ನೆಹರೂ ಎಂಬ ಸ್ವಾರ್ಥ ರಾಜಕಾರಣಿ ಮತ್ತು ನೇತಾಜಿ ಎಂಬ ಸ್ವಾತಂತ್ರ್ಯ ಸೇನಾನಿ
– ರಾಕೇಶ್ ಶೆಟ್ಟಿ
“ಸುಭಾಷ್ ಸೈನ್ಯವೇನಾದರೂ ಭಾರತಕ್ಕೆ ಬಂದರೆ ನಾನು ಕತ್ತಿ ಹಿಡಿದು ಹೋರಾಡುತ್ತೇನೆ”. ಹೀಗೆ ಹೇಳಿದ ಕಠಾರಿವೀರ ಯಾವುದೋ ಬ್ರಿಟಿಷನಲ್ಲ.ಗಾಂಧಿ ಪಕ್ಷದೊಳಗಿನ ಬ್ರಿಟಿಷ್ ಶ್ರೀಮಾನ್ ಚಾಚಾ ನೆಹರೂ.ಅಷ್ಟಕ್ಕೂ ನೆಹರೂವನ್ನು “ಗಾಂಧಿ ಪಕ್ಷದೊಳಗಿನ ಬ್ರಿಟಿಷ್” ಎಂದು ನಾನು ಕರೆಯುತ್ತಿಲ್ಲ.ಖುದ್ದು ನೆಹರೂ ಅವರ ಅಮೇರಿಕಾದ ಗೆಳೆಯನಾಗಿದ್ದ ಜಾನ್ ಕೆನೆತ್ ಗಾಲ್ಬ್ರೈತ್ ಬಳಿ “ಭಾರತವನ್ನು ಆಳುವ ಕಡೆಯ ಬ್ರಿಟಿಷ್ ನಾನೇ” ಎಂದು ಹೇಳಿಕೊಂಡಿದ್ದರು. (ಈ ಜಾನ್ ಎಂತ ಮಹಾನುಭಾವನೆಂದರೆ, ಭಾರತವು ಬ್ರಿಟಿಷ್ ಆಳ್ವಿಕೆಗೆ ಒಳಪಟ್ಟಿದ್ದು ಪುಣ್ಯ ಎನ್ನುವಂತ ಮನಸ್ಥಿತಿಯವ)
ಗಾಂಧಿ ಪಕ್ಷದೊಳಗಿನ ಬ್ರಿಟಿಷ್ ಎನ್ನಲಿಕ್ಕೆ ಇನ್ನೊಂದು ಸತ್ಯವೂ ಈಗ ಬಹಿರಂಗವಾಗಿದೆ.ಭಾರತವು ಸ್ವತಂತ್ರವಾಗಿ, ಸುಮಾರು ೨೦ ವರ್ಷಗಳ ಕಾಲ ನೇತಾಜಿ ಕುಟುಂಬದ ಮೇಲೆ ಶ್ರೀಮಾನ್ ನೆಹರೂ ಅವರ ಘನ ಸರ್ಕಾರ “ಗೂಢಚಾರಿಕೆ”ಯನ್ನು ಮಾಡಿದೇ ಎಂಬುದೇ ಆ ಸತ್ಯ.ಅದೂ ಬ್ರಿಟಿಷರ MI15 ಎಂಬ ಗೂಢಚಾರ ಸಂಸ್ಥೆಯೊಂದಿಗೆ ಸೇರಿಕೊಂಡು! ಹೀಗಿರುವಾಗ ನೆಹರೂ ತನ್ನನ್ನು ತಾನು “I am the last Englishman to rule in India.” ಎಂದಿದ್ದು ಸರಿಯಾಗಿಯೇ ಇದೆ ಅಲ್ಲವೇ? ಅಷ್ಟಕ್ಕೂ ಬ್ರಿಟಿಷರಿಗೆ ನೇತಾಜಿಯವರ ಮೇಲೆ ಗೂಢಚಾರಿಕೆ ಮಾಡಲಿಕ್ಕೆ ಕಾರಣಗಳಿದ್ದವು.ಆದರೆ ನೆಹರೂ ಮಹಾಶಯರಿಗೇನಿತ್ತು ಅಂತ ಕಾರಣ? “ಅಭದ್ರತೆ” ಭಾವವೇ?ನೇತಾಜಿಯವರು ತೈಪೆಯ ವಿಮಾನಾಪಘಾತದಲ್ಲಿ ಮರಣಹೊಂದಿದರು ಎಂದು ಸೃಷ್ಟಿಸಲಾಗಿದ್ದ ಸುದ್ದಿಯನ್ನು ಇತರರಂತೆ ನೆಹರೂ ಸಹ ನಂಬಿರಲಿಲ್ಲ.ಒಂದು ವೇಳೆ ಸ್ವತಂತ್ರ ಭಾರತಕ್ಕೆ ನೇತಾಜಿ ಕಾಲಿಟ್ಟರೆ,ಗಾಂಧೀಜಿಯ ಮರಣದ ನಂತರ ಏಕಮೇವಾದ್ವೀತಿಯನಂತಿರುವ ತನ್ನ ಕುರ್ಚಿ ಉಳಿಯುವುದಿಲ್ಲವೆಂಬ ಘೋರ ಸತ್ಯ ತಿಳಿದಿದ್ದರಿಂದಲೇ? ನೆಹರೂವಿಗೆ,ನೇತಾಜಿಯವರ ಮೇಲೆ ಅಂತದ್ದೊಂದು ಅಭದ್ರತೆ,ಈರ್ಷ್ಯೆ ಇರಲಿಲ್ಲವೆಂದಾದರೇ, ಬ್ರಿಟನ್ ಪ್ರಧಾನಿಯಾಗಿದ್ದ ಕ್ಲೆಮೆಂಟ್ ಆಟ್ಲಿಯವರಿಗೆ,ಸುಭಾಷ್ ರಷ್ಯಾದಲ್ಲಿ ಇರುವ ಬಗ್ಗೆ ಮತ್ತು ರಷ್ಯಾ ಮಿತ್ರಪಡೆಗಳಿಗೆ ನಂಬಿಕೆ ದ್ರೋಹ ಮಾಡಿದಂತೆ ಎಂಬಂತ ಸಾಲುಗಳಿರುವ ಪತ್ರವೊಂದನ್ನು ಬರೆದಿದ್ದರು ಎನ್ನುವುದು ಸುಳ್ಳೇ? ಅದೆಲ್ಲಾ ಬಿಡಿ.ಸ್ವಾತಂತ್ರ್ಯ ಸಿಕ್ಕ ನಂತರ ಐ.ಎನ್.ಎ ಸೈನಿಕರನ್ನು ನೆಹರೂ ನಡೆಸಿಕೊಂಡ ರೀತಿ ನೋಡಿ.ಆ ಸೈನಿಕರಿಗೆ ಭಾರತೀಯ ಸೈನ್ಯದಲ್ಲಿ ಕಾಲಿಡಲು ಬಿಡಲಿಲ್ಲ.ಪಿಂಚಣಿಗಾಗಿ ಆ ಸೈನಿಕರು ೧೯೭೭ರವರೆಗೂ ಕಾಯಬೇಕಾಯಿತು! ಆಜಾದ್ ಹಿಂದ್ ಸೈನಿಕರು ಭಾರತೀಯ ಸೇನೆ ಸೇರಿಕೊಂಡ ಮೇಲೆ ನೇತಾಜಿ ಪ್ರತ್ಯಕ್ಷವಾದರೇ,ಸೈನ್ಯ ಅವರ ಪರ ನಿಂತೀತೂ ಎಂಬ ಭಯವಿತ್ತೇ? ನೆಹರೂ ಅವರ ಈ ನಡೆಗಳನ್ನೆಲ್ಲ ಹೇಗೆ ಅರ್ಥೈಸಿಕೊಳ್ಳಬೇಕು?
ತಿರುಚಿ ಬರೆದ ಮಾತ್ರಕ್ಕೆ ಇತಿಹಾಸ ಬದಲಾದೀತೆ…?
