ವಿಷಯದ ವಿವರಗಳಿಗೆ ದಾಟಿರಿ

Posts tagged ‘ಭ್ರಷ್ಟಾಚಾರ’

8
ಆಗಸ್ಟ್

ಈ ಕಥೆ ಮುಂದಿನ ರಾಜಕಾರಣಿಗಳಿಗೆ ಒಂದು ಪಾಠವಾಗಲಿ

– ರಾಕೇಶ್ ಎನ್ ಎಸ್

ಅದು ೧೯೬೦ನೇ ದಶಕದ ಕೊನೆಯ ಭಾಗ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರವೆಂಬ ಪುಟ್ಟ ಪಟ್ಟಣದಲ್ಲಿ ಬೂಕನೆಕೆರೆ ಸಿದ್ದಲಿಂಗಯ್ಯ ಯಡಿಯೂರಪ್ಪ ಎಂಬ ವ್ಯಕ್ತಿ ಒಂದು ಅಕ್ಕಿ ಮಿಲ್‌ನಲ್ಲಿ ಸಾಮಾನ್ಯ ಗುಮಾಸ್ತನಾಗಿ ತಿಂಗಳಿಗೆ ಕೇವಲ ೧೩೦ ರೂ ಸಂಬಳ ಪಡೆದುಕೊಂಡು ದಿನ ಸಾಗಿಸುತ್ತಿದ್ದ. ಅಷ್ಟರಲ್ಲೇ ಆ ವ್ಯಕ್ತಿ ಒಂಚೂರು ರಾಜಕೀಯ, ಸಾಮಾಜಿಕ ವಿಷಯಗಳ ಬಗ್ಗೆ ಆಸಕ್ತನಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸ್ವಯಂ ಸೇವಕನಾಗಿ, ಜನಸಂಘದ ಮುಖಂಡನಾಗಿ, ಆ ಬಳಿಕ ಶಿಕಾರಿಪುರ ಪುರ ಸಭೆಯ ಸದಸ್ಯನಾಗಿ, ತುರ್ತು ಪರಿಸ್ಥಿತಿ ಘೋಷಿಸಿದ ಅದಕ್ಕೆ ಸಡ್ಡು ಹೊಡೆದ ಹೋರಾಟಗಾರನಾಗಿ, ರಾಜ್ಯದಲ್ಲಿ ಬಿಜೆಪಿಯ ಮುಖವಾಣಿಯಾಗಿ, ರೈತಾಪಿ ಜನರ ದನಿಯಾಗಿ, ರಾಜ್ಯದ ಮುಖ್ಯಮಂತ್ರಿ ಗಾದಿಯಲ್ಲಿ ಕುಳಿತ ಕತೆ ಈ ದೇಶದ ಪ್ರಜಾಪ್ರಭುತ್ವದ ಸೌಂದರ್ಯಕ್ಕೆ ಮುಕುಟ ಪ್ರಾಯವಾದದ್ದಾಗಿರಬೇಕಾಗಿತ್ತು. ಆದರೆ ಈ ನಾಡಿನ ದುರದೃಷ್ಟವೆಂದರೆ ಆ ವ್ಯಕ್ತಿ ಇಂದು ಈ ನಾಡು ಕಂಡು ಕೇಳರಿಯದ ರಾಕ್ಷಸ ರಾಜಕಾರಣದ ವಾರಸುದಾರನಾಗಿ ಬಿಟ್ಟಿದ್ದಾರೆ. ಪ್ರಜಾಪ್ರಭುತ್ವದ ಚೆಲುವನ್ನು ಹೀರಿದ ಬಂದಣಿಕೆಯಾಗಿ ಇತಿಹಾಸದ ಪುಟ ಸೇರಿದ್ದಾರೆ.

ಅಪನಂಬಿಕೆ, ಸ್ವಜನಪಕ್ಷಪಾತ, ಅಧಿಕಾರದ ಮೋಹ, ಇನ್ನೊಬ್ಬರ ಕಾಲೆಳೆಯುವ ಚಾಳಿ, ಭಟ್ಟಂಗಿಗಳ ಪಟಾಲಂ ಈ ಪಂಚ ಅನಿಷ್ಠ ಗುಣಗಳಲ್ಲಿ ಒಂದು ಗುಣವಿದ್ದರು ಕೂಡ ಒಬ್ಬ ವ್ಯಕ್ತಿಯ ಬದುಕು ಪಾತಳ ಮುಖಿ ಅಗುವುದರಲ್ಲಿ ಅನುಮಾನವಿಲ್ಲ. ಅಂತಹದ್ದರಲ್ಲಿ ಈ ಪಂಚ ಗುಣಗಳನ್ನೆ ತಮ್ಮ ನಡತೆಯಾಗಿಸಿಕೊಂಡಿವವರು ನಾಯಕರಾಗಿ ಬಿಟ್ಟರೆ ಅಥವಾ ನಾಯಕರೆಂದು ಕರೆಸಿಕೊಂಡರೆ ಅವರು ಮಾತ್ರವಲ್ಲ ಅವರಿರುವ ಸಮಾಜ ಅಥವಾ ಪರಿಸರ ಗಬ್ಬೆದ್ದು ಹೋಗುತ್ತದೆ ಎಂಬುದಕ್ಕೆ ಬಿ ಎಸ್ ಯಡಿಯೂರಪ್ಪ ಮತ್ತು ಕರ್ನಾಟಕದ ರಾಜ್ಯ ರಾಜಕೀಯವೇ ಸಾಕ್ಷಿ. ಮತ್ತಷ್ಟು ಓದು »
28
ಜುಲೈ

ಯಡ್ಯೂರಪ್ಪಂಗೆ ನೊಬೇಲ್ ಅವಾರ್ಡು…!

– ವಿಜಯ್ ಹೆರಗು

ಎಂದಿನಂತೆ ನಮ್-ವಿಜಯ್ ಹೆರಗುಮ ಕೆಂಚ, ಸೀನ, ಸಿದ್ದ, ನಾಣಿ ಎಲ್ಲಾರೂ ಬಂದು ಅವರ ಮಾಮೂಲಿ ‘ಅಡ್ಡಾ’ ರಾಮಣ್ಣನ ಟೀ ಅಂಗಡಿ ಮುಂದೆ ಕೂತ್ಕೊಂಡು ಹರಟೆ ಹೊಡೀತಾ ಇದ್ರು. ನಮ್ ಸಿದ್ದ ಅಲ್ಲಿ ಇದ್ದ ಅಂದ್ಮೇಲೆ ರಾಜಕೀಯದ ಮಾತು ಬರ್ಲೇಬೇಕು.

ಸಿದ್ದ : ಲೇ ಕೆಂಚ ಇವತ್ತು ಪೇಪರ್ ನೋಡ್ದೆನ್ಲಾ ?

