ಸಮ್ಮೇಳನದ ವೇದಿಕೆಯಲ್ಲಿ ಬರಹಗಾರರೋಬ್ಬರನ್ನು ನಿಂದಿಸುವುದು ಕನ್ನಡ ಮತ್ತು ಸಮ್ಮೇಳನದ ಅಪಮಾನವಲ್ಲವೆ ?
– ಅನಿಲ್ ಚಳಗೇರಿ
ಹೌದು, ಅದು ಪ್ರಸಕ್ತ ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆಯಲ್ಲಿ ಮಹಿಳೆಯರ ಸಮಾನತೆ ಮತ್ತು ಸವಾಲು ಅನ್ನುವ ವಿಷಯದ ಕುರಿತು ಚರ್ಚೆ ನಡೆಯಬೇಕಿತ್ತು. ಆದರೆ ಅಲ್ಲಿ ನಡೆದಿದ್ದು ಮಾತ್ರ ಕರ್ನಾಟಕ ಕಂಡ ಅಧ್ಭುತ ಸಾಹಿತಿಗಳಲ್ಲಿ ಒಬ್ಬರಾದ ಎಸ್ ಎಲ್ ಭೈರಪ್ಪನವರ ಬಗ್ಗೆ ಅಪಪ್ರಚಾರ , ಹಿಂದೂ ವಿರೋಧಿ ಹೇಳಿಕೆಗಳು, ಬ್ರಾಹ್ಮಣರ ಬಗ್ಗೆ ಕೆಳಮಟ್ಟದ ಆರೋಪ , ಪುರೋಹಿತಶಾಹಿಯ ಹೆಸರಿನಲ್ಲಿ ಈಡೀ ಜನಾಂಗವನ್ನೇ ದೂಷಿಸುವ ಪ್ರಯತ್ನ . ಈ ದೂಷಿಸುವ ಭರದಲ್ಲಿ ಮಹಿಳೆಯರ ಹಕ್ಕುಗಳ ಬಗ್ಗೆ, ಸಮಾಜದಲ್ಲಿ ಮಹಿಳೆಯರು ಎದುರಿಸುತ್ತಿರುವ ಮುಖ್ಯ ವಿಷಯಗಳ ಬಗ್ಗೆ ಚರ್ಚೆಯೇ ಆಗಲಿಲ್ಲ. ನೆರದಿದ್ದ ಅನೇಕ ಕವಿಯತ್ರಿಯರು ಭೈರಪ್ಪನವರನ್ನು ನೇರವಾಗಿ ವೈಯ್ಯಕ್ತಿಕವಾಗಿ ನಿಂದಿಸಿದರು. ಅಷ್ಟೇಯಲ್ಲದೇ ಇಂತಹ ಕೆಳ ಮಟ್ಟದ ಭಾಷಣಗಳು ಮತ್ತು ವ್ಯಕ್ತಿ ನಿಂದನೆಯನ್ನು ಕೇಕೆ, ಶಿಳ್ಳೆ ಮುಖಾಂತರ ಆನಂದಿಸುವ ಜನರು ಆ ಕಾರ್ಯಕ್ರಮಗಳಲ್ಲಿ ಉಪಸ್ತಿತರಿದ್ದರು. ಕನ್ನಡ ಹಿರಿಮೆ, ಕನ್ನಡ ಕಂಪು ಹಾಗು ಮಹಿಳೆಯರ ಪರ ಧ್ವನಿಎತ್ತಬೇಕಾದ ವೇದಿಕೆಯೊಂದರಲ್ಲಿ ಕನ್ನಡದ ಕಣ್ಮಣಿಯನ್ನು ನಿಂದಿಸುವದು ಸಾಹಿತ್ಯ ಸಮ್ಮೇಳನಕ್ಕೆ ಮತ್ತು ಕನ್ನಡಕ್ಕೆ ಮಾಡುವ ಅಪಮಾನವಲ್ಲವೆ??
ಭೈರಪ್ಪನವರ ನಿಂದನೆ ಮುಗಿಸಿ ಮುಂದುವರೆದ ಕವಿಯತ್ರಿಯರು ದೇವರ ಹೆಸರಲ್ಲಿ, ಪುರೋಹಿತಶಾಹಿಯ ಹೆಸರಲ್ಲಿ ಮೇಲ್ವರ್ಗದವರು ಬೇರೆಯವರನ್ನು ಲೂಟಿ ಮಾಡುತ್ತಾರೆಂದು ದೂಷಿಸಿದರು. ಈ ರೀತಿಯ ದೂಷಣೆಯಿಂದ ಮತ್ತು ಮೇಲ್ವರ್ಗದವರನ್ನು ಬಾಯಿಗೆ ಲಗಾಮಿಲ್ಲದೆ ಬಯ್ಯುವುದರಿಂದಲೇ ಕೆಲವರ ಮನೆ ನಡೆದರೆ ಇನ್ನು ಕೆಲವರಿಗೆ ಮಾಧ್ಯಮಗಳಲ್ಲಿ ಸ್ಥಳ ದೊರಕುವುದೆಂದು ಚೆನ್ನಾಗಿ ಅರಿತುಕೊಂಡಿದ್ದಾರೆ. ಬ್ರಾಹ್ಮಣ ವಿರೋಧಿ ಮನೋಭಾವವನ್ನು ಹೆಚ್ಚಿಸಲು ಬ್ರಾಹ್ಮಣ್ಯ ದೇಶಕ್ಕೆ ಅಂಟಿಕೊಂಡ ಒಂದು ದೊಡ್ಡ ಶಾಪ ಅನ್ನುವ ಅರ್ಥರಹಿತ ಮಾತುಗಳನ್ನಾಡಿ ಜೊತೆಗೆ ಬುದ್ಧ ಕೂಡ ಬ್ರಾಹ್ಮಣರಿಂದ ದೂರವಿರಬೇಕಂದು ಎಂದು ಕರೆ ನೀಡಿದ್ದರಂತೆ !.ಅದ್ಯಾವ ಕೃತಿಯಲ್ಲಿ ಬುದ್ದ ಹೀಗೆ ಹೇಳಿದ್ದೆನೆಂದು ಆ ಕವಿಯತ್ರಿಗಳೇ ಬಲ್ಲರು..
ಅತ್ಯಾಚಾರ: ಹುಯಿಲೆಬ್ಬಿಸುವುದೇಕೆ?
