ರಾಜಕಾರಣಿಗಳೇ, ಮಹಿಳೆಯರಿಗೆ ರಕ್ಷಣೆಕೊಡಿ ಇಲ್ಲವೇ ಜಾಗ ಖಾಲಿ ಮಾಡಿ
– ಚೈತ್ರ ಗೌಡ ಹಾಸನ
ಸ್ನಾತಕೋತ್ತರ ಪತ್ರಿಕೋದ್ಯಮ,
ಮಾನಸಗಂಗೋತ್ರಿ, ಮೈಸೂರು.
ಆದಿಯಿಂದಲೂ ಸೃಷ್ಟಿಯ ಮೂಲ ಹೆಣ್ಣು, ಕರುಣೆ, ವಾತ್ಸಲ್ಯ, ಮಮತೆ, ಅಕ್ಕರೆ ತಾಳ್ಮೆ ಹೀಗೆ ವಿಶಿಷ್ಟ ಶಕ್ತಿಗಳ ಸಂಗಮದ ಜೊತೆಗೆ ನವಿರಾದ ಭಾವನಾತ್ಮಕ ತಂತುಗಳು ಬೆಸೆದುಕೊಂಡಿವೆ. ಹೆಣ್ಣು ಭಾವನಾತ್ಮಕವಾಗಿ ಮತ್ತು ದೈಹಿಕವಾಗಿ ಈ ಪ್ರಕೃತಿಯಿಂದಲೇ ವಿಭಿನ್ನ ಶಕ್ತಿಯನ್ನು ಪಡೆದಿರುವ ಪೋಷಕಿ, ತನ್ನ ಗರ್ಭದಲ್ಲಿ ಒಂಬತ್ತು ತಿಂಗಳು ಶಿಶುವನ್ನು ಹೊತ್ತು ಪೋಷಿಸಿ, ತನ್ನ ಎಲ್ಲ ಕಷ್ಟಗಳನ್ನು ನಗುನಗುತ್ತ ಸಹಿಸಿ ಮರುಹುಟ್ಟು ಎನ್ನುವಂತಹ ನೋವನ್ನು ಸಹಿಸಿಕೊಂಡು ಜನ್ಮ ಕೊಡುತ್ತಾಳೆ. ಪುರುಷನ ಜೀವನದ ಪ್ರತಿ ಹಂತದಲ್ಲಿಯೂ ಹೆಣ್ಣಿನ ಪಾತ್ರ ಮಹತ್ವವಾದದ್ದು. ಜನ್ಮಕೊಟ್ಟು ಸಲಹುವ ತಾಯಿಯಾಗಿ, ಅಕ್ಕರೆಯ ಸೋದರಿಯಾಗಿ, ಸಾಂತ್ವನ ನೀಡುವ ಸ್ನೇಹಿತೆಯಾಗಿ, ಭಾವನೆಗಳ ಬೆಸುಗೆಯ ಮಡದಿಯಾಗಿ, ಪ್ರೀತಿ ಚಿಲುಮೆಯ ಮಗಳಾಗಿ. ಇಂದು ಹೆಣ್ಣು ಎಲ್ಲ ಕ್ಷೇತ್ರದಲ್ಲೂ ಮುನ್ನಡೆಯುತ್ತ ಜಗತ್ತಿನ ದೃಷ್ಟಿಯನ್ನು ತನ್ನೆಡೆಗೆ ಸೆಳೆದಿದ್ದಾಳೆ. ಪ್ರತಿಭೆ, ಕಲೆ, ಸಾಹಿತ್ಯ, ಸಾಹಸ ಪ್ರವೃತ್ತಿ ಅಂತಹ ಸಾಧನೆ ಮಾಡಿ ವಿಶ್ವದ ಗೌರವಕ್ಕೆ ಪಾತ್ರಳಾಗಿದ್ದಾಳೆ. ಉತ್ತಮ ಗುಣ ನಡತೆಗಳಿಂದ ಪೂಜನೀಯ ಸ್ಥಾನದಲ್ಲಿದ್ದಾಳೆ. ಮತ್ತಷ್ಟು ಓದು 
ರಾಷ್ಟ್ರಕ್ಕೆ ರಕ್ಷಣೆ ಹೆಣ್ಣು ನೀಡಬಲ್ಲಳಾದರೆ ತನ್ನನ್ನು ತಾನೂ ರಕ್ಷಿಸಿಕೊಳ್ಳಬಲ್ಲಳು..
