

30
ಡಿಸೆ

ಕೇಜ್ರಿವಾಲ್ ಮತ್ತು ಮೋದಿ – ಹೀಗೊಂದು ಮುನ್ನೋಟ

– ಗಣೇಶ್ ಕೆ. ದಾವಣಗೆರೆ

ಮೋದಿ Vs ಕೇಜ್ರಿವಾಲ್ರಾಹುಲ ಗಾಂಧೀ ಮತ್ತು ಅರವಿಂದ ಕೇಜ್ರಿವಾಲ್ ಒಂದೇ ವಯಸ್ಸಿನವರು. ಇಬ್ಬರಿಗೂ ಎಷ್ಟು ವ್ಯತ್ಯಾಸಗಳಿವೆ. ಒಬ್ಬವ ತೀರಾ ಎಳಸು. ಇನ್ನೊಬ್ಬವ ಜನರ ಗಮನವನ್ನ ತನ್ನ ಮಾತುಗಳತ್ತ ಸೆಳೆದ ಯುವಕ. ಹೊಸ ಹೊಸ ಚಿಂತನೆಗಳನ್ನ ಹರಿಯಬಿಟ್ಟವ. ಆಡಳಿತದಲ್ಲಿ ಪಳಗಿದ ಮೋದಿಗೆ ರಾಹುಲ ಯಾವ ರೀತಿಯಲ್ಲೂ ಸರಿಸಮನಲ್ಲ. ಜೊತೆಗೆ, ಪ್ರತಿಸ್ಪರ್ಧಿಯೂ ಅಲ್ಲ. ರಾಹುಲಗಾಂಧೀ ವಯಸ್ಸಿನವನೇ ಆದ ಕೇಜ್ರಿವಾಲ್ ಯಾವ ರಾಜಕೀಯ ಅನುಭವವೂ ಇಲ್ಲದೇ ಪಕ್ಷವೊಂದನ್ನ ಕಟ್ಟಿ ಆರು ತಿಂಗಳಲ್ಲಿ ಆಧಿಕಾರದ ಹೊಸ್ತಿಲತ್ತ ತಂದು ನಿಲ್ಲಿಸುವುದು ಸಾಮಾನ್ಯ ಸಂಗತಿಯಲ್ಲ.

ನಮ್ಮೆಲ್ಲ ಪೂರ್ವಾಗ್ರಹಗಳನ್ನ ಬದಿಗಿಟ್ಟು ಈ ಯಶಸ್ಸನ್ನ ಗಮನಿಸಬೇಕಾದ ಅಗತ್ಯವಿದೆ. ಕೆಲವರಿಗೆ ಕೇಜ್ರಿವಾಲನನ್ನ ಹೊಗಳಿದರೆ, ಮೆಚ್ಚಿಕೊಂಡರೆ, ಮೋದಿ ಗತಿಯೇನು ಅನ್ನುವ ಚಿಂತೆ. ದೆಹಲಿಯಲ್ಲಿ ಕಾಂಗ್ರೇಸ್ ವಿರೋಧಿ ಅಲೆ ಇತ್ತು ಅನ್ನೋದು ಸರ್ವವಿದಿತವಾದ ಸಂಗತಿ. ಆದರೆ, ಆ ಅಧಿಕಾರ ವಿರೋಧಿ ಅಲೆಯ ಸಂಪೂರ್ಣ ಲಾಭ ಪಡೆಯಲಿಕ್ಕೆ ಬಿಜೆಪಿಗೆ ಏಕೆ ಸಾಧ್ಯವಾಗಲಿಲ್ಲ? ಮೋದಿಯೂ ಕೂಡಾ ಬಂದು ಹೋಗಿದ್ದರಲ್ಲ? ಕಾಂಗ್ರೇಸ್ ಆಡಳಿತ ವಿರೋಧಿ ಅಲೆಯಿರುವಾಗ ಮೋದಿಯವರ ಭಾಷಣಕ್ಕೆ ಸರಳ ಬಹುಮತ ಕೊಡಿಸುವಷ್ಟೂ ಶಕ್ತಿ ಸಾಮರ್ಥ್ಯಗಳಿಲ್ಲವೇ? ಹಾಗಾದರೆ, ಬಿಜೆಪಿ ಎಡವಿದ್ದೆಲ್ಲಿ?
ಮತ್ತಷ್ಟು ಓದು »