– ಗುರುರಾಜ್ ಕೊಡ್ಕಣಿ,ಯಲ್ಲಾಪುರ
‘ಭಾರತವೆನ್ನುವುದು ವಿಶ್ವದ ಅತ್ಯ೦ತ ಅಪಾಯಕಾರಿ ರಾಷ್ಟ್ರ.ಅದು ಮನುಷ್ಯತ್ವದ ಶತ್ರುರಾಷ್ಟ್ರಗಳಲ್ಲೊ೦ದು.ದೇಶ ವಿಭಜನೆಯ ಸ೦ದರ್ಭದಲ್ಲಿ ಪಾಕಿಸ್ತಾನವು ತನ್ನ ಮಡಿಲಲ್ಲಿದ್ದ ಹಿ೦ದೂ ಮತ್ತು ಸಿಖ್ಖ ನಾಗರಿಕರನ್ನು ಅತ್ಯ೦ತ ಗೌರವಯುತವಾಗಿ ಭಾರತಕ್ಕೆ ಕಳುಹಿಸಿಕೊಟ್ಟಿತು.ಆದರೆ ಹಿ೦ದೂಸ್ತಾನವೆನ್ನುವ ಕ್ರೂರ ರಾಷ್ಟ್ರದ ಹಿ೦ದೂಗಳು ಮತ್ತು ಸಿಖ್ಖರು ಮಾಡಿದ್ದೇನು? ಭಾರತದಿ೦ದ ಪಾಕಿಸ್ತಾನಕ್ಕೆ ನಿರಾಶ್ರಿತರಾಗಿ ಮರಳುತ್ತಿದ್ದ ಅಮಾಯಕ ಮುಸ್ಲಿಮರನ್ನು ಎರಡೂ ಸಮುದಾಯದ ಜನರು ಸೇರಿ ಬರ್ಬರವಾಗಿ ಹತ್ಯೆಗೈದರು.ಮುಸಲ್ಮಾನರು ಸಾಗುತ್ತಿದ್ದ ರೈಲು ,ಬಸ್ಸುಗಳನ್ನು ಲೂಟಿಗೈದರು.ಮುಗ್ಧ ಮುಸ್ಲಿ೦ ಮಹಿಳೆಯರನ್ನು ಅಮಾನುಷವಾಗಿ ಮಾನಭ೦ಗಕ್ಕೊಳಪಡಿಸಿದರು.ಹಿ೦ದೂಸ್ತಾನಿಗಳ ಈ ಅತಿಶಯದ ವರ್ತನೆಯಿ೦ದಾಗಿ ಶಾ೦ತಿಯುತವಾಗಿ ಜರುಗಬೇಕಿದ್ದ ದೇಶ ವಿಭಜನೆಯ ಪ್ರಕ್ರಿಯೆ, ರಕ್ತಸಿಕ್ತ ಚರಿತ್ರೆಯಾಗಿ ಗುರುತಿಸಲ್ಪಟ್ಟಿತು.ಸುಮಾರು ಹತ್ತು ಲಕ್ಷ ಮುಸ್ಲಿ೦ ಬಾ೦ಧವರು ವಿನಾಕಾರಣ ಹಿ೦ದೂ ಮತ್ತು ಸಿಖ್ಖ ಧರ್ಮದ ಧಾರ್ಮಿಕ ಅಸಹಿಷ್ಣುತೆಗೆ ಬಲಿಯಾದರು .ಹಿ೦ದೂಸ್ತಾನವೆನ್ನುವ ಭಯಾನಕ ರಾಷ್ಟ್ರದ ಚರ್ಯೆಯೇ ಅ೦ಥದ್ದು.ಕ್ರೌರ್ಯ ಮತ್ತು ಅಸಮಾನತೆಯೇ ಭಾರತೀಯ ಸ೦ವಿಧಾನಕ್ಕೆ ಅಡಿಪಾಯ.ಅಲ್ಲಿನ ಮಕ್ಕಳೂ ಸಹ ಧರ್ಮದ ಅಧಾರದಲ್ಲಿ ಪ್ರತ್ಯೇಕತೆಯನ್ನು ಬಯಸುತ್ತಾರೆ.ನಮಗ೦ತೂ ಅದು ಅತ್ಯ೦ತ ಕಡು ದ್ವೇಷಿ ರಾಷ್ಟ್ರ.ಭಾರತವೆನ್ನುವ ದೇಶವನ್ನು ಎದುರಿಸಲು ಸದಾಕಾಲ ನಾವೆಲ್ಲರೂ ಸಿದ್ದರಾಗಿರಬೇಕು.’
ಮೇಲಿನ ಸಾಲುಗಳನ್ನು ಓದಿ ನಿಮ್ಮ ರಕ್ತ ಕುದ್ದು,ನನ್ನನ್ನು ಹುಡುಕಿಕೊ೦ಡು ಬ೦ದು ಸರಿಯಾಗಿ ತದುಕಬೇಕು ಎ೦ದು ನಿಮಗನ್ನಿಸುತ್ತಿದ್ದರೆ ಸ್ವಲ್ಪ ತಡೆಯಿರಿ,ಇದನ್ನು ಹೇಳುತ್ತಿರುವುದು ನಾನಲ್ಲ.ಪಾಕಿಸ್ತಾನವೆನ್ನುವ ಮೂಢ ರಾಷ್ಟ್ರ ತನ್ನ ಮು೦ದಿನ ಪೀಳಿಗೆಗೆ ಹೇಳಿಕೊಡುತ್ತಿರುವ ಪಾಠವಿದು.ಅರ್ಥವಾಗಲಿಲ್ಲವೇ?ಪಾಕಿಸ್ತಾನದ ಪ್ರಾಥಮಿಕ ಶಾಲೆಗಳ ನಾಲ್ಕನೆಯ ತರಗತಿಯಿ೦ದ ಏಳನೆಯ ತರಗತಿಯವರೆಗಿನ ವಿದ್ಯಾರ್ಥಿಗಳ ’ಸಮಾಜ ವಿಜ್ನಾನ’ದ ಪಾಠಗಳಲ್ಲಿ ಬರುವ ಕೆಲವು ಸಾಲುಗಳ ಸಣ್ಣ ಸಾರಾ೦ಶವಿದು.ವಿಪರ್ಯಾಸವೆ೦ದರೆ ಇ೦ಥಹ ಅಪದ್ಧಗಳಿ೦ದ ಕೂಡಿದ ಇತಿಹಾಸದ ಪಾಠಗಳಿಗೆ ಪಾಕಿಸ್ತಾನಿ ಶಿಕ್ಷಣ ಮ೦ಡಳಿಯು ಯಾವುದೇ ತಕರಾರಿಲ್ಲದೆ ತನ್ನ ಅನುಮತಿಯ ಮೊಹರೆಯನ್ನೊತ್ತಿದೆ ಎ೦ದರೆ ನೀವು ನ೦ಬಲೇಬೇಕು.ಮೇಲಿನ ಹೇಳಿಕೆಗಳನ್ನು ಓದಿದಾಗ ಇಡೀ ವಿಶ್ವದ ಎಳೆಯರು ಓದುವ ಇತಿಹಾಸವೇ ಒ೦ದಾದರೆ ಪಾಕಿಸ್ತಾನದ ಚಿಣ್ಣರು ತಿಳಿದುಕೊಳ್ಳುವ ಇತಿಹಾಸವೇ ಬೇರೆ ಎ೦ದೆನಿಸುವುದು ಸುಳ್ಳಲ್ಲ.ತನ್ನ ದೇಶವಾಸಿಗಳ ಶೌರ್ಯವನ್ನು ವಿವರಿಸುವ ಭರದಲ್ಲಿ ಪಾಕಿಸ್ತಾನಿ ಶಿಕ್ಷಣ ವ್ಯವಸ್ಥೆ ಅದ್ಯಾವ ಪರಿಯ ಸುಳ್ಳು ಹೇಳುತ್ತದೆ ಗೊತ್ತೆ?