– ಡಾ. ಶ್ರೀಪಾದ ಭಟ್
ಸಹಾಯಕ ಪ್ರಾಧ್ಯಾಪಕ,ತುಮಕೂರು ವಿಶ್ವವಿದ್ಯಾನಿಲಯ, ತುಮಕೂರು, ಕರ್ನಾಟಕ
ಕಳೆದ ಒಂದೆರಡು ವಾರಗಳಿಂದ ಯಾವ ಮಾಧ್ಯಮ ಓದಿದರೂ ನೋಡಿದರೂ ಅತ್ಯಾಚಾರದ್ದೇ ಸುದ್ದಿ. 2012ರಲ್ಲಿ ದೆಹಲಿಯಲ್ಲಿ ನಿರ್ಭಯಾಳ ಮೇಲೆ ನಡೆದ ಹೇಯ ಕೃತ್ಯದ ತರುವಾಯ ಇಂಥ ಪ್ರಕರಣಗಳು ನಿರ್ಭಯವಾಗಿ ಹೆಚ್ಚು ಸುದ್ದಿಯಾಗುತ್ತಿವೆ. ಇದು ಗುಣವೋ ದೋಷವೋ ಗೊತ್ತಿಲ್ಲ. ಈಚೆಗೆ ಬೆಂಗಳೂರಿನ ಶಾಲೆಯೊಂದರಲ್ಲಿ ಆರು ವರ್ಷದ ಮಗುವಿನ ಮೇಲೆ ಅತ್ಯಾಚಾರ ನಡೆದ ಮೇಲೆ ಕಾಕತಾಳೀಯವೋ ಎಂಬಂತೆ ಬೆಂಗಳೂರಿನಲ್ಲಿ ನಿತ್ಯ ಒಂದೆರಡು, ರಾಜ್ಯಾದ್ಯಂತ ಒಂದೇದಿನ ಎಂಟು ಇಂಥ ಪ್ರಕರಣಗಳು ವರದಿಯಾದವು. ಮಾಧ್ಯಮಗಳಂತೂ ಅತ್ಯಾಚಾರ ಎಲ್ಲಿಂದ ಎಷ್ಟುಹೊತ್ತಿಗೆ ಬರುತ್ತದೆ ಎಂದು ಕಾದು ಕೂತಿರುವವರಂತೆ ಅಲ್ಲೊಂದು ಅತ್ಯಾಚಾರವಂತೆ ಎಂಬ ಅಂತೆ ಕಂತೆಯನ್ನೂ ಅತ್ಯಾಚಾರವಾಗಿದೆ ಎಂದೇ ಬಿಂಬಿಸಿ ಅವಸರದಿಂದ ವರದಿ ಮಾಡಿಯೇ ಮಾಡಿದರು. ಕಳೆದವಾರ ಬೇರೆಲ್ಲ ಕಡೆಯಿಂದ ಇಂಥ ಸುದ್ದಿ ಬಂದಂತೆ ತುಮಕೂರಿನಿಂದಲೂ ಸುದ್ದಿ ಬಂತು. ದಿನ ಕಳೆದ ಮೇಲೆ ಆ ಹುಡುಗಿಯೇ ಠಾಣೆಗೆ ಹೋಗಿ ನನ್ನ ಮೇಲೆ ಅತ್ಯಾಚಾರವಾಗಿಲ್ಲ ಎಂದು ಹೇಳಿಕೆಕೊಟ್ಟಳು! ಸತ್ಯಾಸತ್ಯತೆ ಏನಿದೆಯೋ?
ಇಂಥ ಸುದ್ದಿಗಳ ಪ್ರಸಾರಕ್ಕೆ ಯಾಕಿಷ್ಟು ಅವಸರ? ಇದೊಂದು ಕ್ರೇಜು ಹುಟ್ಟಿಸುವ ಸಂಗತಿಯೇ? ಅಥವಾ ಇಂಥ ವರದಿಯಿಂದ ದೌರ್ಜನ್ಯಕ್ಕೆ ಒಳಗಾದವರಿಗೆ ನ್ಯಾಯ ಕೂಡಲೇ ದೊರೆತೇಬಿಡುತ್ತದಾ? ಇಂಥ ವರದಿಯಿಂದ ಪ್ರಯೋಜನ ಯಾರಿಗೆ? ಕೆಲವರ ಸುದ್ದಿ ಚಪಲ ತೀರಬಹುದು ಅಷ್ಟೆ.
ವೃಕ್ಷ ಮಹಿಳೆಗೆ ಇದೀಗ ನೂರರ ವಸಂತ
– ರಾಘವೇಂದ್ರ ಅಡಿಗ ಎಚ್ಚೆನ್
ಮಾರ್ಚ್ 8 `ಅಂತರಾಷ್ಟ್ರೀಯ ಮಹಿಳಾ ದಿನ’. ಇಂದು ಮಹಿಳೆ ತಾನು ಪುರುಷನಿಗೆ ಸರಿಸಮನಾಗಿ ಕಛೇರಿ ಕೆಲಸದಿಂದ ತೊಡಗಿ, ಬಾಹ್ಯಾಕಾಶ ಯಾನದವರೆವಿಗಿನ ಎಲ್ಲಾ ಕ್ಷೇತ್ರಗಳಲ್ಲಿ ತನ್ನದೇ ಛಾಪು ಮೂಡಿಸಿದ್ದಾಳೆ. ಅಂತಹವರಲ್ಲಿ ನಮ್ಮ ಸಾಲು ಮರದ ತಿಮ್ಮಕ್ಕ ನವರ ಸಾಧನೆಯೂ ಸ್ತುತ್ಯಾರ್ಹವಾದುದು. ಬಡತನದ ಬೇಗೆಯ ನಡುವೆಯೂ ಆದರ್ಶಮಯ ಜೀವನ ನಡೆಸುತ್ತಿರುವ ಸಾರ್ಥಕ ಜೀವ ಅದು. ಮಕ್ಕಳಿಲ್ಲದ ಕೊರಗು, ಬಡತನದಿಂದ ಬೆಂಡಾದ ಬಾಳ್ವೆಯ ನಡುವೆಯೂ ‘ನೆರಳು ನೀಡುವ ಮರಗಳೆ ನನ್ನ ಮಕ್ಕಳು, ಅವುಗಳನ್ನು ಬೆಳೆಸಿ ಪೋಷಿಸುವುದೇ ನನ್ನ ಜೀವನದ ಗುರಿ’ ಎಂದು ನಂಬಿ ನಡೆದ ಈ ವೃಕ್ಷ ಮಹಿಳೆಗೆ ಇದೀಗ ನೂರರ ವಸಂತ.
