ವಿಷಯದ ವಿವರಗಳಿಗೆ ದಾಟಿರಿ

Posts tagged ‘ಮಹಿಳೆ’

16
ನವೆಂ

ಸ್ತ್ರೀ ಸ್ವಾತಂತ್ರ್ಯ ಮತ್ತು ವರ್ತಮಾನದ ತಲ್ಲಣಗಳು

– ಶ್ರೀಶೈಲ್ ಮಗದುಮ್ಮ

alone-flowers-girls-hd-desktop-backgroundsಬಹುಷಃ ಹಲವಾರು ಶತಮಾನಗಳಿಂದ ಚರ್ಚಿವಾಗುತ್ತಿರುವ ವಿಷಯಗಳಲ್ಲಿ ಸ್ತ್ರೀ ಸ್ವಾತಂತ್ರ್ಯವೂ ಕೂಡ ಒಂದು. ಈಗ ಹಲವಾರೂ ವರ್ಷಗಳಿಂದ ಆಂತರಿಕ ಸ್ವಾತಂತ್ರ್ಯದಿಂದ ಬಾಹ್ಯ ಸ್ವಾತಂತ್ರ್ಯದ ಬಗ್ಗೆ ಹಲವಾರು ಚರ್ಚೆಗಳು ಶುರುವಾಗಿವೆ. ಅದರಲ್ಲಿ ನನ್ನ ಬಟ್ಟೆ ನನ್ನ ಆಯ್ಕೆ, ನಾವು ಯಾವಾಗ ಬೇಕಾದರೂ ಎಲ್ಲಿಗೆ ಬೇಕಾದರೂ ಹೋಗುತ್ತೇವೆ ಅದನ್ನು ಪ್ರಶ್ನಿಸುವ ಅಧಿಕಾರ ಯಾರಿಗೂ ಇಲ್ಲ ಅನ್ನುವ ಚರ್ಚೆಗಳು. ಇರಲಿ ಯಾರು ಯಾವ ಬಟ್ಟೆಯನ್ನಾದರೂ ಹಾಕಲಿ, ಯಾರು ಎಲ್ಲಿಗಾದರೂ ಹೋಗಲಿ ಅದು ಅವರ ಇಷ್ಟ, ಇದನ್ನು ಪ್ರಶ್ನಿಸುವುದು ಕೂಡ ಆಕ್ಷೇಪಾರ್ಹವಾದದ್ದು. ಆದರೆ ಈ ವಾದವನ್ನು ಇಟ್ಟುಕೊಂಡು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಸಮಾಜವನ್ನು ಯಾವ ಕಡೆಗೆ ತಗೆದುಕೊಂಡು ಹೋಗುತ್ತಿದ್ದಾರೆ ಎನ್ನುವ ಕಡೆ ಗಮನಹರಿಸಬೇಕಾಗಿದೆ. ಮತ್ತಷ್ಟು ಓದು »

8
ಮಾರ್ಚ್

ಮಹಿಳಾ ಅಸ್ತಿತ್ವದ ವಿವಿಧ ನೆಲೆಗಳು

– ರಾಜಕುಮಾರ.ವ್ಹಿ.ಕುಲಕರ್ಣಿ, ಮುಖ್ಯಗ್ರಂಥಪಾಲಕ
ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ, ಬಾಗಲಕೋಟ

ಮಾರ್ಚ್ 8 ಅಂತರಾಷ್ಟ್ರೀಯ ಮಹಿಳಾ ದಿನದ ನಿಮಿತ್ಯ ಈ ಲೇಖನ.

ಅಂತರಾಷ್ಟ್ರೀಯ ಮಹಿಳಾ ದಿನರಾಮಾಯಣದಲ್ಲಿ ಊರ್ಮಿಳೆ ಎನ್ನುವ ಪಾತ್ರವೊಂದಿದೆ. ಈಕೆ ಲಕ್ಷ್ಮಣನ ಹೆಂಡತಿ. ರಾಮ ಕಾಡಿಗೆ ಹೋಗುವ ಸಂದರ್ಭ ಅಣ್ಣನನ್ನು ಅನುಸರಿಸಿ ಲಕ್ಷ್ಮಣ ಸಹ ಕಾಡಿಗೆ ತೆರಳುತ್ತಾನೆ. ಕಾಡಿಗೆ ಹೋಗುತ್ತಿರುವ ಲಕ್ಷ್ಮಣನಿಗೆ ತನ್ನನ್ನೇ ನಂಬಿಕೊಂಡ ಜೀವವೊಂದಿದೆ ಎನ್ನುವ ನೆನಪಾಗುವುದಿಲ್ಲ. ಹೆಂಡತಿ ಸೀತೆಯನ್ನೂ ತನ್ನೊಂದಿಗೆ ಕಾಡಿಗೆ ಕರೆದೊಯ್ಯುತ್ತಿರುವ ರಾಮನಿಗೂ ತನ್ನ ತಮ್ಮ ಲಕ್ಷ್ಮಣನಿಗೂ ಪತ್ನಿ ಇರುವಳೆಂಬ ಸತ್ಯ ಗೋಚರವಾಗುವುದಿಲ್ಲ. ರಾವಣ ಸೀತೆಯನ್ನು ಅಪಹರಿಸಿದಾಗ ವಿರಹ ವೇದನೆಯಿಂದ ಬಳಲುವ ರಾಮ ತಮ್ಮ ಲಕ್ಷ್ಮಣನೆದುರು ಸೀತೆಯ ಅಗಲುವಿಕೆಯಿಂದಾದ ದುಃಖವನ್ನು ತೋಡಿಕೊಳ್ಳುತ್ತಾನೆ. ದಾರಿಯಲ್ಲಿ ಎದುರಾಗುವ ಮರ,ಗಿಡ,ಬಳ್ಳಿ,ನದಿ,ಬೆಟ್ಟಗಳನ್ನು ಮಾತನಾಡಿಸಿ ನನ್ನ ಸೀತೆಯನ್ನು ಕಂಡಿರಾ ಎಂದು ಪ್ರಲಾಪಿಸುತ್ತಾನೆ. ಹೀಗೆ ದು:ಖಿಸುತ್ತಿರುವ ರಾಮನಿಗೆ ಲಕ್ಷ್ಮಣನೂ ವಿರಹಾಗ್ನಿಯಿಂದ ಬಳಲುತ್ತಿರಬಹುದೆನ್ನುವ ಕಿಂಚಿತ್ ಸಂದೇಹವೂ ಮನಸ್ಸಿನಲ್ಲಿ ಸುಳಿಯದೇ ಹೋಗುತ್ತದೆ.ರಾಮ ರಾವಣನನ್ನು ಜಯಿಸಿ ಹದಿನಾಲ್ಕು ವರ್ಷಗಳ ವನವಾಸವನ್ನು ಪೂರ್ಣಗೊಳಿಸಿ ಸೀತೆ ಮತ್ತು ಲಕ್ಷ್ಮಣನೊಂದಿಗೆ ಅಯೋಧ್ಯೆಗೆ ಮರಳುತ್ತಾನೆ. ಹಾಗಾದರೆ ಆ ಹದಿನಾಲ್ಕು ವರ್ಷಗಳ ಕಾಲ ಪತಿಯಿಂದ ದೂರಾಗಿ ಊರ್ಮಿಳೆ ಅನುಭವಿಸಿದ ವೇದನೆ ಮತ್ತು ಸಂಕಟಗಳ ಕಥೆ ಏನು?. ರಾಮಾಯಣವನ್ನು ಓದುತ್ತಿರುವ ಘಳಿಗೆ ಓದುಗ ಊರ್ಮಿಳೆಯ ಪಾತ್ರದೊಂದಿಗೆ ಮುಖಾಮುಖಿಯಾವುದೇ ಇಲ್ಲ. ಭಾತೃತ್ವದ ಪ್ರಶ್ನೆ ಎದುರಾದಾಗ ಅದಕ್ಕೆ ಶ್ರೇಷ್ಠ ಉದಾಹರಣೆಯಾಗಿ ಲಕ್ಷ್ಮಣನ ಹೆಸರನ್ನು ಹೇಳುವ ನಾವು ಊರ್ಮಿಳೆಯನ್ನು ಮರೆತು ಬಿಡುತ್ತೇವೆ. ಹಾಗಾದರೆ ಊರ್ಮಿಳೆಯದೂ ಶ್ರೇಷ್ಠ ತ್ಯಾಗವಲ್ಲವೇ? ಹದಿನಾಲ್ಕು ವರ್ಷಗಳ ಕಾಲ ಗಂಡನಿಂದ ದೂರವೇ ಉಳಿದು ಆತನನ್ನು ಅಣ್ಣನ ಸೇವೆಗಾಗಿ ಪ್ರಾಂಜಲ ಮನಸ್ಸಿನಿಂದ ಕಳಿಸಿಕೊಟ್ಟ ಊರ್ಮಿಳೆಯ ವ್ಯಕ್ತಿತ್ವಕ್ಕೆ ಪುರುಷ ಪ್ರಧಾನ ವ್ಯವಸ್ಥೆಯಲ್ಲಿ ದೊರೆಯಬೇಕಾದ ಮನ್ನಣೆ ಸಿಗಲೇ ಇಲ್ಲ. ಅಂದರೆ ಮಹಿಳೆಯನ್ನು ಪುರುಷ ಪ್ರಧಾನ ನೆಲೆಯಲ್ಲಿ ಶೋಷಣೆಗೊಳಪಡಿಸುತ್ತ ಬಂದಿರುವುದಕ್ಕೆ ನಮ್ಮ ಪ್ರಾಚೀನ ಪರಂಪರೆಯ ಒತ್ತಾಸೆಯಿದೆ ಎಂದರ್ಥ.ರಾಮಾಯಣ ಹಾಗೂ ಮಹಾಭಾರತದ ಕಾಲದಿಂದಲೂ ಸ್ತ್ರೀ ಶೊಷಣೆಯ ವಸ್ತುವಾಗಿಯೇ ಬಿಂಬಿತವಾಗುತ್ತ ಬಂದಿರುವಳು.