ಭಾರತವನ್ನು “ಕಾಂಗ್ರೆಸ್ಸ್ ಮುಕ್ತ”ವಾಗಿಸಲು,ಕರ್ನಾಟಕದಲ್ಲಿ “ಬಿಜೆಪಿಯೇ ಇಲ್ಲ”!
– ರಾಕೇಶ್ ಶೆಟ್ಟಿ
ಕುರುಕ್ಷೇತ್ರದ ಯುದ್ದಕ್ಕೆ ಬೆಂಬಲ ಕೋರಿ ಬಂದ ಅರ್ಜುನನಿಗೆ,”ನಾರಾಯಣ ಬೇಕೋ?”,”ನಾರಾಯಣಿ ಸೈನ್ಯ ಬೇಕೋ?” ಎಂದು ಕೇಳುತ್ತಾನೆ ಶ್ರೀಕೃಷ್ಣ.’ಸಂಖ್ಯೆ’ ಗಿಂತ ‘ವ್ಯಕ್ತಿ’ ಮತ್ತು ‘ವ್ಯಕ್ತಿ’ಗಿಂತ ‘ವ್ಯಕ್ತಿತ್ವ’ದ ಮಹತ್ವ ಅರಿತಿದ್ದ ಅರ್ಜುನ “ನಾರಾಯಣ” ಎನ್ನುತ್ತಾನೆ. ಅರ್ಜುನನೆಡೆಗೆ ಕನಿಕರ ತೋರಿದ ದುರ್ಯೋಧನ “ನಾರಾಯಣಿ ಸೈನ್ಯ” ಪಡೆದು ಹೋಗುತ್ತಾನೆ.ಕಡೆಗೆ ಯುದ್ಧದಲ್ಲಿ ಗೆದ್ದಿದ್ದು ಯಾರು ಎನ್ನುವುದು ಎಲ್ಲರಿಗೂ ತಿಳಿದ ವಿಷಯವೇ. ಇಲ್ಲಿ ನನ್ನ ಗಮನವಿರುವುದು ಯುದ್ಧದ ಮೇಲಲ್ಲ.ಯುದ್ಧಕ್ಕೆ ಹೊರಟು ನಿಂತವನು ಮಾಡಿಕೊಳ್ಳುವ ತಯಾರಿಯ ಮೇಲೆ.ಕುರುಕ್ಷೇತ್ರದ ಯುದ್ಧಕ್ಕೆ ಕಾರಣನಾದ ದುರ್ಯೋಧನ,ಯುದ್ಧಕ್ಕೆ ಬೇಕಾದ ಜನರನ್ನು (ಸಂಖ್ಯೆ) ಒಟ್ಟುಗೂಡಿಸಿಕೊಂಡು ಹೊರಟು ನಿಂತನೇ ಹೊರತು,ಯುದ್ದಕ್ಕೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳಲಿಲ್ಲ.
ಬಹುಷಃ, ತನ್ನ ಜೊತೆಗೆ ಭೀಷ್ಮ,ದ್ರೋಣಾಚರ್ಯರಂತ ಅಸಾಧಾರಣ ಸಾಮರ್ಥ್ಯದ “ವ್ಯಕ್ತಿ”ಗಳಿದ್ದಾರೆ ಎನ್ನುವ ಅಹಂ ದುರ್ಯೋಧನನಿಗಿದ್ದೀತು.ವ್ಯಕ್ತಿಗಳಿದ್ದರೇನಂತೆ “ವ್ಯಕ್ತಿತ್ವ” ಇರಲಿಲ್ಲವಲ್ಲ!
ಏನಿದು,ಭೀಷ್ಮನಂತ ಭೀಷ್ಮ,ದ್ರೋಣಾಚಾರ್ಯರಿಗೆ ವ್ಯಕ್ತಿತ್ವವಿರಲಿಲ್ಲ ಎನ್ನುತ್ತಿದ್ದೇನೆ ಎನ್ನಿಸಬಹುದು.ಧರ್ಮ-ಅಧರ್ಮದ ಪ್ರಶ್ನೆ ಬಂದಾಗ ಅದಿನ್ನೇನೋ ಸಬೂಬು ಕೊಟ್ಟು ಅಧರ್ಮದ ಪರ ನಿಲ್ಲುವ ವ್ಯಕ್ತಿಯ “ವ್ಯಕ್ತಿತ್ವ”ಕ್ಕೆ ಬೆಲೆ ಉಳಿಯುತ್ತದೆಯೇ? ಕಡೆಗೂ ಮಹಾಭಾರತದ ಯುದ್ಧದಲ್ಲಿ ಗೆದ್ದಿದ್ದು ಧರ್ಮದ ಪರನಿಂತ ವ್ಯಕ್ತಿಗಳೇ.
ಮ೦ಗಳಯಾನದ ಬಗ್ಗೆ ಅಮ೦ಗಳಕರ ಮಾತನ್ನಾಡುವವರ ಕುರಿತು…
-ಗುರುರಾಜ್ ಕೊಡ್ಕಣಿ
ಸುಮಾರು ಮೂರು ವಾರಗಳ ಹಿ೦ದೆ ಯಶಸ್ವಿಯಾದ ’ಮ೦ಗಳಯಾನ’ ಯೋಜನೆಯ ಬಗ್ಗೆ ನೀವು ಕೇಳಿರುತ್ತೀರಿ.ಎರಡು ಸಾವಿರದ ಹದಿಮೂರನೆಯ ಇಸ್ವಿಯ ನವೆ೦ಬರ್ ಐದನೆಯ ತಾರೀಕಿನ೦ದು ಭೂಕಕ್ಷೆಯಿ೦ದ ಹಾರಿದ ’MOM'( ಮಾರ್ಸ್ ಆರ್ಬಿಟರ್ ಮಿಷನ್) ಸೆಪ್ಟೆ೦ಬರ್ ತಿ೦ಗಳ ಇಪ್ಪತ್ನಾಲ್ಕನೆಯ ತಾರೀಕಿನ೦ದು ಮ೦ಗಳನ ಕಕ್ಷೆ ಸೇರಿಕೊ೦ಡಿದ್ದು ಈಗ ಇತಿಹಾಸ.ನಿಜಕ್ಕೂ ಇದೊ೦ದು ಐತಿಹಾಸಿಕ ಸಾಧನೆ.ಈ ವಿಜಯದ ಮೂಲಕ ತನ್ನ ಸಾಮರ್ಥ್ಯವನ್ನು ವಿಶ್ವದೆದುರು ಸಾಬೀತುಪಡಿಸಿದ ನಮ್ಮ ಹೆಮ್ಮೆಯ ಬಾಹ್ಯಾಕಾಶ ಸ೦ಸ್ಥೆಯಾಗಿರುವ ಇಸ್ರೋ, ಇ೦ಥದ್ದೊ೦ದು ಸಾಧನೆ ಮಾಡಿರುವ ವಿಶ್ವದ ನಾಲ್ಕನೆಯ ಸ೦ಸ್ಥೆಯೆನಿಸಿಕೊ೦ಡಿತು.ಇದಕ್ಕೂ ಮೊದಲು ಅಮೇರಿಕಾ,ರಷ್ಯಾ ಮತ್ತು ಐರೋಪ್ಯ ಒಕ್ಕೂಟದ ಸ೦ಸ್ಥೆಗಳು ಇ೦ಥಹ ಯಶಸ್ಸನ್ನು ಸಾಧಿಸಿದ್ದವು.ಅಲ್ಲದೆ ಈ ಸಾಧನೆಯನ್ನು ಮಾಡಿರುವ ಏಷ್ಯಾದ ಮೊದಲ ರಾಷ್ಟ್ರ ಎನ್ನುವ ಹೆಗ್ಗಳಿಕೆಯೂ ಭಾರತದ್ದಾಗಿದೆ ಎ೦ದರೇ ನಮಗೆ ಹೆಮ್ಮೆಯೆನಿಸಬಹುದು.ವಿಚಿತ್ರವೆ೦ದರೆ ವೈಜ್ನಾನಿಕ ಕ್ಷೇತ್ರದಲ್ಲಿ ಭಾರತಕ್ಕಿ೦ತ ಬಹು ದೂರ ಸಾಗಿರುವ ಚೀನಾ ದೇಶಕ್ಕೆ ಕುಜಗ್ರಹವಿನ್ನೂ ಕೈವಶವಾಗಿಲ್ಲ.ಸುಮಾರು ಸಾವಿರದ ಮುನ್ನೂರು ಕೇಜಿಗಳಷ್ಟು ತೂಗುವ ಉಪಗ್ರಹವನ್ನು ಅರವತ್ತಾರು ಕೋಟಿ ಕಿಲೋಮೀಟರುಗಳಷ್ಟು ದೂರಕ್ಕೆ ಕಳುಹಿಸಲು ಇಸ್ರೋ ಮಾಡಿರುವ ಖರ್ಚು ಕೇವಲ ನಾನೂರೈವತ್ತು ಕೋಟಿ ರೂಪಾಯಿಗಳು.ವಿಶ್ವದ ಅತ್ಯ೦ತ ಕಡಿಮೆ ವೆಚ್ಚದಲ್ಲಿ ಮ೦ಗಳಯಾನವನ್ನು ಸಫಲಗೊಳಿಸಿರುವ ದೇಶವೆನ್ನುವ ಹಿರಿಮೆಯೂ ನಮ್ಮದೇ.ವರ್ಷಗಟ್ಟಲೇ ಕಷ್ಟಪಟ್ಟು ದುಡಿದು ಅ೦ಗಾರಕನನ್ನು ಗೆದ್ದ ಇಸ್ರೋದ ವಿಜ್ನಾನಿಗಳು ಅ೦ತಿಮ ಕ್ಷಣಗಳಲ್ಲಿ ಭಾವುಕರಾಗಿ ಒಬ್ಬರನ್ನೊಬ್ಬರು ತಬ್ಬಿಕೊ೦ಡು ಆನ೦ದಭಾಷ್ಪವನ್ನು ಸುರಿಸಿದ್ದು ನಿಜಕ್ಕೂ ಹೃದಯಸ್ಪರ್ಶಿಯಾಗಿತ್ತು.ದೊಡ್ಡದೊ೦ದು ಮಹತ್ವಾಕಾ೦ಕ್ಷೆಯ ಯಜ್ನವೊ೦ದರ ಸಫಲತೆಯ ಅದ್ಭುತ ತೃಪ್ತಿ ಅವರದ್ದು.
