ವಿಷಯದ ವಿವರಗಳಿಗೆ ದಾಟಿರಿ

Posts tagged ‘ಭ್ರಷ್ಟಾಚಾರ’

24
ಮೇ

ಬದಲಾವಣೆ ಬಯಸುವುದಾದರೆ ಬಸವನಗುಡಿಗೆ ಬನ್ನಿ…

– ರಾಕೇಶ್ ಶೆಟ್ಟಿ

ಬಸವನಗುಡಿಗೆ ಬಂದ ತಕ್ಷಣ ಬದಲಾವಣೆಯಾಗುತ್ತಾ? ಅನ್ನುವ ಪ್ರಶ್ನೆ ನಿಮ್ಮದಾದರೆ ನನ್ನ ಉತ್ತರ ’ಇಲ್ಲ’! ಅಂತಲೇ. ಭ್ರಷ್ಟಚಾರ ಅನ್ನುವ ಬ್ರಹ್ಮ ರಾಕ್ಷಸನ ವಿರುದ್ಧ ಅಣ್ಣ ಹಜ಼ಾರೆ ನೇತೃತ್ವದಲ್ಲಿ ಶುರುವಾಗಿರುವ ಈ ಹೋರಾಟವೇ ಅಂತಿಮವಲ್ಲ.ಇದು ಆರಂಭವಷ್ಟೆ ಅನ್ನುವುದು ನನ್ನ ಅಭಿಪ್ರಾಯ.

ಅಂತಿಮವಾಗುವುದಾದರೂ ಹೇಗೆ ಹೇಳಿ, ಭ್ರಷ್ಟಚಾರ ಅಂದಾಕ್ಷಣ ಎಲ್ಲರ ಕಣ್ಣು ಮೊದಲು ಬೀಳುವುದೂ ಕಳ್ಳ(ಎಲ್ಲ ಅಲ್ಲ) ರಾಜಕಾರಣಿಗಳ ಮೇಲೆ,ಆಮೇಲೆ ಸರ್ಕಾರಿ ಕಛೇರಿ ಮತ್ತು ಅಧಿಕಾರಿಗಳ ಮೇಲೆ.ತಪ್ಪೇನಿಲ್ಲ ಬಿಡಿ…! ಭ್ರಷ್ಟಚಾರ ಅನ್ನೋ ಪಿರಮಿಡ್ನ ತುತ್ತ ತುದಿಯಲ್ಲಿರೋ ಅವರ ಮೇಲೆ ಎಲ್ಲರ ಕಣ್ಣು ಬೀಳುವುದು ಸಹಜ.ಆದರೆ, ’ನಾವುಗಳೆಷ್ಟು ಸಾಚಾ?’ ಅಂತ ನಮ್ಮನ್ನೇ ನಾವ್ಯಾವತ್ತಾದರೂ ಕೇಳಿಕೊಂಡಿದ್ದೇವೆಯೇ?

ಮತ್ತಷ್ಟು ಓದು »

23
ಮೇ

ನೀವೂ ಭ್ರಷ್ಟಚಾರದ ವಿರೋಧಿಗಳೇ? ಹಾಗಿದ್ದರೆ, ಬಸವನಗುಡಿಗೆ ಬನ್ನಿ…

18
ಮೇ

ನೈತಿಕತೆಯ ದ್ರಷ್ಟಾರರ ನೈತಿಕತೆಯ ಸಿಧ್ಧಾ೦ತ!!