ಇತಿಹಾಸದ ಪಾತ್ರವೊಂದು ಸ್ತ್ರೀ ಶೋಷಣೆಯ ವಸ್ತುವಾಗಿ ಪುರುಷ ಪ್ರಧಾನ ವ್ಯವಸ್ಥೆಗೆ ಒತ್ತಾಸೆಯಾಗಿ ನಿಂತಾಗ ಇತಿಹಾಸದ ಮತ್ತೊಂದು ಪಾತ್ರವಾದ ಅಕ್ಕ ಮಹಾದೇವಿಯದು ಪುರುಷ ಪ್ರಧಾನ ವ್ಯವಸ್ಥೆಯನ್ನು ಧಿಕ್ಕರಿಸಿ ಹೊಸ ವ್ಯವಸ್ಥೆಯನ್ನು ಕಟ್ಟುವ ತಹತಹಿಕೆ. ಚೆನ್ನಮಲ್ಲಿಕಾರ್ಜುನನನ್ನೆ ತನ್ನ ಪತಿಯೊಂದು ಮಾನಸಿಕವಾಗಿ ಪರಿಭಾವಿಸಿದ ಅಕ್ಕ ಕೌಶಿಕ ರಾಜನ ಕಾಮನೆಗಳನ್ನು ಮೆಟ್ಟಿನಿಂತು ಮಹಿಳಾ ವಿಮೋಚನೆಗೆ ಹೊಸ ದಾರಿ ತೋರುತ್ತಾಳೆ. ಒಂದು ಪಾತ್ರದ ಮೂಲಕ ಸ್ತ್ರೀ ಶೊಷಣೆಗೆ ಸಾಕ್ಷಿಯಾದ ಇತಿಹಾಸ ಮತ್ತೊಂದು ಪಾತ್ರದ ಮೂಲಕ ಸ್ತ್ರೀ ವಿಮೋಚನೆಗೂ ಸಾಕ್ಷಿಯಾದದ್ದು ಇತಿಹಾಸದ ಮಹತ್ವಗಳಲ್ಲೊಂದು.ಇತಿಹಾಸದಿಂದ ಬಿಡುವಷ್ಟೇ ಪಡೆಯುವುದು ಕೂಡ ಬಹುಮುಖ್ಯವಾದದ್ದು.ನಮ್ಮ ನೆಲದ ಮಹಿಳೆಯರು ಅಕ್ಕ ಮಹಾದೇವಿಯ ಧೋರಣೆ ಹಾಗೂ ಪರುಷ ಸಮಾಜವನ್ನು ಧಿಕ್ಕರಿಸಿ ನಿಂತ ಆಕೆಯ ಮನೋಸ್ಥೈರ್ಯವನ್ನು ಬಳುವಳಿಯಾಗಿ ಪಡೆದು ಸ್ತ್ರೀ ವಿಮೋಚನೆಯ ಅನೇಕ ಸ್ಥಿತ್ಯಂತರಗಳಿಗೆ ಪ್ರಯತ್ನಿಸಿದರು.ಒಂದು ರೀತಿಯಲ್ಲಿ ಮಹಿಳೆ ತನ್ನ ಅಸ್ಮಿತೆಯನ್ನು (ಅಸ್ತಿತ್ವ) ವಿವಿಧ ನೆಲೆಗಳಲ್ಲಿ ಕಂಡುಕೊಳ್ಳಲು ಮಾಡಿದ ಪ್ರಯತ್ನವೂ ಅದಾಗಿತ್ತು.
ಮತ್ತಷ್ಟು ಓದು »

25
ಮಾರ್ಚ್

ಸಲ್ಲದ ವಾದದಲ್ಲಿ ಬಂಧಿಯಾದ ಸಂಕಮ್ಮ

– ಡಾ. ಶ್ರೀಪಾದ ಭಟ್,ಸಹಾಯಕ ಪ್ರಾಧ್ಯಾಪಕ

ಡಾ. ಡಿ ವಿ ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರ, ತುಮಕೂರು ವಿಶ್ವವಿದ್ಯಾನಿಲಯ, ತುಮಕೂರು

