ವಿಷಯದ ವಿವರಗಳಿಗೆ ದಾಟಿರಿ

Posts tagged ‘ಭಾರತ’

24
ಮೇ

ಅವರು ಉಳಿಸಿದ್ದು ಒಂದೆರಡು ಕೋಟಿ ಮಾತ್ರವಲ್ಲ…

– ಗೋಪಾಲ್ ಕೃಷ್ಣ

Vinod Raiಓಡುವುದರಲ್ಲಿ ಹುಸೇನ್ ಬೋಲ್ಟ್ ತನ್ನ ದಾಖಲೆಯನ್ನು ತಾನೆ ಸರಿಗಟ್ಟುತ್ತಾನೆ. ಭ್ರಷ್ಟಾಚಾರದಲ್ಲಿ ನಮ್ಮ ನೇತಾರರು, ಅಧಿಕಾರಿಗಳು ಬೋಲ್ಟ್ ಗೆ ಅನುರೂಪ. ಆದರೆ ಭ್ರಷ್ಟಾಚಾರ ಪತ್ತೆ ಹಚ್ಚುವುದರಲ್ಲಿ! ಹೌದು, ಇಂತಹದ್ದೊಂದು ದಾಖಲೆಯೂ ಸೃಷ್ಟಿಯಾದಂತಿದೆ. ಅದು ನಮ್ಮ ಮಹಾಲೇಖಪಾಲರಿಂದ. ಎರಡನೆ ತಲೆಮಾರಿನ ತರಂಗಗುಚ್ಛ ಹಂಚಿಕೆಯಲ್ಲಾದದ್ದು 1.76 ಲಕ್ಷ ಕೋಟಿ ಅವ್ಯವಹಾರ. ಇದೇ ಐತಿಹಾಸಿಕ ದಾಖಲೆ ಎನ್ನುತ್ತಿದ್ದರು. ಅದನ್ನೂ ಮೀರಿಸಿದ್ದು 1.86 ಲಕ್ಷ ಕೋಟಿಯ ‘ಕೋಲ್’ಗೇಟ್ ಹಗರಣ. ಎರಡನ್ನೂ ಹೊರಚೆಲ್ಲಿದವರು ಮಹಾಲೇಖಪಾಲರೇ. ಅಂದ ಮೇಲೆ ಅವರದೇ ಹೊಸ ದಾಖಲೆ ಸೃಷ್ಟಿಯಾಗಿದೆ.

ದೆಹಲಿಯಲ್ಲಿ ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿನ ಹಗರಣ, ಎರಡನೆ ತಲೆಮಾರಿನ ತರಂಗಗುಚ್ಛ ಹಗರಣ ಮತ್ತು ಇದೀಗ ಕಲ್ಲಿದ್ದಲು ಗಣಿ ಹಂಚಿಕೆಯಲ್ಲಿನ ಲೋಪಗಳು ಕೇಂದ್ರ ಸರ್ಕಾರವನ್ನು ಬೆತ್ತಲುಗೊಳಿಸಿವೆ. ಭ್ರಷ್ಟಾಚಾರ ವಿರೋಧಿ ಹೋರಾಟವೆನ್ನುವುದು ಒಂದು ಫ್ಯಾಷನ್ ಆಗಿ ಹೋಗಿದೆ. ಈ ಒಂದು ಎಳೆಯನ್ನು ಹಿಡಿದುಕೊಂಡು ಖ್ಯಾತಿ, ಪ್ರಖ್ಯಾತಿ, ಕುಖ್ಯಾತಿ ಗಳಿಸುವವರಿಗೇನೂ ಲೆಕ್ಕವಿಲ್ಲ. ಅಂತಹವರುಗಳ ಮಧ್ಯೆಯೇ ಬೆರಳಣಿಕೆಯಷ್ಟು ಜನರು ಮಾತ್ರ ಪ್ರಾಮಾಣಿಕತೆ, ದಿಟ್ಟತನವನ್ನು ತಮ್ಮ ಕಾರ್ಯದಲ್ಲಿ ತೋರಿಸುತ್ತಾರೆ. ಈ ಸಾಲಿನಲ್ಲಿ ಅಗ್ರಗಣ್ಯರೆನ್ನುವಂತೆ ಕಾಣುವವರು ವಿನೋದ್‍ರಾಯ್.

ಮತ್ತಷ್ಟು ಓದು »

29
ಮಾರ್ಚ್

ಉಪಖಂಡದಲ್ಲಿ ಏಕಾಂಗಿ ಭಾರತ?

– ಡಾ ಅಶೋಕ್ ಕೆ ಆರ್

ISPCತೀರ ಹಿಂದಿನ ಮಾತಲ್ಲ. ಕೆಲವೇ ದಿನಗಳ ಹಿಂದೆ ಅಫ್ಜಲ್ ಗುರುವನ್ನು ನೇಣಿಗೇರಿಸಿ ಅವನ ದೇಹವನ್ನು ಆತನ ಮನೆಯವರಿಗೆ ನೀಡದೆ ಜೈಲಿನಲ್ಲೇ ಮಣ್ಣು ಮಾಡಲಾಗಿತ್ತು. ಕಾಶ್ಮೀರದಲ್ಲಿ ಪ್ರತಿಭಟನೆಗಳಾದವು, ಅಫ್ಜಲ್ ಗುರು ಅಲ್ಲಿಯವನಾಗಿದ್ದರಿಂದ. ಇದೇ ಸಮಯದಲ್ಲಿ ಪಾಕಿಸ್ತಾನದ ರಾಜಕೀಯ ಪಕ್ಷಗಳು ಅಫ್ಜಲ್ ಗುರುವಿನ ದೇಹವನ್ನು ಆತನ ಮನೆಯವರಿಗೆ ಹಿಂದಿರುಗಿಸಬೇಕು ಎಂಬ ನಿರ್ಣಯ ತೆಗೆದುಕೊಂಡವು, ನಿರ್ಣಯ ಮಾಡಿದ್ದು ಹಾದಿಬೀದಿಯಲ್ಲಾಗಿರದೆ ಸಂಸತ್ತಿನಲ್ಲಾಗಿತ್ತು.ಈ ಕಾರಣದಿಂದ ನಿರ್ಣಯಕ್ಕೆ ಅಧಿಕೃತತೆಯ ಮುದ್ರೆ ಲಭಿಸಿತ್ತು. ಪಾಕಿಸ್ತಾನದ ಈ ನಡೆಗೆ ಭಾರತದಲ್ಲಿ ಅಗಾಧ ವಿರೋಧ  ವ್ಯಕ್ತವಾಗಿದ್ದು ಸಹಜ ಪ್ರತಿಕ್ರಿಯೆಯಾಗಿತ್ತು. ನಮ್ಮ ಮನೆಯ ವಿಷಯದಲ್ಲಿ ಅನ್ಯರು ಮೂಗು ತೂರಿಸುವುದು ಕೋಪ ತರಿಸುವ  ವಿಷಯವೇ ಸರಿ.

