ಸಂಸ್ಕೃತಿ ಸಂಕಥನ – 18 – ಇಸ್ಲಾಮಿಕ್ ಹಾಗೂ ಯುರೋಪಿಯನ್ ವಸಾಹತುಶಾಹಿ
-ರಮಾನಂದ ಐನಕೈ
ಇತ್ತೀಚೆಗೆ ಮಂಚೀಕೇರಿಯಲ್ಲಿ ಬಾಲಗಂಗಾಧರರ ಸಂವಾದ ಕಾರ್ಯಕ್ರಮ ಏರ್ಪಡಿಸ ಲಾಗಿತ್ತು. ಮುಂಚೀಕೇರಿಯ ಸಂಹತಿ ಟ್ರಸ್ಟ್ ಹಾಗೂ ಶಿವಮೊಗ್ಗ ಸ್ಥಳೀಯ ಸಂಸ್ಕೃತಿಗಳ ಅಧ್ಯಯನ ಕೇಂದ್ರದ ಜಂಟಿ ಆಶ್ರಯದಲ್ಲಿ ನಡೆದ ಈ ಕಾರ್ಯಕ್ರಮವನ್ನು ಸಂಹತಿ ಗೆಳೆಯರು ತುಂಬಾ ಅಚ್ಚುಕಟ್ಟಾಗಿ ಸಂಘಟಿಸಿದ್ದರು. ನೂರಕ್ಕೂ ಹೆಚ್ಚು ಜನ ಸಂವಾದದಲ್ಲಿ ಪಾಲ್ಗೊಂಡು ಪ್ರಶ್ನೆಗಳ ಸುರಿಮಳೆ ಗೈದರು. ಬೇರೆ ಬೇರೆ ಪ್ರಶ್ನೆಗಳಿಗೆ ಬಾಲ ಗಂಗಾಧರರು ನೀಡಿದ ಉತ್ತರಗಳನ್ನು ಒಂದು ಚೌಕಟ್ಟಿನಲ್ಲಿ ಹಿಡಿದಿಡುವ ಪ್ರಯತ್ನ ಇಲ್ಲಿದೆ.
ಭಾರತ ತನ್ನ ಇತಿಹಾಸದಲ್ಲಿ ಎರಡು ವಸಹಾತು ಶಾಹಿಗಳನ್ನು ಕಂಡಿದೆ. ಇಸ್ಲಾಮಿಕ್ ಹಾಗೂ ಯುರೋಪಿಯನ್ ವಸಾಹತುಶಾಹಿ. ಇವೆರಡೂ ಕೂಡಾ ಸೆಮೆಟಿಕ್ ರಿಲಿಜನ್ ಹೊಂದಿದ ಸಂಸ್ಕೃತಿ ಯಿಂದ ಬಂದಂತಹವುಗಳು. ಇವರು ಪ್ರಪಂಚದ ಎಲ್ಲ ಸಂಸ್ಕೃತಿಗಳಲ್ಲಿ ರಿಲಿಜನ್ ಇದೆ ಎಂದು ನಂಬಿ ದವರು, ಭಾರತಕ್ಕೆ ಬಂದಾಗ ಇಲ್ಲಿನ ಸಂಸ್ಕೃತಿ ಯಲ್ಲೂ ರಿಲಿಜನ್ ಹುಡುಕಲು ಪ್ರಾರಂಭಿಸಿದರು. ಅದು ಅವರಿಗೆ ಸುಲಭಕ್ಕೆ ಸಾಧ್ಯವಾಗಲಿಲ್ಲ. ಸೆಮೆಟಿಕ್ ರಿಲಿಜನ್ಗಳ ಕನ್ನಡಕ ಹಾಕಿಕೊಂಡು ಹುಡುಕಿದರು. ಕೊನೆಗೂ ‘ಹಿಂದೂಯಿಸಂ’ ಎಂಬ ರಿಲಿಜನ್ನನ್ನು ಕಂಡುಹಿಡಿದೇಬಿಟ್ಟರು. ಹಿಂದೂ ರಿಲಿಜನ್ ಅಂದರೆ ಪಾಶ್ಚಾತ್ಯರಿಗೆ ಮಾತ್ರ ಅರ್ಥ ವಾಗುತ್ತದೆ. ಭಾರತೀಯರಿಗೆ ಅರ್ಥವಾಗುವು ದಿಲ್ಲ. ಏಕೆಂದರೆ ಭಾರತದ ಹೆಚ್ಚಿನ ಜನರಿಗೆ ಹಿಂದೂ ರಿಲಿಜನ್ನಿನ ಅನುಭವವೇ ಆಗುವುದಿಲ್ಲ. ರಿಲಿಜ ನ್ನಿನ ಯಾವುದೇ ಸರಳ ರೇಖೆಗಳು ನಮ್ಮಲ್ಲಿಲ್ಲ. ದಿನನಿತ್ಯ ನಮ್ಮ ನಡುವೆ ಕಾಣುವ ಗೊಂದಲಗಳು ರಿಲಿಜನ್ ಹಾಗೂ ಸಂಸ್ಕೃತಿಯ ನಡುವಿನ ಹೊಂದಾಣಿಕೆ ಆಗದ ತಿಕ್ಕಾಟಗಳು, ಆದರೆ ಇದು ವರೆಗೆ ಯಾವ ಭಾರತೀ ಯನೂ ಈ ಕುರಿತು ಸಂಶೋಧನೆ ನಡೆಸದೇ ಇದ್ದದ್ದು ಆಶ್ಚರ್ಯದ ವಿಷಯ. ಪಾಶ್ಚಿಮಾತ್ಯರು ಭಾರತದ ಕುರಿತಾದ ತಮ್ಮ ಅನುಭವಗಳನ್ನು ಹೇಳಿ ಕೊಳ್ಳುತ್ತ ಬಂದರು. ಅವರ ಅನುಭವಗಳನ್ನೇ ಭಾರತೀಯರು ತಮ್ಮ ನಿಜ ಎಂದು ನಂಬಿಕೊಳ್ಳುತ್ತ ಬಂದರು. ಅವರ ಅನುಭವಗಳನ್ನೇ ಈಗ ನಮ್ಮ ಅನುಭವಗಳೆಂಬಂತೆ ಪುನರಾವರ್ತಿಸುತ್ತಿದ್ದೇವೆ. ಇದನ್ನೇ ವಸಾಹತು ಪ್ರಜ್ಞೆ ಅನ್ನುವುದು. ಬಾಲ ಗಂಗಾಧರರು ಈ ಕುರಿತು ಸಂಶೋ ಧನೆ ನಡೆಸುತ್ತಿರುವ ದೇಶದ ಹಾಗೂ ಪ್ರಪಂಚದ ಪ್ರಪ್ರಥಮ ಚಿಂತಕರು.
