ಸೇನೆ-ಸರ್ಕಾರದ ನಡುವೆ ಬಡವಾಗದಿರಲಿ ನನ್ನ ಭಾರತ
– ರಾಕೇಶ್ ಶೆಟ್ಟಿ
ಆವತ್ತು ಸಂಸತ್ತಿನಲ್ಲಿ ಭಾಷಣಕ್ಕೆ ನಿಂತ ನೆಹರೂ ದೇಶದ ಒಂದಿಂಚು ನೆಲವನ್ನು ಚೀನಿಗಳೀಗೆ ಬಿಟ್ಟುಕೊಡುವುದಿಲ್ಲ.ಎಂತಾ ಯುದ್ಧಕ್ಕಾದರೂ ಸೈನ್ಯ ತಯಾರಿದೆ ಅನ್ನುತ್ತಲೇ ತಮ್ಮ ಕೋಟಿನಿಂದ ತೆಗೆದ ಕೆಂಪು ಗುಲಾಬಿಯನ್ನ ಜನರ ಕಿವಿಗಿಟ್ಟರು.ಅವರ ಭಾಷಣದ ನಂತರದ ಇತಿಹಾಸ ನಿಮಗೆ ಗೊತ್ತಿರಲೇಬಹುದು.ಆ ಕಹಿ ನೆನಪಿಗೆ ೫೦ ವರ್ಷ ಆಗೋ ಸಮಯದಲ್ಲಿ ಮತ್ತೊಮ್ಮೆ ಕಳೆದವಾರ ಸಂಸತ್ತಿನಲ್ಲಿ ರಕ್ಷಣಾ ಸಚಿವ ಆಂಟನಿಯವರೂ ಸಹ ಭಾರತದ ಸೈನ್ಯ ಬಲಿಷ್ಟವಾಗಿದೆ,ಯುದ್ಧ ಸನ್ನದ್ಧವಾಗಿದೆ ಅಂದಿದ್ದಾರೆ.ನೆಹರೂ ಅವರಿಗೂ-ಅವ್ರ ಕಾಲಕ್ಕೂ ತುಲನೆ ಮಾಡಿದರೆ ಆಂಟನಿ ಅವರನ್ನ ಸ್ವಲ್ಪ ನಂಬಬಹುದು ಅನ್ನಿಸುತ್ತದೇ.ಆದರೆ…
ಕಳೆದ ವಾರ ನಡೆದ ವಿದ್ಯಾಮಾನಗಳಿವೆಯಲ್ಲ ಅವೆಲ್ಲ ಗಾಬರಿ ಹುಟ್ಟಿಸುವಂತವು.ಇದಕ್ಕೆ ಮುನ್ನುಡಿ ಬರೆದಿದ್ದು ಜನರಲ್.ವಿ.ಕೆ ಸಿಂಗ್…! ಜನ್ಮ ದಿನಾಂಕದ ರಗಳೆಯ ನಂತರ ಸ್ವಲ್ಪ ದಿನ ಸುಮ್ಮನಾಗಿದ್ದವ್ರು, ಟಿವಿ ಚಾನೆಲ್ನೊಂದಿಗೆ ಮಾತನಾಡುತ್ತ ತಮಗೆ ೧೪ ಕೋಟಿ ಲಂಚ ನೀಡಲು ಬಂದ ಪ್ರಸಂಗದ ಬಗ್ಗೆ ಬಾಯಿಬಿಡುವ ಮೂಲಕ.ಮತ್ತೆ ಆ ವಿಷಯವನ್ನ ನಾನು ರಕ್ಷಣಾ ಮಂತ್ರಿ ಆಂಟನಿ ಅವರಿಗೂ ಹೇಳಿದ್ದೆ ಅನ್ನುವುದು ಬೆಂಕಿಗೆ ತುಪ್ಪ ಸುರಿದಂತಾಗಿ ಹೋಯಿತು.ಸಂಸತ್ತಿನಲ್ಲಿ ಆಂಟನಿ ’ಅವರು ಮೌಕಿಕವಾಗಿ ಹೇಳಿದ್ದರು ನಾನು ಏನು ತಾನೇ ಮಾಡಲಿ” ಅಂತೆಲ್ಲ ಗೋಳಾಡುವಾಗಲೇ, ಜನರಲ್ ಪ್ರಧಾನಿ ಅವ್ರಿಗೆ ಬರೆದ ಮತ್ತು ದೇಶದ ಭದ್ರತೆಯ ದೃಷ್ಟಿಯಿಂದ ಅತ್ಯಂತ ರಹಸ್ಯವಾಗಿರಬೇಕಿದ್ದ ಪತ್ರ ಸೋರಿಕೆಯಾಗಿದ್ದು.!
ಹೈಟೆಕ್ ಬಹಿಷ್ಕಾರ…!