ಮಲೆ ಮಾದೇಶ್ವರ ಕಾವ್ಯಕಥನದ ರೀತಿ, ಬೃಹತ್ತು-ಮಹತ್ತು ಮತ್ತು ಕಾವ್ಯಗುಣಗಳಿಂದ ಕನ್ನಡ ಜನಪದ ಮಹಾಕಾವ್ಯಗಳಲ್ಲಿ ಅಗ್ರಮಾನ್ಯವಾದ ಮಲೆಮಾದೇಶ್ವರ ಕಾವ್ಯದ ಅತ್ಯಂತ ಪ್ರಮುಖ ಭಾಗ ಸಂಕಮ್ಮನ ಸಾಲು. ಈ ಕಾವ್ಯ ಹಾಡುವವರು, ದೇವರಗುಡ್ಡರು ಅಥವಾ ಕಂಸಾಳೆಯವರು ಸಂಕಮ್ಮನ ಸಾಲನ್ನು ಸಾಮಾನ್ಯವಾಗಿ ಹಾಡಿಯೇ ಹಾಡುತ್ತಾರೆ. ಕೋರಣ್ಯಕ್ಕೆ ಬಂದಾಗ ಕೆಲವೊಮ್ಮೆ ಜನರೇ ಬೇಡಿಕೆ ಇಟ್ಟು ಈ ಸಾಲನ್ನು ಹಾಡಿಸುವುದೂ ಇದೆ. ಈ ಕಥೆಯನ್ನು ತನ್ಮಯರಾಗಿ ಕೇಳುವ ಜನ ಸಂಕಮ್ಮನ ಕಷ್ಟ ಕೋಟಲೆ ಕೇಳಿ ಕಣ್ಣೀರು ಇಡುವುದೂ ಇದೆ. ಈ ಕಾವ್ಯವನ್ನು ಮೊದಲ ಬಾರಿ ಸಮಗ್ರವಾಗಿ ಸಂಗ್ರಹಿಸಿದ ಪಿ ಕೆ ರಾಜಶೇಖರ್ ಅವರು ಕ್ಷೇತ್ರಕಾರ್ಯದ ಸಂದರ್ಭದಲ್ಲಿ ತಮಗಾದ ಇಂಥ ಅನುಭವವನ್ನು ತಮ್ಮ ಸಂಗ್ರಹದಲ್ಲಿ ದಾಖಲಿಸಿದ್ದಾರೆ.

ಕೇಳಲು ಕಷ್ಟವಾದರೂ ಜನಪದರು ಬೇಡಿ ಬಯಸುವ ವಿಶಿಷ್ಟ ಕಥಾ ಭಾಗ ಇದು ಎಂಬುದರಲ್ಲಿ ಅನುಮಾನವಿಲ್ಲ. ಮಾದೇಶ್ವರನ ಹುಟ್ಟಿನ ಸಾಲು, ಶ್ರವಣ ದೊರೆ ಸಾಲು, ಬೇವಿನ ಹಟ್ಟಿ ಕಾಳಮ್ಮನ ಸಾಲುಗಳೂ ಆಸಕ್ತಿದಾಯಕವಾದವಾದರೂ ಜನರಿಗೆ ಇವು ಸಂಕಮ್ಮನ ಸಾಲಿನಷ್ಟು ಪ್ರಿಯವಾಗಿಲ್ಲ. ಸಂಕಮ್ಮನಲ್ಲಿ ಒಂದು ಬಗೆಯ ಆದರ್ಶವನ್ನು ಜನಪದರು ಬಹುಶಃ ಕಂಡಿರುವುದೇ ಇದಕ್ಕೆ ಕಾರಣವಿರಬೇಕು. ಗಂಡ ನೀಲಯ್ಯನ ವಿರುದ್ಧ ಸಂಕಮ್ಮನೇನೂ ಬಂಡೇಳುವುದಿಲ್ಲ; ಅವನ ಕ್ರಿಯೆಗೆ ಪ್ರತಿಕ್ರಿಯೆಯನ್ನೂ ತೋರುವುದಿಲ್ಲ; ತಂತ್ರಕ್ಕೆ ಪ್ರತಿ ತಂತ್ರವನ್ನೂ ಹೆಣೆಯುವುದಿಲ್ಲ. ಆಕೆಯ ವೃತ್ತಾಂತದಲ್ಲಿ ಕಾಣುವುದು ಅವಳ ತಾಳ್ಮೆ, ಸಹನೆ ಮತ್ತು ಕ್ಷಮೆ. ಬಹುಶಃ ಜನಪದರು ಪ್ರತಿಪಾದಿಸುವ ಇಂಥ ಆದರ್ಶದ ಗುಣಗಳು ಈ ಸಾಲುಗಳಲ್ಲಿ ಚಿತ್ರಿತವಾದ ಕಾರಣ ಜನಪದರು ಇದನ್ನು ಹೆಚ್ಚಾಗಿ ಬಯಸಲು ಕಾರಣವಾಗಿರಬಹುದು.

ಮತ್ತಷ್ಟು ಓದು »

7
ಫೆಬ್ರ

ಸಮ್ಮೇಳನದ ವೇದಿಕೆಯಲ್ಲಿ ಬರಹಗಾರರೋಬ್ಬರನ್ನು ನಿಂದಿಸುವುದು ಕನ್ನಡ ಮತ್ತು ಸಮ್ಮೇಳನದ ಅಪಮಾನವಲ್ಲವೆ ?

– ಅನಿಲ್ ಚಳಗೇರಿ 

ಭೈರಪ್ಪ ಬೈಗುಳ ಗೋಷ್ಠಿಹೌದು, ಅದು ಪ್ರಸಕ್ತ ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆಯಲ್ಲಿ ಮಹಿಳೆಯರ ಸಮಾನತೆ ಮತ್ತು ಸವಾಲು ಅನ್ನುವ ವಿಷಯದ ಕುರಿತು ಚರ್ಚೆ ನಡೆಯಬೇಕಿತ್ತು. ಆದರೆ ಅಲ್ಲಿ ನಡೆದಿದ್ದು ಮಾತ್ರ ಕರ್ನಾಟಕ ಕಂಡ ಅಧ್ಭುತ ಸಾಹಿತಿಗಳಲ್ಲಿ ಒಬ್ಬರಾದ  ಎಸ್ ಎಲ್ ಭೈರಪ್ಪನವರ ಬಗ್ಗೆ ಅಪಪ್ರಚಾರ , ಹಿಂದೂ ವಿರೋಧಿ ಹೇಳಿಕೆಗಳು, ಬ್ರಾಹ್ಮಣರ ಬಗ್ಗೆ ಕೆಳಮಟ್ಟದ ಆರೋಪ , ಪುರೋಹಿತಶಾಹಿಯ ಹೆಸರಿನಲ್ಲಿ ಈಡೀ ಜನಾಂಗವನ್ನೇ ದೂಷಿಸುವ ಪ್ರಯತ್ನ . ಈ ದೂಷಿಸುವ ಭರದಲ್ಲಿ ಮಹಿಳೆಯರ ಹಕ್ಕುಗಳ ಬಗ್ಗೆ, ಸಮಾಜದಲ್ಲಿ ಮಹಿಳೆಯರು ಎದುರಿಸುತ್ತಿರುವ ಮುಖ್ಯ ವಿಷಯಗಳ ಬಗ್ಗೆ ಚರ್ಚೆಯೇ ಆಗಲಿಲ್ಲ. ನೆರದಿದ್ದ ಅನೇಕ ಕವಿಯತ್ರಿಯರು ಭೈರಪ್ಪನವರನ್ನು ನೇರವಾಗಿ ವೈಯ್ಯಕ್ತಿಕವಾಗಿ ನಿಂದಿಸಿದರು. ಅಷ್ಟೇಯಲ್ಲದೇ ಇಂತಹ ಕೆಳ ಮಟ್ಟದ ಭಾಷಣಗಳು ಮತ್ತು ವ್ಯಕ್ತಿ ನಿಂದನೆಯನ್ನು ಕೇಕೆ, ಶಿಳ್ಳೆ ಮುಖಾಂತರ ಆನಂದಿಸುವ ಜನರು ಆ ಕಾರ್ಯಕ್ರಮಗಳಲ್ಲಿ ಉಪಸ್ತಿತರಿದ್ದರು. ಕನ್ನಡ ಹಿರಿಮೆ, ಕನ್ನಡ ಕಂಪು ಹಾಗು ಮಹಿಳೆಯರ ಪರ ಧ್ವನಿಎತ್ತಬೇಕಾದ ವೇದಿಕೆಯೊಂದರಲ್ಲಿ ಕನ್ನಡದ ಕಣ್ಮಣಿಯನ್ನು ನಿಂದಿಸುವದು ಸಾಹಿತ್ಯ ಸಮ್ಮೇಳನಕ್ಕೆ ಮತ್ತು ಕನ್ನಡಕ್ಕೆ ಮಾಡುವ ಅಪಮಾನವಲ್ಲವೆ??