ಶ್ರೀಲಂಕಾದ ಎಲ್ ಟಿ ಟಿ ಇ ಸಂಘಟನೆಯ ಹುಟ್ಟಿಗೆ ಅನೇಕ ಐತಿಹಾಸಿಕ ಕಾರಣಗಳಿವೆ.ಶ್ರೀಲಂಕಾದ ಈ ಆಂತರಿಕ ಸಮಸ್ಯೆಯ ಉದ್ಭವವಾಗಿದ್ದು ಬ್ರೀಟೀಷರ ಆಡಳಿತದ ಕಾರಣದಿಂದ ಎಂದರೆ ತಪ್ಪಾಗಲಾರದು.ಶ್ರೀಲಂಕಾದ ಎಸ್ಟೇಟುಗಳಲ್ಲಿ ಕೆಲಸ ಮಾಡಲೆಂದು ಶ್ರಮಜೀವಿಗಳಾದ ತಮಿಳರನ್ನು ಕರೆದುಕೊಂಡು ಹೋಗಿತ್ತು ಅಂದಿನ ಬ್ರಿಟೀಷ್ ಆಡಳಿತ. ಬ್ರಿಟೀಷರು ಶ್ರೀಲಂಕ ತೊರೆದ ನಂತರ ಅಲ್ಲಿನ ಬಹುಸಂಖ್ಯಾತರಾದ ಸಿಂಹಳೀಯರು ಲಂಕ ತಮಿಳರನ್ನು ಎರಡನೇ ದರ್ಜೆ ಪ್ರಜೆಗಳನ್ನಾಗಿ ನೋಡಕಲಾರಂಭಿಸಿದ್ದರು.

ಮತ್ತಷ್ಟು ಓದು »

27
ಫೆಬ್ರ

“ಸ್ವಾತಂತ್ರ್ಯವೀರ”ನ ವ್ಯಕ್ತಿತ್ವ ಅನಾವರಣ..!!

ಭೀಮಸೇನ್ ಪುರೋಹಿತ್

“ಭಗತ್ ಸಿಂಗ್, ರಾಜಗುರು,ಆಜಾದ್ ಮುಂತಾದ ಕ್ರಾಂತಿಕಾರಗಳ ಹೆಸರುಗಳನ್ನು ಕೇಳಿದಾಗಲೆಲ್ಲ ನಾವು ಆದರದಿಂದ ತಲೆಬಾಗುತ್ತೇವೆ.ಆದರೆ, ಇಂತಹ ನೂರಾರು ಕ್ರಾಂತಿಕಾರಗಳನ್ನ ನಿರ್ಮಿಸಿದ ‘ಸಾವರ್ಕರ’ರನ್ನು ಸ್ಮರಿಸುವಾಗ ಸಂಕೋಚಕ್ಕೆ ಒಳಗಾಗುವುದು ಬಹಳ ದೌರ್ಭಾಗ್ಯದ ಸಂಗತಿ. ವೀರ ಸಾವರ್ಕರರ ಬಗ್ಗೆ ಅನೇಕ ಭ್ರಮೆಗಳನ್ನು ಹಬ್ಬಿಸಿರುವುದೇ ಇದಕ್ಕೆ ಕಾರಣ..”

ಮಾಜಿ ಕೇಂದ್ರಮಂತ್ರಿ ಹಾಗು ಕಾಂಗ್ರೆಸ್ ನಾಯಕ  ‘ವಸಂತ ಸಾಠೆ’ ಯವರ ಈ ಮಾತು ಯಾವಾಗಲೂ ನನ್ನನ್ನು ಕಾಡಿವೆ.. ಇಲ್ಲಸಲ್ಲದ, ಮಿಥ್ಯಾ ಆರೋಪಗಳನ್ನೇ ನಿಜವೆಂದು ನಂಬಿ, ಒಬ್ಬ ರಾಷ್ಟ್ರೀಯ ಪುರುಷನನ್ನು ಹಿಂಬದಿಗೆ ಸರಿಸಿ, ಅವರ ತೇಜೋವಧೆಯನ್ನೇ ನಿರಂತರವಾಗಿ ಮುಂದುವರೆಸಿಕೊಂಡು ಬಂದಿರುವುದು ನಿಜಕ್ಕೂ ಬೇಸರದ ಸಂಗತಿಯೇ..

ಕೇವಲ ಸಾವರ್ಕರರ ಮೇಲಿನ ವೃಥಾ ಅಭಿಮಾನದಿಂದ ಈ ಲೇಖನ ಹೊರಟಿಲ್ಲ.. ಬದಲಾಗಿ ಸಾವರ್ಕರರ ನಿಜಜೀವನದ ಮೇಲೆ ಬೆಳಕು ಚೆಲ್ಲುವ ಪ್ರಯತ್ನವಷ್ಟೇ..

ಮತ್ತಷ್ಟು ಓದು »

24
ಡಿಸೆ

ಕೌರವರ ನಾಶಕ್ಕೆ ಶ್ರೀಕಾರ ಹಾಕಿದ್ದು ದ್ರೌಪದಿಯೇ ತಾನೇ?

– ರಾಕೇಶ್ ಶೆಟ್ಟಿ

Dehli1ಬಹುಷಃ ಆಗಿನ ಕಾಲವೇ ಚೆನ್ನಾಗಿತ್ತೆನೋ.ಆಗಲಾದರು ಕುರು ಸಭೆಯಲ್ಲಿ ದ್ರೌಪದಿಯ ವಸ್ತ್ರಾಪಹರಣವಾಗುವಾಗ ಅವಳ ಸಹಾಯಕ್ಕೆ ಕರೆದೊಡನೆಯೇ ಶ್ರೀ ಕೃಷ್ಣ ಪರಮಾತ್ಮ ಬಂದಿದ್ದ.ಪಾಪ! ಈ ಕಾಲದ ಹೆಣ್ಣು ಮಕ್ಕಳ ಕೂಗು ಆ ಕಾಣದ ದೇವರಿಗೂ,ಕಾನೂನು ಪಾಲಕರಾದ ಮನುಷ್ಯ(?)ರಿಗೂ ಕೇಳುತ್ತಿಲ್ಲ.ಕುರುಕ್ಷೇತ್ರದ ಯುದ್ಧದ ಮುಗಿದರೂ ಕೌರವರು ಇನ್ನೂ ಸತ್ತಿಲ್ಲ.ದ್ರೌಪದಿಯರ ಗೋಳು ಮುಗಿಯೋಲ್ಲ…

