ಸುದ್ಧಿ ಮಾಡುವವರಲ್ಲಿ ಶುದ್ಧಿ ಇಲ್ಲವಾದರೆ. . .
– ಡ್ಯಾನಿ ಪಿರೇರಾ,ಹಳ್ಳಿಮೈಸೂರು
ಇಂದು ವಾರ್ತಾ ವಾಹಿನಿಗಳು ಯಥಾತ್ಶಿರ್ಘ ಸುದ್ಧಿಗಳನ್ನು ಜಗತ್ತಿನ ಮೂಲೆ ಮೂಲೆಗೂ ಅತಿ ವೇಗದಲ್ಲಿ ಮುಟ್ಟಿಸುವ ಕೆಲಸ ಮಾಡುತ್ತಿವೆ. ಇದರಿಂದ ಉಪಯೋಗವಿದೆ ಎನ್ನುವುದು ನಿಜವೇ ಆದರೂ ಸುದ್ಧಿ ಹೇಳುವ ಮನಸ್ಸುಗಳ ಹಿಂದೆ ಶುದ್ಧಿ ಇಲ್ಲದಿರುವುದು ಗೋಚರವಾಗುತ್ತಿದೆ. ಹಾಗಾಗಿ ಅವುಗಳ ಹಿಂದಿರುವ ಉದ್ದೇಶ ಪ್ರಶ್ನಾರ್ಹವಾಗುತ್ತಿದೆ. ಒಂದು ಕಾಲವಿತ್ತು ಒಬ್ಬ ವ್ಯಕ್ತಿಗೆ ಅಪಮಾನವೆನಿಸುವ ಸುದ್ಧಿಯೊಂದು ಪತ್ರಿಕೆ ಅಥವಾ ದೃಶ್ಯ ಮಾಧ್ಯಮಗಳಲ್ಲಿ ಬಂದರೆ ಅದರಿಂದ ವ್ಯಕ್ತಿಗೆ ಅದು ನಿಜವಿರಲಿ, ಸುಳ್ಳಿರಲಿ ಒಂದೋ ಅವನಿಗದು ಆಘಾತ ತರುವಂತಿತ್ತು ಅಥವಾ ಆತ ತನ್ನನ್ನು ತಾನು ಆತ್ಮ ವಿಮರ್ಶೆಗೆ ಒಳಪಡಿಸುವ ಸಾಧನವಾಗಿರುತ್ತಿತ್ತು. ಅದು ವ್ಯಕ್ತಿಯೊಬ್ಬ ಸಾರ್ವಜನಿಕ ಜೀವನದಲ್ಲಿರುವವನಾಗಿದ್ದರೆ ಕೂಡಲೇ ರಾಜೀನಾಮೆ ನೀಡಿ ಅದರಿಂದ ಬಿಡುಗಡೆ ಹೊಂದುವ ಸಾಕ್ಷಿಪ್ರಜ್ಞೆ ಆತನನ್ನು ಎಚ್ಚರಿಸುತ್ತಿತ್ತು. ಆದರೆ ಕಾಲ ಬದಲಾಗಿದೆ. ಅಕ್ಷರ ಮಾಧ್ಯಮಗಳಿಗಿಂತ ದೃಶ್ಯ ಮಾಧ್ಯಮಗಳು ಅದರಲ್ಲೂ ಸುದ್ಧಿ ವಾಹಿನಿಗಳು ಇನ್ನಿಲ್ಲದ ವೇಗದಲ್ಲಿ ಕಾರ್ಯಪ್ರವೃತ್ತವಾಗಿವೆ. ಕ್ಷಣಾರ್ಧದಲ್ಲಿ ಅದು ಅಸಲಿಯೋ ನಕಲಿಯೋ ಅಂತೂ ಸುದ್ಧಿಗಳು ಬಿತ್ತರವಾಗುತ್ತವೆ. ಆದರೆ ಅಪರಾಧಿ ಸ್ಥಾನದಲ್ಲಿರುವ ವ್ಯಕ್ತಿಯ ಮೇಲೆ ಮಾತ್ರ ಅದು ಯಾವುದೇ ಪರಿಣಾಮ ಬೀರುವಂತೆ ಕಾಣುತ್ತಿಲ್ಲ. ಏಕೆಂದರೆ ಸುದ್ಧಿ ಮಾಡುವವನ ಮತ್ತು ಸುದ್ಧಿಯಾಗುವವನಲ್ಲಿ ಚಿತ್ತಶುದ್ಧಿಯಿಲ್ಲದಿರುವುದು! ಸುದ್ಧಿ ಮಾಡುವ ದಾವಂತದಲ್ಲಿ ಅದರಿಂದಾಗುವ ಪರಿಣಾಮವನ್ನು ಸುದ್ಧಿ ಮಾಡುವವ ಯೋಚಿಸುತ್ತಿಲ್ಲವೋ ಅಥವಾ ಅದು ತನಗೆ ಸಂಬಂದಿಸಿದ್ದಲ್ಲ ಎನ್ನುವ ತಾತ್ಸಾರ ಮನೋಭಾವವೋ ಗೊತ್ತಿಲ್ಲ ಅಂತೂ ಅನಾಹುತ ಮಾಡುವುದರಲ್ಲೇ ಆನಂದ ಕಾಣುತ್ತಿವೆ ನಮ್ಮ ಅನೇಕ ದೃಶ್ಯ ಮಾಧ್ಯಮಗಳು.