ಕೆಂಚ : ಹೂ ಕನ್ಲಾ ನೋಡ್ದೆ, ಪಾಪ ನಮ್ ಯಡ್ಯೂರಪ್ನೋರಿಗೆ ಶ್ಯಾನೆ ಕಾಟ ಕೊಡ್ತಾವ್ರೆ. ಈ ಸಂತೋಷ್ ಹೆಗ್ಡೆ ಲೋಕಾಯುಕ್ತ ಆದಾಗಿಂದ ನಮ್ ಸಿಎಂ ಸಾಹೇಬ್ರು ಮುಖ್ದಾಗೆ ಸಂತೋಷಾನೇ ಕಾಣಾಕಿಲ್ಲ………ಸದ್ಯ ಇನ್ನೊಂದು ವಾರಕ್ಕೆ ಆವಯ್ಯ ರಿಟೈರ್ ಆಯ್ತಾರೆ ಇನ್ನಾರಾ ನಮ್ ಸಿಎಮ್ಮು ಸುಖವಾಗಿ ಇರ್ಬೌದು ಅಂದ್ಕೊಂಡ್ರೆ ಅದೇನೋ “ಗಣಿ ಬಾಂಬ್” ಹಾಕ್ಬಿಟ್ರಲ್ಲ ಅವ್ರು.

ಸೀನ : ಅಲ್ಲಲೇ ಕೆಂಚ ನಮ್ ಸಿಎಂ ಸಾಹೇಬ್ರು ಮುಖ್ದಾಗೆ ಯಾವಾಗ್ಲಾ ಸಂತೋಷ ನೋಡಿದ್ದೇ ನೀನು!? ಆವಯ್ಯ ಯಾವಾಗಲೂ ಮುಖ ಗಂಟ್ ಹಾಕ್ಕಂಡೆ ಇರ್ತಾರೆ…….

ಸಿದ್ದ : ನಿಜ ಕಣ್ಲಾ ಸೀನ……ಆವಯ್ಯ ನಗೋದೇ ಕಷ್ಟ ಕಣ್ಲಾ ಅದ್ಕೆ ಅವ್ರು ಸದಾನಂದ ಗೌಡ್ರುನ್ನ ಪಕ್ಕಕ್ಕೆ ಇಟ್ಕಂಡಿದ್ರು…..ಸದಾನಂದ ಗೌಡ್ರು ಯಾವಾಗ್ಲೂ ನಗ್ತಾ ಇರ್ತಾರೆ, ಆದ್ರೆ ಈಶ್ವರಪ್ಪ ಬಂದು ಸದಾನಂದ ಗೌಡ್ರುನ್ನ ಎಬ್ಬಿಸಿ ಅವ್ರ ಸೀಟ್ನಾಗೆ ಇವ್ರು ಕುಂತ್ಕಂಬುಟ್ರು.

 

ಮತ್ತಷ್ಟು ಓದು »

5
ಜುಲೈ

ಅಷ್ಟಕ್ಕೂ,ಈ ಪ್ರಜಾಪ್ರಭುತ್ವ ಅಂದರೇನು!?

– ರಾಕೇಶ್ ಶೆಟ್ಟಿ

ಮನಮೋಹನರಿಗಿಂತ ಅಡಾಲ್ಫ್ ಹಿಟ್ಲರ್ ಮೇಲು…!

ದೇಶಕ್ಕಾದ ಅವಮಾನಕ್ಕೆ ಪ್ರತಿಯಾಗಿ ನಂಜು ಕಾರುತಿದ್ದ ಅಡಾಲ್ಫ್ ಹಿಟ್ಲರ್ ಅನ್ನುವ ರಕ್ತ ಪಿಪಾಸು ಸರ್ವಾಧಿಕಾರಿಯನ್ನ, ದೇಶ ಭ್ರಷ್ಟಚಾರದಲ್ಲಿ ಮುಳುಗೇಳುತಿದ್ದರೂ ಸಂಬಂಧವೇ ಇಲ್ಲದಂತಿರುವ,ಕಣ್ಣೆದುರೇ ಅನಾಚಾರ ನಡೆಯುತಿದ್ದರು ಕಣ್ಮುಚ್ಚಿ ಕುಳಿತಿರುವ ಪ್ರಾಮಾಣಿಕ ಪ್ರಧಾನಿ ಮನಮೋಹನರಿಗೆ ಹೋಲಿಸಿದ್ದು ಅತಿಯಾಯ್ತು ಅನ್ನಿಸುತ್ತೆ ಅಲ್ವಾ?

ಹಾಗಿದ್ರೆ, ಅಣ್ಣಾ ಸತ್ಯಾಗ್ರಹ ಮಾಡಿ ಮೊಂಡ ಸರ್ಕಾರವನ್ನ ಮಂಡಿಯೂರಿಸಿದಾಗ ’ಓ! ಸರ್ಕಾರ ಈ ತರ ಬಗ್ಗಿದರೆ, ಎಲ್ಲರೂ ಸತ್ಯಾಗ್ರಹ ಮಾಡಿ ಸರ್ಕಾರವನ್ನ ಬ್ಲಾಕ್ ಮೇಲ್ ಮಾಡಲು ಶುರು ಮಾಡುತ್ತಾರೆ!’ ಅಂತ ಆತಂಕ ಪಡುವವರನ್ನ ಕಂಡಾಗ; ’ಪ್ರಜಾಪ್ರಭುತ್ವವಲ್ಲದ ಭ್ರಷ್ಟಚಾರ ಮುಕ್ತ ಸರ್ಕಾರಕ್ಕಿಂತ, ಭ್ರಷ್ಟಚಾರವಿರುವ ಪ್ರಜಾಪ್ರಭುತ್ವ ಸರ್ಕಾರವೇ ಮೇಲು’ ಅನ್ನುವಂತ ಲೇಖನವನ್ನ ಓದಿದಾಗ; ಪ್ರಬಲ ಜನಲೋಕಪಾಲ ಮಸೂದೆಗಾಗಿ ನಡೆಯುತ್ತಿರುವ ಹೋರಾಟ ’ಪ್ರಜಾಪ್ರಭುತ್ವದ ಬುಡವನ್ನೇ ಅಲುಗಾಡಿಸುತ್ತಿದೆ’ ಅಂತ ಕೆಲ ಮಂದಿ ಗುಲ್ಲೆಬ್ಬಿಸುತ್ತಿರುವುದನ್ನ ನೋಡಿದಾಗ ಇದೂ ಅತಿಯಾಯ್ತು ಅನ್ನಿಸುವುದಿಲ್ವಾ?