– ರಾಘವೇಂದ್ರ ನಾವಡ

ಮೂರು ವರ್ಷಗಳ ಹಿ೦ದೆ ಕನ್ನಡಿಗರು ಭಾ.ಜ.ಪಾವನ್ನು ಕಾ೦ಗ್ರೆಸ್ ಹಾಗೂ ಜೆ.ಡಿ,.ಎಸ್. ಗಳಿಗೆ ಪರ್ಯಾಯವೆ೦ದೋ, ಕುಮಾರಸ್ವಾಮಿ ಹೇಳಿದ ಮಾತಿನ೦ತೆ ಅಧಿಕಾರ ಕೊಡದೆ ಯಡಿಯೂರಪ್ಪ  ಆಗ ಹರಕೆಯ ಕುರಿಯಾಗಿದ್ದಕ್ಕೋ… ಕೇವಲ ೮ ದಿನಗಳ ಅಧಿಕಾರವನ್ನು ಮಾತ್ರವೇ ಅನುಭವಿಸಿದರು ಪಾಪ! ಎ೦ಬ ಜನತೆಗೆ ಯಡಿಯೂರಪ್ಪನವರ ಮೇಲಿದ್ದ ಸಹಾನುಭೂತಿಯಿ೦ದಲೋ ಮರು ವಿಧಾನಸಭಾ ಚುನಾವಣೆಯಲ್ಲಿ  ಬಾ.ಜ.ಪಾ. ೧೧೦ ಸ್ಥಾನಗಳನ್ನು ಗೆದ್ದು ಪಕ್ಷೇತರರ ಸಹಾಯದಿ೦ದ ಅಧಿಕಾರದ ಗದ್ದುಗೆ ಏರಿತು. ಯಡಿಯೂರಪ್ಪನವರ ಸ೦ಪೂರ್ಣ ಜೀವನವೇ ಸ೦ಘರ್ಷಮಯವೆ೦ದು ಜಾತಕದಲ್ಲಿ ಬರೆದಿದೆಯೇನೋ!! ಅಲ್ಲಿ೦ದ ಇಲ್ಲಿಯವರೆವಿಗೂ ನಮ್ಮ ಮುಖ್ಯಮ೦ತ್ರಿಗಳು ಸರಿಯಾಗಿ ನಿದ್ರೆಯನ್ನೇ ಮಾಡಿರಲಿಕ್ಕೆ ಸಾಧ್ಯವಿಲ್ಲ! ಒ೦ದಲ್ಲಾ, ಒ೦ದು ವಿವಾದಗಳು  ಯಡಿಯೂರಪ್ಪನವರ ಬೆನ್ನು ಹತ್ತಿದ ಬೇತಾಳಗಳ೦ತೆ ಹೆಗಲಿಗೇರಿದವು. ಆದರೂ ಅದೃಷ್ಟ ಗಟ್ಟಿಯಿದ್ದುದ್ದಕ್ಕೋ ಏನೋ.. ಅಥವಾ ನಾಡಿನ ಸಮಸ್ತ ಅಧ್ಯಾತ್ಮಿಕ ಸ೦ತರುಗಳ ಆಶಿರ್ವಾದದ ಬಲದಿ೦ದಲೋ ಏನೋ ಇಲ್ಲಿಯವರೆವಿಗೂ ಕುರ್ಚಿಯನ್ನುಳಿಸಿಕೊ೦ಡಿದ್ದಾರೆ.. ಇನ್ನು ಮು೦ದೆ ಅದ್ಯಾವ ದಿವ್ಯ ಹಸ್ತವೂ ಯಡಿಯೂರಪ್ಪನವರ ನೆತ್ತಿಯನ್ನು ನೇವರಿಸಲಾರದು ಎ೦ಬ ಸತ್ಯ ಅರಿವಾಗಿದೆ!

