ವಿಷಯದ ವಿವರಗಳಿಗೆ ದಾಟಿರಿ

Posts tagged ‘ಬಿಜೆಪಿ’

20
ಮೇ

ಎರಡು ರಾಷ್ಟ್ರೀಯ ಪಕ್ಷಗಳ ತುಲನೆ

– ಚಕ್ರವರ್ತಿ ಸೂಲಿಬೆಲೆ

BCಬ್ರಿಟಿಷರ ಕೊನೆಯ ವೈಸ್‌ರಾಯ್ ಮೌಂಟ್ ಬ್ಯಾಟನ್. ಹಾಗಾದರೆ ಭಾರತದ ಮೊದಲ ವೈಸ್‌ರಾಯ್ ಯಾರು ಗೊತ್ತ? ಮತ್ಯಾರು? ಈ ದೇಶದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರೂ!
ನೆಹರೂ ಅತ್ಯಂತ ಶ್ರದ್ಧೆಯಿಂದ ಆಂಗ್ಲರ ರಾಜನೀತಿಯನ್ನು ಅರಿತುಕೊಂಡರು. ಅದನ್ನು ಹಂತಹಂತವಾಗಿ ಪ್ರಯೋಗಿಸಲಾರಂಭಿಸಿದರು. ಅಧಿಕಾರ ಕೈಗೆ ದಕ್ಕುವ ಮುನ್ನಿನ ಚುನಾವಣೆಗಳಲ್ಲಿ ತಮ್ಮ ಚಾಕಚಕ್ಯತೆಯನ್ನು, ವಿಭಜಿಸಿ ಗೆಲ್ಲುವ ತಂತ್ರವನ್ನು ಚೆನ್ನಾಗಿಯೇ ಬಳಸಿದರು. ಒಂದೆಡೆ ಮುಸಲ್ಮಾನರನ್ನು ಓಲೈಸಿ ಗೆಲ್ಲುವುದು, ಮತ್ತೊಂದೆಡೆ ಪಟೇಲರನ್ನು ಕಡು ಹಿಂದೂವಾಗಿ ಬಿಂಬಿಸಿ ಹಿಂದೂಗಳ ಮತವನ್ನು ಸೆಳೆದುಕೊಳ್ಳುವ ತಂತ್ರಗಾರಿಕೆ ಯಶಸ್ವಿಯಾಯ್ತು. ನೆಹರೂ ಪಕ್ಕಾ ಇಂಗ್ಲೀಶ್ ಬಾಬುವಾಗಿಬಿಟ್ಟರು. ಆಗಲೇ ಗಾಂಧೀಜಿ ಗಾಬರಿಯಿಂದ ಹೇಳಿದ್ದು, ‘ದೇಶ ವಿಭಜನೆಗೊಂಡು ಸ್ವಾತಂತ್ರ್ಯ ಬಂತು. ಇನ್ನು ಮುಂದೆ ಕಾಂಗ್ರೆಸ್ಸನ್ನು ವಿಸರ್ಜಿಸಿಬಿಡೋಣ.’ ಸ್ವತಃ ಗಾಂಧೀಜಿಗೆ ಅಸಹ್ಯವಾಗಿತ್ತು. ತಾನೇ ಮೂಲೆ ಮೂಲೆಗೆ ಕೊಂಡೊಯ್ದ ಕಾಂಗ್ರೆಸ್ಸು ಮುಂದೊಮ್ಮೆ ದೇಶದ ದುರ್ಗತಿಗೆ ಕಾರಣವಾಗುತ್ತದೆಂಬ ಸ್ಪಷ್ಟ ಅರಿವು ಅವರಿಗಿತ್ತು.