ಭೈರಪ್ಪನವರ ನಿಂದನೆ ಮುಗಿಸಿ ಮುಂದುವರೆದ ಕವಿಯತ್ರಿಯರು ದೇವರ ಹೆಸರಲ್ಲಿ, ಪುರೋಹಿತಶಾಹಿಯ ಹೆಸರಲ್ಲಿ ಮೇಲ್ವರ್ಗದವರು ಬೇರೆಯವರನ್ನು ಲೂಟಿ ಮಾಡುತ್ತಾರೆಂದು ದೂಷಿಸಿದರು. ಈ ರೀತಿಯ ದೂಷಣೆಯಿಂದ ಮತ್ತು ಮೇಲ್ವರ್ಗದವರನ್ನು ಬಾಯಿಗೆ ಲಗಾಮಿಲ್ಲದೆ ಬಯ್ಯುವುದರಿಂದಲೇ ಕೆಲವರ ಮನೆ ನಡೆದರೆ ಇನ್ನು ಕೆಲವರಿಗೆ ಮಾಧ್ಯಮಗಳಲ್ಲಿ ಸ್ಥಳ ದೊರಕುವುದೆಂದು ಚೆನ್ನಾಗಿ ಅರಿತುಕೊಂಡಿದ್ದಾರೆ. ಬ್ರಾಹ್ಮಣ ವಿರೋಧಿ ಮನೋಭಾವವನ್ನು ಹೆಚ್ಚಿಸಲು ಬ್ರಾಹ್ಮಣ್ಯ ದೇಶಕ್ಕೆ ಅಂಟಿಕೊಂಡ ಒಂದು ದೊಡ್ಡ ಶಾಪ ಅನ್ನುವ ಅರ್ಥರಹಿತ ಮಾತುಗಳನ್ನಾಡಿ ಜೊತೆಗೆ ಬುದ್ಧ ಕೂಡ ಬ್ರಾಹ್ಮಣರಿಂದ ದೂರವಿರಬೇಕಂದು ಎಂದು ಕರೆ ನೀಡಿದ್ದರಂತೆ !.ಅದ್ಯಾವ ಕೃತಿಯಲ್ಲಿ ಬುದ್ದ ಹೀಗೆ ಹೇಳಿದ್ದೆನೆಂದು ಆ ಕವಿಯತ್ರಿಗಳೇ ಬಲ್ಲರು..

ಮತ್ತಷ್ಟು ಓದು »

6
ನವೆಂ

ವೇಶ್ಯಾವೃತ್ತಿ: ಮಹಿಳೆಯರ ರಕ್ಷಣೆಗೆ ಮಹಿಳೆಯರ ಅತ್ಯಾಚಾರವೇ?

– ತುರುವೇಕೆರೆ ಪ್ರಸಾದ್

ಮಹಿಳಾ ದೌರ್ಜನ್ಯವೇಶ್ಯಾವೃತ್ತಿಯನ್ನು ಕಾನೂನು ಬದ್ಧಗೊಳಿಸಬೇಕು. ಇದರಿಂದ ಸ್ವಲ್ಪ ಮಟ್ಟಿಗೆ ಸ್ತ್ರೀಯರ ಮೇಲಿನ ದೌರ್ಜನ್ಯಗಳು ಹಾಗೂ ಅತ್ಯಾಚಾರಗಳು ನಿಯಂತ್ರಣಕ್ಕೆ ಬರುತ್ತವೆ ಎಂದು ಹಲವರು ಅಭಿಪ್ರಾಯಪಡುತ್ತಾರೆ. ಪ್ರಪಂಚದ ಹಲವು ಕಡೆ ನಡೆಸಿದ ಸಮೀಕ್ಷೆ ಹಾಗೂ ಅಧ್ಯಯನಗಳಲ್ಲಿ ಇದಕ್ಕೆ ಪೂರಕವಾದ ಅಂಕಿ ಅಂಶಗಳು ಸಿಕ್ಕಿವೆ. ಅವುಗಳಲ್ಲಿ ಕೆಲವನ್ನು ಉದಾಹರಿಸುವುದಾದರೆ ಎನ್‍ಬಿಇಎಲ್ ಅಧ್ಯಯನದ ಪ್ರಕಾರ ರೋಡ್ ದ್ವೀಪದಲ್ಲಿ 2003-2009ರ ಅವಧಿಯಲ್ಲಿ ವೇಶ್ಯಾ ವೃತ್ತಿಯನ್ನು ಕಾನೂನುಬದ್ಧಗೊಳಿಸಿದಾಗ ಶೇ.39 ರಷ್ಟು ಅತ್ಯಾಚಾರ ಪ್ರಕರಣಗಳು ಕಡಿಮೆಯಾಗಿದ್ದವು. ಗೊನೇರಿಯಾ ಕಾಯಿಲೆಯ ಹರಡುವಿಕೆ ಪ್ರಮಾಣ    ಶೇ.45ರಷ್ಟು ಕಡಿಮೆಯಾಗಿತ್ತು. ಬೈಲಾರ್ ವಿಶ್ವವಿದ್ಯಾಲಯದ ಸಂಪನ್ಮೂಲ ವ್ಯಕ್ತಿಗಳಾದ ಸ್ಕಾಟ್ ಕನ್ನಿಂಗ್ ಹ್ಯಾಮ್ ಮತ್ತು ಮಾನಿಷಾ ಶಾ ವೇಶ್ಯೆಯರ ಮೇಲಿನ ಕ್ರಿಮಿನಲ್ ಮೊಕದ್ದಮೆಗಳನ್ನು ಹಿಂದೆ ತೆಗೆದ ಪರಿಣಾಮ ಹೆಂಗಸರ ಮೇಲಿನ ಅಪರಾಧ ಹಾಗೂ ದೌರ್ಜನ್ಯಗಳ ಸಂಖ್ಯೆ ಇಳಿಮುಖವಾಗಿತ್ತು ಎಂಬುದನ್ನು ಗುರುತಿಸಿದ್ದಾರೆ. ನಾರ್ತ್ ಈಸ್ರ್ಟನ್ ಸ್ಟೇಟ್ ಯೂನಿವಸಿಟಿಯ ಕಿರ್ಬಿ ಆರ್. ಕಂಡೀಫ್ ಅಮೇರಿಕಾದಲ್ಲಿ ವೇಶ್ಯಾವೃತ್ತಿಯನ್ನು ಕಾನೂನುಬದ್ಧಗೊಳಿಸಿದರೆ       ಶೇ.25ರಷ್ಟು ಅಂದರೆ 25ಸಾವಿರ ಅತ್ಯಾಚಾರ ಪ್ರಕರಣಗಳು ಕಡಿಮೆಯಾಗಬಹುದೆಂದು ಬಹಳ ಹಿಂದೆಯೇ ಸಲಹೆ ನೀಡಿದ್ದರು. ಕ್ವೀನ್ಸ್‍ಲ್ಯಾಡ್‍ನಲ್ಲಿ ಕಾನೂನುಬದ್ಧವಾಗಿ ನಡೆಸುತ್ತಿದ್ದ ವೇಶ್ಯಾಗೃಹಗಳನ್ನು ಮುಚ್ಚಿದಾಗ ಅಲ್ಲಿನ ಅತ್ಯಾಚಾರ ಪ್ರಕರಣಗಳ ಪ್ರಮಾಣ ಶೇ.149ಕ್ಕೆ ಏರಿತು ಎಂದು ಲಿಂಡಾ ರಿಚ್‍ಮ್ಯಾನ್ ಅಭಿಪ್ರಾಯ ಪಡುತ್ತಾರೆ. 2004ರಲ್ಲಿ ಜರ್ಮನಿಯಲ್ಲಿ ವೇಶ್ಯಾವೃತ್ತಿಯನ್ನು ಕಾನೂನುಬದ್ಧಗೊಳಿಸಿ ನೊಂದಾಯಿಸಿದ ವೇಶ್ಯೆಯರಿಗೆ ಆರೋಗ್ಯವಿಮೆ, ನಿವೃತ್ತಿ ವೇತನ ಇತರೆ ಸೌಲಭ್ಯಗಳನ್ನು ನೀಡುವುದಾಗಿ ಘೋಷಿಸಲಾಗಿತ್ತು. ಇದರಿಂದ ಪ್ರವಾಸೋದ್ಯಮ ಬೃಹತ್ತಾಗಿ ಬೆಳೆಯಿತು. ಹೆಂಗಸರಿನ ಮೇಲಿನ ಅಪರಾಧ ಪ್ರಕರಣಗಳು ಗಣನೀಯ ಸಂಖ್ಯೆಯಲ್ಲಿ ಕಡಿಮೆಯಾದವು. ಅದರೆ ಕೇವಲ 44 ಮಂದಿ ವೃತ್ತಿನಿರತ ಮಹಿಳೆಯರು ಮಾತ್ರವೇ ಸರ್ಕಾರದ ಸವಲತ್ತು ಪಡೆದರು. ಇದೇ ಅವಧಿಯಲ್ಲಿ ಜರ್ಮನ್ ಧೋರಣೆಗೆ ವಿರುದ್ಧವಾಗಿ ಸ್ವೀಡನ್ ವೇಶ್ಯಾವೃತ್ತಿಯನ್ನು ಸಂಪೂರ್ಣ ನಿಯಂತ್ರಿಸುವ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿತು. ಇದರ ಪರಿಣಾಮ ಸ್ವೀಡನ್‍ನಲ್ಲಿ ಮಹಿಳೆಯರ ಮೇಲಿನ ಅಪರಾಧಗಳ ಸಂಖ್ಯೆ ಏರುಪ್ರಮಾಣ ದಾಖಲಿಸಿತು. ವೇಶ್ಯಾವೃತ್ತಿಯಲ್ಲಿ ತೊಡಗುವವರು ವಯಸ್ಕರಾಗಿರಬೇಕು ಮತ್ತು ಯಾವುದೇ ಒತ್ತಡಕ್ಕೆ ಬಲಿಯಾಗದಂತೆ ಈ ವೃತ್ತಿಯನ್ನು ಕಾನೂನು ಬದ್ಧಗೊಳಿಸಬಹುದು. ಇದರಿಂದ ಭಾರತದಲ್ಲಿ ಸಹ ಅತ್ಯಾಚಾರ ಪ್ರಕರಣಗಳು ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತವೆ ಎಂದು ಖ್ಯಾತ ಪತ್ರಕರ್ತ ದಿ. ಕುಶ್ವಂತ್‍ಸಿಂಗ್ ಸಹ ಅಭಿಪ್ರಾಯಪಟ್ಟಿದ್ದರು.