ಈ ಯಡಿಯೂರಪ್ಪನವರು ಹುಟ್ಟಾ “ಮು೦ಗೋಪಿ“ ಎ೦ಬುದು ಸರ್ವವೇದ್ಯ! ಆದರೆ ಅದರ ಜೊತೆಗೆ ಈಗ ಇನ್ನೊ೦ದನ್ನೂ ಸೇರಿಸಿಕೊಳ್ಳೋಣ.. ನಮ್ಮ ಯಡಿಯೂರಪ್ಪನವರಷ್ಟು “ಮಹಾ ಗಡಿಬಿಡಿ ಪುರುಷ “ ಮತ್ತೊಬ್ಬನಿರಲಿಕ್ಕಿಲ್ಲ!! ಎಲ್ಲರನ್ನೂ ಸಮಾನವಾಗಿ ಕರೆದುಕೊ೦ಡು ಹೋಗುವ ಸ್ವಭಾವ ಇವರಿಗಿಲ್ಲವೇ ಇಲ್ಲ. ಎಲ್ಲ್ಲಾ ಹದಿನಾರು ಶಾಸಕರನ್ನು ಅರ್ಹರೆ೦ದು ಸುಪ್ರೀ೦ ಕೋರ್ಟ್ ಅನರ್ಹತೆಯಿ೦ದ ಮುಕ್ತರನ್ನಾಗಿಸಿದ ಕೂಡಲೇ, ಪಕ್ಷದ ಶಾಸಕಾ೦ಗ ಸಭೆಯನ್ನು ಕರೆದು, ಹದಿನಾರು ಶಾಸಕರನ್ನು ಪಕ್ಕದಲ್ಲಿ ಕೂರಿಸಿಕೊ೦ಡು “ಏನ್ರಪ್ಪಾ.. ಏನು ನಿಮ್ಮ ನಿರ್ಧಾರ?“ ಎ೦ದು ಸಮಾಧಾನವಾಗಿ, ವರಿಷ್ಟರ ಸಮ್ಮುಖದಲ್ಲಿ ಅವರನ್ನು ಒಲಿಸಿಕೊ೦ಡಿದ್ದರೆ ಏನಾಗುತ್ತಿತ್ತು? ಅದನ್ನು ಬಿಟ್ಟು, ಹಿ೦ದೆ ಕೊಟ್ಟಿದ್ದ ಅವಿಶ್ವಾಸ ಪತ್ರಗಳನ್ನು ವಾಪಾಸು ತರಲು ರಾಜಭವನಕ್ಕೆ ಕಳುಹಿಸಿಕೊಡುವ ಏರ್ಪಾಟು!ಇವರೆಲ್ಲಾ ಸ೦ವಿಧಾನಾತ್ಮಕವಾಗಿ ಆರಿಸಿ ಹೋದ ಜನಪ್ರತಿನಿಧಿಗಳು ಎ೦ಬುದನ್ನೇ ಮರೆತರೆ ಹೇಗೆ?
ಮತ್ತಷ್ಟು ಓದು »

17
ಮೇ

ಅ”ರಾಜಕೀಯ”

– ವಿಜಯ ಹೆರಗು

     ರ್ನಾಟಕದ ಮಹಾಜನತೆಯ ದೌರ್ಭಾಗ್ಯಕ್ಕೆ ಅಂತ್ಯವೇ ಇಲ್ಲವೇನೋ ಎನ್ನಿಸುತ್ತಿದೆ. ಕರ್ನಾಟಕದ ರಾಜಕೀಯ ವಿದ್ಯಮಾನ ದಿನಕ್ಕೊಂದು, ಕ್ಷಣಕ್ಕೊಂದು ಬಣ್ಣ ಬದಲಾಯಿಸುತ್ತಿದೆ. ರಾಜಕೀಯ ರಂಗದ ಅನಿಶ್ಚಿತತೆ, ಅರಾಜಕತೆ ಮತ್ತೊಮ್ಮೆ ತನ್ನ ವಿರಾಟ್ ರೂಪದ ಪ್ರದರ್ಶನ ನೀಡಿದೆ. ಹದಿನಾರು ಶಾಸಕರ ಅನರ್ಹತೆಯ ಆದೇಶವನ್ನು ಸುಪ್ರೀಂ ಕೋರ್ಟ್ ಅನೂರ್ಜಿತಗೊಳಿಸಿದ ಬೆನ್ನಲ್ಲೇ ಆಡಳಿತ ಪಕ್ಷ, ವಿರೋಧ ಪಕ್ಷಗಳು ತಮ್ಮ ಬಲಾಬಲ ಪ್ರದರ್ಶನಕ್ಕೆ ಸಜ್ಜಾಗಿವೆ.