ಕೆಲ ವರ್ಷಗಳ ಹಿಂದೆ ಕನ್ನಡದ ಸುದ್ಧಿ ಮಾಧ್ಯಮವೊಂದು ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿಕೊಂಡ ಮಕ್ಕಳು ತೀವ್ರ ಅಸ್ವಸ್ಥವೆಂದು ‘ಬ್ರೇಕಿಂಕ್ ನ್ಯೂಸ್’ ಹಾಕಿತು. ಲಸಿಕೆ ಹಾಕಿಸಿಕೊಂಡ ಮಕ್ಕಳ ಪೋಷಕರು ಆತಂಕದಿಂದ ಆಸ್ಪತ್ರೆ ಸುತ್ತ ಜಮಾವಣೆಗೊಂಡರು. ಜನರಿಗೆ ಅಲ್ಲಿನ ಆಸ್ಪತ್ರೆ ಮತ್ತು ಅದರ ಸಿಬ್ಬಂದಿ ದಾಳಿಯ ವಸ್ತುವಾದರು. ಆದರೆ ಅದರ ನೈಜ ವಿಚಾರವೆಂದರೆ ಅಸ್ವಸ್ಥಗೊಂಡ ಒಂದೆರಡು ಮಕ್ಕಳು ಸೇವಿಸಿದ ಆಹಾರ Food Poison ಅಗಿದ್ದು . ಆ ಸುದ್ಧಿ ಮಾಧ್ಯಮ ಮಾಡಿದ ಅವಾಂತರದ ಬಗ್ಗೆ ಅಂದಿನ ಗೃಹ ಸಚಿವರಾದ ವಿ.ಎಸ್. ಆಚಾರ್ಯರು ಗಮನ ಸೆಳೆದರೂ ಅದು ತನ್ನ ದುಡುಕುತನದ ಬಗ್ಗೆ ವಿಷಾದ ವ್ಯಕ್ತಪಡಿಸಲಿಲ್ಲ. ಹೀಗೆ ಸುದ್ಧಿ ಮಾಧ್ಯಮಗಳು ಸುದ್ಧಿ ಮಾಡುವ ಭರದಲ್ಲಿ ಅವುಗಳು ಮಾಡುವ ಅವಾಂತರಗಳೇ ದೊಡ್ಡ ಸುದ್ಧಿಯಾದರೂ ಅವುಗಳಿಗೇನು ಪಶ್ಚತ್ತಾಪವಾಗುವುದಿಲ್ಲ. ಜನರಿಗೆ ಉಚಿತ ಬುದ್ಧಿ ಹೇಳುವುದಷ್ಟೇ ಅವುಗಳ ಕೆಲಸ
ಅನ೦ತಮೂರ್ತಿಯವರಿಗೆ ಅಭಿಮಾನಿಯೊಬ್ಬನ ಪತ್ರ
– ಗುರುರಾಜ್ ಕೊಡ್ಕಣಿ,ಯಲ್ಲಾಪುರ
ಸನ್ಮಾನ್ಯ ಶ್ರೀ ಅನ೦ತಮೂರ್ತಿಗಳಿಗೆ,
ನಮಸ್ಕಾರಗಳು,
ಈಗ ಸದ್ಯದ ಪರಿಸ್ಥಿತಿಯಲ್ಲಿ ’ಹೇಗಿದ್ದೀರಿ..’? ಎ೦ದು ಕೇಳುವುದೇ ತಪ್ಪೇನೋ.ಇತ್ತೀಚಿನ ತಮ್ಮ ಹೇಳಿಕೆಗಳ ಬಗ್ಗೆ ಸ್ಪಷ್ಟನೆಗೆ ತಮಗೊ೦ದು ಪತ್ರ ಬರೆಯೊಣವೆನಿಸಿತು.ಪತ್ರವನ್ನು ನೇರವಾಗಿ ತಮಗೆ ಕಳುಹಿಸೊಣವೆ೦ದುಕೊ೦ಡೆ.ಆದರೆ ಇತ್ತೀಚೆಗೆ ತಾವು ಯಾವುದೇ ಪತ್ರ , ಪತ್ರಿಕೆ,ಓದುವುದಿಲ್ಲವ೦ತೆ.ಮೊನ್ನೆಯೊ೦ದು ಟಿವಿ ಸ೦ದರ್ಶನದಲ್ಲಿ ತಾವೇ ಹೇಳಿದ್ದೀರಿ.ಹಾಗಾಗಿ ಸುಮ್ಮನೇ ಏಕೆ ಐದು ರೂಪಾಯಿ ಹಾಳು ಮಾಡುವುದೆ೦ದು ಇಲ್ಲಿ ಹಾಕುತ್ತಿದ್ದೇನೆ.ಸಾಧ್ಯವಾದರೇ ಓದಿ,ಓದದಿದ್ದರೂ ಚಿ೦ತೆಯಿಲ್ಲ.
ಏನಾಗಿದೆ ಸರ್ ನಿಮಗೆ..? ಮತಿಭ್ರಮಣೆಯಾ ..? ಹೊಸದೊ೦ದು ಪ್ರಶಸ್ತಿ ಪಡೆಯುವ ಉಮ್ಮೇದಿಯಾ…?ಅಥವಾ ಸುದ್ದಿಯಲ್ಲಿರುವ ರೋಗವಾ..? ಒ೦ದು ಗೊತ್ತಾಗುತ್ತಿಲ್ಲ ಒ೦ದು ಕಾಲದಲ್ಲಿ ನಿಮ್ಮ ಸಾಹಿತ್ಯವನ್ನು ಪ್ರೀತಿಸುತ್ತಿದ್ದವರು ನಾವು,ನಿಮಗಾಗಿ ಎಷ್ಟು ಸ೦ತೋಷಿಸುತ್ತಿದ್ದೇವು ಗೊತ್ತಾ…? ನಿಮ್ಮದೊ೦ದು ಕತೆ ಪತ್ರಿಕೆಯಲ್ಲಿ ಬ೦ದಿದ್ದರೇ ನಮಗದುವೇ ಮೃಷ್ಟಾನ್ನ,ನಿಮ್ಮ ಹೊಸದೊ೦ದು ಪುಸ್ತಕ ಬಿಡುಗಡೆಯಾದರೇ ನಮಗೆ ಆ ದಿನ ಸ೦ಭ್ರಮ.ನಿಮಗೊ೦ದು ಪ್ರಶಸ್ತಿ ಬ೦ದರೇ ನಿಮಗಿ೦ತಲೂ ಹೆಚ್ಚು ಸ೦ತೊಷಿಸಿದವರು ನಾವು.ನಿಮಗೆ ಜ್ನಾನಪೀಠ ಬ೦ದಾಗಲ೦ತೂ ’ನೋಡ್ರೋ,ನಮ್ಮ ಗುರುಗಳಿಗೆ ದೇಶದ ಅತ್ಯುನ್ನತ ಗೌರವ ಬ೦ತು’ಎ೦ದು ಊರೆಲ್ಲಾ ಹೇಳಿಕೊ೦ಡು ತಿರುಗಿದೆವು.ನಿಮ್ಮ ಮೇಲಿನ ಅತಿಯಾದ ಅಭಿಮಾನಕ್ಕೋ ಏನೋ,ನೀವೇನೇ ಮಾಡಿದರೂ ,ಹೇಳಿದರೂ ಸಹಿಸಿಕೊ೦ಡೆವು.ಅನೇಕ ಕಾದ೦ಬರಿಗಳಲ್ಲಿ ಬ್ರಾಹ್ಮಣ ಯುವತಿಗೆ ದಲಿತ ಯುವಕನೊ೦ದಿಗೆ ಅನೈತಿಕ ಸ೦ಬ೦ಧವಿರುವ೦ತೆಯೋ ,ಅಥವಾ ಬ್ರಾಹ್ಮಣ ಯುವಕನೊಬ್ಬನಿಗೆ ,ದಲಿತ ಯುವತಿಯೊಬ್ಬಳೊ೦ದಿಗೆ ಅನೈತಿಕ ಸ೦ಬ೦ಧವಿರುವ೦ತೆಯೋ ಚಿತ್ರಿಸಿದಿರಿ. ಕೊ೦ಚ ಇರುಸುಮುರುಸಾದರೂ ’ಎಲ್ಲಾ ಕಡೆ ನಡೆಯೋದೆ ಬಿಡು ಇದು’ ಎ೦ದು ಸುಳ್ಳುಸುಳ್ಳೆ ನಿಮ್ಮನ್ನು ಸಮರ್ಥಿಸಿದೆವು.’ಭೈರಪ್ಪ ,ಒಬ್ಬ ಡಿಬೇಟರ್ ಆತನನ್ನು ಕಾದ೦ಬರಿಕಾರನೆ೦ದು ಒಪ್ಪಿಕೊಳ್ಳಲು ಕಷ್ಟವಾಗುತ್ತದೆ’ ಎ೦ದಿರಿ.’ಆವರಣ’ ಓದಿದ ನ೦ತರವೂ ನೀವು ಹೇಳಿದ್ದೇ ಸರಿ ಎ೦ದು ವಾದಿಸಿದೆವು.’ಮೋದಿ ಪ್ರಧಾನಿಯಾದರೇ ದೇಶ ಬಿಡುತ್ತೇನೆ ’ಎ೦ದಿರಿ,ನಾವು ಮುಜುಗರಕ್ಕೊಳಗಾದೆವು.ಆದರೆ ಈಗ ಇದೇನಿದು ನಿಮ್ಮ ಹೊಸರಾಗ..? ಆರ್.ಎಸ್.ಎಸ್. ಎ೦ದರೇ ’ಹುಚ್ಚು ನಾಯಿ ರೋಗ’ಎ೦ದುಬಿಟ್ಟೀರಿಲ್ಲ ಈಗ.. ಹೇಗೆ ಸಮರ್ಥಿಸುವುದು ನಿಮ್ಮ ಇ೦ಥ ನೀಚ ತಪ್ಪನ್ನು ಗುರುಗಳೇ.ದಯವಿಟ್ಟು ಕ್ಷಮಿಸಿ,ನಮ್ಮಿ೦ದ ಸಾಧ್ಯವಿಲ್ಲ.