ಕಳೆದ ಶನಿವಾರದ ಬೆಳಗ್ಗಿನಿಂದ ಇಂಡಿಯಾ ಗೇಟ್,ರಾಷ್ಟ್ರಪತಿ ಭವನದ ಮುಂದೆ ನಿಂತು ನ್ಯಾಯ ಕೇಳಿದ ಯುವಕ-ಯುವತಿಯರ ಮೇಲೆಯೇ ಲಾಠಿ ಚಾರ್ಜ್,ಜಲಫಿರಂಗಿ,ಅಶ್ರು ವಾಯು ಪ್ರಯೋಗ ನಡೆಯುತ್ತಿದ್ದರೂ.ಪ್ರಧಾನಿ ಮೌನ ಮೋಹನ್ ಸಿಂಗ್ ತಮ್ಮ ಮೌನ ಮುರಿದಿದ್ದು ಸೋಮವಾರ ಬೆಳಿಗ್ಗೆ.ಊರು ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದಂತೆ!,ಅದೂ ಸಹ ತಮ್ಮ ಭಾಷಣದ ಕೊನೆಯಲ್ಲಿ “ಟೀಕ್  ಹೈ” ಅಂದರಂತೆ! ಕ್ಯಾಮೆರಾ ಹಿಂದೆ ನಿಂತಿದ್ದ ನಿರ್ದೇಶಕ(ಕಿ) ಯಾರಿದ್ದಿರಬಹುದು? So Called ಯುವನಾಯಕ ರಾಹುಲ್ ಗಾಂಧಿಗೂ ಯುವಕ-ಯುವತಿಯರ ಮೇಲೆ ಪೋಲಿಸ್ ದೌರ್ಜನ್ಯ ಕಾಣಿಸಿಲ್ಲ.ರಷ್ಯಾದಿಂದ ಪುಟಿನ್ ಬರುತಿದ್ದಾರೆ ಅವರೆದುರು ನೀವು ಗಲಾಟೆ ಮಾಡಿದರೆ ಭಾರತದ ಬಗ್ಗೆ ಅವರೇನು ತಿಳಿದುಕೊಂಡಾರು ಅಂತ ಬುದ್ದಿ ಹೇಳುವ ಗೃಹ ಮಂತ್ರಿ ಶಿಂಧೆಗೇ,ವೃದ್ಧರು ,ಮಹಿಳೆಯರು,ಮಕ್ಕಳ ಮೇಲೆ ದೌರ್ಜನ್ಯವೆಸಗಿದ ಪೋಲಿಸರನ್ನು ಮನೆಗೆ ಕಳಿಸಲಾಗದಿದ್ದ ಮೇಲೆ ತಾನು ಕುಳಿತಿರುವ ಕುರ್ಚಿಯಿಂದ ಎದ್ದೋಗಬೇಕು ಅನ್ನುವ ನೈತಿಕತೆ  ಕೂಡ ಉಳಿದಿಲ್ಲವೇ? ಎದ್ದೋಗುವುದನ್ನು ಪಕ್ಕಕ್ಕಿಡಿ,ತನ್ನ  ಪೋಲಿಸ್ ಪಡೆ ಮಾಡಿದ ಘನಂದಾರಿ ಕೆಲಸಕ್ಕಾಗಿ ದೇಶದ ಜನರ ಕ್ಷಮೆ ಕೇಳಲು ಸಹ ಆತ ಸಿದ್ಧನಿಲ್ಲ. ಹಾಳು ಬಿದ್ದು ಹೋಗಲಿ ಕ್ಷಮೆಯೂ ಬೇಡ.ನ್ಯಾಯ ಕೇಳಲು ನಿಂತ ವಿದ್ಯಾರ್ಥಿಗಳನ್ನು ಭೇಟಿಯಾಗುವ ಕುರಿತು ಪ್ರಶ್ನೆ ಕೇಳಿದರೆ, “ಇವತ್ತು ವಿದ್ಯಾರ್ಥಿಗಳು ಪ್ರತಿಭಟಿಸುತ್ತಾರೆ.ನಾಳೆ ಮಾವೋವಾದಿಗಳು ಪ್ರತಿಭಟಿಸುತ್ತಾರೆ.ಹಾಗಂತ ಮಾವೋವಾದಿಗಳು ಭೇಟಿಯಾಗಲು ಸಾಧ್ಯವೇ?” ಅನ್ನುತ್ತಾನಲ್ಲ ಇದೆಂತ ಉಡಾಫೆ ತನದ ಮಾತು? ಎಲ್ಲಿಗೆ ಬಂದು ನಿಂತಿದೆ ನಮ್ಮ ವ್ಯವಸ್ಥೆ?

ಮತ್ತಷ್ಟು ಓದು »

1
ಆಕ್ಟೋ

ಜಾತ್ಯಾತೀತ ‘ಜಿನ್ನಾ’ ಖಳ ನಾಯಕನಾದರೆ ‘ಗಾಂಧೀ’ ಯಾರು?..