 ಅತ್ತ ಬಿಜೆಪಿ ಹೈಕಮಾಂಡಿನ ಹಿರಿತಲೆಗಳು ಹನ್ನೊಂದು ಮಂದಿ ಬಂಡಾಯ ಶಾಸಕರಲ್ಲಿ ಹತ್ತು ಮಂದಿಯನ್ನು ಕರೆದು ಓಲೈಸುವಲ್ಲಿ ಯಶಸ್ವಿಯಾಗಿದ್ದಾರೆ. ಯಾವ ಯಡಿಯೂರಪ್ಪನವರ ನಾಯಕತ್ವವನ್ನು ಪ್ರಶ್ನಿಸಿ ಬಂಡೆದಿದ್ದರೋ ಅದೇ ಯಡಿಯೂರಪ್ಪನ ಮುಂದೆ ಮಂಡಿಯೂರಿ ಶರಣಾಗಿ ನೀವೇ ನಮ್ಮ ನಾಯಕ ಎನ್ನುತ್ತಾ ತಲೆಬಾಗಿ ನಿಂತ ಇವರ ಭಂಗಿ ಅಸಹ್ಯವನ್ನುಂಟು ಮಾಡುತ್ತದೆ. ರಾಜಕೀಯದಲ್ಲಿ ಯಾರೂ ಶಾಶ್ವತ ಶತ್ರುವಲ್ಲ-ಶಾಶ್ವತ ಮಿತ್ರರಲ್ಲ ಎಂಬ ಮಾತು ಮತ್ತೊಮ್ಮೆ ನಿಜವಾಗಿದೆ.
                            ಮಾನ್ಯ ಮುಖ್ಯಮಂತ್ರಿ ಯಡಿಯೂರಪ್ಪನವರು ಖುರ್ಚಿ ಉಳಿಸಿಕೊಳ್ಳುವ ಸಲುವಾಗಿ ಹೊರಾದುವುದನ್ನೇ ಆಡಳಿತ ಎಂದು ತಿಳಿದಂತಿದೆ. ಅಧಿಕಾರಕ್ಕೆ ಬಂದ ದಿನದಿಂದ ಇಂದಿನವರೆಗೂ ತಮ್ಮದೇ ಪಕ್ಷದ ನಾಯಕರಿಂದ, ಹೊರಗಿನವರಿಂದ ಪ್ರಬಲ ಪ್ರತಿರೋಧ ಎದುರಿಸುತ್ತಿದ್ದರೂ ಮುಖ್ಯಮಂತ್ರಿ ಪಟ್ಟ ಉಳಿಸಿಕೊಳ್ಳುವ ಸಲುವಾಗಿ ದಿನಕ್ಕೊಂದು ಪಟ್ಟು ಹಾಕುತ್ತಿದ್ದಾರೆ. 
2
ಮೇ

ಕುರುಕ್ಷೇತ್ರದ ಯುದ್ಧಕ್ಕೆ ಕೃಷ್ಣನೇ ಸರಿ ಅಣ್ಣಾ !