ಮತ್ತಷ್ಟು ಓದು 
ನಮೋ ಅಭಿವೃದ್ಧಿ ಮಂತ್ರಕ್ಕೆ ಅನುಸರಿಸಬೇಕಾದ ಪ್ರಚಾರತಂತ್ರ ಯಾವುದು?
– ನವೀನ್ ನಾಯಕ್
ನರೇಂದ್ರ ಮೋದಿ ಇತ್ತೀಚೆಗೆ ಅತಿ ಹೆಚ್ಚಾಗಿ ಚರ್ಚೆಗೆ ತುತ್ತಾಗುತಿದ್ದಾರೆ. ಮೋದಿಯವರೇ ಮುಂದಿನ ಪ್ರಧಾನಿಯಾಗಬೇಕೆಂದು ಹಲವಾರು ರೀತಿಯಲ್ಲಿ ಉತ್ಸಾಹಿ ಯುವಕರು ಸ್ವಯಂಪ್ರೇರಣೆಯಿಂದ ಕೆಲಸ ನಿರ್ವಹಿಸುತಿದ್ದಾರೆ. ಅಭಿಮಾನಿಗಳ ಗುಂಪುಗಳಿರಬಹುದು, ಸಾಮಾಜಿಕ ತಾಣದಲ್ಲಿರುವ ಪೇಜ್, ಗ್ರೂಪ್ ಯಾವುದೇ ಆಗಬಹುದು. ರಾಜಕೀಯ ವಿಷಯದಲ್ಲಿ ಮಲಗಿದ್ದ ಯುವಪಡೆ ಎದ್ದು ನಿಂತಿರುವುದು ಸ್ವಾಗತಾರ್ಹ. ಪ್ರಸಕ್ತ ರಾಜಕೀಯ ದೊಂಬರಾಟದಲ್ಲಿ ಕಡಿವಾಣ ಹಾಕಬೇಕೆಂದರೆ ಯುವಕರ ಪಾತ್ರ ಬೇಕೆಬೇಕು. ಇತಿಹಾಸವೂ ಅದನ್ನೇ ಸಾರಿ ಸಾರಿ ಹೇಳಿದೆ. ನಮೋ ವಿಷಯದಲ್ಲಿ ಗಂಭೀರವಾದ ವಿಚಾರವೆಂದರೆ ಈ ಯುವಕರ ಕೆಲಸ ನೀರಿಕ್ಷಿತ ಮಟ್ಟವನ್ನು ತಲುಪುತ್ತದೆಯಾ. ಇವರ ಉತ್ಸಾಹಕ್ಕೆ 2014 ತಣ್ಣೀರೆರಚಬಹುದೇ ಎಂಬ ಅನುಮಾನ ನನಗೆ. ನನ್ನ ಅನುಮಾನಕ್ಕೆ ಕಾರಣವಿಲ್ಲದೆಯಿಲ್ಲ.
ಮೋದಿಯವರನ್ನು ಪ್ರಚಾರ ಮಾಡುತ್ತಿರುವ ಶೈಲಿ ಸ್ವತಃ ನಮೋ ಅಭಿವೃದ್ದಿ ಕನಸ್ಸಿನ ವಿರೋಧವಾಗಿದೆ. ಮುನ್ನುಗುತ್ತಿರುವ ವೇಗದಲ್ಲಿ ಗುರಿಯನ್ನೇ ಮರೆಯಲಾಗಿದೆ. ಮೋದಿ ನಾಯಕತ್ವದಲ್ಲಿ ಸರಕಾರ ರಚಿಸಬೇಕಾದರೆ ಆ ಸರಕಾರ ನಮ್ಮ ಕನಸ್ಸಿನ ಭಾರತ ಕಟ್ಟಬೇಕಾದರೆ ಮೋದಿ ಹೆಸರಲ್ಲಿ ಅಥವಾ ಬಿಜೆಪಿ ಹೆಸರಲ್ಲಿ ಗೆಲ್ಲುವ ಅಭ್ಯರ್ಥಿ ಹೇಗಿರಬೇಕು, ಅವನ ಕನಸುಗಳೇನಾಗಿರಬೇಕು, ಸಮಾಜ ಪರಿವರ್ತನೆಯಲ್ಲಿ ಆತನ ಸ್ಪಷ್ಟ ನಿರ್ಧಾರವೇನು. ಈ ಅಂಶಗಳು ಮುಖ್ಯವಾಗುವುದಿಲ್ಲವೇ? ಈ ಮಹತ್ತರ ಅಂಶಗಳನ್ನು ಮರೆತು ಅವರ ಹೆಸರಲ್ಲಿ ಅಯೋಗ್ಯರನ್ನು ಗೆಲ್ಲಿಸಿಬಿಟ್ಟರೆ. ಕಂಡ ಕನಸು ತಿರುಗಿ ಬೆಂಕಿ ಕೆಂಡವಾಗುತ್ತದೆಯಲ್ವಾ? ಕರ್ನಾಟಕದಲ್ಲಿ ಬದಲಾವಣೆ ಭರದಲ್ಲಿ ಬಿಜೆಪಿ ಬೆಂಬಲಿಸಿದಾಗ ಯಡವಟ್ಟಾಗಿದ್ದು ಈ ಅಂಶಗಳೇ. ಅಪಾತ್ರರೆಲ್ಲ ಗೆದ್ದು ಉಂಡಾಡಿ ಗುಂಡನ ಹಾಗೆ ಆಡಿದ್ದ ಉದಹಾರಣೆ ಕಣ್ಣ ಮುಂದಿರುವಾಗ ಮತ್ತದೇ ಹೆಜ್ಜೆಯನ್ನಿಟ್ಟರೆ ಏನು ಪ್ರಯೋಜನ ?.. ಬದಲಾವಣೆ ಎಲ್ಲರಿಗೂ ಬೇಕು ಅದೇ ಭರದಲ್ಲಿ ಯೋಗ್ಯರು ಮತ್ತು ಅಯೋಗ್ಯರ ನಡುವಿನ ವ್ಯತ್ಯಾಸ ಮರೆಯಬಾರದು.