ಮತ್ತಷ್ಟು ಓದು »

25
ಜುಲೈ

ಅತ್ಯಾಚಾರ: ಹುಯಿಲೆಬ್ಬಿಸುವುದೇಕೆ?

– ಡಾ. ಶ್ರೀಪಾದ ಭಟ್

ಸಹಾಯಕ ಪ್ರಾಧ್ಯಾಪಕ,ತುಮಕೂರು ವಿಶ್ವವಿದ್ಯಾನಿಲಯ, ತುಮಕೂರು, ಕರ್ನಾಟಕ

Stop Rapeಕಳೆದ ಒಂದೆರಡು ವಾರಗಳಿಂದ ಯಾವ ಮಾಧ್ಯಮ ಓದಿದರೂ ನೋಡಿದರೂ ಅತ್ಯಾಚಾರದ್ದೇ ಸುದ್ದಿ. 2012ರಲ್ಲಿ ದೆಹಲಿಯಲ್ಲಿ ನಿರ್ಭಯಾಳ ಮೇಲೆ ನಡೆದ ಹೇಯ ಕೃತ್ಯದ ತರುವಾಯ ಇಂಥ ಪ್ರಕರಣಗಳು ನಿರ್ಭಯವಾಗಿ ಹೆಚ್ಚು ಸುದ್ದಿಯಾಗುತ್ತಿವೆ. ಇದು ಗುಣವೋ ದೋಷವೋ ಗೊತ್ತಿಲ್ಲ. ಈಚೆಗೆ ಬೆಂಗಳೂರಿನ ಶಾಲೆಯೊಂದರಲ್ಲಿ ಆರು ವರ್ಷದ ಮಗುವಿನ ಮೇಲೆ ಅತ್ಯಾಚಾರ ನಡೆದ ಮೇಲೆ ಕಾಕತಾಳೀಯವೋ ಎಂಬಂತೆ ಬೆಂಗಳೂರಿನಲ್ಲಿ ನಿತ್ಯ ಒಂದೆರಡು, ರಾಜ್ಯಾದ್ಯಂತ ಒಂದೇದಿನ ಎಂಟು ಇಂಥ ಪ್ರಕರಣಗಳು ವರದಿಯಾದವು. ಮಾಧ್ಯಮಗಳಂತೂ ಅತ್ಯಾಚಾರ ಎಲ್ಲಿಂದ ಎಷ್ಟುಹೊತ್ತಿಗೆ ಬರುತ್ತದೆ ಎಂದು ಕಾದು ಕೂತಿರುವವರಂತೆ ಅಲ್ಲೊಂದು ಅತ್ಯಾಚಾರವಂತೆ ಎಂಬ ಅಂತೆ ಕಂತೆಯನ್ನೂ ಅತ್ಯಾಚಾರವಾಗಿದೆ ಎಂದೇ ಬಿಂಬಿಸಿ ಅವಸರದಿಂದ ವರದಿ ಮಾಡಿಯೇ ಮಾಡಿದರು. ಕಳೆದವಾರ ಬೇರೆಲ್ಲ ಕಡೆಯಿಂದ ಇಂಥ ಸುದ್ದಿ ಬಂದಂತೆ ತುಮಕೂರಿನಿಂದಲೂ ಸುದ್ದಿ ಬಂತು. ದಿನ ಕಳೆದ ಮೇಲೆ ಆ ಹುಡುಗಿಯೇ ಠಾಣೆಗೆ ಹೋಗಿ ನನ್ನ ಮೇಲೆ ಅತ್ಯಾಚಾರವಾಗಿಲ್ಲ ಎಂದು ಹೇಳಿಕೆಕೊಟ್ಟಳು! ಸತ್ಯಾಸತ್ಯತೆ ಏನಿದೆಯೋ?