ಅಷ್ಟಕ್ಕೂ,ಜನರಿಂದ ಆರಿಸಿ ಬಂದ ಸರ್ಕಾರ ತನ್ನ ಪಾಲಿನ ಕೆಲಸವನ್ನ ತಾನು ಸರಿಯಾಗಿ ಮಾಡುತಿದ್ದರೆ ಅಣ್ಣಾ ಹಜ಼ಾರೆ ಯಾಕೆ ಬರಬೇಕಿತ್ತು? ಕಫ್ಫು ಹಣದ ಕಳ್ಳರ ಹೆಸರನ್ನ ಬಾಯ್ಬಿಡಿ ಅಂದಾಗ ’ಅವೆಲ್ಲ ಆಗಲಿಕ್ಕಿಲ್ಲ’ ಅಂತ ವಿತ್ತ ಸಚಿವ ಅಂದ ಮೇಲೆ ತಾನೇ ಜನರ ಪಿತ್ತ ನೆತ್ತಿಗೇರಿದ್ದು? ಸುಪ್ರೀಂ ಕೋರ್ಟ್ ತಪರಾಕಿ ಹಾಕಿದ ಮೇಲೆಯೆ ತೆರಿಗೆ ಕಳ್ಳ ಹಸನ್ ಅಲಿಯನ್ನ ಬಂಧಿಸಿದ್ದೇಕೆ? ಕಳೆದ ಚುನಾವಣೆಗಿಂತಲೂ ಮೊದಲೇ 2G ಹಗರಣ ಬಾಯ್ತೆರೆದು ನಂತರವೂ ಅದೇ ರಾಜನನ್ನ ಮತ್ತೆ ಕರೆದು ಮತ್ತದೇ ಖಾತೆಯನ್ನ ವಹಿಸಿದ ಸರ್ಕಾರಕ್ಕೆ ನೈತಿಕತೆಯಿದಯೇ? ಈಗ ಆತಂಕ ಪಡುತ್ತಿರುವ ಪ್ರಜಾಪ್ರಭುತ್ವದ ಕಾವಲು ಭಟರೆಲ್ಲ ಆಗ ಏನು ಮಾಡುತಿದ್ದರು?ಎಲ್ಲಿದ್ದರು?

ಮತ್ತಷ್ಟು ಓದು »

28
ಜೂನ್

ಹಿಂದಿ ಹೇರಿಕೆಯಲ್ಲೂ ಸುಣ್ಣ ಬೆಣ್ಣೆ..!

– ಮಹೇಶ. ಎಮ್. ಆರ್

ಇವತ್ತಿನ (೨೬-೦೬-೧೧) ಪ್ರಜಾವಾಣಿ ದಿನಪತ್ರಿಕೆಯಲ್ಲಿ ಮಿನಿಸ್ಟ್ರಿ ಆಫ್ ಮೈಕ್ರೊ, ಸ್ಮಾಲ್ ಆಂಡ್ ಮಿಡಿಯಮ್ ಎಂಟರಪ್ರೈಜಸ್ ಅವರು ತಮ್ಮ ಕಾಯರ್ ಬೋರ್ಡ್ ಎಂಬ ಸಂಸ್ಥೆಯ ಮೂಲಕ ಒಂದು ಜಾಹೀರಾತನ್ನು ಕೊಟ್ಟಿದ್ದಾರೆ. ಅದು ಸಂಪೂರ್ಣ ಹಿಂದಿಯಲ್ಲಿರೋದು ಕಾಣುತ್ತೆ. ಅವರ ಮಾಹಿತಿ ಪ್ರಜಾವಾಣಿ ಓದುವ ಅಥವಾ ಆ ಜಾಹೀರಾತನ್ನು ನೋಡುವ ಬಹುತೇಕ ಜನರಿಗೆ, ಕಣ್ಣಿಗೆ ಬಿದ್ದರೂ ಮಾಹಿತಿ ತಿಳಿಸುವ ಹಂತಕ್ಕೆ ಅದು ಹೋಗುವುದಿಲ್ಲ ಎಂಬುದು ಸತ್ಯ. ಹೀಗಾಗಿ ಮಾಹಿತಿ ಕೊಡುವ ಉದ್ದೇಶಕ್ಕಿಂತ ಅದರಲ್ಲಿ ಹಿಂದಿ ಹೇರಿಕೆಯ ಉದ್ದೇಶನೇ ಎದ್ದು ಕಾಣುತ್ತೆ. ಇನ್ನು ಈ ಜಾಹೀರಾತು ಕೊಟ್ಟ ಕಾಯರ್ ಬೋರ್ಡ ಅನ್ನೋ ಸಂಸ್ಥೆಯ ಕೇಂದ್ರ ಕಚೇರಿ ಕೇರಳದ ಕೊಚ್ಚಿಯಲ್ಲಿದೆ. ಕೇರಳದ ಬಾಶೆ ಮಲಯಾಳಂ, ಹೀಗಾಗಿ ಅಲ್ಲಿನೂ ಇದೇ ರೀತಿ ಹಿಂದಿಯಲ್ಲಿ ಕೊಟ್ಟಿದ್ದಾರಾ ಅಂತ ನೋಡಿದ್ರೆ,, ಅಲ್ಲಿನ ಮಲಯಾಳ ಮನೋರಮಾ ದಿನಪತ್ರಿಕೆಯಲ್ಲಿ ಇದೇ ಜಾಹೀರಾತು ಸಂಪೂರ್ಣ ಆಂಗ್ಲ್ ಬಾಶೆಯಲ್ಲಿತ್ತು. ವಿಚಿತ್ರ ಅಂದ್ರೆ, ಕಾಯರ್ ಬೋರ್ಡ ತಮ್ಮೂರಿನಲ್ಲಿ ಆಂಗ್ಲ ಬಾಶೆಯಲ್ಲಿ ಜಾಹೀರಾತು ಹಾಕಿಸಿ, ನಮ್ಮೂರಿನಲ್ಲಿ ಹಿಂದಿಯಲ್ಲಿ ಜಾಹೀರಾತು ಹಾಕಿಸಿದ್ದು.! ಎರಡು ಹಿಂದಿಯೇತರ ದಿನಪತ್ರಿಕೆಗಳೇ. ಒಂದು ಪ್ರಾದೇಶಿಕ ದಿನಪತ್ರಿಕೆಯಲ್ಲಿ ಆಂಗ್ಲ ಮತ್ತೊಂದರಲ್ಲಿ ಹಿಂದಿ ಹಾಕಿದ್ದು ಯಾಕೆ ಅನ್ನೋದಶ್ಟೆ ಪ್ರಶ್ನೆ. ಎರಡೂ ಕಡೆ ಪ್ರಾದೇಶಿಕ ಬಾಶೆನೇ ಇರಬೇಕಿತ್ತು ಅನ್ನೋದು ಮಾತ್ರ ವಿವಾದಕ್ಕೆ ಎಡೆ ಇಲ್ಲದ ವಾದ.! ಅಂದಹಾಗೆ ಬೆಂಗಳೂರಿನಲ್ಲೂ ಅದರ ಪ್ರಾದೇಶಿಕ ಕಚೇರಿ ಇದೆ.