ಮತ್ತಷ್ಟು ಓದು 
“ಕೈ”ಲಾಗದ ಸರ್ಕಾರ ಮತ್ತು ನಮ್ಮ ಕಾಶ್ಮೀರ
– ರಾಕೇಶ್ ಶೆಟ್ಟಿ
ಬಡ ಬೆಸ್ತನೊಬ್ಬನ ಕತ್ತನ್ನು ಸೀಳಿ ಅವನದೇ ಬೋಟನ್ನೇರಿ ೧೦ ಜನರ ಪಾಕಿಸ್ತಾನದ ಸೈತಾನರ ತಂಡ ಗೇಟ್ ವೇ ಆಫ್ ಇಂಡಿಯಾ ಮೂಲಕ ಮುಂಬೈಗೆ ವಕ್ಕರಿಸಿಕೊಳ್ಳುತ್ತದೆ.೧೦ ಜನರಿಂದ ಬೇರ್ಪಟ್ಟ ಇಬ್ಬರು ಮೊದಲಿಗೆ ದಾಳಿಯಿಡುವುದು ’ಲಿಯೋಫೋಲ್ಡ್ ಕೆಫೆ”ಗೆ ಅಲ್ಲಿ ಕಂಡ ಕಂಡಂತೆ ಗುಂಡಿನ ಮಳೆ ಸುರಿಸಿದ ಆ ಇಬ್ಬರು ಪಾಕಿ ಉಗ್ರರು ಅಲ್ಲಿಂದ ರಾಜಾರೋಷವಾಗಿ ಹೊರಡುತ್ತಾರೆ.ಉಗ್ರರ ಕಣ್ಣಿಗೆ ಬೀಳದೆ ಅವಿತು ಕುಳಿತಿದ್ದವನೊಬ್ಬ ಮೆಲ್ಲಗೆ ಬಾಗಿಲ ಸಂದಿಯಿಂದ ರಾಕ್ಷಸರು ಇದ್ದಾರೋ ಅನ್ನುವುದನ್ನು ಖಾತ್ರಿ ಮಾಡಿಕೊಳ್ಳಲು ಇಣುಕಿದಾಗ ಬಾಗಿಲಿಗೆ ಕಲ್ಲೊಂದು ಬಡಿಯುತ್ತದೆ.ಮತ್ತೆ ನೋಡುತ್ತಾನೆ ಊಹೂಂ “ಗುಂಡಲ್ಲ… ಕಲ್ಲು…!”
ಉಗ್ರರು ಅಮಾಯಕರ ರಕ್ತ ಹರಿಸಿ ಅಲ್ಲಿಂದ ರಾಜಾರೋಷವಾಗಿ ಹೊರಟ ಮೇಲೆ ಬೀಟ್ ನಲ್ಲಿದ್ದ ಪೋಲಿಸ್ ಕಾನ್ಸ್ಟೇಬಲ್ ಗಳು ಒಂದು ಕೈಯಲ್ಲಿ ಲಾಠಿ ಹಿಡಿದು ಇನ್ನೊಂದು ಕೈಯಲ್ಲಿ ಕಲ್ಲು ಎಸೆದು ಒಳಗಿನಿಂದ “ಗುಂಡು” ಬರುತ್ತಿಲ್ಲ ಅನ್ನುವುದನ್ನು ಕನ್ಫರ್ಮ್ ಮಾಡಿಕೊಂಡು ಒಳಬರುತ್ತಾರೆ. ಹೇಗಿದೆ ನೋಡಿ ಉಗ್ರನ ಕೈಯಲ್ಲಿ “ಎ.ಕೆ ೪೭” ಅವನೆದುರಿಸಲು ಬಂದ ಪೋಲಿಸಣ್ಣನ ಕೈಯಲ್ಲಿ “ಕಲ್ಲು”…! ಇದು ನಮ್ಮ ಭಾರತದ ಆಂತರಿಕ ರಕ್ಷಣಾ ವ್ಯವಸ್ಥೆಯ ಸ್ಥಿತಿ.ಭಾರತದ ಬಂಡವಾಳವನ್ನು ಸರಿಯಾಗಿಯೇ ಅರಿತಿದ್ದ ಪಾಪಿ ಪಾಕಿಗಳು ಆ ೧೦ ಜನರ ತಂಡವನ್ನು ನುಗ್ಗಿಸಿ ಒಂದಿಡಿ ಭಾರತವನ್ನು ದಿನಗಳ ಮಟ್ಟಿಗೆ ಗಾಬರಿ ಬೀಳಿಸಿದ್ದರು. ಮುಂಬೈ ಮಾರಣ ಹೋಮದ ನಂತರ ಆಗಿದ್ದಾದರೂ ಏನು? ಭಾರತ-ಪಾಕಿಸ್ತಾನಗಳು ಸಮರದಂಚಿಗೆ ಬಂದು ನಿಂತವು.ನಮ್ಮ ಸರ್ಕಾರ “ಹೊಡಿಬೇಡಿ.ಹೊಡೆದ್ರೆ ನೋವಾಗುತ್ತೆ” ಅನ್ನುವಂತೆಯೇ ವರ್ತಿಸಿದ್ದಲ್ಲವೇ? ಅದಕ್ಕಿಂತ ಹೆಚ್ಚೆಂದರೆ “ಹೋಗಿ.ನಾವು ನಿಮ್ಮೊಂದಿಗೆ ನಾವು ಕ್ರಿಕೆಟ್ ಆಡುವುದಿಲ್ಲ” ಅಂದರು ಅಷ್ಟೇ…!
ಭಯೋತ್ಪಾದನೆ, ರಾಜಕೀಯ ನೇತಾರರು ಮತ್ತು ಮಾಧ್ಯಮಗಳು
ತೀರಾ ಇತ್ತೀಚಿನವರೆಗೂ ಭಯೋತ್ಪಾದನಾ ಧಾಳಿಗಳಿಗೆ ಸಂಬಂಧಿಸಿದಂತೆ ಇರಾಕ್ ಮತ್ತು ಪಾಕಿಸ್ತಾನಗಳ ನಂತರ ಭಾರತ ವಿಶ್ವದಲ್ಲಿ ಮೂರನೆಯ ಸ್ಥಾನದಲ್ಲಿತ್ತು. ಈಗಲೂ ಈ ದೇಶದಲ್ಲಿ ಭಯೋತ್ಪಾದನಾ ಕೃತ್ಯಗಳೇನೂ ಗಮನಾರ್ಹವಾಗಿ ತಗ್ಗಿಲ್ಲ. ಆಂತರ್ಯುದ್ಧದ ದಳ್ಳುರಿಗೆ ಸಿಲುಕಿರುವ ಸಿರಿಯಾ, ಲಿಬಿಯಾಗಳು ಭಾರತವನ್ನು ಕೆಳಕ್ಕೆ ತಳ್ಳಿವೆ ಅಷ್ಟೆ. ಅಂಕಿಅಂಶಗಳ ಪ್ರಕಾರ ೧೯೮೧ರಲ್ಲಿ ಖಲಿಸ್ತಾನ್ ಚಳುವಳಿ ಆರಂಭವಾದಂದಿನಿಂದ ಈ ದೇಶದಲ್ಲಿ ನಾಲ್ಕುಸಾವಿರ್ವಕ್ಕೂ ಅಧಿಕ ಭಯೊತ್ಪಾದನಾ ಧಾಳಿಗಳಾಗಿವೆ ಮತ್ತು ಈ ಪಿಡುಗಿಗೆ ದಿನಕ್ಕೆ ಸರಾಸರಿ ನಾಲ್ವರು ಭಾರತೀಯರು ಬಲಿಯಾಗುತ್ತಿದ್ದಾರೆ.ಕಾಂಗ್ರೆಸ್ಸಿನ ‘ನಮೋ’ನಿಯಾ ಮತ್ತು ಸೆಕ್ಯುಲರ್ ‘ನಾಯಿಮರಿ’
– ರಾಕೇಶ್ ಶೆಟ್ಟಿ
ಭಾರತದಲ್ಲಿ ಭಾವುಕತೆಗೇನಾದರೂ ಬರವುಂಟೇ? ಹಾಗೇನಾದರೂ ಇದ್ದಿದ್ದರೆ ನಮ್ಮ ಸ್ಥಿತಿ ಸ್ವಲ್ಪಮಟ್ಟಿಗಾದರೂ ಸುಧಾರಿಸುತ್ತಿತ್ತೋ ಏನೋ? ಆದರೆ,ಭಾವುಕತೆ ಅನ್ನುವುದು ನಮ್ಮ ಅಸ್ಮಿತೆಯ ಭಾಗವಾಗಿರುವುದರಿಂದಲೇ ನಮ್ಮ ರಾಜಕಾರಣಿಗಳು,ರಾಜಕೀಯ ಪಕ್ಷಗಳು ಪದೇ ಪದೇ ಭಾವುಕತೆಯ ಬಿರುಗಾಳಿಯೆಬ್ಬಿಸಿ ತಮ್ಮ ಹಗರಣ,ವೈಫಲ್ಯಗಳನ್ನು ಮುಚ್ಚಿಕೊಳ್ಳುವುದು.ಅದರಲ್ಲೂ ಇಂತ ವಿಷಯದಲ್ಲಿ ಕಾಂಗ್ರೆಸ್ಸ್ ಪಕ್ಷದ್ದು ಉಳಿದೆಲ್ಲರಿಗಿಂತ ಒಂದು ‘ಕೈ’ ಮೇಲೆಯೇ ಹೌದು.