– ತನ್ಮಯೀ ಪ್ರೇಮ್ ಕುಮಾರ್
ಪ್ರತಿ ವರ್ಷದ ಹಾಗೆ ಈ ವರ್ಷವೂ ಮತ್ತೊಂದು ಮಹಿಳಾ ದಿನಾಚರಣೆಯ ಹೊಸ್ತಿಲಲ್ಲಿ ನಿಂತಿದ್ದೇವೆ.ಮಹಿಳೆಯ ಹರಹಿನ ವಿಸ್ತಾರ ಅಗಾಧವಾಗಿ ಬೆಳೆದು ನಿಂತಿದೆ. ಸಮಾಜದ ಮುಖ್ಯ ವಾಹಿನಿಯಲ್ಲಿಯೂ ಮಹಿಳೆಯ ನಾಗಾಲೋಟ ಭರದಿಂದಲೇ ಸಾಗುತ್ತಿದೆ.ಆದರೆ ಎತ್ತ?? ಆಕೆಗೆ ಸುರಕ್ಷಿತವಾಗಿ ನಿರ್ಭಿಡೆಯಿಂದ ಕೆಲಸ ಮಾಡಲು,ಓಡಾಡಲು, ಸ್ವತಂತ್ರವಾಗಿರಲು ಅನುವು ಮಾಡಿಕೊಟ್ಟಿದ್ದೇವಾ?? ದೈಹಿಕವಾಗಿ ಮಾತ್ರವಲ್ಲ ಮಾನಸಿಕವಾಗಿಯೂ ಆಕೆಗೆ ರಕ್ಷಣೆ ಒದಗಿಸಿದ್ದೇವಾ?? ನಮ್ಮೊಳನಗಿನ ನಮ್ಮ ನಾಡಿನ ಆಂತರ್ಯವನ್ನು ಪ್ರಶ್ನಿಸಿಕೊಂಡಾಗಲಂತೂ ಅತ್ಯಂತ ಹೇಸಿಗೆಯಿಂದ ತಲೆ ಬಗ್ಗಿಸಬೇಕಾದ ಪರಿಸ್ಥಿತಿ ನಿರ್ಮಿಸಿಕೊಂಡಿದ್ದೇವೆ. ಮಹಿಳಾವಾದ ,ಸಮಾನತೆ,ಹಕ್ಕುಗಳು ಹೀಗೆ ರೋಮ್ಯಾಂಟಿಕ್ ಶಬ್ದಗಳ ಆಚೆಗೆ ಹೆಣ್ಣಿಗೆ ಸಿಗಬೇಕಿದ್ದ ಕನಿಷ್ಟ ಸುರಕ್ಷತೆಯ ಭರವಸೆ ತಂದಿದ್ದೇವಾ? ಮತ್ತಷ್ಟು ಓದು 
ವೃಕ್ಷ ಮಹಿಳೆಗೆ ಇದೀಗ ನೂರರ ವಸಂತ
– ರಾಘವೇಂದ್ರ ಅಡಿಗ ಎಚ್ಚೆನ್
ಮಾರ್ಚ್ 8 `ಅಂತರಾಷ್ಟ್ರೀಯ ಮಹಿಳಾ ದಿನ’. ಇಂದು ಮಹಿಳೆ ತಾನು ಪುರುಷನಿಗೆ ಸರಿಸಮನಾಗಿ ಕಛೇರಿ ಕೆಲಸದಿಂದ ತೊಡಗಿ, ಬಾಹ್ಯಾಕಾಶ ಯಾನದವರೆವಿಗಿನ ಎಲ್ಲಾ ಕ್ಷೇತ್ರಗಳಲ್ಲಿ ತನ್ನದೇ ಛಾಪು ಮೂಡಿಸಿದ್ದಾಳೆ. ಅಂತಹವರಲ್ಲಿ ನಮ್ಮ ಸಾಲು ಮರದ ತಿಮ್ಮಕ್ಕ ನವರ ಸಾಧನೆಯೂ ಸ್ತುತ್ಯಾರ್ಹವಾದುದು. ಬಡತನದ ಬೇಗೆಯ ನಡುವೆಯೂ ಆದರ್ಶಮಯ ಜೀವನ ನಡೆಸುತ್ತಿರುವ ಸಾರ್ಥಕ ಜೀವ ಅದು. ಮಕ್ಕಳಿಲ್ಲದ ಕೊರಗು, ಬಡತನದಿಂದ ಬೆಂಡಾದ ಬಾಳ್ವೆಯ ನಡುವೆಯೂ ‘ನೆರಳು ನೀಡುವ ಮರಗಳೆ ನನ್ನ ಮಕ್ಕಳು, ಅವುಗಳನ್ನು ಬೆಳೆಸಿ ಪೋಷಿಸುವುದೇ ನನ್ನ ಜೀವನದ ಗುರಿ’ ಎಂದು ನಂಬಿ ನಡೆದ ಈ ವೃಕ್ಷ ಮಹಿಳೆಗೆ ಇದೀಗ ನೂರರ ವಸಂತ.