ಮತ್ತಷ್ಟು ಓದು »

11
ಜೂನ್

ದೇಶಕ್ಕೋಸ್ಕರ ಹೋರಾಡುವವರ ಗತಿ ಇಷ್ಟೇ ಏನೋ..!!

– ಕೆ.ಎಸ್ ರಾಘವೇಂದ್ರ ನಾವಡ

ನೀವು ಏನಾದ್ರೂ ಹೇಳಿ… ದೇಶಕ್ಕೋಸ್ಕರ ಹೋರಾಡುವವರ ಗತಿ ಇಷ್ಟೇ.. ಅ೦ಥ ಮತ್ತೊಮ್ರ್ ಪ್ರೂವ್ ಆಗಿ ಹೋಗಿದೆ. ನಮ್ಮ ದೇಶದಲ್ಲಿ ಕೆಲವರ ಹಣೆಬರಹವನ್ನು ಸುಲಭವಾಗಿ ನಿರ್ಧರಿಸಬಹುದು.. ಹಿ೦ದೆ ಹಾವೇರಿಯಲ್ಲಿ ರೈತರ ಮುಷ್ಕರಕ್ಕೆ ಯಡಿಯೂರಪ್ಪ ಗೋಲಿಬಾರ್ ಗೆ ಆದೇಶ ನೀಡುವುದರ ಮೂಲಕ ಅದಕ್ಕೊ೦ದು ಗತಿ ಕಾಣಿಸಿದರು! ಇ೦ದು ರಾಮ್ ದೇವ್ ಹಣೆಬರಹವನ್ನು ಕೇ೦ದ್ರ ಸರ್ಕಾರ ಈ ರೀತಿ ಬರೆಯಿತು!! ಒಟ್ಟಾರೆ ನಾವು ಬ್ರಿಟೀಶ್ ಸತ್ತೆಯ ಕಾಲಕ್ಕೆ ಹೋಗುತ್ತಿದ್ದೇವೇನೋ ಎ೦ಬುದು ನನ್ನ ಸ೦ಶಯ!!

ಭರತ ಭೂಮಿಯಲ್ಲಿ  ಬ್ರಿಟೀಶ್ ಆಡಳಿತದಿ೦ದ ಮುಕ್ತರಾಗ ಬಯಸಿ ಸ್ವಾತ೦ತ್ರ್ಯದ ಕನಸು ಕ೦ಡು ಅದಕ್ಕಾಗಿ ಹೋರಾಡಿದವರು- ಶೋಷಿತ ವರ್ಗ – ತಮ್ಮ ಬೇಡಿಕೆಯನ್ನು ನ್ಯಾಯಬಧ್ಧವಾಗಿ ಕೇಳುವವರು- ಜನ ಕಲ್ಯಾಣಕ್ಕಾಗಿ ಹಾತೊರೆದು ಮುನ್ನುಗ್ಗುವವರು – ರಾಜಕೀಯ ವ್ಯವಸ್ಥೆಯನ್ನು ಸುಧಾರಿಸ ಬಯಸುವವರು ಮು೦ತಾದವರ ಹೋರಾಟದ ಅ೦ತ್ಯ ಹೀಗೇ!! ಸರಿ ಸುಮಾರು ಬ್ರಿಟೀಷರಿ೦ದ ಆರ೦ಭವಾದ ಈ ಪ್ರಜೆಗಳ ಧ್ವನಿಯನ್ನು  ಅವರುಗಳ ಗ೦ಟಲನ್ನೇ ಹಿಸುಕುವ ಮೂಲಕ ,ಅವರ ಹೋರಾಟಕ್ಕೊ೦ದು ಅನೈತಿಕ ಅ೦ತ್ಯ ನೀಡುವ ಈ ಕ್ರಮ ದುರದೃಷ್ಟವಶಾತ್ ಇಲ್ಲಿಯವರೆವಿಗೂ ಮು೦ದುವರೆದಿದೆ!! ಹಾಗ೦ತ ಎಲ್ಲ ಹೋರಾಟಗಳೂ ಇದೇ ಅ೦ತ್ಯವನ್ನು ಕ೦ಡವೇ ಎ೦ದರೆ ಖಚಿತವಾದ ಉತ್ತರ ನೀಡಲಿಕ್ಕಾಗುವುದಿಲ್ಲ.. “ಕೆಲವು ಸಮಸ್ಯೆಗಳು ತಾವಾಗೇ ಸೃಷ್ಟಿಯಾದರೆ ಕೆಲವನ್ನು ನಾವೇ ಸೃಷ್ಟಿಸಿಕೊಳ್ಳುತ್ತೇವೆ“ ಎ೦ಬ ನಾವಡ ಉವಾಚವೊ೦ದಿದೆ.. ಅದರ ಪ್ರಕಾರ ಪ್ರಸಕ್ತ ಭರತಭೂಮಿಯಲ್ಲಿಯೂ ಏಕೆ ಸಮಸ್ತ ಜಗತ್ತಿನಲ್ಲಿಯೂ  ಸರ್ಕಾರ ಗಳು ಹಾಗೂ ಜನತೆಗಳ ವಿಚಾರದಲ್ಲಿ ನಡೆಯುತ್ತಿರುವುದು ಇದೇ!!

ಮತ್ತಷ್ಟು ಓದು »

7
ಜೂನ್

ನಾವಿನ್ನೂ ಬ್ರಿಟಿಷರ ಆಳ್ವಿಕೆಯಲ್ಲಿದ್ದೇವೆಯೇ?

– ಸಂಪತ್ ಕುಮಾರ್

ಸ್ವತಂತ್ರ, ಸಂವಿಧಾನಾತ್ಮಕವಾಗಿ ಕಾರ್ಯ ನಿರ್ವಹಿಸುವ  ದೇಶದಲ್ಲಿ ಇಂತಹ ಘಟನೆಗಳು ನಡೆಯಲು ಸಾಧ್ಯವೇ!? ಜೂನ್ ೪ ರ ಘಟನೆ ನಾವೆಲ್ಲರೂ ತಲೆತಗ್ಗಿಸುವಂತೆ ಮಾಡಿದೆ.ಪ್ರಜೆಗಳ ಮೂಲಭೂತ ಹಕ್ಕುಗಳ ಕಗ್ಗೊಲೆಯಾಗಿದೆ. ಗಾಂಧಿಜಿ ಹೇಳಿಕೊಟ್ಟ ಸತ್ಯಾಗ್ರಹದಂತಹ ಅಸ್ತ್ರ ಬೆಲೆ ಕಳೆದುಕೊಂಡಿದೆ. ಹಿಂಸಾತ್ಮಕ ಪ್ರತಿಭಟನೆಗೆ ಪ್ರಚೋದನೆ ನೀಡಿದಂತಾಗಿದೆ.
ಪ್ರಜೆಗಳ ದನಿಯನ್ನು ಹತ್ತಿಕ್ಕಲು ಹೊಸ ವಿಧಾನವನ್ನು ಸರಕಾರ ಹೇಳಿಕೊಟ್ಟಿದೆ. ಬಾಬಾ ರಾಮದೇವ್ ಅವರ ಅಹಿಸಾತ್ಮಕ ಪ್ರತಿಭಟನೆಗೆ ಹಿಂಸಾತ್ಮಕ ಉತ್ತರ ನೀಡಿ ಸರ್ಕಾರ ಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡಿದೆ.