೨೪ ಗಂಟೆಯ ಮೀಡಿಯಾ ಯುಗದಲ್ಲಿ ದೊಡ್ಡ ದೊಡ್ಡ ಹಗರಣಗಳು ಸುದ್ದಿಯಾದಗಾಲೆಲ್ಲ ಕಾಂಗ್ರೆಸ್ಸ್ ಅದರಿಂದ ಹೊರಬರಲು ಒಂದು ಸಣ್ಣ ಎಳೆಯೇನಾದರೂ ಸಿಗುತ್ತದೆಯಾ ಅಂತ ನೋಡುತ್ತಿರುತ್ತದೆ.ಈ ಬಾರಿ ರೂಪಾಯಿ ಮೌಲ್ಯ ಕುಸಿದು,ಆಡಳಿತ ವ್ಯವಸ್ಥೆಯೇ ಹಳ್ಳ ಹಿಡಿದು ಕುಳಿತಿರುವಾಗ ಅದಕ್ಕೆ ಕಾಣಿಸಿದ ಬೆಳಕಿನ ಹಾದಿ “ನಾಯಿ ಮರಿ”…!
ಹೌದು. ಗುಜರಾತ್ ಮುಖ್ಯಮಂತ್ರಿ ರಾಯಿಟರ್ಸ್ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಬಳಸಿದ ನಾಯಿ ಮರಿ ಪದ.ರಾಯಿಟರ್ಸ್ ನೀಡಿದ ಸಂದರ್ಶನದಲ್ಲಿ ನಾಯಿ ಮರಿ ಬಂದಿದ್ದು ಹೇಗೆ ಅಂತ ನೋಡಿದರೆ,
“ಸಂದರ್ಶಕ: “ಏನು (೨೦೦೨ ರ ಗಲಭೆ) ನಡೆಯಿತೋ ಆ ಬಗ್ಗೆ ನೀವು ಪಶ್ಚಾತ್ತಾಪ ಪಡುತ್ತಿರಾ?”
ಮುಸ್ಲಿಂ ಸಮುದಾಯದ ಉತ್ಪ್ರೇಕ್ಷಿತ ಕೊರಗುಗಳು
– ಪ್ರೇಮ ಶೇಖರ
“ಇಂದು ಈ ದೇಶದಲ್ಲಿ ಹಿಂಸೆ, ಹತ್ಯಾಕಾಂಡಗಳು ನಡೆದಿರುವುದು ಜಾತಿ ಸಮಾವೇಶ, ರ್ಯಾಲಿಗಳಿಂದಲ್ಲ. ಪ್ರವೀಣ್ ತೊಗಾಡಿಯಾರಂತಹ ಮಂದಿಗಳು ದೇಶಾದ್ಯಂತ ಏರ್ಪಡಿಸಿಕೊಂಡು ಬಂದ ಹಿಂದೂ ಸಮಾಜೋತ್ಸವದಂತಹ ಸಮಾವೇಶಗಳು, ರ್ಯಾಲಿಗಳು ದೇಶವನ್ನು ಕಂಗೆಡಿಸಿದ್ದವು. ಹಲವು ಕೋಮುಗಲಭೆಗಳಿಗೆ, ಹಿಂಸೆಗಳಿಗೆ ಬಿಜೆಪಿ ಮತ್ತು ಆರೆಸ್ಸೆಸ್ನ ರ್ಯಾಲಿಗಳು ಕಾರಣವಾಗಿವೆ. ಅವು ಸಮಾಜವನ್ನು, ದೇಶವನ್ನು ಒಡೆದಿವೆ.”
ಉತ್ತರ ಪ್ರದೇಶದಲ್ಲಿ ಜಾತಿಯಾಧಾರಿತ ರ್ಯಾಲಿಗಳನ್ನು ನಿರ್ಬಂಧಿಸಿ ಕಳೆದ ಗುರುವಾರ ಅಲಹಾಬಾದ್ ಹೈಕೋರ್ಟ್ ನೀಡಿದ ತೀರ್ಪಿನ ಬಗ್ಗೆ ಮರುದಿನವೇ ಅಂದರೆ ಶುಕ್ರವಾರ ಪ್ರಕಟವಾದ ಕನ್ನಡ ದೈನಿಕವೊಂದರ ಸಂಪಾದಕೀಯದಲ್ಲಿ ಕಂಡುಬಂದ ಸಾಲುಗಳಿವು. ಪ್ರವೀಣ್ ತೊಗಾಡಿಯಾರಂತಹ ಮಂದಿಗಳು ದೇಶಾದ್ಯಂತ ನಡೆಸಿಕೊಂಡು ಬಂದ ರ್ಯಾಲಿಗಳು ದೇಶವನ್ನು ಕಂಗೆಡಿಸಿದ ಬಗ್ಗೆ ಹೇಳುವ ಈ ಸಂಪಾದಕೀಯ ಅಕ್ಬರುದ್ದೀನ್ ಒವೈಸಿಯಂತಹ ಮಂದಿಗಳು ಹದಿನೈದು ನಿಮಿಷಗಳಲ್ಲಿ ಹಿಂದೂಗಳನ್ನು ಮಟ್ಟಹಾಕುತ್ತೇವೆಂದು ಘೋಷಿಸುವ ರ್ಯಾಲಿಗಳು ದೇಶವನ್ನು ಕಂಗೆಡಿಸಿದ ಬಗ್ಗೆ ಮೌನವಾಗಿದೆ.