ಕೆಲ ವರ್ಷಗಳ ಹಿಂದೊಮ್ಮೆ ದಾವಣಗೆರೆ ಲೋಕಸಭಾ ಸದಸ್ಯರಾಗಿದ್ದ ಶ್ಯಾಮನೂರು ಶಿವಶಂಕರಪ್ಪನವರು ತಾವು ಕಾರ್ಯಕ್ರಮವೊಂದರ ನಿಮಿತ್ತ ಕನಕಪುರದತ್ತ ಹೊರಟಿರುತ್ತಾರೆ. ಅದಾಗ ಮಾರ್ಗ ಮದ್ಯದಲ್ಲಿ ವಾಹನವನ್ನು ನಿಲ್ಲಿಸಿ ತಾವು ದೇಹಬಾಧೆಯನ್ನು ಕಳೆಯಲೋಸುಗ ಮರಗಳ ಮರೆಗೆ ಸಾಗುತ್ತಾರೆ. ಅಲ್ಲಿ ಬೆಳೆದಿದ್ದ ಸಾಲು ಮರಗಳನ್ನು ಕಂಡು ಅಚ್ಚರಿಗೊಂಡ ಶಿವಶಂಕರಪ್ಪನವರು ಅಲ್ಲಿನ ದಾರಿಹೋಕರನ್ನು “ಈ ಮರಗಳಾನ್ನೆಲ್ಲಾ ಯಾವ ಮಂಡಲ ಪಂಚಾಯ್ತಿಯವ್ರು ಬೆಳೆಸಿದ್ದಾರೆ?” ಎಂದು ಪ್ರಶ್ನಿಸುತ್ತಾರೆ. ಆಗ ಆ ದಾರಿಹೋಕನು ಹೇಳಿದ ಉತ್ತರ ಕೇಳಿ ಶಿವಶಂಕರಪ್ಪನವರಿಗೆ ಆಶ್ಚರ್ಯದೊಂದಿಗೆ ಮನಸ್ಸು ತುಂಬಿ ಬರುತ್ತದೆ.
Article 370 – ಒಂದು ವಸ್ತುನಿಷ್ಠ ಮೌಲ್ಯಮಾಪನ : ಭಾಗ ೩
ಮೂಲ : ಪ್ರಶಾಂತ್ ವೈದ್ಯರಾಜ್
ಕನ್ನಡಕ್ಕೆ : ಸತ್ಯನಾರಾಯಣ ಎಸ್
Article 370 – ಒಂದು ವಸ್ತುನಿಷ್ಠ ಮೌಲ್ಯಮಾಪನ : ಭಾಗ ೧
Article 370 – ಒಂದು ವಸ್ತುನಿಷ್ಠ ಮೌಲ್ಯಮಾಪನ : ಭಾಗ ೨
ಭಾಗ ೧ ಮತ್ತು ೨ ರಲ್ಲಿ ‘370ನೇ ವಿಧಿಯ ಸಾಂವಿಧಾನಿಕ ಸಿಂಧುತ್ವ’ ಮತ್ತು ‘370ನೇ ವಿಧಿಯ ನಿಂದನೆ ಮತ್ತು ದುರ್ಬಳಕೆ’ಯ ಬಗ್ಗೆ ಮಾತನಾಡಿದೆವು. ಭಾಗ ೩ ರಲ್ಲಿ ಮುಂದಿನ ಹಾದಿಯ ಬಗ್ಗೆ ಚಿಂತಿಸೋಣ
ಮುಂದಿನ ಹಾದಿ
ಮೇಲೆ ನೀಡಿದ ಎಲ್ಲ ಉದಾಹರಣೆಗಳು ಸಾಬೀತುಪಡಿಸುವುದಿಷ್ಟೇ, ಸಂವಿಧಾನದ 370ನೇ ವಿಧಿ ಪ್ರಜಾಪ್ರಭುತ್ವದ ಆದರ್ಶಗಳು ಮತ್ತು ನಾಗರಿಕತೆ, ಮಾನವ ಹಕ್ಕುಗಳ ಕುರಿತ ಅಂತರಾಷ್ಟ್ರೀಯ ಕಾನೂನುಗಳ ಕಲ್ಪನೆಗಳ ಮೇಲೆ ನಡೆಯತ್ತಿರುವ ಅತಿಯಾದ ಅಣಕ. ಇದು ಭಾರತದ ಜನಸಂಖ್ಯೆ ಗಣನೀಯ ಪ್ರಮಾಣದ ಭಾಗವೊಂದನ್ನು ದ್ವತೀಯ ದರ್ಜೆಯ ಮತ್ತು ನಾಗರಿಕರೇ ಅಲ್ಲದ ಸ್ಥಿತಿಗೆ ಇಳಿಸುತ್ತದೆ. ವಿಪುಲ್ ಕೌಲನ ಪ್ರಕರಣವನ್ನು ಮತ್ತೆ ನೋಡುವುದಾದರೆ, ಅಂದಿನ ಮುಖ್ಯಮಂತ್ರಿ ಗುಲಾಮ್ ನಬೀ ಆಜಾದ್ರ ಕಾರ್ಯದರ್ಶಿ ನೀಡಿದ “ರಾಜ್ಯಕ್ಕೆ ವಿಶೇಷಾಧಿಕಾರ ನೀಡುವ 370ನೇ ವಿಧಿಯ ಅಡಿಯಲ್ಲಿ ಭಾರತ ಸರ್ಕಾರದ ಗೃಹ ಇಲಾಖೆ ನೀಡುವ ಯಾವುದೇ ಸೂಚನೆಯನ್ನು ಪಾಲಿಸಲು ಜಮ್ಮು ಕಾಶ್ಮೀರ ರಾಜ್ಯ ಸರ್ಕಾರ ಬಾಧ್ಯವಲ್ಲ. ಆದ್ದರಿಂದ ನಿಮ್ಮ ಮಗುವಿನ ವೈದ್ಯಕೀಯ ವೆಚ್ಚವನ್ನು ಪಾವತಿಸಲು ಸಾಧ್ಯವಿಲ್ಲ” ಎನ್ನುವ ನಿರ್ದಯ ಉತ್ತರ ಕೌಲ್ ಕುಟುಂಬದಲ್ಲಿ ಅಣುಮಾತ್ರವಷ್ಟಾದರೂ ಜೀವಂತವಾಗಿದ್ದ ಭರವಸೆಯನ್ನು ತುಂಡರಿಸಿ ಅಡಗಿಸಿತು. ಜಮ್ಮು ಕಾಶ್ಮೀರ ರಾಜ್ಯ ಸರ್ಕಾರದ ದಿವ್ಯ ನಿರ್ಲಕ್ಷ ಹದಿಮೂರು ವರ್ಷದ ಅದೃಷ್ಟಹೀನ ಬಾಲಕನ ಬವಿಷ್ಯವನ್ನು ಅಂಧಕಾರಕ್ಕೆ ನೂಕಿತು.