‘ಚಿತ್ತಗಾಂಗ್’ನಲ್ಲಿ ಸ್ವಾತಂತ್ರ್ಯ’ಸೂರ್ಯ’ನ ಉದಯ…!
– ಭೀಮಸೇನ್ ಪುರೋಹಿತ್
‘ಚಿತ್ತಗಾಂಗ್’ ಅನ್ನೋ ಹೆಸರು ಕೇಳಿದರೆ ಸಾಕು, ಸ್ವಾತಂತ್ರ್ಯ ಇತಿಹಾಸವನ್ನು ಓದಿದ ಪ್ರತಿಯೊಬ್ಬರಿಗೂ ಮೈನವಿರೇಳುತ್ತದೆ. ಅಂಥಾ ಚಮತ್ಕಾರ ನಡೆದ ಸ್ಥಳ ಅದು. ಕ್ರಾಂತಿಕಾರಿಗಳ, ದೇಶಪ್ರೇಮಿಗಳ ಪುಣ್ಯಕ್ಷೇತ್ರವದು.ಆದರೆ, ದೇಶ ವಿಭಜನೆಯಾದ ಮೇಲೆ, ಈಗ ಈ ಜಾಗ ‘ಬಾಂಗ್ಲಾದೇಶ’ದಲ್ಲಿದೆ..
ಅವನ ಹೆಸರು ‘ಸೂರ್ಯಸೇನ್’. ವೃತ್ತಿಯಿಂದ ಶಿಕ್ಷಕ.. ಎಲ್ಲ ವಿದ್ಯಾರ್ಥಿಗಳ ಪ್ರೀತಿಯ ‘ಮಾಸ್ಟರ್ ದಾ’.ಹುಟ್ಟಿದ್ದು ನೌಪರ ಎಂಬ ಗ್ರಾಮದಲ್ಲಿ, 1894 ರಲ್ಲಿ…ಅದಾಗಲೇ, ಬಂಗಾಳದ ಪ್ರಸಿದ್ಧ ಸಂಘಟನೆಗಳಾದ ‘ಅನುಶೀಲನ ಸಮಿತಿ’ ಮತ್ತು ‘ಜುಗಾಂತರ’ ದಿಂದ ಪ್ರಭಾವಿತನಾಗಿದ್ದ..
ಭಾರತದ ಸ್ವಾತಂತ್ರ್ಯ, ಚಿತ್ತಗಾಂಗ್ ಗ್ರಾಮದಿಂದಲೇ ಪ್ರಾರಂಭವಾಗಬೇಕೆಂಬ ಮಹತ್ವಾಕಾಂಕ್ಷೆ ಹೊದಿದ್ದ.. ಅದಕ್ಕಾಗಿ ಮಾಸ್ಟರ್ ದಾ, ಸಂಘಟನೆಯನ್ನೂ ಶುರು ಮಾಡಿದ್ರು.. ಶಿಕ್ಷಕರಾಗಿದ್ದರಿಂದ ಸಂಘಟನೆ ಮಾಡೋದು ಅಷ್ಟೇನೂ ಕಷ್ಟ ಆಗ್ಲಿಲ್ಲ. ಶಾಲೆಯಲ್ಲಿನ, ಕೇವಲ 14-15 ವರ್ಷದೊಳಗಿನ ಪುಟ್ಟ ವಿದ್ಯಾರ್ಥಿಗಳೂ ಸೂರ್ಯಸೇನನ ಜೊತೆ ಸಹಕರಿಸಲು ಮುಂದೆ ಬಂದ್ರು..
ಧ್ಯಾನಸ್ಥಯೋಗಿಯಾಗಿದೆ ಮಹಾಸಹ್ಯಗಿರಿ!