ಬಿಜೆಪಿಗೂ ಕಾಂಗ್ರೆಸ್ಸಿಗೂ ಒಂದು ಎದ್ದುಕಾಣುವಂತಹ ಭಿನ್ನತೆ ಇದೆ. ಒಂದು, ಕಾರ್ಯಕರ್ತರಿಂದಲೇ ನಿರ್ಮಾಣಗೊಂಡ, ಕೆಡರ್ ಆಧಾರಿತ ಪಕ್ಷ. ಮತ್ತೊಂದು, ಅಗತ್ಯ ಬಿದ್ದಾಗ ಕಾರ್ಯಕರ್ತರನ್ನು ಕೊಂಡುಕೊಳ್ಳುವ ಪಕ್ಷ. ಇವತ್ತಿಗೂ ನಾನು ಕಾಂಗ್ರೆಸ್ಸಿಗ ಎಂದು ಎದೆ ತಟ್ಟಿ ಹೇಳುವ ಸಾಮಾನ್ಯ ಕಾರ್ಯಕರ್ತರನ್ನು ತೋರಿಸಿ ನೋಡೋಣ. ಅಲ್ಲಿ ಕರುಳ ಸಂಬಂಧಗಳಿಲ್ಲ. ಅದೊಂಥರಾ ನಕಲು ಮಾಡಿಸಿ ನೂರು ಪ್ರತಿಶತ ಅಂಕ ಗಳಿಸುವ ಶಾಲೆಯಿದ್ದಂತೆ. ಆ ಶಾಲೆಯಲ್ಲಿ ಕೆಲಸ ನಡೆಯುವುದೇ ಕೊನೆಯ ಆರು ದಿನಗಳಲ್ಲಿ. ಹೀಗಾಗಿ ಬಂದ ಫಲಿತಾಂಶಕ್ಕೆ ಬೆನ್ನು ತಟ್ಟಿಕೊಳ್ಳುವವರು ಇರುತ್ತಾರೆಯೇ ಹೊರತು, ಆನಂದ ಪಡುವವರಲ್ಲ. ಈ ಕಾರಣಕ್ಕಾಗಿಯೇ ಕಾಂಗ್ರೆಸ್ ಬಿಟ್ಟು ಹೊರಬಂದಾಗ ತಾನು ತಾಯಿಯ ಮಡಿಲಿನಿಂದ ಹೊರಗೆ ಬಂದುಬಿಟ್ಟಿದ್ದೇನೆಂದು ಯಾರಿಗೂ ಅನ್ನಿಸೋದೇ ಇಲ್ಲ. ಅಲ್ಲಿ ತಪ್ಪಾದಾಗ ಪ್ರಶ್ನೆ ಯಾರನ್ನು ಕೇಳಬೇಕೆಂದು ಯಾರಿಗೂ ಗೊತ್ತೇಇರುವುದಿಲ್ಲ. ಗೋಹತ್ಯೆ ನಿಷೇಧ ಹಿಂತೆಗೆದುಕೊಂಡಿದ್ದನ್ನು ಕೇಳಿ ಅನೇಕ ಕಾಂಗ್ರೆಸ್ಸಿಗರೇ ಗರಮ್ ಆಗಿದ್ದಾರೆ. ದುರ್ದೈವ, ಈ ದರ್ದನ್ನು ಯಾರೆದುರು ತೋಡಿಕೊಳ್ಳಬೇಕೆಂದು ಗೊತ್ತಿಲ್ಲವಷ್ಟೆ. ಮುಖ್ಯಮಂತ್ರಿ ಸ್ಥಾನ ಸಿಗದಿದ್ದುದಕ್ಕೆ ಖರ್ಗೆಯ ಬಳಗ ಜಿಲ್ಲೆ ಜಿಲ್ಲೆಗಳಲ್ಲಿ ರಾಡಿ ಎಬ್ಬಿಸಿತಲ್ಲ, ಅದಕ್ಕೆಲ್ಲ ಪ್ರಚಾರವೇ ಸಿಗಲಿಲ್ಲ ಏಕೆ? ಬಹಳ ಸಿಂಪಲ್ಲು. ಈ ರೀತಿ ಜೀವ ಕೊಡುವ ಕಾರ್ಯಕರ್ತರು ಅಲ್ಲಿಲ್ಲ; ಖರೀದಿಸಿದವರಿಗಾಗಿ ತಲೆಕೆಡಿಸಿಕೊಳ್ಳಬೇಕಿಲ್ಲ ಅಂತರ್ಥ! ಇಷ್ಟು ಮಾತ್ರ ಬಿಜೆಪಿಯೊಳಗೆ ಕಿರಿಕಿರಿಯಾಗಿಬಿಟ್ಟಿದ್ದರೆ ಮಾಧ್ಯಮಗಳಿಗೆ ಹಬ್ಬವಾಗಿಬಿಟ್ಟಿರುತ್ತಿತ್ತು. ಏಕೆ ಗೊತ್ತೇನು? ರಾಯಚೂರಿನಲ್ಲಾಗುವ ಒಂದು ಸಣ್ಣ ಬೆಳವಣಿಗೆಗೂ ಮಡಿಕೇರಿಯ ಕಾರ್ಯಕರ್ತ ನೊಂದುಕೊಳ್ಳುತ್ತಾನೆ. ಅವನ ಹೃದಯ ಕಂಪಿಸುತ್ತದೆ.

ಮತ್ತಷ್ಟು ಓದು »

18
ಮೇ

ಗೆದ್ದಿದ್ದು ಕಾಂಗ್ರೆಸ್ಸ್ ಅಲ್ಲ ’ಸೋತಿದ್ದು ಬಿಜೆಪಿ’

– ರಾಕೇಶ್ ಶೆಟ್ಟಿ

Sidduಮೇ೮ರಂದು ರಾಜ್ಯದ ರಾಜಕೀಯ ಪಂಡಿತರ ಲೆಕ್ಕಾಚಾರಗಳೆಲ್ಲ ತಲೆಕೆಳಕಾಗಿ ಖುದ್ದು ಕಾಂಗ್ರೆಸ್ಸಿಗರೇ ತಮ್ಮ “ಕೈ” ಚಿವುಟಿ ಚಿವುಟಿ ಕನಸೋ ನನಸೋ ಅನ್ನುವಷ್ಟರಲ್ಲಿ ಕಾಂಗ್ರೆಸ್ಸ್ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು.ಪರಮೇಶ್ವರ್ ಸೋಲಿನಿಂದ ಸಿದ್ದರಾಮಯ್ಯ ಅವರ ಮುಖ್ಯಮಂತ್ರಿಯೂ ಆಗಿಬಿಟ್ಟರು.

ಅತ್ತ ಕಾಂಗ್ರೆಸ್ಸ್ ಗೆದ್ದಿದ್ದೇ ತಡ,ಇತ್ತ ನಮ್ಮ ನಾಡಿನ ಪ್ರಗತಿಪರರು,ಬುದ್ದಿಜೀವಿಗಳು,ಸಾಕ್ಷಿಪ್ರಜ್ನೆಗಳು ಚುನಾವಣಾ ಫಲಿತಾಂಶದ ಬಗ್ಗೆ ಬರೆಯಲು ಕುಳಿತರು ನೋಡಿ. ಶುರುವಾಯ್ತು ಪದಪುಂಜಗಳ ಪಟ್ಟಿ.ಹೆಚ್ಚು ಕಡಿಮೆ ಆ ಎಲ್ಲಾ ಬರಹಗಳೂ ಈ ಧಾಟಿಯಲ್ಲಿದ್ದವು.

“ಸಂಘ ಪರಿವಾರದ ಪುಂಡಾಟಿಕೆಯಿಂದ,ವಿಷಮಯವಾದ ಹಿಂದುತ್ವದ ಅಜೆಂಡಾ,ಮತಾಂಧತೆ ಇತ್ಯಾದಿ ಇತ್ಯಾದಿಗಳಿಂದ ಅಲ್ಪಸಂಖ್ಯಾತರ ಜೀವನ ನರಕವಾಗಿದ್ದ ಕರ್ನಾಟಕ”ವನ್ನು ನೋಡಿ ಸಹಿಸಲಾಗದ ನಾಡಿನ ಪ್ರಜ್ಞಾವಂತ, ಪ್ರಗತಿಪರ,ಸಂವೇದನಾಶೀಲ,ಸಾಕ್ಷಿಪ್ರಜ್ನೆ ಕನ್ನಡಿಗರು ಕಾಂಗ್ರಸ್ ಪರ ನಿಂತರಂತೆ…!