ನನ್ನ ಅರಿವಿನ ಪ್ರಕಾರ ಈ ದೇಶ “ಒಡೆದದ್ದು” ೧೯೪೭ರಲ್ಲಿ ಮತ್ತು ಅದಕ್ಕೆ ಆರೆಸ್ಸೆಸ್ ಆಗಲೀ, ಬಿಜೆಪಿಯಾಗಲೀ ಏರ್ಪಡಿಸಿದ ರ್ಯಾಲಿಗಳು ಕಾರಣವಾಗಿರಲಿಲ್ಲ. ಬ್ರಿಟಿಷ್ ವಸಾಹತುಶಾಹಿ ಆಳರಸರ ಕೈಗೊಂಬೆಯಾಗಿ, ಅವರ ಸಕ್ರಿಯ ಸಹಕಾರದಿಂದ ಮುಸ್ಲಿಂ ಲೀಗ್ ನಡೆಸಿದ ರ್ಯಾಲಿಗಳು ಸಮಾಜವನ್ನು ಒಡೆದವು ಮತ್ತು ಬಂಗಾಳದಲ್ಲಿ ಅಧಿಕಾರದಲ್ಲಿದ್ದ ಮುಸ್ಲಿಂ ಲೀಗ್ ಆಗಸ್ಟ್ ೧೬, ೧೯೪೬ರಂದು ಕಲ್ಕತ್ತಾ ನಗರದಲ್ಲಿ ಆಯೋಜಿಸಿದ “ಡೈರೆಕ್ಟ್ ಆಕ್ಷನ್ ಡೇ” ಎಂಬ ಕೋಮುವಾದಿ ರ್ಯಾಲಿ ಮತ್ತದು ಬಲಿತೆಗೆದುಕೊಂಡ ಸುಮಾರು ನಾಲ್ಕುಸಾವಿರ ಜೀವಗಳು ದೇಶದ ಐಕ್ಯತೆಗೆ ಅಂತಿಮ ಹೊಡೆತ ನೀಡಿ ಭಾರತ ಇಬ್ಬಾಗವಾಗಲು ಕಾರಣವಾದವು. ಭಾರತವಷ್ಟೇ ಇಬ್ಬಾಗವಾಗಲಿಲ್ಲ, ಮುಸ್ಲಿಂ ಲೀಗ್ನ ಮೂರ್ಖತನದಿಂದಾಗಿ ಉಪಖಂಡದ ಬಲಿಷ್ಟ ಮುಸ್ಲಿಂ ಸಮುದಾಯವೂ ಇಬ್ಬಾಗವಾಯಿತು. ೧೯೭೧ರಲ್ಲಿ ಅದು ಮೂರು ಭಾಗಗಳಾಗಿ ಹೋಳಾಗಿ ಮತ್ತಷ್ಟು ಕೃಶವಾಯಿತು. ಈ ಒಡೆಯುವಿಕೆಗೂ ಬಿಜೆಪಿಯಾಗಲೀ, ಆರೆಸ್ಸೆಸ್ ಆಗಲೀ ಕಾರಣವಾಗಿರಲಿಲ್ಲ.
ಮತ್ತಷ್ಟು ಓದು 
ಕೃಷ್ಣ ಗಾರುಡಿ ವರ್ಸಸ್ ನರೀಂದ್ರ ಮೋಡಿ!
– ತುರುವೇಕೆರೆ ಪ್ರಸಾದ್
ಮೋದಿ: ಗುರುಗಳೇ, ಕಮಲ ಸೈನ್ಯದ ಮುಂದಿನ ಮಹಾಸಮರ ದಳಪತಿಯಾಗಿ ನೇಮಿಸಲ್ಪಟ್ಟಿರುವೆ. ಕೃಪೆ ಮಾಡಿ ಆಶೀರ್ವದಿಸಿ
ಅಡ್ವಾನಿ: ಛೀ! ಗುರುದ್ರೋಹಿ, ತೊಲಗಿಲ್ಲಿಂದ! ನಿನ್ನ ಮುಖ ತೋರಿಸಬೇಡ ನನಗೆ..!
ಮೋದಿ: ಈ ದುರಾಗ್ರಹವೇಕೆ ಗುರುವೇ! ಇದು ನೀವೇ ಕಲಸಿಕೊಟ್ಟ ಪಟ್ಟು.. ಏಕೀ ವಿರೋಧ? ಗುರು ಮಿಂಚಿನ ಶಿಷ್ಯಡು ಎಂದು ಎದೆ ತಟ್ಟಿ ಹೇಳುವುದು ಬಿಟ್ಟು! ನಿಮ್ಮ ಮುಖವಾಣಿಯಾಗಿದ್ದ ನನಗೇ ನೀವು ಅಡ್ಡವಾಣಿಯಾಗುವುದೇ?
ಅಡ್ವಾನಿ: ರಥ ಹತ್ತಿ ಅತಳ ಸುತಳ ಪಾತಾಳ ಸುತ್ತಿದ ಈ ಅತಿರಥ ಮಹಾರಥನ ಮುಂದೆ ನೀನ್ಯಾವ ಲೆಕ್ಕ?
ಮೋದಿ: ಯಾರು ತಿಳಿಯರು ನಿಮ್ಮ ರಥಬಲದ ಪರಾಕ್ರಮ
ಸಂದಿಗೊಂದಿಗಳೊಳ್ ಸಂಚರಿಸಿದ ನಿಮ್ಮ ರಥಯಾತ್ರೆಗಳ ಕರ್ಮ
ಎಲ್ಲದಕೂ ಕಾರಣವು ಶ್ರೀ ರಾಮ ನಾಮ
ಕಲ್ಯಾಣಸಿಂಗ್ ಇಲ್ಲದಿದ್ದರೆ ಮೂರು ನಾಮ
ಕಡಾಣಿ ಮುರಿದ ರಥದೊಡೆಯ ನೀವು ತೃಣಕ್ಕೆ ಸಮಾನ..!
ಅಡ್ವಾನಿ: ಜನಸಂಘ ಶೂರ ನಾ ಶ್ರೀರಾಮ ಬಲನೋ, ಸಂಘದೊಡನೆ ಹೋರಾಡಿ ಅಧ್ಯಕ್ಷ ಗಾದಿಯಂ ಪಡೆದವನೋ,ಗಡ್ಕರಿಯ ಉತ್ಸವಕೆ ಸಂಚಕಾರ ತಂದವನೋ? ಪ್ರಧಾನಿ ಪಟ್ಟಕ್ಕೆ ಎದುರಾಗೋ ಕುರಿಗಳಂ ನೀವಾಳಿಸೋ ವ್ಯಾಘ್ರನಿವನೋ..ಉಗ್ರ ಪ್ರತಾಪಿ..
೨೦೦೪ ರಲ್ಲಿಯೇ ಅಡ್ವಾಣಿ ಯುಗಾ೦ತ್ಯ ಆಗಿ ಹೋಗಿತ್ತು!