-ಬಿ.ಆರ್. ಸತ್ಯನಾರಾಯಣ್
“ನಾವು ನಿಂತ ಸ್ಥಳ ಎತ್ತರವಾಗಿತ್ತು. ಸುಮಾರು ಮೂವತ್ತು ಮೈಲಿಗಳ ದೃಶ್ಯ ನಮ್ಮೆದುರಿಗಿತ್ತು. ದಿಗಂತವಿಶ್ರಾಂತವಾದ ಸಹ್ಯಾದ್ರಿ ಪರ್ವತಶ್ರೇಣಿಗಳು ತರಂಗತರಂಗಗಳಾಗಿ ಸ್ಪರ್ಧೆಯಿಂದ ಹಬ್ಬಿದ್ದುವು. ದೂರ ಸರಿದಂತೆಲ್ಲ ಅಸ್ಫುಟವಾಗಿ ತೋರುತ್ತಿದ್ದುವು. ಕಣಿವೆಗಳಲ್ಲಿ ಇಬ್ಬನಿಯ ಬಲ್ಗಡಲು ತುಂಬಿತ್ತು. ವೀಚಿವಿಕ್ಷೋಭಿತ ಶ್ವೇತಫೇನಾವೃತ ಮಹಾವಾರಿಧಿಯಂತೆ ಪಸರಿಸಿದ್ದ ತುಷಾರ ಸಮುದ್ರದಲ್ಲಿ ಶ್ಯಾಮಲಗಿರಿಶೃಂಗಳು ದ್ವೀಪಗಳಂತೆ ತಲೆಯೆತ್ತಿಕೊಂಡಿದ್ದುವು. ಕಂದರ ಪ್ರಾಂತಗಳಲ್ಲಿದ್ದ ಗದ್ದೆ ತೋಟ ಹಳ್ಳಿ ಕಾಡು ಎಲ್ಲವೂ ಹೆಸರಿಲ್ಲದಂತೆ ಅಳಿಸಿಹೋಗಿದ್ದುವು. ದೃಷ್ಟಿಸೀಮೆಯನ್ನೆಲ್ಲ ಆವರಿಸಿದ್ದ ತುಷಾರಜಲನಿಧಿಯಲ್ಲಿ ಹಡಗುಗಳಲ್ಲಿ ಕುಳಿತು ಸಂಚರಿಸಬಹುದೆಂಬಂತಿತ್ತು! ನಾವು ಮೂವರೂ ಅವಾಕ್ಕಾಗಿ ನಿಂತು ನೋಡಿದೆವು. ಇಬ್ಬನಿಯ ಕಡಲಿನಿಂದ ತಲೆಯೆತ್ತಿ ನಿಂತಿದ್ದ ಗಿರಿಶೃಂಗಗಳು ಮುಂಬೆಳಕಿನ ಹೊಂಬಣ್ಣವನ್ನು ಹೊದೆದಿದ್ದುವು. ಬಾಲಸೂರ್ಯನ ಸ್ನಿಗ್ಧಕೋಮಲ ಸುವರ್ಣಜ್ಯೋತಿಯಿಂದ ವೃಕ್ಷಾರಜಿಗಳ ಶ್ಯಾಮಲಪರ್ಣವಿತಾನಗಳಲ್ಲಿ ಖಚಿತವಾಗಿದ್ದ ಸಹಸ್ರ ಸಹಸ್ರ ಹಿಮಮಣಿಗಳು ಅನರ್ಘ್ಯರತ್ನಸಮೂಹಗಳಂತೆ ವಿರಾಜಿಸುತ್ತಿದ್ದುವು. ಬೆಳ್ನೊರೆಯಂತೆ ಹಬ್ಬಿದ ಇಬ್ಬನಿಯ ಕಡಲಿನಲ್ಲಿ ಮುಳುಗಿಹೋಗಿದ್ದ ಕಣಿವೆಯ ಕಾಡುಗಳಿಂದ ಕೇಳಿಬರುತ್ತಿದ್ದ ವಿವಿಧವಿಹಂಗಮಗಳ ಮಧುರವಾಣಿ ಅದೃಶ್ಯರಾಗಿ ಉಲಿಯುವ ಗಂಧರ್ವಕಿನ್ನರರ ಗಾಯನದಂತೆ ಸುಮನೋಹರವಾಗಿತ್ತು. ನಾವು ಮೂವರೂ ಅವಾಕ್ಕಾಗಿ ನಿಂತು ನೋಡಿದೆವು! ನೋಡಿದೆವು, ನೋಡಿದೆವು, ಸುಮ್ಮನೆ ಭಾವಾವಿಷ್ಟರಾಗಿ!”
ಸ್ನೇಹಿತರೊಂದಿಗೆ ಇರುಳು ಬೇಟೆಗೆ ಹೋಗಿದ್ದ ಯುವಕವಿ ಪುಟ್ಟಪ್ಪ, ತಾನು ಕುಳಿತಿದ್ದ ಜಾಗ, ಸಮಯ ಎಲ್ಲವನ್ನೂ ಮರೆತು ಪ್ರಕೃತಿ ಉಪಾಸಕನಾಗಿಬಿಡುತ್ತಾನೆ. ’ಜೊನ್ನದ ಬಣ್ಣದಿ ತುಂಬಿದ ಬಿಂಬದ ಹೊನ್ನಿನ ಸೊನ್ನೆಯು ಮೂಡಿದುದು’ ಎಂಬಂತೆ ಕವಿಗೆ ಕಂಡ ಚಂದ್ರೋದಯ ’ಬೇಟೆಗಾರನಿಗೆ ಬೇಟೆಯಾಗದಿದ್ದರೂ ಕಬ್ಬಿಗನಿಗೆ ಬೇಟೆಯಾಯಿತು’ ಅನ್ನಿಸಿಬಿಡುತ್ತದೆ. ಇಡೀ ರಾತ್ರಿಯನ್ನು ಹೀಗೇ ಕಳೆದು, ನಸುಕಿನಲ್ಲಿಯೇ ಬರಿಗೈಯಲ್ಲಿ ಸ್ನೇಹಿತರೊಂದಿಗೆ ಮನೆಗೆ ಹಿಂತಿರುಗುವಾಗ ’ಅರುಣೋದಯದ ಹೇಮಜ್ಯೋತಿ ಪೂರ್ವದಿಗ್ಭಾಗದಲ್ಲಿ ಪ್ರಬಲಿಸುತ್ತಿತ್ತು.’ ಬರುವ ದಾರಿಯಲ್ಲಿ ಬಂಡೆಗಳಿಂದ ಬಯಲಾದ ಪ್ರದೇಶದಲ್ಲಿ ನಿಂತು ನೋಡಿದಾಗ ಕಂಡ ದೃಶ್ಯವೇ ಮೇಲೆ ಕವಿಯ ಮಾತುಗಳಲ್ಲಿ ಮೂಡಿದೆ. ಅಂದು ಆ ದೃಶ್ಯವನ್ನು ಕವಿಗೆ ತೋರಿಸಿದ ಆ ಜಾಗವೇ ’ಕವಿಶೈಲ’. ಕುವೆಂಪು ಸಾಹಿತ್ಯದ ಪರಿಚಯವಿದ್ದವರೆಲ್ಲರಿಗೂ ’ಕವಿಶೈಲ’ ಗೊತ್ತಿರುತ್ತದೆ.