ಕೆಲ ವರ್ಷಗಳ ಹಿಂದೊಮ್ಮೆ ದಾವಣಗೆರೆ ಲೋಕಸಭಾ ಸದಸ್ಯರಾಗಿದ್ದ ಶ್ಯಾಮನೂರು ಶಿವಶಂಕರಪ್ಪನವರು ತಾವು ಕಾರ್ಯಕ್ರಮವೊಂದರ ನಿಮಿತ್ತ ಕನಕಪುರದತ್ತ ಹೊರಟಿರುತ್ತಾರೆ. ಅದಾಗ ಮಾರ್ಗ ಮದ್ಯದಲ್ಲಿ ವಾಹನವನ್ನು ನಿಲ್ಲಿಸಿ ತಾವು ದೇಹಬಾಧೆಯನ್ನು ಕಳೆಯಲೋಸುಗ ಮರಗಳ ಮರೆಗೆ ಸಾಗುತ್ತಾರೆ. ಅಲ್ಲಿ ಬೆಳೆದಿದ್ದ ಸಾಲು ಮರಗಳನ್ನು ಕಂಡು ಅಚ್ಚರಿಗೊಂಡ ಶಿವಶಂಕರಪ್ಪನವರು ಅಲ್ಲಿನ ದಾರಿಹೋಕರನ್ನು “ಈ ಮರಗಳಾನ್ನೆಲ್ಲಾ ಯಾವ ಮಂಡಲ ಪಂಚಾಯ್ತಿಯವ್ರು ಬೆಳೆಸಿದ್ದಾರೆ?” ಎಂದು ಪ್ರಶ್ನಿಸುತ್ತಾರೆ. ಆಗ ಆ ದಾರಿಹೋಕನು ಹೇಳಿದ ಉತ್ತರ ಕೇಳಿ ಶಿವಶಂಕರಪ್ಪನವರಿಗೆ ಆಶ್ಚರ್ಯದೊಂದಿಗೆ ಮನಸ್ಸು ತುಂಬಿ ಬರುತ್ತದೆ.
ಇದು ಭರತವರ್ಷ : ಆ ಹೆಣ್ಣು ಮಗಳ ಹೋರಾಟಕ್ಕೆ ಅಂತ್ಯ ಇದೆಯಾ???
– ರಾಕೇಶ್ ಶೆಟ್ಟಿ
ಹೆಣ್ಣು ಮಹಿಳೆಯಾಗುತ್ತಿದ್ದಾಳೇಯೇ?
– ರೂಪ ರಾವ್
ನಿನ್ನೆ ಮಹಿಳಾ ದಿನಾಚರಣೆ, ಎಷ್ಟೊ ಶುಭಾಶಯಗಳು, ಆಕಾಂಕ್ಷೆಗಳು. ಹಾರೈಕೆಗಳು. ಒಮ್ಮೆಗೆ ಕೂತು ಯೋಚಿಸುತ್ತಿದ್ದಾಗ, ಮೂಡಿದ ಯೋಚನೆಗಳು ಹಲವಾರು ಅದರಲ್ಲಿ ಮೂಡಿದ ಒಂದು ಪ್ರಶ್ನೆ,
ಮಹಿಳೆ ಎನಿಸಿಕೊಳ್ಳುವ ಹಂಬಲದಲ್ಲಿ ಹೆಣ್ಣಿನ ಸಹಜ ಸಂವೇದನೆಗಳನ್ನು ಕಳೆದುಕೊಳ್ಳುತ್ತಿದ್ದೇವೆಯೇ ನಾವುಗಳು? ಅಷ್ಟಕ್ಕೂ ಹೆಣ್ಣಿಗೂ ಮಹಿಳೆಗೂ ಏನು ವ್ಯತ್ಯಾಸ?