Article 370 – ಒಂದು ವಸ್ತುನಿಷ್ಠ ಮೌಲ್ಯಮಾಪನ : ಭಾಗ ೨
ಮೂಲ : ಪ್ರಶಾಂತ್ ವೈದ್ಯರಾಜ್
ಕನ್ನಡಕ್ಕೆ : ಸತ್ಯನಾರಾಯಣ ಎಸ್
Artilce 370 – ಒಂದು ವಸ್ತುನಿಷ್ಠ ಮೌಲ್ಯಮಾಪನ : ಭಾಗ ೧
370ನೇ ವಿಧಿಯ ನಿಂದನೆ ಮತ್ತು ದುರ್ಬಳಕೆ
370ನೇ ವಿಧಿಯ ನಿಂದನೆ ಮತ್ತು ಪ್ರಜ್ಞಾಪೂರ್ವಕ ದುರುಪಯೋಗಗಳ ಮೇಲೆ ಗಮನಹರಿಸಿದರೆ ಜಮ್ಮು ಕಾಶ್ಮೀರ ರಾಜ್ಯಕ್ಕೆ ಸಂಭಂಧಿಸಿದಂತೆ ಸಂಘಾತ್ಮಕ ವಿಷಯಗಳ ಯಾದಿಯಲ್ಲಿ 99ರಲ್ಲಿ 6 ಮತ್ತು ಸಹವರ್ತಿ ಪಟ್ಟಿಯ 52ರಲ್ಲಿ 21 ವಿಷಯಗಳು ಇನ್ನೂ ಹೊರಪಟ್ಟಿರುವುದು ಗೋಚರವಾಗುತ್ತದೆ. ಜಮ್ಮು ಕಾಶ್ಮೀರದ ಪ್ರಮಾಣ ವಚನದ ಪಠ್ಯ ಉಳಿದವುಗಿಳಿಗಿಂತ ಭಿನ್ನವಾಗಿದೆ. ರಾಜ್ಯದ ಶಾಸನಸಭೆಯ ಕಾಲಾವಧಿ ಅರು ವರ್ಷ. ಜಮ್ಮು ಕಾಶ್ಮೀರ ರಾಜ್ಯದ ಸಂವಿಧಾನದ ಪ್ರಸ್ತಾವನೆಯಲ್ಲಿ ಜಾತ್ಯತೀತ ಮತ್ತು ಸಮಾಜವಾದಿ ಶಬ್ದಗಳಿಗೆ ಜಾಗವಿಲ್ಲ. ಬ್ರಷ್ಟಾಚಾರ ನಿಯಂತ್ರಣ ಕಾಯಿದೆ (Prevention of Corruption) 1988, ಭಾರತೀಯ ದಂಡಸಂಹಿತೆ (Indian Penal Code), ಗೃಹೀಯ ಹಿಂಸಾ ಕಾಯಿದೆ(Domestic Violence Act), ಧಾರ್ಮಿಕ ಸಂಸ್ಥೆ (ದುರುಪಯೋಗ ನಿಯಂತ್ರಣ) ಕಾಯಿದೆ 1988, ಅರಣ್ಯ ಹಕ್ಕು ಕಾಯಿದೆ,ವನ್ಯಜೀವಿ ಸಂರಕ್ಷಣಾ ಕಾನೂನು, ನಗರ ಭೂ ಮಿತಿ ಕಾನೂನು ಇತ್ಯಾದಿಗಳು ಜಮ್ಮು ಕಾಶ್ಮೀರ ರಾಜ್ಯಕ್ಕೆ ಅನ್ವಯವಾಗುವುದಿಲ್ಲ. ಜಮ್ಮು ಕಾಶ್ಮೀರದಲ್ಲಿ ಕೇಂದ್ರೀಯ ತನಿಖಾ ಸಂಸ್ಥೆ ಸಿಬಿಐನ ಅಧಿಕಾರ ಸೀಮಿತವಾಗಿದೆ, ಅಂದರೆ ಜಮ್ಮು ಕಾಶ್ಮೀರ ರಾಜ್ಯದಲ್ಲಿ ದಾಖಲಾದ ದೂರಿನ ಮೇಲೆ ತನಿಖೆ ನಡೆಸಲು ಸಿಬಿಐ ರಾಜ್ಯ ಸರ್ಕಾರದ ಅನುಮತಿಯನ್ನು ಪಡೆಯಬೇಕಾಗುತ್ತದೆ. ರಾಜ್ಯಕ್ಕೆ ಸಂಭಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯದ ಕಾನೂನು ವ್ಯಾಪ್ತಿ ಅಪೀಲಿಗೆ ಮಾತ್ರ ಸೀಮಿತವಾಗಿದೆ ಮತ್ತು ಫೆಡರಲ್ ಕೋರ್ಟ ಆಗಿ ಕಾರ್ಯನಿರ್ವಹಿಸುವ ಅಧಿಕಾರ ಮೊಟಕುಗೊಂಡಿದೆ.
ಕಡೆಯಪಕ್ಷ ರಾಜ್ಯದ ಜನತೆಗೆ 370ನೇ ವಿಧಿಯು ನಿಜವಾಗಿ ಹಿತಕಾರಿಯಾಗಿದೆಯೇ? ಎನ್ನುವುದನ್ನು ವಿಶ್ಲೇಷಿಸಿದರೆ, ಜನರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುತ್ತಿರುವುದು ಸ್ಪಷ್ಟವಾಗಿ ಕಾಣುತ್ತದೆ. ಜನ ಪ್ರತಿನಿಧಿ ಕಾಯಿದೆ (People representation act 1950) ರಾಜ್ಯಕ್ಕೆ ಅನ್ವಯವಾಗದೇ ಇರುವುದರಿಂದ ಚುನಾವಣಾ ಕ್ಷೇತ್ರಗಳ ಮರುವಿಂಗಡನೆಯನ್ನು ಜಾರಿಗೆ ತರುವ ಯಾವುದೇ ಅಧಿಕಾರ ಕೇಂದ್ರಕ್ಕೆ ಇರುವುದಿಲ್ಲ. 2002ರಲ್ಲಿ ಜಮ್ಮು ಕಾಶ್ಮೀರವನ್ನು ಹೊರತುಪಡಿಸಿ ಇಡೀ ದೇಶದಲ್ಲಿ ಕ್ಷೇತ್ರ ಪುನರ್ವಿಂಗಡನೆಯನ್ನು ಕೈಗೊಳ್ಳಲಾಯಿತು. ಕೆಲವು ಆಯ್ದ ಪ್ರದೇಶಗಳ ಹಿತಾಸಕ್ತಿಗನುಗುಣವಾಗಿ 370ನೇ ವಿಧಿಯ ದುರುಪಯೋಗ ನಡೆದಿದೆ.