ನಿಜವಾಗಿಯೂ ಕನ್ನಡಿಗರು ಕಾಂಗ್ರೆಸ್ಸ್ ಪರ ಮತ ಚಲಾಯಿಸದರೆ ಅಂತ ನೋಡ ಹೊರಟರೆ, ೬ ಸ್ಥಾನ ಗೆದ್ದ ಕೆ.ಜೆ.ಪಿ ೩೯ ಸ್ಥಾನಗಳಲ್ಲಿ ಎರಡನೇ ಸ್ಥಾನದಲ್ಲಿದ್ದರೆ,ಬಿ.ಜೆ.ಪಿ ಸುಮಾರು ೩೦ ಸ್ಥಾನಗಳಲ್ಲಿ ಎರಡನೇ ಸ್ಥಾನದಲ್ಲಿದ್ದರೆ,ಬಿ.ಆಸ್.ಆರ್ ಗೆದ್ದಿದ್ದು ೪ ಸೀಟುಗಳನ್ನು.ಅಂದರೆ ಬಿಜೆಪಿ+ಕೆಜೆಪಿ+ಬಿ.ಆಸ್.ಆರ್ ನಡುವೆ ಮತಗಳು ಚೆಲ್ಲಾಪಿಲ್ಲಿಯಾಗಿರುವುದರಿಂದ ಕಾಂಗ್ರೆಸ್ಸು ಗೆದ್ದಿದೆ.ಬಹುಷಃ ಬಿಜೆಪಿಯಿಂದ ಯಡ್ಯೂರಪ್ಪ ಹೊರಹೋಗದಿದ್ದರೆ ೮೦ರ ಹತ್ತಿರ ಬಂದು ತಲುಪುತಿತ್ತು.ಇನ್ನೂ ಸರಳವಾಗಿ ಹೇಳಬೇಕೆಂದರೆ ಗೆದ್ದಿದ್ದು ಕಾಂಗ್ರೆಸ್ಸ್ ಅಲ್ಲ ’ಸೋತಿದ್ದು ಬಿಜೆಪಿ’ ಅಷ್ಟೆ.ಗೆಲ್ಲಲ್ಲಿಕ್ಕೆ ಕಾಂಗ್ರೆಸ್ಸ್ ಏನಾದರೂ ವಿರೋಧ ಪಕ್ಷ ಕೆಲಸವನ್ನಾದರೂ ಸರಿಯಾಗಿ ನಿಭಾಯಿಸಿತ್ತೇ? ಇದೊಂತರ ಕೋಗಿಲೆ ಗೂಡಲ್ಲಿ ಕಾಗೆ ಮೊಟ್ಟೆ ಇಟ್ಟ ಹಾಗೆ …!!! ಬಿಜೆಪಿಯ ಭ್ರಷ್ಟಾಚಾರವನ್ನು ಬಯಲಿಗೆಳೆದು ಸಮರ್ಥ ವಿರೋಧ ಪಕ್ಷದ ಕೆಲಸ ಮಾಡಿದ್ದು ಜೆಡಿಎಸ್,ಗೆದ್ದಿದ್ದು ಕಾಂಗ್ರೆಸ್ಸ್ …!!!

ಇನ್ನು ಬಿಜೆಪಿ ಸೋಲಿಗೆ ಕಾರಣಗಳನ್ನು ದುರ್ಬೀನು ಹಾಕಿಕೊಂಡೇನು ಹುಡುಕಬೇಕಿಲ್ಲ.ಸಾಲು ಸಾಲು ಡಿ-ನೋಟಿಫಿಕೇಷನ್,ಭ್ರಷ್ಟಾಚಾರದ ಹಗರಣಗಳು,ಬ್ಲೂ-ಫಿಲಂ ಕರ್ಮಕಾಂಡ ಅದು ಇದು ಅಂತಲೇ ಪಟ್ಟಿ ಮಾಡಿಬಿಡಬಹುದು.ಇವೆಲ್ಲಕ್ಕೂ ಕಳಶವಿಟ್ಟಂತೆ ಬಿಜೆಪಿಯ ಮಾಸ್ ನಾಯಕ ಯಡ್ಯೂರಪ್ಪರನ್ನು, ಬೆಂಗಳೂರಿನ ತನ್ನ ಕ್ಷೇತ್ರವೊಂದನ್ನು ಬಿಟ್ಟು ಇನ್ನೆಲ್ಲೂ ನಿಂತು ಒಂದು ಸಂಸದನ ಸ್ಥಾನ ಗೆಲ್ಲಲಾಗದ ರಾಷ್ಟ್ರೀಯ ನಾಯಕ(?)ರೊಬ್ಬರ ಕುತಂತ್ರದಿಂದ ಪಕ್ಷ ತೊರೆದು ಹೋಗುವಂತೆ ಮಾಡಿದ್ದು ಮುಖ್ಯ ಕಾರಣ.ಇನ್ನು ದಕ್ಷಿಣ ಕನ್ನಡದಲ್ಲಿ ಹಾಲಾಡಿ,ಯೋಗಿಶ್ ಭಟ್,ನಾಗರಾಜ್ ಶೆಟ್ಟಿ ಅಂತವರ ವಿಷಯದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ನಡೆದುಕೊಂಡ ರೀತಿಯಿಂದ ಮತ್ತು  ಸದಾನಂದ ಗೌಡರನ್ನ ವಿನಾಕಾರಣ ಕುರ್ಚಿಯಿಂದ ಇಳಿಸಿದ್ದು ಬಿಜೆಪಿಗೆ ಮುಳುವಾಯಿತು.

ಮತ್ತಷ್ಟು ಓದು »

4
ಮೇ

‘ಕುಮಾರ’ ಮುಖ್ಯಮಂತ್ರಿ ಗಾದಿಗೆ! ‘ಮೋದಿ’ ಪ್ರಧಾನಿ ಹುದ್ದೆಗೆ!

– ಗೋಪಾಲಕೃಷ್ಣ

KMಅಭಿವೃದ್ಧಿಯೇ ಮಾತನಾಡುವುದಾದರೆ; ‘ಕುಮಾರಣ್ಣ’ ಮುಖ್ಯಮಂತ್ರಿ ಗಾದಿಗೆ! ‘ಮೋದಿಜಿ’ ಪ್ರಧಾನಿ ಹುದ್ದೆಗೆ!