ಹೌದು ಅರ್ಥದ ಪ್ರಕಾರ ಯಾವುದೂ ಇಲ್ಲ
ಆದರೆ ಮನಸಿಗೆ ಹೆಣ್ಣು ಆಪ್ತಳಾಗುತ್ತಾಳೆ, ಆದರೆ ಮಹಿಳೆ ದೂರದಲ್ಲಿಯೇ ನಿಲ್ಲುತ್ತಾಳೆ .
ಇದರ ಬಗ್ಗೆ ನನ್ನದೊಂದಿಷ್ಟು ಸಂವೇದನೆಗಳು
ಹೆಣ್ಣಿನ ಮೊದಲ ಹಂತವೇ ಹೆಣ್ಣಾಗುವುದು.
ಬಾಲಕಿ ಹೆಣ್ಣಾಗುವ ಆ ಹಂತದಲ್ಲಿ ಎಷ್ಟೋ ಕಾತುರತೆ,ನಿರೀಕ್ಷೆಗಳು,ನಾಚಿಕೆ,ಲಜ್ಜೆ,ಕನಸುಕಂಗಳು,ಕೆನ್ನೆಯ ಚುಂಬಿಸುತ್ತಲೆ ಇರುವ ರೆಪ್ಪೆಗಳು… ಹೀಗೆ ಏನೇನೋ ಲಕ್ಷಣಗಳು … ಹೌದು ಇವೆಲ್ಲಾವನ್ನು ಓದಿರುತ್ತೇವೆ, ನೋಡಿರುತ್ತೇವೆ ಎಲ್ಲಿ ಕಥೆಗಳಲ್ಲಿ ಕಾವ್ಯಗಳಲ್ಲಿ,ನಮ್ಮ ತಾಯಿ ಅಥವಾ ಅವರ ತಾಯಿಯ ಕಾಲಕ್ಕಿರಬಹುದೇನೋ…!
ಈಗ ಬಾಲಕಿ ಹೆಣ್ಣಾಗುವುದಿಲ್ಲ ಸೀದಾ ಮಹಿಳೆಯಾಗುವ ಹಂತಕ್ಕೆ ತಲುಪಿರುತ್ತಾಳೆ, ಅದೇನು ಗಾಂಭೀರ್ಯ,ಎಲ್ಲವನ್ನೂ ತಿಳಿದಿರುವವರ ಲಕ್ಷಣ, ಹುಡುಗರೆಂಬ ಕುತೂಹಲವಿರಲಿ ಅವರನು ಹೇಗೆ ಆಟ ಆಡಿಸುವುದೆಂಬ ಯೋಚನೆಯಲ್ಲಿ ತೊಡಗುತ್ತಾಳೆ.ಯಾವುದೇ ವಿಚಾರಕ್ಕಿರಲಿ ದೊಡ್ಡವರನ್ನು ಕೇಳಬೇಕಾದ ಅನಿವಾರ್ಯತೆ ಈಗ ಇಲ್ಲ.ಎಲ್ಲಕ್ಕೂ ಅಂತರ್ಜಾಲವಿದೆ. ಯಾವುದೇ ಕುತೂಹಲ,ಪ್ರಶ್ನೆಗೆ ಉತ್ತರ ಅಗತ್ಯಕ್ಕಿಂತ ಹೆಚ್ಚಾಗಿಯೇ ಸಿಗುತ್ತದೆ.ಹಾಗಾಗಿ ಲೈಂಗಿಕತೆ ಎಂಬುದು ಅವಳಿಗೆ ದೊಡ್ಡ ವಿಷಯವೇ ಅನ್ನಿಸುವುದಿಲ್ಲ.
ಈಗೀಗ ಕಾಲೇಜಿನಲ್ಲಿ ಹುಡುಗ ಕೈ ಕೊಟ್ಟ ಎಂಬ ಮಾತುಗಳಿಗಿಂತ ಹುಡುಗಿ ಬಿಟ್ಟು ಹೋದಳು ಎಂಬ ದೂರುಗಳೇ ಹೆಚ್ಚು.