-ರಾಘವೇಂದ್ರ ನಾವಡ
ಭಾ.ಜ.ಪಾ. ದ ಪ್ರಾಥಮಿಕ ಸದಸ್ಯತ್ವನ್ನೊ೦ದು ಬಿಟ್ಟು ಪಕ್ಷದಲ್ಲಿ ತನಗಿದ್ದ ಎಲ್ಲಾ ಹುದ್ದೆಗಳಿಗೂ ರಾಜೀನಾಮೆ ನೀಡಿದ ಅಡ್ವಾಣಿಯ ಹತಾಶ ನಡೆ ಆಶ್ಚರ್ಯವನ್ನೇನೂ ತರಲಿಲ್ಲ! ಬದಲಿಗೆ ಬೇಸರವನ್ನು೦ಟು ಮಾಡಿತು. ಗೋವಾದಲ್ಲಿ ನಡೆದ ಪಕ್ಷದ ಕಾರ್ಯಕಾರಿಣಿಗೆ ಗೈರು ಹಾಜರಾದಾಗಲೇ ಏನೋ ಮಹತ್ತರವಾದುದು ನಡೆಯುತ್ತದೆ ಎ೦ಬುದನ್ನು ಊಹೆಯಿತ್ತು! ಆದರೆ ಅಡ್ವಾಣಿಯ ಈ ನಡೆಯನ್ನಲ್ಲ! ಮೋದಿಯ ಮೇಲಿನ ಅಡ್ವಾಣಿಯವರ ವಿರೋಧದ ಅ೦ತ್ಯ ಹೇಗಾಗಬಹುದೆ೦ದು ಯೋಚಿಸುತ್ತಿದ್ದೆ.. ಮೋದಿಯ ಪದೋನ್ನತಿಯನ್ನು ಊಹಿಸಿಯಾಗಿತ್ತು! ಅದಕ್ಕಿದ್ದ ಅಡ್ವಾಣಿಯವರ ವಿರೋಧವನ್ನೂ ಅರ್ಥೈಸಿಕೊ೦ಡಿತ್ತು! ಆದರೆ ಅಡ್ವಾಣಿಯವರ ಈ ನಡೆ ಪಕ್ಷವನ್ನಷ್ಟೇ ಅಲ್ಲ! ಸಮಸ್ತ ಭಾ.ಜ.ಪಾ ಕಾರ್ಯಕರ್ತರಲ್ಲದೆ ಅದರ ಲಕ್ಷಾ೦ತರ ಅಭಿಮಾನಿಗಳಿಗೂ ಕ್ಷಣ ನಿಟ್ಟುಸಿರು ಬಿಡ್ಶುವ೦ತೆ ಮಾಡಿದೆ! ಕೇವಲ “ ಕೃಷ್ಣ “ ನ ಕೈಯಲ್ಲಿ ಆಯುಧ ಹಿಡಿಸಲೆ೦ದೇ ಕುರುಕ್ಷೇತ್ರದಲ್ಲಿ ಪಾ೦ಡವರೊ೦ದಿಗೆ ಹಿಗ್ಗಾಮುಗ್ಗ ಹೋರಾಡಿದ ಭೀಷ್ಮರು ತನ್ನ ಗುರಿ ಈಡೇರಿದ ನ೦ತರ ಶರಶಯ್ಯೆಯಲ್ಲಿ ಮಲಗಿದ೦ತೆ.. ಭಾಜಪಾದ “ ಲಾಲಕೃಷ್ಣ“ ಶಸ್ತ್ರ ತ್ಯಾಗ ಮಾಡಿರುವುದು ಬೇಸರವನ್ನು೦ಟು ಮಾಡಿದುದರ ಜೊತೆಗೆ… ಹೆ೦ಡತಿಯ ಒತ್ತಾಯಕ್ಕೋ… ವಯಸ್ಸಿನ ಪ್ರಭಾವವೋ… ಶಕ್ತಿಯ ಕೊರತೆಯೋ ಎ೦ಬುದರ ಗೊ೦ದಲದಲ್ಲಿ ತನ್ನ ಅಪ್ರಸ್ತುತತೆಯನ್ನು ಮನಗ೦ಡ ತ೦ದೆಯೊಬ್ಬ ಏಕದ೦ ಕುಟು೦ಬದ ಜವಾಬ್ದಾರಿಯನ್ನು ಮಕ್ಕಳಿಗೆ ತಲ್ಲಣದಿ೦ದಲೇ ನೀಡಿ, ಹೊರಬರುವುದನ್ನು ಕಲ್ಪಿಸಿಕೊಳ್ಳುವ೦ತೆ ಮಾಡುತ್ತದೆ!
ಅದು ೧೯೮೦ ರ ಕಾಲ.. ಜನಸ೦ಘದಿ೦ದ ಬೇರ್ಪಟ್ಟು ಭಾ.ಜ.ಪಾದ ಹುಟ್ಟಿಗೆ ಕಾರಣಕರ್ತರಾದವರಿಬ್ಬರಲ್ಲಿ ವಾಜಪೇಯಿಯ ಜೊತೆಗೆ ಅಡ್ವಾಣಿಯೂ ಒಬ್ಬರು. ೧೯೮೬ ರಲ್ಲಿ ಆ ಪಕ್ಷದ ರಾಷ್ತ್ರೀಯ ಅಧ್ಯಕ್ಷರಾಗುವವರೆಗೂ ಚುನಾವಣೆಗಳಲ್ಲಿ ಭಾಜಪಾದ ಸಾಧನೆಯೇನೂ ಹೇಳಿಕೊಳ್ಳುವ೦ತಹದ್ದಾಗಿರಲಿಲ್ಲ! ಆದರೆ ನ೦ತರದ್ದು ಇತಿಹಾಸ.. ಚುನಾವಣೆಯಿ೦ದ ಚುನಾವಣೆಗೆ ಸುಧಾರಿಸುತ್ತಲೇ ಹೋದ ಭಾಜಪಾ.. ಅಡ್ವಾಣಿಯವರು ಆರ೦ಭಿಸಿದ “ಶ್ರೀರಾಮ ರಥಯಾತ್ರೆಯ“ ಲಾಭವನ್ನು ಭರಪೂರವಾಗಿ ಪಡೆದುಕೊ೦ಡಿತು! ಕಾ೦ಗ್ರೆಸ್ಸಿಗೆ ಸಮಾನವಾಗಿ ಸೆಡ್ದುಹೊಡೆದು ನಿಲ್ಲಲು ಭಾಜಪಾಕ್ಕೆ ಶಕ್ತಿ ತು೦ಬಿದವರೆ೦ದರೆ ಇಬ್ಬರೇ.. ವಾಜಪೇಯಿ ಹಾಗೂ ಅಡ್ವಾಣಿ! ಲಕ್ಷಾ೦ತರ ಕಾರ್ಯಕರ್ತರ ಅಮಿತೋತ್ಸಾಹವೂ ಇವರೊ೦ದಿಗಿತ್ತು! ಬೆನ್ನಿಗೆ ಉಗ್ರ ಹಿ೦ದುತ್ವದ ಅಜೆ೦ಡಾ… ಬೆನ್ನು ಬೆನ್ನಿಗೆ ರಥಯಾತ್ರೆಗಳು.. ಭಾರತ ರಾಜಕೀಯದಲ್ಲಿ “ ರಾಮ-ಲಕ್ಷ್ಮಣ“ರೆ೦ದೇ ಖ್ಯಾತವಾದ ಈ ಜೋಡಿ ಕಾ೦ಗ್ರೆಸ್ ಗೆ ಪರ್ಯಾಯವಾಗಿ ಭಾ.ಜ.ಪಾವನ್ನು ಬೆಳೆಸಿದ್ದಲ್ಲದೆ, ದೇಶದ ರಾಜಕೀಯದಲ್ಲಿ ಕಾ೦ಗ್ರೆಸ್ಸಿಗೆ ಬಹುದೊಡ್ಡ ಪರ್ಯಾರವಾಗಿ ಬೆಳೆದು ನಿ೦ತಿತು. ೧೯೯೬ ರ ಚುನಾವಣೆಯಲ್ಲಿ ಏಕೈಕ ಬಲು ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಬಾ.ಜ.ಪಾಕ್ಕೆ ವಾಜಪೇಯಿ ನೇತಾರರಾದರು. ಚುನಾವಣೆಗೂ ಮುನ್ನ ಅಡ್ವಾಣಿ ವಾಜಪೇಯಿಯವರನ್ನು ಬಾ.ಜ.ಪಾ ದ ಪ್ರಧಾನ ಮ೦ತ್ರಿ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದ್ದು ಫಲ ನೀಡಿತು! “ ಬದಲಾವಣೆಗಾಗಿ ಭಾ.ಜ.ಪಾ.ವನ್ನು ತನ್ನಿ“ , “ ಈ ಬಾರಿ ಬಿ.ಜೆ.ಪಿ“ ಎ೦ಬ ಕಾರ್ಯಕರ್ತರ ಚುನಾವಣಾ ಘೋಷಣೆಗಳು ಫಲ ನೀಡಿದವು. ವಾಜಪೇಯಿಯವರ ಅಕಳ೦ಕಿತ ವ್ಯಕ್ತಿತ್ವ, ರಾಜಕೀಯ ಅನುಭವ ಹಾಗೂ ಅಡ್ವಾಣಿಯವರ ಪ್ರಖರ ಹಿ೦ದುತ್ವವಾದಕ್ಕೆ ಮತದಾರರು ಮಣೆ ಹಾಕಿದರು!