Article 370 – ಒಂದು ವಸ್ತುನಿಷ್ಠ ಮೌಲ್ಯಮಾಪನ : ಭಾಗ ೧
ಮೂಲ : ಪ್ರಶಾಂತ್ ವೈದ್ಯರಾಜ್
ಕನ್ನಡಕ್ಕೆ : ಸತ್ಯನಾರಾಯಣ ಎಸ್
ಹದಿಮೂರು ವರ್ಷದ ವಿಪುಲ್ ಕೌಲ್ ಜಮ್ಮು ಕಾಶ್ಮೀರ ರಾಜ್ಯದ ಲೋಕೋಪಯೋಗಿ ಇಲಾಖೆಯ ನಾಲ್ಕನೇ ವರ್ಗದ ನೌಕರರೊಬ್ಬರ ಮಗ. ಹಲವು ವ್ಯಾಧಿಗಳಿಂದ ಬಳಲುತ್ತಿರುವ ವಿಪುಲ ಅವನ ಕುಟುಂಬ ತನ್ನ ಭವಿಷ್ಯವನ್ನೇ ಬಲಿಕೊಟ್ಟು ಕೊಡಿಸುತ್ತಿರುವ ಚಿಕಿತ್ಸೆಯ ಕಾರಣದಿಂದಾಗಿ ಇಂದು ಬದುಕಿದ್ದಾನೆ. 2001ರಲ್ಲಿ ಆತನ ಕುಟುಂಬದವರು ಸಹಾಯಕ್ಕಾಗಿ ಜಮ್ಮು ಕಾಶ್ಮೀರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು, ಅಂತೆಯೇ ಅವರಿಗೆ 20ಲಕ್ಷ ರೂ ಸಹಾಯ ಧನದ ಭರವಸೆಯನ್ನು ನೀಡಲಾಗಿತ್ತು. ಆದರೆ ಸರ್ಕಾರ ಬದಲಾದ ನಂತರ ಸಹಾಯ ನಿಂತುಹೋಯಿತು. ತತ್ಕಾಲಕ್ಕೆ ಗೃಹ ಮಂತ್ರಾಲಯ ಮಧ್ಯಪ್ರವೇಶಿಸಿ ನೆರವನ್ನು ಮುಂದುವರಿಸುವಂತೆ ಸೂಚಿಸಿತು. ಇಷ್ಟಾದ ಮೇಲೂ ಅವರಿಗೆ ದೊರಕಿದ್ದು ದಿ 24 ಜುಲೈ 2007ರ ಒಂದು ಪತ್ರ, ಪತ್ರದ ಒಕ್ಕಣೆಯಲ್ಲಿ “ಸಂವಿಧಾನದ ವಿಧಿ 370ರ ಅನ್ವಯ ಜಮ್ಮು ಕಾಶ್ಮೀರ ಸರ್ಕಾರ ಗೃಹ ಮಂತ್ರಾಲಯದ ಸೂಚನೆಯನ್ನು ಪಾಲಿಸುವ ಬಾಧ್ಯತೆಯನ್ನು ಹೊಂದಿರುವುದಿಲ್ಲ.” ಎಂದು ಉಲ್ಲೇಖಿಸಲಾಗಿತ್ತು !
ಇದೊಂದು 370ನೇ ವಿಧಿಯ ದುರುಪಯೋಗದ ಪ್ರತ್ಯೇಕ ಪ್ರಕರಣವಲ್ಲ. 1950ರಲ್ಲಿ ಸಂವಿಧಾನ ಜಾರಿಗೆ ಬಂದಾಗಿನಿಂದ ರಾಷ್ಟ್ರೀಯ ಹಿತಾಸಕ್ತಿಗಳಿಗೆ ವ್ಯತಿರಿಕ್ತವಾದ ಸ್ವಾರ್ಥ ಉದ್ಧೇಶಗಳ ಪೂರ್ತಿಗಾಗಿ 370ನೇ ವಿಧಿಯ ನಿಂದನೆ ಮತ್ತು ದುರುಪಯೋಗ ಮತ್ತೆ ಮತ್ತೆ ನಡೆಯಲ್ಪಟ್ಟಿದೆ.
ಆಗಿನ ತುರ್ತು ಸನ್ನಿವೇಶಕ್ಕೆ ಹಂಗಾಮಿ ಏರ್ಪಾಡಾಗಿ 370ನೇ ವಿಧಿಯನ್ನು ಸಂವಿಧಾನದಲ್ಲಿ ಸೇರಿಸಲಾಗಿತ್ತು. ಜಮ್ಮು ಕಾಶ್ಮೀರದ ಮೇಲೆ ಆಕ್ರಮಣವೆಸಗಿದ್ದ ಪಾಕಿಸ್ತಾನ ರಾಜ್ಯದ ಭೂಭಾಗವನ್ನು ನ್ಯಾಯಬಾಹಿರವಾಗಿ ತನ್ನ ವಶಕ್ಕೆ ತೆಗೆದುಕೊಂಡಿತ್ತು. ವಿಷಯವನ್ನು ವಿಶ್ವಸಂಸ್ಥೆಗೆ ಒಯ್ಯಲಾಗಿ ವಿಶ್ವಸಂಸ್ಥೆಯ ಭದ್ರತಾ ಮಂಢಳಿಯು ಕೆಲವು ಪೂರ್ವಾನ್ವಯ ಷರತ್ತುಗಳೊಂದಿಗೆ ಜನಮತಗಣನೆಯನ್ನು ನಡೆಸುವ ಗೊತ್ತುವಳಿಯನ್ನು ಅಂಗೀಕರಿಸಿತು. ಆ ಷರತ್ತುಗಳೆಂದರೆ ಪಾಕಿಸ್ತಾನ ಆಕ್ರಮಿತ ಪ್ರದೇಶದಿಂದ ತನ್ನ ಸೈನ್ಯವನ್ನು ಸಂಪೂರ್ಣವಾಗಿ ಹಿಂತೆಗೆದುಕೊಳ್ಳಬೇಕು ಮತ್ತು ತಾನು ಸ್ಥಾಪಿಸಿದ ಆಡಳಿತ ವ್ಯವಸ್ಥೆಯನ್ನು ತಗೆದುಹಾಕಬೇಕು. ಹಾಗೆಯೇ ಭಾರತದ ಸಂವಿಧಾನವನ್ನು ಜಾರಿಗೊಳಿಸುವ ಯಾವುದೇ ಪ್ರಯತ್ನವು ಸಂಪೂರ್ಣವಾಗಿ ನಿರಾಕರಿಸಲ್ಪಡುವುದು.