ಏಪ್ರಿಲ್ ೧೨ ರಂದು ನಾನು ನಿಲುಮೆಯಲ್ಲಿ ಬರೆದ ಲೇಖನ “ಇನ್ನೊಂದು ಸಮರಕ್ಕೆ ಸಿದ್ದರಾಗಿ” ಸದಾಶಯದಂತೆ ಬಾಬಾ ರಾಮದೇವ್ ಅವರು ಸತ್ಯಾಗ್ರಹಕ್ಕೆ ಕುಳಿತದ್ದು ಸಂತೋಷದ ವಿಚಾರವಾಗಿರುತ್ತದೆ. ಲೋಕಪಾಲದಂತಹ ಬಹು ಆಯಾಮದ ಸಮಸ್ಯೆಯನ್ನು ಎದುರಿಸುವ ಬದಲು, “ಕಪ್ಪು ಹಣ” ದಂತಹ ಒಂದೇ ಸಮಸ್ಯೆಯನ್ನು ಎದುರಿಸಿ ಬಾಬಾ ಯಶಸ್ಸನ್ನು ಪಡೆಯುವ ಹಂತದಲ್ಲಿರುವಾಗಲೇ ಹೀಗೆ ಸತ್ಯಾಗ್ರಹವನ್ನು ಹತ್ತಿಕ್ಕಿದ್ದು ಸಮಸ್ಯೆಯನ್ನು ಉಲ್ಬಣಗೊಳಿಸಿದೆ. ಸರಕಾರದ ಸರ್ವಾಧೀಕಾರದ ಧೋರಣೆ ಎಂದಿಗೂ ಸಲ್ಲ.

ಮತ್ತಷ್ಟು ಓದು »

5
ಜೂನ್

ಗಾಂಧಿ ಪಕ್ಷದೊಳಗಿನ ಬ್ರಿಟಿಷರು…!

– ರಾಕೇಶ್ ಶೆಟ್ಟಿ

ತಲೆಬರಹವನ್ನ ನಕಲಿ ಗಾಂಧಿಗಳ ಪಕ್ಷದೊಳಗಿನ ಬ್ರಿಟಿಷರು ಅಂತ ಓದಿಕೊಳ್ಳಿ.ಮಹಾತ್ಮರ ಹೆಸರನ್ನ ಬೇಡ ಬೇಡವೆಂದರೂ ಅನಿವಾರ್ಯವಾಗಿ ಅವರ ಹೆಸರನ್ನ ದುರ್ಬಳಕೆ ಮಾಡಿಕೊಳ್ಳುತ್ತಿರುವ ಪಕ್ಷದ/ಸರ್ಕಾರದ ದೌರ್ಜನ್ಯದ ವಿರುದ್ಧ ಮಾತನಾಡುವಾಗ ಬಳಸಿಕೊಳ್ಳಲೇಬೇಕಿದೆ.

ಪ್ರಾಮಾಣಿಕ ಪ್ರಧಾನಿಯ ಸರ್ಕಾರ ಅನೈತಿಕ ಕೆಲಸಕ್ಕೆ ಕಡೆಗೂ ಕೈ ಇಟ್ಟಿದೆ.ಮಧ್ಯರಾತ್ರಿ ಕಳ್ಳರಂತೆ-ದರೋಡೆಕೋರರಂತೆ ರಾಮ್ ಲೀಲಾ ಮೈದಾನಕ್ಕೆ ನುಗ್ಗಿ ಹೆಂಗಸರು-ಮಕ್ಕಳು ಅಂತ ನೋಡದೆಯೆ ರಾಕ್ಷಸರಂತೆ ವರ್ತಿಸಿದ ರೀತಿ ನೋಡಿದರೆ, ಮನಮೋಹನ್ ಸಿಂಗ್ ಅನ್ನುವ ಸೋ-ಕಾಲ್ಡ್ ಪ್ರಧಾನಿಯ ಪ್ರಾಮಾಣಿಕತೆ ಉಪ್ಪಿನಕಾಯಿ ಹಾಕಲಿಕ್ಕಾ ಅಂತ ಕೇಳಲೆಬೇಕಾಗುತ್ತದೆ.

ಹುಚ್ಚು ನಾಯಿ ಕಡಿತಕ್ಕೆ ಚುಚ್ಚು ಮದ್ದು ತೆಗೆದುಕೊಳ್ಳದಿದ್ದರೆ ಏನಾಗುತ್ತೆ ಅನ್ನೋದಕ್ಕೆ ದಿಗ್ವಿಜಯ್ ಸಿಂಗ್ ಆಗಾಗ ನೀಡೋ ಹೇಳಿಕೆಗಳೇ ಉದಾಹರಣೆ.ಇಂತ ದಿಗ್ಗಿ ನಿನ್ನೆ ಹೇಳಿದ ಮಾತು ನೆನಪಿದೆಯಾ? ‘ಸರ್ಕಾರ ರಾಮ್ದೇವ್ ಅವರಿಗೆ ಹೆದರಿಲ್ಲ, ಒಂದು ವೇಳೆ ಹೆದರಿದ್ದರೆ ರಾಮ್ ದೇವ್ ಅವರನ್ನ ಬಂಧಿಸುತಿತ್ತು!’.ಹಾಗೇ ಹೇಳಿದ ಮಧ್ಯರಾತ್ರಿಯೇ ಬ್ರಿಟಿಷರು ಜಲಿಯನ್ ವಾಲಾಬಾಗ್ಗೆ ನುಗ್ಗಿದ ರೀತಿಯಲ್ಲೆ ನುಗ್ಗಿ ಅದೇ ರಾಮ್ ದೇವ್ರನ್ನ ಬಂಧಿಸಿದ್ದಾರೆ.ಅಂದರೆ ಕಾಂಗ್ರೆಸ್ಸ್ ಸರ್ಕಾರದ ಬೆದರಿದೆ ಅಂತಲೇ ಅರ್ಥವಲ್ಲವಾ?

ಮತ್ತಷ್ಟು ಓದು »

5
ಜೂನ್

ಹನುಮಪ್ಪನೆ ಆಗಿರಲಿ ಇಮಾಂ ಸಾಬಿಯೇ ಆಗಿರಲಿ…!