– ರಾಕೇಶ್ ಶೆಟ್ಟಿ
‘ಬೇರೆ ಬೇರೆ ವಿಷಯಗಳಲ್ಲಿ ಒಟ್ಟಿಗೆ ಸೇರಿ ಕೆಲಸ ಮಾಡಿದ ಗೆಳೆಯರು ಈಗ ಜನಲೋಕಪಾಲ ವಿಷಯವಾಗಿ ತಾತ್ವಿಕ ಭಿನ್ನಭಿಪ್ರಾಯಗಳನ್ನು ಇಟ್ಟುಕೊಂಡು ವಿರುದ್ಧವಾಗಿ ಮಾತನಾಡುತ್ತಿರುವುದು ಬೇಸರತರಿಸಿದೆ ‘ ಅಂತ ಆ ಗೆಳೆಯ ಕಳೆದ ಆಗಸ್ಟಿನಲ್ಲಿ ಫೆಸ್ಬುಕ್ಕಿನಲ್ಲಿ ಬರೆದುಕೊಂಡಿದ್ದರು.ಅದಕ್ಕೆ ನಾನು ‘ಸಾಮಾಜಿಕ ಕಳಕಳಿಯಿರುವ ಎಲ್ಲ ಮನಸ್ಸುಗಳು ಅಂತಿಮವಾಗಿ ಬಯಸುವುದು ಒಳ್ಳೆಯ ಸಮಾಜವನ್ನಷ್ಟೇ,ತಾತ್ವಿಕ ಭಿನ್ನಭಿಪ್ರಾಯ್ಗಳನ್ನ ವೈಯುಕ್ತಿಕವಾಗಿ ನೋಡಬೇಡಿ’ ಅನ್ನುವಂತೆ ಬರೆದಿದ್ದೆ.ಅವರೂ ಅದನ್ನ ಇಷ್ಟ ಪಟ್ಟಿದ್ದರು.
ಅದಾಗಿ ಬಹುಷಃ ೩-೪ ದಿನಗಳು ನಾನು ಊರಿನಲ್ಲಿ ಇರಲಿಲ್ಲ,ವಾಪಸ್ಸು ಬಂದವನು ಫೇಸ್ಬುಕ್ ತೆಗೆದಾಗ ಗೊತ್ತಾಗಿದ್ದು , ತಾತ್ವಿಕ ಭಿನ್ನಾಭಿಪ್ರಾಯಗಳನ್ನ ವೈಯುಕ್ತಿಕ ಮಟ್ಟಕ್ಕೆ ಆ ಗೆಳೆಯ ಮಾತ್ರವಲ್ಲದೆ ಅವನ ‘ಬಳಗ’ವೂ ತೆಗೆದುಕೊಂಡು ನನಗೆ ಅವರ ಗೂಗಲ್ ಗುಂಪಿನಿಂದ,ಫೆಸ್ಬುಕ್ಕ್ ಗೆಳೆತನದಿಂದ ‘ಹೈಟೆಕ್ -ಬಹಿಷ್ಕಾರ’ ಹಾಕಿದೆ ಅಂತ…! ಈ ಹೈಟೆಕ್ ಬಹಿಷ್ಕಾರ ಹಾಕಿಸಿಕೊಳ್ಳುವಂತೆ ನಡೆದಿದ್ದಾರೂ ಏನು ಅಂತ ನೋಡ ಹೊರಟರೆ….
ಅಣ್ಣಾ ಹಜ಼ಾರೆ ಜನಲೋಕಪಾಲ ಮಸೂದೆಗಾಗಿ ಜಂತರ್ ಮಂಥರ್ನಲ್ಲಿ ಉಪವಾಸ ಕುಳಿತ ದಿನಗಳಿವೆಯಲ್ಲ ಅವು ಈ ದೇಶದಲ್ಲಿ ಇನ್ನೇನು ಬದಲಾವಣೆ ಸಾಧ್ಯವೇ ಇಲ್ಲ ಅನ್ನುವಂತಿದ್ದ ಜನರ ಮನಸ್ಸಿಗೆ ಆಶಾಭಾವನೆ ಮೂಡಿಸಿದ ದಿನಗಳು.ಆಗ ’ಈ ಹೋರಾಟ ಗೆಲ್ಲಲೇ ಬೇಕು’ ಅಂದವರು ಅದ್ಯಾಕೋ ಮತ್ತೆ ಅಣ್ಣಾ ’ರಾಮ ಲೀಲಾ ಮೈದಾನ’ಕ್ಕೆ ಬಂದು ನಿಂತಾಗ ’ಪ್ರಜಾಪ್ರಭುತ್ವದ ಬುಡಕ್ಕೆ ಬೆಂಕಿ ತಗುಲಿದೆ’ ಅನ್ನಲಾರಂಭಿಸಿದರು.ಆಗಲೇ ಅಣ್ಣಾ ಹೋರಾಟವನ್ನು ಬೆಂಬಲಿಸುತಿದ್ದವರು-ವಿರೋಧಿಸುವ ಗೆಳೆಯರ ನಡುವೆ ತಾತ್ವಿಕ ಭಿನ್ನಾಭಿಪ್ರಾಯಗಳ ಚರ್ಚೆ ಫ಼ೇಸ್ಬುಕ್ಕಿನಲ್ಲಿ ಶುರುವಾಗಿದ್ದು.ಈ ಹೋರಾಟ ಸರಿಯಿಲ್ಲ ಅನ್ನಲು ಅವರುಗಳು ಏನೇನು ಅಂಶ ಮುಂದಿಡುತಿದ್ದರೋ, ಹೋರಾಟ ಹೇಗೆ ಸರಿ ಅಂತ ನಾವುಗಳು ನಮ್ಮ ವಾದ ಮುಂದಿಟ್ಟಿದ್ದೆವು. ಮತ್ತಷ್ಟು ಓದು 
ತೀರಾ ಮಾನವೀಯತೆಯ ಲವಲೇಶವನ್ನೂ ಹೊ೦ದಿರದವರ ನದವಳಿಕೆ ಇದೇ ರೀತಿ..!!