ಕುಪ್ಪಳಿ ಕವಿಮನೆಯ ಹಿಂಬದಿಗೆ ದಿಗಂತಮುಖಿಯಾಗಿರುವ ಪರ್ವತವೇ ಕವಿಶೈಲ. ಕಲೆಯ ಕಣ್ಣಿಲ್ಲದವರಿಗೆ ಒಂದು ಕಲ್ಲುಕಾಡು; ಕಲಾವಂತನಿಗೆ ಸಗ್ಗವೀಡು ಆಗಿರುವ ಕವಿಶೈಲದ ನಿಜಮನಾಮ ಆಗ್ಗೆ ’ದಿಬ್ಬಣಕಲ್ಲು’. ನಂತರ, ಅದರ ಕಾರಣದಿಂದಲೇ ಪುಟ್ಟಪ್ಪ ಕುವೆಂಪು ಆದ ಮೇಲೆ ಕವಿಶೈಲವೆಂದು ಹೆಸರು ಪಡೆದ ಗಿರಿ. ಅಲ್ಲಿಯ ಒಂದೊಂದು ವಸ್ತುಗಳು, ದೃಶ್ಯಗಳು, ಭೂತದಸಿಲೇಟು, ಬೂರುಗದ ಮರ, ನಿಲುವುಗಲ್ಲು, ಸೂರ್ಯೋದಯ, ಸೂರ್ಯಾಸ್ತ ಎಲ್ಲವೂ ಕುವೆಂಪು ಸಾಹಿತ್ಯದಲ್ಲಿ ಸ್ಥಾಯಿಯಾಗಿ, ಓದುಗರಲ್ಲಿ ಸಂಚಾರಿಯಾಗಿಬಿಟ್ಟಿವೆ.
ಬೇಟೆಗಾರರಾಗಿ ಬನಕೆ ಹೋದವರು ಮರಳಿ ಮನೆಗೆ ಬಂದುದು ಕಬ್ಬಿಗರಾಗಿ! ಕವಿಶೈಲದ ಬಗ್ಗೆ ಕವಿ ಕೇವಲ ಹನ್ನೆರಡು ದಿನಗಳಲ್ಲಿ ಆರು ಸಾನೆಟ್ಟುಗಳನ್ನು ಬರೆದಿದ್ದಾರೆ! ಮೊದಲ ಒಂದನ್ನು ಬಿಟ್ಟರೆ ಉಳಿದ ಐದು ಸಾನೆಟ್ಟುಗಳು ಐದೇ ದಿನದಲ್ಲಿ ದಿನಕ್ಕೊಂದರಂತೆ ರಚನೆಯಾಗಿವೆ! ಮಲೆನಾಡಿನ ಚಿತ್ರಗಳು ಪುಸ್ತಕದಲ್ಲಿ ಮೇಲೆ ವರ್ಣಿಸಿರುವ ಕವಿಶೈಲದ ವರ್ಣನೆಗೆ ಸಂವಾದಿಯಾಗಿ ೧೬.೪.೧೯೩೪ರಲ್ಲಿ ಮೊದಲನೆಯ ಸಾನೆಟ್ ರಚಿತವಾಗಿದೆ. ಮತ್ತಷ್ಟು ಓದು 
ಸಮಾನೋ ಮಂತ್ರ: ಸಮಿತಿ: ಸಮಾನೀ-ಒಂದು ಚಿಂತನೆ
-ಹರಿಹರಪುರಶ್ರೀಧರ್
ಅನೇಕ ದಿನಗಳಿಂದ ನನ್ನ ಮನದೊಳಗೆ ಒಂದು ಚಿಂತೆ ಕಾಡುತ್ತಿದೆ.ನಮಗೆಲ್ಲಾ ಜನ್ಮಕೊಟ್ಟಈ ನೆಲಕ್ಕೆ ಪುಣ್ಯಭೂಮಿ, ಮೋಕ್ಷಭೂಮಿ, ತ್ಯಾಗಭೂಮಿ,ದೇವಭೂಮಿ, ಎಂದೆಲ್ಲಾ ಕವಿಗಳು ಬಣ್ಣಿಸಿದ್ದಾರೆ.ನಮ್ಮ ಋಷಿಪುಂಗವರ ತಪಸ್ಸಿನಿಂದ, ಅವರ ಆದರ್ಶಮಯ ಜೀವನದಿಂದ ನಮ್ಮ ದೇಶಕ್ಕೆ “ವಿಶ್ವಗುರುವಿನ” ಸ್ಥಾನ ಲಭಿಸಿತ್ತು ಎಂಬ ವಿಚಾರವನ್ನೂ ಸಹ ಕೇಳುತ್ತೇವೆ.ನಮ್ಮ ಈ ನೆಲದಲ್ಲಿಯೇ “ಮುತ್ತು ರತ್ನಗಳನ್ನು ಬಳ್ಳದಿಂದ ಅಳೆದು ಮಾರುತ್ತಿದರೆಂದೂ” ಕೇಳಿದ್ದೇವೆ.ಇವೆಲ್ಲದರ ಜೊತೆಗೆ ನಮ್ಮ ನಿತ್ಯ ಸಂಕಲ್ಪವಾದರೋ ” ಸರ್ವೇ ಭವಂತು ಸುಖಿನ:…….ಮಾ ಕಶ್ಚಿತ್ ದು:ಖ ಭಾಗ್ಭವೇತ್”-ಎಲ್ಲರೂ ಸುಖವಾಗಿರಬೇಕು…….., ಯಾರಿಗೂ ದು:ಖ ಬರುವುದು ಬೇಡ”. ಇದು ನಮ್ಮ ನಿತ್ಯ ಪ್ರಾರ್ಥನೆ ಯಾಗಿತ್ತು. ಆದರೆ ಎಲ್ಲೋ ಎನೋ ತಪ್ಪಾಗಿದೆಯಲ್ಲಾ! ಯಾವುದೋ ಕೊಂಡಿ ಕಳಚಿದೆಯಲ್ಲಾ!!