– ಪವನ್‍ ಪಾರುಪತ್ತೇದಾರ‍್, ಬೆಂಗಳೂರು

ಜನ ಲೋಕಪಾಲ್ ಜಾರಿಗಾಗಿ ಅಣ್ಣಾ ಹಜಾರೆ ಹೋರಾಟ ಮಾಡಿದ್ರು , ಮೇಧಾ ಪಾಟ್ಕರ್ ಹೋರಾಟಗಳನ್ನ ಮಾಡುತ್ತಲೇ ಇರ್ತಾರೆ. ಎರಡು ಗ್ರೇಟ್‍  ಹಗರಣ ಇಷ್ಟು ದೊಡ್ಡ ಮಟ್ಟದಲ್ಲಿ ಸದ್ದು ಮಾಡಲು ಸುಬ್ರಮಣ್ಯನ್ ಸ್ವಾಮಿ ಅವರ ಹೋರಾಟವೇ ಕಾರಣ. ಈಗ ತಾನೆ ಮಿಲಿಂದ್ ಸೋಮನ್ ಹಸಿರು ಕ್ರಾಂತಿ ಮಾಡಲು 531 ಕಿ.ಮೀ. ಓಟ ಮುಗಿಸಿದ್ದಾರೆ.ಇನ್ನು ಎಷ್ಟೋ ಹೋರಾಟಗಳು ನಡಿತನೆ ಇರುತ್ತವೆ. ಆದರೆ ,ಈಗ ಬಾಬಾ ರಾಮದೇವ್ ಹೋರಾಟ ಮಾಡಲು ಪ್ರಾರಂಭ ಮಾಡಿದ ತಕ್ಷಣ ಈ  ಮಾಧ್ಯಮಗಳು ಏಕೆ ಅದಕ್ಕೆ ಕೋಮುವಾದದ ಬಣ್ಣ ಹಚ್ಹುತ್ತಿವೆಯೋ ಅ ದೇವರೇ ಬಲ್ಲ ” ಟೈಮ್ಸ್ ನೌ” ಅರ್ನಬ್ ಗೋಸ್ವಾಮಿ ಇರಬಹುದು ಅಥವಾ “ಸಿಎನ್‍ಎನ್‍”  ನ ರಾಜ್ದೀಪ್ ಸರ್ದೇಸಾಯಿ ಇರಬಹುದು, ಶಾರುಕ್ ಖಾನ್, ಸಲ್ಮಾನ್ ಖಾನ್ ,ಶೋಭಾ ಡೆ ಮುಂತಾದ ಸೆಲೆಬ್ರಿಟಿಗಳು ಆಗಿರಬಹುದು, ಬಾಬಾ ರಾಮದೇವ್ ಮಾಡುತ್ತಿರುವುದು ನಾಟಕ ಅವರಿಗೆ ಯೋಗ ಹೇಳಿಕೊಡುವುದು ಬಿಟ್ಟು ಈ ಕೆಲಸ ಯಾಕೆ ಅಂತ ಕೇಳುತಿದ್ದಾರೆ .ಕಾಂಗ್ರೆಸ್ಸ್ ನ ದಿಗ್ವಿಜಯ್ ಸಿಂಗ್ ಅಂತು ಗಂಟೆಗೊಂದು ಹೇಳಿಕೆ ರಾಮದೇವ್ ವಿರುದ್ದ ನೀಡುತಿದ್ದಾರೆ  ಆದರೆ ಅತ್ತ ಅವರ ಪಕ್ಷದ ಹಿರಿಯ ಸಚಿವರೆಲ್ಲ ಬಾಬ ಅವರನ್ನ ಮೀಟ್ ಮಡಿ ಕಾಂಪ್ರಮೈಸ್‍ ಅಗೋ ತಂತ್ರ ಹೆಣೆಯುತಿದ್ದಾರೆ .

ಇಷ್ಟಕ್ಕೂ ಮಾಧ್ಯಮದವರು ಕೋಮುವಾದದ ಬಣ್ಣ ಕಟ್ಟುತ್ತಿರುವುದು ಯಾಕೆ ರಾಮದೇವ್ ಅವರು ಕಾವಿ ವಸ್ತ್ರ ಧರಿಸಿ ಮರದ ಪಾದರಕ್ಷೆ ಧರಿಸಿದ್ದಾರೆ ಅಂತಲೇನು?? ಭ್ರಷ್ಟಾಚಾರದ ವಿರುದ್ದ ಹೋರಾಡಲು ಕಾವಿಯದರೇನು ಕಪ್ಪು ವಸ್ತ್ರವಾದರೇನು ? ಮರದ ಚಪ್ಪಲಿ ಅದರೇನು ADIDAS ಶೂ ಅದರೇನು? ಭಾರತದ ಪ್ರತಿಯೊಬ್ಬ ಪ್ರಜೆಗೂ ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತುವ ಹಕ್ಕಿದೆ, ಎಲ್ಲ ಡಾಕುಮೆಂಟ್ ಸರಿ ಇದ್ದರು ಪೋಲಿಸ್ ಗಾಡಿ ಅಡ್ಡ ಹಾಕಿದ ಮೇಲೆ 50 ರೂಪಾಯಿ ಲಂಚ ಕೊಟ್ಟ ಪ್ರತಿಯೊಬ್ಬ ನಾಗರಿಕನಿಗೂ ಅವಾಜ್ ಹಾಕುವ ತಾಕತ್ತಿದೆ. ಈ ಎಲ್ಲ ಭಾರತದ ಪ್ರಜೆಗಳಲ್ಲಿ ಬಾಬಾ ರಾಮದೇವ್ ಸಹ ಒಬ್ಬರು ಎಂದು ಏಕೆ ಮಾಧ್ಯಮದವರು ಬಿಂಬಿಸಬಾರದು? ಮಾಧ್ಯಮಗಳಲ್ಲಿ ಅಪ ಪ್ರಚಾರ ಮಾಡಿ ಹೋರಾಟಕ್ಕೆ ತೊಡಕು ಮಾಡಲು ಕಾಂಗ್ರೆಸ್ ಗೆ ಸಹಾಯ ಮಾಡುವ ತಂತ್ರವಾ? ರಾಜಕೀಯ ವ್ಯಕ್ತಿಗಳಿಗೆ ಹೋರಾಟದಲ್ಲಿ ನಿಷೇಧ ಇದೆ ಆದ್ದರಿಂದ ಈ ಹೋರಾಟದಲ್ಲಿ ಯಾವುದೇ ಪಕ್ಷಗಳಿಗೆ ಲಾಭವಂತು ಇಲ್ಲ.ಈ ಹೋರಾಟದ ಯೆಶಸ್ಸಿನಿಂದ ಲಾಭವಗೋದು ನಾಗರಿಕರಿಗೆ. ಆದರೆ ವಿರೋಧ ಪಕ್ಷದಲ್ಲಿರುವ ಬಿಜೆಪಿ ತನ್ನ ಚುನಾವಣೆಯ ಪ್ರಣಾಳಿಕೆಯಲ್ಲೇ ಕಪ್ಪು ಹಣವನ್ನು ತರುವ ಪ್ರಸ್ತಾವನೆ ಮಾಡಿತ್ತು. ಈಗ ಬೆಂಬಲ ಸೂಚಿಸಿದೆ. ಅದಕ್ಕೆ ಮಾಧ್ಯಮಗಳ ಕಣ್ಣಿಗೆ ಬಾಬಾ ರಾಮದೇವ್ ಬಿಜೆಪಿ ಏಜೆಂಟ್ ಆಗಿದ್ದಾರೆ.