– ಕೆ.ಎಸ್ ರಾಘವೇಂದ್ರ ನಾವಡ
“ಅದೃಷ್ಟ ಮತ್ತು ದುರಾದೃಷ್ಟಗಳೆರಡೂ ಒ೦ದೇ ವಾಹನದಲ್ಲಿ ಪ್ರಯಾಣಿಸುತ್ತವೆ“ ಎ೦ಬ ನಾವಡ ಉವಾಚವೊ೦ದಿದೆ.. ಇ೦ದು ಅದನ್ನು ಮತ್ತೆ ಮತ್ತೆ ನೆನಪಿಸಿಕೊಳ್ಳಬೇಕಾದ ಪ್ರಮೇಯವೂ ಬ೦ದಿದೆ! ನಾನು ಯಾವುದಾದರೂ ತಲೆಹರಟೆ ಮಾಡಿ ಸಿಕ್ಕಿಬಿದ್ದಾಗ ನಮ್ಮ ತ೦ದೆ ನನಗೆ ಯಾವಾಗಲೂ ಹೇಳುತ್ತಿದ್ದ ಬುಧ್ಧಿ ಮಾತೊ೦ದಿದೆ.. “ ಸ್ವಯ೦ಕೃತಾಪರಾಧಕ್ಕೆ ಮನ್ನಣೆಯಿಲ್ಲ ಕಣಯ್ಯ..“ ನಮ್ಮಪ್ಪನ ಆ ಮಾತನ್ನೂ ಇ೦ದು ಪುನ: ಪುನ: ನೆನೆಸಿಕೊಳ್ಳಬೇಕಾಗಿ ಬ೦ದಿದೆ!! ಹಿ೦ದಿನ ನಮ್ಮ ಹಿರಿಯರು ಸಾಕಷ್ಟು ಗಾದೆ ಮಾತುಗಳನ್ನು ನಮ್ಮ ಜೀವನದ ಮಾತುಗಳೆ೦ಬ೦ತೆ ಆಡಿ ಹೋಗಿದ್ದಾರೆ.. ಅವುಗಳೆಲ್ಲಾ ಸ೦ದರ್ಭಕ್ಕನುಸಾರವಾಗಿ ನಮ್ಮ ಜೀವನದಲ್ಲಿ ಮೌಲ್ಯವನ್ನು ಗಳಿಸುತ್ತಾ ಹೋಗುತ್ತವೆ.. ನಮಗೆ ಅಚ್ಚರಿಯನ್ನು ಮೂಡಿಸುತ್ತವೆ!! “ಗೂಳಿ ಬಿದ್ದರೆ ಆಳಿಗೊ೦ದು ಕಲ್ಲು“ ಅದನ್ನು ಮೇಲೆತ್ತಿ ಯಾರೂ ಏಳಿಸುವುದಿಲ್ಲ.. ಬದಲಾಗಿ ಎಲ್ಲರೂ ಅದರ ತಲೆಯ ಮೇಲೊ೦ದು ಕಲ್ಲನ್ನೆತ್ತಿ ಹಾಕಿ ಹೋಗುತ್ತಿರುತ್ತಾರೆ!! ಆ ಗಾದೆಯು ಇ೦ದಿನ ಕರ್ನಾಟಕ ರಾಜಕೀಯದಲ್ಲಿ ನಿಜವಾಗಿರುವಾಗ ಅದನ್ನೂ ಮತ್ತೆ ಮತ್ತೆ ನೆನಪಿಸಿಕೊಳ್ಳಬೇಕಾಗಿ ಬ೦ದಿದೆ..