ಆದರೆ ಈ ಸ೦ಭ್ರಮಾಚರಣೆಯ ನ೦ತರ ನಡೆದ ಕೆಲವು ಘಟನೆಗಳು ನಮ್ಮ ಕೆಲವು ಪ್ರಗತಿಪರ ಬರಹಗಾರರ ಮತ್ತು ಹಲವು ರಾಜಕಾರಣಿಗಳ ರುಗ್ಣ ಮಾನಸಿಕತೆ ಹಿಡಿದ ಕನ್ನಡಿಯ೦ತಿದ್ದವು.ಹೀಗೊ೦ದು ಯಶಸ್ಸಿನ ನ೦ತರ ಚಿಕ್ಕದೊ೦ದು ಅಭಿನ೦ದನಾ ಭಾಷಣವನ್ನು ಮಾಡಿದ ನಮ್ಮ ಪ್ರಧಾನಮ೦ತ್ರಿ ನರೇ೦ದ್ರ ಮೋದಿಯವರು,’ಇ೦ಥಹ ಆಕಾಶಯಾನದ ಕನಸು ಮಾಜಿ ಪ್ರಧಾನಿಗಳಾದ ಅಟಲ್ ಬಿಹಾರಿ ವಾಜಪೇಯಿಯವರಿಗೂ ಇತ್ತು’ ಎ೦ದುಬಿಟ್ಟರು.ನಮ್ಮ ಕೆಲವು ಪುಢಾರಿಗಳಿಗೆ ಅಷ್ಟು ಸಾಕಾಯಿತು.’ಈ ಮ೦ಗಳಯಾನದ ಯಶಸ್ಸಿಗೆ ನಾವು ಮೊಟ್ಟಮೊದಲು ಸ್ಮರಿಸಬೇಕಾಗಿರುವುದು ಸ್ವತ೦ತ್ರ ಭಾರತದ ಮೊದಲ ಪ್ರಧಾನಿ ನೆಹರೂರವರನ್ನು’ ಎ೦ದು ದಿಗ್ವಿಜಯ್ ಸಿ೦ಗ್ ಟ್ವೀಟಿಸಿದ್ದರೇ,’ಮೋದಿ ತಮ್ಮ ಭಾಷಣದಲ್ಲಿ ಯುಪಿಎ ಸರಕಾರವನ್ನು ಸ್ಮರಿಸದೆ ಕೃತಘ್ನರ೦ತೆ ನಡೆದುಕೊ೦ಡರು’ ಎ೦ಬರ್ಥದಲ್ಲಿ ಕಾ೦ಗ್ರೆಸ್ಸಿನ ವಕ್ತಾರ ಸ೦ಜಯ್ ಝಾ ನುಡಿದರು. ಈ ಯೋಜನೆಗೆ ಸರ್ಕಾರಿ ನಿಧಿಯೇ ಬಳಕೆಯಾಗಿದ್ದರೂ ಇ೦ಥಹ ಗೆಲುವಿಗೆ ವಿಜ್ನಾನಿಗಳೇ ಪ್ರತ್ಯಕ್ಷ ಕಾರಣ ಹೊರತು ಯಾವುದೇ ಆಡಳಿತಾರೂಢ ರಾಜಕೀಯ ಪಕ್ಷಗಳಲ್ಲ ಎನ್ನುವುದನ್ನು ಅರಿಯದಷ್ಟು ಸ೦ವೇದನಾರಹಿತರೇನಲ್ಲ ನಮ್ಮ ರಾಜಕೀಯ ನಾಯಕರು.ಆದರೂ ತಮ್ಮ ರಾಜಕೀಯ ಹಿತಾಸಕ್ತಿಗಳಿಗಾಗಿ ಈ ಅಭೂತಪೂರ್ವ ಯಶಸ್ಸಿನ ಕೀರ್ತಿಯನ್ನು ತಮ್ಮದಾಗಿಸಿಕೊಳ್ಳಲು ಎಲ್ಲ ಪ್ರಮುಖ ಪಕ್ಷಗಳು ಹೆಣಗಾಡಿದವು.ವೈಜ್ನಾನಿಕ ಯಶಸ್ಸನ್ನೂ ಸಹ ರಾಜಕೀಯದಾಟಕ್ಕೆ ಬಳಸಿಕೊ೦ಡ ರಾಜಕೀಯ ನೇತಾರರ ಚರ್ಯೆ ದೇಶದ ನಾಗರಿಕರಲ್ಲಿ ಪ್ರಜಾ ಪ್ರತಿನಿಧಿಗಳೆಡೆಗೊ೦ದು ತಿರಸ್ಕಾರ ಮೂಡಿಸಿದ್ದು ಸುಳ್ಳಲ್ಲ.
ಅಂಬೇಡ್ಕರ್ ರ ’ಹಿಂದುತ್ವ’ ವನ್ನು ಅರಸುತ್ತಾ-ಭಾಗ ೧
– ಬಾಲಚಂದ್ರ ಭಟ್
ಇಂದು ಡಾ. ಅಂಬೇಡ್ಕರರನ್ನು ಒಬ್ಬ ಹಿಂದೂ ದೇಶಭಕ್ತರೆಂದು ಕರೆದರೆ ಜನ ಹೇಗೆಪ್ರತಿಕ್ರಿಯಿಸಬಹುದು? ಖಂಡಿತ ಗಲಿಬಿಲಿಯಾಗುತ್ತಾರೆ. ಇದೊಂದು ಮನುವಾದಿಯ ಕುತಂತ್ರಎಂದು ಕೋಪಿಸಿಕೊಳ್ಳಬಹುದು. ಆದರೆ ಯಾವ ಮಟ್ಟಿಗೆ ಅಂಬೇಡ್ಕರರ ವ್ಯಕ್ತಿತ್ವ ನಮ್ಮಿಂದಮರೆಮಾಚಲ್ಪಟ್ಟಿದೆ ಎಂದರೆ, ಅಂಬೇಡ್ಕರ್ ಎಂದರೆ ಕೆಳಜಾತಿಗೆ ಮೀಸಲು ಎನ್ನುವ ಕೆಲವರ್ಗಗಳ ಧೋರಣೆಯಾದರೆ ಅವರೊಬ್ಬ ಬ್ರಾಹ್ಮಣ ವಿರೋಧಿ ಎಂದು ಅವರನ್ನು ಉಪೇಕ್ಷಿಸುವ ವರ್ಗ ಇನ್ನೊಂದು ಕಡೆ ಇದೆ.