ಅರವತ್ತಾರು ವಸಂತಗಳ ಬಂಧಮುಕ್ತ ಬದುಕು.ಈ ನಡುವೆ ದೇಶ ಕಂಡದ್ದು 13 ಮಂದಿ ಪ್ರಧಾನಮಂತ್ರಿಗಳನ್ನು. ರಾಜ್ಯವನ್ನಾಳಿದ್ದು 21 ಮುಖ್ಯಮಂತ್ರಿಗಳು.  ಇವರೆಲ್ಲರಲ್ಲಿಯೂ; ದೇಶದಲ್ಲಿ ಲಾಲ್ ಬಹದ್ದೂರ್ ಶಾಸ್ತ್ರಿ, ಇಂದಿರಾಗಾಂಧಿ, ಪಿ.ವಿ.ನರಸಿಂಹರಾವ್, ಅಟಲ್ ಬಿಹಾರಿ ವಾಜಪೇಯಿಯವರನ್ನು ಮತ್ತೆ ಮತ್ತೆ ನೆನದರೆ, ರಾಜ್ಯದಲ್ಲಿ ದೇವರಾಜ ಅರಸು ಅವರ ಸಾಮಾಜಿಕ ಪರಿಕಲ್ಪನೆ, ರಾಮಕೃಷ್ಣ ಹೆಗಡೆ ಅವಧಿಯ ಜನಪರ ಕಾರ್ಯಕ್ರಮಗಳು, ಎಸ್.ಎಂ.ಕೃಷ್ಣ ಅವರ ಲಯ ತಪ್ಪದ ಆಡಳಿತ, ಹೆಚ್.ಡಿ.ಕುಮಾರಸ್ವಾಮಿಯವರ ಇಪ್ಪತ್ತೇ ತಿಂಗಳ ಆಡಳಿತವನ್ನು ಮಾತ್ರ ಇಂದಿಗೂ ಮೆಲುಕು ಹಾಕುವಂತಾಗಿದೆ.

ಭಾರತದ ಜನಸಂಖ್ಯೆ 121 ಕೋಟಿಯನ್ನು ದಾಟಿರಬಹುದು.  ನಾವು ಆಯ್ಕೆ ಮಾಡುವ ಜನಪ್ರತಿನಿಧಿಗಳು ಸುಮಾರು 5400 ಮಂದಿಯಷ್ಟೇ.  ಆದರೆ, ಇಷ್ಟು ಜನ ಪ್ರತಿನಿಧಿಗಳು ತಮ್ಮ ಕ್ಷೇತ್ರದ ಜನರ ಆಶಯಗಳಿಗೆ ತಕ್ಕಂತೆ ನಡೆಯುವುದು ಅಪರೂಪ.  ಅವರುಗಳ ನಿಷ್ಠೆಯೇನಿದ್ದರೂ ದೇಶವಾದರೆ ಪ್ರಧಾನಿಗೆ! ರಾಜ್ಯವಾದರೆ ಮುಖ್ಯಮಂತ್ರಿಗೆ ಮೀಸಲು ಎಂಬಂತಿರುತ್ತದೆ.  ಸಂವಿಧಾನದ ಪ್ರಕಾರ ಮುಖ್ಯಮಂತ್ರಿ ಅಥವಾ ಪ್ರಧಾನಮಂತ್ರಿಯನ್ನು ಶಾಸಕರು, ಲೋಕಸಭಾ ಸದಸ್ಯರು ಆಯ್ಕೆ ಮಾಡಬೇಕು.  ಆ ಪರಿಪಾಠ ಮುರಿದು ಬಿದ್ದು ಎಷ್ಟೋ ವರ್ಷಗಳು ಆಗಿವೆ.  ಈಗೇನಿದ್ದರೂ ಚುನಾವಣಾ ಪೂರ್ವದಲ್ಲಿಯೇ ನಾಯಕನ ಆಯ್ಕೆ ಇಲ್ಲವೇ ಹೈಕಮಾಂಡ್ ಹೇಳಿದವರು ಅತ್ಯುನ್ನತ ಹುದ್ದೆಯಲ್ಲಿ ಕೂರುತ್ತಾರೆ.

ಮತ್ತಷ್ಟು ಓದು »

29
ಏಪ್ರಿಲ್

ನೂರರ ನೋಟು ಮತ್ತು ನೈತಿಕತೆ

– ಪ್ರಸನ್ನ

100 Rupayiನನ್ನದು ಕುಗ್ರಾಮದ ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ. ಸಹಪಾಠಿ ದಯಾನಂದ ನಮ್ಮೂರ ಪಟೇಲರ ಮೊಮ್ಮಗ. ಆಗ ಕಾಂಗ್ರೆಸ್ ಮತ್ತು  ಜನತಾ ಪಕ್ಷ ಎರಡೇ ಪಕ್ಷಗಳಿದ್ದಂತೆ ತೋರುತ್ತದೆ. ಯಾವ ಚುನಾವಣೆ ಎಂಬುದು ನೆನಪಿಲ್ಲ. ಕಾಂಗ್ರೆಸ್ಸಿನ ಚಿಹ್ನೆ ಹಸು ಮತ್ತು ಕರುವಿನದ್ದು. ತಗಡಿನ ಬಿಲ್ಲೆಯ ಮೇಲೆ ಮುದ್ರಿತಗೊಂಡಿದ್ದ ಆ ಬಿಲ್ಲೆ ನಮಗೆ ಅಚ್ಚುಮೆಚ್ಚು, ಕಾರಣ ಎರಡು ತೂತ ಹಾಕಿ ದಾರ ಕಟ್ಟಿ ಜುಯ್ ಎಂದೆಳೆಯುವ ಮೋಜಿನ ಬಿಲ್ಲೆಗೆ ಅದು ಅತ್ಯಂತ ಸೂಕ್ತವಾಗಿತ್ತು. ಆಗ ಜನತಾ ಪಕ್ಷದವರು ಸಂಘರ್ಷ ಚಿತ್ರದ “ಯೌವನದ ಹೊಳೆಯಲ್ಲಿ ಈಜಾಟವಾಡಿದರೆ ಓ ಹೆಣ್ಣೆ ಸೋಲು ನಿನಗೆ” ಹಾಡಿನ ರೀಮಿಕ್ಸ್ ಮಾಡಿ, ಓ ಇಂದಿರಾ ಸೋಲು ನಿನಗೆ ಎಂಬ ಹಾಡನ್ನು ಎಲ್ಲೆಡೆ ಬಿತ್ತರಿಸುತ್ತಿದ್ದ ನೆನಪು ಇದೇ ಚುನಾವಣೆಯ ಅಥವ ನಂತರದ್ದ ನೆನಪಿಲ್ಲ.