– ಅಶ್ವಿನ್ ಅಮೀನ್

ಕೆಲವು ವರ್ಷಗಳ ಹಿಂದೆ ಮಾಜಿ ಉಪ ಪ್ರಧಾನಿ ಎಲ್. ಕೆ.ಅಡ್ವಾಣಿ ಯವರು ಪಾಕಿಸ್ತಾನದಲ್ಲಿರುವ ಮಹಮ್ಮದ್ ಆಲಿ ಜಿನ್ನಾ ಸಮಾಧಿಗೆ ಭೇಟಿ ಕೊಟ್ಟು ‘ಜಿನ್ನಾ ಒಬ್ಬ ಜಾತ್ಯಾತೀತ ನಾಯಕ’ ಎಂದು ಉದ್ಗರಿಸಿದ್ದರು. ಆ ಹೇಳಿಕೆ ಭಾರತದಾದ್ಯಂತ ಎಷ್ಟು ಸಂಚಲನವನ್ನು ಉಂಟು ಮಾಡಿತ್ತೆಂದರೆ ಸ್ವಪಕ್ಷೀಯರೇ ಆಡ್ವಾಣಿಯನ್ನು ವಿರೋಧಿಸತೊಡಗಿದರು.ಆದರೆ, ಅಷ್ಟು ಹಿರಿಯ ಮುತ್ಸದ್ದಿಯಾದ ಆಡ್ವಾನಿಯವರು ಯಾವುದೇ ಆಧಾರ – ಕಾರಣಗಳಿಲ್ಲದೆ ಆ ಹೇಳಿಕೆ ನೀಡಿಯಾರೇ ಎಂಬ  ಪ್ರಶ್ನೆ ನನ್ನನ್ನು ಕಾಡುತ್ತಲೇ ಇತ್ತು. ಅದಕ್ಕೆ ಉತ್ತರ ಹುಡುಕುತ್ತಾ ಇತಿಹಾಸದ ಪುಟಗಳನ್ನು ತಿರುವ ಹೊರಟ ನನಗೆ ಕಂಡು ಬಂದ ಸತ್ಯ ಮಾತ್ರ ನಿಜಕ್ಕೂ ಆಘಾತಕಾರಿ!. ‘ಧರ್ಮಕ್ಕಿಂತ ದೇಶ ಮೊದಲು, ನಾನು ಮೊದಲು ಭಾರತೀಯ’ ಎನ್ನುತ್ತಿದ್ದ ಮಹಮ್ಮದ್ ಆಲಿ ಜಿನಾ ಭಾರತವನ್ನು ಒಡೆಯುವಷ್ಟರ ಮಟ್ಟಿಗೆ ಹೋಗಲು ಕಾರಣೀಭೂತರಾದರೂ ಯಾರು? ಆ ಸತ್ಯಗಳನ್ನು ತಿಳಿಯುತ್ತಾ ಹೋದಂತೆ ಆಡ್ವಾಣಿಯವರು ಜಿನ್ನಾರ ಬಗ್ಗೆ ಅಂದು ಹೇಳಿದ ಮಾತುಗಳು ಸತ್ಯವಾಗುತ್ತಾ ಹೋಯಿತು.

ಮಹಮ್ಮದ್ ಆಲಿ ಜಿನ್ನಾ… ಆತನ ವ್ಯಕ್ತಿತ್ವ ಎಂದಿಗೂ ಒಬ್ಬ ಮುಸ್ಲಿಮನಿಗೆ ತಕ್ಕುದಾಗಿ ಇರಲಿಲ್ಲ. ಆತನೆಂದೂ ಗಡ್ಡ ಬಿಡಲಿಲ್ಲ, ಸ್ಕಲ್ ಕ್ಯಾಪ್ ಹಾಕಲಿಲ್ಲ, ದಿನಕ್ಕೆ ಐದು ಬಾರಿ ನಮಾಜ್ ಮಾಡಲಿಲ್ಲ, ಮದರಸಾದಲ್ಲಿ ಕಲಿಯಲಿಲ್ಲ… ಮದುವೆಯಾಗಿದ್ದು ಪಾರ್ಸಿ ಹುಡುಗಿಯನ್ನು, ಕಲಿತಿದ್ದು ಕ್ರೈಸ್ತ ಕಾನ್ವೆಂಟ್ ನಲ್ಲಿ, ಇಂಗ್ಲೆಂಡ್ ನಲ್ಲಿ ಉನ್ನತ ವ್ಯಾಸಾಂಗ… ಆತ ಸಿಗರೇಟು ಸೇದುತ್ತಿದ್ದ, ಹಂದಿ ಮಾಂಸ ತಿನ್ನುತ್ತಿದ್ದ, ಮದ್ಯ ಸೇವಿಸುತ್ತಿದ್ದ… ಅಂತಹ ವ್ಯಕ್ತಿ ಅದೇಗೆ ಧರ್ಮಾಂಧನಾಗಲು ಸಾಧ್ಯ…?

ಮತ್ತಷ್ಟು ಓದು »

16
ಜುಲೈ

ಕೇಸರೀಕರಣ: ದಾಯಾದಿಗಳ ಕಲಹ

– ಸಂತೋಷ್ ಕುಮಾರ್ ಪಿಕೆ

ಕರ್ನಾಟಕದ ಪ್ರಾಥಮಿಕ ಶಾಲಾಪಠ್ಯದಲ್ಲಿ ಹೊಸ ಪಠ್ಯಕ್ರಮವನ್ನು ಸೇರ್ಪಡೆ ಮಾಡುತ್ತಿರುವ ಕುರಿತು ಎರಡು ಬಣಗಳ ನಡುವೆ ವ್ಯಾಪಕವಾದ ಚರ್ಚೆಯಾಗುತ್ತಿರುವುದು ಒಳ್ಳೆಯ ಸಂಗತಿ. ಬಿ.ಜೆ.ಪಿಯವರು ಹೊಸಪಠ್ಯಕ್ರಮವನ್ನು ಕೇಸರೀಕರಣವೆಂದೂ ಆದರೆ ಅದು ವಿರೋಧಿ ಬಣಗಳು ತಿಳಿದುಕೊಂಡಿರುವ ರೀತಿಯದ್ದಲ್ಲ ಎಂತಲೂ ಹಾಗೂ ಅದರ ವಿರೋಧಿ ಗುಂಪು ಅದು ಕೇಸರೀಕರಣ ಪ್ರಕ್ರಿಯೆ ಎಂತಲೂ ನಿರಪಯುಕ್ತವಾದ ಚರ್ಚೆಯನ್ನು ಬಿರುಸಾಗಿ ನಡೆಸುತ್ತಿದ್ದಾರೆ. ಪ್ರಸ್ತುತ ಬರಹದಲ್ಲಿ ಆ ಚರ್ಚೆಯಲ್ಲಿ ಪಾಲ್ಗೊಂಡವರು ಬೇರೆ ಬೇರೆ ತುದಿಯಲ್ಲಿ ನಿಂತಂತೆ ಭಾಸವಾದರೂ ಇಬ್ಬರೂ ಒಂದೇ ಸೇತುವೆಯ ಮೇಲೆ ನಿಂತಿರುವುದನ್ನು ನಿದರ್ಶಿಸುವ ಪ್ರಯತ್ನವನ್ನು ಮಾಡಲಾಗುವುದು. ಮೊದಲನೆಯದಾಗಿ ಬಿ.ಜೆ.ಪಿ.ಬಣದ ವಾದದಿಂದ ಪ್ರಾರಂಭಿಸುತ್ತೇನೆ.

ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ವಿಶ್ವೇಶ್ವರ ಹೆಡಗೆ ಕಾಗೇರಿಯವರು ಇತ್ತೀಚೆಗೆ ತಮ್ಮ ಲೇಖನದಲ್ಲಿ ಕೇಸರೀಕರಣದ ಕುರಿತು ಎಲ್ಲರಿಗೂ ಗೊಂದಲವಿದ್ದು, ಅದರ ಕುರಿತು ಸ್ಪಷ್ಟತೆ ಅದನ್ನು ವಿರೋಧಿಸುವ ವಿರೋಧಿಗಳಿಗಿಲ್ಲ ಎಂಬ ಮಾತನ್ನು ಹೇಳಿದ್ದಾರೆ. ನನ್ನ ಪ್ರಕಾರ, ಕೇಸರೀಕರಣದ ಕುರಿತು ಅದರ ವಿರೋಧಿಗಳಿಗಿರಲಿ, ಅದರ ಸ್ವಯಂ ಪ್ರತಿಪಾದಕರಿಗೇ ಸರಿಯಾದ ಜ್ಞಾನ ಇರುವುದು ಅನುಮಾನ. ಏಕೆಂದರೆ ಇದುವೇ ಕೇಸರೀಕರಣ ಎಂದು ಸ್ಪಷ್ಟವಾಗಿ ಹೇಳುವ ಧೈರ್ಯ ಯಾರಿಗೂ ಇದ್ದಂತಿಲ್ಲ, ಕೇವಲ ಭಗವಾಧ್ವಜ ಹಿಡಿದುಕೊಂಡು ಮಾಡುವ ಕೆಲಸಗಳು ಮಾತ್ರ ಕೇಸರೀಕರಣವಾಗುತ್ತದೆಯೇ? ಖಂಡಿತ ಇಲ್ಲ, ಏಕೆಂದರೆ ಕೇಸರೀಕರಣ ಎಂಬುದು ಒಂದು ಐಡಿಯಾಲಜಿ, ನಿದರ್ಶಿ ಷ್ಟವಾಗಿ ಇಂತಿಂತಹ ಕೆಲಸಗಳನ್ನು ಮಾಡಬೇಕು ಎಂದು ನಿರ್ದೇಶನ ನೀಡುವ ವಿಚಾರಗಳ ಗುಚ್ಚ ಅದಾಗಿದೆ. ಹಾಗೂ ಕೇಸರೀಕರಣದ ಕುರಿತು ಯಾವುದೇ ಸಿದ್ಧಾಂತ (ಥಿಯರಿ)ದ ಜ್ಞಾನಶಿಸ್ತು (ಜ್ಞಾನಶಿಸ್ತಿನ ಅಗತ್ಯ ಇಲ್ಲ ಎಂದು ಬಿ.ಜೆಪಿ ಯವರು ಭಾವಿಸಿದ್ದರೂ ಕೂಡ) ಇಲ್ಲದಿರುವುದರಿಂದ ಜನರು ತಮ್ಮ ಮನಸೋಇಚ್ಚೆ ಅರ್ಥಮಾಡಿಕೊಳ್ಳಲು ಸಾಧ್ಯವಿದೆ.

ಮತ್ತಷ್ಟು ಓದು »

25
ಏಪ್ರಿಲ್

ಈ ಯುದ್ಧ ಭೂಮಿಯಲ್ಲಿ ಸೈನಿಕರ ಬಡಿದಾಟ ಪ್ರಕೃತಿಯೊಂದಿಗೆ!

– ಡಾ ಅಶೋಕ್. ಕೆ. ಆರ್

          ಇದು ಪ್ರಪಂಚದ ಅತಿ ಎತ್ತರದ ಯುದ್ಧಭೂಮಿ. ಸಮುದ್ರಮಟ್ಟದಿಂದ ಅಜಮಾಸು 5,753 ಮೀ ಎತ್ತರದಲ್ಲಿರುವ ಹಿಮಚ್ಛಾದಿತ ರಣರಂಗ. ಭಾರತ ಮತ್ತು ಪಾಕಿಸ್ತಾನಕ್ಕೆ ಪ್ರತಿಷ್ಠೆಯ ಸಂಕೇತ. 1984ರಿಂದ ಇಲ್ಲಿಯವರೆಗೆ ಪಾಕಿಸ್ತಾನದ ಮೂರು ಸಾವಿರ ಮತ್ತು ಭಾರತದ ಐದು ಸಾವಿರಕ್ಕೂ ಹೆಚ್ಚು ಸೈನಿಕರು ಇಲ್ಲಿ ಹತರಾಗಿದ್ದಾರೆ [ಅನಧಿಕೃತ ವರದಿ; ಅಧಿಕೃತ ವರದಿಯನ್ನು ಎರಡೂ ದೇಶದ ಸರಕಾರಗಳು ಬಹಿರಂಗಗೊಳಿಸುವುದಿಲ್ಲ]. ಬಹಳಷ್ಟು ಮಂದಿಯ ದೇಹವನ್ನು ಇನ್ನೂ ಪತ್ತೆ ಹಚ್ಚಲಾಗಿಲ್ಲ. 80%ಗಿಂತ ಹೆಚ್ಚು ಸಂಖ್ಯೆಯ ಸೈನಿಕರ ಮರಣಕ್ಕೆ ಕಾರಣವಾಗಿದ್ದು ಎದುರಾಳಿಗಳ ಬಂದೂಕಾಗಲೀ, ಆಧುನಿಕ ಕ್ಷಿಪಣಿಗಳಾಗಲೀ ಅಲ್ಲ. ದೇಶಗಡಿಗಳ ಲೆಕ್ಕಿಸದೆ ಈ ಸೈನಿಕರನ್ನು ಬಲಿ ತೆಗೆದುಕೊಂಡಿರುವುದು ಪ್ರಕೃತಿ! ಪ್ರಕೃತಿಯ ಪ್ರಮುಖಾಯುಧ ಹಿಮ!! ಇದು ಸಿಯಾಚಿನ್ ಯುದ್ಧಭೂಮಿ.