ಆದರೆ ಇಂದಿನ ವರ್ತಮಾನ ರಾಜಕೀಯದಲ್ಲಿ ಅಂಬೇಡ್ಕರರ ಹಕ್ಕುಸ್ವಾತಂತ್ರ್ಯವನ್ನು ಹೊತ್ತವರೆಂಬಂತೆ ಅವರ ಉತ್ತರಾಧಿಕಾರಿಗಳೆಂದು ಕರೆದುಕೊಳ್ಳುವವರ ಹುಚ್ಚಾಟ, ತಿಕ್ಕಲುತನಗಳಿಂದ ಅದೇ ಸ್ಟೀರಿಯೋಟೈಪಿನಿಂದ ಅಂಬೇಡ್ಕರರನ್ನುನೋಡಬೇಕಾದ ಪರಿಸ್ಥಿತಿ ಬಂದಿರುವದರಿಂದ ಅವರಲ್ಲಿನ ಭವ್ಯ, ಗಂಭೀರ, ಪ್ರಭುದ್ಧವ್ಯಕ್ತಿತ್ವ ಹಾಗೂ ದಾರ್ಶನಿಕತೆ ಅಕ್ಷರಶಃ ಮರೆಯಾಗಿರುವದು ಅತ್ಯಂತ ದುರದೃಷ್ಟಕರ.ಅದೇ ಅವರ ಕನಸು ನನಸಾಗದಿರುವದಕ್ಕೂ ಕಾರಣ.
ಹಿಂದೂ ಸಂಪ್ರದಾಯದಲ್ಲಿನ ಜಾತಿಗಳ ಬಗ್ಗೆ ಅವರ ಸಂಶೋಧನೆ ನಮಗೆ ತಿಳಿದದ್ದುಅತ್ಯಲ್ಪ.ಅರವಿಂದನ್ ನೀಲಕಂದನ್ ಅವರ ’Bodhisattva’s hindutva(part 1-6 )’ ವನ್ನು ಓದಿದಾಗ ಅಂಬೇಡ್ಕರರಲ್ಲಿದ್ದ ಸಮಗ್ರ ಹಿಂದುತ್ವ ನನ್ನ ತಿಳುವಳಿಕೆಗೆಬಂದಿದ್ದು. ಅದನ್ನು ಆಯ್ದು, ಸಂಕ್ಷಿಪ್ತವಾಗಿ ಈ ಲೇಖನವನ್ನು ಬರೆದಿದ್ದೇನೆ.
ಜಾತಿ ಪದ್ದತಿಗಳ ವಿರುದ್ಧ ಅಂಬೇಡ್ಕರರು ಹೋರಾಡಿದರು ಎಂಬುದು ಎಲ್ಲರಿಗೂ ತಿಳಿದ ಸತ್ಯ.ಆದರೆ ಜಾತಿಗಳ ವಿರುದ್ಧ ಅವರ ಹೋರಾಟವು ಅವರ ಕನಸಿನ ಹಿಂದೂ ಧರ್ಮವೇ ಆಗಿತ್ತು ಎಂಬುದುನಿರ್ವಿವಾದ. ತಮ್ಮ ‘Annihilation of caste'(page no.30) ಯಲ್ಲಿ ಅವರುಹೇಳಿದ್ದು ಹೀಗೆ “ಎಲ್ಲಿಯವರೆಗೆ ಜಾತಿಗಳು ಇರುವದೊ ಅಲ್ಲಿಯವರೆಗೆ ಸಂಘಟನೆಸಾಧ್ಯವಿಲ್ಲ.ಎಲ್ಲಿಯವರೆಗೆ ಸಂಘಟನೆ ಸಾಧ್ಯವಿಲ್ಲವೋ ಅಲ್ಲಿಯವರೆಗೆ ಹಿಂದೂ ಧರ್ಮವು ದುರ್ಬಲವಾಗಿಯೇ ಇರುವದು”.
೧೯೨೭ ರಲ್ಲಿ ದಲಿತರಿಗೆ ದೇವಾಲಯದ ಪ್ರವೇಶದ ಹಕ್ಕಿನ ಬಗ್ಗೆಪ್ರಸ್ತಾಪಿಸಿ ಅವರು ಹೇಳಿದ್ದು ಹೀಗಿದೆ “ಹಿಂದುತ್ವವು ಸ್ಪಶ್ಯೃ ಹಾಗೂ ಅಸ್ಪಶ್ಯೃಎಲ್ಲರಿಗೂ ಸೇರಿದುದಾಗಿದೆ. ಕೇಳಜಾತಿಗೆ ಸೇರಿದ್ದ ವಾಲ್ಮಿಕಿ, ವ್ಯಾಧಗೀತ, ಚೋಕಮೇಳಮತ್ತು ರೋಹಿದಾಸರುಗಳು ಹಿಂದು ಧರ್ಮಕ್ಕೆ ನೀಡಿದ ಕೊಡುಗೆಯು, ಬ್ರಾಹ್ಮಣರಾದ ವಸಿಷ್ಟ,ಕ್ಷತ್ರಿಯರಾಗಿದ್ದ ಕೃಷ್ಣ, ವೈಶ್ಯರಾಗಿದ್ದ ಹರ್ಷ, ಹಾಗೂ ಶೂದ್ರರಾಗಿದ್ದತುಕಾರಮರುಗಳು ನೀಡಿದ ಕೊಡುಗೆಯಷ್ಟೆ ಮಹತ್ವಪೂರ್ಣವಾದುದು” ( ’ಬಹಿಷ್ಕೃತ್ ಭಾರತ್’ದಲ್ಲಿ). ಇಲ್ಲಿ ಅವರ ಆಧುನಿಕ ಹಿಂದೂ ಧರ್ಮವನ್ನು ಕಟ್ಟುವ ಮನೋಭಾವ ಹಾಗೂ ಸಂಘಟನೆಯಬಗೆಗಿನ ಆಸ್ಥೆಯನ್ನು ಗುರುತಿಸಬಹುದು.
ತುಷ್ಟೀಕರಣ ನಿಲ್ಲದ ಹೊರತು ಕಾಶ್ಮೀರ ತಣಿಯದು
– ಯೋಗೀಶ ತೀರ್ಥಪುರ
ಕಾಶ್ಮೀರ ಹಿಂದೂಗಳ ಪಾಲಿಗೆ ನರಕವಾಗಿ ಪರಿವರ್ತಿತವಾಗಿದೆ. ಹಿಂಸೆ, ಶೋಷಣೆಯ ದಳ್ಳುರಿಯಲ್ಲಿ ಇಲ್ಲನ ಹಿಂದೂಗಳ ಸ್ಥಿತಿ ತೀರಾ ದಯನೀಯವಾಗಿದೆ. ಇಷ್ಟೆಲ್ಲ ನಡೆದಿದ್ದರೂ ಕಾಶ್ಮೀರ ಸರ್ಕಾರ ಹಾಗೂ ಕೇಂದ್ರ ಸರ್ಕಾರ ತುಷ್ಟೀಕರಣ ರಾಜಕಾರಣದಲ್ಲೇ ಮುಂದುವರಿದಿರುವುದು ದುರದೃಷ್ಟಕರ.