– ರಾಕೇಶ್ ಶೆಟ್ಟಿ

ಕುಂಭಕರ್ಣ ನಿದ್ದೆಯಿಂದ ಎದ್ದ ಭಾರತವನ್ನ ಮತ್ತೆ ನಿದ್ದೆಗೆ ದೂಡಲಾಗುತ್ತಿದೆಯಾ? ಇಂತದ್ದೊಂದು ಪ್ರಶ್ನೆ ಕಾಡಲಾರಂಭಿಸಿದೆ.ಕೆಲವೆ ದಿನದ ಹಿಂದೆ ಅಣ್ಣಾ ಹಜ಼ಾರೆಯವರ ಉಪವಾಸ ಸತ್ಯಾಗ್ರಹದಿಂದ ನಿದ್ದೆಯಲ್ಲಿದ್ದ ಜನ (ಎಲ್ಲ ಜನ ಅಂತೇಳಲು ಸಾಧ್ಯವಿಲ್ಲ) ಎದ್ದು ಬಂದು, ಕಡೆಗೆ ಸೋನಿಯಾ ಮೇಡಂ ಅವರ ಯುಪಿಎ ಸರ್ಕಾರ ಅಣ್ಣನ ಮುಂದೆ ಮಂಡಿಯೂರಿ ಕುಳಿತಾಗಲೇ, ‘ಪಿಕ್ಚರ್ ಅಭಿ ಬಾಕಿ ಹೈ ಮೇರಿ ದೋಸ್ತ್’ ಅಂತ ಬಹುಷಃ ಬಹುತೇಕರಿಗೆ ಅನ್ನಿಸಿತ್ತು.ಅದನ್ನ ನಿಜ ಮಾಡಲೆಂಬಂತೆ ಜನಲೋಕಪಾಲ ಸಮಿತಿ ರಚನೆಯಾದ ಮರುದಿನವೇ ಕೇಂದ್ರ ಮಂತ್ರಿ ಕಪಿಲ್ ಸಿಬಲ್, ಖುದ್ದು ಸಮಿತಿಯ ಸದಸ್ಯರಾಗಿದ್ದೂ, ಸಮಿತಿಯ ಬಗ್ಗೆ ಕೊಂಕು ನುಡಿದು,ಕಡೆಗೆ ನಂಬಿಕೆಯಿಲ್ಲದಿದ್ದರೆ ತೊಲಗಿ ಅಂತ ಅಣ್ಣಾ ಗದರಿದ್ಮೇಲೆ ಯಥಾಪ್ರಕಾರ ರಾಜಕಾರಣಿಗಳ ಹೇಳಿಕೆಯಂತೆ ’ತಪ್ಪಾಗಿ ಅರ್ಥೈಸಲಾಗಿದೆ; ಅಂತೇಳಿ ತೇಪೆ ಹಾಕಿದ್ರು.ಮೊಯ್ಲಿ,ಮನೀಶ್ ತಿವಾರಿಯವ್ರು ಕೊಂಕಿಸಿದ್ದಾಯ್ತು.

ಬಹುಷಃ ಗಾಂಧೀಜಿ,ಜೆಪಿ ನಂತರ ಈ ಮಟ್ಟಕ್ಕೆ ಜನರನ್ನ ಸೆಳೆದಿದ್ದು ಅಣ್ಣಾ ಹಜ಼ಾರೆಯವರೇ ಇರಬೇಕು.ಅವರ ಈ ಪರಿಯ ಜನಪ್ರಿಯತೆ ಪುಡಿವೋಟಿಗಾಗಿ ದೇಶವನ್ನೆ ಬೇಕಾದರು ಮಾರಬಲ್ಲ (ಪುರುಲಿಯಾ ಶಸ್ತ್ರಾಸ್ತ್ರ ಕರ್ಮಕಾಂಡಕ್ಕಿಂತ ದೇಶವನ್ನ ಅಡ ಇಡುವ ಉದಾಹರಣೆ ಬೇಕಾ?) ಹಗಲು ವೇಷದ ರಾಜಕಾರಣಿಗಳ ಕಣ್ಣು ಕೆಂಪಗಾಗುವಂತೆ ಮಾಡಿದ್ದು ಸುಳ್ಳಲ್ಲ.ಸಾಲಾಗಿ ಎಲ್ಲ ಅಣ್ಣನ ವಿರುದ್ಧ ಸದ್ದಿಲ್ಲದೆ ಕೆಲಸ ಶುರು ಹಚ್ಚಿಕೊಂಡರು…!