ಮೊನ್ನೆ ನಾನು ಅಗ್ನಿಹೋತ್ರ ಮಾಡುತ್ತಾ ಕುಳಿತಿದ್ದೆ. ನಮ್ಮಕ್ಕ ನಮ್ಮ ಮನೆಗೆ ಬಂದವರು ” ಇದೇನೋ ನೀನು “ಹೋಮ ಮಾಡುತ್ತಿದ್ದೀಯಾ? ಯಜುರ್ವೇದವರು ಮಾಡಬೇಕಾದ್ದು,ಋಗ್ವೇದಿಯಾದ ನೀನು ಮಾಡುತ್ತಿದ್ದೀಯಲ್ಲಾ!!” ವೇದಸುಧೆಯ ವಾರ್ಷಿಕೋತ್ಸವದಲ್ಲಿ ನಡೆದ ಅಗ್ನಿಹೋತ್ರ ಕಾರ್ಯಕ್ರಮದಲ್ಲಿ ಸ್ವತ: ಅಗ್ನಿಹೋತ್ರ ಮಾಡಿದ್ದ ನಮ್ಮ ಅಕ್ಕ ಶ್ರೀ ಸುಧಾಕರ ಶರ್ಮರಿಂದ ಅಗ್ನಿಹೋತ್ರದ ಅರ್ಥವಿವರಣೆಯನ್ನು ಸವಿಸ್ತಾರವಾಗಿ ಕೇಳಿದ್ದರು. ಅಂದು ಮೆಚ್ಚುಗೆ ವ್ಯಕ್ತಪಡಿಸಿದ್ದವರು. ಇವರೇ. ಆದರೆ ಅವರ ಬಾಯಲ್ಲಿಯೇ ಈ ಪ್ರಶ್ನೆ. ನಾನು ನಮ್ಮಕ್ಕನಿಗೆ ಹೇಳಿದೆ” ಆರೋಗ್ಯ ನಿಮಗೆ ಮಾತ್ರ ಬೇಕೋ? ಬೇರೆಯವರಿಗೆ ಬೇಡವೋ?
ಅವರು ನಿರುತ್ತರರಾಗಿದ್ದರು.
ಸಂಸ್ಕೃತಿ ಸಂಕಥನ – 16 ನೆಹರೂ ಸೆಕ್ಯುಲರಿಸಂ
-ರಮಾನಂದ ಐನಕೈ
ನೆಹರೂರವರು ಸಂಪೂರ್ಣ ಪಾಶ್ಚಾತ್ಯ ಶಿಕ್ಷಣ ಹಾಗೂ ಪ್ರಭಾವದಿಂದ ರೂಪಗೊಂಡವರು. ಹಾಗಾಗಿ ಅವರು ಭಾರತದ ಕುರಿತು ಚಿಂತಿಸುವಾಗ ಪಶ್ಚಿಮದಿಂದ ಪ್ರವೇಶಿಸುತ್ತಾರೆ. ಮೂಲಭೂತವಾಗಿ ನೆಹರೂರವರಿಗೆ ಭಾರತೀಯ ಸಂಸ್ಕೃತಿಯ ಬಗ್ಗೆ ಅಸಡ್ಡೆಯ ಭಾವನೆ ಇದೆ. ಈ ಭಾವನೆ ಪ್ರೊಟೆಸ್ಟಾಂಟ್ ಕ್ರಿಶ್ಚಿಯಾನಿಟಿಯಿಂದ ಬಂದಿದ್ದು. ಹಾಗಾಗಿ ನೆಹರೂ ಸೆಕ್ಯುಲರಿಸಂನಲ್ಲಿ ಪ್ರಭುತ್ವ ಈ ಮೌಢ್ಯವನ್ನು ನಿವಾರಿಸುವ ಜವಾಬ್ದಾರಿಯನ್ನು ಹೊಂದಿರುತ್ತದೆ. ಅಂದರೆ ಪ್ರಭುತ್ವ ಹೇಗೆ ‘ತಟಸ್ಥ’ ಇದ್ದಂತಾಯಿತು?
ನೆಹರೂ ಸ್ವತಂತ್ರ ಭಾರತದ ಪ್ರಥಮ ಪ್ರಧಾನಿ. ಸ್ವಾತಂತ್ರ್ಯ ಹಾಗೂ ಸಮಾನತೆಯ ಬಗ್ಗೆ ಕಸನು ಕಂಡವರು. ಪಂಚವಾರ್ಷಿಕ ಯೋಜನೆಗಳ ಮೂಲಕ ಭಾರತವನ್ನು ಹಂತಹಂತವಾಗಿ ಪ್ರಗತಿಗೆ ತರಲು ಹೆಗಲು ಕೊಟ್ಟವರು. ಭಾರತ ಲಿಬರಲ್ ಸೆಕ್ಯುಲರ್ ರಾಷ್ಟ್ರವಾಗಿ ಪ್ರಗತಿ ಮತ್ತು ಸಮಾ ನತೆಯ ತುತ್ತತುದಿಗೆ ಹೋಗಬೇಕೆಂಬ ದೃಢವಾದ ಸಂಕಲ್ಪ ಹೊಂದಿದವರು. ಹಾಗಾದರೆ ನೆಹರೂರವರ ಪ್ರಕಾರ ಲಿಬರಲ್ ಸೆಕ್ಯುಲರ್ ನೀತಿಯೆಂದರೆ ಏನು? ಅದನ್ನೇ ನೆಹರೂ ಸೆಕ್ಯುಲರ್ ಎನ್ನುವುದು.