ಇಂಥ ಸುದ್ದಿಗಳ ಪ್ರಸಾರಕ್ಕೆ ಯಾಕಿಷ್ಟು ಅವಸರ? ಇದೊಂದು ಕ್ರೇಜು ಹುಟ್ಟಿಸುವ ಸಂಗತಿಯೇ? ಅಥವಾ ಇಂಥ ವರದಿಯಿಂದ ದೌರ್ಜನ್ಯಕ್ಕೆ ಒಳಗಾದವರಿಗೆ ನ್ಯಾಯ ಕೂಡಲೇ ದೊರೆತೇಬಿಡುತ್ತದಾ? ಇಂಥ ವರದಿಯಿಂದ ಪ್ರಯೋಜನ ಯಾರಿಗೆ? ಕೆಲವರ ಸುದ್ದಿ ಚಪಲ ತೀರಬಹುದು ಅಷ್ಟೆ.

ಮತ್ತಷ್ಟು ಓದು »

17
ಜುಲೈ

ಶಾ ಬಾನು,ಫೆಮಿನಿಸಂ,ಸೆಕ್ಯುಲರಿಸಂ ಮತ್ತು ಸಮಾನ ನಾಗರೀಕ ಸಂಹಿತೆ

– ರಾಕೇಶ್ ಶೆಟ್ಟಿ

Uniform Civil Codeದೇಶದಲ್ಲಿರುವ ಷರಿಯತ್ ಕೋರ್ಟುಗಳಿಗೆ ಕಾನೂನು ಮಾನ್ಯತೆಯಿಲ್ಲ.ಫತ್ವಾ ಹೊರಡಿಸುವುದು ಕಾನೂನು ಬಾಹಿರ ಎಂದು ಸುಪ್ರೀಂ ಕೋರ್ಟು ಇತ್ತೀಚೆಗೆ ನೀಡಿದ ತೀರ್ಪು ಮತ್ತೊಮ್ಮೆ “ಸಮಾನ ನಾಗರೀಕ ಸಂಹಿತೆ”ಯ ಜಾರಿಯ ಬಗ್ಗೆ ಚರ್ಚೆ ಶುರುವಾಗುವಂತೆ ಮಾಡಿದೆ. ಸಮಾನ ನಾಗರೀಕ ಸಂಹಿತೆಯ ಜೊತೆ ಜೊತೆಗೆ ಈ ತೀರ್ಪಿನ ಜೊತೆಗೆ ನೆನಪಾಗುವುದು ೮೦ರ ದಶಕದ ’ಶಾ ಬಾನು ಪ್ರಕರಣ’

ಏನಿದು ಶಾ ಬಾನು ಪ್ರಕರಣ : ಇಂದೋರಿನ ವಕೀಲ ಮೊಹಮ್ಮದ್ ಅಹ್ಮದ್ ಖಾನ್ ನ ಪತ್ನಿ ಶಾ ಬಾನು.ಮದುವೆಯಾಗಿ ೧೪ ವರ್ಷಗಳ ನಂತರ ಎರಡನೇ ಮದುವೆಯಾದ ಅಹ್ಮದ್ ಖಾನ್.ಇಬ್ಬರು ಹೆಂಡಿರ ಜೊತೆ ಸಂಸಾರ ನಡೆಸಿ ಕಡೆಗೆ ಕೆಲ ವರ್ಷಗಳ ನಂತರ ಐದು ಮಕ್ಕಳ ತಾಯಿಯಾಗಿದ್ದ ಶಾ ಬಾನುವನ್ನು ಆಕೆಯ ೬೨ನೇ ವಯಸ್ಸಿನಲ್ಲಿ ಆಕೆಯ ಐದು ಮಕ್ಕಳ ಜೊತೆಗೆ ಹೊರಹಾಕಿದ.ಒಪ್ಪಂದದಂತೆ ಮಾಸಿಕ ೨೦೦ ರೂ ಜೀವನಾಂಶವನ್ನು ಆಕೆಗೆ ನೀಡದಿದ್ದರ ವಿರುದ್ಧ ಸುಪ್ರೀಂ ಕೋರ್ಟಿನಲ್ಲಿ ಏಪ್ರಿಲ್ ೧೯೭೮ರಲ್ಲಿ ದಾವೆ ಹೂಡುತ್ತಾರೆ ಶಾ ಬಾನು.ಮಾಸಿಕ ೫೦೦ರೂ ಜೀವನಾಂಶ ಬೇಕೆಂದು ಕೇಳಿಕೊಳ್ಳುತ್ತಾರೆ.

ನವೆಂಬರ್ ೧೯೭೮ರಲ್ಲಿ ಖಾನ್ ಶಾ ಬಾನು ಅವರಿಗೆ ತಲಾಖ್ ನೀಡಿ,ಈಗ ಆಕೆ ನನ್ನ ಪತ್ನಿಯಲ್ಲ ಮತ್ತು ಆಕೆಗೆ ಇಸ್ಲಾಮಿಕ್ ಲಾ ಮೂಲಕ ಕೊಡಬೇಕಾದ ೫,೪೦೦ ರೂ ಬಿಟ್ಟರೆ ನಾನು ಇನ್ನಾವುದೇ ಹಣವನ್ನು ಕೊಡಬೇಕಾಗಿಲ್ಲ ಎಂದು ವಾದಿಸುತ್ತಾನೆ ಖಾನ್.ಆಗಸ್ಟ್ ೧೯೭೯ರಲ್ಲಿ ಸ್ಥಳೀಯ ನ್ಯಾಯಾಲಯ ಮಾಸಿಕ ೨೫ರೂ ನೀಡುವಂತೆ ತೀರ್ಪು ಕೊಟ್ಟಿತ್ತು.ಶಾ ಬಾನು ಕೇಸನ್ನು ಹೈಕೋರ್ಟಿಗೆ ಕೊಂಡೊಯ್ದರು.ಅಲ್ಲಿ ಶಾ ಬಾನು ಪರವಾಗಿ ೧೯೮೦ರ ಜುಲೈನಲ್ಲಿ ಬಂದ ತೀರ್ಪು ಮಾಸಿಕ ೧೭೯ ರೂ ನೀಡುವಂತೆ ತೀರ್ಪು ನೀಡುತ್ತದೆ.ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟಿಗೆ ಖಾನ್ ಹೋಗುತ್ತಾನೆ.ಶಾ ಬಾನು ಈಗ ನನ್ನ ಪತ್ನಿಯಲ್ಲ ಇಸ್ಲಾಮಿಕ್ ಕಾನೂನಿಂತೆ ಆಕೆಗೆ ನಾನು ತಲಾಖ್ ನೀಡಿ ಎರಡನೇ ಮದುವೆಯಾಗಿದ್ದೇನೆ ಎನ್ನುತ್ತಾನೆ.

ಮತ್ತಷ್ಟು ಓದು »