ಅದು ೧೯೮೩ ರ ಚುನಾವಣೆಯ ಕಾಲ.. ಕರ್ನಾಟಕ ರಾಜಕೀಯದಲ್ಲಿ ಭಾ.ಜ.ಪಾ ದ ಕೇವಲ ಒಬ್ಬ ಶಾಸಕ ಮಾತ್ರವೇ ವಿಧಾನ ಸಭೆಗೆ ಆಯ್ಕೆಯಾಗಿದ್ದ! ಅವರೇ ಕರ್ನಾಟಕದ ಮಾಜಿ ಮುಖ್ಯಮ೦ತ್ರಿ ಇ೦ದೀಗ ಸೆರೆಮನೆಯ ಅತಿಥಿಯಾಗಿರುವ ಬಿ.ಎಸ್.ಯಡಿಯೂರಪ್ಪ! ಕೇವಲ ಒಬ್ಬ ಶಾಸಕನಿ೦ದ ಆರ೦ಭವಾದ ಕರ್ನಾಟಕ ಭಾ.ಜ.ಪಾದ ಅಧಿಕಾರದತ್ತ ಯಾತ್ರೆ ೨೦೦೮ರ ವಿಧಾನಸಭೆಯ ಚುನಾವಣೆಯಲ್ಲಿ ನನಸಾಗಿ, ೧೧೦ ಜನ ಶಾಸಕರು ವಿಧಾನಸಭೆಗೆ ಆಯ್ಕೆಯಾಗುವಲ್ಲಿ ಯಡಿಯೂರಪ್ಪ ಹಾಗೂ ಬಿ.ಬಿ. ಶಿವಪ್ಪರ ಪರಿಶ್ರಮವನ್ನು ಮರೆಯುವ೦ತಿಲ್ಲ.. ನಿಜ.. ಇ೦ದು ಯಡಿಯೂರಪ್ಪ ರಾಜ್ಯ ಭಾ,ಜ,ಪಾ ದ ಹೆಸರನ್ನು ರಾಷ್ಟ್ರೀಯ ಮಟ್ಟದಲ್ಲಿಯೇ ಕೆಡಿಸಿದ್ದಾರೆ. ರಾಜ್ಯ ಭಾ.ಜ.ಪಾ. ಕರ್ನಾಟಕದಲ್ಲಿ ಮರಳಿ ತಲೆಯೆತ್ತದ೦ಥ ಸ್ಥಿತಿಯನ್ನು ನಿರ್ಮಿಸಿದ್ದಾರೆ.. ಎಲ್ಲವೂ ಸರಿ.. ಆದರೆ ಅವರು ಸೆರೆಮನೆ ಪಾಲಾದ ನ೦ತರ ಕರ್ನಾಟಕ ರಾಜಕೀಯ ದ ವಿರೋಧ ಪಕ್ಷಗಳು ಹಾಗೂ ಪ್ರಜಾಪ್ರಭುತ್ವದ ಆಧಾರಸ್ಥ೦ಭಗಳೆನ್ನಿಸಿರುವ ಮಾಧ್ಯಮಗಳು ನಿಷ್ಪಕ್ಷಪಾತವಾಗಿ ನಡೆದುಕೊ೦ಡಿವೆಯೇ? ಎ೦ಬ ಪ್ರಶ್ನೆ ಮನಸ್ಸಿನಲ್ಲಿ ಏಳುವುದಿಲ್ಲವೇ? ಏಳುತ್ತದೆ! ಅದಕ್ಕೆ ಉತ್ತರ ಮಾತ್ರ “ ಇಲ್ಲ“ ವೆ೦ದು ಸಾರಾಸಗಟಾಗಿ ಮುಖಕ್ಕೆ ರಾಚಿದ೦ತೆಯೇ ಹೇಳಬೇಕಾಗಿ ಬ೦ದಿದೆ..
ಅಣ್ಣಾ ಹಜಾರೆ – ಶ್ರೀ ಸಾಮಾನ್ಯನ ಮನೆ – ಮನಗಳ ದೀಪ.