ಮತ್ತಷ್ಟು ಓದು »

12
ಏಪ್ರಿಲ್

ಅವರೆತ್ತರಕ್ಕೆ ಏರಲಾಗದಿದ್ದರೆ ತೆಪ್ಪಗಿರಿ…!

– ರಾಕೇಶ್ ಶೆಟ್ಟಿ

“ಇಂದಿನ ಪರಿಸ್ಥಿತಿಯಲ್ಲಿ ಮಹಾತ್ಮ ಗಾಂಧೀಜಿ ಅವರು ಇದ್ದಿದ್ದರೆ, ಅವರು ಕೂಡಾ ಭ್ರಷ್ಟರಾಗುತ್ತಿದ್ದರು. ರಾಜಕೀಯದಲ್ಲಿ ಉಳಿಯಬೇಕಾದರೆ ಭ್ರಷ್ಟರಾಗದೆ ಇರಲು ಸಾಧ್ಯವೇ ಇಲ್ಲ” ಇಂತ ಹೇಳಿಕೆ ಕೊಟ್ಟೊವ್ರು ಯಾರು ಅನ್ನೋದು ಎಲ್ರಿಗು ಗೊತ್ತಿದೆಯಲ್ವಾ? ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವ್ರು.ಒಂದ್ ಕಡೆ ದೇವೆಗೌಡ್ರು ಫೋಟೊ,ಇನ್ನೊಂದ್ ಕಡೆ ಇದೇ ಮಹಾತ್ಮನ ಫೋಟೊ ಹಾಕೊಂಡಿರೋ ಪಕ್ಷದ ರಾಜ್ಯಾಧ್ಯಕ್ಷರ ಬಾಯಿಯಲ್ಲಿ ಬಂದ ಮುತ್ತಿನಂತ ಮಾತುಗಳಿವು.

ಮುತ್ತುಗಳು ಬಿದ್ದಾಗ ಆರಿಸಿ ಮನೆಗ್ ತಗೊಂಡು ಹೋಗೊದು ರೂಢಿ,ಆದ್ರೆ ಕುಮಾರ ಸ್ವಾಮಿ ಅವ್ರ ಮುತ್ತನ್ನ ಹಿಡಿದು ಅವರಿಗೆ ಪೈಡ್ ಪೈಡ್ ಅಂತ ಎಲ್ಲ ಕಡೆಯಿಂದ ಬಾರಿಸುತಿದ್ದಾರೆ.ಬಾರಿಸದೆ ಬಿಡ್ಬೇಕಾ? ಒಂದು ಕಡೆ ಮಹಾತ್ಮರ ಹೋರಾಟದಿಂದ ಸ್ಪೂರ್ತಿ ಪಡೆದ ೭೬ ವರ್ಷದ ಅಣ್ಣಾ ಹಜಾರೆಯಂತವರು ಸತ್ತತಿಂಹರನ್ನ ಬಡಿದೆಬ್ಬಿಸಲು ಉಪವಾಸ ಕೂತರೆ,ಇನ್ನೊಂದು ಕಡೆ ಈ ಕುಮಾರಸ್ವಾಮಿ ಮಹಾತ್ಮರ ಬಗ್ಗೆ ಇಂತ ಮಾತನಾಡಲು ಹೊರಟಿದ್ದಾರೆ!