ಒಂದು ದಿನ ದಯಾನಂದ ಮಧ್ಯಾಹ್ನ ಊಟದ ನಂತರ ಬಂದು ನೂರು ರೂಪಾಯಿ ನೋಡಿದ್ಯ? ಅಂತ ಕೇಳ್ದ, ಇಲ್ಲಾ ಅಂತ ತಲೆ ಆಡಿಸಿದೆ. ನೋಡ್ತಿಯ? ಅಂದವನಿಗೆ ಗೋಣು ಹಾಕಿ ಇಚ್ಚೆ ವ್ಯಕ್ತ ಪಡಿಸಿದೆ. ಸರಿ ಬಾ ತೋರಿಸ್ತಿನಿ. ಭಯದಿಂದ ಕೇಳಿದೆ ನಿನ್ ಹತ್ರ ಹೇಗ್ ಬಂತು. ನನ್ ಹತ್ರ ಇಲ್ಲ. ನಮ್ಮನೆಲಿದೆ ತೋರಿಸ್ತಿನಿ ಬಾ.

ಪಟೇಲರು ವಂಶಪಾರಂಪರ್ಯವಾಗಿ ಕಾಂಗ್ರೆಸ್ಸಿನ ಸದಸ್ಯರು. ಅವರ ವಂಶದ ಯಾರೋ ಒಬ್ಬರು ನೆಹರುರೊಡನೆ ಇದ್ದ ಫೋಟೊವೊಂದು ಅವರ ಮನೆಯ ನಡುಮನೆಯ ಮುಂಬಾಗಿಲಿನ ಎದುರು ನೇತಾಡುತ್ತಿತ್ತು.

ಅವ್ವ ಒಳ್ಗೆ ಕೆಲ್ಸ ಮಾಡ್ತವ್ಳೆ ಎಂದ, ಮೆಲ್ಲಗೆ ನಡುಮನೆ ದಾಟಿ ಹಿಂದೆ ಕೋಣೆಯೊಂದಕ್ಕೆ ನನ್ನನ್ನು ಎಳೆದುಕೊಂಡು ಹೋದ. ಕೊಟೆಯೊಳಗೆ ನುಸುಳಿದಂತ ಅನುಭವ ದೊಡ್ಡಮನೆ, ದವಸ ಧಾನ್ಯಗಳ ತುಂಬಿತುಳುಕುತ್ತಿದ್ದ ಕೋಣೆಯ ಮೂಲೆಯೊಂದರಲ್ಲಿ ನಾಲ್ಕಾರು ತೆಳ್ಳನೆ ಗೋಣಿ ಚೀಲದ ಮೂಟೆಯ ಬಳಿಗೆ ಕರೆದೊಯ್ದು ಬೆರಳಿನಿಂದ ಚೀಲದ ದಾರಗಳನ್ನು ಬಿಡಿಸಿ ತೂತಿನಿಂದ ನೋಡು ಎಂದ ಉಹುಂ ಕತ್ತಲೆಯಲ್ಲಿ ಕಾಣುತ್ತಿರಲಿಲ್ಲ. ಮೆಲ್ಲಗೆ ಸ್ವಿಚ್ ಹಾಕಿದಾಗ ಮಂದ ಬೆಳಕು ಹರಿಯಿತು. ಯಾರ್ಲಾ ಅದು  ಕೋಣ್ಯಾಗೆ? ಎಂಬ ವಯಸ್ಸಾದ ಹೆಣ್ಣಿನ ಧ್ವನಿ ತೂರಿ ಬಂತು. ನಾನು ನಡುಗಿ ಹೋಗಿದ್ದೆ. ಏ ನಾನೆ ಕಣಜ್ಜಿ ದಯಾ ಎಂದು ರೇಗಿದ. ಅಲ್ಲೇನ್ಲಾ ಕ್ಯಾಮೆ ನಿಂಗೆ ಇಸ್ಕೂಲ್ಗೆ ಓಗಿಲ್ವೆನ್ಲಾ? ಏಯ್ ಓಗಿದಿನಿ, ಪುಸ್ಕ ಮರ್ತೋಗಿದ್ದೆ ತಗೊಂಡೋಯ್ತಿನಿ.

ಮತ್ತಷ್ಟು ಓದು »

19
ಜನ

ಕರ್ನಾಟಕದಲ್ಲಿ ಅಶಾಂತಿಯ ಗಾಳಿ ಬೀಸಬೇಕೆಂದು ಕಾಂಗ್ರೆಸ್ಸ್ ನಿರ್ಧರಿಸಿದೆಯೇ?