ಆಪರೇಷನ್ ಮೇಘದೂತ: –

ಬಾಂಗ್ಲಾದೇಶದ ವಿಮೋಚನಾ ಯುದ್ಧದ ನಂತರ 1972ರಲ್ಲಿ ಸಿಮ್ಲಾ ಒಪ್ಪಂದಕ್ಕೆ ಯು.ಎನ್ ನೇತೃತ್ವದಲ್ಲಿ ಭಾರತ ಮತ್ತು ಪಾಕಿಸ್ತಾನ ಸಹಿ ಹಾಕುತ್ತವೆ. ಗಡಿರೇಖೆಯನ್ನು ವಿವರಿಸುವ ಆ ಒಪ್ಪಂದದಲ್ಲಿ ಸಿಯಾಚಿನ್ ಸೇರಿರಲಿಲ್ಲ. ಹಿಮಚ್ಛಾದಿತ ಮರುಭೂಮಿಯ ಮೇಲೆ ಹಕ್ಕು ಸಾಧಿಸಲು ಇವೆರಡೂ ದೇಶಗಳು ಬಡಿದಾಡಲಾರವು ಎಂದುಕೊಂಡಿತ್ತು ಯು.ಎನ್. ಆದರೆ ನಡೆದಿದ್ದೇ ಬೇರೆ! 1967ರಿಂದಲೇ ಅಮೆರಿಕಾದ ರಕ್ಷಣಾ ಸಂಸ್ಥೆಗಳು ತಯಾರಿಸಿದ ನಕ್ಷೆಗಳಲ್ಲಿ ಸಿಯಾಚಿನ್ ಪ್ರದೇಶವನ್ನು ಯಾವುದೇ ಐತಿಹಾಸಿಕ ಆಧಾರಗಳಿಲ್ಲದಾಗ್ಯೂ ಪಾಕಿಸ್ತಾನದ ಭಾಗವಾಗಿ ತೋರಿಸಲಾರಂಭಿಸಿತು. ಪಾಕಿಸ್ತಾನ ಕೂಡ ಅಮೆರಿಕದ ಕುಮ್ಮಕ್ಕಿನಿಂದಾಗಿ ಕ್ರಮೇಣವಾಗಿ ಸಿಯಾಚಿನ್ ಪ್ರದೇಶದ ಮೇಲೆ ಹಕ್ಕು ಚಲಾಯಿಸಲಾರಂಭಿಸಿತು. ಪಾಕಿನ ಈ ವರ್ತನೆಯನ್ನು ಗಮನಿಸಿದ ಭಾರತ ಸರಕಾರ ಕೂಡ ತನ್ನ ಸೈನ್ಯವನ್ನು ‘ಎತ್ತರದ ಪ್ರದೇಶಗಳಲ್ಲಿ ಯುದ್ಧ ತರಬೇತಿಯ’ ನೆಪದಲ್ಲಿ ಸಿಯಾಚಿನ್ ಪ್ರದೇಶಕ್ಕೆ ನಿಯೋಜಿಸಲಾರಂಭಿಸಿತು.

ಕುದಿಯಲಾರಂಭಿಸಿದ ದ್ವೇಷ 1984ರಲ್ಲಿ ಯುದ್ಧ ರೂಪವನ್ನು ಪಡೆಯಿತು. ಸಿಯಾಚಿನ್ ಪ್ರದೇಶವನ್ನು ಹಿಂಪಡೆದುಕೊಳ್ಳಲು ಆಪರೇಷನ್ ಮೇಘದೂತದ ಹೆಸರಿನಲ್ಲಿ ಭಾರತದ ಸೈನಿಕರು ಸಿಯಾಚಿನ್ ಏರಲಾರಂಭಿಸಿದರು. ಸರಿಸುಮಾರು ಸಾವಿರ ಚದುರ ಮೈಲು ಪ್ರದೇಶವನ್ನು ವಶಪಡಿಸಿಕೊಳ್ಳುವುದರಲ್ಲಿ ಭಾರತ ಸಫಲವಾಗಿ ಯುದ್ಧದಲ್ಲಿ ಗೆಲುವು ಪಡೆಯಿತು.

ಮತ್ತಷ್ಟು ಓದು »

24
ಏಪ್ರಿಲ್

ಒಳಸಂಚಿಗೆ ಬೇಕಿದೆ ಆತ್ಮವಿಶ್ವಾಸದ ಅಗ್ನಿಸ್ಪರ್ಷ

– ಚಕ್ರವರ್ತಿ ಸೂಲಿಬೆಲೆ
   ಅಗ್ನಿ ೫ ಬಂದನಂತರ ರಣಾಂಗಣದಲ್ಲಿ ನಮ್ಮನ್ನು ಸೋಲಿಸಲು ಚೀನಾಕ್ಕೆ ಸಾಧ್ಯವಾಗಲಾರದು ನಿಜ. ಆದರೆ ಸಂಸತ್ತಿನ ಮೇಜಿನ ಮೇಲೆಯೇ ನಮ್ಮ ಸೋಲಿಗೆ ಷರಾ ಬರೆದರೆ ಯಾರು ಏನು ಮಾಡಿಯಾರು ಹೇಳಿ!?

ನಾಲ್ಕು ವರ್ಷಗಳ ತಪಸ್ಸು ಪೂರ್ಣಗೊಂಡಿದೆ. ೭೦೦ ಕಿ.ಮೀ.ದೂರದವರೆಗೂ ಹೋಗಿ ಶತ್ರು ಠಾಣ್ಯ ನಾಶ ಮಾಡಿಬರಬಲ್ಲ. ಅಗ್ನಿ ೧ನ್ನು ನಭಕ್ಕೆ ಹಾರಿಬಿಟ್ಟಾಗಿನಿಂದಲೂ ೫,೦೦೦ ಕಿ.ಮೀ. ದೂರಕ್ಕೆ ಹೋಗಬಲ್ಲ ಅಗ್ನಿಯ ಕನಸು ಕಾಣುತ್ತಲೇ ಇದ್ದವರು ನಾವು. ಮೊನ್ನೆ ಅಗ್ನಿ ೫ ಯಶಸ್ವಿಯಾಗಿ ಉಡಾವಣೆಗೊಂಡು ಸೈನ್ಯದ ಶಕ್ತಿಯನ್ನು ನೂರ್ಮಡಿಗೊಳಿಸಿದಾಗ ಆ ಕನಸು ನನಸಾಯಿತು. ಕನಸು ನನಸುಗಳ ಕತೆ ಏನೇ ಇರಲಿ. ಸೈನ್ಯದ ಸಾಮರ್ಥ್ಯದ ಕುರಿತಂತೆ ನಡೆಯುತ್ತಿದ್ದ ವಾದ ವಿವಾದಗಳಿಂದ ಈ ಪರೀಕ್ಷೆ ಕೇಂದ್ರ ಸರ್ಕಾರವನ್ನಂತೂ ಪಾರುಮಾಡಿತು. ಅಗ್ನಿಯೂ ತಂಪೆರೆಯಬಲ್ಲದೆಂದರೆ ಹೀಗೇ ನೋಡಿ!