29
ಡಿಸೆ

ಸರ್ವಾಧಿಕಾರಿ ಧೋರಣೆಯ ಪ್ರಗತಿಪರರು ಮತ್ತು ಮೋದಿ

– ಪ್ರಸನ್ನ,ಬೆಂಗಳೂರು

Modiಅಹಮದಾಬಾದಿನ ಮೆಟ್ರೊಪಾಲಿಟನ್ ನ್ಯಾಯಾಲಯ ಪ್ರಗತಿಪರರಿಗೆ ಒಂದು ತಡೆಯಲಾರದ ಆಘಾತ ನೀಡಿದೆ. ಈ ಆಘಾತವನ್ನು ಸಹಿಸಿಕೊಂಡು ಈಗಲಾದರೂ ಈ ಬುದ್ದಿಗೇಡಿಗಳು ತಮ್ಮ ಮಾರ್ಗ ಸರಿ ಪಡಿಸಿಕೊಳ್ಳುತ್ತರೇನೋ ಎಂಬ ನಮ್ಮ ನಿರೀಕ್ಷೆ ಹುಸಿಯಾಗುವಂತಿದೆ, ಯಥಾ ಪ್ರಕಾರ ಅವರು ತಮ್ಮ ಪ್ರಜಾಪ್ರಭುತ್ವ ವಿರೋಧಿ ಧೋರಣೆಯಲ್ಲೇ ಇನ್ನೂ ಬಿದ್ದು ಒದ್ದಾಡುತ್ತಿದ್ದಾರೆ. ನಾನಂತೂ ಇವರನ್ನು ಪ್ರಜಾಪ್ರಭುತ್ವ ನ್ಯಾಯಾಂಗ ವ್ಯವಸ್ಥೆ ಮತ್ತು ಭಾರತದ ಕಾನೂನಗಳನ್ನು ಗೌರವಿಸದ ದೇಶದ್ರೋಹಿಗಳೆಂದೆ ಪರಿಗಣಿಸುತ್ತೇನೆ. ಹೇಗೆಂದಿರಾ?

ನೀವೆ ಗಮನಿಸಿ ೨೦೦೨ದಿಂದೀಚೆಗೆ ಇವರು ಹಾಡುತ್ತಿದ್ದುದು ಒಂದೇ ರಾಗ ಅದು ಮೋದಿ ನರಹಂತಕ ಎಂಬುದು, ಇವರ ಅಧಿನಾಯಕಿಯಂತೂ ಆತನನ್ನು ಸಾವಿನ ವ್ಯಾಪಾರಿಯೆಂದು ಜರೆದು ನಾಲಿಗೆ ಕುಲ ಹೇಳುತ್ತದೆಂಬುವುದನ್ನು ತೋರಿಸಿಕೊಟ್ಟುಬಿಟ್ಟಿದ್ದಲ್ಲದೇ ತನ್ನ ನಾಲಿಗೆಯನ್ನು ತಾನೆ ಕಚ್ಚಿ ಕೊಳ್ಳುವಂತಾಯ್ತು. ಗುಜರಾತಿನ ಜನರು ಸತತ ೩ ಬಾರಿ ಇವರ ತಲೆಯ ಮೇಲೆ ಕಲ್ಲು ಹಾಕಿದ್ದೂ ಆಯ್ತು. ಆದರೂ ನಮ್ಮ ಕರ್ನಾಟಕದ ಪ್ರಗತಿಪ್ರರು ಮಾತ್ರ ಇನ್ನೂ ಆ ರೋಗದಿಂದ ಹೊರಬರಲೇ ಇಲ್ಲ.

ಮತ್ತಷ್ಟು ಓದು »