– ಹೊಳೆನರಸೀಪುರ ಮಂಜುನಾಥ್
ಅಣ್ಣಾ ಹಜಾರೆಯವರ ಬೇಡಿಕೆಗಳನ್ನು ಕೇ೦ದ್ರ ಸರ್ಕಾರ ಒಪ್ಪಿಕೊಳ್ಳುವುದರ ಮೂಲಕ ಭ್ರಷ್ಟಾಚಾರದ ವಿರುದ್ಧದ ಹೋರಾಟಕ್ಕೆ ಮೊದಲ ಜಯ ಸಿಕ್ಕಿದೆ. ೧೨ ದಿನಗಳ ಉಪವಾಸ ಸತ್ಯಾಗ್ರಹ, ದೇಶದ ಮೂಲೆಮೂಲೆಯಿ೦ದ ಎ೦ದೂ ಕ೦ಡರಿಯದ೦ಥ ಅಭೂತಪೂರ್ವ ಜನಬೆ೦ಬಲ, ಕೇ೦ದ್ರಸರ್ಕಾರವನ್ನು ಮಣಿಸಿ, ಜನಲೋಕಪಾಲ್ ಮಸೂದೆ ಜಾರಿಗೆ ತರುವಲ್ಲಿ ಸ೦ಸತ್ತಿನಲ್ಲಿ ಎಲ್ಲ ಪಕ್ಷಗಳೂ ಒಗ್ಗಟ್ಟಾಗಿ ಅನುಮೋದಿಸುವ೦ತೆ ಮಾಡಿದೆ. ಬಹುಶಃ ಸ್ವಾತ೦ತ್ರ್ಯಾನ೦ತರ ಭಾರತ ಕ೦ಡ ಅತ್ಯ೦ತ ಪರಿಣಾಮಕಾರಿ ಅಹಿ೦ಸಾತ್ಮಕ ಆ೦ದೋಲನವಿದು ಎ೦ದರೆ ತಪ್ಪಾಗಲಾರದು. ಅಣ್ಣಾ ಹಜಾರೆಯವರ ಭ್ರಷ್ಟಾಚಾರ ವಿರೋಧಿ ಹೋರಾಟಕ್ಕೆ ಸಿಕ್ಕಿರುವ ಜಯ, ಯಾವುದೇ ಒ೦ದು ಪಕ್ಷಕ್ಕೆ, ಸ೦ಘಟನೆಗೆ ಅಥವಾ ವ್ಯಕ್ತಿಗೆ ಸಿಕ್ಕಿರುವ ಜಯವಲ್ಲ. ಇದು ದೇಶದ ಶ್ರೀಸಾಮಾನ್ಯನಿಗೆ ಸಿಕ್ಕಿರುವ ಅಪ್ರತಿಮ ವಿಜಯ. ತನ್ನ ದಿನನಿತ್ಯದ ಬದುಕಿನಲ್ಲಿ ಪ್ರತಿಯೊ೦ದು ಹೆಜ್ಜೆಯಲ್ಲಿಯೂ ಕ೦ಡು, ಅನುಭವಿಸಿ, ತನ್ನನ್ನು ಹೈರಾಣು ಮಾಡಿದ ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದ ಈ ದೇಶದ ಸಾಮಾನ್ಯ ನಾಗರಿಕನ ಸಾತ್ವಿಕ ಕೋಪಕ್ಕೆ ಸಿಕ್ಕ ವಿಜಯ ಇದಾಗಿದೆ.
ಮತ್ತಷ್ಟು ಓದು 
ಜನಲೋಕಪಾಲ ಅನ್ನುವುದು ಮಾಯದಂಡವೇನಲ್ಲ…!
– ರಾಕೇಶ್ ಶೆಟ್ಟಿ
ಒಂದೆಡೆ ಅಣ್ಣಾರನ್ನ ಬೆಂಬಲಿಸಿ ಜನ ಬೀದಿಗಿಳಿದರೆ, ಇನ್ನೊಂದೆಡೆ ಅಣ್ಣಾ ಹೋರಾಟವನ್ನ ಪ್ರಶ್ನಿಸಿ ಹಲವಾರು ಪ್ರಶ್ನೆಗಳೆದ್ದಿವೆ.
’ಜನಲೋಕಪಾಲ್’ ಬಂದ ತಕ್ಷಣ ಎಲ್ಲ ಭ್ರಷ್ಟರು ಮಾಯವಾಗ್ತಾರೆ ಅಂತ ಖುದ್ದು ಅಣ್ಣಾ ಮತ್ತು ಸಿವಿಲ್ ಸೊಸೈಟಿಯವರ್ಯಾರು ಸಹ ಎಲ್ಲೂ ಹೇಳಿಲ್ಲ.ಹಾಗಾಗ್ಯೂ ಇಂತ ವಾದ ಹುಟ್ಟು ಹಾಕಿದ್ದು ಯಾರು? ಬಹುಷಃ ಕಪಿಲ್ ಸಿಬಲ್ ಇರಬೇಕು ಅದನ್ನೆ ಹಿಡಿದು ಕೆಲವರು ’ಜನಲೋಕಪಾಲ್’ ಬಂದ್ರೆ ಭ್ರಷ್ಟಚಾರ ಮಾಯವಾಗುತ್ತಾ!? ಅಂತ ಕೇಳ್ತಾ ಇದ್ದಾರೆ ಕೆಲವರು. ಅಂತವರಿಗೊಂದು ಪ್ರಶ್ನೆ ಪೋಲಿಸ್ ಇಲಾಖೆ ಅನ್ನುವುದು ಬಂದು ಎಷ್ಟು ವರ್ಷಗಳಾಯ್ತು? ಕಳ್ಳತನ-ಕೊಲೆ-ದರೋಡೆ ನಿಂತಿದೆಯಾ ಸ್ವಾಮಿ!? ಇಲ್ಲ ತಾನೆ..! ಆದರೆ ಜನ್ರಿಗೊಂದು ಹೆದರಿಕೆಯಂತೂ ಇರುತ್ತದೆ ತಪ್ಪು ಮಾಡೋಕೆ ಹಾಗೆ ತಪ್ಪು ಮಾಡಿದವರನ್ನ ಹಿಡಿದು ಜೈಲಿಗೆ ಅವರು ನೂಕುತಿದ್ದಾರಲ್ವಾ? ಹಾಗೆಯೇ ಜನಲೋಕಪಾಲ ಅನ್ನುವುದು ಸಹ.ಅದು ಬಂದ ತಕ್ಷಣ ಎಲ್ಲ ಸರಿ ಹೋಗದು.ಅದು ಸುಧಾರಣೆಯ ಒಂದು ಅಸ್ತ್ರವಷ್ಟೆ.
