ಸಂಸ್ಕೃತಿ ಸಂಕಥನ – ೨
-ರಮಾನಂದ ಐನಕೈ
ಸಂಸ್ಕೃತಿ ಸಂಕಥನ – ೧
ಭಾರತೀಯ ಸಂಸ್ಕೃತಿಯ ಕುರಿತಾದ ನಮ್ಮ ಸ್ಮೃತಿ ವಿಸ್ಮೃತಿಯಾಗಿದೆ. ಇದಕ್ಕೆ ಕಾರಣವೇನು ಈ ಮರೆವನ್ನು ಪುನಃ ನೆನಪಿಸಿಕೊಳ್ಳುವುದು ಹೇಗೆ? ಸಂಸ್ಕೃತಿಯನ್ನು ಮರೆತದ್ದರಿಂದ ಆದ ಪರಿಣಾಮಗಳೇನು? ಹೀಗೆ ಯೋಚಿಸಲು ಹೋದರೆ ನಮ್ಮೆದುರು ನೂರಾರು ಪ್ರಶ್ನೆಗಳುಂಟು. ಭಾರತೀಯರು ತಮ್ಮ ಸಂಸ್ಕೃತಿಯ ಕುರಿತಾಗಿ ಕೇಳುತ್ತಿರುವ, ಓದುತ್ತಿರುವ, ನಂಬಿಕೊಂಡಿರುವ ಹಲವು ಸಂಗತಿಗಳು ತಪ್ಪು ತಿಳುವಳಿಕೆಂದ ಕೂಡಿದ್ದರಿಂದ ವರ್ತಮಾನದ ಭಾರತದಲ್ಲಿ ಅನೇಕಾನೇಕ ಸಮಸ್ಯೆಗಳು ಜೀವಪಡೆಯುತ್ತಲೇ ಇವೆ. ಈ ಸತ್ಯ ಅರ್ಥವಾಗಬೇಕಾದರೆ ಇತ್ತೀಚೆಗೆ ಪ್ರಕಟಗೊಂಡ ಎರಡು ಕನ್ನಡದ ಪುಸ್ತಕಗಳನ್ನು ಪ್ರತಿಯೊಬ್ಬರೂ ಓದಲೇಬೇಕು.
ಒಂದು ಸ್ಮೃತಿ-ವಿಸ್ಮೃತಿ ಭಾರತೀಯ ಸಂಸ್ಕೃತಿ ಎಂಬ ಪುಸ್ತಕ ಇದು ಪ್ರೊ. ಬಾಲಗಂಗಾಧರರ ಸಂಶೋಧನಾ ಗ್ರಂಥ ಇದನ್ನು ಪ್ರೊ. ರಾಜಾರಾಮ ಹೆಗಡೆ ಕನ್ನಡಕ್ಕೆ ಅನುವಾದಿಸಿದ್ದಾರೆ. ಇನ್ನೊಂದು ಪುಸ್ತಕ ಪೂರ್ವಾವಲೋಕನ. ಇದು ಬಾಲಗಂಗಾಧರರ ಬಿಡಿ ಲೇಖನಗಳ ಅನುವಾದಗಳ ಸಂಗ್ರಹ. ಇವೆರಡೂ ಕೂಡಾ ಭಾರತೀಯ ಸಮಾಜ ವಿಜ್ಞಾನವನ್ನು ಪುನರ್ಪರಿಶೀಲನೆಗೆ ಹಚ್ಚುವ ಮಹತ್ವದ ಕೃತಿಗಳು.
ಒಸಾಮಾ – ಒಬಾಮಾ…!