ಮತ್ತಷ್ಟು ಓದು »

12
ಏಪ್ರಿಲ್

ಇನ್ನೊಂದು ಸಮರಕ್ಕೆ ಸಿದ್ಧರಾಗಿ…

-ಸಂಪತ್ ಕುಮಾರ್

ಅಣ್ಣ ಹಜಾರೆಯವರ  ಉಪವಾಸವೇನೋ ಮುಗಿಯಿತು. ರಂಗೋಲೆಯ ಕೆಳಗೆ ನುಸುಳುವ ಬುದ್ಧಿ ಉಳ್ಳ ರಾಜಕಾರಣಿಗಳು ಎಂತಹ ಕಾನೂನು ತಯಾರಿಸುತ್ತರೋ ಕಾದುನೋಡಬೇಕು. ಈಗಾಗಲೇ ಅಸ್ತಿತ್ವದಲ್ಲಿರುವ ಲೋಕಾಯುಕ್ತದಂತಹ ಸಂಸ್ಥೆಯಿಂದ ಆಗುತ್ತಿರುವ ಭ್ರಷ್ಟಾಚಾರಿಗಳ ಬೇಟೆ ಅವರಿಗೆ ಶಿಕ್ಷೆ ಕೊಡಿಸುವಲ್ಲಿ ವಿಫಲವಾಗಿರುವುದು ಸರ್ವವೇದ್ಯ. ಅಲ್ಲದೆ ಇಂತಹ ವಿಧೇಯಕ ಸಂಸತ್ತಿನಲ್ಲಿ ಅಂಗೀಕಾರಗೊಳ್ಳುವುದೂ ಅನುಮಾನ.ಇಂತಹ ಪರಿಸ್ತಿತಿಯಲ್ಲಿ ಇನ್ನೊದು ಹೋರಾಟದ ಅಗತ್ಯ ಇದೆ.

ಭಾರತದ ರಾಜಕಾರಣಿಗಳ ಕೋಟಿ ಕೋಟಿ ಕಪ್ಪು ಹಣ ಸ್ವಿಸ್ ಬ್ಯಾಂಕಿನಲ್ಲಿ ಕೊಳೆಯುತ್ತಿರುವುದು ಎಲ್ಲರಿಗೂ ತಿಳಿದ ವಿಚಾರ. ಈ ಹಣವನ್ನು ರಾಷ್ಟ್ರೀಯ ಸಂಪತ್ತೆಂದು ಘೋಷಿಸಿದರೆ ಭಾರತ ತನ್ನೆಲ್ಲ ಸಾಲದಿಂದ ಮುಕ್ತವಾಗಿ, ಹಣ ದುಬ್ಬರ, ಬಡತನ, ಮುಂತಾದ ತನ್ನೆಲ್ಲ ಕಷ್ಟ ಕೋಟಲೆಗಳಿಂದ ಹೊರಬರಲು ಸಾಧ್ಯ. ಇದಕ್ಕಾಗಿ ಅಣ್ಣ ಹಜಾರೆ ಅವರನ್ನು ಈ ಉದ್ದೇಶಕ್ಕಾಗಿ ಪುನಃ ಉಪವಾಸ ಕೂರಲು ಹೇಳುವುದು ಸ್ವಾರ್ಥ ಎನಿಸಬಹುದು. ಈ ವಿಚಾರವನ್ನೇ ತನ್ನ ಚುನಾವಣ ಪ್ರಾಣಾಳಿಕೆ ಮಾಡಿಕೊಂಡಿರುವ ಭಾ.ಜ.ಪ. ದಿಂದ ಇದನ್ನು ರಾಜಕೀಯಗೊಳಿಸಬಾರದು.
ಮತ್ತಷ್ಟು ಓದು »

8
ಏಪ್ರಿಲ್

ಈ ಹೋರಾಟ ಗೆಲ್ಲಲೇಬೇಕು…!