ಈ ನಾಲ್ಕು ವರ್ಷಗಳ ಪ್ರಯತ್ನ ಅಂತ್ಯ ಕಾಣಲು ಇನ್ನೂ ಸ್ವಲ್ಪ ಕಾಲಾವಕಾಶ ಬೇಕಿತ್ತು. ಆದರೆ ರಕ್ಷಣಾ ಸಚಿವ ಆಂಟನಿ ವಿಜ್ಞಾನಿಗಳಿಗೆ ದುಂಬಾಲು ಬಿದ್ದು ಈ ಪ್ರಯೋಗವನ್ನು ಸಾಧ್ಯವಾಗಿಸಿ ಯಶಸ್ಸು ಗಳಿಸಿಕೊಂಡರು. ಈ ನಿಟ್ಟಿನಲ್ಲಿ ಡಿಆರ್‌ಡಿಓಗೆ ಸಹಕಾರಿಯಾಗಿ ಹಲವು ವೈಜ್ಞಾನಿಕ ಸಂಸ್ಥೆಗಳು ದುಡಿದಿವೆ. ಯಶಸ್ಸಿನ ಈ ಹೊತ್ತಿನಲ್ಲಿ ಆ ವಿಜ್ಞಾನಿಗಳಿಗೆಲ್ಲ ಒಂದು ಪ್ರೀತಿಯ ಸಲಾಮು.

ಮತ್ತಷ್ಟು ಓದು »

5
ಏಪ್ರಿಲ್

ಗುಂಡು ಬಿಡದ ಬಂದೂಕುಗಳ ನಡುವೆ!

– ಸಂತೋಷ್ ಆಚಾರ್ಯ

೧೯೫೯ರಲ್ಲಿ ಜನರಲ್ ತಿಮ್ಮಯ್ಯ ಭಾರತ ಚೀನಾ ಯುದ್ಧದ ಸಾಧ್ಯತೆ ಮತ್ತು ಅದಕ್ಕೆ ಬೇಕಾದ ತಯಾರಿಯನ್ನು ಮಾಡಲು ಒಪ್ಪಿಗೆ ಕೇಳಿದಾಗ ಆಗಿನ ರಕ್ಷಣಾ ಮಂತ್ರಿಯಾಗಿದ್ದ ಕೃಷ್ಣ ಮೆನನ್ ಅದನ್ನು ನಿರಾಕರಿಸಿದ್ದರು. ಇದರಿಂದ ಕುಪಿತಗೊಂಡ ಜನರಲ್ ರಾಜೀನಾಮೆಯನ್ನು ಎಸೆದಿದ್ದರು. ಜನರಿಂದ ಸರ್ಕಾರ ಎನ್ನುವ ಅರ್ಥದ ಪ್ರಜಾಪ್ರಭುತ್ವ ಶುರುವಾದ ಹೊತ್ತಲ್ಲೇ ಜನರು ಬದಲಿಸಬಯಸುವ ಸರ್ಕಾರದ ನೀತಿಗಳನ್ನು ಬದಲಿಸುವ ಅನುಮತಿ ಆಗಲೇ ಇರಲಿಲ್ಲ. ನೆಹರೂ ರಾಜೀನಾಮೆಗೆ ಒಪ್ಪದೇ ಅವರನ್ನು ಅವರ ಅವಧಿ ಮುಗಿಯುವ ತನಕ(೧೯೬೧) ಇಟ್ಟುಕೊಂಡಿದ್ದು ಮತ್ತು ಭಾರತ ಯುದ್ಧದಲ್ಲಿ(೧೯೬೨) ಹೀನಾಯವಾಗಿ ಸೋತದ್ದು ಈಗ ಕೇವಲ ಇತಿಹಾಸ! ನೆಹರೂ ಚಾಣಾಕ್ಷತನದಿಂದ ವರ್ತಿಸಿದ್ದರೆ ಯುದ್ಧವನ್ನು ತಪ್ಪಿಸಬಹುದಿತ್ತು ಎಂದು ಈಗಲೂ ಎಷ್ಟೋ ಜನ ಹೇಳುತ್ತಾರೆ. ತನ್ನ ತಂತ್ರವನ್ನು ಒಪ್ಪಲಿಲ್ಲವೆಂದು ರಾಜೀನಾಮೆ ಎಸೆದು ಸರ್ಕಾರದಿಂದ ದೂರ ಸರಿಯುವುದಕ್ಕೂ ತಾನು ಮಾಡಿದ್ದು ಸರಿ ಎಂದು ಅದಕ್ಕಾಗಿ ಸರ್ಕಾರಕ್ಕೆ ಕೇರೇ ಎನ್ನದೆ ಅದನ್ನು ಕೋರ್ಟಿಗೆಳೆಯುವುದಕ್ಕೂ ಎಷ್ಟು ವ್ಯತ್ಯಾಸಗಳನ್ನು ನಾವು ಗುರುತಿಸಬಹುದು?
ತನ್ನ ಕಾರ್ಯಾವಧಿಯ ಕೊನೆಯ ವರ್ಷದಲ್ಲಿ ಇಂತಹಾ ಅಗ್ನಿಪರೀಕ್ಷೆ ಜನರಲ್ ವಿ.ಕೆ ಸಿಂಗ್‍ಗೆ ಬೇಕಿತ್ತೇ ಎಂದು ಸಾಮಾನ್ಯವಾಗಿ ಅನಿಸುವುದು ಸಹಜ. ಆದರೆ ಸ್ವಲ್ಪವೂ ಕ್ರಮಬದ್ಧತೆಯಿಂದ ನಿರ್ವಹಿಸದ ಸರ್ಕಾರಿ ಕಚೇರಿಗಳಿಗೆ ಇದು ಮುಖದ ಮೇಲೆ ಹೊಡೆದ ಕಪಾಳಮೋಕ್ಷ. ರಕ್ಷಣಾ ಮಂತ್ರಾಲಯದ ಮುಂದೆ ಭೂ ಸೇನೆಯ ಸಮಸ್ಯೆಗಳು ಗುಡ್ಡಗಟ್ಟುತ್ತಿವೆ. ಜನರಲ್ ವಯಸ್ಸಿನ ಸಮಸ್ಯೆಯಿಂದ ಶುರುವಾಗಿ ಲಂಚದ ಕೇಸು, ಟ್ರಕ್ಕುಗಳಲ್ಲಿ ನಡೆದ ಭ್ರಷ್ಟಾಚಾರ, ಲೀಕಾದ ಪತ್ರ ಹೀಗೆ ವಿ.ಕೆ ಸಿಂಗ್ ಪತ್ರಿಕೆಗಳ ಮುಖಪುಟದಲ್ಲಿ ರಾರಾಜಿಸುತ್ತಿದ್ದಾರೆ. ಈ ನಡುವೆ ತಮ್ಮ ಸ್ವಾರ್ಥಕ್ಕಾಗಿ ತಾವೇ ಪತ್ರವನ್ನು ಲೀಕ್ ಮಾಡಿದ್ದಾರೆ ಎಂದೂ ಹೇಳಲಾಗುತ್ತಿದೆ. ಇಳಿ ವಯಸ್ಸಿನ ಮಾನಸಿಕ ಸ್ಥಿತಿಗಳನ್ನು ನೋಡುವುದಾದರೆ ಅಲ್ಲಗಳೆಯಬಹುದಾದ ವಿಚಾರವೇನೂ ಅಲ್ಲ. ಆದರೂ ಮೊದಲು ಕಮಾಂಡೋ ಆಗಿದ್ದ ಜನರಲ್ ಹೀಗೆ ಮಾಡಬಹುದೇ ಎಂಬ ಪ್ರಶ್ನೆಯೂ ಉದ್ಭವಿಸುತ್ತದೆ. ವಿ.ಕೆ ಸಿಂಗ್ ಒಬ್ಬ ಹೋರಾಟಗಾರ. ನೇರವಾಗಿ ವಿಷಯಗಳನ್ನು ನಿಭಾಯಿಸುವ ನಿಷ್ಠುರ ವ್ಯಕ್ತಿ. ಅವರ ಮೇಲೆ ಆಪಾದನೆ ಹೊರಿಸುವ ಮೊದಲು ಮನಸ್ಸು ಕೂಡ ಎಲ್ಲೋ ಒಪ್ಪಲು ನಿರಾಕರಿಸುತ್ತದೆ.
ಮತ್ತಷ್ಟು ಓದು »