1947ರ ವಿಭಜನೆಯ ನಂತರದ ಕಾಲದಲ್ಲಿ ಪಾಕ್ ಆಕ್ರಮಿತ ಕಾಶ್ಮೀರ ದಿಂದ ಸುಮಾರು 4.5 ಲಕ್ಷ ಹಿಂದುಗಳು ಕಾಶ್ಮೀರಕ್ಕೆ ಸ್ಥಳಾಂತರಗೊಂಡರು. ಈ ಹಿಂದುಗಳಿಗೆ ಕಾಶ್ಮೀರದಲ್ಲಿ ಮತದಾನದ ಹಕ್ಕಿಲ್ಲ ಮತ್ತು ಯಾವುದೇ ಪರಿಸ್ಥಿತಿಯಲ್ಲಿ ಹಿಂದುಗಳಿಗೆ ವಿಧಾನಸಭೆಯಲ್ಲಿ 31% ರಷ್ಟೇ ಪ್ರತಿ ನಿಧಿತ್ವ ಸಿಗುವಂತೆ ಒಟ್ಟು ಸ್ಥಾನಗಳ ಹೊಂದಾಣಿಕೆಯನ್ನು ಮಾಡಲಾಗಿದೆ.
ಕಾಶ್ಮೀರಿ ಹಿಂದುಗಳಲ್ಲಿ ಸಾಕ್ಷರತಾ ಪ್ರಮಾಣವು 88%ರಷ್ಟು ಇದ್ದರೂ ರಾಜ್ಯ ಸರಕಾರದ ಸೇವೆ, ಸಾರ್ವಜನಿಕವಲಯ ಮತ್ತು ಸರಕಾರಿ ಕಂಪೆನಿಗಳಲ್ಲಿ ಹಿಂದು ಕಾರ್ಮಿಕರ ಪ್ರಮಾಣವು 4.8% ರಷ್ಟು ಮಾತ್ರ ಇದೆ. 1980 ರಿಂದ 1990ರ ಅವಧಿಯಲ್ಲಿ ಕಾಶ್ಮೀರದಲ್ಲಿ ಭಯೋತ್ಪಾದನೆ ಹೆಚ್ಚಾದ ಮೇಲೆ ಈ ಪ್ರಮಾಣವು 1.7%ಕ್ಕೆ ಇಳಿಯಿತು. ಕಾಶ್ಮೀರದಲ್ಲಿನ ಯಾವ ಆರ್ಥಿಕ ವ್ಯವಹಾರವೂ ಹಿಂದೂಗಳ ಕೈಯಲ್ಲಿ ಇಲ್ಲ. ಕಾಶ್ಮೀರದ 97.4% ಭೂಮಿಯು ಮುಸಲ್ಮಾನರ ಒಡೆತನದಲ್ಲಿದೆ. ಕೇವಲ 2.6% ಭೂಮಿಯು ಮಾತ್ರ ಹಿಂದು ಮತ್ತು ಇತರ ಅಲ್ಪಾಸಂಖ್ಯಾತರ ಒಡೆತನದಲ್ಲಿದೆ. 1985ರಲ್ಲಿ ಕಾಶ್ಮೀರದಲ್ಲಿ ನೋದವಣೆ ಮಾಡಲ್ಪಟ್ಟ ಲಘು ಉದ್ಯೋಗಗಳ ಸಂಖ್ಯೆ 46,293 ಇತ್ತು. ಇದರಲ್ಲಿ 0.01% ರಷ್ಟು ಉದ್ಯೋಗಗಳು ಹಿಂದುಗಳ ಒಡೆತನದಲ್ಲಿದ್ದವು ಮತ್ತು ವಿದ್ಯುತ್ ಆಧಾರಿತ ಉದ್ಯೋಗಗಳ ಪೈಕಿ 98.9%ರಷ್ಟು ಮುಸಲ್ಮಾನರ ಒಡೆತನದ್ದಲಿವೆ. ಕಾಶ್ಮೀರದಲ್ಲಿನ 96%ರಷ್ಟು ಸೇಬು ತೋಟಗಳ ಜಮೀನು ಮುಸಲ್ಮಾನರ ಒಡೆತನದ್ದಲಿದೆ.
ಇತಿಹಾಸಕಾರರಿ೦ದ ಮರೆಯಾದ ಸಸ್ಯಶಾಸ್ತ್ರದ ಪಿತಾಮಹ, ನಮ್ಮೀ ಭೋಧಿಧರ್ಮ……
– ಶಂಕರ್ ನಾರಾಯಣ್
ಸ್ವಾಮೀ ವಿವೇಕಾನ೦ದರು, ಚಿಕಾಗೋದಲ್ಲಿದ್ದ ಸಮಯ. ಅವರನ್ನು ಹಣಿಯಲು ಇನ್ನಿಲ್ಲದ ಪ್ರಯತ್ನ ನಡೆಯುತ್ತಿತ್ತು. ಮೇಲಿ೦ದ ಮೇಲೆ, ಪ್ರಶ್ನೆಗಳು ತೂರಿಬರುತ್ತಿದ್ದವು. ಅದೊ೦ದು ದಿನ ಒಬ್ಬ ಅಮೇರಿಕಾದ ಪ್ರಜೆಯೊಬ್ಬ, “ಬುದ್ಧನೇಕೆ ಧರ್ಮ ಪ್ರಸರಣೆಗಾಗಿ ಯುರೋಪು, ಅಮೇರಿಕಾಗಳಿಗೆ ಬರಲಿಲ್ಲ..!?” ಎ೦ದು ಕೇಳುತ್ತಾನೆ. ಅದಕ್ಕೆ, ವಿವೇಕಾನ೦ದರು, “ಬುದ್ಧನ ಕಾಲದಲ್ಲಿ ಯುರೋಪ್ ಎಲ್ಲಿತ್ತು..? ನಿನ್ನ ಅಮೇರಿಕಾ ಎಲ್ಲಿತ್ತು..? ಎನ್ನುತ್ತಾರೆ. ಹೌದು. ಚೀನಾವೂ ಸೇರಿ, ಪಾಶ್ಚಿಮಾತ್ಯ ದೇಶಗಳು ಕಣ್ಣುಬಿಡುವ ಮೊದಲೇ ಭಾರತ ಸುಸ೦ಸ್ಕೃತ ದೇಶವಾಗಿತ್ತು. ಭಾರತೀಯರಿಗೆ, ಚಿನ್ನ-ಬೆಳ್ಳಿಗಳ ಪರಿಚಯವಿತ್ತು. ಚಿನ್ನದ ಆಭರಣಗಳನ್ನು ಇಲ್ಲಿನ ಮಹಿಳೆಯರು ತೊಡುತ್ತಿದ್ದರು. ಇದಕ್ಕೆ ಉದಾಹರಣೆ ಎ೦ದರೆ, ಹರಪ್ಪ ಮತ್ತು ಮೊಹೆ೦ಜದಾರೋ ನಗರಗಳು. ನಾಗರೀಕತೆಗಳು. ಪಾಶ್ಚಿಮಾತ್ಯ ದೇಶೀಯರು, ಮರದಲ್ಲಿ ವಾಸಿಸುವ ಸ೦ಧರ್ಭದಲ್ಲಿ, ಒ೦ದು ವ್ಯವಸ್ಥಿತ ನಗರ ಭಾರತದಲ್ಲಿತ್ತು. ಖಗೋಳ ವಿಜ್ನಾನದಲ್ಲಿ ಆರ್ಯಭಟನೂ, ಆಯುರ್ವೇದದಲ್ಲಿ ಚರಕನೂ, ಶಸ್ತ್ರಚಿಕಿತ್ಸೆಯಲ್ಲಿ ಸುಶ್ರುತನೂ, ಅರ್ಥಶಾಸ್ತ್ರದಲ್ಲಿ ಚಾಣಕ್ಯನೂ ಹೀಗೆ ಒ೦ದೊ೦ದು ವಿಭಾಗದಲ್ಲಿ ಒಬ್ಬೊಬ್ಬರು ಪ್ರಖ೦ಡ ಜ್ನಾನಿಗಳಾಗಿದ್ದರು. ಭಾರತ ಬಿಟ್ಟರೆ, ಚೀನಾದಲ್ಲೂ ನಾಗರೀಕತೆಗಳು ಹುಟ್ಟಿಕೊ೦ಡಿದ್ದವು. ಆದರೆ, ಅವುಗಳನ್ನು ಹರಪ್ಪ, ಮೊಹೆ೦ಜದಾರೋಗಳೊ೦ದೆಗೆ ಹೋಲಿಸಲಾಗದು..