ಈ ಎಡವಟ್ಟುಗಳು ಯಾಕೆ ಹೀಗೆ ಅಂತ?
– ಸಚಿನ್ ಕೆ
ನಮಸ್ಕಾರ ಸಾ. ಎಂಗಿದೀರಾ.
ನೋಡಿ ಸಾ, ಪ್ರಪಂಚ ಹೆಂಗೈತೆ ಅಂದ್ರೆ ಹಿಂಗೂ ಜನ ಇರ್ತಾರ ಅಂತ ಗೊತ್ತಿರ್ಲಿಲ್ಲ.
ಗಾಂಧಿ ಮಆತ್ಮ್ ನ ತರ ನೀವು ಉಪ್ವಾಸ ಮಾಡಿದ್ರೆ ಜನ ಅದರಲ್ಲೂ ಹುಳುಕು ಕಂಡಿಡಿತಾರೆ ಅಂದ್ರೆ, ಈ ಜನ ಎಷ್ಟು ಗಬ್ಬೆದ್ದು ಹೋಗಿದ್ದಾರೆ ಅಂತ. ಆ ಬ್ರಹ್ಮ ಇವರ ತಲೆ ಒಳಗೆ ಮಿದುಳು ಇಟ್ಟಿಲ್ಲ ಅನ್ಸುತ್ತೆ, ಅದರೆ ಬದಲು ಸಗಣಿ ಮಡಗವ್ನೆ. ಈ ಬಡ್ಡೆತ್ತೇವು ಬರೀ ಉಲ್ಟಾ ಮಾತಾಡೋದೆ ಆಗ್ವಾಯ್ತು.
ಅವಯ್ಯ ದೇಸಾನ ಏನೋ ಬದಲಾವ್ಣೆ ಮಾಡ್ತೀನಿ ಅಂತ ಮಾತಾಡ್ತಿಲ್ಲ. ಲಂಚ ತಿನ್ನೋ ಎಲ್ಲ ಬೇವರ್ಸಿ ಮುಂಡೇವು ಗಳಿಗೆ ಸರ್ಯಾದ ಸಿಕ್ಸೆ ಆಗ್ಲಿ ಅಂತ ಗೋರ್ಮೆಂಟ್ ನೋರು ಸರಿಯಾದ ರೂಲ್ಸ್ ಮಾಡ್ಲಿ ಅಂತ. ಆದರೆ ಈ ಉಲ್ಟಾ ಮಾತಾಡ್ತ ಇರೋ ಈ ಹೈಕಳು ಕೇಳೋ ಪ್ರಸ್ನೆಗಳನ್ನು ನೋಡಿದ್ರೆ ನಗ ತಡ್ಯಾಕಾಗ್ತಿಲ್ಲ.
ಭ್ರಷ್ಟಾಚಾರ ಎಂದರೆ ಅನುಕೂಲ ಸಿಂಧು
– ಪವನ್ ಪರುಪತ್ತೆದಾರ
ನನಗೊಬ್ಬ ಸ್ನೇಹಿತ ಇದ್ದಾನೆ ಪ್ರವೀಣ್ ಅಂತ, ನನ್ನ ಜೊತೆ ಓದಿಲ್ಲವಾದರೂ ನನ್ನ ಸಹಪಾಠಿ ಅವನು, ಒಂದೇ ತರಗತಿ ಆದರೆ ಬೇರೆ ಶಾಲೆ. ಅವನ ಕೆಲಸ ತಾಲ್ಲೂಕು ಕಚೇರಿಯಲ್ಲಿ. ಸರ್ಕಾರದಿಂದ ಕೊಟ್ಟ ಕೆಲಸ ಅಲ್ಲ, ಅವನೇ ಹುಡುಕಿ ಕೊಂಡಿರುವ ವೃತ್ತಿ. ನಿಜ ಹೇಳಬೇಕೆಂದರೆ ನಮ್ಮೂರಿನ ತಾಲ್ಲೂಕು ಕಚೇರಿಯೋಳಗಿರುವರಿಗಿಂತ ಇವನು ಹೆಚ್ಚು ಕೆಲಸ ಮಾಡುತ್ತಾನೆ. ಪಹಣಿ, registration, ಖಾತೆ ಬದಲಾವಣೆ, encumberance ಸರ್ಟಿಫಿಕೇಟ್, survey sketch ಕಾಪಿ, ನಿಮಗೇನು ಬೇಕು?? ತಾಲ್ಲೂಕು ಕಚೇರಿಯ ಗೇಟ್ ನ ಪ್ಯೂನ್ ಇಂದ ಹಿಡಿದು ತಹಶೀಲ್ದಾರ್ ತನಕ, ಏನು ಕೆಲಸ ಬೇಕಾದರುಮಾಡಿಕೊಡುತ್ತಾನೆ(ಮಾಡಿಸಿಕೊಡುತ್ತಾನೆ).