29
ಮಾರ್ಚ್

ಪೋಲಿಸ್ ಸಿಬ್ಬಂದಿ ಮತ್ತು ಚುನಾವಣೆಗಳ ನಡುವೆ

– ಬೆಳ್ಳಿ

ಪೋಲಿಸ್ ಸಮಸ್ಯೆಗಳುಈಗ ಎಲ್ಲೆಲ್ಲೂ ಚುನಾವಣೆಯ ಅಬ್ಬರ.ಹಳ್ಳಿ ಹಳ್ಳಿ ಗಲ್ಲಿ ಗಲ್ಲಿಗಳಲ್ಲಿ ಚುನಾವಣೆಯ ಕಾವು ರಂಗೇರುತ್ತಿದೆ.ಎಲ್ಲರೂ ತಮ್ಮ ಪಾಡಿಗೆ ತಾವು ಹಾಯಾಗಿ ಜೀವನ ಸಾಗಿಸುತ್ತಿದ್ದರೆ,ಕಾನೂನು ಮತ್ತು ಸುವ್ಯವಸ್ಧೆಯ ಅಡಿಯಲ್ಲಿ ಬರುವ ಪೋಲಿಸ್ ವ್ಯವಸ್ಧೆ ಯಾವ ರೀತಿಯಾಗಿ ಅವರಿಗೆ ಒತ್ತಡಗಳಿದ್ರೂ ಕೆಲಸ ಮಾಡುತ್ತದೆಂದು ಯಾರಿಗೂ ಗೊತ್ತಿಲ್ಲ.ಅವರು ನಾಮಪತ್ರ ಸಲ್ಲಿಸುವುದರಿಂದ ಹಿಡಿದು ಚುನಾವಣೆಯ ಫಲಿತಾಂಶ ಬರುವವರೆಗೂ ಸತತವಾಗಿ ಎರಡು ತಿಂಗಳುಗಳ ಕಾಲ ಹಗಲಿರುಳೆನ್ನದೆ ದುಡಿಯುತ್ತಾರೆ.ಚುನಾವಣೆ ಸಮೀಪ ಬಂತೆಂದರೆ ಸಾಕು ಯಾರು ಒಂದು ತಿಂಗಳು ಕಾಲ ರಜೆ ಕೇಳಬಾರದೆಂಬ ಆದೇಶ ಹೊರಡಿಸಿಬಿಟ್ಟಿರುತ್ತಾರೆ.ಮನೆಯಲ್ಲಿ ಯಾರಾದರೂ ತೀರಿಕೊಂಡರೆ ಮಾತ್ರ ರಜೆ ಕೇಳಬೇಕು.ಅದೂ ಸಹ ಎಸ್.ಪಿ.ಸರ್ ಅಪ್ಪಣೆ ನೀಡಬೇಕು.

ಇದು ಹಿಂಗಾದರೆ,ಚುನಾವಣೆಯ ಕಾಲಕ್ಕೆ ಯಾವುದೋ ಹಳ್ಳಿಗೆ ಕರ್ತವ್ಯ ಬಂದಿರುತ್ತೆ.ನಮಗೆ ಮೈಯಲ್ಲಿ ಆರಾಮ ಇಲ್ಲದಿದ್ರೂ,ಅಥವಾ ಮನೆಯಲ್ಲಿ ಗಂಡ,ಅತ್ತೆ,ಮಾವ,ಮಕ್ಕಳಗೆ,ಹೆಂಡತಿಗೆ ಮೈಯಲ್ಲಿ ಹುಷಾರಿಲ್ಲದೆ ಆಸ್ಪತ್ರೆಯಲ್ಲಿ ಸೇರಿದ್ರೂ ಎಲ್ಲ ಬಿಟ್ಟು ಕರ್ತವ್ಯಕ್ಕೆ ಹಾಜರಾಗಬೇಕು.ಮನೆಯ ಕಡೆ ವಿಷಯ ತಿಳಿದುಕೊಳ್ಳೋಣವೆಂದರೆ ಅಲ್ಲಿ ಮೊಬೈಲ್ ನೆಟ್ ವರ್ಕ್ ಬರೋಲ್ಲ.ಅದೇ ಒತ್ತಡಗಳ ಜೊತೆಗೆ ಹಳ್ಳಿಗೆ ಹೋಗಿ ಕೊಟ್ಟಿರುವ ಬೂತ್ ಎನ್ನುವ ಭೂತ ಬಂಗಲೆಗೆ ಕಾಲಿಟ್ಟಾಗ ಮೊದಲು ಅದು ಆ ಗ್ರಾಮದ ಸಾರ್ವಜನಿಕರೆಲ್ಲರ ಶೌಚಾಲಯದ ತಾಣ.ಚುನಾವಣೆಯ ವೇಳೆಯಲ್ಲಿ ಗಿಡ ಕಂಟಿ ಕಡಿದು ಅಲ್ಲಲ್ಲಿ ಬ್ಲೀಚಿಂಗ್ ಪೌಡರ್ ಹಾಕಿ,ಒಂದೇ ಒಂದು ಕೋಣೆ ರೆಡಿ ಮಾಡಿ,ಅದರಲ್ಲಿ 60 ವೋಲ್ಟೆಜಿನ ಬಲ್ಬ್ ಹಾಕುತ್ತಾರೆ.ನಲವತ್ಮೂರರಿಂದ ನಲವತ್ತೈದು ಡಿಗ್ರಿ ಬಿಸಿಲ ಧಗೆಯಲ್ಲಿ ಹ್ಯಾಗೆ ಕರ್ತವ್ಯ ಮಾಡಬೇಕು.

ಮತ್ತಷ್ಟು ಓದು »

11
ಮಾರ್ಚ್

’ಗ೦ಡಸರೇ ಕೆಟ್ಟವರು’ ಎನ್ನುವ ಮುನ್ನ..

– ಗುರುರಾಜ್ ಕೊಡ್ಕಣಿ,ಯಲ್ಲಾಪುರ

Misuse of IPC 498Aರಾಹುಲ್ ತು೦ಬಾ ಬುದ್ದಿವ೦ತ ಇ೦ಜೀನಿಯರಿ೦ಗ್ ವಿದ್ಯಾರ್ಥಿಯಾಗಿದ್ದ.ಪದವಿ ಮುಗಿಸಿದ ಅವನಿಗೆ ಅವನ ಬುದ್ದಿಮತ್ತೆಗೆ ತಕ್ಕ೦ತೇ ಅಮೇರಿಕದ ಪ್ರತಿಷ್ಠಿತ ಕ೦ಪನಿಯೊ೦ದರಲ್ಲಿ ನೌಕರಿ ಸಿಕ್ಕಿತ್ತು.ಸುಮಾರು ಐದು ವರ್ಷಗಳ ಕಾಲ ಅಲ್ಲಿ ದುಡಿದ ಅವನು ಮರಳಿ ಭಾರತಕ್ಕೆ ತೆರಳಲು ನಿಶ್ಚಯಿಸಿದ.ತನ್ನ ಪೋಷಕರಿಗೆ ಅವನು ತನ್ನ ನಿರ್ಧಾರ ತಿಳಿಸಿದಾಗ ಅವರೂ ಸಹ ಸ೦ತಸ ವ್ಯಕ್ತಪಡಿಸಿದ್ದರು.ಇದೇ ಖುಷಿಯಲ್ಲಿ ಅವರು ತಮ್ಮ ಒಬ್ಬನೇ ಮಗನ ಮದುವೆ ಮಾಡುವುದರ ಬಗ್ಗೆ ಯೋಚಿಸಿದರು.ಆ ಬಗ್ಗೆ ಅವರು ರಾಹುಲನೊ೦ದಿಗೆ ಚರ್ಚಿಸಿದಾಗ ಅವನೂ ಸಮ್ಮತಿಸಿದ್ದ.ಅವರು ಅವನಿಗೆ ತಕ್ಕ ವಧುವಿಗಾಗಿ ಹುಡುಕಾಟ ನಡೆಸತೊಡಗಿದರು.ಅಲ್ಲದೇ ಅವನ ಮಾಹಿತಿಯನ್ನು ವಿವಾಹ ಸ೦ಬ೦ಧಿ ಅ೦ತರ್ಜಾಲ ತಾಣವೊ೦ದರಲ್ಲೂ ಪ್ರಕಟಿಸಿದ್ದರು.