ಮತ್ತಷ್ಟು ಓದು »

5
ಜೂನ್

ರಾಮದೇವ್,ಮೀಡಿಯಾ ಮತ್ತು ಸಂಪಾದಕೀಯ

– ಮಹೇಶ ಪ್ರಸಾದ ನೀರ್ಕಜೆ

ಸಂಪಾದಕೀಯ ತಂಡ ಬರೆದ “ಸಂವಿಧಾನವನ್ನೇ ಒಪ್ಪದ ರಾಮದೇವ ಸತ್ಯಾಗ್ರಹಕ್ಕೆ ಇಳಿದಿದ್ದಾರೆ… ಜೈ ಹೋ! ” ಈ ಲೇಖನದ ಬಗ್ಗೆ ನನ್ನ ಕೆಲವು ಅನಿಸಿಕೆಗಳು. ಇವು ಒಟ್ಟಾರೆಯಾಗಿ ಮಾಧ್ಯಮಗಳ ಬೇಜವಾಬ್ದಾರಿತನದ ಬಗ್ಗೆ ನನ್ನ ಕೆಲವು ಟಿಪ್ಪಣಿಗಳು ಕೂಡ ಹೌದು. ಸದಾ ಮಾಧ್ಯಮದ ತಪ್ಪು ಒಪ್ಪುಗಳನ್ನು ಪ್ರಕಟಿಸುವ ತಂಡ ಅದರ ಜೊತೆಜೊತೆಗೆ ಬೇರೆ ಕೆಲವು ವಿಚಾರಗಳನ್ನು ಕೂಡ ಬರೆಯುತ್ತದೆ. ಅದರಲ್ಲೂ ವಿಶೇಷವಾಗಿ ಧಾರ್ಮಿಕ ಸಂಪ್ರದಾಯವಾದಿಗಳ ಬಗ್ಗೆ, ಮೂಢ ನಂಬಿಕೆಗಳ ಬಗ್ಗೆ ಸಾಕಷ್ಟು ಬರಹಗಳನ್ನು ಬರೆದಿದ್ದಾರೆ. ಅವರ ಕೆಲವು ಪ್ರಯತ್ನಗಳ ಬಗೆಗೆ ನನಗೆ ಹೆಮ್ಮೆಯಿದೆ. ಅದರಲ್ಲೂ ಜಿ ಕನ್ನಡ ವಾಹಿನಿಯಲ್ಲಿ ನಡೆಯುತ್ತಿದ್ದ ಬೃಹತ್ ಬ್ರಹ್ಮಾಂಡ ಕಾರ್ಯಕ್ರಮದ ಬಗೆಗಿನ ವಿರೋಧ ಎಲ್ಲರ ಗಮನ ಸೆಳೆದಿತ್ತು. ಆದರೆ ಮೊದಲಿನಿಂದಲೂ ಕೂಡ ನನಗೆ ಸಂಪಾದಕೀಯ ತಂಡದ ಬಗೆಗೆ ಕೆಲವು ಅನುಮಾನಗಳಿವೆ. ಮೊದಲನೆಯದಾಗಿ ತನ್ನ TRP ಹೆಚ್ಚಿಸಿ ಕೊಳ್ಳಲೋ ಎಂಬಂತೆ ಬ್ಲಾಗಿನಲ್ಲಿ ಎಲ್ಲೆಂದರಲ್ಲಿ ಅನಾಮಿಕ ಪ್ರತಿಕ್ರಿಯಗಳ ಮಹಾಪೂರ. ಈ ಪ್ರತಿಕ್ರಿಯೆಗಳನ್ನು ಯಾರು ಬರೆಯುತ್ತಾರೆ, ಅವರ ಪ್ರತಿಕ್ರಿಯೆಗಳಲ್ಲಿ ಏನಾದರು ಕುತ್ಸಿತ ಉದ್ದೇಶಗಳಿವೆಯೇ ಇತ್ಯಾದಿ ಪ್ರಶ್ನೆಗಳು ನನಗೆ ಮೊದಲಿನಿಂದಲೂ ಇವೆ. ಅಲ್ಲದೆ ಮೂಢ ನಂಬಿಕೆಯನ್ನು ವಿರೋಧಿಸುವ ನೆಪದಲ್ಲಿ ಎಲ್ಲಾ ಅಧ್ಯಾತ್ಮಿಕ ವ್ಯಕ್ತಿಗಳನ್ನು ಟೀಕಿಸುವ ಹುನ್ನಾರವೋ ಎಂದು ಕೂಡ ಸಂಶಯವಿದೆ. ಆದರೆ ಕೆಲವು ಬರಹಗಳಲ್ಲಿ ಉತ್ತಮ ಅಧ್ಯಾತ್ಮಿಕ ಮೌಲ್ಯಗಳನ್ನು ಅದರಲ್ಲೂ ವಿವೇಕಾನಂದ, ಬುಧ್ಧ ಗಾಂಧೀಜಿ ಬಗ್ಗೆ ಬರೆದಿದ್ದೂ ಹೌದು. ಒಟ್ಟಿನಲ್ಲಿ ನನ್ನ ಮಟ್ಟಿಗೆ ಸಂಪಾದಕೀಯ ವಿರೋಧಾಭಾಸಗಳ ಗೂಡು. ಇರಲಿ, ಈಗ ಪ್ರಸ್ತುತ ಲೇಖನದ ಬಗ್ಗೆ ಹೇಳುವುದಾದರೆ ನನ್ನ ಪ್ರಕಾರ ಇದರಲ್ಲಿ ಹಲವಾರು ತಪ್ಪುಗ್ರಹಿಕೆಗಳು, ಮತ್ತು ತಪ್ಪು ಮಾಹಿತಿಗಳು ಕಾಣಸಿಗುತ್ತವೆ. ಅವುಗಳನ್ನು ಪಟ್ಟಿ ಮಾಡಿ, ನಿಜ ಸಂಗತಿಯನ್ನು ಹೊರಗೆಡಹುವ ಒಂದು ಪ್ರಯತ್ನ ಇದು.