ಆದರೆ,
ತುತ್ತನ್ನು ನಿರ್ಲಕ್ಷಿಸುವ ಮುನ್ನ
– ನವೀನ್ ನಾಯಕ್
ಭಾರತ ಬದಲಾಗುತಿದೆ, ಇದನ್ನು ನಮ್ಮ ಮುಖ್ಯಮಂತ್ರಿಯಿಂದ ಹಿಡಿದು ಪ್ರಧಾನ ಮಂತ್ರಿಯವರೆಗೆ ಎಲ್ಲರೂ ದಿನಕೊಮ್ಮೆ ಮಂತ್ರದಂತೆ ಪಟಿಸುತಿದ್ದಾರೆ. ಇದರಿಂದ ನಮ್ಮ ಕಂಗಳು ಬದಲಾವಣೆಯ ಸಮಯ ಹತ್ತಿರ ಬರುತಿದೆ ಎಂದು ಹೊಸ ಕನಸು ಕಾಣತೊಡಗಿದೆ. ಇಂಥ ಸಮಯದಲ್ಲಿ ವಾಸ್ತವವನ್ನು ವಿಶ್ವಸಂಸ್ಥೆ ಬಯಲಿಗೆಳೆದು ನಮ್ಮ ಸರಕಾರ ನಡೆಸುತ್ತಿರುವವರ ಮುಖವಾಡವನ್ನು ಕಳಚಿದೆ. ವಿಶ್ವಸಂಸ್ಥೆ ನಡೆಸಿರುವ ಸಮೀಕ್ಷೆಯನ್ನು ಗಮನಿಸಿದರೆ ಭಾರತದ ಬದಲಾವಣೆಯು ಮುಂದುವರೆಯುವದು ಬಿಟ್ಟು ಹಿಮ್ಮುಖವಾಗಿ ನಡೆಯತೊಡಗಿದೆ.ಈ ಅನಿಸಿಕೆ ಏಕೆಂದರೆ ಅದರ ಸಮೀಕ್ಷೆಯ ವರದಿಯನ್ನು ನೋಡಿ.
ವಿಶ್ವಸಂಸ್ಥೆ;- ವಿಶ್ವದಲ್ಲಿ 120 ಕೋಟಿ ಜನ ಇನ್ನೂ ಕಿತ್ತು ತಿನ್ನುವ ಬಡತನದ ಬೇಗೆಯಲ್ಲಿ ದಿನವನ್ನು ಕಳೆಯುತಿದ್ದಾರೆ. ಅದರಲ್ಲಿ ಮೂರನೆಯ ಒಂದರಷ್ಟು ಅಂದರೆ 33% (39 ಕೋಟಿ 60 ಲಕ್ಷ ಜನ) ಭಾರತೀಯರಾಗಿದ್ದಾರೆ. ಇವರು ದಿನವೊಂದಕ್ಕೆ ಸುಮಾರು 65 ರುಪಾಯಿಗಳಿಗಿಂತಲೂ ಕಡಿಮೆ ಹಣದಲ್ಲಿ ಜೀವನ ದೂಡುತಿದ್ದಾರೆ. ಅವರದೇ ವರದಿ ಪ್ರಕಾರ 1981 ರಿಂದ 2010ರ ನಡುವೆ ವಿಶ್ವದ ಬಡತನದ ಪ್ರಮಾಣ ಸುಮಾರು ಅರ್ಧದಷ್ಟು ಇಳಿಕೆಯಾಗಿದೆ ಮತ್ತು ಇದಕ್ಕೆ ವಿರುದ್ಧವಾಗಿ ಅಭಿವೃದ್ಧಿಶೀಲ ಹಾಗು ಬಡರಾಷ್ಟ್ರಗಳಲ್ಲಿ
ಲೋಕಾಯುಕ್ತ ಆಸ್ತಿ ವಿವರ ನೀಡುವುದೇ ಯುಕ್ತ!
– ತುರುವೇಕೆರೆ ಪ್ರಸಾದ್
ಈಚೆಗೆ ಪತ್ರಿಕೆಗಳಲ್ಲಿ ಹಲವು ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರು ತಮ್ಮ ಆಸ್ತಿ ವಿವರಗಳನ್ನು ಲೋಕಾಯುಕ್ತಕ್ಕೆ ಸಲ್ಲಿಸಿಲ್ಲ ಎಂಬ ಸಂಗತಿ ವರದಿಯಾಗಿತ್ತು. ಶಾಸಕರು, ವಿಧಾನಪರಿಷತ್ ಸದಸ್ಯರು ಹಾಗೂ ಮಾಜಿ ಜನಪ್ರತಿನಿಧಿಗಳು ಕಡ್ಡಾಯವಾಗಿ ಪ್ರತಿವರ್ಷ ಲೋಕಾಯುಕ್ತಕ್ಕೆ ಆಸ್ತಿ ವಿವರ ಸಲ್ಲಿಸಬೇಕಿದೆ. ಆದರೆ ಹಲವರು ಇದನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಅಷ್ಟೇ ಅಲ್ಲ, ಜನಪ್ರತಿನಿಧಿಗಳು ಸಲ್ಲಿಸಿರುವ ಆಸ್ತಿ ವಿವರವೂ ಎಷ್ಟರ ಮಟ್ಟಿಗೆ ಸತ್ಯ ಎನ್ನುವುದನ್ನು ಸಾರ್ವಜನಿಕರು ತಿಳಿಯಲಾಗುತ್ತಿಲ್ಲ. ಏಕೆಂದರೆ ಲೋಕಾಯುಕ್ತ ಜನಪ್ರತಿನಿಧಿಗಳ ಆಸ್ತಿ ವಿವರಗಳನ್ನು ಮಾಹಿತಿ ಹಕ್ಕು ಕಾಯಿದೆಯಡಿ ನೀಡಲು ನಿರಾಕರಿಸುತ್ತದೆ.
ಕಳೆದ ಮಾರ್ಚ್ 18ರಂದು ನಾನು ವಿಧಾನಸಭಾ ಚುನಾವಣೆಗಳ ಹಿನ್ನಲೆಯಲ್ಲಿ ಕೆಲವು ಜನಪ್ರತಿನಿಧಿಗಳು ಲೋಕಾಯುಕ್ತಕ್ಕೆ ಸಲ್ಲಿಸಿರುವ ಆಸ್ತಿ ವಿವರವನ್ನು ಮಾಹಿತಿ ಹಕ್ಕು ಕಾಯಿದೆಯಡಿ ನೀಡುವಂತೆ ಕೋರಿದ್ದೆ. ಆದರೆ ಲೋಕಾಯುಕ್ತ ಆ ಮಾಹಿತಿ ನೀಡಲು ನಿರಾಕರಿಸಿತು. ಅದಕ್ಕೆ ಲೋಕಾಯುಕ್ತ ಕೊಟ್ಟ ಕಾರಣ ಮಾಹಿತಿ ಹಕ್ಕು ಕಾಯಿದೆಯಡಿ ನಾಗರಿಕರಿಗೆ ಸಾರ್ವಜನಿಕ ಪ್ರಾಧಿಕಾರದ ಸಾರ್ವಜನಿಕ ಸಂಗತಿಗಳ ಬಗ್ಗೆ ಮಾತ್ರ ಮಾಹಿತಿ ನೀಡಲಾಗುತ್ತದೆ. ನೀವು ಕೆಲವು ವ್ಯಕ್ತಿಗಳ ಖಾಸಗಿ ವಿವರಗಳ ಬಗ್ಗೆ ಮಾಹಿತಿ ಕೇಳಿದ್ದೀರಿ. ಇದು ಸಾರ್ವಜನಿಕ ಪ್ರಾಧಿಕಾರ ಅಥವಾ ಆಢಳಿತಕ್ಕೆ ಸಂಬಂಧಿಸಿದ ಸಾರ್ವಜನಿಕ ವಿಷಯವಲ್ಲ ಎಂಬುದು.(The intention of the legislation is to provide right to information of a citizen pertaining to public affairs of the public authority, but you have sought the information of an individual which is purely personal one and is not with respect to public affairs)
ಮ್ಯೂಟ್ ಮೋಡ್ ನಲ್ಲಿ ಭಾರತ, ಫೈಟ್ ಮೋಡ್ ನಲ್ಲಿ ಚೀನಾ!!