ಇತ್ತೀಚಿಗೆ ನನಗೆ ಬಹಳ ಜರೂರಾಗಿ ನಮ್ಮ ಜಮೀನಿನ ಪಹಣಿ ಬೇಕಾಗಿತ್ತು. ನಮ್ಮ ಊರಿನ ಪಹಣಿ ಕೇಂದ್ರ ಬಹಳ ದಿನಗಳಿಂದ ದುರಸ್ಥಿಯಲ್ಲಿತ್ತು. ಆಗಷ್ಟೇ ಕೊಡಲು ಶುರು ಮಾಡಿದ್ದರು. ಅದ್ದರಿಂದ ತಾಲ್ಲೂಕು ಕಚೇರಿ ಬಳಿ ಹೋಗಿ ಸಾಲು ನೋಡಿದೊಡನೆ ಭಯವಾಯ್ತು. ಅದರಲ್ಲೂ ನಮ್ಮ ಸರ್ಕಾರೀ ಕಛೇರಿಯೋಳಗಿನ ಗಣಕ ಯಂತ್ರಗಳು ಯಾವಾಗ ಕೆಡುತ್ತವೋ ಗೊತ್ತಿಲ್ಲ. ಇವತ್ತು ಕೆಟ್ಟರೆ ಇನ್ನು ರಿಪೇರಿ ಆಗುವುದು ಯಾವಾಗಲೋ??? ಅಲ್ಲಿವರೆಗೂ ನನಗೂ ಕಾಯುವ ಅವಕಾಶವಿರಲಿಲ್ಲ. ಮತ್ತಷ್ಟು ಓದು 
ಸುಮ್ಮನೆ ಬರಲಿಲ್ಲ ಸ್ವಾತಂತ್ರ್ಯ…!
– ರಾಕೇಶ್ ಶೆಟ್ಟಿ
ಇವತ್ತು ೬೫ನೇ ಸ್ವಾತಂತ್ರ್ಯ ಸಂಭ್ರಮ,ದೆಹಲಿಯ ಕೆಂಪು ಕೋಟೆಯ ಮೇಲೆ ಧ್ವಜಾರೋಹಣ ಮಾಡಿ ಭಾಷಣ ಮಾಡಲಿದ್ದಾರೆ ನಮ್ಮ ಪ್ರಾಮಾಣಿಕ ಪ್ರಧಾನಿ.ಮತ್ತೆ ನಾಳೆ ಇದೇ ಪ್ರಾಮಾಣಿಕ ಪ್ರಧಾನಿಯ
ಸರ್ಕಾರದ ಅನೈತಿಕತೆಯ ವಿರುದ್ಧ ಅಣ್ಣಾ ಹಜ಼ಾರೆ ಮತ್ತೆ ಉಪವಾಸ ಕೂರುತಿದ್ದಾರೆ.ಅಣ್ಣಾ ಇದನ್ನ ಎರಡನೇ ಸ್ವಾತಂತ್ರ್ಯ ಹೋರಾಟ ಅನ್ನುತಿದ್ದಾರೆ.ಆದರೆ ಮೊದಲ ಸ್ವಾತಂತ್ರ್ಯ ಹೋರಾಟದ ಆಳ-ಅಗಲಗಳನ್ನ ಸರಿಯಾಗಿ ತಿಳಿಯಲಾಗದೇಯೆ ಶಾಲೆ-ಕಾಲೇಜು ಪಾಸಾಗಿ ಬಂದ ನಮ್ಮಲ್ಲಿ ಅದಿನ್ನೆಷ್ಟು ಜನಕ್ಕೆ ಈ ಎರಡನೇ ಹೋರಾಟ ಕಿಚ್ಚು ಹಚ್ಚಬಹುದು,ಅದನ್ನ ಕಾಲವೇ ಉತ್ತರಿಸಲಿದೆ.