ಮತ್ತಷ್ಟು ಓದು »

30
ಮೇ

ಬಸವನ ಗುಡಿಯಲ್ಲಿ ‘ಕರಪ್ಷನ್ ಸಾಕು’ ಆ೦ದೋಲನ. ನಾ ಕ೦ಡ೦ತೆ

– ಹರೀಶ್ ಆತ್ರೇಯ

ಕಿರಣ್ ಬೇಡಿ ಸ್ವಾಮಿ ಅಗ್ನಿವೇಶ್ ರ ಪ್ರಚೋದಕನಕಾರಿ ಭಾಷಣ, ಶ್ರೀ ಬಾಲಸುಬ್ರಹ್ಮಣ್ಯ೦ ರ ನಿರೂಪಣೆ ಮತ್ತು ಗಣ್ಯರ ಭಾಷಣದ ಅನುವಾದ, ಅರವಿ೦ದ್ ಖೇಜ್ರಿವಾಲರ ಜನಲೋಕಪಾಲ್ ಕಾನೂನು ಪಾಠ, ಕೆಲ ಕಾರ್ಯತಕರ್ತರ ಉತ್ಸಾಹ, ನೈಜ ಕಾಳಜಿ. ಇನ್ನೂ ಕೆಲವರ ಶೋ, ವಾಲ೦ಟೀರ್ ಟೀ ಶರ್ಟ್ ಮೇಲೆ ಎಲ್ಲರ ಕಣ್ಣು, ಮಾಸ್ಟರ್ ಹಿರಣ್ಣಯ್ಯರನವರ ಅನುಭವದ ಮಾತು, ಅಣ್ಣಾ ಹಜಾರೆಯವರ ಮುಗ್ಧ ನುಡಿಗಳು, ರಾಜಕಾರಣಿಗಳ/ ಸರ್ಕಾರಿ ಅಧಿಕಾರಿಗಳ ಮೋಸದಿ೦ದ ಬೇಸತ್ತ ಜನರ ಹತಾಶ ನುಡಿಗಳು, ಜೈಕಾರ, ಗಲೀ ಗಲೀಮೆ ಶೋರ್ ಹೈ ಸಾರೆ ನೇತ ಚೋರ್ ಹೈ ಎನ್ನುವ ಘೋಷಣೆಗಳು, ಇನ್ನೂ ಕೆಲವರಿಗೆ ಇಲ್ಲೇನ್ ನಡೀತಿದೆ ಅ೦ತ್ಲೇ ಗೊತ್ತಿಲ್ದೆ ಇರೋ ಅಮಾಯಕತೆ (?) ಇದೆಲ್ಲರ ನಡುವೆ ನಮ್ ಯಡ್ಯೂರಪ್ಪನವರ ಪರ ಅದ್ಯಾರೋ ನರಸಿ೦ಹ (ಮು. ಮುಖ್ಯಮ೦ತ್ರಿ) ಎ೦ಬುವವನ ಪ್ರಚಾರ, ಸ್ವರಾತ್ಮ ತ೦ಡದ ಪಾಪ್ ರೀತಿಯ ಸ೦ಗೀತ ಅದಕ್ಕೆ ಜನರು ತಲೆದೂಗಿದ್ದು, ಇವು ನಿನ್ನೆಯ ಆ೦ದೋಲನದ ಹೈಲೈಟ್.

ಹನ್ನೊ೦ದು ಗ೦ಟೆಯಿ೦ದ ೨:೫೦ರ ತನಕ ಕಾರ್ಯಕರ್ತರ ಜನಗಳ ಮತ್ತು ಅಲ್ಲಿ ಆಡುತ್ತಿದ್ದ ಯುವಕರ ಮುಖಗಳನ್ನು ಗಮನಿಸುತ್ತಾ ಬ೦ದೆ. ಅಣ್ಣಾ ಹಜಾರೆಯವ್ರು ಬ೦ದದ್ದು ೨:೫೦ ಕ್ಕೆ. ಅಲ್ಲಿಯವರೆಗೂ ಒ೦ದೆರಡು ಬಾರಿ ಸ್ಟೇಜಿನ ಹತ್ರ ಸುತ್ತ ಮುತ್ತ ಓಡಾಡ್ತಾ ಎಲ್ಲರ ಅಭಿಪ್ರಾಯಗಳನ್ನ ಸ೦ಗ್ರಹಿಸುತ್ತಾ ನಿ೦ತೆ. ಕಾರ್ಯಕರ್ತನೊಬ್ಬ “ನೀವು ವಾಲ೦ಟೀರಾ”? ಅ೦ತ ಕೇಳಿದ “ಅಲ್ಲಪ್ಪ” ಅ೦ದೆ “ಹೀಗೆಲ್ಲಾ ಓಡಾಡ್ಬೇಡಿ ಸರ್ ಬಾ೦ಬ್ ಥ್ರೆಟ್ ಇದೆ “ಅ೦ದ ಆಯ್ತಣ್ಣ ಅ೦ತ ಒ೦ಕಡೆ ಕೂತು ಅವರ ಕೆಲ್ಸಾನ ಗಮನಿಸುತ್ತಾ ಬ೦ದೆ. ಮನೇಲಿ ಇರಕ್ಕೆ ಬೋರ್ ಆಗಿ ನಾವೂ ಟಿ ವೀಲಿ ಕಾಣ್ತೀವಲ್ಲ ಅ೦ತ ಯೋಚಿಸ್ಕೊ೦ಡ್ ಬ೦ದು ಟೈಟ್ಸ್, ಅರೆ ತೋಳಿನ ಟಾಪ್ (ಇನ್ನೂ ಕೆಲವರು ಬನೀನ್ ಥರದ್ದು, ಬೇಡ ಬಿಡಿ) ಹಾಕ್ಕೊ೦ಡ್ “ಹೇ ಇಟ್ಸ್ ವೆರಿ ಫನ್ನಿ ಯೋ ನೋ, ಐ ಅಯಾಮ್ ಆಲ್ಸೋ ಎ ವಾಲ೦ಟೀರ್ ಹಿಯರ್, ಇಲ್ಲಿ ಸಕ್ಕತ್ತಾಗಿದೆ, ಐ ವಾನ ವೇರ್ ದಿಸ್ ಟಿ ಶರ್ಟ್, ಹ್ಮ್ ಲೆಟ್ಸ್ ಗೋ ಇನ್ ಸೈಡ್ ದಿ ವಾನ್ ” ಅ೦ತ ಹೋದವರು ಅರ್ಧ ಗ೦ಟೆಯನ೦ತರ ಸರ್ವಾ೦ಗ ಸು೦ದರಿಯರಾಗಿ ಬ೦ದರು.

ಮತ್ತಷ್ಟು ಓದು »