ಅಪ್ಪ ಅಮ್ಮನ ನಂತರ ಹುಡುಗಿ ಹುಡುಕುವುದೇ ಸೂಕ್ತ ಗೆಳೆಯನಿಗಾಗಿ, ಹುಡುಗನಲ್ಲಿ ಗೆಳೆಯನನ್ನು ಹುಡುಕುತ್ತಾಳೆ,ಆಪ್ತವಾದ ಭಾವನೆ ಹುಟ್ಟು ಹಾಕುವ ಹುಡುಗ ಅವಳಿಗೆ ಹಿಡಿಸುತ್ತಾನೆ. ಆದರೆ ಯಾವುದೋ ಒಂದು ಘಳಿಗೆ ಯಲ್ಲಿ ತಾನು ಬಂದಿರುವುದು ಓದಲು ಪ್ರೀತಿಸಲು ಅಲ್ಲ ಎಂಬ ದಿವ್ಯ ತಿಳುವಳಿಕೆ ಬರುತ್ತದೆ. ಇದ್ದಕ್ಕಿದ್ದಂತೆಯೇ ಬಾಳಿನ ಗುರಿಗಳು ನೆನಪಾಗುತ್ತವೆ. ತನ್ನ ಮೊದಲ ಆದ್ಯತೆ ತಂದೆ ತಾಯಿ ಹಾಗು ಗುರಿ ಈ ಹುಡುಗ ಅಲ್ಲ ಎಂಬ ಆಲೋಚನೆಗಳು ಮುತ್ತಿಡಲಾರಂಭಿಸಿದೊಡನೆಯೇ ಹುಡುಗನ ಚಿತ್ರ ಮನದಿಂದ ದೂರವಾಗಲಾರಂಭಿಸುತ್ತದೆ. ಅದು ತಾತ್ಕಾಲಿಕ, ಮತ್ತೊಬ್ಬ ಹುಡುಗ ಬಂದು ಮನದಲ್ಲಿ ಕೂರುವವರೆಗೆ…
ಅರುಣಳ ಬಾಳಿಗೆ ಅರುಣೋದಯವೆಂದು
ರೂಪಾ
ಕೊನೆಗೂ ಅರುಣಾಗೆ ಅರುಣೋದಯ ಕಾಣಲೇ ಇಲ್ಲ . ಕೊನೆಗೆ ಈ ಜೀವನದಿಂದ ಬಿಡುಗಡೆ ಸಿಕ್ಕೀತೆ ಎಂಬ ನಿರೀಕ್ಷೆಯೂ ಇಲ್ಲವಾಗಿ ಹೋಗಿದೆ. ಜೀವ ಹೋಗುವ ತನಕ ದಿನದಿನವೂ ಸಾಯುತ್ತಲೇ ಜೀವಿಸಿರಲೇಬೇಕಾಗಿದೆ. ಅಷ್ಟಕ್ಕೂ ಈ ಅರುಣಾ ಶಾನಭಾಗ್ ಎಂಬ ನಮ್ಮ ಕರ್ನಾಟಕದ ಹುಡುಗಿ ಮಾಡಿದ ತಪ್ಪಾದರೂ ಏನು?
ಹೆಣ್ಣೆಂದರೆ ಹೀಗೇಕೆ…..?
-ಶ್ರೀದೇವಿ ಅಂಬೆಕಲ್ಲು॒॒
೩೭ ವರ್ಷಗಳ ಹಿಂದೆ ವಾರ್ಡ್ ಹುಡುಗನಿಂದ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಮಾನಸಿಕ ಯಾತನೆ ಅನುಭವಿಸುತ್ತಿರುವ ನರ್ಸ್ ಅರುಣಾ ಶಾನ್ಭಾಗ್ ಅವರ ನರಳುವಿಕೆ, ಮಾನಸಿಕ ನೋವು ಮತ್ತು ಆಕೆಯ ಗೆಳತಿ ಪಿಂಕಿ ವಿರಾನಿ ಅರುಣಾಗೆ ದಯಾಮರಣ ನೀಡಬೇಕೆಂದು ಅರ್ಜಿ ಸಲ್ಲಿಸಿರುವ ವರದಿ ಇತ್ತೀಚೆಗೆ ಮಾಧ್ಯಮಗಳಲ್ಲಿ ನೋಡಿದ್ದೇವೆ, ಕೇಳಿದ್ದೇವೆ. ಹೀಗೆ ಹೆಣ್ಣು ಮಗಳೊಬ್ಬಳು ದೌರ್ಜನ್ಯಕ್ಕೊಳಗಾಗಿ ಅನುಭವಿಸುತ್ತಿರುವ ಯಾತನಾಮಯ ಜೀವನ ಇನ್ಯಾವ ಹೆಣ್ಣು ಮಗಳಿಗೂ ಬಾರದಿರಲಿ ಅನ್ನೋದು ಎಲ್ಲ ತಾಯಿ ಹೃದಯದವರ ಆಶಯ.