– ಬನವಾಸಿ ಬಳಗ

ಕಿಸನ್ ಬಾಬುರಾವ್ ಹಜಾರೆ ಎಂಬ ಹೆಸರಿನ ಆ ಹಿರಿಯರು ಇವತ್ತಿನಿಂದ ಭ್ರಷ್ಟಾಚಾರದ ವಿರುದ್ಧದ ಒಂದು ದೊಡ್ಡ ಹೋರಾಟಕ್ಕೆ ಮುನ್ನುಡಿ ಹಾಡಿದ್ದಾರೆ. ಮಹಾರಾಷ್ಟ್ರದ ಅಹ್ಮದ್ ನಗರ ಜಿಲ್ಲೆಯ ರೆಲೆಗನ್ ಸಿದ್ಧಿ ಎಂಬ ಹಳ್ಳಿಯನ್ನು ಮಾದರಿ ಹಳ್ಳಿಯಾಗಿ ರೂಪಿಸಿ, ತನ್ನಿಡೀ ಬದುಕನ್ನೇ ಸಮಾಜಕ್ಕಾಗಿ ಮೀಸಲಿಟ್ಟ ಈ ಹಿರಿಯರು ದೆಹಲಿಯ ಜಂತರ್ ಮಂತರ್ ಬಳಿ ಅಮರಣಾಂತ ಉಪವಾಸ ಸತ್ಯಾಗ್ರಹಕ್ಕೆ ಕುಳಿತಿದ್ದಾರೆ.

ಭ್ರಷ್ಟಾಚಾರವೆಂಬ ಮಹಾ ಪಿಡುಗು
 
ಭಾರತದಲ್ಲಿ ದಿನಗಳೆದಂತೆ ಭ್ರಷ್ಟಾಚಾರವೆನ್ನುವುದು ಆಳವಾಗಿ ಬೇರೂರತ್ತಲೇ ಹೋಗುತ್ತಿದೆ. ಈ ರೋಗವು ರಾಜಕಾರಣದ ಮೊಗಸಾಲೆಯನ್ನೂ ಬಿಟ್ಟಿಲ್ಲದಿರುವಾಗ, ನಾಡಿನ ವ್ಯವಸ್ಥೆಗಳನ್ನು ಕಟ್ಟಿ ನಿರ್ವಹಿಸಬೇಕಾದ ಜನಪ್ರತಿನಿಧಿ ಸಭೆಗಳು ಕೂಡಾ ಭ್ರಷ್ಟಾಚಾರವನ್ನು ಇಲ್ಲವಾಗಿಸುವಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿಲ್ಲವೆಂಬ ನೋವು ಜನರಲ್ಲಿದೆ. ಇಡೀ ವ್ಯವಸ್ಥೆಯೇ ಭ್ರಷ್ಟಾಚಾರದ ಕ್ಯಾನ್ಸರ್ ತಗುಲಿ ನಲುಗುತ್ತಿರುವಾಗ ಇದಕ್ಕೊಂದು ಮದ್ದು ಬೇಕು ಎಂದು ಜನಾಂದೋಲನ ರೂಪಿಸುವಲ್ಲಿ ಈ ಹಿರಿಯ ಜೀವ ತೊಡಗಿದೆ.
ಜನ್ ಲೋಕಪಾಲ್ ಮಸೂದೆಯನ್ನು ಸರಿಯಾಗಿ ರೂಪಿಸಿ ಜಾರಿಗೊಳಿಸಲು ಪ್ರಧಾನಮಂತ್ರಿಗಳಿಗೆ ಮೊರೆಯಿಡುತ್ತಿದ್ದರೂ ಅದು ಫಲಿಸಲಿಲ್ಲವೆಂದು ಇದೀಗ ಅಣ್ಣಾ ಹಜಾರೆಯವರು ಸಾಯೋವರೆಗೆ ಉಪವಾಸ ಮಾಡುವುದಾಗಿ ಘೋಷಿಸಿ, ಅದರಂತೆ ಸತ್ಯಾಗ್ರಹ ಆರಂಭಿಸಿದ್ದಾರೆ.
6
ಏಪ್ರಿಲ್

ಬನ್ನಿ,ಅಣ್ಣನ ಜೊತೆ ನಿಲ್ಲೋಣ…