ಧರ್ಮವನ್ನು ಅಫೀಮು ಎಂದವರಿಂದ ಮತ್ತೇನು ನಿರೀಕ್ಷಿಸಲಾದೀತು?
– ನರೇಂದ್ರ ಕುಮಾರ ಎಸ್.ಎಸ್
ತೆಹಲ್ಕಾ’ದ ತರುಣ್ ತೇಜಪಾಲ್ ಅವರು ನಡೆಸಿರುವರೆನ್ನಲಾದ ಲೈಂಗಿಕ ಹಲ್ಲೆ ಪ್ರಕರಣ, ಮಾಧ್ಯಮದ ಮುಖವಾಡವನ್ನು ಕಿತ್ತೆಸೆದಿದೆ. ಇದೇ ’ತೆಹಲ್ಕಾ’ವು, ಆಗಾಗ “ಕುಟುಕು ಕಾರ್ಯಾಚರಣೆ”ಯ ಮೂಲಕ ರಾಜಕಾರಣಿಗಳನ್ನು ಸಿಕ್ಕಿಹಾಕಿಸುತ್ತಿತ್ತು. ಒಂದು ಗುಪ್ತ ಕ್ಯಾಮೆರಾ ಜೊತೆಗೆ ತೆರಳುವ ಈ “ಕುಟುಕು ಕಾರ್ಯಾಚರಣೆ ಪಡೆ”, ರಾಜಕಾರಣಿಗಳಿಗೆ ತಿಳಿಯದಂತೆ ಬಲೆ ಬೀಸುತ್ತಿತ್ತು. ಅವರಿಗೆ ಆಮಿಷವನ್ನು ತೋರಿಸಿ, ಆಗ ನಡೆಯುವ ಪೂರ್ಣ ಸಂಭಾಷಣೆಯನ್ನು ಕ್ಯಾಮೆರಾ ಮೂಲಕ ಸೆರೆಹಿಡಿದು, ಆ ನಂತರ ವಿಡಿಯೋವನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡುತ್ತಿತ್ತು. ಆ ವಿಡಿಯೋ ನೋಡಿದ ಜನ, ಅದರಲ್ಲಿರುವ ರಾಜಕಾರಣಿ ಭ್ರಷ್ಟಾಚಾರಿಯೇ ಎಂದು ನಿರ್ಧಾರಕ್ಕೆ ಬರುವ ರೀತಿಯಲ್ಲಿ ಅದನ್ನು ಪ್ರಸ್ತುತ ಪಡಿಸಲಾಗುತ್ತಿತ್ತು. ನ್ಯಾಯಾಂಗ ವಿಚಾರಣೆಯ ಬದಲು ಮಾಧ್ಯಮಗಳೇ ವಿಚಾರಣೆ ನಡೆಸಿ, ರಾಜಕಾರಣಿಯನ್ನು ತಪ್ಪಿತಸ್ಥ ಎಂದು ಘೋಷಿಸಲಾಗಿಬಿಡುತ್ತಿತ್ತು.
ವ್ಯಕ್ತಿಯೊಬ್ಬ ಭ್ರಷ್ಟಾಚಾರಿ ಅಲ್ಲದಿದ್ದರೂ, ಆಮಿಷಕ್ಕೊಳಗಾಗಿ ಕೆಲವು ತಪ್ಪುಗಳನ್ನು ಮಾಡುವನು. ಉದಾಹರಣೆಗೆ, ಮನೆಗೆಲಸಕ್ಕೆ ಬರುವ ಹುಡುಗ/ಹುಡುಗಿ ಕಳ್ಳರಾಗಿರುವುದಿಲ್ಲ. ಅವರು ಕಷ್ಟಪಟ್ಟು ಕೆಲಸ ಮಾಡಿ ಸಂಪಾದಿಸುವ ಉದ್ದೇಶ ಹೊಂದಿಯೇ ಕೆಲಸಕ್ಕೆ ಬಂದಿರುತ್ತಾರೆ. ಆದರೆ, ಅವರು ಕೆಲಸ ಮಾಡುವ ಮನೆಯಲ್ಲಿ, ಈ ಹುಡುಗ/ಹುಡುಗಿಯ ಕಣ್ಣಿಗೆ ಕಾಣಿಸುವಂತೆ ಹಣವನ್ನೋ ಇಲ್ಲವೇ ಆಭರಣಗಳನ್ನೋ ಇಟ್ಟಿದ್ದರೆ, ಅವರು ಆಮಿಷಕ್ಕೆ ಒಳಗಾಗಿಬಿಡುತ್ತಾರೆ. ಅಲ್ಲಿ ಇಟ್ಟಿರುವ ಹಣ/ಆಭರಣವನ್ನು ಯಾರೂ ಗಮನಿಸುತ್ತಿಲ್ಲವೆಂದು ತಿಳಿದಾಗ, ಅದನ್ನು ತೆಗೆದುಕೊಳ್ಳೋಣ ಎಂದೆನ್ನಿಸಿಬಿಡಬಹುದು. ಆಮಿಷದಿಂದ ಉಂಟಾದ ಆಸೆಯಿಂದ ತಪ್ಪಿಸಿಕೊಳ್ಳಲಾಗದೆ “ಕಳ್ಳತನ” ನಡೆದುಬಿಡುತ್ತದೆ. ಇಲ್ಲಿ ಕಳ್ಳತನ ಮಾಡಿದ ಹುಡುಗ/ಹುಡುಗಿಯದು ಎಷ್ಟು ತಪ್ಪೋ, ಅಷ್ಟೇ ತಪ್ಪು ಆ ಹಣ/ಆಭರಣಗಳನ್ನು ಇವರ ಕಣ್ಣಿಗೆ ಕಾಣುವಂತೆ ಇಟ್ಟು ಆಮಿಷ ಕೊಟ್ಟವರದೂ ಆಗಿರುತ್ತದೆ, ಅಲ್ಲವೆ?