ಪ್ರಭುತ್ವ ಎಲ್ಲಾ ರಿಲಿಜನ್ಗಳಿಂದ ತಟಸ್ಥವಾಗಿರ ಬೇಕು ಹಾಗೂ ರಿಲಿಜನ್ನನ್ನು ತನ್ನ ಎಲ್ಲಾ ವ್ಯವಹಾರ ಗಳಿಂದ ಹೊರಗಿಡಬೇಕೆಂದು ನೆಹರೂ ಅಭಿ ಪ್ರಾಯಪಡುತ್ತಾರೆ. ಪ್ರಭುತ್ವ ರಿಲಿಜನ್ನನ್ನು ಪುರಸ್ಕರಿ ಸಿದರೆ ಆ ರಾಷ್ಟ್ರ ಒಂದು ಪ್ರಗತಿಹೀನ ರಾಷ್ಟ್ರವಾಗು ತ್ತದೆ ಎಂಬುದು ಅವರ ದೃಢವಾದ ನಂಬಿಕೆ. ನೆಹರೂ ಸೆಕ್ಯುರಿಸಂನ್ನು ವೈಜ್ಞಾನಿಕ ಸೆಕ್ಯುಲರಿಸಂ ಅಂತಲೂ ಕರೆಯುತ್ತಾರೆ. ಹಾಗಾದರೆ ಈ ವೈಜ್ಞಾನಿಕ ಸೆಕ್ಯುಲರಿಸಂ ಅಂದರೆ ಏನು?
ಕಮ್ಯೂನಿಸ೦ ಎ೦ದರೆ ನರಮೇಧ.. ನರಮೇಧವೆ೦ದರೆ ಕಮ್ಯೂನಿಸ೦!?
– ಕೆ.ಎಸ್ ರಾಘವೇಂದ್ರ ನಾವಡ
“ಕಮ್ಯೂನಿಸ೦ ಎ೦ದರೆ ನರಮೇಧ.. ನರಮೇಧವೆ೦ದರೆ ಕಮ್ಯೂನಿಸ೦ “ ಎ೦ಬುದು ಮತ್ತೆ ಮತ್ತೆ ಸಾಬೀತಾಗುತ್ತಿದೆಯಲ್ಲ!!
ಪ್ರಕರಣ: ಏಳು ತೃಣಮೂಲ ಕಾ೦ಗ್ರೆಸ್ ಕಾರ್ಯಕರ್ತರ ಹಠಾತ್ ಕಣ್ಮರೆ..
ಸ್ಠಳ: ಪಶ್ಚಿಮ ಮಿಡ್ನಾಪುರದ “ಪಿಸಾಯಲ“ ಹೆಸರಿನ ಪ್ರದೇಶ
ಕಾಲ : ೨೦೦೨
ಆ ನರಮೇಧದ ಹಿ೦ದಿನ ರೂವಾರಿಯ ಹೆಸರು ಸುಶಾ೦ತ್ ಘೋಷ್!!
ಪಶ್ಚಿಮ ಭಾಗದ ಅಭಿವೃಧ್ಧಿ ಸಚಿವ, ಪಶ್ಚಿಮ ಬ೦ಗಾಳ ಸರ್ಕಾರ..
ಅ೦ತೂ ಕಮ್ಯೂನಿಸ್ಟರ ಬಣ್ಣ ಬಯಲಾಗತೊಡಗಿದೆ. ೩೫ ವರ್ಷಗಳಷ್ಟು ದೀರ್ಘ ಕಾಲ ಪಶ್ಚಿಮ ಬ೦ಗಾಳದಲ್ಲಿ ಸಾಧಿಸಿದ್ದೇನು? ಎ೦ಬುದಕ್ಕೆ ಈಗ ಉತ್ತರಗಳು ಸಿಗತೊಡಗಿವೆ! ಆದರೆ ಈ ರೀತಿಯ ಉತ್ತರ ಮಾತ್ರ ಯಾರೂ ನಿರೀಕ್ಷಿಸಿರಲಾರರು! ಒಮ್ಮೆ ಮಮತಾ ದೀದಿ ಥರಗುಟ್ಟಿ ಹೋಗಿದ್ದಾರೆ! ದೇಶದ ಅತ್ಯ೦ತ ಸುದೀರ್ಘ ಕಾಲದವರೆಗಿನ ಮುಖ್ಯಮ೦ತ್ರಿ ಜ್ಯೋತಿ ಬಸು ಹಾಗೂ ಆನ೦ತರದ ಕಾಮ್ರೇಡ್ ಬುಧ್ಧದೇವ ಭಟ್ಟಾಚಾರ್ಯ ಹೀಗೆ ಒಟ್ಟಾರೆ ಸತತ ೩೫ ವರ್ಷಗಳ ಕಾಲ ಬ೦ಗಾಳವನ್ನು ಅಭಿವೃಧ್ಧಿ (?)ಗೊಳಿಸಿದ ಕಮ್ಯೂನಿಷ್ಟರ ಆಡಳಿತ ಹೇಗಿತ್ತು ಎನ್ನುವುದಕ್ಕೆ ಪುರಾವೆಗಳು ಸಿಗುತ್ತಿವೆ!
ರೇಲ್ವೇ ಇಲಾಖೆ ಮತ್ತು ಹಿಂದಿ ಹೇರಿಕೆ.!