11
ಡಿಸೆ

ಎಎಪಿ ಗೆಲುವಿನ ಗುಂಗಿನಲ್ಲಿ ‘ಪೊರಕೆ’ ಹಿಡಿಯಲು ಹೊರಟವರು

ರಾಕೇಶ್ ಶೆಟ್ಟಿ

AAPಮಿನಿ ಲೋಕಸಭಾ ಚುನಾವಣೆ ಎಂದೇ ಪರಿಗಣಿತವಾಗಿದ್ದ ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ ಹೊರಬಿದ್ದಿದೆ. ಸಮೀಕ್ಷೆಯಂತೆಯೇ ೪ ರಾಜ್ಯಗಳಲ್ಲಿ ಬಿಜೆಪಿ ಮತ್ತು ೧ ರಾಜ್ಯದಲ್ಲಿ ಕಾಂಗ್ರೆಸ್ಸ್ ತನ್ನ ಮುದ್ರೆಯೊತ್ತಿದೆ.ಆದರೆ,ಆಮ್ ಆದ್ಮಿ ಪಕ್ಷಕ್ಕೆ ೨೮ ಸ್ಥಾನಗಳನ್ನು ನೀಡುವ ಮೂಲಕ ಅಚ್ಚರಿಯ ಫಲಿತಾಂಶ ನೀಡಿದ್ದು ದೆಹಲಿಯ ಮತದಾರರು.

ಎಲ್ಲಾ ಚುನಾವಣಾ ಪೂರ್ವ ಸಮೀಕ್ಷೆಗಳಲ್ಲಿ ಎಎಪಿ ಪಕ್ಷ ೧೦-೧೫ ಸೀಟು ಪಡೆಯಬಹುದು ಮತ್ತು ಆ ಮೂಲಕ ಸರ್ಕಾರ ರಚಿಸುವಲ್ಲಿ ನಿರ್ಣಾಯಕ ಪಾತ್ರವಹಿಸಬಹುದು ಅನ್ನುವ ಅಭಿಪ್ರಾಯಗಳೇ ಬಂದಿತ್ತು.ಆದರೆ ಮತದಾರಪ್ರಭು ಕೇಜ್ರಿವಾಲ್ ನೇತೃತ್ವದ ಎಎಪಿ ಪಕ್ಷದೆಡೆಗೆ ಹೆಚ್ಚು ಉದಾರಿಯಾಗಿದ್ದಾನೆ.’ರಾಜಕಾರಣಿಗಳೆಲ್ಲ ಭ್ರಷ್ಟರು’ ಅನ್ನುತಿದ್ದ ಕೇಜ್ರಿವಾಲ್ ತಾವೇ ಒಂದು ರಾಜಕೀಯ ಪಕ್ಷ ಸ್ಥಾಪಿಸುತ್ತೇವೆ ಅಂತ ಹೊರಟು ನಿಂತು ಪ್ರಸಕ್ತ ರಾಜಕೀಯ ಪಕ್ಷಗಳಿಗಿಂತ ವಿಭಿನ್ನವಾಗಿ ಅದನ್ನು ಕಟ್ಟಿಕೊಳ್ಳುತ್ತ ಹೊರಟಾಗ ಯಾವ ರಾಜಕಾರಣಿಗಳು ಅದನ್ನು ಲೆಕ್ಕಕ್ಕೇ ತೆಗೆದುಕೊಳ್ಳಲಿಲ್ಲ. ದೆಹಲಿಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ಸ್ ನಡುವೆ ನೇರಾನೇರ ಹಣಾಹಣಿ ನಡೆಯಲಿದೆ ಅನ್ನುವಷ್ಟು ನಿರ್ಲಕ್ಷ್ಯದಲ್ಲಿದ್ದ ಶೀಲಾ ದಿಕ್ಷೀತ್ ಕೂಡ,ಕೇಜ್ರಿವಾಲ್ ಮುಂದೆ ಸೋತು ಸುಣ್ಣವಾಗಿದ್ದಾರೆ.

ಮತ್ತಷ್ಟು ಓದು »

14
ಆಕ್ಟೋ

ಮೋದಿ ಫ್ಯಾಕ್ಟರ್ : ಒಮರ್ ಅಬ್ದುಲ್ಲಾರ ಮಾತುಗಳು ಯುಪಿಎ ದಿಗಿಲಿನ ಕನ್ನಡಿಯೇ?