ಹೆಣ್ಣು ಹೆಣ್ಣೆಂದು ಹೆಣ್ಣನ್ನೇಕೆ ಹೀಗಳೆಯುವಿರಿ…?ಹೆಣಲ್ಲವೇ ನಮ್ಮನ್ನ ಹೆತ್ತ ತಾಯಿ…?
ಮಾರ್ಚ್ ೮ ಅಂತರರಾಷ್ಟ್ರೀಯ ಮಹಿಳಾ ದಿನ. ದಿನಾಚರಣೆಯ ಶತಮಾನೋತ್ಸವವನ್ನು ಆಚರಿಸಿಕೊಳ್ಳುತ್ತದೆ. ಈ ವರ್ಷದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಘೋಷ ವಾಕ್ಯ ’ಶಿಕ್ಷಣ, ತರಬೇತಿ ಹಾಗೂ ವಿಜ್ಞಾನ, ತಂತ್ರಜ್ಞಾನಕ್ಕೆ ಸಮಾನ ಅವಕಾಶ-ಮಹಿಳೆಯರಿಗೆ ಒಳ್ಳೆಯ ಕೆಲಸಕ್ಕೆ ಹಾದಿ’.
ಒಬ್ಬ ಗಂಡಸಿನಷ್ಟೇ ಶ್ರಮ ವಹಿಸಿ ದುಡಿಯುವ ಹೆಣ್ಣು ಮಗಳಿಗೆ ನೀಡುವ ಸಂಬಳದಲ್ಲಿ ತಾರತಮ್ಯ ಮಾಡಲಾಗುತ್ತದೆ. ಗಂಡ ದಿನದ ೭ ಗಂಟೆ ದುಡಿದು ಬಂದು ತಾನೆ ಉತ್ಪಾದಕ ಎಂದು ಹೆಮ್ಮೆಯಿಂದ ಬೀಗಿಕೊಳ್ಳುತ್ತಾನೆ. ಇಡೀ ದಿನ ಮನೆಯಲ್ಲಿ ದುಡಿಯುವ ಹೆಂಡತಿಯ ಪರಿಶ್ರಮಕ್ಕೆ ಯಾವ ಬೆಲೆಯೂ ಇಲ್ಲ. ಒಂದು ಕಡೆ ವೇತನ ತಾರತಮ್ಯವಾದರೆ ಇನ್ನೊಂದೆಡೆ ಮಹಿಳಾ ದೌರ್ಜನ್ಯ ಪ್ರಕರಣಗಳು. ಮತ್ತೊಂದೆಡೆ ಕುಟುಂಬ ಜವಾಬ್ದಾರಿ ಹೊರಗಡೆಯೂ ದುಡಿಯಬೇಕು ಎಂಬ ಹೆಚ್ಚುವರಿ ಜವಾಬ್ದಾರಿ. ಬದುಕು ಎಂದರೆ ನೋವು ನಲಿವುಗಳ ಸಮ್ಮಿಲನ. ಆದರೆ ಹೆಣ್ಣಿನ ಬದುಕು ಅಂದರೆ ಅದು ಕೇವಲ ನೋವುಗಳ ಸಂಕಲನ. ಬುದ್ಧಿವಂತಿಕೆ, ಪರಿಶ್ರಮ, ಕ್ರೀಯಾಶಿಲತೆ, ನೋವು ನುಂಗುವ ಶಕ್ತಿ ಮತ್ತು ಸಂಘಟನೆಯಲ್ಲಿ ತಾನು ಮುಂದು ಎಂದು ಹೆಣ್ಣು ತೋರಿಸಿಕೊಟ್ಟಿದ್ದಾಳೆ.