4
ಏಪ್ರಿಲ್

ಸೇನೆ-ಸರ್ಕಾರದ ನಡುವೆ ಬಡವಾಗದಿರಲಿ ನನ್ನ ಭಾರತ

– ರಾಕೇಶ್ ಶೆಟ್ಟಿ

ಆವತ್ತು ಸಂಸತ್ತಿನಲ್ಲಿ ಭಾಷಣಕ್ಕೆ ನಿಂತ ನೆಹರೂ ದೇಶದ ಒಂದಿಂಚು ನೆಲವನ್ನು ಚೀನಿಗಳೀಗೆ ಬಿಟ್ಟುಕೊಡುವುದಿಲ್ಲ.ಎಂತಾ ಯುದ್ಧಕ್ಕಾದರೂ ಸೈನ್ಯ ತಯಾರಿದೆ ಅನ್ನುತ್ತಲೇ  ತಮ್ಮ ಕೋಟಿನಿಂದ ತೆಗೆದ ಕೆಂಪು ಗುಲಾಬಿಯನ್ನ ಜನರ ಕಿವಿಗಿಟ್ಟರು.ಅವರ ಭಾಷಣದ ನಂತರದ ಇತಿಹಾಸ ನಿಮಗೆ ಗೊತ್ತಿರಲೇಬಹುದು.ಆ ಕಹಿ ನೆನಪಿಗೆ ೫೦ ವರ್ಷ ಆಗೋ ಸಮಯದಲ್ಲಿ ಮತ್ತೊಮ್ಮೆ ಕಳೆದವಾರ ಸಂಸತ್ತಿನಲ್ಲಿ ರಕ್ಷಣಾ ಸಚಿವ ಆಂಟನಿಯವರೂ ಸಹ ಭಾರತದ ಸೈನ್ಯ ಬಲಿಷ್ಟವಾಗಿದೆ,ಯುದ್ಧ ಸನ್ನದ್ಧವಾಗಿದೆ ಅಂದಿದ್ದಾರೆ.ನೆಹರೂ ಅವರಿಗೂ-ಅವ್ರ ಕಾಲಕ್ಕೂ ತುಲನೆ ಮಾಡಿದರೆ ಆಂಟನಿ ಅವರನ್ನ ಸ್ವಲ್ಪ ನಂಬಬಹುದು ಅನ್ನಿಸುತ್ತದೇ.ಆದರೆ…

ಕಳೆದ ವಾರ ನಡೆದ ವಿದ್ಯಾಮಾನಗಳಿವೆಯಲ್ಲ ಅವೆಲ್ಲ ಗಾಬರಿ ಹುಟ್ಟಿಸುವಂತವು.ಇದಕ್ಕೆ ಮುನ್ನುಡಿ ಬರೆದಿದ್ದು ಜನರಲ್.ವಿ.ಕೆ ಸಿಂಗ್…! ಜನ್ಮ ದಿನಾಂಕದ ರಗಳೆಯ ನಂತರ ಸ್ವಲ್ಪ ದಿನ ಸುಮ್ಮನಾಗಿದ್ದವ್ರು, ಟಿವಿ ಚಾನೆಲ್ನೊಂದಿಗೆ ಮಾತನಾಡುತ್ತ ತಮಗೆ ೧೪ ಕೋಟಿ ಲಂಚ ನೀಡಲು ಬಂದ ಪ್ರಸಂಗದ ಬಗ್ಗೆ ಬಾಯಿಬಿಡುವ ಮೂಲಕ.ಮತ್ತೆ ಆ ವಿಷಯವನ್ನ ನಾನು ರಕ್ಷಣಾ ಮಂತ್ರಿ ಆಂಟನಿ ಅವರಿಗೂ ಹೇಳಿದ್ದೆ ಅನ್ನುವುದು ಬೆಂಕಿಗೆ ತುಪ್ಪ ಸುರಿದಂತಾಗಿ ಹೋಯಿತು.ಸಂಸತ್ತಿನಲ್ಲಿ ಆಂಟನಿ ’ಅವರು ಮೌಕಿಕವಾಗಿ ಹೇಳಿದ್ದರು ನಾನು ಏನು ತಾನೇ ಮಾಡಲಿ” ಅಂತೆಲ್ಲ ಗೋಳಾಡುವಾಗಲೇ, ಜನರಲ್ ಪ್ರಧಾನಿ ಅವ್ರಿಗೆ ಬರೆದ ಮತ್ತು ದೇಶದ ಭದ್ರತೆಯ ದೃಷ್ಟಿಯಿಂದ ಅತ್ಯಂತ ರಹಸ್ಯವಾಗಿರಬೇಕಿದ್ದ ಪತ್ರ ಸೋರಿಕೆಯಾಗಿದ್ದು.!

ಮತ್ತಷ್ಟು ಓದು »