ಹಾಗೆ ರಾಹುಲನ ಅಪ್ಪ ಅಮ್ಮ ರಾಹುಲನಿಗಾಗಿ ಹುಡುಗಿ ಹುಡುಕುವ ಪ್ರಯತ್ನದಲ್ಲಿದ್ದಾಗ ಮದುವೆಯ ವೆಬ್ ಸೈಟಿನಲ್ಲಿ ಅವರಿಗೆ ಪರಿಚಯವಾದ ಹುಡುಗಿಯ ಹೆಸರು ಕವಿತಾ.ಅವರಿಗೆ ಹುಡುಗಿಯ ರೂಪ ಇಷ್ಟವಾಗಿತ್ತು. ಅವರು ರಾಹುಲನಿಗೆ ಅವಳನ್ನು ತೋರಿಸಿದಾಗ ಅವನು ಕವಿತಾಳನ್ನು ಮೊದಲ ನೋಟದಲ್ಲೇ ಮೆಚ್ಚಿದ್ದ.ಎಲ್ಲರಿಗೂ ಹುಡುಗಿ ಒಪ್ಪಿಗೆಯಾಗಿದ್ದರಿ೦ದ ಅವರು ಕವಿತಾ ಮತ್ತವಳ ಪೋಷಕರನ್ನು ತಮ್ಮ ಮನೆಗೆ ಆಹ್ವಾನಿಸಿ ಮಾತುಕತೆ ನಡೆಸಲು ನಿರ್ಧರಿಸಿದರು.ಕವಿತಾಳ ತಾಯಿ ಕೆಲವು ವರ್ಷಗಳ ಹಿ೦ದೆ ತೀರಿ ಹೋಗಿದ್ದರು.ಕವಿತಾ ಮತ್ತು ಅವಳ ತ೦ದೆ ರಾಹುಲನ ಮನೆಗೆ ಬ೦ದು ಮದುವೆಯ ಮಾತುಕತೆ ನಡೆಸಿದರು.ಮೂಲತ: ತಾವು ಮು೦ಬಯಿಯ ನಿವಾಸಿಗಳೆ೦ದು,ತಮಗೂ ರಾಹುಲ್ ಇಷ್ಟವಾಗಿರುವುದಾಗಿ ತಿಳಿಸಿದರು.ಕವಿತಾಳ ಸರಳ ವ್ಯಕ್ತಿತ್ವ,ಹಿರಿಯರೆಡೆಗಿನ ಅವಳ ಗೌರವವನ್ನು ಕ೦ಡ ರಾಹುಲನ ತ೦ದೆತಾಯಿಗಳು ಇವಳೇ ತಮ್ಮ ಸೊಸೆಯೆ೦ದು ಆಗಲೇ ತೀರ್ಮಾನಿಸಿದ್ದರು.ಹಿರಿಯರೆಲ್ಲರೂ ಸೇರಿ ಮದುವೆಯ ದಿನಾ೦ಕವನ್ನು ನಿರ್ಧರಿಸಿದರು. ಅತ್ಯ೦ತ ಸರಳ ಜೀವಿಗಳಾಗಿದ್ದ ರಾಹುಲನ ಪೋಷಕರು ವರದಕ್ಷಿಣೆ ,ವರೋಪಚಾರದ೦ತಹ ಯಾವ ಬೇಡಿಕೆಗಳನ್ನೂ ವಧುವಿನ ತ೦ದೆಯ ಮು೦ದಿಡಲಿಲ್ಲ.

ಮತ್ತಷ್ಟು ಓದು »

8
ಮಾರ್ಚ್

ವೃಕ್ಷ ಮಹಿಳೆಗೆ ಇದೀಗ ನೂರರ ವಸಂತ

– ರಾಘವೇಂದ್ರ ಅಡಿಗ ಎಚ್ಚೆನ್

ಸಾಲು ಮರದ ತಿಮ್ಮಕ್ಕಮಾರ್ಚ್ 8 `ಅಂತರಾಷ್ಟ್ರೀಯ ಮಹಿಳಾ ದಿನ’. ಇಂದು ಮಹಿಳೆ ತಾನು ಪುರುಷನಿಗೆ ಸರಿಸಮನಾಗಿ ಕಛೇರಿ ಕೆಲಸದಿಂದ ತೊಡಗಿ, ಬಾಹ್ಯಾಕಾಶ ಯಾನದವರೆವಿಗಿನ ಎಲ್ಲಾ ಕ್ಷೇತ್ರಗಳಲ್ಲಿ ತನ್ನದೇ ಛಾಪು ಮೂಡಿಸಿದ್ದಾಳೆ. ಅಂತಹವರಲ್ಲಿ ನಮ್ಮ ಸಾಲು ಮರದ ತಿಮ್ಮಕ್ಕ ನವರ ಸಾಧನೆಯೂ ಸ್ತುತ್ಯಾರ್ಹವಾದುದು. ಬಡತನದ  ಬೇಗೆಯ ನಡುವೆಯೂ ಆದರ್ಶಮಯ ಜೀವನ ನಡೆಸುತ್ತಿರುವ ಸಾರ್ಥಕ ಜೀವ ಅದು. ಮಕ್ಕಳಿಲ್ಲದ ಕೊರಗು, ಬಡತನದಿಂದ ಬೆಂಡಾದ ಬಾಳ್ವೆಯ ನಡುವೆಯೂ ‘ನೆರಳು ನೀಡುವ ಮರಗಳೆ ನನ್ನ ಮಕ್ಕಳು, ಅವುಗಳನ್ನು ಬೆಳೆಸಿ ಪೋಷಿಸುವುದೇ ನನ್ನ ಜೀವನದ ಗುರಿ’ ಎಂದು ನಂಬಿ ನಡೆದ ಈ ವೃಕ್ಷ  ಮಹಿಳೆಗೆ ಇದೀಗ ನೂರರ ವಸಂತ.

ಕೆಲ ವರ್ಷಗಳ ಹಿಂದೊಮ್ಮೆ ದಾವಣಗೆರೆ ಲೋಕಸಭಾ ಸದಸ್ಯರಾಗಿದ್ದ ಶ್ಯಾಮನೂರು ಶಿವಶಂಕರಪ್ಪನವರು ತಾವು ಕಾರ್ಯಕ್ರಮವೊಂದರ ನಿಮಿತ್ತ ಕನಕಪುರದತ್ತ ಹೊರಟಿರುತ್ತಾರೆ. ಅದಾಗ ಮಾರ್ಗ ಮದ್ಯದಲ್ಲಿ ವಾಹನವನ್ನು ನಿಲ್ಲಿಸಿ ತಾವು ದೇಹಬಾಧೆಯನ್ನು ಕಳೆಯಲೋಸುಗ ಮರಗಳ ಮರೆಗೆ ಸಾಗುತ್ತಾರೆ. ಅಲ್ಲಿ ಬೆಳೆದಿದ್ದ ಸಾಲು ಮರಗಳನ್ನು ಕಂಡು ಅಚ್ಚರಿಗೊಂಡ ಶಿವಶಂಕರಪ್ಪನವರು ಅಲ್ಲಿನ ದಾರಿಹೋಕರನ್ನು “ಈ ಮರಗಳಾನ್ನೆಲ್ಲಾ ಯಾವ ಮಂಡಲ ಪಂಚಾಯ್ತಿಯವ್ರು ಬೆಳೆಸಿದ್ದಾರೆ?” ಎಂದು ಪ್ರಶ್ನಿಸುತ್ತಾರೆ. ಆಗ ಆ ದಾರಿಹೋಕನು ಹೇಳಿದ ಉತ್ತರ ಕೇಳಿ ಶಿವಶಂಕರಪ್ಪನವರಿಗೆ ಆಶ್ಚರ್ಯದೊಂದಿಗೆ ಮನಸ್ಸು ತುಂಬಿ ಬರುತ್ತದೆ.

ಮತ್ತಷ್ಟು ಓದು »