ಮಹಿಳೆಯರ ಸಮಸ್ಯೆಗಳು – ಒಂದು ನೋಟ
– ಮು.ಅ ಶ್ರೀರಂಗ, ಬೆಂಗಳೂರು
ನಮ್ಮ ಬುದ್ಧಿಜೀವಿಗಳು ಸಾಹಿತಿಗಳು ಅದರಲ್ಲೂ ಮುಖ್ಯವಾಗಿ ಸ್ತ್ರೀವಾದಿ ಸ್ತ್ರೀಸಂವೇದನೆ ಎಂಬ ಹೆಸರುಗಳಿಂದ ಪ್ರಸಿದ್ಧರಾಗಿರುವ ಒಂದು ಸಾಕಷ್ಟು ದೊಡ್ಡ ಗುಂಪು ಮಾಡುತ್ತಿರುವ ಒಂದು ಪ್ರಮಾದವೆಂದರೆ,ನಮ್ಮ ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿರುವ ಇಂದಿನ ಎಲ್ಲಾ ಸಮಸ್ಯೆಗಳಿಗೆ ಒಬ್ಬ ಊಹಾತ್ಮಕ ಶತ್ರುವನ್ನು ತಂದು ಜನತೆಯ ಮುಂದಿರಿಸಿ, ಆ ಎಲ್ಲಾ ಸಮಸ್ಯೆಗಳಿಗೂ ಈತನೇ ಕಾರಣ ಎಂದು ದೂಷಿಸುತ್ತಿರುವುದು. ಆ ಊಹಾತ್ಮಕ ಶತ್ರುವೇ “ಮನು”ಮತ್ತು ಆತನ ಹೆಸರಿನಲ್ಲಿದೆ ಎನ್ನಲಾಗುತ್ತಿರುವ “ಮನು ಸಂಹಿತೆ”. ಜತಗೆ ಆತನ ವಂಶಜರಂತೆ ವರ್ತಿಸುತ್ತಿರುವ ಇಂದಿನ ಮೇಲ್ಜಾತಿಗಳು. ಈ ಬುದ್ಧಿಜೀವಿಗಳು ತಮ್ಮ ವಾದಕ್ಕೆ ಪೂರಕವಾಗಿ “ಬ್ರಿಟೀಶ್ ಚರಿತ್ರಕಾರರು”ಬರೆದ “ನಮ್ಮ ಇತಿಹಾಸ”ವನ್ನು ತಮ್ಮ ವಾದಕ್ಕೆ ಸಾಕ್ಷ್ಯ ಎಂಬಂತೆ ತೋರಿಸುತ್ತಿದ್ದಾರೆ.
ಇಂದು ಆಗಾಗ ಚರ್ಚೆಗೆ ವಸ್ತುವಾಗಿರುವ ಎರಡು ವಿಷಯಗಳೆಂದರೆ:-
(೧) ಮಹಿಳೆಯರ “ಆ ಮೂರುದಿನಗಳ” ಮತ್ತು (೨) “ವಿಧವೆಯರ”ಸಮಸ್ಯೆಗಳು.
ಸುಭಾಷರ ನೆನಪಿನೊಂದಿಗೆ ಮರೆಯಬಾರದ ಹೆಣ್ಣು
– ಚೇತನಾ ತೀರ್ಥಹಳ್ಳಿ
ಹೆಣ್ಣು- ಮಣ್ಣಿನ ಹಿಂದೆ ಬಿದ್ದವರೆಲ್ಲ ಕೆಡುತ್ತಾರೆ- ಹಾಗನ್ನುತ್ತಾರಲ್ಲವೆ? ಆದರೆ, ಸುಭಾಷರು ಮಾತ್ರ ಕೆಡಲಿಲ್ಲ. ಬದಲಾಗಿ ಉನ್ನತ ಗೌರವವನ್ನೇ ಪಡೆದರು. ಶತಮಾನಗಳ ಕಾಲ ಉಳಿಯುವಂತಾದರು. ಯಾಕೆ ಗೊತ್ತಾ? ಅವರು ಹಂಬಲಿಸಿದ ನೆಲ ಭಾರತ. ಮತ್ತು, ಅವರು ಪ್ರೇಮಿಸಿದ ಹೆಣ್ಣು ಎಮಿಲೀ!……….. ಸುಭಾಷ್ ಅವರನ್ನ ನೆನೆಸಿಕೊಂಡರೆ, ಎಮಿಲಿಗೂ ನಮ್ಮಿಂದ ಒಂದು ಗೌರವ ಸಲ್ಲಲಿ ಅಂತ ಹಾರೈಸ್ತಾ….
“ನಿನ್ನ ನೋಡಲು ಮತ್ತೆಂದೂ ಸಾಧ್ಯವಾಗದೆ ಹೋಗಬಹುದು. ಆದರೆ ನನ್ನ ನಂಬು. ನೀನು ಸದಾ ನನ್ನ ಹೃದಯದಲ್ಲಿ, ಆಲೋಚನೆಗಳಲ್ಲಿ, ಕನಸಲ್ಲಿ ಇದ್ದೇ ಇರುತ್ತೀಯೆ. ಹಾಗೇನಾದರೂ ವಿಧಿ ನಮ್ಮಿಬ್ಬರನ್ನು ಶಾಶ್ವತವಾಗಿ ಅಗಲಿಸಿದನೆಂದುಕೋ… ಮುಂದಿನ ಹುಟ್ಟಿನಲ್ಲಿ ಮತ್ತೆ ನಿನ್ನ ಸೇರಲು ನಾನು ಪರಿತಪಿಸುವೆ. ನನ್ನ ಕಿನ್ನರೀ… Jeden tag denke ich an sie- ನಿನ್ನನ್ನ ಪ್ರತಿದಿನವೂ ನೆನೆಸಿಕೊಳ್ಳುತ್ತೇನೆ”
( ಸುಭಾಷ್ ಚಂದ್ರ ಬೋಸ್, ಎಮಿಲೀ ಶೆಂಕಲ್ ಗೆ ಬರೆದ ಪತ್ರದಲ್ಲಿ)
ನರನರದಲ್ಲಿ ನೆಲದ ಉನ್ಮಾದ. ಹೋರಾಟದ ಕೆಚ್ಚು. ತನ್ನನ್ನೇ ದೇಶದ ಹೆಸರಿಗೆ ಬರೆದಿಟ್ಟ ಪ್ರೌಢ ಗಂಡಸಿನ ಎದೆಯಲ್ಲೂ ಒಂದು ಬೆಚ್ಚಗಿನ ಗೂಡು. ಪುಟ್ಟದೊಂದು ಖಾಸಗಿ ಬದುಕು. ಅಲ್ಲಿ, ಮೊಗೆದಷ್ಟೂ ಚಿಮ್ಮುವ ಪ್ರೀತಿ. ಎದೆ ಸೀಯುವ ವಿರಹದ ಕಾವು. ಕಾಸಗಲ ಕಣ್ಣೆದುರು ಮುಕ್ತ ಭಾರತದ ಕನಸು. ಒಳಗಿನೊಳಗಲ್ಲಿ ಅವಳ ಪ್ರೇಮ ಬಂಧನದ ನೆನಪು.