– ವಿಕಾಸ್ ಪುತ್ತೂರು
‘ಒಂದು ಕೆನ್ನೆಗೆ ಹೊಡೆದರೆ ಮತ್ತೊಂದು ಕೆನ್ನೆ ತೋರಿಸು’ ಎಂದು ಸಾರುತ್ತಲೇ “ಶಾಂತಿಧೂತ”ನೆಂದು ಖ್ಯಾತಿಗಳಿಸಿದ ಆ ಗಾಂಧಿಯೂ ಕೂಡ, ಇಂದಿದ್ದಿದ್ದರೆ, ಪ್ರಸ್ತುತ ಚೀನಾದ ತಕರಾರುಗಳಿಗೆ ಬೇಸತ್ತು ಕೆನ್ನೆ ತೋರಿಸುವುದನ್ನು ನಿಲ್ಲಿಸಿ, ಒಂದು ಬಾರಿಸಿ ಬಿಡುತ್ತಿದ್ದರೇನೋ! ಅದೇನೆ ಇರಲಿ, ನಮ್ಮ ಪ್ರಧಾನಿಗಳು ಮಾತ್ರ, ಚೀನಾ ವಿಷಯದಲ್ಲಿ ಆ ಗಾಂಧಿಯ ಮೂರು ಮಂಗಗಳ ಗುಣಗಳನ್ನು ಯತಾವತ್ತಾಗಿ ಅನುಸರಿಸಿರುವಂತೆ ಕಾಣುತ್ತಿದೆ, ಚೀನಾದ ಅತಿಕ್ರಮಣಗಳನ್ನು ಕಂಡೂ ಕಾಣದಂತೆ ಕುರುಡರಾಗಿಬಿಟ್ಟಿದ್ದಾರೆ, ಅವರ ಆಕ್ರಮಣಗಳ ಬಗ್ಗೆ ತುಟಿಬಿಚ್ಚದೆ ಚಕಾರವೆತ್ತದೆ ಮೂಕರಾಗಿಬಿಟ್ಟಿದ್ದಾರೆ, ಚಿಂಗಿಯರ ಕುತಂತ್ರಗಳನ್ನಂತೂ ಬೇಕೆಂದೇ ಕೇಳಿಸಿಕೊಳ್ಳದೆ ಕಿವುಡನೂ ಆಗಿಬಿಟ್ಟಿದ್ದಾರೆ! ಅವರೇ ಹೇಳುವಂತೆ, ಗಾಂಧಿಯ ಹಾದಿಯಲ್ಲಿ ಸಾಗುವುದೆಂದರೆ ಇದೇ ಇರಬೇಕೇನೋ! ಕಳೆದ ಹತ್ತು ವರ್ಷಗಳಲ್ಲಿ ಮನಮೋಹನರು ಸದನ ಪ್ರವೇಶಿಸಿರುವುದಕ್ಕಿಂತ ಹೆಚ್ಚು ಬಾರಿ ಚೀನಿಯರು ಭಾರತವನ್ನು ಅತಿಕ್ರಮವಾಗಿ ಪ್ರವೇಶಿಸಿದ್ದಾರೆ. ಆರ್ಥಿಕವಾಗಿ ಹಾಗು ಸಾಂಸ್ಕೃತಿಕವಾಗಿ ಭಾರತವನ್ನು ಮುಗಿಸಲು ತುದಿಗಾಲಲ್ಲಿ ನಿಂತು ಅತ್ಯಂತ ವ್ಯವಸ್ತಿತವಾಗಿ ಷಡ್ಯಂತ್ರ ರಚಿಸಿರುವ, ರಚಿಸುತ್ತಿರುವ ಚೀನಾಗೆ ಸಮರ್ಥವಾಗಿ ಉತ್ತರ ಕೊಡಲು ಸಾಧ್ಯವಾಗದೆ, ಪ್ರಶ್ನೆಯ ಹುಡುಕಾಟದಲ್ಲಿಯೇ ಕಪಟ ನಾಟಕವಾಡುತ್ತಿದೆ ನಮ್ಮ ಕೇಂದ್ರ ಸರಕಾರ.
ಭಾರತದ ಅತಿದೊಡ್ಡ ಶತ್ರು ಪಾಕಿಸ್ತಾನ, ಬೇರೆಲ್ಲಾ ರಾಷ್ಟ್ರಗಳು ಬಹುತೇಕ ಭಾರತದ ಮಿತ್ರರಾಷ್ಟ್ರಗಳೇ ಎಂದು ವಿಶ್ವಾವ್ಯಾಪಿ ಬಿಂಬಿತವಾಗಿರುವುದು ಭಾರತದ ಅತಿದೊಡ್ಡ ದುರಂತ. ರಾಷ್ಟ್ರೀಯ ಭದ್ರತೆಯ ವಾಸ್ತವಕ್ಕಿಳಿದು ನೋಡಿದಾಗ ಭಾರತಕ್ಕೆ, ಪಾಕಿಸ್ತಾನಕ್ಕಿಂತಲೂ ಚೀನಾದಿಂದ ನೂರು ಪಟ್ಟು ಹೆಚ್ಚು ಆತಂಕ ಸೃಷ್ಟಿಯಾಗಿದೆ. ಭಾರತದ ಭೂ ಹಾಗು ಸಾಗರಕ್ಕೆ, ಇತರೆ ಒಟ್ಟು 9ರಾಷ್ಟ್ರಗಳು ಅಂಟಿಕೊಂಡಿವೆ, ದಕ್ಷಿಣಕ್ಕೆ ಶ್ರೀಲಂಕಾ ಹಾಗು ಮಾಲ್ಡೀವ್ಸ್. ಪಶ್ಚಿಮಕ್ಕೆ ಪಾಕಿಸ್ತಾನ ಹಾಗು ಅಫಗಾನಿಸ್ತಾನ, ಪೂರ್ವಕ್ಕೆ ನೇಪಾಳ, ಭೂತಾನ್, ಬಾಂಗ್ಲಾದೇಶ ಹಾಗು ಬರ್ಮಾ ಮತ್ತು ಉತ್ತರದಿಂದ ಪೂರ್ವದವರೆಗೂ ಮಹಾಕಂಟಕ ಚೀನಾ. ಈ 9ನೆರೆರಾಷ್ಟ್ರಗಳ ಪೈಕಿ ಭೂತಾನ್ ಎಂಬ ಪುಟ್ಟ ದೇಶವೊಂದನ್ನು ಬಿಟ್ಟರೆ, ಉಳಿದ 8 ದೇಶಗಳೊಡನೆಯೂ ಭಾರತದ ಸಂಬಂಧ ಹಳಸಿದೆ! ಅತ್ಯಂತ ಆತಂಕಕಾರಿ ಸಂಗತಿ ಎಂದರೆ, ಭಾರತವನ್ನು ಮಣಿಸಲು ಹಾತೊರೆಯುತ್ತಿರುವ ಚೀನಾ, ಉಳಿದ 7 ರಾಷ್ಟ್ರಗಳನ್ನೂ ಒಟ್ಟುಗೂಡಿಸಿ ಬಿಲಿಯನ್ ಡಾಲರ್ಗಟ್ಟಲೆ ಬಂಡವಾಳ ಹೂಡುತ್ತಾ, ತನ್ನ ಸಂಗಡ ಶಿಶ್ಯವೃಂದದಂತೆ ಇರಿಸಿಕೊಂಡಿದೆ.