– ಮಹೇಶ.ಎಮ್.ಆರ್
ವಿ.ಸೂ: ಬೇರೆ ಒಂದು ಬಾಶೆಯನ್ನು ಗೌರವಿಸುವುದಕ್ಕೂ ಅದನ್ನು ನಮ್ಮ ಮೇಲೆ ಹೇರಿಸಿಕೊಳ್ಳುವುದಕ್ಕೂ ಇರುವ ವ್ಯತ್ಯಾಸವನ್ನು ತಿಳಿದಿರುವವರು ಮಾತ್ರ ಮುಂದುವರಿಯಲು ಕೋರಿಕೆ.!
ಸ್ವಾತಂತ್ರ್ಯ ನಂತರ, ಬಾರತೀಯತೆಗೂ ಹಿಂದಿಗೂ ತಳುಕು ಹಾಕಿ ಅದನ್ನು ರಾಶ್ಟ್ರ ಬಾಶೆ ಮಾಡಲು ಹೊರಟ ಕೇಂದ್ರ ಸರಕಾರದ ಮತ್ತು ಕೆಲವರ ಪ್ರಯತ್ನ ಅನೇಕ ಹಿಂದಿಯೇತರರ ವಿರೋದಿ ಹೋರಾಟದ ಫಲವಾಗಿ ವಿಫಲವಾಯಿತು. ಇದರ ತರುವಾಯ ಮುಂದೆ ಕೇಂದ್ರ ಸರಕಾರ ನೋಡಿಕೊಂಡ ದಾರಿಯೇ ಆಡಳಿತ ಬಾಶೆಯೆಂಬ ಹಿಂದಿನ ಬಾಗಿಲು. ಹಿಂದಿಯನ್ನು ಆಡಳಿತ ಬಾಶೆಯನ್ನಾಗಿ ಮಾಡಿ ತನ್ನ ಸಂಸ್ಥೆ, ಇಲಾಖೆ, ಬ್ಯಾಂಕುಗಳನ್ನು ಉಪಯೋಗಿಸಿ ಹಿಂದಿನ ಬಾಗಿಲ ಮೂಲಕ.
ಯಾರು ಅಪಾಯಕಾರಿ!?
– ಸಚಿನ್
ನಮ್ಮ ನಿಮ್ಮ ಮಧ್ಯೆಯಿರುವ ಕೆಲ ಎಡಬಿಡಂಗಿ ಗಳು ನಿನ್ನೆ ದೆಹಲಿ ಹೈಕೋರ್ಟ್ ನಲ್ಲಿ ನಡೆದ ಬಾಂಬ್ ಸ್ಪೋಟದ ಕುರಿತು ಒಂದು ಹೇಳಿಕೆ ಕೊಟ್ಟರು. ” ಬಿಜೆಪಿಗೆ ಅವಮಾನ ಆಗುವ ಸಂಧರ್ಭ ಗಳಲ್ಲಿ ಬಾಂಬ್ ಸ್ಪೋಟ ನಡೆಯುತ್ತಿದೆ ಹಾಗಾಗಿ ರೆಡ್ಡಿಯ ಬಂಧನದ ಸಂಧರ್ಭ ದಲ್ಲಿ ಈ ಸ್ಪೋಟ ನಡೆದಿರುವುದು ಹಲವಾರು ಉಹಾಪೋಹಗಳಿಗೆ ಎಡೆ ಮಾಡಿಕೊಡುತ್ತಿದೆ. ಕರ್ನಲ್ ಪುರೋಹಿತ್ ಮತ್ತು ಸಾಧ್ವಿ ಪ್ರಜ್ಯಾ ಸಿಂಗ್ ನಡೆಸಿದ ಬಾಂಬ್ ಸ್ಪೋಟಗಳೇ ಇದಕ್ಕೆ ಸಾಕ್ಷಿ. ಅಣ್ಣಾ ಹಜಾರೆ ಮತ್ತು ರೆಡ್ಡಿ ಬಂಧನದ ಅಬ್ಬರ ಗಳಿಗಿಂತ ಹೆಚ್ಚಿನರೀತಿಯಲ್ಲಿ ಬಿಜೆಪಿ ದೇಶ ಭಕ್ತರು ಕಿರುಚಾಟಗಳನ್ನು ಶುರುಮಾಡ್ತಾರೆ ನೋಡ್ತಾಯಿರಿ” ಎಂದು ಎರಡು ಲೈನ್ ಬರೆದು ತಮ್ಮ ಮನಸ್ಸಿನಲ್ಲಿರುವ ಅಸಹ್ಯವನ್ನು ಹೊರಹಾಕಿದರು.
ಸ್ನೇಹಿತರೇ ನಾವು ಗಮನಿಸ ಬೇಕಾದ ಮುಖ್ಯವಾದ ಅಂಶವೆಂದರೆ ಈಗ ನಡೆಯುತ್ತಿರುವುದು ಭಯೋತ್ಪಾದಕರು ಮತ್ತು ಭಾರತ ದೇಶದ ಮಧ್ಯೆ ಯುದ್ದ, ಈ ಯುದ್ದ ದಲ್ಲಿ ಭಯೋತ್ಪಾದಕರು ವಿಜಯಿಯಾಗುತಿದ್ದಾರೆ. ಈ ಭಯೋತ್ಪಾದನೆ ಕೃತ್ಯಗಳನ್ನ ಯಾವುದೇ ದೇಶ ಸುಮ್ಮನೆ ಸಹಿಸಿ ಕೊಳ್ಳುವುದಿಲ್ಲ. ಹಾಗು ಕೃತ್ಯ ನಡೆಸಿದವರಿಗೆ ಸರಿಯಾದ ಶಿಕ್ಷೆ ಕೊಡುವ ವ್ಯವಸ್ಥೆ ಬೇರೆ ದೇಶಗಳಲ್ಲಿದೆ. ಒಂದು ಸಣ್ಣ ಪ್ರಮಾದ ದಿಂದ ಬೆಂಗಳೂರಿನ ವೈದ್ಯ ಹನೀಫ್ ಆಸ್ಟ್ರೇಲಿಯಾದಲ್ಲಿ ಹೇಗೆ ನರಳಿದ ಎಂದು ನಮಗೆ ಗೊತ್ತಿಲ್ಲವೆ.