– ರಾಕೇಶ್ ಶೆಟ್ಟಿ

CTಪ್ರಶಾಂತವಾಗಿರುವ ಕರ್ನಾಟಕದಲ್ಲಿ ಅಶಾಂತಿಯ ಗಾಳಿ ಬೀಸಬೇಕೆಂದು ಕಾಂಗ್ರೆಸ್ಸ್ ನಿರ್ಧರಿಸಿದೆಯೇ? ಬಹುಶಃ ಹೌದು ಅನ್ನಿಸುತ್ತಿದೆ. ಶ್ರೀರಂಗ ಪಟ್ಟಣದಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ 50 ಪ್ರತಿಶತ ಮೀಸಲು ನೀಡುವಂತ ವಿವಿಯೊಂದನ್ನು ಸ್ಥಾಪಿಸುವ ಯೋಜನೆ ಕೇಂದ್ರ ಸರ್ಕಾರದ ಮುಂದಿದೆ ಮತ್ತು ಆ ವಿವಿಗೆ ‘ಟಿಪ್ಪು ವಿಶ್ವವಿದ್ಯಾಲಯ’ ಅಂತ ನಾಮಕರಣ ಮಾಡುತ್ತೇವೆ ಅನ್ನುವ ಹೇಳಿಕೆಯನ್ನು ಕೇಂದ್ರ ಸಚಿವರು ಕೊಟ್ಟ ದಿನದಿಂದಲೇ,’ಟಿಪ್ಪು’ ಬಗ್ಗೆ ಚರ್ಚೆ ಶುರುವಾಗಿದೆ.ಚಿದಾನಂದ ಮೂರ್ತಿ,ಎಸ್.ಎಲ್ ಭೈರಪ್ಪ ಮತ್ತು ಇತರರು, ಟಿಪ್ಪು ಕಾಲದಲ್ಲಿ ನಡೆದ ಮತಾಂತರ,ಪರ್ಷಿಯಾ ಭಾಷೆಯ ಹೇರಿಕೆ ಮತ್ತು ಮಲಬಾರಿನ ಸೇನಾಧಿಪತಿಗಳಿಗೆ ಮತ್ತು ಇತರರಿಗೆ ಟಿಪ್ಪು ಬರೆದ ಪತ್ರವನ್ನು ಮುಂದಿಟ್ಟು ‘ಟಿಪ್ಪು ಹೆಸರಿನ ವಿವಿ’ಯನ್ನು ವಿರೋಧಿಸುತಿದ್ದರೆ, ಇನ್ನೊಂದು ಕಡೆ ಟಿಪ್ಪು ಪರ ನಿಂತವರು, ಟಿಪ್ಪು ಒಬ್ಬ ದೇಶ ಭಕ್ತ, ಮಕ್ಕಳನ್ನು ದೇಶಕ್ಕಾಗಿ ಅಡ ಇಟ್ಟವನು ಅನ್ನುತಿದ್ದಾರೆ. ಟಿಪ್ಪು ಕುರಿತ ಈ ಚರ್ಚೆ ನಡೆಯುತ್ತಿರುವುದೂ ಇದೇ ಮೊದಲೇನಲ್ಲ.ಟಿಪ್ಪು ಕಾಲದ ಇತಿಹಾಸದ ಬಗ್ಗೆ ಅನೇಕ ಸಾಕ್ಷಿಗಳು ಸಿಗುವುದರಿಂದ ಟಿಪ್ಪು ಏನು ಅಂತ ನಿರ್ಧರಿಸುವುದು ಬೇರೆಯದೇ ವಿಷಯ.ಹಾಗಾಗಿ ಈ ಲೇಖನದಲ್ಲಿ ಟಿಪ್ಪು ಬಗ್ಗೆ ಗಮನ ಹರಿಸುವುದಕ್ಕಿಂತ,’ಅಲ್ಪಸಂಖ್ಯಾತರಿಗೆ ಪ್ರತ್ಯೇಕ ವಿವಿ (ಅಥವಾ 50% ಮೀಸಲು ನೀಡುವ ವಿವಿ) ಅಗತ್ಯವಿದೆಯೇ?’ ಅನ್ನುವ ಪ್ರಶ್ನೆಯನ್ನು ಕೇಂದ್ರ ಸರ್ಕಾರಕ್ಕೆ ಮತ್ತು ಟಿಪ್ಪು ವಿವಿ ಬೆಂಬಲಿಸುತ್ತಿರುವವರಿಗೆ ಕೇಳ ಬಯಸುತ್ತೇನೆ?

ರಾಜ್ಯದಲ್ಲಿ ಈಗಾಗಲೇ ಇರುವ 20ಕ್ಕೂ ಹೆಚ್ಚು ರಾಜ್ಯದ ವಿವಿ ಮತ್ತು ಡೀಮ್ದ್ ವಿವಿಗಳಲ್ಲಿ ಇಲ್ಲದಿರುವ ಹೊಸತನವೇನಾದರೂ, ಶ್ರೀರಂಗ ಪಟ್ಟಣದಲ್ಲಿ ನಿರ್ಮಿಸ ಬಯಸಿರುವ ವಿವಿಯಲ್ಲಿ ಇರಲಿದೆಯೇ? ಮೈಸೂರಿನಲ್ಲೇ 2 ವಿವಿ ಇರುವಾಗ ಶ್ರೀರಂಗಪಟ್ಟಣದಲ್ಲಿ ಇನ್ನೊಂದ್ಯಾಕೆ ಅನ್ನುವುದು ಒಂದು ಪ್ರಶ್ನೆಯಾದರೆ,  ಜ್ಞಾನರ್ಜನೆಗಾಗಿಯೇ ವಿವಿಯನ್ನು ಸ್ಥಾಪಿಸುವ ಉದ್ದೇಶವಿದ್ದರೆ,ಅದರಲ್ಲಿ ಅಲ್ಪಸಂಖ್ಯಾತರಿಗೆ 50 ಪ್ರತಿಶತ ಮೀಸಲು ಯಾತಕ್ಕಾಗಿ? ಜ್ಞಾನಕ್ಯಾವ ಧರ್ಮ? ವಿದ್ಯೆ ಕಲಿಯಲು  ಬರುವವರು ಪದವಿಯ ವಿಷಯಗಳ ಮೇಲೆ ನಿರ್ಧರಿಸಿ ಒಂದು ವಿವಿಗೆ ಹೋಗುತ್ತಾರೋ? ಅಥವಾ ಅವರ ಧರ್ಮಕ್ಕೆ ಅನುಗುಣವಾಗಿ ವಿವಿಗಳನ್ನು ಆಯ್ಕೆ ಮಾಡಿಕೊಳ್ಳುತಾರೆಯೋ?

ಮತ್ತಷ್ಟು ಓದು »

5
ನವೆಂ

ಗಡ್ಕರಿಯ ಅ”ವಿವೇಕ” ಮತ್ತು ಸಂಘದ “ಸ್ವಾಮಿ”ನಿಷ್ಠೆ…!