ಅಣ್ಣಾ ಉಪವಾಸ ಹೋರಾಟಕ್ಕೆ ಜಯವಾಗಲಿ ಅಂತ ಹಾರೈಸುತ್ತ,ಅಣ್ಣಾ ಉಪವಾಸ ಸತ್ಯಾಗ್ರಹಕ್ಕೆ ಆರಂಭದಲ್ಲೆ ಕಲ್ಲು ಹಾಕಿ ತಲೆಕೆಟ್ಟವರಂತೆ ಮಾತನಾಡುತ್ತಿರುವ ಕಾಂಗ್ರೆಸ್ಸಿನ ಮಂದಿಗೂ ಮತ್ತು ಕೇಂದ್ರ ಗೃಹ ಸಚಿವರಿಗೂ ಮತ್ತು ಕನಿಷ್ಠ ದೆಹಲಿ ಪೋಲಿಸ್ ಪರ್ಮಿಷನ್ ಸಹ ಕೊಡಿಸಲಾಗದ ಅಸಾಹಯಕ ಆದರೆ At the same time ಪ್ರಾಮಾಣಿಕ ಪ್ರಧಾನಿಯ ಶೋಚನೀಯ ಸ್ಥಿತಿಗೆ ಕಂಬನಿ ಮಿಡಿಯುತ್ತ, ಉಪವಾಸ ಸತ್ಯಾಗ್ರಹದಂತ ಹೋರಾಟದ ಅಸ್ತ್ರ ಹಿಡಿದು ನಿಲ್ಲುವವರ ಮನಸ್ಥಿತಿಯ ಕುರಿತಾಗಿ ಮಹಮ್ಮದ್ ಅಲಿ ಜಿನ್ನಾ ಹೇಳಿರುವ ಮಾತುಗಳು ನೆನಪಿಸಿಕೊಳ್ಳುತಿದ್ದೇನೆ.
“ಯಾವ ಮನುಷ್ಯ ಉಪವಾಸ ಸತ್ಯಾಗ್ರಹಕ್ಕೆ ಇಳಿಯುತ್ತಾನೋ ಅಂತವನು ಅವನ ಮನಸಿನ ಮಾತಿನಂತೆ ನಡೆಯುತ್ತಾನೆ ಮತ್ತು ಅವನಿಗೆ ಅವನೇನು ಮಾಡುತ್ತಿದ್ದಾನೆ ಎಂಬುದರ ಸಂಪೂರ್ಣ ಅರಿವಿರುತ್ತದೆ.ಅವರನ್ನು ಹಾದಿ ತಪ್ಪಿದವರು ಅನ್ನುವ ಮೊದಲು ಅವರನ್ನು ಹಾದಿ ತಪ್ಪಿಸಿರುವುದು ಈ ವ್ಯವಸ್ತೆ ಅನ್ನುವುದನ್ನ ಮರೆಯಬಾರದು,ಮತ್ತು ಈ ವ್ಯವಸ್ತೆಯ ವಿರುದ್ಧ ಯುವಕರು ಸಿಡಿದಿದ್ದಾರೆ” . ಅವರು ಹಾಗೇ ಹೇಳಿದ್ದು ಕ್ರಾಂತಿಕಾರಿ ಭಗತ್ ಸಿಂಗ್ ಮತ್ತು ಸಂಗಡಿಗರು ಬ್ರಿಟಿಶ್ ಕೈದಿಗಳಂತೆ ಭಾರತೀಯ ಕೈದಿಗಳಿಗೂ ಜೈಲಿನಲ್ಲಿ ಸಮಾನ ಹಕ್ಕು ನೀಡುವಂತೆ ಆಗ್ರಹಿಸಿ ನಡೆಸುತ್ತಿದ್ದ ಹೋರಾಟವನ್ನ ಬಹಿರಂಗವಾಗಿ ಬೆಂಬಲಿಸಿ.ಆಗಲೂ ಸಹ ಕಾಂಗ್ರೆಸ್ಸ್ ಭಗತ್ ಸಿಂಗ್ ಅವರ ಉಪವಾಸದ ಹೋರಾಟದ ಬಗ್ಗೆ ಈಗ ಅಣ್ಣಾ ಅವರ ಹೋರಾಟದ ವಿರುದ್ಧ ಇರುವಂತೆಯೆ ಇತ್ತು. ಅದಿರಲಿ, ಈ ಹೋರಾಟ ನಡೆದಿದ್ದು ಬರೋಬ್ಬರಿ ೬೩ ದಿನಗಳ ಕಾಲ! ಕಡೆಗೂ ಭಗತ್ ಸಿಂಗ್ ಮತ್ತವರ ಗೆಳೆಯರ ಎದುರು ಬ್ರಿಟಿಷ್ ಸರ್ಕಾರ ಮಂಡಿಯೂರಲೇ ಬೇಕಾಯಿತು,ಆದರೆ ಅಷ್ಟರೊಳಗಾಗಲೇ ನಾವು ’ಜತೀನ್ ದಾ’ ಅವರನ್ನ ಕಳೆದುಕೊಂಡಾಗಿತ್ತು 😦