ಪಕ್ಷಗಳನ್ನು ಸಮರ್ಥಿಸಿಕೊಂಡು ಜಗಳವಾಡುವ ಸಮಯ ಇದಲ್ಲ. ಸುಮ್ಮನೆ ವಿತಂಡವಾದ ಮಾಡಿ ಎಲ್ಲದಕ್ಕು ಒಂದೊಂದು ಸಂಭಂದ ಕಲ್ಪಿಸಿ ನಿಮ್ಮ ಹೊಲಸನ್ನು ಕಾರಬೇಡಿ. ನಿಮ್ಮ ಭಂಡತನದ ನಿಲುವುಗಳು ಏನೆಂದು ಅಣ್ಣಾ ಹಜಾರೆ ಹೋರಾಟದ ಸಂಧರ್ಭದಲ್ಲಿ ನಮ್ಮ ಭಾರತದ ಎಲ್ಲ ಸತ್ಪ್ರಜೆಗಳಿಗೆ ಗೊತ್ತಾಗಿವೆ.
ಸಂಸ್ಕೃತಿ ಸಂಕಥನ – ೫
– ರಮಾನಂದ ಐನಕೈ
ಆಧುನಿಕ ಇತಿಹಾಸದಲ್ಲಿ ಪದೇ ಪದೇ ಕಲ್ಯಾಣ ರಾಜ್ಯ ‘ವೆಲ್ಫೇರ್ ಸ್ಟೇಟ್’ದ ಕುರಿತು ಉಲ್ಲೇಖವಾಗುತ್ತದೆ. ಕಲ್ಯಾಣ ರಾಜ್ಯ ಅಂದರೆ ಏನು? ಪ್ರಜೆಗಳ ಸರ್ವತೋಮುಖ ಕ್ಷೇಮವನ್ನು ಹೆಗಲ ಮೇಲೆ ಹೊತ್ತ ಪರಿಕಲ್ಪನೆ ಇದು. ಸಾಮಾಜಿಕ ಭದ್ರತೆ (ಸೋಶಿಯಲ್ ಸೆಕ್ಯುರಿಟಿ) ಕಲ್ಯಾಣ ರಾಜ್ಯದ ಒಂದು ಆದರ್ಶ. ಪ್ರತಿಯೊಬ್ಬ ಪ್ರಜೆಗೆ ಸಾಮಾಜಿಕ ಭದ್ರತೆ ನೀಡುವುದೂ ಕಲ್ಯಾಣ ರಾಜ್ಯದ ಒಂದು ಗುರಿ.
ಪಾಶ್ಚಾತ್ಯರು ಈ ಸಮಾಜಿಕ ಭದ್ರತೆಯನ್ನು ಕಲ್ಪಿಸಿಕೊಂಡ ರೀತಿ ಭಿನ್ನವಾಗಿದೆ. ಈ ಭೂಮಿಯ ಮೇಲೆ ಹುಟ್ಟಿದ ಪ್ರತಿಯೊಬ್ಬ ಮನುಷ್ಯನಿಗೆ ಬದುಕುವ ಹಕ್ಕಿದೆ. ಇದನ್ನು ಯಾರೂ ಪ್ರಶ್ನಿಸಲು ಸಾಧ್ಯವಿಲ್ಲ. ಆದ್ದರಿಂದ ಪ್ರತಿ ಮನುಷ್ಯನಿಗೆ ಬದುಕಲು ಬೇಕಾದ ಅನ್ನ, ನೀರು, ಮನೆ, ಬಟ್ಟೆ ಮುಂತಾದ ಅನೇಕ ಅವಶ್ಯಕತೆಗಳನ್ನು ಪ್ರಭುತ್ವ (ಸ್ಟೇಟ್) ಪೂರೈಸಿ ಅವರಲ್ಲಿ ಭದ್ರತೆಯ ಭಾವನೆಯನ್ನು ಹುಟ್ಟಿಸಬೇಕು. ಆಗ ಪ್ರಜೆಗಳು ಸಂತೋಷವಾಗಿರುತ್ತಾರೆ ಎಂಬುದು ಅವರ ಚಿಂತನೆ. ಇದನ್ನೇ ಸಾಮಾಜಿಕ ಭದ್ರತೆ ಎಂದು ಕರೆದರು. ಇದಕ್ಕಾಗೇ ಅನೇಕ ರಾಷ್ಟ್ರಗಳು ತಮ್ಮನ್ನು ವೆಲ್ಫೇರ್ ಸ್ಟೇಟ್ಸ್ ಎಂದು ಕರೆದುಕೊಂಡವು. ಇದನ್ನು ಸರಳವಾಗಿ ಹೇಳಬಹುದಾದರೆ ಕನಿಷ್ಟ ಅವಶ್ಯಕತೆಯ ಭೌತಿಕ ಸವಲತ್ತುಗಳನ್ನು ನೀಡುವುದೇ ಅವರ ಪ್ರಕಾರ ಸಾಮಾಜಿಕ ಭದ್ರತೆ. ಪಾಶ್ಚಾತ್ಯರ ಈ ಲೋಕಜ್ಞಾನ ಭಾರತೀಯರಿಗೆ ರೋಮಾಂಚಕವಾಗಿ ಕಂಡದ್ದು ಸಹಜ. ಏಕೆಂದರೆ ಪಾಶ್ಚಾತ್ಯ ಸಂಸ್ಕೃತಿಯನ್ನು ಒಂದು ಪರಿಪೂರ್ಣ ಮಾದರಿ ಎಂದು ನಾವು ಸ್ವೀಕರಿಸಿಬಿಟ್ಟಿದ್ದೇವೆ.