– ರಾಕೇಶ್ ಶೆಟ್ಟಿ

“ಇನ್ನೊಬ್ಬ ವಿವೇಕಾನಂದನಿದ್ದಿದ್ದರೆ ಅವನಿಗೆ ತಿಳಿಯುತಿತ್ತು – ಈ ವಿವೇಕಾನಂದ ಏನು ಮಾಡಿದ್ದಾನೆ ಎಂದು… ಇರಲಿ, ಕಾಲಾಂತರದಲ್ಲಿ ಮತ್ತೆಷ್ಟು ಮಂದಿ ವಿವೇಕಾನಂದರು ಉದಿಸಲಿರುವರೋ!” ಸ್ವಾಮೀಜಿ ದೇಹತ್ಯಾಗದ ದಿನ ತಮ್ಮಷ್ಟಕ್ಕೆ ತಾವೇ ಹೇಳಿಕೊಂಡ ಮಾತುಗಳಿವು. ನಿಜ ವಿವೇಕಾನಂದ ಮಾಡಿ ಹೋಗಿದ್ದೇನು? ಯಾರನ್ನಾದರು ಕೇಳಿ ನೋಡಿ, ತಟ್ಟನೆ “ಅವರು ಸರ್ವ ಧರ್ಮ ಸಮ್ಮೇಳನದಲ್ಲಿ ಹಿಂದೂ ಧರ್ಮದ ಶ್ರೇಷ್ಠತೆಯನ್ನು ಜಗತ್ತಿಗೆ ಸಾರಿದರು” ಅಂತಲೇ ಹೇಳುತ್ತಾರೆ..ಮುಂದೇನು ಮಾಡಿದ್ದರು ಅಂತ ಕೇಳುವಷ್ಟರಲ್ಲಿ ಮಾತು ತಡವರಿಸುತ್ತದೆ… ಬಹುಷಃ ಇದೆಲ್ಲವನ್ನೂ ಅರಿತೇ ಸ್ವಾಮೀಜಿ ಬಹುಷಃ ಮೇಲಿನ ಮಾತನ್ನು ಹೇಳಿದ್ದರು ಅನ್ನಿಸುತ್ತದೆ.

ಆದರೆ,ಮುಂದೊಂದು ದಿನ ತಾನು ಪ್ರತಿಪಾದಿಸುತ್ತಿರುವ “ರಾಷ್ಟ್ರೀಯತೆ(?)” ಅನ್ನುವ ಪದವನ್ನು ಹಿಡಿದು ಪಕ್ಷವೊಂದು ಉದಯಿಸಬಹುದು ಮತ್ತು ಅದಕ್ಕೊಬ್ಬ ಮೇಧಾವಿ ಅಧ್ಯಕ್ಷ ಬಂದು ಅವನು “ಸ್ವಾಮಿ ವಿವೇಕಾನಂದರ ಬುದ್ದಿಮತ್ತೆಯನ್ನು ಮುಂಬೈನ ಕಪ್ಪು ಜಗತ್ತಿನ ಕಳ್ಳನಾಗಿದ್ದವನ ಬುದ್ದಿ ಮತ್ತೆಗೆ ಸರಿಸಮ” ಅಂತೇಳಬಹುದು ಅನ್ನುವುದನ್ನು ಮಾತ್ರ ಊಹಿಸಿರಲಿಕ್ಕಿಲ್ಲ…!

ಮತ್ತಷ್ಟು ಓದು »

20
ಆಕ್ಟೋ

ಬಿಜೆಪಿಯ ಅಪಸ್ವರಕ್ಕೆ ‘ಆರ್.ಎಸ್.ಎಸ್’ನದ್ದೇ ಟ್ಯೂನ್

– ರಾಕೇಶ್ ಶೆಟ್ಟಿ

ಅಂದು ಪಾಕಿಸ್ತಾನದ ನೆಲದಲ್ಲಿ ನಿಂತು “ಜಿನ್ನಾ ಜಾತ್ಯಾತೀತರಾಗಿದ್ದರು” ಅನ್ನುವ ಸತ್ಯ ಹೇಳಿದ್ದೆ ಆ ಹಿರಿಯ ಮಾಡಿದ ದೊಡ್ಡ ತಪ್ಪು(!).ಆ ಒಂದು ಮಾತು ಅವರು ಅಲ್ಲಿವರೆಗೂ ದೇಶದ ಮೂಲೆ ಮೂಲೆಗೆ ಹೋಗಿ ಅವರು ಪಕ್ಷಕಟ್ಟಲು ಪಟ್ಟ ಶ್ರಮ,೨ ಸೀಟಿನಿಂದ ಅಧಿಕಾರದ ಚುಕ್ಕಾಣಿ ಹಿಡಿಯುವವರೆಗೂ ಪಕ್ಷ ಸಾಗಿ ಬಂದ ಹಾದಿಯಲ್ಲಿ ಅವರು ವಹಿಸಿದ ಜವಬ್ದಾರಿ ಎಲ್ಲವನ್ನು ಮರೆಸಿಹಾಕಿತ್ತು.ಧುತ್ತನೆ ಅವರ ಮಾತೃ ಸಂಘಟನೆಗೆ ಈ ಹಿರಿಯ ನಾಯಕ ಮತ್ತು ಮುಂದಿನ ಲೋಕಸಭೆ ಚುನಾವಣೆಯ ಪ್ರಧಾನಿ ಅಭ್ಯರ್ಥಿಯಾಗಿದ್ದವರಿಗೆ ವಯಸ್ಸಾಯಿತು ಅನ್ನುವ ಜ್ನಾನೋದಯ ಅರ್ಧ ರಾತಿಯಲ್ಲಿ ಆಗಿಬಿಟ್ಟಿತ್ತಲ್ಲ,ಅಷ್ಟೇ ಸಾಕಿತ್ತು ಅವಮಾನಕಾರಿಯಾಗಿ ಅವರನ್ನು ಪಕ್ಕಕ್ಕೆ  ತಳ್ಳಿ,ಅಲ್ಲಿಯವರೆಗೂ ಮಹಾರಾಷ್ಟ್ರ ಬಿಟ್ಟು ಹೊರಗೆ ಹೆಸರೇ ಕೇಳಿರದ ‘ಯುವ ನಾಯಕ(?)’ ನನ್ನು ಪಕ್ಷದ ರಾಷ್ಟ್ರಾಧ್ಯಕ್ಷ ಸ್ಥಾನದಲ್ಲಿ ಪ್ರತಿಷ್ಠಾಪಿಸಲಾಯಿತು.