– ಡಾ.ಅಜಕ್ಕಳ ಗಿರೀಶ್ ಭಟ್
ಅಂತೂ ಅಮೆರಿಕ ಒಸಾಮಾನನ್ನು ಕೊಂದಿದೆ ಅನ್ನುವುದನ್ನು ಅದು ಅಧಿಕೃತವಾಗಿ ಘೋಷಿಸಿದೆ. ಹೀಗೆ ಕೊಲ್ಲುವುದು ಅಮೆರಿಕಕ್ಕೆ ಏನೂ ಕಷ್ಟದ ಸಂಗತಿಯಲ್ಲ. ಅದು ಅದನ್ನು ದಕ್ಕಿಸಿಕೊಳ್ಳಬಲ್ಲುದು. ಆದರೆ ಹಲವು ಪ್ರಶ್ನೆಗಳು ಎಲ್ಲರ ಮನಸ್ಸಲ್ಲೂ ಏಳುವುದು ಸಹಜ. ಕೆಲದಿನಗಳಾದ ನಂತರ ಆ ಪ್ರಶ್ನೆಗಳನ್ನು ಎಲ್ಲರೂ ಮರೆಯುತ್ತಾರೆ ಅನ್ನೋದು ಕೂಡ ನಮಗೆಲ್ಲ ಗೊತ್ತು.ನಾವು ಕೂಡ ಮರೀತೇವೆ.ಹಾಗೆ ಮರೆಯುವುದು ನಮ್ಮ ಮಾನಸಿಕ ಆರೋಗ್ಯಕ್ಕೆ ಅತ್ಯಂತ ಮುಖ್ಯ.ಆದರೂ ಈಗ ಮನಸಲ್ಲಿ ಬಂದ ಆಲೋಚನೆಗಳಲ್ಲಿ ಕೆಲವನ್ನು ಮರುನೆನೆದುಕೊಳ್ಳುತ್ತೇನೆ.ಇವು ನನ್ನ ಮನಸಲ್ಲಿ ಮಾತ್ರ ಬಂದ ಪ್ರಶ್ನೆಗಳಲ್ಲವಾದ್ದರಿಂದ ಈ ಪ್ರಶ್ನೆಗಳ ಬಗ್ಗೆ ನಾನು ಯಾವುದೇ ಕಾಪಿರೈಟ್ ಕ್ಲೈಮ್ ಮಾಡುವುದಿಲ್ಲ!!!
ನೋಡಿ,ಇದು ಅನ್ಯಾಯವಲ್ಲವೇ? ವ್ಯಕ್ತಿಯನ್ನು ವಿಚಾರಣೆಯಿಲ್ಲದೆ ಕೊಲ್ಲುವುದು ನ್ಯಾಯವೇ?
ಆಧುನಿಕ ನ್ಯಾಯಶಾಸ್ತ್ರದಲ್ಲಿ ಎಲ್ಲಾದರೂ ವಿಚಾರಣೆಯಿಲ್ಲದೆ ಹೀಗೆ ಶಿಕ್ಷೆ ನೀಡುವುದನ್ನು ಸಮರ್ಥಿಸಲಾಗಿದೆಯೇ? ಲಾಡೆನ್ ಗೆ ಫೇರ್ ಟ್ರಯಲ್ ನೀಡಲಾಗಿಲ್ಲ. ಅವನನ್ನು ಯಾವ ಕೋರ್ಟಿನಲ್ಲಿ ವಿಚಾರಣೆ ಮಾಡಲಾಗಿದೆ? ತಾನು ಕೊಲೆ ಮಾಡಿದ್ದೇನೆ ಅಂತ ಒಬ್ಬ ವ್ಯಕ್ತಿ ಹೇಳಿದ ಕೂಡಲೇ ಯಾವ ಕೋರ್ಟು ಕೂಡ ವಿಚಾರಣೆಯಿಲ್ಲದೆ ಆ ವ್ಯಕ್ತಿಯನ್ನು ಗಲ್ಲಿಗೆ ಹಾಕುವುದಿಲ್ಲ. ಹಾಗಿರುವಾಗ ,ಅಮೆರಿಕವಿರಬಹುದು ಅಥವಾ ಅದರಪ್ಪನಿರಬಹುದು, ಕಾನೂನನ್ನು ಕೈಗೆ ತೆಗೆದುಕೊಳ್ಳುವುದೆಂದರೇನು? ಓಯ್!! ಅಮ್ನೆಸ್ಟಿ ಇಂಟರ್ ನ್ಯಾಷನಲ್ ಅನ್ನುವ ಸಂಸ್ಥೆಯವರೇ!!!ಎಲ್ಲಿದ್ದೀರಿ? ಒಸಾಮಾನ ಮಾನವ ಹಕ್ಕಿಗೆ ಬೆಲೆ ಇಲ್ಲವೇ???