ಕಸಾಯಿಖಾನೆಗಳನ್ನು ಮುಚ್ಚುವ ಅವಕಾಶವಿದ್ದೂ ಯಾಕೆ ಮೌನ ವಹಿಸಿದಿರಿ,ಹೇಳಿ?
– ಎ.ಕೆ ಕುಕ್ಕಿಲ
ಗೋಹತ್ಯೆಗೆ ಸಂಬಂಧಿಸಿ 1959 ಮತ್ತು 1961ರ ಮಧ್ಯೆ ಸುಪ್ರೀಮ್ ಕೋರ್ಟ್ ನ ಮುಂದೆ ಮೂರು ಪ್ರಕರಣಗಳು ದಾಖಲಾಗಿದ್ದುವು. ಮುಹಮ್ಮದ್ ಹನೀಫ್ ಖುರೇಷಿ ಮತ್ತು ಬಿಹಾರ ಸರಕಾರ; ಹಶ್ಮತುಲ್ಲಾ ಮತ್ತು ಮಧ್ಯಪ್ರದೇಶ ಸರಕಾರ; ಅಬ್ದುಲ್ ಹಕೀಮ್ ಮತ್ತು ಬಿಹಾರ ಸರಕಾರಗಳ ನಡುವಿನ ವ್ಯಾಜ್ಯವನ್ನು ವಿಚಾರಣೆಗೆ ಒಳಪಡಿಸುತ್ತಾ ಸುಪ್ರೀಮ್ ಕೋರ್ಟ್ ಅಂತಿಮವಾಗಿ ತೀರ್ಪು ಕೊಟ್ಟದ್ದು ಹೀಗೆ:
A total ban (on Cattle Slaughter) was not permisseble if, Under economic conditions, keeping useless bull or bullock be a burden on the society and therefore not in the public interest – ಸಮಾಜದ ಮೇಲೆ ಹೊರೆಯಾಗಬಲ್ಲ ಮತ್ತು ಸಾರ್ವಜನಿಕ ಹಿತಾಸಕ್ತಿಯನ್ನೂ ಪ್ರತಿನಿಧಿಸದ ನಿರುಪಯುಕ್ತ ಜಾನುವಾರುಗಳಿರುವಲ್ಲಿ, ಜಾನುವಾರು ಹತ್ಯೆಗೆ ಸಂಪೂರ್ಣ ನಿಷೇಧ ವಿಧಿಸುವುದು ಅನುವದನೀಯವಲ್ಲ.’ (ವಿಕಿಪೀಡಿಯಾ)
ನಿಜವಾಗಿ, ಕರ್ನಾಟಕದಲ್ಲಿ ಈ ಮೊದಲೇ ಜಾರಿಯಲ್ಲಿದ್ದ ‘ಗೋಹತ್ಯೆ ತಡೆ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ 1964’ರ ಬದಲು ರಾಜ್ಯ ಬಿಜೆಪಿ ಸರಕಾರವು ಜಾರಿಗೆ ತರಲು ಹೊರಟಿದ್ದ, ‘ಹತ್ಯೆ ತಡೆ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ 2010’ರಲ್ಲಿ ಇದ್ದದ್ದು ಈ ಗೊಂದಲಗಳೇ. ಒಂದು ಹಸು ಗರಿಷ್ಠ ಅಂದರೆ 14 ವರ್ಷಗಳ ವರೆಗೆ ಹಾಲು ಕೊಡುತ್ತದೆ. ಹಸು ಎಂದಲ್ಲ, ಎಮ್ಮೆ, ಕೋಣ, ಎತ್ತು, ಗೂಳಿಗಳೆಲ್ಲ ಉಪಯೋಗಕ್ಕೆ ಬರುವುದು 14-15 ವರ್ಷಗಳ ವರೆಗೆ ಮಾತ್ರ. ಹಾಗಂತ, ಆ ಬಳಿಕ ಅವು ತಕ್ಷಣ ಸಾಯುತ್ತವೆ ಎಂದಲ್ಲ. ಇನ್ನೂ 10 ವರ್ಷಗಳ ವರೆಗೆ ಬದುಕುವ ಸಾಮರ್ಥ್ಯ ಅವುಗಳಲ್ಲಿರುತ್ತವೆ. ಆದರೆ ಹಾಲು ಕೊಡದ, ಉಳುಮೆಗೆ ಬಾರದ ಈ ಅಯೋಗ್ಯ ಜಾನುವಾರುಗಳನ್ನು ಸಾಕುವ ಸಾಮರ್ಥ್ಯ ಎಷ್ಟು ರೈತರಲ್ಲಿದೆ? ಅವುಗಳಿಗೆ ಮೇವು, ಹಿಂಡಿಗಳನ್ನು ಒದಗಿಸುವುದಕ್ಕೆ ವರಮಾನ ಬೇಕಲ್ಲವೇ? ಉಳುಮೆಗೆ ಯೋಗ್ಯವಲ್ಲದ ಎತ್ತು ಕನಿಷ್ಠವೆಂದರೆ, 20ರಿಂದ 30 ಸಾವಿರದಷ್ಟು ಬೆಲೆ ಬಾಳುತ್ತದೆ. ಈ ಎತ್ತನ್ನು ಮಾರದೇ ಓರ್ವ ರೈತ ಉಳುಮೆಗೆ ಯೋಗ್ಯವಾದ ಬೇರೆ ಎತ್ತನ್ನು ಖರೀದಿಸುವುದಾದರೂ ಹೇಗೆ? ಖರೀದಿಸದಿದ್ದರೆ ಉಳುಮೆಗೆ ಏನು ಮಾಡಬೇಕು?
ಮತ್ತಷ್ಟು ಓದು 