ಇವತ್ತಿಗೆ ‘ಆ ಹಿರಿಯ’ರನ್ನು ಮರೆತು ಮುಂದೆ ಹೋದ ಆ ಪಕ್ಷದ ಪಾಡು, ಅಹಂಕಾರದಿಂದ ಕೃಷ್ಣ ಪರಮಾತ್ಮನನ್ನು ಬಿಟ್ಟು ಬಿಲ್ವಿದ್ಯೆ ಮರೆತು ನಿಂತ ‘ಅರ್ಜುನ’ನಂತೆಯೇ ಆಗಿದೆ.ಕೂದಲು ಬೆಳೆಯೋ ಜಾಗವೆಲ್ಲ ತಲೆ ಅಂದುಕೊಂಡವರಂತೆ ಆ ಪಕ್ಷದಲ್ಲಿರುವ ಜನರೆಲ್ಲಾ ತಾವೇ ‘ಪ್ರಧಾನಿ ಅಭ್ಯರ್ಥಿ’ಗಳು ಅಂದುಕೊಂಡಿದ್ದಾರೆ.ಅಂದ ಹಾಗೆ,ಆ ಹಿರಿಯರ ಹೆಸರು ಲಾಲ್ ಕೃಷ್ಣ ಅಡ್ವಾಣಿ,ಪಕ್ಷ ಬಿಜೆಪಿ,ಮಾತೃ ಸಂಘಟನೆಯ ಹೆಸರು ‘ಆರ್.ಎಸ್.ಎಸ್’ ಮತ್ತೆ ಆ ಯುವನಾಯಕ(?) ಮೊನ್ನೆ ಮೊನ್ನೆ ತಾನೇ ಎಕರೆಗಟ್ಟಲೆ ರೈತರ ಜಮೀನು ಸ್ವಾಹ ಮಾಡಿದ್ದಾರೆ ಅನ್ನುವ ಆರೋಪ ಹೊತ್ತ ನಿತಿನ್ ಗಡ್ಕರಿ.

ಮತ್ತಷ್ಟು ಓದು »

6
ಫೆಬ್ರ

ದೇಶ – ಭಾಷೆಗಳ ನಡುವೆ

– ರಾಕೇಶ್ ಶೆಟ್ಟಿ

ಆಗ ದೇಶದಲ್ಲಿ ಆಹಾರ ಸಮಸ್ಯೆಯಿತ್ತು.ಅಂತ ಕ್ಲಿಷ್ಟಕರ ಸಮಯದಲ್ಲಿ ಪ್ರಧಾನಿಯಾಗಿದ್ದವರು ಲಾಲ್ ಬಹದ್ದೂರ್ ಶಾಸ್ತ್ರಿಗಳು.ಆಹಾರದ ಸಮಸ್ಯೆಗೆ ಅಮೇರಿಕಾ PL480 (food for peace) ಕಾರ್ಯಕ್ರಮದಲ್ಲಿ ಕಳಿಸುತಿದ್ದ ಗೋಧಿ ತುಂಬಾ ಕಳಪೆ ಮಟ್ಟ ಮುಟ್ಟಿದಾಗ,ಅಂತ ಗೋಧಿಯನ್ನ ಬಳಸುವುದನ್ನ ವಿರೋಧಿಸಿದ ಶಾಸ್ತ್ರಿಗಳು ‘ಇಂತ ಅವಮಾನದ ಬದಲು ಒಪ್ಪೊತ್ತು ಉಪವಾಸ ಇರೋಣ’ ಅಂತ ದೇಶದ ಜನಕ್ಕೆ ಕರೆ ಕೊಟ್ಟಿದ್ದರು,ಹಾಗೆ ಕರೆಕೊಡುವ ಮೊದಲೇ ಅವರ ಮನೆಯಲ್ಲಿ ರಾತ್ರಿ ಅಡಿಗೆ ಮಾಡುವಂತಿಲ್ಲ ಅಂತ ಹೇಳಿದ್ದರು! , ‘ನೀ ಬಯಸುವ ಬದಲಾವಣೆ ನಿನ್ನಿಂದಲೇ ಆಗಲಿ’ ಅನ್ನುವ ಗಾಂಧೀ ಮಾತನ್ನ ಪಾಲಿಸಿ ತೋರಿಸಿದ್ದರು ಶಾಸ್ತ್ರಿಗಳು!

ಆರ್.ಎಸ್.ಎಸ್ ನ ಎರಡನೇ ಸರಸಂಘಚಾಲಕರಾದ ಶ್ರೀ ಮಾಧವ ಸದಾಶಿವ ಗೋಲ್ವಾಲ್ಕರ್ ಅವರ “ಚಿಂತನಗಂಗಾ” ಪುಸ್ತಕದ ಸುತ್ತ ಅಂತರ್ಜಾಲದಲ್ಲಿ ನಡೆಯುತ್ತಿರುವ ಚರ್ಚೆ ಫ಼ಾಲೋ ಮಾಡುವಾಗ “ಸಂಘದಲ್ಲಿ ವಿಚಾರ ಸ್ವಾತಂತ್ರವಿದೆಯೇ” ಎನ್ನುವ ಪದ ಬಳಕೆ ನೋಡಿ ನಗು ಬಂತು.ಅಸಲಿಗೆ ಯಾವುದೇ ಸಂಘಟನೆ,ಸ್ವಸ್ಥ ಸಮಾಜದಲ್ಲಿ ವಿಚಾರ ಸ್ವಾತಂತ್ರ್ಯವಿರಲೇಬೇಕು ಅದು ಇರಲಿ ಅಂತ ಕೇಳುವುದು ತಪ್ಪೇನು ಅಲ್ಲ.ಆದರೆ ವಿಚಾರ ಸ್ವಾತಂತ್ರ್ಯದ ಬಗ್ಗೆ ಕೇಳಿದವರು ಯಾರು ಅನ್ನುವುದು ಮುಖ್ಯವಾಗುತ್ತದಲ್ಲವೇ? ವೇದಾಂತ ಇರೋದು ಬೇರೆಯವ್ರಿಗೆ ಹೇಳೋಕ್ ಮಾತ್ರ ಅಂದುಕೊಂಡವರಿಗಾಗಿಯೇ ಗಾಂಧೀಜಿಯವರು ‘ನೀ ಬಯಸುವ ಬದಲಾವಣೆ ನಿನ್ನಿಂದಲೇ ಆಗಲಿ’  ಅಂದಿದ್ದು.

ಮತ್ತಷ್ಟು ಓದು »