ಸುಭಾಷ್ ಚಂದ್ರ ಬೋಸ್… ಮತ್ತಷ್ಟು ಓದು 
ಕೌರವರ ನಾಶಕ್ಕೆ ಶ್ರೀಕಾರ ಹಾಕಿದ್ದು ದ್ರೌಪದಿಯೇ ತಾನೇ?
– ರಾಕೇಶ್ ಶೆಟ್ಟಿ
ಬಹುಷಃ ಆಗಿನ ಕಾಲವೇ ಚೆನ್ನಾಗಿತ್ತೆನೋ.ಆಗಲಾದರು ಕುರು ಸಭೆಯಲ್ಲಿ ದ್ರೌಪದಿಯ ವಸ್ತ್ರಾಪಹರಣವಾಗುವಾಗ ಅವಳ ಸಹಾಯಕ್ಕೆ ಕರೆದೊಡನೆಯೇ ಶ್ರೀ ಕೃಷ್ಣ ಪರಮಾತ್ಮ ಬಂದಿದ್ದ.ಪಾಪ! ಈ ಕಾಲದ ಹೆಣ್ಣು ಮಕ್ಕಳ ಕೂಗು ಆ ಕಾಣದ ದೇವರಿಗೂ,ಕಾನೂನು ಪಾಲಕರಾದ ಮನುಷ್ಯ(?)ರಿಗೂ ಕೇಳುತ್ತಿಲ್ಲ.ಕುರುಕ್ಷೇತ್ರದ ಯುದ್ಧದ ಮುಗಿದರೂ ಕೌರವರು ಇನ್ನೂ ಸತ್ತಿಲ್ಲ.ದ್ರೌಪದಿಯರ ಗೋಳು ಮುಗಿಯೋಲ್ಲ…
ಕಳೆದ ಶನಿವಾರದ ಬೆಳಗ್ಗಿನಿಂದ ಇಂಡಿಯಾ ಗೇಟ್,ರಾಷ್ಟ್ರಪತಿ ಭವನದ ಮುಂದೆ ನಿಂತು ನ್ಯಾಯ ಕೇಳಿದ ಯುವಕ-ಯುವತಿಯರ ಮೇಲೆಯೇ ಲಾಠಿ ಚಾರ್ಜ್,ಜಲಫಿರಂಗಿ,ಅಶ್ರು ವಾಯು ಪ್ರಯೋಗ ನಡೆಯುತ್ತಿದ್ದರೂ.ಪ್ರಧಾನಿ ಮೌನ ಮೋಹನ್ ಸಿಂಗ್ ತಮ್ಮ ಮೌನ ಮುರಿದಿದ್ದು ಸೋಮವಾರ ಬೆಳಿಗ್ಗೆ.ಊರು ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದಂತೆ!,ಅದೂ ಸಹ ತಮ್ಮ ಭಾಷಣದ ಕೊನೆಯಲ್ಲಿ “ಟೀಕ್ ಹೈ” ಅಂದರಂತೆ! ಕ್ಯಾಮೆರಾ ಹಿಂದೆ ನಿಂತಿದ್ದ ನಿರ್ದೇಶಕ(ಕಿ) ಯಾರಿದ್ದಿರಬಹುದು? So Called ಯುವನಾಯಕ ರಾಹುಲ್ ಗಾಂಧಿಗೂ ಯುವಕ-ಯುವತಿಯರ ಮೇಲೆ ಪೋಲಿಸ್ ದೌರ್ಜನ್ಯ ಕಾಣಿಸಿಲ್ಲ.ರಷ್ಯಾದಿಂದ ಪುಟಿನ್ ಬರುತಿದ್ದಾರೆ ಅವರೆದುರು ನೀವು ಗಲಾಟೆ ಮಾಡಿದರೆ ಭಾರತದ ಬಗ್ಗೆ ಅವರೇನು ತಿಳಿದುಕೊಂಡಾರು ಅಂತ ಬುದ್ದಿ ಹೇಳುವ ಗೃಹ ಮಂತ್ರಿ ಶಿಂಧೆಗೇ,ವೃದ್ಧರು ,ಮಹಿಳೆಯರು,ಮಕ್ಕಳ ಮೇಲೆ ದೌರ್ಜನ್ಯವೆಸಗಿದ ಪೋಲಿಸರನ್ನು ಮನೆಗೆ ಕಳಿಸಲಾಗದಿದ್ದ ಮೇಲೆ ತಾನು ಕುಳಿತಿರುವ ಕುರ್ಚಿಯಿಂದ ಎದ್ದೋಗಬೇಕು ಅನ್ನುವ ನೈತಿಕತೆ ಕೂಡ ಉಳಿದಿಲ್ಲವೇ? ಎದ್ದೋಗುವುದನ್ನು ಪಕ್ಕಕ್ಕಿಡಿ,ತನ್ನ ಪೋಲಿಸ್ ಪಡೆ ಮಾಡಿದ ಘನಂದಾರಿ ಕೆಲಸಕ್ಕಾಗಿ ದೇಶದ ಜನರ ಕ್ಷಮೆ ಕೇಳಲು ಸಹ ಆತ ಸಿದ್ಧನಿಲ್ಲ. ಹಾಳು ಬಿದ್ದು ಹೋಗಲಿ ಕ್ಷಮೆಯೂ ಬೇಡ.ನ್ಯಾಯ ಕೇಳಲು ನಿಂತ ವಿದ್ಯಾರ್ಥಿಗಳನ್ನು ಭೇಟಿಯಾಗುವ ಕುರಿತು ಪ್ರಶ್ನೆ ಕೇಳಿದರೆ, “ಇವತ್ತು ವಿದ್ಯಾರ್ಥಿಗಳು ಪ್ರತಿಭಟಿಸುತ್ತಾರೆ.ನಾಳೆ ಮಾವೋವಾದಿಗಳು ಪ್ರತಿಭಟಿಸುತ್ತಾರೆ.ಹಾಗಂತ ಮಾವೋವಾದಿಗಳು ಭೇಟಿಯಾಗಲು ಸಾಧ್ಯವೇ?” ಅನ್ನುತ್ತಾನಲ್ಲ ಇದೆಂತ ಉಡಾಫೆ ತನದ ಮಾತು? ಎಲ್ಲಿಗೆ ಬಂದು ನಿಂತಿದೆ ನಮ್ಮ ವ್ಯವಸ್ಥೆ?