ಮೂಲ : ಸಂಜಯ್ ಸಿಂಗ್
ಅನುವಾದ : ಪ್ರಶಾಂತ್ .ಕೆ

Modi Omar“ನನಗನ್ನಿಸುತ್ತೆ, ನಾವೇನಾದರೂ( ಯು.ಪಿ.ಎ. ಅಂಗಪಕ್ಷಗಳು) ‘ಮೋದಿ ಫ಼್ಯಾಕ್ಟರ್’ ನ್ನು ನಿರ್ಲಕ್ಷಿಸಿದರೆ ಅದು ಮೂರ್ಖತನವಾಗುತ್ತೆ; ಅಲ್ಲದೆ ಅದೊಂದು ಅಪಾಯಕಾರಿ ತಪ್ಪು ಕೂಡ..”
ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ‘ಒಮರ್ ಅಬ್ದುಲ್ಲಾ’, ‘ಹಿಂದುಸ್ತಾನ್ ಟೈಮ್ಸ್’ ಗೆ ನೀಡಿದ ಸಂದರ್ಶನದಲ್ಲಿ ಆಡಿದ ಮಾತುಗಳಿವು. ದೇಶದ ಅತ್ಯಂತ ಸಮಸ್ಯಾತ್ಮಕ ರಾಜ್ಯದ, ಅದರಲ್ಲೂ ಆ ರಾಜ್ಯದ ಆಗು- ಹೋಗುಗಳು ಇಡೀ ದೇಶವನ್ನ ತಲ್ಲಣಗೊಳಿಸುತ್ತಿರುವ ಸಂದರ್ಭದಲ್ಲಿ, ಆ ರಾಜ್ಯದ ಮುಖ್ಯಮಂತ್ರಿಯ ಮಾತುಗಳನ್ನು ಹಗುರವಾಗಿ ಕಾಣುವ ಹಾಗಿಲ್ಲ. ‘ಒಮರ್’ ‘ರಾಹುಲ್ ಗಾಂಧಿ’ಯವರ ಆಪ್ತ ಮಿತ್ರ, ಅಲ್ಲದೆ ಅವರ ತಂದೆ ‘ಫ಼ರೂಕ್ ಅಬ್ದುಲ್ಲ’ ಯು.ಪಿ.ಎ. ಸರಕಾರದಲ್ಲಿ ಮಂತ್ರಿ ಕೂಡ ಹೌದು; ಈ ಹಿನ್ನೆಲೆಯಲ್ಲಿ ಅವರ ಹೇಳಿಕೆಗಳು ಇನ್ನೂ ಮಹತ್ವ ಪಡೆದುಕೊಳ್ಳುತ್ತವೆ, ‘ರಾಹುಲ್ ಗಾಂಧಿ’ ಉತ್ತರ ಪ್ರದೇಶ, ರಾಮ್ ಪುರದಲ್ಲಿ ಹೇಳಿದ ” ೨೦೧೪ ರಲ್ಲಿ ಕೇಂದ್ರದಲ್ಲಿ ಯುವಶಕ್ತಿಯ ಸರಕಾರ ಅಧಿಕಾರಕ್ಕೆ ಬರುತ್ತದೆ, ಅದು ದೇಶವನ್ನೇ ಬದಲಾಯಿಸಬಲ್ಲುದು” ಎಂಬ ಮಾತುಗಳನ್ನು ಒಮರ್ ಪೂರ್ತಿ ಒಪ್ಪಿದಂತೆ ಕಾಣುವುದಿಲ್ಲ; ನಿಮಗೆ ಗೊತ್ತಿರಲಿ, ರಾಹುಲ್ ಮತ್ತು ಒಮರ್ ಇಬ್ಬರೂ ಒಂದೇ ವರ್ಷದಲ್ಲಿ ಜನಿಸಿದವರು ಮತ್ತು ಇಬ್ಬರಿಗೂ ಏಗ ೪೩ ವರ್ಷ ವಯಸ್ಸು. ಅನೇಕ ಕಾಂಗ್ರೆಸ್ ನಾಯಕರಂತೆ, ರಾಹುಲ್ ಗಾಂಧಿಯ ಈ ಭಾಷಣದ ಬಳಿಕ ಮುಂದಿನ ಸರಕಾರ ನಡೆಸಲು ಆತನೇ ಸೂಕ್ತ ವ್ಯಕ್ತಿ ಎಂದು ಅಭಿಪ್ರಾಯ ವ್ಯಕ್ತಪಡಿಸದ ಕಾರಣ , ನ್ಯಾಷನಲ್ ಕಾನ್ಫ಼ರೆನ್ಸ್ ನ ನಾಯಕನ ಮಾತುಗಳನ್ನು ವಿಶೇಷವಾಗಿ ಪರಿಗಣಿಸಬೇಕು.

ಮತ್ತಷ್ಟು ಓದು »